ಚಿಕ್ಕೋಡಿ(ಬೆಳಗಾವಿ): “ಆರು ತಿಂಗಳ ಗರ್ಭಿಣಿ ಪತ್ನಿಯನ್ನು ಹತ್ಯೆಗೈದ ಘಟನೆ ಚಿಕ್ಕೋಡಿಯ ಉಗಾರ್ ಬಿಕೆ ಗ್ರಾಮದಲ್ಲಿ ಕಳೆದ ಭಾನುವಾರ ರಾತ್ರಿ ನಡೆದಿದ್ದು, ಪತಿ ಹಾಗು ಇನ್ನಿಬ್ಬರನ್ನು ಬಂಧಿಸಲಾಗಿದೆ” ಎಂದು ಎಸ್ಪಿ ಭೀಮಾಶಂಕರ ಗುಳೇದ ತಿಳಿಸಿದರು. ಚೈತಾಲಿ (23) ಕೊಲೆಯಾದವರು. ಎಸ್ಪಿ ಗುಳೇದ ಅವರು ಬೆಳಗಾವಿ ನಗರದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, ಪ್ರಕರಣದ ಪೂರ್ಣ ಮಾಹಿತಿ ನೀಡಿದರು. “ಕಳೆದ ಭಾನುವಾರ (7-09-25) ರಾತ್ರಿ ಕಾಗವಾಡ ತಾಲೂಕಿನ ಉಗಾರ ಬಿ.ಕೆ.ಗ್ರಾಮದ ಮಹಿಳೆ ಚೈತಾಲಿ …
Read More »ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಹ್ವಾನ ವಿರೋಧಿಸಿ ಮತ್ತೆರಡು ಪಿಐಎಲ್ ಸಲ್ಲಿಕೆ
ನಾಡಹಬ್ಬ ಐತಿಹಾಸಿಕ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ರಾಜ್ಯ ಸರಕಾರದ ಕ್ರಮ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ನಲ್ಲಿ ಮತ್ತೆರಡು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸಲ್ಲಿಕೆಯಾಗಿವೆ. ಹಿಂದೂ ಅಲ್ಲದ ಬಾನು ಮುಷ್ತಾಕ್ರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿರುವ ನಿರ್ಧಾರ ವಾಪಸ್ ಪಡೆಯಲು ಸರಕಾರಕ್ಕೆ ನಿರ್ದೇಶನ ನೀಡಬೇಕು. ಅದೇ ರೀತಿ ದಸರಾ ಉದ್ಘಾಟನೆಯು ಹಿಂದೂ ಧಾರ್ಮಿಕ ಸಂಪ್ರದಾಯದ ಅವಿಭಾಜ್ಯ ಭಾಗವೆಂದು ಘೋಷಿಸಿ ಅದನ್ನು …
Read More »ವಿವಿಧ ಕೇಸ್ ನಲ್ಲಿ ಆರೋಪಿಯಾಗಿರುವ ಪುನೀತ್ ಕೆರೇಹಳ್ಳಿ ಮದ್ದೂರಿಗೆ ಹೋಗುವ ಮುನ್ನ ಪೊಲೀಸರ ವಶಕ್ಕೆ
