Breaking News

ರಾಜಕೀಯ

ಹಳೆ ಪಿಂಚಣಿಗಾಗಿ ಹೋರಾಟ ನಡೆಸುತ್ತಿರುವ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : `NPS’ ಬಗ್ಗೆ ಚರ್ಚೆಗೆ ಸಿಎಂ ಬೊಮ್ಮಾಯಿ ಒಪ್ಪಿಗೆ

ಬೆಳಗಾವಿ : ಹಳೆ ಪಿಂಚಣಿ ಯೋಜನೆ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಹಳೆ ಪಿಂಚಣಿ ಯೋಜನೆ ಜಾರಿ ಸಂಬಂಧ ಚರ್ಚೆಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ.   ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಯೋಜನೆ ಜಾರಿಗೆ ಆಗ್ರಹಿಸಿ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕುರಿತು ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಸದನದಲ್ಲಿ ಸಮಗ್ರ ಚರ್ಚೆ ನಡೆದ ಬಳಿಕ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ …

Read More »

ಮೂವರು ವಿವಾಹಿತ ಶಿಕ್ಷಕರ ನಡುವಿನ ಪ್ರೀತಿಗೆ ವಿದ್ಯಾರ್ಥಿ ಬಲಿ;

ಗದಗ: ಮೂವರು ವಿವಾಹಿತ ಶಿಕ್ಷರ ಪ್ರೀತಿಗೆ ವಿದ್ಯಾರ್ಥಿ ಬಲಿ ಆಗಿದ್ದಾನೆ. ಅದರಲ್ಲೂ ಇಬ್ಬಿಬ್ಬರೊಂದಿಗಿದ್ದ ಅಮ್ಮನ ಸಲುಗೆ ಮಗನಿಗೇ ಮುಳುವಾಗಿದೆ. ಅಮ್ಮನೊಂದಿಗೆ ಸಲುಗೆಯಿಂದಿದ್ದ ಇಬ್ಬರು ಶಿಕ್ಷಕರ ಪೈಕಿ ಒಬ್ಬ ಆಕೆಯ ಮಗನನ್ನು ಭೀಕರವಾಗಿ ಕೊಲೆ ಮಾಡಿ ಕ್ರೌರ್ಯ ತೋರಿದ್ದಾನೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದ್ಲಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಿನ್ನೆ ಈ ಘಟನೆ ನಡೆದಿತ್ತು. ಸಹಶಿಕ್ಷಕಿ ಗೀತಾ ಎಂಬಾಕೆಯ …

Read More »

ದೇಗುಲಗಳಲ್ಲಿ ಎಲ್ಲರಿಗೂ ಮುಕ್ತ ಪ್ರವೇಶಕ್ಕೆ ಶಿಫಾರಸು

ಸುವರ್ಣ ವಿಧಾನಸೌಧ: ರಾಜ್ಯ ಮುಜರಾಯಿ ದೇವಸ್ಥಾನಗಳ ಪ್ರವೇಶ ದ್ವಾರದಲ್ಲಿ ದೇವಸ್ಥಾನದ ಒಳಗೆ ಎಲ್ಲ ಜಾತಿಯವರಿಗೂ ಮುಕ್ತ ಅವಕಾಶ ಇರುತ್ತದೆ ಎಂಬ ಬೋರ್ಡ್‌ ಅಳವಡಿಸುವ ಮೂಲಕ ಎಲ್ಲರಿಗೂ ದೇವಸ್ಥಾನದ ಒಳಗೆ ಪ್ರವೇಶಿಸಲು ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ವಿಧಾನ ಮಂಡಲ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ 6ನೇ ವರದಿಯಲ್ಲಿ ಸರ್ಕಾರಕ್ಕೆ ಈ ಶಿಫಾರಸು ಮಾಡಿದೆ. ಮಂಗಳವಾರ ವಿಧಾನಸಭೆಯಲ್ಲಿ ಸಮಿತಿಯ ಅಧ್ಯಕ್ಷ ಎಂ.ಪಿ.ಕುಮಾರಸ್ವಾಮಿ ವರದಿಯನ್ನು ಮಂಡಿಸಿದರು. ರಾಜ್ಯದಲ್ಲಿ ಪರಿಶಿಷ್ಟ ಹಾಗೂ …

Read More »

