Breaking News
Home / ರಾಜಕೀಯ (page 150)

ರಾಜಕೀಯ

ಸುರ್ಜೇವಾಲ ಹೇಳಿಕೆ ನಡುವೆಯೂ ಮೂರು ಡಿಸಿಎಂ ಆಯ್ಕೆ ಬಗ್ಗೆ ಮಾತು ಮುಂದುವರಿಸಿದ ಕೆಎನ್ ರಾಜಣ್ಣ

ದೇವನಹಳ್ಳಿ, : ಕರ್ನಾಟಕದಲ್ಲಿ ಮೂರು ಡಿಸಿಎಂ (DCM) ಹುದ್ದೆ ಸೃಷ್ಟಿ ಮಾಡುವ ಯಾವುದೇ ಪ್ರಸ್ತಾಪವಿಲ್ಲ ಎಂದು ನಿನ್ನೆಯಷ್ಟೇ ರಾಜ್ಯ ಕಾಂಗ್ರೆಸ್ ಉಸ್ತುವಾರಿರಣದೀಪ್ ಸಿಂಗ್ ಸುರ್ಜೆವಾಲ(Randeep Singh Surjewala) ಹೇಳಿದ್ದರು. ಆ ಮೂಲಕ ಹೆಚ್ಚುವರಿ ಡಿಸಿಎಂ ಆಯ್ಕೆಗೆ ಫುಲ್​ಸ್ಟಾಪ್ ಇಟ್ಟಿದ್ದರು. ಆದರೆ, ಇಂದು ಹೈಕಮಾಂಡ್ ಭೇಟಿಗೂ ಮುನ್ನ ಸಚಿವ ಕೆಎನ್ ರಾಜಣ್ಣ (KN Rajanna) ಅವರು ಹೆಚ್ಚುವರಿ ಡಿಸಿಎಂ ಆಯ್ಕೆ ಬಗ್ಗೆ ಮತ್ತೆ ಮಾತೆತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ …

Read More »

ರಾಮುಲು, ಸೋಮಶೇಖರ್ ರೆಡ್ಡಿಗೆ ಸಿನಿಮಾ ಸ್ಟೈಲ್​ನಲ್ಲಿ ಖಡಕ್ ವಾರ್ನಿಂಗ್ ಕೊಟ್ಟ ಜನಾರ್ಧನ ರೆಡ್ಡಿ ಪತ್ನಿ..!

ಬಳ್ಳಾರಿ, : ಶಾಸಕ ಜನಾರ್ಧನ ರೆಡ್ಡಿ (janardhan reddy) ಪತ್ನಿ ಅರುಣಾ ಲಕ್ಷ್ಮೀ (Aruna Lakshmi) ಅವರು ತಮ್ಮ ಪತಿ ವಿರೋಧಿಗಳಿಗೆ ಸಿನಿಮಾ ಸ್ಟೈಲ್​ನಲ್ಲಿ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಅದರಲ್ಲೂ ಮುಖ್ಯವಾಗಿ ಬಾವ ಸೋಮಶೇಖರ ರೆಡ್ಡಿ (ಜನಾರ್ದನ ರೆಡ್ಡಿ ಸಹೋದರ) (somashekar reddy) ಹಾಗೂ ರೆಡ್ಡಿ ಗೆಳೆಯ ಶ್ರೀರಾಮುಲುಗೆ (Sriramlu) ಖಡಕ್ ವಾರ್ನಿಂಗ್ ನೀಡಿದ್ದಾರೆ. ಜನಾರ್ದನ ರೆಡ್ಡಿ ಸಿಂಹ, ಸಿಂಹ ಯಾವಾಗಲೂ ಸಿಂಗಲ್ ಆಗೇ ಬರತ್ತೆ. ನೀವೆಲ್ಲಾ ಶತ್ರುಗಳು ಒಂದಾದರೂ ಸಹ …

Read More »

