ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾವೂ ಸೇರಿದಂತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಕಣಕ್ಕಿಳಿಯುವುದಾಗಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದು, ಆದರೆ ತಮ್ಮ ಸ್ಪರ್ಧೆ ಯಾವ ಕ್ಷೇತ್ರದಿಂದ ಎಂಬುದನ್ನು ಬಹಿರಂಗಪಡಿಸಿರಲಿಲ್ಲ. ಉಡುಪಿ ಅಥವಾ ದಕ್ಷಿಣ ಕನ್ನಡ ಜಿಲ್ಲೆಯ ಯಾವುದಾದರೂ ಒಂದು ಕ್ಷೇತ್ರದಲ್ಲಿ ಪ್ರಮೋದ್ ಮುತಾಲಿಕ್ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗಿತ್ತಲ್ಲದೆ ಇದಕ್ಕಾಗಿ ಅವರು ಈ ಕ್ಷೇತ್ರಗಳ ಹಿಂದೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ಸಹ ನಡೆಸಿದ್ದರು. ಇದೀಗ ತಾವು ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ …
Read More »ಪಿಎಸ್ಐ ಅಕ್ರಮ ನೇಮಕಾತಿ: 12 ಆರೋಪಿಗಳಿಗೆ ಜಾಮೀನು
ಬೆಂಗಳೂರು: ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ನೇಮಕಾತಿ ಹಗರಣದಲ್ಲಿ ಬಂಧಿತರಾಗಿರುವ ಒಟ್ಟು 12 ಜನ ಆರೋಪಿಗಳಿಗೆ ನಗರದ 23ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, ಇಬ್ಬರು ಸರ್ಕಾರಿ ಅಧಿಕಾರಿಗಳಿಗೆ ಜಾಮೀನು ನಿರಾಕರಿಸಿದೆ. ಜಾಗೃತ್, ಸೋಮನಾಥ, ರಘುವೀರ್, ಮಮತೇಶ್ ಗೌಡ, ಸಿ.ಎಂ.ನಾರಾಯಣ , ಆರ್. ಮಧು, ಸಿ.ಕೆ.ದಿಲೀಪ್ ಕುಮಾರ್, ರಚನಾ ಹಣಮಂತ, ಪ್ರವೀಣ್ ಕುಮಾರ್ ರಾಘವೇಂದ್ರ, ಮಧ್ಯವರ್ತಿಗಳಾದ ಕೇಶವಮೂರ್ತಿ ಮತ್ತು ಶರತ್ ಕುಮಾರ್ …
Read More »ಬೈಕ್ಗೆ ಹಿಂಬದಿಯಿಂದ ಕ್ಯಾಂಟರ್ ವಾಹನ ಡಿಕ್ಕಿ, ಬೈಕ್ ಸವಾರ ಸಾವು
ಬೈಕ್ಗೆ ಹಿಂಬದಿಯಿಂದ ಕ್ಯಾಂಟರ್ ವಾಹನ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ದುರ್ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಝಳಕಿ ಕ್ರಾಸ್ ಬಳಿ ನಡೆದಿದೆ. ಗುರುರಾಜ್ ಶಿರಶ್ಯಾಡ ಮೃತಪಟ್ಟಿರುವ ಬೈಕ್ ಸವಾರನಾಗಿದ್ದು ಬೈಕ್ನಲ್ಲಿ ಹೋಗುವಾಗ ಬೈಕ್ಗೆ ಹಿಂಬದಿಯಿಂದ ಕ್ಯಾಂಟರ್ ವಾಹನ ಡಿಕ್ಕಿಯಾಗಿದೆ. ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಇನ್ನೂ ಡಿಕ್ಕಿ ವಿಡಿಯೋ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ.ಈ ಕುರಿತು ಝಳಕಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..
