Breaking News

ರಾಜಕೀಯ

ಡೆಹ್ರಾಡೂನ್ ನಲ್ಲಿ ಸಂಘಟನ ಶ್ರಿಜನ್ ಅಭಿಯಾನ ಉತ್ತರಾಖಂಡಗೆ ತಲುಪಿದ ಎಐಸಿಸಿ ಕಾರ್ಯದರ್ಶಿ ಮಾಜಿ ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್

ಡೆಹ್ರಾಡೂನ್ ನಲ್ಲಿ ಸಂಘಟನ ಶ್ರಿಜನ್ ಅಭಿಯಾನ ಉತ್ತರಾಖಂಡಗೆ ತಲುಪಿದ ಎಐಸಿಸಿ ಕಾರ್ಯದರ್ಶಿ ಮಾಜಿ ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಡೆಹ್ರಾಡೂನ್ ನಲ್ಲಿ ಸಂಘಟನ ಶ್ರಿಜನ್ ಅಭಿಯಾನ ಉತ್ತರಾಖಂಡಗೆ ತಲುಪಿದರು ಈ ಸಂದರ್ಭದಲ್ಲಿ ವಿಮಾನ ನಿಲ್ದಾಣದಲ್ಲಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು ಗೋವಾ ಸೇರಿದಂತೆ ಇನ್ನಿತರ ರಾಜ್ಯಗಳ ಉಸ್ತುವಾರಿ ಹೊಂದಿರುವ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಪಕ್ಷದ …

Read More »

ಗ್ರಾಮ ಪಂಚಾಯಿತಿಗಳು ಸಬಲೀಕರಣಗೊಂಡರೆ ನಿಜವಾದ ಗ್ರಾಮ ಸ್ವರಾಜ್ : ಚನ್ನರಾಜ ಹಟ್ಟಿಹೊಳಿ

ಗ್ರಾಮ ಪಂಚಾಯಿತಿಗಳು ಸಬಲೀಕರಣಗೊಂಡರೆ ನಿಜವಾದ ಗ್ರಾಮ ಸ್ವರಾಜ್ : ಚನ್ನರಾಜ ಹಟ್ಟಿಹೊಳಿ ಖಾನಾಪುರ: ಗ್ರಾಮ ಪಂಚಾಯಿತಿಗಳು ಸಬಲೀಕರಣಗೊಂಡಾಗ ನಿಜವಾದ ಗ್ರಾಮಸ್ವರಾಜ್ ಸಾಧ್ಯ ಹಾಗಾಗಿ ಕಾಂಗ್ರೆಸ್ ಸರಕಾರ ಅಧಿಕಾರ ವಿಕೇಂದ್ರೀಕರಣ ಮತ್ತು ಸ್ಥಳೀಯಾಡಳಿತಗಳಿಗೆ ಬಲತುಂಬುವ ಕೆಲಸಗಳನ್ನು ಮಾಡಿಕೊಂಡು ಬರುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಬೆಳಗಾವಿ ತಾಲೂಕ ಪಂಚಾಯತ, ಖಾನಾಪುರ ಹಾಗೂ ಗ್ರಾಮ ಪಂಚಾಯಿತಿ ಬಿಜಗರ್ಣಿ ಇವರ ಸಂಯುಕ್ತ ಆಶ್ರಯದಲ್ಲಿ ಮಹಾತ್ಮ ಗಾಂಧಿ …

Read More »

ಉದ್ಘಾಟನೆಯಾದರೂ ಕಾರ್ಯಾರಂಭವಿಲ್ಲ: ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಮುಂದೆ ‘ಪೂಜೆ’ ಪ್ರತಿಭಟನೆ

ಉದ್ಘಾಟನೆಯಾದರೂ ಕಾರ್ಯಾರಂಭವಿಲ್ಲ: ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಮುಂದೆ ‘ಪೂಜೆ’ ಪ್ರತಿಭಟನೆ ದೊಡ್ಡಬಳ್ಳಾಪುರ: ಅರ್ಕಾವತಿ ನದಿ ಹೋರಾಟ ಸಮಿತಿ ಹೋರಾಟದ ಫಲವಾಗಿ ಬೆಂಗಳೂರಿನಲ್ಲಿದ್ದ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ದೊಡ್ಡಬಳ್ಳಾಪುರಕ್ಕೆ ಸ್ಥಳಾಂತರಗೊಂಡಿದೆ. ಕಚೇರಿ ಉದ್ಘಾಟಿಸಿ 12 ದಿನವಾಗಿದೆ. ಅಂದು ಕಚೇರಿಗೆ ಹಾಕಿದ ಬೀಗ ಇನ್ನೂ ತೆಗೆದಿಲ್ಲ. ಇದು ಅಧಿಕಾರಿಗಳ ನಿರ್ಲಕ್ಷ್ಯವೆಂದು ಆರೋಪಿಸಿ ಅರ್ಕಾವತಿ ನದಿ ಹೋರಾಟ ಸಮಿತಿ ಹೋರಾಟಗಾರರು ಕಚೇರಿಯ ಬಾಗಿಲಿಗೆ ಪೂಜೆ ಸಲ್ಲಿಸಿ ಅರ್ಚನೆ ಮಾಡಿ ಪ್ರತಿಭಟಿಸಿದರು. ನಗರದ ಪ್ರವಾಸಿ …

