Breaking News

ರಾಜಕೀಯ

ಪುತ್ತೂರು: ಸರಣಿ ಕಳ್ಳತನ ಪ್ರಕರಣ ಅಂತಾರಾಜ್ಯ ಕಳ್ಳನ ಸೆರೆ

ಪುತ್ತೂರು: ಕಳೆದ ವರ್ಷದ ಜುಲೈ ತಿಂಗಳಿನಲ್ಲಿ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕೆಯ್ಯೂರು ಗ್ರಾಮದ ಕಟ್ಟತ್ತಾರು, ಕೆಯ್ಯೂರು, ಮಾಡಾವು ಪರಿಸರದಲ್ಲಿ ಸರಣಿ ಮನೆ ಕಳ್ಳತನ ನಡೆದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಅಂತಾರಾಜ್ಯ ಕಳ್ಳನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.   ಕೇರಳದ ಕಣ್ಣೂರು ಜಿಲ್ಲೆಯ ತಲಿಪೆಂಬ ತಾಲೂಕಿನ ಅಲಕೋಡು ಗ್ರಾಮದ ವರಂಬಿಲ್‌ ನಿವಾಸಿ ಆರೋಪಿ ಮಹಮ್ಮದ್‌ ಕೆ.ಯು. (42)ಬಂಧಿತ ಆರೋಪಿ. ವಿಚಾರಣೆ ನಡೆಸಿದ ಸಮಯ ಆರೋಪಿಯು ಕಳೆದ ವರ್ಷ ಸವಣೂರು ಹಾಗೂ …

Read More »

ಮೀಸಲಾತಿ ಹೋರಾಟಕ್ಕೆ ಸಜ್ಜಾಗಿ: ನಿರ್ಮಲಾನಂದನಾಥ ಶ್ರೀ

ಕೋಲಾರ: ಮೀಸಲಾತಿ ಹೋರಾ ಟಕ್ಕೆ ಸ್ವಾಮೀಜಿಗಳು ಕರೆ ನೀಡಿದಾಗ ಬರಲು ಒಕ್ಕಲಿಗರು ಸಿದ್ಧರಿರಬೇಕು ಎಂದು ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾ ನಂದನಾಥ ಸ್ವಾಮೀಜಿ ಕರೆ ನೀಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಸಲಾತಿ ವಿಚಾರವಾಗಿ 1993 ರಲ್ಲಿ ದೊಡ್ಡ ಚಳವಳಿ ನಡೆದಿತ್ತು. ಅಂಥ ಮತ್ತೊಂದು ಹೋರಾಟದ ಅಗತ್ಯ ಇರುವ ಬಗ್ಗೆ ಸಮುದಾಯದ ಮುಖಂಡರು ಮಾತನಾ ಡುತ್ತಿದ್ದಾರೆ. ಜತೆಗೆ ಬೆಂಗಳೂರು ಸುತ್ತಮುತ್ತಲಿನ ಭಾಗದಲ್ಲಿ ಒಕ್ಕಲಿಗರ ಭೂಮಿ ಕೈ ತಪ್ಪುತ್ತಿದೆ. ಮುಂದೆ ಹೋರಾಟ ಅನಿವಾರ್ಯ …

Read More »

2023-24ನೇ ಸಾಲಿಗೆ ಹೊಸ ಶಾಲೆ ಆರಂಭಕ್ಕೆ ಅರ್ಜಿ ಆಹ್ಬಾನ

ಬೆಂಗಳೂರು : 2023-24ನೇ ಸಾಲಿನಿಂದ ಹೊಸದಾಗಿ ಖಾಸಗಿ ಶಾಲೆಗಳನ್ನು ಆರಂಭಿಸಲು ಇಚ್ಚಿಸುವ ಶಿಕ್ಷಣ ಸಂಸ್ಥೆಗಳು ಡಿ.15ರ ಒಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.   ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢಶಾಲೆಗಳನ್ನು ಆರಂಭಿಸಲು ನೋಂದಣಿ ಬಯಸುವ ಸಂಸ್ಥೆಗಳು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿಗದಿಪಡಿಸಿದ ಮಾನದಂಡಗಳನ್ನು ಅನುಸರಿಸಬೇಕು. ನ.4ರಿಂದ ಅರ್ಜಿ ಸಲ್ಲಿಕೆಯ ಪ್ರಕ್ರಿಯೆಗಳು ಆರಂಭವಾಗಲಿವೆ ಎಂದು ಆಯಕ್ತರು ತಿಳಿಸಿದ್ದಾರೆ.