ವಿವಿಧ ಕೇಸ್ ನಲ್ಲಿ ಆರೋಪಿಯಾಗಿರುವ ಪುನೀತ್ ಕೆರೇಹಳ್ಳಿ ಮದ್ದೂರಿಗೆ ಹೋಗುವ ಮುನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಲ್ಲು ತೂರಾಟ ಖಂಡಿಸಿ ಪುನೀತ್ ಕೆರೆಹಳ್ಳಿ ಮದ್ದೂರಿಗೆ ತೆರಳುತ್ತಿದ್ದಾರೆ ಎನ್ನುವ ಖಚಿತ ಮಾಹಿತಿ ಮೇರೆಗೆ, ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನ ಬಸವನಗುಡಿ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ. ಅಲ್ಲೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇನ್ನು ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿ ಆಗುವುದಿಲ್ಲ. ಸಾರ್ವಜನಿಕರ ಶಾಂತಿ ಹಾಗೂ ಸೌಹಾರ್ದಕ್ಕೆ ಧಕ್ಕೆ ತರುವುದಿಲ್ಲ ಎಂಬುದಾಗಿ ಮುಚ್ಚಳಿಕೆ ಬರೆದುಕೊಡುವಂತೆ …
Read More »ನಿಯಮ ಉಲ್ಲಂಘಿಸಿ ಶಾಸಕ ವೀರೇಂದ್ರ ಬಂಧನ-ವಕೀಲರ ವಾದ: ವಿಚಾರಣೆ ಮುಂದೂಡಿಕೆ
ಬೆಂಗಳೂರು: ಆನ್ಲೈನ್ ಮತ್ತು ಆಫ್ಲೈನ್ ಅಕ್ರಮ ಬೆಟ್ಟಿಂಗ್ ಆರೋಪ ಪ್ರಕರಣ ಸಂಬಂಧ ಸಮನ್ಸ್ ಜಾರಿಗೊಳಿಸದೆ, ನಿಯಮಗಳನ್ನು ಉಲ್ಲಂಘಿಸಿ ಚಿತ್ರದುರ್ಗದ ಶಾಸಕ ಕೆ.ಸಿ.ವೀರೇಂದ್ರ ಅವರನ್ನು ಹಣ ಅಕ್ರಮ ವರ್ಗಾವಣೆ ತಡೆ (ಪಿಎಂಎಲ್) ಕಾಯ್ದೆಯಡಿ ಜಾರಿ ನಿರ್ದೇಶನಾಲಯ ಬಂಧಿಸಿದೆ ಎಂದು ವೀರೇಂದ್ರ ಪತ್ನಿ ಆರ್.ಡಿ.ಚೈತ್ರಾ ಪರ ವಕೀಲರು ಹೈಕೋರ್ಟ್ಗೆ ತಿಳಿಸಿದ್ದಾರೆ. ಚಿತ್ರದುರ್ಗದ ಶಾಸಕರಾದ ತಮ್ಮ ಪತಿ ಕೆ.ಸಿ.ವೀರೇಂದ್ರ ಅವರನ್ನು ಪಿಎಂಎಲ್ ಕಾಯ್ದೆಯಡಿ ಜಾರಿ ನಿರ್ದೇಶನಾಲಯವು ಬಂಧಿಸಿರುವ ಕ್ರಮ ಕಾನೂನು ಬಾಹಿರ ಎಂದು ಘೋಷಿಸುವಂತೆ ಕೋರಿ …
Read More »98ರ ಮಂಗಳೂರು ಕೋಮುಗಲಭೆ: 26 ವರ್ಷದ ಬಳಿಕ ಇಬ್ಬರ ಬಂಧನ
