ಗದಗ: ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟರ ನೇತೃತ್ವದಲ್ಲಿ ಪೊಲೀಸರು ಶುಕ್ರವಾರ(ಡಿ.9) ನಗರದ ವಿವಿಧೆಡೆ ಅನುಮಾನಾಸ್ಪದ ವ್ಯಕ್ತಿಗಳ ಮನೆಗಳ ಮೇಲೆ ದಾಳಿ ನಡೆಸಿ ಮಾರಕಾಸ್ತ್ರಗಳ ಪರಿಶೀಲನೆ ನಡೆಸಿದರು. ಗದಗ-ಬೆಟಗೇರಿ ಅವಳಿ ನಗರದ ವಿವಿಧೆಡೆ ಚಾಕು ಇರಿತ ಪ್ರಕರಣ ಸೇರಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪ್ರಕರಣಗಳು ದಾಖಲಾಗಿದ್ದವು. ಈ ಹಿನ್ನೆಲೆಯಲ್ಲಿ ನಗರದ ಕಮ್ಮಾರಸಾಲು, ರಂಗನವಾಡ, ತೆಗ್ಗಿನ ಪ್ಲಾಟ್ ಸೇರಿ ಹಲವು ಪ್ರದೇಶಗಳ ಮನೆಗಳ ಮೇಲೆ ಪೊಲೀಸರು ಮಾರಕಾಸ್ತ್ರಗಳನ್ನು ಪರಿಶೀಲಿಸಿದರು. ನಗರದಲ್ಲಿ ಕಳೆದೊಂದು ವಾರದಲ್ಲಿ ಎರಡು …
Read More »ಶಾಲಾ ಸಮಯಕ್ಕೆ ಬಸ್ ಸೌಲಭ್ಯ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ವಿಜಯಪುರ: ಸೂಕ್ತ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಜಿಲ್ಲೆಯ ಇಂಡಿ ತಾಲೂಕಿನ ಅಂಜುಟಗಿ ಗ್ರಾಮದಲ್ಲಿ ಸಾರಿಗೆ ಸಂಸ್ಥೆ ಬಸ್ ಸಂಚಾರ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಸರಿಯಾದ ಸಮಯಕ್ಕೆ ಬಸ್ ಬಾರದ ಕಾರಣ ಶಾಲಾ-ಕಾಲೇಜು ತರಗತಿಗಳಿಗೆ ಹಾಜರಾಗಲು ತೊಂದರೆಯಾಗುತ್ತಿದೆ. ಈ ಸಮಸ್ಯೆ ಪರಿಹಾರಕ್ಕೆ ಸಾರಿಗೆ ಸಂಸ್ಥೆಯ ಆಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಉಪಯೋಗವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲಾ ಕಾಲೇಜು ವೇಳೆಗೆ ಬಸ್ ಸೌಲಭ್ಯ ಬೇಕೆಂದು ಬೇಡಿಕೆ ಮುಂದಿಟ್ಟುಕೊಂಡು ಇಂಡಿ, ಝಳಕಿಯಲ್ಲಿರುವ …
Read More »ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ (ವ್ಹಿ. ಆರ್. ಡಬ್ಲ್ಯೂ.) ಹುದ್ದೆ ಆಹ್ವಾನ
ಬೆಳಗಾವಿ: ಖಾನಾಪುರ ತಾಲೂಕಿನ ವ್ಯಾಪ್ತಿಯ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವ್ಹಿ. ಆರ್. ಡಬ್ಲ್ಯೂ.) ಹುದ್ದೆಗಳನ್ನು ಇಲಾಖೆಯ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಮಾಸಿಕ ರೂ.9,000 ಗಳ ಗೌರವ ಧನ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಆಯಾ ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಷರತ್ತುಗಳು: ಅರ್ಜಿದಾರರು ವಿಕಲಚೇತನರಿದ್ದು, ಕನಿಷ್ಟ 40% ಅಥವಾ 40% ಕ್ಕಿಂತ ಹೆಚ್ಚಿನ ವಿಕಲತೆ ಪ್ರಮಾಣ ಹೊಂದಿರತಕ್ಕದ್ದು, ಅರ್ಜಿದಾರರು ಆಯಾ ಗ್ರಾಮ …
