Breaking News

ರಾಜಕೀಯ

ಪ್ರೇಮಿಗಳ ದಿನದ ಬದಲು ಮಾತೃ-ಪಿತೃ ಪೂಜನೀಯ ದಿನ ಆಚರಿಸಿ: ಹಿಂದೂ ಜನಜಾಗೃತಿ ಸಮಿತಿ

ಮಂಗಳೂರು: ನಗರದಲ್ಲಿ ಪ್ರೇಮಿಗಳ ದಿನಾಚರಣೆಗೆ ಅವಕಾಶ ಮಾಡಿಕೊಡಬಾರದು ಎಂದು ಹಿಂದೂ ಜನಜಾಗೃತಿ ಸಮಿತಿಯು ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದೆ. ವ್ಯಾಲೆಂಟೈನ್ ಡೇ ನಿಮಿತ್ತ ನಡೆಯುವ ಅಯೋಗ್ಯ ಕೃತ್ಯಗಳನ್ನು ತಡೆಯಬೇಕು ಎಂದು ಮನವಿ ಮಾಡಲಾಗದು.   ಕಳೆದ ಅನೇಕ ವರ್ಷಗಳಿಂದ ಭಾರತದಂತಹ ಸಾಂಸ್ಕೃತಿಕ ದೇಶದಲ್ಲಿ ಫೆಬ್ರವರಿ 14 ಯಂದು ‘ವ್ಯಾಲೆಂಟೈನ್ ಡೇ’ ಹೆಸರಿನಲ್ಲಿ ಪ್ರೇಮಿಗಳ ದಿನವನ್ನು ಆಚರಿಸುವ ಪದ್ಧತಿಯು ಹೆಚ್ಚಳವಾಗಿದೆ. ದೇಶದಲ್ಲಿ ಈ ಮೂಲಕ ವ್ಯವಹಾರಿಕ ಲಾಭಗಳಿಸುವ ಉದ್ದೇಶದಿಂದ ಪಾಶ್ಚಾತ್ಯರ ಈ …

Read More »

ವೋಟರ್ ಐಡಿಗಾಗಿ ಸುಲಭ ಆನ್ಲೈನ್ ಅಪ್ಲಿಕೇಶನ್

ವೋಟರ್ ಐಡಿ ಯನ್ನು ಮತದಾರರ ಫೋಟೋ ಗುರುತಿನ ಚೀಟಿ ಎಂದು ಕರೆಯಲಾಗುತ್ತದೆ. ಮತದಾರರ ಗುರುತಿನ ಚೀಟಿಗಳು ಆಧಾರ್ ಕಾರ್ಡ್ಗಳಂತೆ ಭಾರತೀಯರಿಗೆ ಗುರುತಿನ ಕಾರ್ಡ್ಗಳಾಗಿ ಕಾರ್ಯನಿರ್ವಹಿಸುತ್ತವೆ. ಆದರೆ ಪ್ರತಿಯೊಬ್ಬರೂ ಬಳಿಯೂ ಈ ಗುರುತಿನ ಚೀಟಿ ಇರುವುದಿಲ್ಲ. ಕನಿಷ್ಠ 18 ವರ್ಷ ವಯಸ್ಸಿನ ನಾಗರಿಕರಿಗೆ ಮಾತ್ರ ಮತದಾನದ ಹಕ್ಕನ್ನು ನೀಡಲಾಗುತ್ತದೆ. ಅಂತಹ ಸಂದರ್ಭಗಳಲ್ಲಿ ನೀವು ಮತದಾರರ ಗುರುತಿನ ಚೀಟಿಯನ್ನು ರಚಿಸಲು ಬಯಸಿದರೆ ಇದರ ಆಯ್ಕೆಯು ಆನ್ಲೈನ್ನಲ್ಲಿ ಲಭ್ಯವಿದೆ. ಅರ್ಹತಾ ದಿನಾಂಕದಂದು 18 ವರ್ಷ …

Read More »

ಸುದೀಪ್ ಅಭಿಮಾನಿಗಳ ಮೇಲೆ ಗರಂ ,ಕಿರಿಕಿರಿ ಮಾಡಿದರೆ ಕಾರ್ಯಕ್ರಮ ಕ್ಯಾನ್ಸಲ್ ಎಂದ ವಾಲ್ಮೀಕಿ ಶ್ರೀ!

