ಚಿಕ್ಕೋಡಿ: ಚಿಕ್ಕೋಡಿ ತಾಲೂಕಿನ ಜೈನಾಪೂರ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷೆಯಾಗಿ ಸುಜಾತಾ ಷಣ್ಮುಗ ಸೋಲಬನ್ನವರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕಾಗಿ ಇವತ್ತು ನಡೆದ ಚುನಾವಣೆಯಲ್ಲಿ ಸುಜಾತಾ ಸೋಲಬನ್ನವರ ಒಂದೇ ಅರ್ಜಿ ಸಲ್ಲಿಕೆಯಾಗಿದ್ದರಿಂದ ಚುನಾವಣಾ ಅಧಿಕಾರಿ ಕಮಲಾಕರಯವರು ಸುಜಾತಾ ಸೋಲಬನ್ನವರ ಅವರನ್ನು ಅಧ್ಯಕ್ಷರನ್ನಾಗಿ ಘೋಷಿಸಿದರು. ನೂತನ ಅಧ್ಯಕ್ಯೆಯಾಗಿ ಆಯ್ಕೆಯಾದ ಸುಜಾತಾ ಷಣ್ಮುಖ ಸೋಲಬನ್ನವರ ಅವರನ್ನು ಸತ್ಕರಿಸಿ ಗೌರವಿಸಲಾಯಿತು.ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ನನ್ನನೂ ಅವಿರೋಧವಾಗಿ ಆಯ್ಕೆಗೆ ಶ್ರಮಿಸಿದ ಸದಸ್ಯರಿಗೆ …
Read More »ರಾಜ್ಯ ಸರಕಾರ ಹಿಂದೂಗಳಿಗೆ ಅನ್ಯಾಯ ಮಾಡುವ ಕಾರ್ಯ ಮಾಡುತ್ತಿದೆ:ಮಹಾಂತೇಶ ಕವಟಗಿಮಠ
ಕ್ರೈಸ್ತ ಪದ ಸೇರ್ಪಡೆಗೆ ವಿರೋಧ ಚಿಕ್ಕೋಡಿ: ರಾಜ್ಯ ಸರಕಾರ ಹಿಂದುಳಿದ ವರ್ಗಗಗಳ ಕಲ್ಯಾಣ ಇಲಾಖೆ ವತಿಯಿಂದ ಮಾಡುತ್ತಿರುವ ಜಾತಿಗಣತಿಯಲ್ಲಿ ಹಿಂದು ಜಾತಿಗಳ ಮುಂದೆ ಕ್ರೈಸ್ತರು ಎಂಬ ಪದ ಸೇರಿಸುವ ಮೂಲಕ ಹಿಂದೂಗಳಿಗೆ ಅನ್ಯಾಯ ಮಾಡುವ ಕಾರ್ಯ ಮಾಡುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಆಕ್ರೋಶ ವ್ಯಕ್ತಪಡಿಸಿದರು. ಚಿಕ್ಕೋಡಿಯ ಹಾಲಟ್ಟಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರ ಎಲ್ಲಾ ಜಾತಿಗಳ ಮುಂದೆ ಕ್ರಿಶ್ಚಿಯನ್ ಪದ ಬಳಕೆ ಮಾಡುವ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ. ರಾಮದುರ್ಗ ತಾಲ್ಲೂಕಿನ ಹುಲಕುಂದ ಗ್ರಾಮದ ಶ್ರೀ ವಿಠ್ಠಲರುಕ್ಮಿಣಿ ದೇವಸ್ಥಾನದ ಆವರಣದಲ್ಲಿ
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.. ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಹುಲಕುಂದ ಗ್ರಾಮದ ಶ್ರೀ ವಿಠ್ಠಲರುಕ್ಮಿಣಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …
Read More »ಕಾಡಾನೆ ದಾಳಿ ಗಾಬರಿಗೆ ಅರಣ್ಯ ವೀಕ್ಷಕ ಸಾವು
ಮೈಸೂರು: ಕಾಡಾನೆ ದಾಳಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿ, ಭಯದಲ್ಲಿಯೇ ಅರಣ್ಯ ವೀಕ್ಷಕರೊಬ್ಬರು ಮೃತಪಟ್ಟಿರುವ ಘಟನೆ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಎಚ್. ಡಿ. ಕೋಟೆ ತಾಲೂಕಿನ ಡಿ. ಬಿ. ಕುಪ್ಪೆ ವನ್ಯಜೀವಿ ವಲಯದಲ್ಲಿ ನಡೆದಿದೆ. ಮಾನೆಮೂಲೆ ಹಾಡಿಯ ನಿವಾಸಿಯಾಗಿದ್ದ ಅರಣ್ಯ ವೀಕ್ಷಕ ರಾಜು (45) ಸಾವಿಗೀಡಾದವರು. ಈ ಘಟನೆ ನಡೆದಿದ್ದು ಹೇಗೆ?: ಎಂದಿನಂತೆ ಇತರ ಸಿಬ್ಬಂದಿಯೊಂದಿಗೆ ರಾಜು ಅವರು ಕಾಡಿನಲ್ಲಿ ಗಸ್ತು ತಿರುಗಲು ಹೋಗಿದ್ದರು. ಈ ವೇಳೆ ಕಾಡಾನೆಯೊಂದು ಸಿಬ್ಬಂದಿಯ ಮೇಲೆ ದಾಳಿಗೆ ಮುಂದಾಯಿತು. …