Read More »ವಿಜಯ್ ಸಂಕೇಶ್ವರರ ಛಲದ ಕತೆ ‘ವಿಜಯಾನಂದ’
ಕನ್ನಡದಲ್ಲಿ ಬಯೋಪಿಕ್ ಸಿನಿಮಾಗಳ ಕೊರತೆಯಿದೆ ಎಂಬ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಉದ್ಯಮಿ, ರಾಜಕಾರಣಿ, ಪದ್ಮಶ್ರೀ ವಿಜಯ್ ಸಂಕೇಶ್ವರ್ ಅವರ ಜೀವನ ಆಧರಿಸಿದ ಸಿನಿಮಾ ‘ವಿಜಯಾನಂದ’ ತೆರೆಗೆ ಬಂದಿದೆ. ಸಿನಿಮಾಕ್ಕೆ ಅವರ ಪುತ್ರ ಆನಂದ್ ಸಂಕೇಶ್ವರ್ ಅವರದ್ದೇ ಬಂಡವಾಳ. ಥಳ ಮಟ್ಟದಿಂದ ಆರಂಭಸಿ ದೊಡ್ಡ ಉದ್ಯಮ ಕಟ್ಟಿದ ಕೆಲವೇ ಕರ್ನಾಟಕದ ಯಶಸ್ವಿ ಉದ್ಯಮಿಗಳಲ್ಲೊಬ್ಬರು ವಿಜಯ್ ಸಂಕೇಶ್ವರ್. ಈ ಹಿಂದೆ ರಮೇಶ್ ಅರವಿಂದ್ರ ‘ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮದಲ್ಲಿ ತಮ್ಮ ಜೀವನದ …
Read More »ದೇವದಾಸಿಯರ ಮಕ್ಕಳಿಗೆ ತಂದೆ ಹೆಸರು ಕಡ್ಡಾಯವಲ್ಲ ಎಂದು ಆದೇಶ ಹೊರಡಿಸಲು ಸರ್ಕಾರ ನಿರ್ಧಾರ
ಬೆಂಗಳೂರು: ‘ದೇವದಾಸಿಯರ ಮಕ್ಕಳು ಸರ್ಕಾರಿ ಸೌಲಭ್ಯ ಪಡೆಯಲು ತಂದೆಯ ಹೆಸರನ್ನು ದಾಖಲಿಸುವುದು ಕಡ್ಡಾಯವಲ್ಲ, ಅದು ಐಚ್ಚಿಕವಾಗಿರುತ್ತದೆ.’ ಹೀಗೆಂದು ಆದೇಶ ಹೊರಡಿಸಲು ಸರ್ಕಾರ ನಿರ್ಧರಿಸಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ದೇವದಾಸಿ ಮಹಿಳೆಯರ ಮತ್ತು ಮಕ್ಕಳ ಕುಂದು ಕೊರತೆ ಪರಿಹಾರ ಸಂಬಂಧ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಶಾಲಾ-ಕಾಲೇಜುಗಳಿಗೆ ಪ್ರವೇಶ ಪಡೆಯುವಾಗ, ಜಾತಿ ಆದಾಯ ಪ್ರಮಾಣ …
Read More »ಕೇಂದ್ರದಿಂದ ಸಿಹಿ ಸುದ್ದಿ: 50 ಸಾವಿರ ರೂ. ಸಾಲ ಸೌಲಭ್ಯದ ಪಿಎಂ ಸ್ವನಿಧಿ ಯೋಜನೆ 2 ವರ್ಷ ವಿಸ್ತರಣೆ
ನವದೆಹಲಿ: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯನ್ನು 2024ರ ಡಿಸೆಂಬರ್ ವರೆಗೆ ವಿಸ್ತರಿಸಲಾಗಿದೆ ಎಂದು ಕೇಂದ್ರ ವಸತಿ ಹಾಗೂ ನಗರಾಭಿವೃದ್ಧಿ ಸಚಿವ ಹರ್ ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. ಲೋಕಸಭೆಯಲ್ಲಿ ಸಂಸದರೊಬ್ಬರ ಪ್ರಶ್ನೆಗೆ ನೀಡಿದ ಲಿಖಿತ ಉತ್ತರದಲ್ಲಿ ಈ ಮಾಹಿತಿ ನೀಡಿದ ಸಚಿವರು, ಬೀದಿ ಬದಿ ವ್ಯಾಪಾರಿಗಳ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ರೂಪಿಸಿದ ಪ್ರಧಾನಮಂತ್ರಿ ಸ್ವನಿಧಿ ಯೋಜನೆ ಎರಡು ವರ್ಷ ವಿಸ್ತರಿಸಲಾಗಿದೆ ಎಂದರು. ಬೀದಿ ಬದಿ ವ್ಯಾಪಾರಿಗಳನ್ನು ಸ್ವಾವಲಂಬಿಗೊಳಿಸುವ …
Read More »ಗಡಿ ವಿವಾದ: ಬಸ್ ಗಳಿಗೆ ರಕ್ಷಣೆ ನೀಡಿದ ಬೆಳಗಾವಿ ಪೊಲೀಸರಿಗೆ ಧನ್ಯವಾದ ಹೇಳಿಕೆ ಮಹಾರಾಷ್ಟ್ರ ಸಾರಿಗೆ ಸಂಸ್ಥೆ
ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ನಡೆಯುತ್ತಿರುವ ಗಡಿ ವಿವಾದದ ನಡುವೆಯೂ ಬಸ್ ಹಾಗೂ ವಾಹನಗಳಿಗೆ ರಕ್ಷಣೆ ನೀಡಿದ ಬೆಳಗಾವಿ ಪೊಲೀಸರಿಗೆ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಎಂಎಸ್ಆರ್ಟಿಸಿ)ಯು ಧನ್ಯವಾದಗಳನ್ನು ತಿಳಿಸಿದೆ. ಬೆಳಗಾವಿ: ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ನಡೆಯುತ್ತಿರುವ ಗಡಿ ವಿವಾದದ ನಡುವೆಯೂ ಬಸ್ ಹಾಗೂ ವಾಹನಗಳಿಗೆ ರಕ್ಷಣೆ ನೀಡಿದ ಬೆಳಗಾವಿ ಪೊಲೀಸರಿಗೆ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಎಂಎಸ್ಆರ್ಟಿಸಿ)ಯು ಧನ್ಯವಾದಗಳನ್ನು ತಿಳಿಸಿದೆ. ಬೆಳಗಾವಿಯ ಸವದತ್ತಿ ಯಲ್ಲಮ್ಮನ …
Read More »ಕನ್ನಡ ತೇರೆಳೆಯಲು ಗಡಿಯ ಭೋಜ ಗ್ರಾಮ ಸಜ್ಜಾಗುತ್ತಿದೆ
ನಿಪ್ಪಾಣಿ ತಾಲೂಕಿನ ಭೋಜ ಗ್ರಾಮದ ಶಾಂತಿಸಾಗರ ” ಸ್ಮಾರಕ ಸಭಾಮಂಟಪದಲ್ಲಿ ನಿಪ್ಪಾಣಿ ತಾಲೂಕು 3ನೇ ಕನ್ನಡ ಸಾಹಿತ್ಯಸಮ್ಮೇಳನ ಡಿ.11ರಂದು ನಡೆಯಲಿದ್ದು ಸಕಲಸಿದ್ಧತೆಗಳು ನಡೆದಿವೆ. ”ಗಡಿಭಾಗದ ಬಹುತೇಕ ಹಳ್ಳಿಗಳ ದಾನಿಗಳು ಕನ್ನಡ ಸಮ್ಮೇಳನ ಯಶಸ್ವಿಗೊಳಿಸಲು ಜೋಡಿಸಿದ್ದು ಅತ್ಯಂತ ಅದ್ಧೂರಿಯಿಂದ ಸಮ್ಮೇಳನ ಜರುಗಲಿದೆ,” ಎಂದು ಕಸಾಪ ನಿಪ್ಪಾಣಿ ತಾಲೂಕಾಧ್ಯಕ್ಷ ಈರಣ್ಣಾ ಶಿರಗಾವಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಈ ವೇಳೆ ಅವರು ಸಮ್ಮೇಳನದ ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿದರು. ಕಸಾಪ ಕಾರ್ಯದರ್ಶಿ ಹಾಗೂ ಶರಣ ಸಾಹಿತ್ಯ ಪರಿಷತ್ …
Read More »ವಿಜಯ್ ದೇವರಕೊಂಡ ಮನೆಯಲ್ಲಿ ಜಾಹ್ನವಿ..!
