Breaking News

ರಾಜಕೀಯ

ಸುವರ್ಣ ಸೌಧದ ಆವರಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಮಹಾತ್ಮಾ ಗಾಂಧೀಜಿ, ಡಾ‌. ಬಿ‌. ಆರ್. ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ:C.M.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಬೆಳಗಾವಿ ಸುವರ್ಣ ಸೌಧದ ಆವರಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಮಹಾತ್ಮಾ ಗಾಂಧೀಜಿ, ಡಾ‌. ಬಿ‌. ಆರ್. ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ‌.ಪಾಟೀಲ್, ಮುರುಗೇಶ ನಿರಾಣಿ, ಶಶಿಕಲಾ ಜೊಲ್ಲೆ , ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಶಾಸಕರು …

Read More »

ರಮೇಶ್ ಜಾರಕಿಹೊಳಿ ಅಧಿಕಾರಕ್ಕೆ ಬಂದಿಲ್ಲ, ಸಚಿವ ಸ್ಥಾನ ಕೊಡ್ತೇವೆಂಬ ಭರವಸೆ ಕೊಟ್ಟಿದ್ದಾರೆ.: ಮಹೇಶ ಕುಮಟಳ್ಳಿ

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡುವದು ಬಿಡುವದು ವರಿಷ್ಟರಿಗೆ ಬಿಟ್ಟ ವಿಚಾರ ಎಂದು ಅಥಣಿ ಶಾಸಕ ಮಹೇಶ ಕುಮಟಳ್ಳಿ ಹೇಳಿದರು. ಅವರು ಇಂದು ಸುವರ್ಣಸೌಧ ಮುಂಭಾಗದಲ್ಲಿ ಮಾದ್ಯಮಗಳೊಂದಿಗೆ ಮಾತನಾಡುತ್ತಾ ರಮೇಶ್ ಜಾರಕಿಹೊಳಿ ಅಧಿಕಾರಕ್ಕೆ ಬಂದಿಲ್ಲ, ಸಚಿವ ಸ್ಥಾನ ಕೊಡ್ತೇವೆಂಬ ಭರವಸೆ ಕೊಟ್ಟಿದ್ದಾರೆ. ವರಿಷ್ಠರು ಭರವಸೆ ಈಡೇರಿಸ್ತಾರೆ ಎಂಬ ನಂಬಿಕೆ ಇದೆ ನಾನು ಸೈಲೆಂಟಾಗಿಲ್ಲ ಕ್ಷೇತ್ರದಲ್ಲಿ ಪಕ್ಷದ ಕೆಲಸ ಮಾಡ್ತಿದ್ದೇನೆ. ಸವದಿಗೆ ಮುಂದೆ ಟಿಕೆಟ್ ಎಂಬ ಪ್ರಶ್ನೆಗೆ ಅವರು ಎಂಎಲ್ಸಿ, ನಾನು …

Read More »

ಬಿಜೆಪಿಯವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ ನಮ್ಮಲ್ಲಿ ನೊಣ ಹುಡುಕುವ ಕೆಲಸ ಬಿಜೆಪಿ ಮಾಡ್ತಿದೆ ಎಂದ ಪ್ರೀಯಾಂಕಾ ಖರ್ಗೆ

ಬಿಜೆಪಿಯವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ ನಮ್ಮಲ್ಲಿ ನೊಣ ಹುಡುಕುವ ಕೆಲಸ ಬಿಜೆಪಿ ಮಾಡ್ತಿದೆ ಎಂದು ಕಾಂಗ್ರೆಸ್ ಮುಖಂಡ ಪ್ರೀಯಾಂಕಾ ಖರ್ಗೆ ಹೇಳಿದರು. ಅವರು ಇಂದು ಸುವರ್ಣಸೌಧದಲ್ಲಿ ಮಾದ್ಯಮಗಳೊಂದಿಗೆ ಮಾತನಾಡುತ್ತಾ ಸಿದ್ದರಾಮಯ್ಯ ನಡುವೆ ಯಾವುದೇ ವಾರ್ ಇಲ್ಲ ಇದು ಮಾಧ್ಯಮಗಳ ಸೃಷ್ಟಿ ನೀವೂ ಆಡಳಿತ ಪಕ್ಷ ಬಿಟ್ಟು ವಿಪಕ್ಷ ಬಗ್ಗೆ ಯಾಕೆ ಮಾತಾಡ್ತೀರಾ..!? ಯಡಿಯೂರಪ್ಪ ವರ್ಸಸ್ ಬಿಜೆಪಿ, ಯತ್ನಾಳ್ ವರ್ಸಸ್ ನಿರಾಣಿ, ಪ್ರತಾಪ್ ಸಿಂಹ ವರ್ಸಸ್ ಅಶ್ವಥ್ ನಾರಯಣ್ ನಡುವೆ ನಡೆಯುತ್ತಿರುವ …