ಬೆಳಗಾವಿ: ಸುರೇಬಾನ ಗ್ರಾಮದ ಹೊರ ವಲಯದ ಬೆಟ್ಟದಾರಣ್ಯದಲ್ಲೇ ಶಬರಿಗೆ ಶ್ರೀರಾಮನ ದರ್ಶನ

ಬೆಳಗಾವಿ, : ಅಯೋಧ್ಯೆ ಶ್ರೀರಾಮ ಮಂದಿರ (Ayodhya Ram Mandir) ಲೋಕಾರ್ಪಣೆಗೆ ದಿನಗಣನೆ ಶುರುವಾಗಿದೆ. ಈ ನಡುವೆ ದೇಶದಲ್ಲಿ ಇರುವ ಶ್ರೀರಾಮ, ಸೀತೆ, ಆಂಜನೇಯನಿಗೆಸಂಬಂಧಿಸಿದ ಅನೇಕ ಕುರುಹುಗಳು ಜಗಜ್ಜಾಹಿರವಾಗುತ್ತಿದೆ. ಅದರಲ್ಲೂ ಕರ್ನಾಟಕದಲ್ಲಿ ಇಂತಹ ಅನೇಕ ನಿರ್ದರ್ಶನಗಳು ಬೆಳಕಿಗೆ ಬಂದಿವೆ. ಇದೀಗ ಶ್ರೀರಾಮನ ದರ್ಶನಕ್ಕಾಗಿ ಜಾತಕ ಪಕ್ಷಿಯಂತೆ ಕಾದುಕುಳಿತಿದ್ದ ಶಬರಿಗೆ (Shabari) ರಾಮನು ದರ್ಶನ ಕೊಟ್ಟಿದ್ದು ಕೂಡ ಕರ್ನಾಟಕದಲ್ಲೇ ಎಂಬುದು ಹೆಮ್ಮೆಯ ಸಂಗತಿ. ಹಾಗಾದರೆ ಆ ಸ್ಥಳ ಯಾವುದು ಎಂಬುದು ಇಲ್ಲಿದೆ. ಶ್ರೀರಾಮನಿಗಾಗಿ ಶಬರಿ ಕಾದುಕುಳಿತದ್ದು ಕರ್ನಾಟಕದ ಬೆಳಗಾವಿ ಜಿಲ್ಲೆಯ …

Read More »

ಲೋಕಸಭಾ ಚುನಾವಣೆ: ಬಿಜೆಪಿಯ ಕ್ಲಸ್ಟರ್‌ ಮಟ್ಟದ ಸಭೆ ಪೂರ್ಣ, ಈಗ ವಿಜಯೇಂದ್ರ ಚಿತ್ತ ದೆಹಲಿಯತ್ತ

ಬೆಂಗಳೂರು,: ಮುಂಬರುವ ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬಿಜೆಪಿ (BJP Karnataka) ಸಿದ್ಧತೆ ನಡೆಸಿದ್ದು, ಮೊದಲ ಹಂತದಲ್ಲಿ ಕ್ಲಸ್ಟರ್‌ ಮಟ್ಟದ ಸಭೆಯನ್ನು ಪೂರ್ಣಗೊಳಿಸಿದ್ದು, ಇಲ್ಲಿ ಪಕ್ಷದ ಕಾರ್ಯತಂತ್ರ ಸೇರಿದಂತೆ ಮುಂದಿನ ನಡೆ ಹೇಗಿರಬೇಕು ಎಂಬುದನ್ನು ಚರ್ಚೆ ಮಾಡಲಾಗಿದೆ. ಇನ್ನು ರಾಜ್ಯದ 8 ಕ್ಲಸ್ಟರ್‌ಗಳ ವ್ಯಾಪ್ತಿಯಲ್ಲಿ ಬರುವ 28 ಲೋಕಸಭಾ ಕ್ಷೇತ್ರಗಳ ಸಭೆ ಮುಕ್ತಾಯಗೊಂಡ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ,ಬುಧವಾರ ಮತ್ತು ಗುರುವಾರ ಎರಡು …

Read More »