Read More »ನಾನು ಯಾವುದೇ ಕಾರಣಕ್ಕೂ ಜೆಡಿಎಸ್ ಸೇರುವದಿಲ್ಲ.ಬಿಜೆಪಿ ಬಿಡೋಲ್ಲ,:. ರಮೇಶ್ ಜಾರಕಿಹೊಳಿ
ನಾನು ಯಾವುದೇ ಕಾರಣಕ್ಕೂ ಜೆಡಿಎಸ್ ಸೇರುವದಿಲ್ಲ.ನಾನು ಬಿಜೆಪಿ ಬಿಡೋಲ್ಲ,ಬಿಡೋಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಸ್ಪಷ್ಟಪಡಿಸಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಳಗುಂದಿ ಸಮೀಪದಲ್ಲಿ ರಮೇಶ್ ಜಾರಕಿಹೊಳಿ ಅವರ ಆಪ್ತ ನಾಗೇಶ್ ಮನ್ನೋಳಕರ ಮಾಲಿಕತ್ವದ ಸ್ಮಾರ್ಟ್ ಕ್ಯಾಶ್ಯು ಕಾರ್ಖಾನೆಯನ್ನು ಉದ್ಘಾಟಿಸುವ ಮುನ್ನ ಮಾದ್ಯಮಗಳ ಜೊತೆ ಮಾತನಾಡಿದ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ನಲ್ಲಿ ನಾನು ಮಂತ್ರಿಯಾಗಿದ್ದೆ. ಆ ಮಂತ್ರಿ ಸ್ಥಾನ ಬಿಟ್ಟು ಬಿಜೆಪಿಗೆ ಸೇರ್ಪಡೆಯಾಗಿ ಸರ್ಕಾರ ರಚಿಸಿದ್ದೇವೆ.ಈಗ ನನ್ನನ್ನು ಮಂತ್ರಿ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯ
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ದಂಡಾಪುರ ಗ್ರಾಮದಲ್ಲಿ ಬೀರಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ಲಕ್ಷ್ಮಣ ಗನಾಪಾಗೋಲ್, ಮಾದೇವ್ ತುಕ್ಕಾನಟ್ಟಿ, ರಾಮಣ್ಣ ವಡೆರ್, …
Read More »ಬಿಜೆಪಿಯಿಂದ ನೀವು ಇದ್ದೀರಿ ಬಿಜೆಪಿ ಇಲ್ಲದೆ ಇದ್ದರೆ ನೀವು ಜೀರೋ.ಯತ್ನಾಳ್ ಹೆಂಡ್ಯಾಗಿನ ಹುಳಾ
ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಮುಗಿದು ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ಪಕ್ಷದಿಂದ ಟಿಕೆಟ್ ಸಿಗದ ಕಾರಣ ಪಕ್ಷೇತರರಾಗಿ ಸ್ಪರ್ಧಿಸಿದ್ದ ಅಭ್ಯರ್ಥಿಗಳನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು. ಇದೀಗ ಉಚ್ಚಾಟಿತ ಅಭ್ಯರ್ಥಿಗಳು ಸೇರಿಕೊಂಡು ಪತ್ರಿಕಾಗೋಷ್ಠಿ ನಡೆಸಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹಾಗೂ ಬಿಜೆಪಿ ಅಧ್ಯಕ್ಷ ಆರ್.ಎಸ್.ಪಾಟೀಲ ಕುಚಬಾಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಟ್ಲರ್ ಸಂಸ್ಕೃತಿ ಎಂದು ವಾಗ್ದಾಳಿ ನಡೆಸಿದ್ದಾರೆ.ಈ ಕುರಿತು ಇಲ್ಲಿದೆ ಡಿಟೇಲ್ಸ್. ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ …
Read More »ಸಿಹಿ ಬೆಳೆದ ಅನ್ನದಾತರಿಗೆ ಕಹಿ ಅನುಭವ
ಕಬ್ಬು ಬೆಳೆಗಾರರ ಸಮಸ್ಯೆ ಪ್ರತೀವರ್ಷವೂ ಕಗ್ಗಂಟು. ಸಕ್ಕರೆ ಕಾರ್ಖಾನೆ ಮಾಲಕರು ಹಾಗೂ ಬೆಳೆಗಾರರ ನಡುವೆ ಬೆಲೆ ತಿಕ್ಕಾಟ ಸಾಮಾನ್ಯವಾಗಿ ಬಿಟ್ಟಿದೆ. ಕೃಷ್ಣಾ ತೀರದ ಬೆಳಗಾವಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಹೋರಾಟ ನಡೆಯುತ್ತಲೇ ಇರುತ್ತದೆ. ಸರಕಾರವೇ ಮಧ್ಯಸ್ಥಿಕೆ ವಹಿಸಿದರೂ ಪರಿಹಾರ ಎಂಬುದು ಮರೀಚಿಕೆಯಾಗಿದೆ. ಈ ವರ್ಷವೂ ಪ್ರತಿಭಟನೆ ಕಾವು ತುಸು ಹೆಚ್ಚೇ ನಡೆದಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಕಳೆದ 50 ದಿನಗಳಿಂದ ಹೋರಾಟದ ಕಿಚ್ಚು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಸಂಘರ್ಷ, ಸಂಧಾನದ …
Read More »ಖಾನಾಪುರ ಬಳಿ ಟೆಂಪೋ ಪಲ್ಟಿ: 30 ಜನರಿಗೆ ಗಾಯ
ಖಾನಾಪುರ ತಾಲೂಕಿನ ಗರ್ಲಗುಂಜಿ ಗ್ರಾಮದ ಬಳಿ ಟೆಂಪೋ ಪಲ್ಟಿಯಾಗಿ 30 ಪ್ರಯಾಣಿಕರಿಗೆ ಗಾಯವಾಗಿರುವ ಘಟನೆ ನಡೆದಿದೆ. ಶುಕ್ರವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿಯಾಗಿದೆ. ಟೆಂಪೋದಲ್ಲಿ ಪ್ರಯಾಣಿಸುತ್ತಿದ್ದ 30 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಗಾಯಾಳುಗಳನ್ನು ಯಳ್ಳೂರ ಕೆಎಲ್ಇ ಚಾರಿಟೇಬಲ್ ಆಸ್ಪತ್ರೆ ಮತ್ತು ವಿಜಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ಎಲ್ಲರೂ ಹುದಲಿ ಗ್ರಾಮದವರಾಗಿದ್ದು, ಗರ್ಲಗುಂಜಿಗೆ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಆಗಮಿಸಿದ್ದರು.