Read More »

ಸಾರಿಗೆ ಸಚಿವರೇ ಎದ್ದೇಳಿ.. ಬೆಂಗಳೂರು-ಬಳ್ಳಾರಿ, ರಾಯಚೂರಿಗೆ 1500, ಕಲಬುರ್ಗಿಗೆ 2500

ಹಬ್ಬದ ಸಂದರ್ಭದಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ಮತ್ತಿತರರ ನಗರ ಪ್ರದೇಶಗಳಿಂದ ತಮ್ಮ ಗ್ರಾಮಗಳಿಗೆ ತೆರಳುವ ಪ್ರಯಾಣಿಕರಿಗೆ ಖಾಸಗಿ ಬಸ್ ಮಾಲೀಕರು ನಿಗಧಿಪಡಿಸಿದ ದರವನ್ನಷ್ಟೇ ಪಡೆಯಬೇಕು. ಇಲ್ಲದಿದ್ದರೆ ರೂಟ್ ಪರ್ಮಿಟ್ ತಕ್ಷಣದಿಂದಲೇ ರದ್ದು ಪಡಿಸಲಾಗುತ್ತದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಎಚ್ಚರಿಕೆ ಕೇವಲ ಮಾಧ್ಯಮಗಳ ಹೇಳಿಕೆಗಷ್ಟೇ ಸೀಮಿತವಾಗಿದೆ.   ದೀಪಾವಳಿ ಹಬ್ಬದ ಪ್ರಯುಕ್ತ ಸಾಲು ಸಾಲು ರಜೆಗಳಿದ್ದು ದೂರದೂರುಗಳಿಗೆ ಹೋಗುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದೆ. ದಿನ ಕಳೆದಂತೆ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು …

Read More »

ವಿಧಾನಸಭಾ ಚುನಾವಣೆ: 126 JDS ಅಭ್ಯರ್ಥಿಗಳ ಪಟ್ಟಿ ಫೈನಲ್

ಮೈಸೂರು: 2023ರ ವಿಧಾನಸಭಾ ಚುನಾವಣೆಗೆ ಆಡಳಿತಾರೂಢ ಬಿಜೆಪಿ ಜನಸಂಕಲ್ಪ ಯಾತ್ರೆ ಮೂಲಕ ಸಿದ್ಧತೆ ಆರಂಭಿಸಿದ್ದರೆ, ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ಮೂಲಕ ಮತದಾರರ ಓಲೈಕೆಗೆ ಮುಂದಾಗಿದೆ. ಈ ನಡುವೆ ಜೆಡಿಎಸ್, ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನೇ ಅಂತಿಮಗೊಳಿಸುವ ಮೂಲಕ ಭರ್ಜರಿ ತಯಾರಿ ನಡೆಸಿದೆ.   ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಹಾಲಿ ಹಾಗೂ ಮಾಜಿ ಶಾಸಕರ ಸಭೆ ನಡೆದಿದ್ದು, ಸಭೆಯಲ್ಲಿ ವಿಧಾನಸಭಾ ಚುನಾವಣೆಗೆ ಕ್ಷೇತ್ರವಾರು ಅಭ್ಯರ್ಥಿಗಳ …

Read More »

ಸಾಲು ಸಾಲು ರಜೆ ಹೊತ್ತಲ್ಲಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಸಿಹಿ ಸುದ್ದಿ: 1500 ಹೆಚ್ಚುವರಿ ಬಸ್, ಟಿಕೆಟ್ ನಲ್ಲಿ ವಿಶೇಷ ರಿಯಾಯಿತಿ