ಹೆಚ್ಚುವರಿ ಡಿಸಿಎಂ ಹುದ್ದೆ ಕೇಳುವವರನ್ನು ಲೋಕಸಭಾ ಚುನಾವಣೆ ಕಣಕ್ಕೆ ಇಳಿಸಲು ಡಿಕೆಶಿ ಸಲಹೆ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುವರಿ ಉಪಮುಖ್ಯಮಂತ್ರಿ (DCM) ಮಾಡಬೇಕು ಎಂದು ಒತ್ತಡ ಹೇರುತ್ತಿರುವವರಿಗೆ ಲೋಕಸಭಾ (lokasabha) ಚುನಾವಣೆ (election) ಜವಾಬ್ದಾರಿ ನೀಡಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (d.k. shivakumar) ಅವರು ಕಾಂಗ್ರೆಸ್ (congress) ಹೈಕಮಾಂಡ್ ಗೆ ಸಲಹೆ ನೀಡಿದ್ದಾರೆ.   ದಲಿತ ಮತ್ತು ಸಿಎಂ ಆಪ್ತ ಸಚಿವರು ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಬಣಗಳ ನಡುವೆ ಪೈಪೋಟಿ ಹೆಚ್ಚಾಗಿದ್ದು, ಆದರೆ, ಎಐಸಿಸಿ (AICC) …

Read More »

ನಿಗಮ ಮಂಡಳಿ ಬೇಡವೆಂದು ಸಿದ್ದರಾಮಯ್ಯಗೆ ಪತ್ರ ಬರೆದ ಕಾಂಗ್ರೆಸ್ ಶಾಸಕ!

ಕಾಂಗ್ರೆಸ್​ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ರಾಜ್ಯಕ್ಕೆ ಆಗಮಿಸಿದ ಬೆನ್ನಲ್ಲೇ ಹಲವು ತಿಂಗಳಿನಿಂದ ನನೆಗುದಿಗೆ ಬಿದ್ದಿದ್ದ ನಿಗಮ ಮಂಡಳಿ ಅಧ್ಯಕ್ಷ ( corporation board chairman) ನೇಮಕಾತಿ ಪಟ್ಟಿಗೆ ಮರುಜೀವ ಬಂದಿದೆ. ಸುರ್ಜೆವಾಲ ಅವರು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಸುದೀರ್ಘವಾಗಿ ಮಾತುಕತೆ ನಡೆಸಿ ನಿಗಮ ಮಂಡಳಿ ಪಟ್ಟಿ ಅಂತಿಮಗೊಳಿಸಿದ್ದಾರೆ. ಇದರ ಮಧ್ಯೆ ನಾನು ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಹೀಗಾಗಿ ನನ್ನನ್ನು ಪರಿಗಣಿಸಬೇಡಿ …

Read More »

ಬಿ ವೈ ವಿಜಯೇಂದ್ರಗೆ ಮಂಪರು ಪರೀಕ್ಷೆ ಮಾಡಿಸಬೇಕು – ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ : ಬಿ ಕೆ ಹರಿಪ್ರಸಾದ್‌ಗೆ(B K hariprasad) ಮಂಪರು ಪರೀಕ್ಷೆ ಮಾಡಸಬೇಕು ಎಂದರೆ ಬಿ ವೈ ವಿಜಯೇಂದ್ರಗೂ(B Y Vijayendra) ಕೋವಿಡ್‌, ಪಿಎಸ್‌ಐ ಹಗರಣದ ವಿಚಾರದಲ್ಲಿ ಮಂಪರು ಪರೀಕ್ಷೆ ಮಾಡಿಸಬೇಕು ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ.   ನಗರದಲ್ಲಿ ಇಂದು (ಜ.11) ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಿಜಯೇಂದ್ರ ತಂದೆಯ ಹೆಸರಲ್ಲಿ ರಾಜ್ಯಾಧ್ಯಕ್ಷ ಪಟ್ಟಕ್ಕೆ ಏರಿದವರು, ಲೋಕಸಭೆಯ ಎಲ್ಲಾ ಸೀಟನ್ನು ಗೆಲ್ಲುತ್ತೇವೆ ಎಂದಿದ್ದಾರೆ. ಒಮ್ಮೆ ಗೆಲ್ಲದಿದ್ರೆ ವಿಜಯೇಂದ್ರ …

Read More »