ನಟರ ಅಬ್ಬರ ಇತ್ತೀಚೆಗೆ ಹೆಚ್ಚಾಗಿದೆ. ಸಿನಿಮಾಕ್ಕೆ ಸಂಬಂಧಿಸದ ಕಾರ್ಯಕ್ರಮಗಳಲ್ಲಿಯೂ ಕೆಲವು ನಟರ ಅಭಿಮಾನಿಗಳು ಕೂಗಾಟ-ಕಿರುಚಾಟ ಮಾಡುವ ಕೆಟ್ಟ ಸಂಪ್ರದಾಯ ಇತ್ತೀಚೆಗೆ ಶುರುವಾಗಿದೆ. ಇದರಿಂದ ಕಾರ್ಯಕ್ರಮ ಆಯೋಜಿಸಿದವರು, ವೇದಿಕೆ ಮೇಲಿದ್ದವರು ಮುಜುಗರಕ್ಕೆ ಒಳಗಾಗುವಂತಾಗಿದೆ.   ದರ್ಶನ್ ಅಭಿಮಾನಿಗಳು ಕೆಲವು ಸಿನಿಮೇತರ ಕಾರ್ಯಕ್ರಮಗಳಲ್ಲಿ ದರ್ಶನ್ ಭಾಗವಹಿಸಿದ್ದಾಗ ಹೀಗೆ ವರ್ತಿಸಿದ್ದರು, ಒಮ್ಮೆಯಂತೂ ದರ್ಶನ್ ಅಭಿಮಾನಿಗಳ ಕೂಗಾಟದ ಹೆಚ್ಚಾದ ಕಾರಣ ಸ್ವತಃ ಸಿಎಂ ಅವರು ಮೈಕ್ ಬಿಟ್ಟು ಹಿಂದೆ ಬಂದುಬಿಟ್ಟಿದ್ದರು. ಈಗ ಸುದೀಪ್ ಅಭಿಮಾನಿಗಳ ಸರದಿ. …

Read More »

SC/STಮೀಸಲಾತಿ ಹೆಚ್ಚಳ,9ನೇ ಶೆಡ್ಯೂಲ್ ಗೆ ಸೇರಿಸುವ ಪ್ರಕ್ರಿಯೆ ಪ್ರಾರಂಭ: ಬೊಮ್ಮಾಯಿ

ಎಸ್ ಸಿ ಎಸ್ ಟಿ ಸಮಾಜಕ್ಕೆ ನ್ಯಾಯ ದೊರಕಿಸುಕೊಡುವುದೇ ನಮ್ಮ ಸರ್ಕಾರದ ಏಕೈಕ ಗುರಿಯಾಗಿದ್ದು, ಎಸ್ ಸಿ ಎಸ್ ಟಿ ಮೀಸಲಾತಿ ಹೆಚ್ಚಳವನ್ನು9ನೇ ಶೆಡ್ಯೂಲ್ ಗೆ ಸೇರಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.   ಅವರು ನಿನ್ನೆ ‘ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವ’ ಅಂಗವಾಗಿ ‘ಜನಜಾಗೃತಿ ಜಾತ್ರಾ ಮಹೋತ್ಸವದ ಉದ್ಘಾಟನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ’ದಲ್ಲಿ ಪಾಲ್ಗೊಂಡು ಮಾತನಾಡಿ, ನಾಗಮೋಹನ್ ದಾಸ್ ವರದಿಯಂತೆ ತುಳಿತಕ್ಕೊಳಗಾಗಿರುವ …

Read More »

ಕೇಂದ್ರಕ್ಕೆ ರಾಜ್ಯತೆರಿಗೆ ದುಡ್ಡು , ಜನರ ಓಟು ಬೇಕು. ಆದರೆ, ಅನುದಾನ ಕೊಡಲು ಆಗುವುದಿಲ್ಲ: ದಿನೇಶ್‌