Read More »ಚಿಕ್ಕೋಡಿ | ವಸತಿ ಶಾಲೆಯ 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು
ಚಿಕ್ಕೋಡಿ : ತಾಲ್ಲೂಕಿನ ಹಿರೇಕೋಡಿ ಗ್ರಾಮದ ಹೊರವಲಯದಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳು ಶುಕ್ರವಾರ ಬೆಳಗಿನ ಉಪಹಾರ ಸೇವಿಸಿದ ನಂತರ ಅಸ್ವಸ್ಥಗೊಂಡ ಘಟನೆ ಬೆಳಕಿಗೆ ಬಂದಿದೆ. ಬೆಳಿಗ್ಗೆ ಉಪ್ಪಿಟ್ಟು ಸೇವನೆ ಮಾಡಿದ ವಿದ್ಯಾರ್ಥಿ-ವಿದ್ಯಾರ್ಥಿನಿಯರಲ್ಲಿ ವಾಂತಿ ಹಾಗೂ ಬೇಧಿ ಕಾಣಿಸಿಕೊಂಡಿದ್ದು, ತೀವ್ರ ಅಸ್ವಸ್ಥರಾದವರನ್ನು ತಕ್ಷಣವೇ ಚಿಕ್ಕೋಡಿ ತಾಲ್ಲೂಕು ಆಸ್ಪತ್ರೆ ಮತ್ತು ತಾಯಿ-ಮಕ್ಕಳ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅಪರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಎಸ್. ಗಡದ ಅವರ ಮಾಹಿತಿಯ ಪ್ರಕಾರ, ತಾಲ್ಲೂಕು …
Read More »ದಂಡ ಕಟ್ಟಿ ಮಾರುದ್ದದ ಚಲನ್ ಸ್ವೀಕರಿಸುತ್ತಿರುವ ವಾಹನ ಸವಾರ
ದಾವಣಗೆರೆ: ಸಂಚಾರಿ ನಿಯಮ ಉಲ್ಲಂಘನೆ ಮಾಡಿದವರಿಗೆ ದಂಡ ಪಾವತಿ ಮಾಡಲು ಸರ್ಕಾರ ಶೇ.50% ರಿಯಾಯಿತಿ ನೀಡಿತ್ತು. ಇದರಿಂದ ವಾಹನ ಸವಾರರು ಸರತಿ ಸಾಲಿನಲ್ಲಿ ನಿಂತು ದಂಡ ಪಾವತಿ ಮಾಡಿದ್ದಾರೆ. ಹತ್ತಿಪ್ಪತ್ತು ಪ್ರಕರಣಗಳಲ್ಲಿ 20 ರಿಂದ 30 ಸಾವಿರ ರೂಪಾಯಿ ವರೆಗೂ ದಂಡ ಪಾವತಿ ಮಾಡಿದ್ದಾರೆ. ಇನ್ನು ದಾವಣಗೆರೆ ಉತ್ತರ ಹಾಗೂ ದಕ್ಷಿಣ ಸಂಚಾರಿ ಠಾಣೆಗಳಲ್ಲಿ ದಂಡ ಪಾವತಿಸಿ ಉದ್ದನೆಯ ಚಲನ್ ಪಡೆಯುವ ಮೂಲಕ ಕೆಲ ವಾಹನ ಸವಾರರು ಗಮನ ಸೆಳೆದಿದ್ದಾರೆ. ಉದ್ದನೆಯ …
Read More »ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಹಿನ್ನೆಲೆ ಚಿತ್ರಕಲೆ ಮತ್ತು ಭಾಷಣ ಸ್ಪರ್ಧೆ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಹಿನ್ನೆಲೆ ಪ್ರಜಾಪ್ರಭುತ್ವದ ಅರಿವು ಮೂಡಿಸುವ ಉದ್ಧೇಶ ಚಿತ್ರಕಲೆ ಮತ್ತು ಭಾಷಣ ಸ್ಪರ್ಧೆ ವಿದ್ಯಾರ್ಥಿಗಳು ಮತ್ತು ಜನರಿಂದ ಉತ್ತಮ ಪ್ರತಿಕ್ರಿಯೆ ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಹಿನ್ನೆಲೆ ಚಿತ್ರಕಲೆ ಮತ್ತು ಭಾಷಣ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು. ಶುಕ್ರವಾರದಂದು ಬೆಳಗಾವಿಯ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಮಕ್ಕಳಿಗಾಗಿ ಭಾಷಣ ಮತ್ತು ಚಿತ್ರಕಲೆ ಸ್ಪರ್ಧೆಯನ್ನು ಬೆಳಗಾವಿಯ ಡಾ.ಬಿ.ಆರ್. …