Read More »

ಅಕ್ರಮ ಚಿನ್ನ ಕಳ್ಳಸಾಗಣೆ ಕೇಸ್​: ರನ್ಯಾ ರಾವ್​ಗೆ ₹102 ಕೋಟಿ ದಂಡ ಪಾವತಿಸುವಂತೆ ಡಿಆರ್‌ಐ ನೋಟಿಸ್

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನ ಎದುರಿಸುತ್ತಿರುವ ನಟಿ ರನ್ಯಾ ರಾವ್​​ಗೆ 102.55 ಕೋಟಿ ರೂಪಾಯಿ ದಂಡ ಪಾವತಿಸುವಂತೆ ಕಂದಾಯ ಗುಪ್ತಚರ ನಿರ್ದೇಶನಾಲಯದ (DRI) ಅಧಿಕಾರಿಗಳು ನೋಟಿಸ್ ರವಾನಿಸಿದ್ದಾರೆ. ಹಾಗೂ ಇನ್ನುಳಿದ ಆರೋಪಿಗಳಾದ ತರುಣ್ ಕೊಂಡೂರು ರಾಜುಗೆ 62 ಕೋಟಿ ರೂ, ಸಾಹಿಲ್ ಜೈನ್ ಮತ್ತು ಭರತ್ ಜೈನ್ ಅವರಿಗೆ ತಲಾ 53 ಕೋಟಿ ರೂಪಾಯಿ ದಂಡ ಪಾವತಿಸುವಂತೆ ನೋಟಿಸ್‌ನಲ್ಲಿ ಸೂಚಿಸಲಾಗಿದೆ ಎಂದು ಡಿಆರ್‌ಐ ಮೂಲಗಳು ಮಾಹಿತಿ ನೀಡಿವೆ. …

Read More »

ಸೆಪ್ಟೆಂಬರ್​ ಕ್ರಾಂತಿ, ನಮ್ಮ ವಿರುದ್ದ ಮಾತನಾಡಿದವರೇ ಬಿಜೆಪಿಗೆ ಹೋಗಬಹುದು: ಎಂಎಲ್​ಸಿ ಆರ್.ರಾಜೇಂದ್ರ

ಬೆಂಗಳೂರು: ರಾಜಣ್ಣ ಅವರ ಮೇಲೆ ಆರೋಪ ಮಾಡುತ್ತಿದ್ದವರೇ ನಾಳೆ ಬೆಳಗ್ಗೆಯೆಂದರೆ ಬಿಜೆಪಿಗೆ ಹೋದರೂ ಆಶ್ಚರ್ಯ ಇಲ್ಲ ಎಂದು ವಿಧಾನಪರಿಷತ್ ಸದಸ್ಯ ಆರ್.ರಾಜೇಂದ್ರ ಅವರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಗ್ಗೆ ಸೂಚ್ಯವಾಗಿ ಹೇಳಿದ್ದಾರೆ.‌ ಕೆ.ಎನ್.ರಾಜಣ್ಣ ಬಿಜೆಪಿಗೆ ಅರ್ಜಿ ಹಾಕಿದ್ದಾರೆ ಎಂಬ ಶಾಸಕ ಮಾಗಡಿ ಬಾಲಕೃಷ್ಣ ಹೇಳಿಕೆಗೆ ಶಾಸಕರ ಭವನದಲ್ಲಿ ಪ್ರತಿಕ್ರಿಯಿಸಿದ ಆರ್.ರಾಜೇಂದ್ರ, ಬಾಲಕೃಷ್ಣ ಬಿಜೆಪಿಯನ್ನೂ ಮುಗಿಸಿ ಬಂದಿದ್ದಾರೆ. ಜೆಡಿಎಸ್ ಪಕ್ಷವನ್ನೂ ಮುಗಿಸಿ ಬಂದಿದ್ದಾರೆ. ಕೆಲವರಿಗೆ ಮಾತನಾಡುವ ಹುಚ್ಚು. ಅದನ್ನು ತೀರಿಸಿಕೊಳ್ಳಲು ಹೀಗೆಲ್ಲ ಮಾತನಾಡುತ್ತಾರೆ. …

Read More »

ಟೊಮೊಟೊ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದನ್ನು ಕಂಡ ಕಾಡಾನೆ ಓಡೋಡಿ ಬಂದು ತಿಂದಿದೆ.

