ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾಕತ್ತು ಇದ್ದರೆ ಈಗಲೇ ಡಿ.ಕೆ.ಶಿವಕುಮಾರ್ ವಿರುದ್ಧ ಸೆಟೆದು ನಿಲ್ಲಲಿ ಎಂದು ಬಿಜೆಪಿ ಸವಾಲು ಹಾಕಿದೆ. ಕಾಂಗ್ರೆಸ್ ನಾಯಕತ್ವ ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ತಾನೇ ಮುಂದಿನ ಸಿಎಂ ಎಂದು ಬಿಂಬಿಸಿಕೊಳ್ಳಲು ತನ್ನದೇ ಪಟಾಲಂ ಜೊತೆಗೂಡಿ ವ್ಯಕ್ತಿ ಪೂಜೋತ್ಸವ ಮಾಡಿದರೆ ಅದನ್ನು ಶಕ್ತಿ ಪ್ರದರ್ಶನ ಎನ್ನುವುದಿಲ್ಲ. ಅದು ಉತ್ತರಕುಮಾರನ ಪೌರುಷ ಅಷ್ಟೇ. ತಾಕತ್ತು ಇದ್ದರೆ ಈಗಲೇ ಡಿಕೆಶಿ ವಿರುದ್ಧ ಸೆಟೆದು ನಿಲ್ಲಿ, ರಾಜಕೀಯ ಸಂದಿಗ್ಧತೆ …
Read More »`PSI’ ನೇಮಕಾತಿ ಹಗರಣ : ನಂ.1 ಆರೋಪಿ ಜಾಗೃತ್ ಅರೆಸ್ಟ್
ಬೆಂಗಳೂರು : ಪಿಎಸ್ ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣ ಸಂಬಂಧ ಪ್ರಕರಣದ ಪ್ರಮುಖ ಆರೋಪಿ ಎಸ್.ಜಾಗೃತ್ ನನ್ನು ಸಿಐಡಿ ಅಧಿಕಾರಿಗಳು ಕೊನೆಗೂ ಬಂಧಿಸಿದ್ದಾರೆ. ಎಸ್. ಜಾಗೃತ್ ಪಿಎಸ್ ಐ ಪರೀಕ್ಷೆಯಲ್ಲಿ 4 ನೇ ರ್ಯಾಂಕ್ ಬಂದಿದ್ದನ್ನು. ಎಸ್. ಜಾಗೃತ್ ವಿರುದ್ಧ ಹೈಗ್ರೌಂಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಎಫ್ ಐಆರ್ ಹಾಕಿರುವುದನ್ನು ರದ್ದುಪಡಿಸಬೇಕೆಂದು ಹೈಕೋರ್ಟ್ ಮೆಟ್ಟಿಲೇರಿದ್ದ ನಾಲ್ವರು ಅಭ್ಯರ್ಥಿಗಳಲ್ಲಿ ಜಾಗೃತ್ ಒಬ್ಬನಾಗಿದ್ದ. ಬಳಿಕ ಪ್ರಕರಣದ …
Read More »ರಬಕವಿ-ಬನಹಟ್ಟಿ:ಕಾಣೆಯಾದ ವಕೀಲ ಶವವಾಗಿ ಪತ್ತೆ
ರಬಕವಿ-ಬನಹಟ್ಟಿ : ಕಳೆದೊಂದು ವಾರದಿಂದ ಕಾಣೆಯಾಗಿದ್ದ ಬನಹಟ್ಟಿ ನ್ಯಾಯವಾದಿಗಳ ಸಂಘದ ಉಪಾಧ್ಯಕ್ಷ ರಾಜಕುಮಾರ ಗೂಗಾಡ(46) ಶವವಾಗಿ ಪತ್ತೆಯಾಗಿದ್ದಾರೆ. ತಾಲೂಕಿನ ಚಿಮ್ಮಡ ಗ್ರಾಮದ ಗೂಗಾಡ ಕುಟುಂಬದ ಭೂಮಿಯಲ್ಲಿನ ಕಬ್ಬಿನ ಬೆಳೆಯಲ್ಲಿ ಶವ ಪತ್ತೆಯಾಗಿದೆ. ಜೂನ್ 24 ರಂದು ಬಹಿರ್ದೆಸೆಗೆಂದು ಹೋಗಿದ್ದ ವ್ಯಕ್ತಿ ನಾಪತ್ತೆಯಾಗಿದ್ದರು. ಎಲ್ಲೋ ಹೋಗಿರಬೇಕೆಂದು ಸಂಬಂಧಿಕರು ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು. ಕೊಳೆತ ಸ್ಥಿತಿಯಲ್ಲಿ ಶನಿವಾರ ಮನೆಯ ಹಿಂಭಾಗದ ಕಬ್ಬಿನ ಬೆಳೆಯಲ್ಲಿ ಕೆಟ್ಟ ವಾಸನೆ ಬರಲಾರಂಭಿಸುತ್ತಿದ್ದಂತೆ ಶೋಧ ನಡೆಸಿದ ಕುಟುಂಬಸ್ಥರಿಗೆ …
Read More »KPTCL’ ಹುದ್ದೆಗಳ ಪರೀಕ್ಷೆ ವೇಳಾಪಟ್ಟಿ ಪ್ರಕಟ : ಇಲ್ಲಿದೆ ಮಾಹಿತಿ