ರಾಮನನ್ನು ರಾಜಕೀಯ ಪ್ರಚಾರಕ್ಕೆ ಬಳಸಿದ್ದು ಸಮಸ್ತ ಹಿಂದೂಗಳಿಗೆ ಮಾಡಿದ ದ್ರೋಹ: ಸಿಎಂ ಸಿದ್ದು

ಬೆಂಗಳೂರು: ಇದೇ 22ರಂದು ಅಯೋಧ್ಯೆ (Ayodhya) ರಾಮ ಮಂದಿರ (Ram MandiR) ಉದ್ಘಾಟನೆಗೊಳ್ಳಲಿದೆ. ಈ ನಡುವೆ ರಾಮನನ್ನು ಬಿಜೆಪಿ (BJP) ರಾಜಕೀಯ ಪ್ರಚಾರಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಕಾಂಗ್ರೆಸ್ (Congress) ನಾಯಕರು ಆರೋಪಿಸಿದ್ದರು. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಬಿಜೆಪಿ ವಿರುದ್ಧ ಕಿಡಿಕಾರಿದ್ದು, ‘ಬಿಜೆಪಿ ರಾಮನನ್ನು ರಾಜಕೀಯ ಪ್ರಚಾರಕ್ಕೆ ಬಳಸಿದ್ದು ರಾಮ ಹಾಗೂ ಸಮಸ್ತ ಹಿಂದೂಗಳಿಗೆ ಮಾಡಿದ ದ್ರೋಹ’ ಎಂದು ಹೇಳಿದ್ದಾರೆ.   ಈ ಬಗ್ಗೆ ಎಕ್ಸ್ ನಲ್ಲಿ (X) …

Read More »

3 ಡಿಸಿಎಂ ಡಿಶುಂ ಡಿಶುಂಗೆ ಕೊನೆಗೂ ಬಿತ್ತು ಫುಲ್ ಸ್ಟಾಪ್: ಎಲ್ಲಾ ಗೊಂದಲಗಳಿಗೆ ಸುರ್ಜೆವಾಲ ತೆರೆ

ಬೆಂಗಳೂರು): ಲೋಕಸಭೆ ಚುನಾವಣೆ (Loksabha Elections 2024) ವೇಳೆಯೇ ಕಾಂಗ್ರೆಸ್​(Congress) ನಲ್ಲಿ ಮೂರು ಡಿಸಿಎಂ (ಉಪಮುಖ್ಯಮಂತ್ರಿ) ಹುದ್ದೆ ಕೂಗು ಭಾರೀ ಜೋರಾಗಿದೆ. ಕಾಂಗ್ರೆಸ್​ನ ಕೆಲ ಹಿರಿಯ ನಾಯಕರೇ 3 ಡಿಸಿಎಂ ಸ್ಥಾನ ಸೃಷ್ಟಿ ಬಗ್ಗೆ ಬಹಿರಂಗವಾಗಿಯೇ ಹೇಳಿಕೆ ನೀಡಿದ ಬೆನ್ನಲ್ಲೇ ಪಕ್ಷದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಇದು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಮಧ್ಯೆ ಪ್ರವೇಶಿಸಿ ಮೂರು ಡಿಸಿಎಂ ಗೊಂದಲಗಳಿಗೆ ತೆರೆ …

Read More »

ಬೆಳಗಾವಿ ಡಿಸಿ ಕಚೇರಿಯಲ್ಲೇ ವಿಷಸೇವಿಸಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ

ಬೆಳಗಾವಿ, ಜನವರಿ 10: ಡಿಸಿ ಕಚೇರಿಯಲ್ಲೇ ವಿಷ(poison)ಕುಡಿದ ವ್ಯಕ್ತಿ ಆತ್ಮಹತ್ಯೆ ಯತ್ನಿಸಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಜಿಲ್ಲೆಯ ಗೋಕಾಕ್ ಪಟ್ಟಣ ನಿವಾಸಿ ಕುಮಾರ್ ಕೊಪ್ಪದ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಡಿಸಿ ಕಚೇರಿಯಲ್ಲಿ ಇಲ್ಲದಿರುವಾಗ ಆತ್ಮಹತ್ಯೆ ಯತ್ನಿಸಿದ್ದು, ಆತ್ಮಹತ್ಯೆಗೆ ಯತ್ನಿಸಿದ್ದಕ್ಕೆ ಯಾವುದೇ ಕಾರಣ ತಿಳಿದಿಲ್ಲ. ಪೊಲೀಸರು ಅಸ್ವಸ್ಥನನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸರ್ಕಾರಿ ಬಸ್ ಡಿಕ್ಕಿಯಾಗಿ ಬೈಕ್​ ಸವಾರ ದುರ್ಮರಣ ವಿಜಯಪುರ: ಸರ್ಕಾರಿ ಬಸ್ ಡಿಕ್ಕಿಯಾಗಿ …

Read More »