Read More »

ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವ ವಿಚಾರ ಇಂದು ಸಂಜೆ ಐದು ಗಂಟೆಗೆ

ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವ ವಿಚಾರ ಇಂದು ಸಂಜೆ ಐದು ಗಂಟೆಗೆ ಸಚಿವ ಸಂಪುಟ ಸಭೆ ಇದ್ದು, ಎಲ್ಲರ‌ ಚಿತ್ತ ಸಿಎಂ ಸಚಿವ ಸಂಪುಟದತ್ತ ಇದೆ ಎಂದು ಕೂಡಲ ಸಂಗಮ ಪಂಚಮಸಾಲಿ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು. ಗುರುವಾರ ನಗರದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಪಂಚಮಸಾಲಿ ಸಮಾಜಕ್ಕೆ 2 ಎ‌ ಮೀಸಲಾತಿಗಾಗಿ ಕಳೆದ ಎರಡೂ‌ ವರ್ಷಗಳಿಂದ ನಿರಂತರವಾಗಿ ನಡೆದ ಹೋರಾಟ ಬೆಳಗಾವಿಯಲ್ಲಿ ಬಂದು ನಿಂತಿದೆ. ನಮ್ಮ ಸಮಾಜದ …

Read More »

ನಾನು ಜನರ ಸಮಸ್ಯೆಗೆ ಪದೇ ಪದೇ ಒತ್ತಾಯಿಸಿದ್ದೇನೆ:ನಡಹಳ್ಳಿ

 ನಡೆಯುವ ಅಧಿವೇಶನದ ಸಮಯವನ್ನು ಇಂದೆ ಚರ್ಚೆಗೆ ತಗೆದುಕೋಳ್ಳಲಾಗುವದು ಎಂದು ಶಾಸಕ ಎ ಎಸ್ ನಡಹಳ್ಳಿ ಹೇಳಿದರು. ಅವರು ಇಂದು ಸುವರ್ಣಸೌಧದಲ್ಲಿ ಮಾದ್ಯಮಗಳೊಂದಿಗೆ ಮಾತನಾಡುತ್ತಾ ನಾಳೆ ಒಂದು ದಿನ ಅಧಿವೇಶನ ಮೊಟಕು ಆಗಲಿದೆ, ಅಮಿತ್ ಶಾ ಬರುವಿಕೆಗಾಗಿ ಅಲ್ಲಾ ಹಾಗಾದರೆ ನಾಳೆ ವಿಜಯಪುರದಲ್ಲಿ ಕಾಂಗ್ರೆಸ್ ಸಮಾವೇಶವಿದೆ. ನಾಳಿನ ಸಮಯ ಇವತ್ತೇ ಚರ್ಚೆಗೆ ತೆಗೆದುಕೊಳ್ತಾರೆ ನಾಳಿನ ಸಮಯ ಇವತ್ತು ಯುಟಿಲೈಸ್ ಮಾಡಿಕೊಳ್ತೇವೆ ಎಂದುಬಿಜೆಪಿ ಶಾಸಕ ನಡಹಳ್ಳಿ ಹೇಳಿದರು. ನಿನ್ನೆ ಉತ್ತರಕರ್ನಾಟಕದ ಸಮಸ್ಯೆ ಆಗಬೇಕಿತ್ತು, …

Read More »

