Breaking News

ರಾಜಕೀಯ

ಬೆಳಗಾವಿ ಜಿಲ್ಲೆಯ ಜನಪ್ರನಿಧಿಗಳು 2023 ರ ಚುನಾವಣೆಯಲ್ಲಿ ನೋಟಾ ಮತ ಪಡೆಯಲು ಸಿದ್ದರಾಗಿ: ಮೃತ್ಯುಂಜಯ ಮಹಾ ಸ್ವಾಮಿಗಳು

ಬೆಳಗಾವಿ ಜಿಲ್ಲೆಯ ಜನಪ್ರನಿಧಿಗಳು 2023 ರ ಚುನಾವಣೆಯಲ್ಲಿ ನೋಟಾ ಮತ ಪಡೆಯಲು ಸಿದ್ದರಾಗಿ ಎಂದು ಕೂಡಲ ಸಂಗಮದ ಜಯ ಮೃತ್ಯುಂಜಯ ಮಹಾ ಸ್ವಾಮಿಗಳು ಹೇಳಿದರು. ಅವರು 2ಎ ಮಿಸಲಾತಿಗಾಗಿ ಸೇಪ್ಟಂಬರ 26 ರಂದು ಮುಖ್ಯಮಂತ್ರಿಗಳ ಮನೆ ಎದುರು ಧರಣಿ ಸತ್ಯಾಗ್ರಹ ಹಾಗೂ ವಿಧಾನಸೌಧಕ್ಕೆ ಮುತ್ತಿಗೆ ಮಾಡುವ ಕುರಿತು ರಾಜ್ಯದ ಪ್ರತಿ ತಾಲೂಕಿನಲ್ಲಿ ಜಾಗ್ರತಾ ಜಾಥಾಗಳನ್ನು ಹಮ್ಮಿಕೊಂಡು ಇಂದು ಹುಕ್ಕೇರಿ ನಗರದ ಅಡವಿ ಸಿದ್ದೇಶ್ವರ ಮಠದ ಆವರಣದಲ್ಲಿ ಬಸವಣ್ಣವರ ಭಾವ ಚಿತ್ರಕ್ಕೆ …

Read More »

ದೈಹಿಕ ಸಂಪರ್ಕಕ್ಕೆ ಅವಕಾಶ ನೀಡದ್ದಕ್ಕೆ ಮಹಿಳೆ ಕೊಲೆ: ಇಬ್ಬರ ಬಂಧನ

ದಾಂಡೇಲಿ: ಜೊಯಿಡಾ ತಾಲ್ಲೂಕಿನ ಪೋಟೊಲಿ ಗ್ರಾಮದ ರೆಸಾರ್ಟ್‌ನಲ್ಲಿ ಗುರುವಾರ ಮಹಿಳೆಯ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಶನಿವಾರ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಯು ದೈಹಿಕ ಸಂಪರ್ಕಕ್ಕೆ ಅವಕಾಶ ನೀಡದ ಕಾರಣಕ್ಕೆ ಆಕೆಯನ್ನು ಕೊಲೆ ಮಾಡಿರುವುದು ವಿಚಾರಣೆಯಲ್ಲಿ ಗೊತ್ತಾಗಿದೆ.   ದಾಂಡೇಲಿ ಗಾಂಧಿನಗರ ಆಶ್ರಯ ಕಾಲೊನಿ ನಿವಾಸಿಗಳಾದ ರವಿಚಂದ್ರ ರಾಜು ರೆಡ್ಡಿ (50) ಹಾಗೂ ವಿಜಯ ಮಹಾದೇವ ಮಾಸಾಳ (30) ಬಂಧಿತರು.   ದಾಂಡೇಲಿ ಗಾಂಧಿನಗರ ನಿವಾಸಿಯಾಗಿದ್ದ ಮೃತ ಸುಶೀಲಾ …

Read More »