ಹಲಾಲ್‌ ವಿಚಾರ ಸರ್ಕಾರಕ್ಕೆ ಸಂಬಂಧವಿಲ್ಲ: ಸಿಎಂ ಬೊಮ್ಮಾಯಿ

ಬೆಳಗಾವಿ: ಹಲಾಲ್‌ ವಿಚಾರಕ್ಕೂ, ಸರಕಾರಕ್ಕೂ ಸಂಬಂಧವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಹಲಾಲ್‌ ಕುರಿತ ಯಾವುದೇ ವಿಚಾರ ಸರಕಾರಕ್ಕೆ ಸಂಬಂಧಿಸಿದ್ದಲ್ಲ. ಜಗತ್ತು ಬಹಳಷ್ಟು ಮುಂದುವರಿದಿದೆ. ಹಾಗೆಯೇ ಸರಕಾರವು ಅಭಿವೃದ್ಧಿ ಕುರಿತು ಯೋಚಿಸುತ್ತಿದೆ ಎಂದರು. ರಮೇಶ ಜಾರಕಿಹೊಳಿ ಮತ್ತು ಈಶ್ವರಪ್ಪ ಅವರೊಂದಿಗೆ ಸಂಪರ್ಕದಲ್ಲಿದ್ದೇವೆ. ಅವರು ಅಧಿವೇಶನದಲ್ಲಿ ಭಾಗವಹಿಸದೇ ಇರುವುದು ಬಹಿಷ್ಕಾರವಲ್ಲ. ತಮ್ಮ ಮೇಲಿದ್ದ ಪ್ರಕರಣಗಳಲ್ಲಿ ಮುಕ್ತರಾದ ಮೇಲೆ ಮತ್ತೂಮ್ಮೆ ಸಂಪುಟಕ್ಕೆ ಸೇರಬೇಕೆನ್ನುವ ಅವರ ಚಿಂತನೆ ಸರಿಯಿದೆ. ಅವರ ವಿಚಾರವನ್ನು …

Read More »

7 ದಿನಗಳಲ್ಲಿ ಭೂ ಪರಿವರ್ತನೆ ಕಡ್ಡಾಯ: ರಾಜ್ಯದ ಇತರ ಜಿಲ್ಲೆಗಳಲ್ಲಿ ಹೂಡಿಕೆ ಉತ್ತೇಜನ

ಬೆಳಗಾವಿ: ಕೃಷಿ ಭೂಮಿ ಕೃಷಿಯೇತರ ಬಳಕೆಗೆ ಪರಿವರ್ತನೆ 7 ದಿನಗಳಲ್ಲಿ ಕಡ್ಡಾಯವಾಗಿ ಮಾಡಿಕೊಡುವ ಉದ್ದೇಶದ ಕರ್ನಾಟಕ ಭೂ ಕಂದಾಯ ಎರಡನೇ ತಿದ್ದುಪಡಿ ಮಸೂದೆ ಹಾಗೂ ಬೆಂಗಳೂರು ಹೊರತುಪಡಿಸಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಕೈಗಾರಿಕೆ ಉತ್ತೇಜಿಸಿ ಹೆಚ್ಚಿನ ಹೂಡಿಕೆ ತರುವ ಉದ್ದೇಶದ ಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ಮಸೂದೆ ಸೇರಿದಂತೆ ಮೂರು ಮಸೂದೆಗಳನ್ನು ವಿಧಾನಸಭೆಯಲ್ಲಿ ಮಂಗಳವಾರ ಮಂಡಿಸಲಾಯಿತು.   ಸಚಿವ ಮುರುಗೇಶ್‌ ನಿರಾಣಿ ಪರವಾಗಿ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಅವರು, ಕರ್ನಾಟಕ …

Read More »