ಬೆಂಗಳೂರು: ಹಬ್ಬಕ್ಕೆ ಊರಿಗೆ ಹೊರಟ ಪ್ರಯಾಣಿಕರಿಗೆ ಸಿಹಿ ಸುದ್ದಿ ಇಲ್ಲಿದೆ. ವೀಕೆಂಡ್ ರಜೆ ಸೇರಿದಂತೆ ನರಕ ಚತುರ್ದಶಿ, ಅಮಾವಾಸ್ಯೆ, ಬಲಿಪಾಡ್ಯಮಿ ಹೀಗೆ ಸಾಲು ಸಾಲು ರಜೆಯ ಸಂದರ್ಭದಲ್ಲಿ ಊರಿಗೆ ಹೋಗುವವರು ಪ್ರವಾಸಕ್ಕೆ ತೆರಳುವವರ ಸಂಖ್ಯೆ ಹೆಚ್ಚಾಗಿರುತ್ತದೆ. ಹೀಗಾಗಿ ಕೆಎಸ್‌ಆರ್ಟಿಸಿ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಿದೆ. ಅ. 21 ರಿಂದ 23ರ ವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧೆಡೆ ಮತ್ತು ಹೊರ ರಾಜ್ಯಗಳ ನಾನಾ ಸ್ಥಳಗಳಿಗೆ ಹೆಚ್ಚುವರಿಯಾಗಿ 1,500 ವಿಶೇಷ ಬಸ್ ಗಳ ವ್ಯವಸ್ಥೆ …

Read More »

ಅರುಣ್ ಸಿಂಗ್ ವಿರುದ್ಧ ಬಸವಜಯ ಮೃತ್ಯುಂಜಯ ಸ್ವಾಮೀಜಿ ಗರಂ..!

ಅರುಣ್ ಸಿಂಗ್ ಅವರಿಗೆ ಕರ್ನಾಟಕದ ಬಗ್ಗೆ ತಿಳಿದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾನ್ಯ ಕಾರ್ಯಕರ್ತರು ನಾಯಕರು ಎಂದು ಹೇಳುತ್ತಾರೆ. ಆದರೆ ಅರುಣ ಸಿಂಗ್ ಅವರು ಯಾವುದೇ ಕಾರಣಕ್ಕೂ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ವಿರುದ್ಧ ಹಗುರವಾಗಿ ಮಾತನಾಡದಂತೆ ತಾಕೀತು ಮಾಡಬೇಕು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದ್ದಾರೆ. ಯತ್ನಾಳ ನಮ್ಮ ನಾಯಕನಲ್ಲ ಎಂಬ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ ಸಿಂಗ್ …

Read More »

ಮಳವಳ್ಳಿಯಲ್ಲಿ ಅತ್ಯಾಚಾರ ಪ್ರಕರಣ: ಡಿಡಿಪಿಐಗೆ ಬಿಇಒ ಸಲ್ಲಿಸಿದ ವರದಿಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ

ಮಳವಳ್ಳಿ: ಟ್ಯೂಷನ್​ಗೆ ಹೋದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬೆನ್ನಲ್ಲೇ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡಿದ್ದು, ಅನಧಿಕೃತ ಟ್ಯೂಷನ್​ಗಳ ಮೇಲೆ ಹದ್ದಿನ ಕಣ್ಣಿಟ್ಟಿದೆ. ಅಲ್ಲದೆ, ಬಾಲಕಿಯ ಮೇಲೆ ಕೃತ್ಯ ಎಸಗಿದ ಆರೋಪಿ ಕಾಂತರಾಜು ಶಿಕ್ಷಕನೇ ಅಲ್ಲ ಮತ್ತು ಟ್ಯೂಷನ್ ಸೆಂಟರ್‌ ಅಧಿಕೃತವು ಅಲ್ಲ ಎಂಬ ಸಂಗತಿಯು ಬಯಲಾಗಿದೆ.   ಟ್ಯೂಷನ್​​ಗೆ ತೆರಳಿದ್ದ 10 ವರ್ಷದ ಬಾಲಕಿ ಮೇಲೆ ಮಳವಳ್ಳಿ ಪಟ್ಟಣದಲ್ಲಿ ಟ್ಯೂಷನ್ ಸಂಸ್ಥೆಯ‌ ಮೇಲ್ವಿಚಾರಕನಿಂದಲೇ ಅತ್ಯಾಚಾರ ನಡೆದಿತ್ತು. ಅಲ್ಲದೆ, …