ಕೆಜಿಎಫ್’ ಚಾಚಾಗೆ ಕ್ಯಾನ್ಸರ್‌: ಕರೆ ಮಾಡಿ ಧೈರ್ಯ ತುಂಬಿದ ರಾಕಿಭಾಯ್!‌

ಬೆಂಗಳೂರು : ರಾಕಿಂಗ್‌ ಸ್ಟಾರ್‌ ಯಶ್‌ ಅವರು ಸಿನಿಮಾ ಹೊರತಾಗಿ ಹಲವು ವಿಚಾರಗಳಿಗೆ ಕನ್ನಡಿಗರ ಮನದಲ್ಲಿ ಉಳಿಯುತ್ತಾರೆ. ಈ ಹಿಂದೆ ಕೆರೆಯೊಂದರ ಅಭಿವೃದ್ಧಿ ಮೂಲಕ ದೇಶಕ್ಕೇ ಮಾದರಿಯಾಗಿದ್ದರು ರಾಕಿಂಗ್‌ ಸ್ಟಾರ್‌.‌ ಡೆಡ್ಲಿ ಕೊರೊನಾ ವಕ್ಕರಿಸಿದಾಗ ಸಂಕಷ್ಟದಲ್ಲಿದ್ದ ಚಿತ್ರರಂಗದ ಕಾರ್ಮಿಕರಿಗೆ ಸಹಾಯ ಮಾಡಿ ನೆರವಿಗೆ ನಿಂತಿದ್ರು. ಲಕ್ಷಾಂತರ ರೂಪಾಯಿ ಹಣವನ್ನ ನೇರವಾಗಿ ಅವರವರ‌ ಅಕೌಂಟ್‌ಗೆ ಟ್ರಾನ್ಸ್‌ಫರ್‌ ಮಾಡಿದ್ದರು. ಇದೀಗ ಮತ್ತದೇ ರೀತಿ ಮಾನವೀಯತೆ ಮೆರೆದಿದ್ದಾರೆ ರಾಕಿಂಗ್‌ ಸ್ಟಾರ್‌ ಯಶ್. ಬಣ್ಣದ ಬದುಕುಬೆಳ್ಳಿತೆರೆಯಮೇಲೆ ಎಷ್ಟು …

Read More »

ನವದೆಹಲಿ: ದೆಹಲಿಯಲ್ಲಿ ಬಿಜೆಪಿಯ ‘ಆಪರೇಷನ್ ಕಮಲ’ ವಿಫಲ ಎಂದ ಎಎಪಿ

ನವದೆಹಲಿ: ದೆಹಲಿಯಲ್ಲಿ ಬಿಜೆಪಿಯ ‘ಆಪರೇಷನ್ ಕಮಲ’ ವಿಫಲವಾಗಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಗುರುವಾರ ಹೇಳಿದೆ. ಇದಕ್ಕೂ ಮುನ್ನ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ನಡೆದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಎಎಪಿ ವಕ್ತಾರ ಸೌರಭ್ ಭಾರದ್ವಾಜ್, “ಎಲ್ಲಾ ಎಎಪಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಮತ್ತು ದೆಹಲಿ ಸರ್ಕಾರ ಯಾವುದೇ ಅಡೆತಡೆಯಿಲ್ಲದೆ ಸಂಪೂರ್ಣವಾಗಿ ಸ್ಥಿರವಾಗಿದೆ” ಎಂದು ಹೇಳಿದರು. “ಇಂದು, ದೆಹಲಿಯಲ್ಲಿ ಬಿಜೆಪಿಯ ‘ಆಪರೇಷನ್ ಕಮಲ’ ವಿಫಲವಾಗಿದೆ ಎಂದು …

Read More »

ಪಿಎಸ್ಐ ಪರೀಕ್ಷೆ ಅಕ್ರಮ: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದ ರಚನಾ ಸಿಐಡಿ ವಶಕ್ಕೆ

ಕಲಬುರಗಿ: ಪಿಎಸ್ಐ ನೇಮಕಾತಿ ಅಕ್ರಮ ಸಂಬಂಧ ಕಳೆದ ಮೂರು ತಿಂಗಳಿನಿಂದ ಸಿಐಡಿ ಪೊಲೀಸರ ಕೈಗೆ ಸಿಗದೆ ಓಡಾಡುತ್ತಿದ್ದ ಪಿಎಸ್ಐ ಪರೀಕ್ಷೆ ಅಕ್ರಮದ ಮತ್ತೋರ್ವ ಮಹಿಳಾ ಆರೋಪಿ ಅಂದರ್ ಆಗಿದ್ದಾರೆ. ಪರೀಕ್ಷೆಯಲ್ಲಿ ಮಹಿಳಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದ ರಚನಾ ಹನುಮಂತ ಮುತ್ತಲಗೇರಿ ಕೊನೆಗೂ ಬಂಧನವಾಗಿದೆ. ಸಿಐಡಿ ತನಿಖೆ ವೇಳೆ ಓಎಂಆರ್ ಶೀಟ್ ಮತ್ತು ಕಾರ್ಬನ್ ಶೀಟ್‌ನಲ್ಲಿ ವ್ಯತ್ಯಾಸ ಕಂಡುಬಂದು ತಮ್ಮ ವಿರುದ್ಧ ಬೆಂಗಳೂರು ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ …

Read More »

ಬಸ್ ನಿಲ್ದಾಣವನ್ನೇ ಕದ್ದೊಯ್ದ ಕಳ್ಳರು!

ಕಾರವಾರ: ಸಣ್ಣಪುಟ್ಟ ವಸ್ತುಗಳು, ಮನೆ-ಅಂಗಡಿಗಳಲ್ಲಿ ಕಳ್ಳತನವಾಗುವ ಬಗ್ಗೆ ನೀವೆಲ್ಲಾ ಕೇಳಿರಬಹುದು. ಆದರೆ ಪ್ರಯಾಣಿಕರಿಗಾಗಿ ನಿರ್ಮಿಸಲಾಗಿದ್ದ ಬಸ್ ತಂಗುದಾಣವನ್ನೇ ಕಳ್ಳತನ ಮಾಡಿರುವ ಬಗ್ಗೆ ಕೇಳಿದ್ದೀರಾ? ಇಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ತಿನೈಘಾಟ ಸಮೀಪದ ಪಿರೆಗಾಳಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜೋಯಿಡಾ ತಾಲೂಕಿನ ಹಲವು ಕಡೆ ರುಡ್ ಸೆಟ್ ಸಂಸ್ಥೆಯವರು ಪ್ರಯಾಣಿಕರ ಅನುಕೂಲಕ್ಕಾಗಿ ಬಸ್ ನಿಲ್ದಾಣ ನಿರ್ಮಿಸಿದ್ದರು. ಅದರಂತೆ 3 ವರ್ಷದ ಹಿಂದೆ 2 ಲಕ್ಷ ರೂ. ವೆಚ್ಚದಲ್ಲಿ …

Read More »

ಬೆಳಗಾವಿಯಲ್ಲಿ ನಕಲಿ‌ ಪತ್ರಕರ್ತರ ಬಳಿಕ ನಕಲಿ ಪೊಲೀಸರು; ಐವರ ಬಂಧನ

ಬೆಳಗಾವಿ: ನಾಲ್ವರು ನಕಲಿ‌ ಪತ್ರಕರ್ತರನ್ನು ಬಂಧಿಸಿರುವ ಬೆಳಗಾವಿ ಪೊಲೀಸರು ಈಗ ಐವರು ನಕಲಿ‌ ಪೊಲೀಸರನ್ನು ಬಂಧಿಸುವ ಮೂಲಕ ಬಿಸಿ ಮುಟ್ಟಿಸಿದ್ದಾರೆ. ತಾಲೂಕಿನ ಸುಳೇಭಾವಿ ಗ್ರಾಮದ ಜಾಕೀರಹುಸೇನ್ ಕುತ್ಬುದ್ದಿನ್ ಮನಿಯಾರ(42), ಬಸವರಾಜ ಗುರಪ್ಪ ಪಾಟೀಲ(32), ಸರ್ವೇಶ ಮೋಹನ ತುಡವೇಕರ(38), ಸೇಹಲಾಹ್ಮದ ಶಾಹಬುದ್ದಿನ್ ತರಸಗಾರ(41) ಹಾಗೂ ನಯೀಮ್‌ ಮಹ್ಮದಶಫೀ ಮುಲ್ಲಾ(30) ಎಂಬಾತರನ್ನು ಬಂಧಿಸಲಾಗಿದೆ.   ರಾಮತೀರ್ಥ ನಗರದ ಅತಾವುಲ್ಲಾ ಮಹ್ಮದಹಯಾತ್ ಹೊನಗೇಕರ ಎಂಬವರು ಕಾರಿನಲ್ಲಿ ಹೊರಟಿದ್ದಾಗ ಇಂಡಿಕಾ ಕಾರಿನಲ್ಲಿ ಬಂದ ಐವರು ಪೊಲೀಸರು ಎಂದು …