ಚಾಮರಾಜನಗರ: ಕಾಡಾನೆಗೆ ಊಟ, ರೈತನಿಗೆ ಪ್ರಾಣ ಸಂಕಟ ಎಂಬಂತೆ ನಡುರಸ್ತೆಯಲ್ಲಿ ಪಲ್ಟಿಯಾದ ಈಚರ್ ವಾಹನ ಕಂಡು ಕಾಡಾನೆಯೊಂದು ಓಡೋಡಿ ಬಂದು ಟೊಮೊಟೊ ತಿಂದ ಘಟನೆ ಚಾಮರಾಜನಗರ ತಾಲೂಕಿನ ಪುಣಜನೂರು ಸಮೀಪ ತಡರಾತ್ರಿ ನಡೆದಿದೆ. ಚಿಕ್ಕಮಗಳೂರಿನಿಂದ ಕೇರಳಕ್ಕೆ ಈಚರ್ ನಲ್ಲಿ ಟೊಮೊಟೊ ಸಾಗಿಸುವಾಗ ನಿಯಂತ್ರಣ ತಪ್ಪಿ ನಡುರಸ್ತೆಯಲ್ಲಿ ಪಲ್ಟಿಯಾಗಿದೆ. ಸುಮಾರು 210 ಬಾಕ್ಸ್ ಟೊಮೊಟೊ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದನ್ನು ಕಂಡ ಕಾಡಾನೆ ಓಡೋಡಿ ಬಂದು ತಿಂದಿದೆ. ರಸ್ತೆಯಲ್ಲಿ ಟೊಮೊಟೊ ತಿನ್ನುತ್ತಾ ನಿಂತ ಕಾಡಾನೆಯನ್ನು …

Read More »

ಸೋಮೇಶ್ವರ ದೇವಸ್ಥಾನ ಅಭಿವೃದ್ಧಿಗಾಗಿ ಪ್ರವಾಸೋದ್ಯಮ ಇಲಾಖೆಯಿಂದ ಸುಮಾರು 1.ಕೋಟಿ75 ಲಕ್ಷ ರೂಪಾಯಿಗಳ ಅನುದಾನ

ಬೈಲಹೊಂಗಲ ಭಾಗದ ಆರಾಧ್ಯ ದೈವ ಶ್ರೀ ಕ್ಷೇತ್ರ ಸೊಗಲ ಸೋಮೇಶ್ವರ ದೇವಸ್ಥಾನ ಅಭಿವೃದ್ಧಿಗಾಗಿ ಪ್ರವಾಸೋದ್ಯಮ ಇಲಾಖೆಯಿಂದ ಸುಮಾರು 1.ಕೋಟಿ75 ಲಕ್ಷ ರೂಪಾಯಿಗಳ ಅನುದಾನ ಬಿಡುಗಡೆಗೊಂಡಿದ್ದು ದೇವಸ್ಥಾನದ ಸಮಗ್ರ ಅಭಿವೃದ್ಧಿಗಾಗಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಇಂದು ಶ್ರೀ ಕ್ಷೇತ್ರದಲ್ಲಿ ಸಭೆಯನ್ನು ಮಾಡಲಾಯಿತು ಈ ಸಂದರ್ಭದಲ್ಲಿ ದೇವಸ್ಥಾನ ಕಮಿಟಿಯ ಸರ್ವ ಸದಸ್ಯರು , ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರಾದ ಸದಾಶಿವ ಬಡಿಗೆರ, ಸವದತ್ತಿ ತಹಸೀಲ್ದಾರಾದ ಮಲ್ಲಿಕಾರ್ಜುನ ಹೆಗ್ಗಣ್ಣವರ,ಅರಣ್ಯ ಇಲಾಖೆಯ ಅಧಿಕಾರಿಗಳು, ಸವದತ್ತಿಯ ಎಡಿಎಲ್ಆರ್, ಉಪಸ್ಥಿತರಿದ್ದರು.

Read More »

ಅಯ್ಯೋ ವಿಧಿಯೇ! ಒಂದೇ ದಿನ ಹೃದಯಾಘಾತದಿಂದ ಅಣ್ಣ- ತಮ್ಮ ಸಾವು!