98ರ ಮಂಗಳೂರು ಕೋಮುಗಲಭೆ: 26 ವರ್ಷದ ಬಳಿಕ ಇಬ್ಬರ ಬಂಧನ ಮಂಗಳೂರು(ದಕ್ಷಿಣ ಕನ್ನಡ): 1998ಲ್ಲಿ ಮಂಗಳೂರಿನಲ್ಲಿ ನಡೆದ ಕೋಮು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು 26 ವರ್ಷಗಳ ಬಳಿಕ ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಲೀಲಾಧರ್ ಮತ್ತು ಚಂದ್ರಹಾಸ್ ಕೇಶವ ಶೆಟ್ಟಿ ಬಂಧಿತರು. ಲೀಲಾಧರ್ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿದ್ದು, ಇತ್ತೀಚೆಗೆ ಊರಿಗೆ ಬಂದಿದ್ದನು. ಚಂದ್ರಹಾಸ್ ಕೇಶವ ಶೆಟ್ಟಿ ದುಬೈನಿಂದ ಊರಿಗೆ ಬರುವಾಗ ಮುಂಬೈ ವಿಮಾನ ನಿಲ್ದಾಣದಲ್ಲಿ ಆಗಸ್ಟ್ 30ರಂದು ಬಂಧಿಸಲಾಗಿದೆ. …
Read More »ಚಾಮುಂಡಿ ಬೆಟ್ಟ ಸುತ್ತಮುತ್ತ ಚಿರತೆ ಓಡಾಟ
ಮೈಸೂರು: ಚಾಮುಂಡಿ ಬೆಟ್ಟದ ದೇವಿಕೆರೆ ಕಟ್ಟೆ ಹಾಗೂ ತಾವರೆಕಟ್ಟೆಯ ಜನವಸತಿ ಪ್ರದೇಶಗಳಲ್ಲಿ ಚಿರತೆ ಓಡಾಡುತ್ತಿದ್ದು, ನಿವಾಸಿಗಳು ಹಾಗೂ ಭಕ್ತರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಅರಣ್ಯ ಇಲಾಖೆ, ಚಾಮುಂಡಿ ಬೆಟ್ಟ ಗ್ರಾಮ ಹಾಗೂ ಇಲ್ಲಿನ ನಾಗರಿಕ ಬಂಧುಗಳಿಗೆ ಈ ಮೂಲಕ ತಿಳಿಸುವುದೇನೆಂದರೆ, ಇತ್ತೀಚೆಗೆ ಚಾಮುಂಡಿ ಬೆಟ್ಟ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆಯ ಚಲನವಲನಗಳು ಕಂಡುಬಂದಿರುವುದಾಗಿ ವರದಿಯಾಗಿದೆ. ಈ ವಿಷಯದ ಕುರಿತು ಅರಣ್ಯ ಇಲಾಖೆ ಸೂಕ್ತ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರು …
Read More »ಹುಕ್ಕೇರಿ ತಾಲೂಕಿನ ಯಾದಗೂಡ, ಅಮ್ಮಣಗಿ ಮತ್ತು ಎಲಿಮುನ್ನೋಳಿ ಗ್ರಾಮಗಳಲ್ಲಿ ಹಮ್ಮಿಕೊಂಡಿದ್ದ ಸಭೆ
ಹುಕ್ಕೇರಿ ತಾಲೂಕಿನ ಯಾದಗೂಡ, ಅಮ್ಮಣಗಿ ಮತ್ತು ಎಲಿಮುನ್ನೋಳಿ ಗ್ರಾಮಗಳಲ್ಲಿ ಹಮ್ಮಿಕೊಂಡಿದ್ದ ಸಭೆಗಳಲ್ಲಿ ಪಾಲ್ಗೊಂಡು, ಮುಂಬರುವ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯಲ್ಲಿ ಶ್ರೀ ಅಪ್ಪಣಗೌಡ ಪಾಟೀಲ ವಿದ್ಯುತ್ ಸಹಕಾರಿ ಪೆನಲ್ ಅಭ್ಯರ್ಥಿಗಳಿಗೆ ಬೆಂಬಲ ನೀಡುವಂತೆ ಮನವಿ ಮಾಡಿದೆ.