ಮುಂಬಯಿ ಯಾರಪ್ಪನದ್ದೂ ಅಲ್ಲ, ಮಹಾರಾಷ್ಟ್ರದ್ದು.; ಫಡ್ನವಿಸ್ ಕಿಡಿ

ನಾಗಪುರ : ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಮುಂಬೈ ರಾಜ್ಯಕ್ಕೆ ಸೇರಿದ್ದು ಮತ್ತು ಯಾರಪ್ಪನದ್ದೂ ಅಲ್ಲ ಎಂದು ಬುಧವಾರ ಹೇಳಿ, ಎರಡು ರಾಜ್ಯಗಳ ನಡುವಿನ ಗಡಿ ವಿವಾದದ ನಡುವೆ ಕರ್ನಾಟಕದ ಕೆಲ ನಾಯಕರ ಟೀಕೆಗಳನ್ನು ಬಲವಾಗಿ ಖಂಡಿಸಿದ್ದಾರೆ.   ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮಾತನಾಡಿದ ಫಡ್ನವಿಸ್, ರಾಜ್ಯದ ಭಾವನೆಗಳನ್ನು ಕರ್ನಾಟಕ ಸರ್ಕಾರ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಿಳಿಸಲಾಗುವುದು ಎಂದರು. ಸದನದಲ್ಲಿ ವಿಷಯ ಪ್ರಸ್ತಾಪಿಸಿದ ವಿರೋಧ ಪಕ್ಷದ …

Read More »

ಕ್ರಷರ್‌ ಬಂದ್‌: ಉದ್ಯಮ, ಕಾರ್ಮಿಕರಿಗೆ ತಟ್ಟಿದ ಬಿಸಿ!

ಕಾರ್ಕಳ/ಉಡುಪಿ: ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಸಂಬಂಧಿಸಿದ ನಿಯಮ ಗಳಿಗೆ ತಿದ್ದುಪಡಿ ಆಗ್ರಹಿಸಿ ರಾಜ್ಯದೆಲ್ಲೆಡೆ ಕ್ರಷರ್‌ ಘಟಕಗಳು ವಾರದಿಂದ ಚಟುವಟಿಕೆ ಸ್ಥಗಿತಗೊಳಿಸಿವೆ. ಜಲ್ಲಿ, ಎಂಸ್ಯಾಂಡ್‌ ಕೊರತೆಯ ನೇರ ಪರಿಣಾಮ ಇತರೆಲ್ಲ ಕ್ಷೇತ್ರಗಳ ಮಾರಾಟಗಾರ ಮೇಲಾಗಿದ್ದು, ಉದ್ಯಮ ಕೋಟ್ಯಂತರ ರೂ. ನಷ್ಟದ ಜತೆಗೆ ಲಕ್ಷಾಂತರ ಕಾರ್ಮಿಕರು ಅತಂತ್ರರಾಗಿದ್ದಾರೆ. ಜಲ್ಲಿ, ಎಂಸ್ಯಾಂಡ್‌ ಕೊರತೆಯ ನೇರ ಪರಿಣಾಮ ಹೋಲೋಬ್ಲಾಕ್‌, ಇಂಟರ್‌ಲಾಕ್‌ ನಿರ್ಮಾಣ ಘಟಕಗಳು, ಸಿಮೆಂಟ್‌, ಕಬ್ಬಿಣ ಖರೀದಿ, ವಿದ್ಯುತ್‌, ಕಲ್ಲು, ಮರಳು, ಬಡಗಿ, ಗಾರೆ, …

Read More »

ವಸತಿ ಶಾಲೆಗಳಲ್ಲಿ ದುರಸ್ತಿ ಕಾಮಗಾರಿ ಕೈಗೊಳ್ಳುವಂತೆ ಸೂಚನೆ: ಕಾರಜೋಳ

ಸುವರ್ಣ ವಿಧಾನಸೌಧ: ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಹಾಸ್ಟೆಲ್‌ ಹಾಗೂ ವಸತಿ ಶಾಲೆಗಳಲ್ಲಿನ ವಿದ್ಯುತ್‌ ತಂತಿ ಸೇರಿ ಉಳಿದ ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.   ವಿಧಾನಸಭೆಯಲ್ಲಿ ಶೂನ್ಯವೇಳೆಯಲ್ಲಿ ಕಾಂಗ್ರೆಸ್‌ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ, ಮಹದೇವನಗರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 7 ವರ್ಷದ ಬಾಲಕ ಅದೇ ಶಾಲೆಯ ಕುಡಿಯುವ ನೀರಿಕ ಘಟಕದ ವಿದ್ಯುತ್‌ ತಂತಿ ತಗುಲಿ ಸಾವನ್ನಪ್ಪಿದ್ದಾನೆ. …