Read More »

ಲೈಂಗಿಕ ದೌರ್ಜನ್ಯ ಆರೋಪ: ಮುರುಘಾ ಶ್ರೀಗಳ ವಿರುದ್ಧ ಪ್ರಕರಣ ದಾಖಲು

ಮೈಸೂರು/ಚಿತ್ರದುರ್ಗ: ಅಪ್ರಾಪ್ತ ವಯಸ್ಕ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಂಬಂಧ ಚಿತ್ರದುರ್ಗದ ಮರುಘಾ ಶ್ರೀ ಸಹಿತ ಐವರ ವಿರುದ್ಧ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. ಜಿಲ್ಲಾ ಮಕ್ಕಳ ರಕ್ಷಣ ಘಟಕದ ದೂರಿನನ್ವಯ ಮಠದ ಶ್ರೀ ಸಹಿತ ವಸತಿ ನಿಲಯದ ವಾರ್ಡನ್‌ ರಶ್ಮಿ, ಮಠದ ಮರಿಸ್ವಾಮಿ, ಪರಮಶಿವಯ್ಯ, ವಕೀಲ ಗಂಗಾಧರಯ್ಯ ಅವರ ವಿರುದ್ಧ ಪೋಕೊà ಕಾಯಿದೆಯಡಿ ನಜರ್‌ಬಾದ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಮ್ಮ ಮೇಲೆ ಮಠದ ಆಡಳಿತದಲ್ಲಿರುವ ವಿದ್ಯಾರ್ಥಿ …

Read More »

ಪೊಲೀಸರ ಸೋಗಿನಲ್ಲಿ ಲಕ್ಷಾಂತರ ರೂ. ಗಾಂಜಾ ಸಾಗಿಸುತ್ತಿದ್ದ ಖದೀಮರ ಬಂಧನ

ನಿಮ್ಮ ಗಾಡಿಯಲ್ಲಿ ಗಾಂಜಾ ಸಾಗಿಸುತ್ತಿದ್ದಿರಿ ಎಂದು ಪೊಲೀಸರ ಸೋಗಿನಲ್ಲಿ ತಪಾಸಣೆ ಮಾಡಿದ ಖದೀಮರು ಗಾಡಿಯಲ್ಲಿದ್ದ 4,79,250 ರೂಪಾಯಿ ನಗದು ದೋಚಿಕೊಂಡು ಪರಾರಿಯಾಗಿದ್ದರು. ಸಧ್ಯ ಈ ಆರೋಪಿಗಳನ್ನು ಬಂಧಿಸುವಲ್ಲಿ ಕಿತ್ತೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಳಗಾವಿಯ ರಾಮತೀರ್ಥನಗರದ ನಿವಾಸಿ ಅತಾವುಲ್ಲಾ ಮಹಮ್ಮದ್‍ಹಯಾತ್ ಹೊನಗೇಕರ್ ಹಣ ಕಳೆದುಕೊಂಡ ವ್ಯಕ್ತಿ. ಬಳಿಕ ಇವರು ಈ ಸಂಬಂಧ ಕಿತ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ಗಂಭೀರವಾಗಿ ಪರಿಗಣಿಸಿದ್ದ ಕಿತ್ತೂರು ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.ಬಂಧಿತರಿಂದ 70 …

Read More »

ಸಿದ್ದರಾಮಯ್ಯರ ಕಿರಿಯ ಸಹೋದರ ರಾಮೇಗೌಡ ನಿಧನ

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಿರಿಯ ಸಹೋದರ ರಾಮೇಗೌಡ (64) ಶುಕ್ರವಾರ (ಆಗಸ್ಟ್.26) ರಾತ್ರಿ ನಿಧನರಾಗಿದ್ದಾರೆ. ಮೈಸೂರು ತಾಲೂಕಿನ ಸಿದ್ದರಾಮನಹುಂಡಿ ನಿವಾಸಿ ರಾಮೇಗೌಡ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.   ಮೃತ ರಾಮೇಗೌಡರ ಅಂತ್ಯಕ್ರಿಯೆ ಶನಿವಾರ ಸ್ವಗ್ರಾಮ ಸಿದ್ದರಾಮನ ಹುಂಡಿಯ ಅವರ ಜಮೀನಿನಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Read More »