Read More »ಸೆಪ್ಟೆಂಬರ್ ಅಂತ್ಯದೊಳಗೆ ಮೂಡಲಗಿ- ಗೋಕಾಕ ತಾಲ್ಲೂಕಿನ ಅಭ್ಯರ್ಥಿಗಳ ಆಯ್ಕೆ ಅಂತಿಮ- ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*
*ಸೆಪ್ಟೆಂಬರ್ ಅಂತ್ಯದೊಳಗೆ ಮೂಡಲಗಿ- ಗೋಕಾಕ ತಾಲ್ಲೂಕಿನ ಅಭ್ಯರ್ಥಿಗಳ ಆಯ್ಕೆ ಅಂತಿಮ- ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ಬುಧವಾರದಂದು* *ಗೋಕಾಕದಲ್ಲಿ ಮೂಡಲಗಿ- ಗೋಕಾಕ ತಾಲೂಕಿನ ಪಿಕೆಪಿಎಸ್ ಅಧ್ಯಕ್ಷರು ಸದಸ್ಯರುಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ* *ಗೋಕಾಕ-* ನಾನು ಮತ್ತು ಗೋಕಾಕ ಶಾಸಕ ರಮೇಶ್ ಜಾರಕಿಹೊಳಿಯವರು ಸೇರಿಕೊಂಡು ಇದೇ ತಿಂಗಳ ಅಂತ್ಯದೊಳಗೆ ಮೂಡಲಗಿ ಮತ್ತು ಗೋಕಾಕ ತಾಲೂಕಿನ ಅಭ್ಯರ್ಥಿಗಳನ್ನು ಅಂತಿಮಗೊಳಿಸುವುದಾಗಿ ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. …
Read More »ಸಿಸಿಬಿ ಪೊಲೀಸ್ ಸಿಬ್ಬಂದಿಯ ಸೋಗಿನಲ್ಲಿ ಬಾಂಗ್ಲಾ ಪ್ರಜೆಗಳನ್ನು ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಬೆಂಗಳೂರು: ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸ್ ಸಿಬ್ಬಂದಿ ಎಂದು ಹೇಳಿಕೊಂಡು ಬಾಂಗ್ಲಾ ಪ್ರಜೆಗಳಿಂದ ಹಣ ವಸೂಲಿ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ನಗರದಲ್ಲಿ ಬಂಧಿಸಲಾಗಿದೆ. ರಾಜ್ಯ ಜನ ಸದ್ಭಾವನಾ ಸಂಘಟನೆಯ ಸದಸ್ಯರು ನೀಡಿದ್ದ ದೂರಿನ ಅನ್ವಯ ಬೆಂಗಳೂರು ಗ್ರಾಮಾಂತರ ಪೊಲೀಸ್ ವಿಭಾಗದ ಕಾನ್ಸ್ಟೇಬಲ್ ಪ್ರಶಾಂತ್ ನಾವಿ ಹಾಗೂ ಮತ್ತೋರ್ವ ಖಾಸಗಿ ವ್ಯಕ್ತಿ ನಾಸೀರ್ ಖಾನ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ. ಈ ಹಿಂದೆ ರಾಜ್ಯ ಆಂತರಿಕ ಭದ್ರತಾ ವಿಭಾಗದಲ್ಲಿ …
Read More »‘ಜನರನ್ನು ವಿಭಜಿಸಿ, ಬೆಂಕಿ ಹಚ್ಚುವುದೇ ಬಿಜೆಪಿ ನಾಯಕರ ಕೆಲಸ’
ಬೆಂಗಳೂರು: ಕೋಮು ಭಾವನೆಗಳನ್ನು ಕೆರಳಿಸಿ, ಜನರನ್ನು ವಿಭಜಿಸಿ, ಬೆಂಕಿ ಹಚ್ಚುವುದೇ ಬಿಜೆಪಿ ನಾಯಕರ ಕೆಲಸ. ಅವರಿಗೆ ಅಭಿವೃದ್ಧಿ ಬಗ್ಗೆ ಚಿಂತೆ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಟೀಕಿಸಿದರು. ಸದಾಶಿವನಗರ ನಿವಾಸದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮದ್ದೂರು ಗಣೇಶ ವಿಸರ್ಜನೆ ವೇಳೆ ನಡೆದಿರುವ ಕಲ್ಲು ತೂರಾಟ ಹಾಗೂ ಅದರ ಬೆನ್ನಲ್ಲೇ ಬಿಜೆಪಿ ನಾಯಕರು ಮದ್ದೂರಿಗೆ ತೆರಳಿರುವ ಬಗ್ಗೆ ಕೇಳಿದಾಗ, “ಈ ಪ್ರಕರಣದ ಬಗ್ಗೆ ಈಗಾಗಲೇ ಸಿಎಂ, ಗೃಹ ಸಚಿವರು ಹಾಗೂ …
Read More »
Laxmi News 24×7