ಯಾದಗಿರಿ, (ಸೆಪ್ಟೆಂಬರ್ 02): ಒಂದೇ ಕುಟುಂಬದ ಇಬ್ಬರು ಸಹೋದರರು (Br0thers) ಹೃದಯಾಘಾತಕ್ಕೆ (heart attack) ಬಲಿಯಾಗಿದ್ದು, ಅಣ್ಣ ತಮ್ಮಸಾವಿನಲ್ಲೂ ಒಂದಾಗಿದ್ದಾರೆ. ಈ ಘಟನೆ ಯಾದಗಿರಿ (Yadgir) ಜಿಲ್ಲೆಯ ಸುರಪುರ ತಾಲೂಕಿಮ ಕೆಂಭಾವಿಯಲ್ಲಿ (kembhavi) ನಡೆದಿದೆ. ಮೃತರನ್ನು ಶಂಶೋದ್ದೀನ್ (42) ಮತ್ತು ಇರ್ಫಾನ್ (38) ಮೃತ ದುರ್ವೈವಿಗಳು. ಮೊದಲಿಗೆ ಅಣ್ಣ ಸಂಶುದ್ದೀನ್ ಹೃದಯಾಘಾತದಿಂದ ಮೃತಪಟ್ಟಿರುವ ಸುದ್ದಿ ಕೇಳಿ ತಮ್ಮ ಇರ್ಫಾನ್​​ ಗೂ ಸಹ ಹೃದಯಾಘಾತವಾಗಿದೆ. ಒಂದೇ ದಿನ ಇಬ್ಬರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಎದೆ ನೋವು ಕಾಣಿಸಿಕೊಳ್ಳುತ್ತಿದ್ದಂತೆ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. …

Read More »

ಮೃತದೇಹ ಸ್ವೀಕರಿಸಲೊಪ್ಪದ ಸಹೋದರ; ಅಂತ್ಯಕ್ರಿಯೆ ನೆರವೇರಿಸಿ ಮಾನವೀಯತೆ ಮೆರೆದ ಸಮಾಜಸೇವಕ

ಉಡುಪಿ : ಜಿಲ್ಲೆಯ ಕಾಪು ಠಾಣಾ ವ್ಯಾಪ್ತಿಯಲ್ಲಿ ಮೃತಪಟ್ಟ ವ್ಯಕ್ತಿಯ ಸಹೋದರ ಅಂತ್ಯಕ್ರಿಯೆಗೆ ಮೃತದೇಹ ಸ್ವೀಕರಿಸಲು ಒಪ್ಪದ ಕಾರಣ ಸಮಾಜ ಸೇವಕ ವಿಶು ಶೆಟ್ಟಿ ಅವರೇ ಮುಂದೆ ನಿಂತು ಮೃತನ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ರುದ್ರ ಭೂಮಿಯಲ್ಲಿ ನೆರವೇರಿಸಿ ಮಾನವೀಯತೆ ಮೆರೆದಿದ್ದಾರೆ. ಮೃತ ವ್ಯಕ್ತಿಯ ಬಗ್ಗೆ ಕಾಪು ಠಾಣೆಯಲ್ಲಿ ದೂರು ದಾಖಲಾಗಿತ್ತು. ಪೊಲೀಸರು ಮೃತನ ಸಹೋದರನನ್ನು ಕರೆಯಿಸಿ ಕಾನೂನು ಪ್ರಕ್ರಿಯೆ ನಡೆಸಿದರು. ಕೊನೆಗೆ ಅಂತ್ಯಸಂಸ್ಕಾರ ನಡೆಸಲು ಮೃತ ದೇಹವನ್ನು ಪಡೆಯಲು ಸಹೋದರ ನಿರಾಕರಿಸಿದರು. …

Read More »

ಬಿಜೆಪಿಯವರದ್ದು ಧರ್ಮ ಯಾತ್ರೆಯಲ್ಲ ರಾಜಕೀಯ ಯಾತ್ರೆ: ಸಿಎಂ

ಮೈಸೂರು: “ಧರ್ಮಸ್ಥಳಕ್ಕೆ ಬಿಜೆಪಿ ಕೈಗೊಂಡಿರುವುದು ಧರ್ಮ ಯಾತ್ರೆಯಲ್ಲ ರಾಜಕೀಯ ಯಾತ್ರೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ SIT ತನಿಖೆ ನಡೆಯುತ್ತಿದೆ. ಬಿಜೆಪಿ ಈಗ ಎನ್.ಐ.ಎ ತನಿಖೆಗೆ ಒತ್ತಾಯಿಸುತ್ತಿದ್ದಾರೆ. ಹಾಗಾದರೆ ನಮ್ಮ ಪೊಲೀಸರ ಮೇಲೆ ಬಿಜೆಪಿಯವರಿಗೆ ನಂಬಿಕೆ ಇಲ್ಲವೇ?” ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. “SIT ರಚನೆಯಾದ ಪ್ರಾರಂಭದಲ್ಲಿ ಎನ್​ಐಎ ತನಿಖೆ ಮಾಡಿ ಎನ್ನಲಿಲ್ಲ. ನಂತರ ದೇಹಗಳು ಸಿಗದೇ ಹೋದಾಗ ಒತ್ತಾಯಿಸುತ್ತಿದ್ದಾರೆ. ಧರ್ಮಸ್ಥಳದ …

Read More »