ಸೇಂದಿವನ ಜಾಗದಲ್ಲಿ ರೈತರಿಗೆ ಸಾಗುವಳಿ ಚೀಟಿ: ಅಶೋಕ್‌

ಸುವರ್ಣವಿಧಾನಸೌಧ: ಸೇಂದಿವನ ಜಾಗದಲ್ಲಿ ಉಳುಮೆ ಮಾಡುತ್ತಿರುವ ರೈತರಿಗೆ ಸಾಗುವಳಿ ಚೀಟಿ ನೀಡಲು ಸರ್ಕಾರ ತೀರ್ಮಾನಿಸಿದೆ. ಕಾಫಿ ತೋಟ ಒತ್ತುವರಿ ಸಕ್ರಮಕ್ಕಾಗಿ ನಿಯಮಾವಳಿ ರೂಪಿಸಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಹೇಳಿದರು. ಕಾಂಗ್ರೆಸ್‌ನ ಟಿ.ಡಿ.ರಾಜೇಗೌಡ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, ಬಿಜೆಪಿ ಸರ್ಕಾರ ಬಂದ ನಂತರ ಪ್ರಮುಖವಾಗಿ ಮಲೆನಾಡು, ಕರಾವಳಿ ಭಾಗದ ರೈತರ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಂಡಿದೆ.   ಕಾಫಿ ತೋಟ ಒತ್ತುವರಿ ಸಕ್ರಮ ಮಾಡಿ ಗುತ್ತಿಗೆಗೆ ನೀಡಲು ತೀರ್ಮಾನಿಸಿ ನಿಯಮಾವಳಿ …

Read More »

ಮಜೂರು ಗ್ರಾಪಂ ವ್ಯಾಪ್ತಿಯ ಐಎಸ್‌ಆರ್‌ಎಲ್‌ನಿಂದ ತೆರಿಗೆ ವಸೂಲಿಗೆ ಕ್ರಮ

ಸುವರ್ಣ ವಿಧಾನಸೌಧ: ಉಡುಪಿ ಜಿಲ್ಲೆ ಕಾಪು ತಾಲೂಕಿನ ಮಜೂರು ಗ್ರಾಪಂ ವ್ಯಾಪ್ತಿಯ ಪಾದೂರು ಗ್ರಾಮದಲ್ಲಿನ ಐಎಸ್‌ಆರ್‌ಎಲ್‌ ಸಂಸ್ಥೆಯಿಂದ ಗ್ರಾಪಂಗೆ ತೆರಿಗೆ ಪಾವತಿಗೆ ಸಂಬಂಧಿಸಿದಂತೆ ಸಂಸ್ಥೆಯವರೊಂದಿಗೆ ಚರ್ಚಿಸಿ ತೆರಿಗೆ ಮೊತ್ತ ವಸೂಲಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ಸಚಿವ ಮುರುಗೇಶ ನಿರಾಣಿ ಹೇಳಿದರು.   ವಿಧಾನಪರಿಷತ್‌ನಲ್ಲಿ ಬಿಜೆಪಿಯ ಕೆ. ಪ್ರತಾಪಸಿಂಹ ನಾಯಕ್‌ ವಿಷಯ ಪ್ರಸ್ತಾಪಿಸಿ, ಐಎಸ್‌ಪಿಆರ್‌ಎಲ್‌ ಸಂಸ್ಥೆ ಪಾದೂರು ಗ್ರಾಮದಲ್ಲಿ ಮೊದಲ ಹಂತದಲ್ಲಿ 180 ಎಕರೆಯಲ್ಲಿ ಕೈಗಾರಿಕೆ …

Read More »

ಚರ್ಮಗಂಟು ರೋಗದ ಹಾವಳಿ 21 ಸಾವಿರ ಹಸು ಬಲಿ

ಬೆಂಗಳೂರು: ರಾಜ್ಯದಲ್ಲಿ ಚರ್ಮಗಂಟು ರೋಗವನ್ನು ಹತೋಟಿಗೆ ತರಲಾಗುತ್ತಿದ್ದರೂ ಸುಮಾರು 21,305 ಜಾನುವಾರುಗಳು ಬಲಿಯಾಗಿರುವುದು ಆತಂಕ ಸೃಷ್ಟಿಸಿದೆ. ರಾಜ್ಯದ ಸುಮಾರು 230 ತಾಲೂಕುಗಳ 15,977 ಗ್ರಾಮಗಳಲ್ಲಿ ಈವರೆಗೆ 2,37,194 ರಾಸುಗಳಿಗೆ ಚರ್ಮಗಂಟು ರೋಗ ಬಾಧಿಸಿದ್ದು, ಈ ಪೈಕಿ 1.64 ಲಕ್ಷ ರಾಸುಗಳು ಚೇತರಿಕೆಯಾಗಿವೆ. ಇನ್ನುಳಿದ ರಾಸುಗಳಿಗೆ ಸರಕಾರದಿಂದ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವು ಜಿಲ್ಲೆಗಳಲ್ಲಿ ಸಿಬಂದಿ ಇಲ್ಲದೆ ಲಸಿಕೆ ತಲುಪುತ್ತಿಲ್ಲ ಎಂಬ ಸಂಗತಿ “ಉದಯವಾಣಿ’ ನಡೆಸಿದ ಜಿಲ್ಲಾವಾರು ಮಾಹಿತಿ ಸಂಗ್ರಹದಿಂದ ಬೆಳಕಿಗೆ ಬಂದಿದೆ. …