ವಿಜಯ್ ದೇವರಕೊಂಡ ಹೆಸರಿನ ಜೊತೆ ಯಾವಾಗಲೂ ಒಂದಲ್ಲ ಒಂದು ನಟಿಯರ ಹೆಸರು ತಳುಕು ಹಾಕಿಕೊಂಡೇ ಇರುತ್ತದೆ. ಅದ್ಯಾಕೋ ಗೊತ್ತಿಲ್ಲ. ಯಾವುದೇ ಹೊಸ ನಟಿಯ ಜೊತೆ ಸಿನಿಮಾ ಮಾಡಿದರೂ ಇಬ್ಬರು ಡೇಟಿಂಗ್ ನಲ್ಲಿ ಇದ್ದಾರಾ ಅನ್ನೋ ಗಾಸಿಪ್ ಬಂದೇ ಬರುತ್ತದೆ. ಇತ್ತೀಚೆಗಷ್ಟೆ ರಶ್ಮಿಕಾ ಮಂದಣ್ಣ ಜೊತೆ ಡೇಟಿಂಗ್ ನಲ್ಲಿ ಇದ್ದಾರಾ ಅನ್ನೋ ಗಾಸಿಪ್ ಬೆನ್ನಲ್ಲೇ ಮತ್ತೊಂದು ಬೆಳವಣಿಗೆ ಇದೀಗ ಆಗಿದೆ. ಹೌದು, ಬಾಲಿವುಡ್ ನಟಿ ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್ …
Read More »ಚಿಕ್ಕೋಡಿ ಪಟ್ಟಣದಲ್ಲಿ ಹಿಮಾಚಲಪ್ರದೇಶದ ವಿಜಯೋತ್ಸವ ಆಚರಿಸಿದಕಾಂಗ್ರೆಸ್ ಕಾರ್ಯಕರ್ತರು
ಹಿಮಾಚಲಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಗೆಲವು ಹಿನ್ನಲೆಯಲ್ಲಿ ಚಿಕ್ಕೋಡಿ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿಸಿಡಿಸಿ ವಿಜಯೋತ್ಸವನ್ನು ಆಚರಿಸಿದರು. ಚಿಕ್ಕೋಡಿ ಪಟ್ಟಣದ ಬಸವ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಲಕ್ಷ್ಮಣರಾವ ಚಿಂಗಳೆ ನೇತ್ರತ್ವದಲ್ಲಿ ವಿಜಯೋತ್ಸವ ಜರುಗಿತು. ಕಾಂಗ್ರೆಸ್ ಪಕ್ಷಕ್ಕೆ ಜಯವಾಗಲಿ ಎಂದು ಘೋಷಣೆಗಳನ್ನು ಪಟಾಕಿ ಸಿಡಿಸಿ ವಿಜಯೋತ್ಸವನ್ನು ಆಚರಿಸಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮಣರಾವ ಚಿಂಗಳೆ ಮಾತನಾಡಿ ಹಿಮಾಚಲಪ್ರದೇಶಲ್ಲಿ ಕಾಂಗ್ರೆಸ್ ಪಕ್ಷ ಅಭೂತಪೂರ್ವ ಜಯಗಳಿಸಿದೆ. ಜನ ಬಿಜೆಪಿಗೆ ತಕ್ಕ ಪಾಠವನ್ನು ಕಲಿಸಿದ್ದಾರೆ ಎಂದರು. ನಂತರ …
Read More »
Laxmi News 24×7