Read More »ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಉತ್ತಮ ಪ್ರದರ್ಶನ ಅಭ್ಯಾಸದೊಂದಿಗೆ ಕ್ರೀಡೆಯೂ ಅತ್ಯಗತ್ಯ; ಶಾಸಕ ಆಸೀಫ್ ಸೇಠ್
ಶ್ರೀBGM ASIF SAIT GOVT SCHOOL SPORTS INAU. ನಗರ ವಲಯದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟಕ್ಕೆ ಶಾಸಕ ಆಸೀಫ್ ಸೇಠ್ ಚಾಲನೆ ನಗರ ವಲಯದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ ಶಾಸಕ ಆಸೀಫ್ ಸೇಠ್ ಚಾಲನೆ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಉತ್ತಮ ಪ್ರದರ್ಶನ ಅಭ್ಯಾಸದೊಂದಿಗೆ ಕ್ರೀಡೆಯೂ ಅತ್ಯಗತ್ಯ; ಶಾಸಕ ಆಸೀಫ್ ಸೇಠ್ ಬೆಳಗಾವಿ ಉತ್ತರ ಶಾಸಕ ಆಸೀಫ್ ಸೇಠ್ ಅವರು ನಗರ ವಲಯದ ಪ್ರಾಥಮಿಕ ಮತ್ತು …
Read More »ಬೆಳಗಾವಿ ತಾಲ್ಲೂಕಿನ ಪಿಕೆಪಿಎಸ್ ಆಡಳಿತ ಮಂಡಳಿಯ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಬೆಳಗಾವಿ ತಾಲ್ಲೂಕಿನ ಪಿಕೆಪಿಎಸ್ ಆಡಳಿತ ಮಂಡಳಿಯ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಳಗಾವಿ ತಾಲ್ಲೂಕಿನ ಸಂಭಾವ್ಯ ಅಭ್ಯರ್ಥಿಯನ್ನು ಅವಿರೋಧವಾಗಿ ಆಯ್ಕೆ ಮಾಡಲು ನಿರ್ಧಾರ ವಿಪ ಸದಸ್ಯ ಚನ್ನರಾಜ ಹಟ್ಟಿಹೊಳಿ, ಯುವ ನಾಯಕ ರಾಹುಲ್ ಜಾರಕಿಹೊಳಿ, ಕುಲಗೋಡೆ ಭಾಗಿ ಬೆಳಗಾವಿ- ಮುರಗೋಡ ಅಜ್ಜನವರ ಕೃಪಾಶೀರ್ವಾದದಿಂದ ರೈತರಿಗಾಗಿಯೇ ನೂರು ವರ್ಷಗಳ ಹಿಂದೆಯೇ ಸ್ಥಾಪಿತಗೊಂಡಿರುವ ಬೆಳಗಾವಿ ಡಿಸಿಸಿ ಬ್ಯಾಂಕಿನ ಹಿತರಕ್ಷಣೆಗೆ ನಾವುಗಳು ಬದ್ಧರಿದ್ದು, ಮುಂದಿನ ದಿನಗಳಲ್ಲಿ ರೈತರಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ದೊರಕಿಸಿಕೊಡುವುದಾಗಿ …
Read More »ಭೂಮಿ ಇರೋವರೆಗೂ ಬಸವಣ್ಣನವರ ವಿಚಾರಧಾರೆಗಳನ್ನ ಕಾಪಾಡಬೇಕು: ಬಸವ ಸಂಸ್ಕೃತಿ ಅಭಿಯಾನದಲ್ಲಿ ಸತೀಶ ಜಾರಕಿಹೊಳಿ
ಬೆಳಗಾವಿ: “ಭೂಮಿ ಇರುವವರೆಗೆ ಬಸವಣ್ಣನವರ ವಿಚಾರಗಳನ್ನು ಕಾಪಾಡುವ ಪ್ರಯತ್ನ ಮಾಡಬೇಕಿದೆ. ದೇಶದಲ್ಲಿ ಮೂಲ ವಿಚಾರ ಮತ್ತು ಇತಿಹಾಸವನ್ನು ತಿರುಚುವ ಕೆಲಸ ಸಾವಿರಾರು ವರ್ಷಗಳಿಂದ ನಡೆಯುತ್ತಿದೆ. ಅಂತಹ ಸಂದರ್ಭದಲ್ಲಿ ಅದನ್ನು ಉಳಿಸುವ ಕೆಲಸ ಬಸವ ಸಂಸ್ಕೃತಿ ಅಭಿಯಾನದ ಮೂಲಕ ನಡೆಯುತ್ತಿರುವುದು ಶ್ಲಾಘನೀಯ” ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಬೆಳಗಾವಿಯ ನಾಗನೂರು ರುದ್ರಾಕ್ಷಿ ಮಠದ ಎಸ್.ಜಿ.ಬಿ.ಐ.ಟಿ. ಕಾಲೇಜಿನ ಆವರಣದಲ್ಲಿ ಬಸವ ಸಂಸ್ಕೃತಿ ಅಭಿಯಾನದ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. …
Read More »
Laxmi News 24×7