Read More »ಸಿಐಟಿಯು ರಾಜ್ಯಾಧ್ಯಕ್ಷೆ ಕಾರು ಘಾಟಿಯಲ್ಲಿ ಅಪಘಾತ: ಪಾರು
ಕುಂದಾಪುರ: ಇಲ್ಲಿ ಮೂರು ದಿನಗಳ ಕಾಲ ನಡೆದ ಸಿಐಟಿಯುವಿನ 15ನೇ ರಾಜ್ಯ ಸಮ್ಮೇಳನ ಮುಗಿಸಿ ಗುರುವಾರ ರಾತ್ರಿ ಹಾಸನಕ್ಕೆ ಹೋಗುತ್ತಿದ್ದ ಸಿಐಟಿಯು ರಾಜ್ಯಾಧ್ಯಕ್ಷೆ ವರಲಕ್ಷ್ಮೀ ಅವರ ಕಾರು ಆಗುಂಬೆಯಲ್ಲಿ ಅಪಘಾತಕ್ಕೊಳಗಾಗಿದೆ. ಧರ್ಮೇಶ್ ಅವರು ಕಾರು ಚಲಾಯಿಸುತ್ತಿದ್ದು, ಆಗುಂಬೆ ಘಾಟ್ ನಂತರ ಜಯಪುರದಿಂದ ಆಲ್ದೂರಿಗೆ 5 ಕಿ.ಮೀ. ಇದೆ ಎನ್ನುವಾಗ ರಾತ್ರಿ 10.30ರ ಸುಮಾರಿಗೆ ಕಾರು ರಸ್ತೆ ಬಿಟ್ಟು ಪ್ರಪಾತದೆಡೆಗೆ ಹೋಗಿದೆ. 50ಅಡಿಗಿಂತ ಹೆಚ್ಚು ಕೆಳಗಿಳಿದಿತ್ತು. ಮಾಹಿತಿ ತಿಳಿಸಲು ನೆಟ್ವರ್ಕ್ ಕೂಡಾ …
Read More »ಮತದಾರರ ಗೌಪ್ಯತೆ: ಪಾರದರ್ಶಕವಾಗಿ ತನಿಖೆ ನಡೆಯಲಿ
ಬೆಂಗಳೂರಿನ 28 ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ದೊಡ್ಡ ಗದ್ದಲವೇ ಏರ್ಪಟ್ಟಿದ್ದು, ರಾಜ್ಯ ಸರಕಾರ ಭಾರೀ ಚುನಾವಣ ಅಕ್ರಮ ಮಾಡಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸುತ್ತಿದ್ದಾರೆ. ಗುರುವಾರ ಬೆಳಗ್ಗೆಯಿಂದಲೂ ರಾಜ್ಯದಲ್ಲಿ ಇದೇ ಸುದ್ದಿ ದೊಡ್ಡ ಸದ್ದು ಮಾಡಿದ್ದು, ಚುನಾವಣ ಅಕ್ರಮ ಮಾಡುವ ಸಲುವಾಗಿಯೇ ಮತದಾರರ ಗೌಪ್ಯತೆ ಹರಣ ಮಾಡಲಾಗಿದೆ ಎಂದು ಕಾಂಗ್ರೆಸ್ ನೇರವಾಗಿಯೇ ಆರೋಪಿಸುತ್ತಿದೆ. ಬೆಂಗಳೂರು ನಗರ ಜಿಲ್ಲೆಯ ಉಸ್ತುವಾರಿ ಹೊತ್ತಿರುವ …
Read More »
Laxmi News 24×7