ಬೆಂಗಳೂರು: ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಅವರು ಇಹಲೋಕ ತ್ಯಜಿಸಿದ್ದು, ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಕಲ ವ್ಯವಸ್ಥೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೇರಿದಂತೆ ಗಣ್ಯರು ಎಸ್. ಎಲ್. ಭೈರಪ್ಪ ಅವರ ಅಂತಿಮ ದರ್ಶನ ಪಡೆದರು. ಎಸ್. ಎಲ್. ಬೈರಪ್ಪನವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಸಾಹಿತ್ಯಾಸಕ್ತರು, ಅವರ ಅಭಿಮಾನಿಗಳು ಸೇರಿದಂತೆ ಸಾರ್ವಜನಿಕರು …
Read More »ಬದುಕಿನ ‘ಯಾನ’ ಮುಗಿಸಿದ ಭೈರಪ್ಪನವರನ್ನು ನೆನೆದ ಮನೆ ಕೆಲಸದವರು; ಮೈಸೂರಿನಲ್ಲಿ ನಾಳೆ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ
ಮೈಸೂರು : ಸರಸ್ವತಿ ಸನ್ಮಾನ್ ಪ್ರಶಸ್ತಿ ಪುರಸ್ಕೃತ ಎಸ್.ಎಲ್.ಭೈರಪ್ಪ ಅವರ ಅಂತ್ಯಕ್ರಿಯೆ ಸಕಲ ಸರ್ಕಾರ ಗೌರವಗಳೊಂದಿಗೆ ನಾಳೆ (ಶುಕ್ರವಾರ) ಮಧ್ಯಾಹ್ನ ಮೈಸೂರು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ರುದ್ರ ಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ಮಾಹಿತಿ ನೀಡಿವೆ. ಬುಧವಾರ ಬೆಂಗಳೂರಿನ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದ ಅವರಿಗೆ 94 ವರ್ಷ ವಯಸ್ಸಾಗಿತ್ತು. ಮೂಲತಃ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಸಂತೇಶಿವರ ಗ್ರಾಮದವರಾದ ಭೈರಪ್ಪ, ಕೆಳದ 50 ವರ್ಷಗಳಿಂದ ಮೈಸೂರಿನ ಉದಯರವಿ ರಸ್ತೆಯಲ್ಲಿರುವ …
Read More »ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ (ರಾಣಿ ಶುಗರ್ಸ್) ಸಕ್ಕರೆ ಕಾರ್ಖಾನೆಯ ಚುನಾವಣೆಯ ಹಿನ್ನೆಲೆಯಲ್ಲಿ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿರುವ ವಿಧಾನ ಪರಿಷತ್ ಸದಸ್ಯ ಚನ್ನರಾಜ
ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ (ರಾಣಿ ಶುಗರ್ಸ್) ಸಕ್ಕರೆ ಕಾರ್ಖಾನೆ ಚುನಾವಣೆಯ ಹಿನ್ನೆಲೆ ಶ್ರೀ ಮಲಪ್ರಭಾ ಸಹಕಾರಿ ಕಾರ್ಖಾನೆಯ ಪುನಶ್ಚೇತನ ರೈತರ ಪ್ಯಾನಲ್’ನ್ನು ಬೆಂಬಲಿಸಿ’ ಎಂ.ಎಲ್.ಸಿ ಚನ್ನರಾಜ್ ಹಟ್ಟಿಹೊಳಿ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ (ರಾಣಿ ಶುಗರ್ಸ್) ಸಕ್ಕರೆ ಕಾರ್ಖಾನೆಯ ಚುನಾವಣೆಯ ಹಿನ್ನೆಲೆಯಲ್ಲಿ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿರುವ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಇಂದು ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಪ್ಯಾನಲ್’ನ ಸರ್ವ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿ, ಶ್ರೀ ಮಲಪ್ರಭಾ …
Read More »ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಶ್ರೀ ಭರಮಣ್ಣ ಉಪ್ಪಾರ
ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಶ್ರೀ ಭರಮಣ್ಣ ಉಪ್ಪಾರ ಅವರು ಇಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ, ಸನ್ಮಾನಿಸಿದರು. ಈ ವೇಳೆ ನೂತನ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ, ಸಮಾಜದ ಅಭಿವೃದ್ಧಿಗೆ ಶ್ರಮಿಸಿ ಎಂದು ಸಚಿವರು ಶುಭ ಹಾರೈಸಿದರು
Read More »ಪ್ರಜ್ವಲ್ ರೇವಣ್ಣ ಪ್ರಕರಣಗಳ ವಿಚಾರಣೆ ಬೇರೆ ಪೀಠಕ್ಕೆ ವರ್ಗಾಯಿಸಲು ಕೋರಿ ಸಲ್ಲಿಸಿದ್ದ ಅರ್ಜಿ ವಜಾ
ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಮತ್ತೊಂದು ನ್ಯಾಯಾಲಯಕ್ಕೆ ವರ್ಗಾವಣೆಗೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಹಾಗೂ ಮನೆಕೆಲಸದಾಕೆ ಮೇಲಿನ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳ ಸಂಬಂಧ ತಮ್ಮ ವಿರುದ್ಧ ಬೆಂಗಳೂರಿನ ಸಿಐಡಿ ಪೊಲೀಸ್ ಠಾಣೆ ಮತ್ತು ಹಾಸನದ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರತ್ಯೇಕ ಎರಡು ಪ್ರಕರಣಗಳ …
Read More »ಶಾಸಕ ಕೆ.ಸಿ.ವೀರೇಂದ್ರಗೆ 2 ದಿನ ಜಾಮೀನು ನೀಡುವ ಕುರಿತು ಪರಿಶೀಲಿಸಲು ಕೇಂದ್ರಕ್ಕೆ ಹೈಕೋರ್ಟ್ ಸೂಚನೆ
ಶಾಸಕ ಕೆ.ಸಿ.ವೀರೇಂದ್ರಗೆ 2 ದಿನ ಜಾಮೀನು ನೀಡುವ ಕುರಿತು ಪರಿಶೀಲಿಸಲು ಕೇಂದ್ರಕ್ಕೆ ಹೈಕೋರ್ಟ್ ಸೂಚನೆ ಬೆಂಗಳೂರು: ಅಕ್ರಮ ಬೆಟ್ಟಿಂಗ್ ಆರೋಪದಲ್ಲಿ ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ದಸರಾ ಹಬ್ಬದ ಪ್ರಯುಕ್ತ 2 ದಿನಗಳ ಕಾಲ ಮಧ್ಯಂತರ ಜಾಮೀನು ನೀಡಬೇಕು ಎಂದು ಕೋರಿರುವ ಮನವಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಮಾಹಿತಿ ಪಡೆದು ತಿಳಿಸುವಂತೆ ಹೈಕೋರ್ಟ್ ಕೇಂದ್ರ ಸರ್ಕಾರದ ಪರ ವಕೀಲರಿಗೆ ಇಂದು ನಿರ್ದೇಶನ ನೀಡಿತು. ತನ್ನ ಪತಿಯನ್ನು ಬಂಧಿಸುವುದಕ್ಕೂ ಮುನ್ನ …
Read More »ಕಾಂತಾರ ಚಾಪ್ಟರ್ 1′ ಟ್ರೈಲರ್ ಬಿಡುಗಡೆ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ನಟ ರಿಷಬ್ ಶೆಟ್ಟಿ ದಂಪತಿ
ಬೈಂದೂರು(ಉಡುಪಿ): ಕಾಂತಾರ ಚಾಪ್ಟರ್ 1 ಟ್ರೈಲರ್ ಬಿಡುಗಡೆಯಾಗಿದ್ದು ಭಾರಿ ಸದ್ದು ಮಾಡುತ್ತಿದೆ. ಇದರ ಬೆನ್ನಲ್ಲೇ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದಿದ್ದಾರೆ. ರಿಷಬ್ ಶೆಟ್ಟಿ ಪತ್ನಿ ಸಹಿತ ಕೊಲ್ಲೂರು ಮೂಕಾಂಬಿಕೆಯ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿ, ಸಿನಿಮಾದ ಯಶಸ್ಸಿಗಾಗಿ ಪ್ರಾರ್ಥಿಸಿದರು. ತಮ್ಮ ಪ್ರತಿ ಸಿನಿಮಾ ಬಿಡುಗಡೆಗೂ ಮುನ್ನ ರಿಷಬ್ ಅವರು ತಾಯಿ ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸುವುದು ವಾಡಿಕೆ. ಇನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ …
Read More »ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ತಾಂತ್ರಿಕ ಸಮಸ್ಯೆ, ಗೊಂದಲಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸರಿಪಡಿಸುತ್ತೇನೆ- ಸಚಿವ ತಂಗಡಗಿ
ಬೆಂಗಳೂರು: ರಾಜ್ಯ ಸರ್ಕಾರ ಕೈಗೊಂಡಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕಳೆದ ಎರಡು ದಿನಗಳಿಂದ ನಡೆಯುತ್ತಿದ್ದು, ಆರಂಭದಲ್ಲಿ ವಿಘ್ನ ಎದುರಾಗಿದೆ. ತಾಂತ್ರಿಕ ಸಮಸ್ಯೆಯಿಂದಾಗಿ ಅಂದುಕೊಂಡಷ್ಟು ವೇಗವಾಗಿ ಸಮೀಕ್ಷೆ ಕಾರ್ಯ ನಡೆಸಲು ಅಡ್ಡಿಯಾಗಿದೆ. ಅಲ್ಲದೆ ಸಮೀಕ್ಷೆಗೆ ಸಂಬಂಧಿಸಿದಂತೆ ಉಂಟಾಗಿರುವ ಗೊಂದಲಗಳನ್ನು ಸರಿಪಡಿಸುವ ಸಂಬಂಧ ಅಧಿಕಾರಿಗಳ ಸಭೆ ಕರೆದಿದ್ದು, ಎಲ್ಲಾ ಸಮಸ್ಯೆಗಳನ್ನು ಸರಿಪಡಿಸುತ್ತೇನೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವ ಶಿವರಾಜ್ ತಂಗಡಗಿ ಹೇಳಿದರು. ಈ ಕುರಿತು ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …
Read More »ಮೈಸೂರು ದಸರಾ 2025: ಆಹಾರ ಮೇಳದಲ್ಲಿ ಆದಿವಾಸಿಗಳ ವಿಶೇಷ ಬಂಬೂ ಬಿರಿಯಾನಿ
ಮೈಸೂರು: ನಾಡಹಬ್ಬ ದಸರಾ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಆಹಾರ ಮೇಳ ಆಯೋಜಿಸಿದ್ದು, ಬಂಬೂ ಬಿರಿಯಾನಿ ಜನರನ್ನು ಸೆಳೆಯುತ್ತಿದೆ. ಮೇಳಕ್ಕೆ ಬರುತ್ತಿರುವವರು ಬಂಬೂ ಬಿರಿಯಾನಿ ಸ್ಟಾಲ್ ಮುಂದೆ ಸಾಲುಗಟ್ಟುತ್ತಿದ್ದಾರೆ. ಬಂಬೂ ಬಿರಿಯಾನಿ ಹೇಗೆ ತಯಾರಾಗುತ್ತದೆ, ಇದರಲ್ಲಿರುವ ಔಷಧೀಯ ಗುಣಗಳು ಯಾವುವು ಎಂಬ ಬಗ್ಗೆ ಆದಿವಾಸಿ ಕೃಷ್ಣಪ್ಪ ಅವರು ಈಟಿವಿ ಭಾರತ್ಗೆ ವಿವರಿಸಿದರು. ಮೈಸೂರು ದಸರಾ ಎಂದರೆ ಜಂಬೂ ಸವಾರಿ, ದಸರಾ ದೀಪಲಂಕಾರ ನೋಡಿಕೊಂಡು ಜನರು ದಸರಾ ಆಹಾರ ಮೇಳಕ್ಕೆ ಬಂದು ಇಲ್ಲಿನ ವಿಶೇಷ ಆಹಾರಗಳನ್ನು …
Read More »ಕನ್ನಡ ಖ್ಯಾತ ಕಾದಂಬರಿಕಾರ ಎಸ್ ಎಲ್ ಭೈರಪ್ಪ ನಿಧರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು.
ಬೆಂಗಳೂರು: ಕನ್ನಡ ಸಾಹಿತ್ಯಲೋಕದ ಹಿರಿಯ ಸಾಹಿತಿ, ಕಾದಂಬರಿಕಾರ, ತತ್ವಜ್ಞಾನಿ, ಪದ್ಮಭೂಷಣ, ಸರಸ್ವತಿ ಸಮ್ಮಾನ್ ಪುರಸ್ಕೃತರಾದ ಎಸ್ ಎಲ್ ಭೈರಪ್ಪ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. ಹೃದಯಸ್ತಂಭನದಿಂದ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಬೆಂಗಳೂರಿನ ರಾಷ್ಟ್ರೋತ್ಥಾನ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಬುಧವಾರ ಮಧ್ಯಾಹ್ನ 2:38ಕ್ಕೆ ಅವರು ನಿಧನರಾದರು ಎಂದು ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಶೈಲಾ ಹೆಚ್ ಎನ್ ಅವರು ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಭೈರಪ್ಪ ಅವರು ತಮ್ಮ ಜನಪ್ರಿಯ ಕಾದಂಬರಿಗಳಾದ …
Read More »
Laxmi News 24×7