Read More »

ಹಳೆ ಪಿಂಚಣಿ ಪದ್ಧತಿಗೆ ಆಗ್ರಹ; ಹೊಸ ಪಿಂಚಣಿ ವ್ಯವಸ್ಥೆಗೆ ಕಾಂಗ್ರೆಸ್‌, ಜೆಡಿಎಸ್‌ ವಿರೋಧ

ಬೆಳಗಾವಿ: ನೂತನ ಪಿಂಚಣಿ ಯೋಜನೆ ರದ್ದತಿಗಾಗಿ ನಡೆಯುತ್ತಿರುವ ಹೋರಾಟ ವಿಧಾನಸಭೆಯಲ್ಲಿ ಮಂಗಳವಾರ ಪ್ರತಿಧ್ವನಿಸಿ ಕೆಲಕಾಲ ವಾತಾವರಣವನ್ನು ಕಾವೇರಿಸಿತು. ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಶಾಸಕರು ಚರ್ಚೆಗೆ ಅವಕಾಶ ಕಲ್ಪಿಸಬೇಕು ಹಾಗೂ ಸರಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಪಟ್ಟು ಹಿಡಿದರು.   ಸಾವಿರಾರು ಮಂದಿ ನೌಕರರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಇದರಿಂದ ಆಡಳಿತ ವ್ಯವಸ್ಥೆಯೂ ಕುಸಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಮುಖ್ಯಮಂತ್ರಿಯವರು ಧರಣಿ ನಿರತರ ಜತೆ ಮಾತುಕತೆ ನಡೆಸಬೇಕು ಎಂದು ಆಗ್ರಹಿಸಿದರು. ಈ ವೇಳೆ …

Read More »

ವಿಕಲಚೇತನರ ಗೌರವ ಧನ, ಕಾರ್ಯಕರ್ತರ ಹುದ್ದೆಯನ್ನು ಖಾಯಂಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

ರಾಜ್ಯದ‌ ಎಂಆರ್ ಡಬ್ಯೂ, ವಿಆರ್ ಡಬ್ಯೂ, ಯುಆರ್ ಡಬ್ಯೂ ವಿಕಲಚೇತನರ ಗೌರವ ಧನ, ಕಾರ್ಯಕರ್ತರ ಹುದ್ದೆಯನ್ನು ಖಾಯಂಗೊಳಿಸುವಂತೆ ಆಗ್ರಹಿಸಿ ಮಂಗಳವಾರ ನವ ಕರ್ನಾಟಕ ವಿಕಲಚೇತನ ಕಾರ್ಯಕರ್ತರ ಸಂಘ ಸುವರ್ಣ ವಿಧಾನಸೌಧದ ಬಸ್ತವಾಡದ ಬಳಿ ಪ್ರತಿಭಟನೆ ನಡೆಸಿ ಸರಕಾರಕ್ಕೆ ಒತ್ತಾಯಿಸಿದರು. ಮಹಾರಾಷ್ಟ್ರದ ಮಾದರಿಯಲ್ಲಿ ವಿಕಲಚೇತನರಿಗಾಗಿ ವಿಶೇಷ ಸಚಿವಾಲಯ‌ ಘೋಷಣೆ ಮಾಡಬೇಕು. ಕಳೆದ ನಾಲ್ಕೈದು ವರ್ಷಗಳಿಂದ ರಾಜ್ಯದ ಹೊಸ ತಾಪಂ. ಗಳಿಗೆ‌ ಎಂಆರ್ ಡಬ್ಯೂಗಳನ್ನು ಹುದ್ದೆ ಗಳನ್ನು ನೇಮಕ ಮಾಡಿಕೊಂಡಿರುವುದಿಲ್ಲ. ಹೊಸ ನೇಮಕಾತಿ …

Read More »