ಐದು ವರ್ಷಗಳಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಒಂದೇ ಒಂದು ರೂಪಾಯಿ ವಿಶೇಷ ಅನುದಾನ ಕೊಟ್ಟಿಲ್ಲ. ಇದೇ ವೇಳೆ ಉತ್ತರದ ರಾಜ್ಯಗಳಿಗೆ ಅನುದಾನದ ಹೊಳೆಯನ್ನೇ ಹರಿಸಿದೆ. ಕೇಂದ್ರಕ್ಕೆ ರಾಜ್ಯದಿಂದ ತೆರಿಗೆ ದುಡ್ಡು ಬೇಕು, ಜನರ ಓಟು ಬೇಕು. ಆದರೆ, ಅನುದಾನ ಕೊಡಲು ಆಗುವುದಿಲ್ಲವೇ. ಉತ್ತರದ ರಾಜ್ಯಗಳ ಉದ್ಧಾರ ಮಾಡಲು ನಮ್ಮ ರಾಜ್ಯದ ತೆರಿಗೆ ಹಣವೇ’ ಎಂದು ಕಾಂಗ್ರೆಸ್‌ ಶಾಸಕ ದಿನೇಶ್‌ ಗುಂಡೂರಾವ್‌ ಪ್ರಶ್ನಿಸಿದ್ದಾರೆ. ‘ಪ್ರಜಾವಾಣಿ’ ವರದಿ ಸಹಿತ ಟ್ವೀಟ್‌ ಮಾಡಿರುವ ಅವರು, …

Read More »

ಮುರುಘಾ ಶರಣರ ಅಧಿಕಾರ ನಿರ್ಬಂಧಿಸಿದ ಅರ್ಜಿ ವಿಚಾರಣೆ 13ಕ್ಕೆ

ಬೆಂಗಳೂರು:’ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೊಕ್ಸೊ), ಅತ್ಯಾಚಾರ, ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಕ್ರಿಮಿನಲ್‌ ಪ್ರಕರಣ ಎದುರಿಸುತ್ತಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಮುರುಘಾ ಶರಣರ ಅಧಿಕಾರ ಚಲಾವಣೆಗೆ ವಿಧಿಸಲಾಗಿರುವ ನಿರ್ಬಂಧ ಪ್ರಶ್ನಿಸಿದ ಅರ್ಜಿಯನ್ನು ಹೈಕೋರ್ಟ್‌ ಇದೇ 13ರಂದು ವಿಚಾರಣೆ ನಡೆಸಲಿದೆ.   ಶರಣರ ಅಧಿಕಾರ ಚಲಾವಣೆಗೆ ನಿರ್ಬಂಧ ವಿಧಿಸಿ ಚಿತ್ರದುರ್ಗ ಜಿಲ್ಲಾ ಮತ್ತು ಸೆಷನ್ಸ್‌ನ ಎರಡನೇ ಹೆಚ್ಚುವರಿ ನ್ಯಾಯಾಲಯ 2022ರ ಡಿಸೆಂಬರ್‌ 15ರಂದು …

Read More »

10 ದಿನಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಡಿ.ಕೆ.ಶಿ.

ಶಿವಮೊಗ್ಗ: ‘ಮುಂದಿನ 10 ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ. ಸ್ಕ್ರೀನಿಂಗ್ ಕಮಿಟಿಯ ಹಲವು ಸಭೆಗಳಿವೆ. ಆ ಕಾರ್ಯ ಮುಗಿದ ನಂತರ ನಿರ್ಧರಿಸಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಸ್ಕ್ರೀನಿಂಗ್ ಕಮಿಟಿಯ ಹಲವು ಸಭೆಗಳಿವೆ. ಆ ಕಾರ್ಯ ಮುಗಿದ ನಂತರ ನಿರ್ಧರಿಸಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಅವರು, ‘ಕಾಂಗ್ರೆಸ್ ಅಭ್ಯರ್ಥಿಯ ಪಟ್ಟಿ ಬಿಡುಗಡೆ ವಿಚಾರವಾಗಿ ತೀರ್ಥಹಳ್ಳಿಯಲ್ಲಿ ಕಿಮ್ಮನೆ ರತ್ನಾಕರ್, …

Read More »