Read More »

ಟಾಪ್​ಲೆಸ್​ ಆಗಿ ಬಂದ ಉರ್ಫಿ! ತಿಂಡಿ ಪ್ಲೇಟ್​-ಜ್ಯೂಸ್​ ಗ್ಲಾಸ್​ ಹಿಡಿದು ಮೈಮಾಟ ಪ್ರದರ್ಶಿಸುತ್ತಾ ಬ್ರೇಕ್​ಫಾಸ್ಟ್​ ಎಂದ ನಟಿ.

ಮುಂಬೈ: ವಿಚಿತ್ರ ಫ್ಯಾಷನ್ ಸೆನ್ಸ್​ನಿಂದ ಬಹಳಷ್ಟು ಜನಪ್ರಿಯತೆ ಪಡೆದ ನಟಿ ಊರ್ಫಿ ಜಾವೇದ್, ತಾವು ಧರಿಸುವ ಬಟ್ಟೆಯಿಂದಲೇ ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಫೇಮಸ್ ಆಗಿದ್ದಾರೆ. ಈಕೆ ಯಾವ ಬಟ್ಟೆ ತೊಟ್ಟರೂ ಅದು ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಉರ್ಫಿ ಅಂದಾಕ್ಷಣ ಅರೆಬರೆ ಮೈಮಾಟ ಪ್ರದರ್ಶನವೇ ಕಣ್ಮುಂದೆ ಬರುತ್ತದೆ. ಸದಾ ಕನಿಷ್ಠ ಬಟ್ಟೆ ತೊಟ್ಟು ಸಖತ್​ ಹಾಟ್ ಕಾಣಿಸಿಕೊಳ್ಳುವ ಉರ್ಫಿಯನ್ನು ಕಳೆದ ಮಂಗಳವಾರ (ಡಿ.20) ದುಬೈ ಪೊಲೀಸ್​ ಅಧಿಕಾರಿಗಳು ಬಂಧಿಸಿದ್ದಾರೆ ಎಂಬ ಸುದ್ದಿ …

Read More »

ಮಿತಿಮೀರಿದ ಅಡಿಕೆ ಬೆಳೆಯಿಂದ ಅಸಮತೋಲನ: ಸದನ ಆತಂಕ

ಬೆಳಗಾವಿ: ಬೇಕಾಬಿಟ್ಟಿಯಾಗಿ ಅಡಿಕೆ ಬೆಳೆಯನ್ನು ಬಯಲುಸೀಮೆ ಸಹಿತ ಹಲವು ಜಿಲ್ಲೆಗಳಲ್ಲಿ ವಿಸ್ತರಣೆ ಮಾಡುತ್ತಿರುವುದು ಅಪಾಯಕಾರಿ. ಇದರಿಂದ ಮುಂದೆ ಬೆಳೆಗಳ ಅಸಮತೋಲನ ಉಂಟಾಗುವ ಭೀತಿ ಇದೆ ಎಂಬ ಕಳವಳ ಬುಧವಾರ ವಿಧಾನಸಭೆಯಲ್ಲಿ ವ್ಯಕ್ತವಾಯಿತು.   ಕೃಷಿ ಎದುರಿಸುತ್ತಿರುವ ಅತಿವೃಷ್ಟಿ ಮತ್ತಿತರ ಸಮಸ್ಯೆಗಳಿಂದ ರೈತರು ಎದುರಿಸುತ್ತಿರುವ ಸಂಕಷ್ಟದ ಬಗ್ಗೆ ನಡೆಯುತ್ತಿದ್ದ ಚರ್ಚೆ ವೇಳೆ ಗೃಹಸಚಿವ ಆರಗ ಜ್ಞಾನೇಂದ್ರ ವಿಷಯ ಪ್ರಸ್ತಾವಿಸಿ, ಅಡಿಕೆ ಬೆಳೆ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸುವುದನ್ನು ನೋಡಿದರೆ ಅದುವೇ ರೈತರಿಗೆ ಮಾರಕವಾಗುವ ದಿನಗಳು …

Read More »