Read More »

ಹುಚ್ಚಾಟವಾಡಲು ಹೋಗಿ ಬಲಿಯಾದ ನಾಲ್ವರು ಸ್ನೇಹಿತರು

230 ಕಿ.ಮೀ ವೇಗದಲ್ಲಿ ಹೋಗು, ಸತ್ತರೆ ನಾಲ್ವರು ಸಾಯೋಣ’ ಎಂದು ಹುಚ್ಚು ಆಟವಾಡಿದ ನಾಲ್ವರು ಸ್ನೇಹಿತರು ಗುರುತು ಸಿಗದಷ್ಟು ಛಿದ್ರವಾಗಿದ್ದಾರೆ.ಹೌದು, ಕಾರು ಹಾಗೂ ಟ್ರಕ್ ನಡುವೆ ನಡೆದ ಭೀಕರ ಅಪಘಾತಕ್ಕೆ ನಾಲ್ವರು ಬಲಿಯಾದ ಘಟನೆ ಸುಲ್ತಾನ್ ಪುರ ಬಳಿ ನಡೆದಿದೆ. ಮೃತರನ್ನು ಆನಂದ ಪ್ರಕಾಶ್, ಅಖಿಲೇಶ್ ಸಿಂಗ್, ದೀಪಕ್ ಕುಮಾರ್ ಹಾಗೂ ಜೋಲಾ ಕುಶ್ವಾಹ ಎಂದು ಗುರುತಿಸಲಾಗಿದೆ. ಗಂಟೆಗೆ 230 ಕಿಲೋಮೀಟರ್ (ಕಿ.ಮೀ) ವೇಗದಲ್ಲಿ ಚಲಿಸುವ ಕಾರಿನ ಒಳಗಿನಿಂದ ಬಂದ …

Read More »

ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ ಅಡಿ ಜಿಲ್ಲೆಯಲ್ಲಿ ಈ ಕಂತಿನಲ್ಲಿ 5.38 ಲಕ್ಷ ರೈತರಿಗೆ ₹ 107 ಕೋಟಿ ಹಣ ಬಿಡುಗಡೆ

ಬೆಳಗಾವಿ: ‘ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ ಅಡಿ ಜಿಲ್ಲೆಯಲ್ಲಿ ಈ ಕಂತಿನಲ್ಲಿ 5.38 ಲಕ್ಷ ರೈತರಿಗೆ ₹ 107 ಕೋಟಿ ಹಣ ಬಿಡುಗಡೆ ಮಾಡಲಾಗಿದೆ’ ಎಂದು ಸಂಸದೆ ಮಂಗಲಾ ಅಂಗಡಿ ತಿಳಿಸಿದರು. ಇಲ್ಲಿನ ಎಪಿಎಂಸಿ ಆವಣದಲ್ಲಿ ಸೋಮವಾರ ಪಿ.ಎಂ. ಕಿಸಾನ್‌ ಸಮೃದ್ಧಿ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ಅವರು ದೇಶದಾದ್ಯಂತ 600 ಕಡೆ ಈ ಕೇಂದ್ರಗಳನ್ನು ವರ್ಚುವಲ್ ಮೂಲಕ ಉದ್ಘಾಟಿಸಿದ್ದಾರೆ. ಇದರ ಜೊತೆಗೆ …

Read More »