KPSC: ಪಿಡಬ್ಲ್ಯುಡಿ 335 ಜೆಇ ಹುದ್ದೆ: ಅಂತಿಮ ಆಯ್ಕೆ ಪಟ್ಟಿ ವಿಳಂಬ

ಬೆಂಗಳೂರು: ಲೋಕೋಪಯೋಗಿ ಇಲಾಖೆಯ (ಪಿಡಬ್ಲ್ಯುಡಿ) ಕಿರಿಯ ಎಂಜಿನಿಯರ್‌ (ಜೆಇ) 335 ಹುದ್ದೆಗಳಿಗೆ 1:1 ಅನುಪಾತದಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಅಂತಿಮ ‌ಪಟ್ಟಿ ಮೂರು ಬಾರಿ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಸಭೆಯಲ್ಲಿ ಮಂಡನೆಯಾದರೂ ಅನುಮೋದನೆ ಸಿಕ್ಕಿಲ್ಲ.   ‘ತಾತ್ಕಾಲಿಕ ಪಟ್ಟಿ ಸಿದ್ಧಗೊಂಡು ಈಗಾಗಲೇ ತಿಂಗಳು ಕಳೆದಿರುವುದರಿಂದ, ಫೆ. 7ರಂದು ನಡೆದ ಆಯೋಗದ ಸಭೆಯಲ್ಲಿ ಎಲ್ಲ ಸದಸ್ಯರ ಅನುಮೋದನೆ ಪಡೆದು ಆಯ್ಕೆ ಪಟ್ಟಿ ಬಿಡುಗಡೆ ಮಾಡಲು ಕಾರ್ಯದರ್ಶಿ ವಿಕಾಸ್‌ ಕಿಶೋರ್‌ ಸುರಳ್ಕರ್‌ ಮುಂದಾಗಿದ್ದರು. …

Read More »

ಪುನೀತ್ ವರ್ಚಸ್ಸು ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ: ಸಿಎಂಗೆ ನಾಚಿಕೆ ಆಗಬೇಕು ಎಂದ ಎಎಪಿ

ನಾಡಿನ ಚೇತನ ಪುನೀತ್ ರಾಜ್ ಕುಮಾರ್ ಹೆಸರು, ವರ್ಚಸ್ಸನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ ಎಂದು ಎಎಪಿ ರಾಜ್ಯ ಘಟಕ ಆರೋಪಿಸಿದೆ. ಬೆಂಗಳೂರು: ನಾಡಿನ ಚೇತನ ಪುನೀತ್ ರಾಜ್ ಕುಮಾರ್ ಹೆಸರು, ವರ್ಚಸ್ಸನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ ಎಂದು ಎಎಪಿ ರಾಜ್ಯ ಘಟಕ ಆರೋಪಿಸಿದೆ. ಪುನೀತ್ ರಸ್ತೆ ನಾಮಕರಣ ಕಾರ್ಯಕ್ರಮ ಫ್ಲೆಕ್ಸ್ ನಲ್ಲಿ ಅಪ್ಪು ಫೋಟೋನೇ ಇಲ್ಲದೇ ರಾಜಕೀಯ ನಾಯಕರ ಫೋಟೋಗಳು ರಾರಾಜಿಸಿದ ವರದಿಯೊಂದನ್ನು ಎಎಪಿ ರಾಜ್ಯ ಅಧಿಕೃತ ಟ್ವೀಟರ್ ಖಾತೆಯಲ್ಲಿ …

Read More »

ರಾಜ್ಯ ಸರ್ಕಾರ ತೆರೆದ ‘ನಮ್ಮ ಕ್ಲಿನಿಕ್‌’ಗಳು ಬಿಜೆಪಿಯ ಪ್ರಚಾರ ಕೇಂದ್ರಗಳು: ಆಪ್

ರಾಜ್ಯ ಬಿಜೆಪಿ ಸರ್ಕಾರ ಉದ್ಘಾಟಿಸಿರುವ ‘ನಮ್ಮ ಕ್ಲಿನಿಕ್’ ಕೇವಲ ಪ್ರಚಾರ ಕೇಂದ್ರಗಳಾಗಿವೆ. ವೈದ್ಯಕೀಯ ಸೌಲಭ್ಯ ನೀಡದೇ ಜನರ ಭಾವನೆಗಳ ಜೊತೆಗೆ ಚೆಲ್ಲಾಟವಾಡುತ್ತಿದೆ. ವರ್ಷಕ್ಕೆ 36 ಲಕ್ಷ ರೂ.ನಲ್ಲಿ ಆಸ್ಪತ್ರೆ ನಡೆಸಲು ಹೇಗೆ ಸಾಧ್ಯ ಎಂದು ಆಮ್ ಆದ್ಮಿ ಪಕ್ಷ ಪ್ರಶ್ನೆ ಮಾಡಿದೆ. ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ ಉದ್ಘಾಟಿಸಿರುವ ‘ನಮ್ಮ ಕ್ಲಿನಿಕ್’ ಕೇವಲ ಪ್ರಚಾರ ಕೇಂದ್ರಗಳಾಗಿವೆ. ವೈದ್ಯಕೀಯ ಸೌಲಭ್ಯ ನೀಡದೇ ಜನರ ಭಾವನೆಗಳ ಜೊತೆಗೆ ಚೆಲ್ಲಾಟವಾಡುತ್ತಿದೆ. ವರ್ಷಕ್ಕೆ 36 ಲಕ್ಷ …

Read More »