ಬೆಂಗಳೂರು : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ ಮಾಹಿತಿ ನೀಡಿದ್ದು, ಕೆಪಿಟಿಸಿಎಲ್ ಹುದ್ದೆಗಳ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಕಿರಿಯ ಎಂಜಿನಿಯರ್, ಸಹಾಯಕ ಎಂಜಿನಿಯರ್ ಹುದ್ದೆಗಳ ಪರೀಕ್ಷಾ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿದ್ದು, ಜುಲೈ 23 ರಿಂದ ಆಗಸ್ಟ್ 7 ರವರೆಗೆ ವಿವಿಧ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದೆ. ಈ …
Read More »ಕನ್ಹಯ್ಯಲಾಲ್ ಹಂತಕರಿಗೆ ಕಠಿಣ ಶಿಕ್ಷೆಯಾಗಲಿ: ಶ್ರೀಶೈಲಶ್ರೀ
ವಿಜಯಪುರ: ಉದಯಪುರದಲ್ಲಿ ಕನ್ಹಯ್ಯಲಾಲ್ ಹತ್ಯೆ ಅಮಾನವೀಯ ಕೃತ್ಯ ಖಂಡನಾರ್ಹ. ಪ್ರಜಾ ಪ್ರಭುತ್ವದ ಈ ದೇಶದಲ್ಲಿ ಎಲ್ಲರಿಗೂ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ. ಅಭಿಪ್ರಾಯ ಬೇಧವಿದ್ದಲ್ಲಿ ಸಮರ್ಥ ಅಭಿಪ್ರಾಯದ ಮೂಲಕವೇ ವಿರೋಧಿಸಿ, ಗೆಲ್ಲಬೇಕು. ಆದರೆ ಜೀವ ಘಾತುಕ ಹತ್ಯೆ ಮೂಲಕ ಅಲ್ಲ ಎಂದು ಶ್ರೀಶೈಲ ಸೂರ್ಯಸಿಂಹಾಸನ ಪೀಠದ ಜಗದ್ಗುರು ಡಾ.ಚನ್ನಸಿದ್ದರಾಮ ಶ್ರೀಗಳು ಅಭಿಪ್ರಾಯಪಟ್ಟರು. ಶನಿವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಮಾಜದಲ್ಲಿ ಹಿಂಸೆಯನ್ನು ಪ್ರತಿಪಾದಿಸುವ ಇಂಥವರಿಗೆ ಕಠಿಣ ಶಿಕ್ಷೆಯಾಗಬೇಕು. ಹೇಯವಾದ ಈ ಕೃತ್ಯದಲ್ಲಿ ಭಾಗಿಯಾದ ಹಾಗೂ …
Read More »ಆ.15 ರೊಳಗೆ ಇ-ಕಚೇರಿಯನ್ನಾಗಿ ಪರಿವರ್ತಿಸಲು ಅಧಿಕಾರಿಗಳಿಗೆ ನಿರಾಣಿ ತಾಕೀತು
ಬೆಂಗಳೂರು : ಆಗಸ್ಟ್ 15 ರೊಳಗೆ ವಾಣಿಜ್ಯ ಕೈಗಾರಿಕಾ ಇಲಾಖೆ ವ್ಯಾಪ್ತಿಗೆ ಒಳಪಡುವ ಜಿಲ್ಲಾ ಮತ್ತು ತಾಲೂಕು ಮಟ್ಟದ ಕಚೇರಿಗಳನ್ನು ಇ-ಕಚೇರಿ ವ್ಯವಸ್ಥೆ( E- office )ಗಳನ್ನಾಗಿ ಪರಿವರ್ತನೆ ಮಾಡಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಶನಿವಾರ ವಿಕಾಸೌಧದಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಜಿಲ್ಲಾ ಜಂಟಿ ನಿರ್ದೇಶಕರು ಎಸ್.ಎಲ್ಒಗಳು ಕೆಎಸ್ಎಸ್ಐಡಿಸಿ ಅಧಿಕಾರಿಗಳ ಒಳಗೊಂಡ ಪ್ರಗತಿ ಪರಿಶೀಲನೆ …
Read More »ರಾಜಸ್ಥಾನಕ್ಕೆ ಬಂದಿಳಿದ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್
ಜೈಪುರ: ಜುಲೈ ತಿಂಗಳ 4ರಿಂದ 10ರ ವರೆಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತೀಯ ಪ್ರಾಂತ ಪ್ರಚಾರಕ ಸಭೆ ನಡೆಯಲಿದೆ. ರಾಜಸ್ಥಾನದ ಜುಂಜುನು ಅಲ್ಲಿ ನಡೆಯಲಿರುವ ಸಭೆಯಲ್ಲಿ ಪಾಲ್ಗೊಳ್ಳಲೆಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಶನಿವಾರ ರಾಜಸ್ಥಾನಕ್ಕೆ ಬಂದಿಳಿದಿದ್ದಾರೆ. ರೈಲಿನಲ್ಲಿ ಜೈಪುರಕ್ಕೆ ಬಂದಿರುವ ಅವರು ರವಿವಾರ ಆಚಾರ್ಯ ಮಹಾಶ್ರಮಣ್ರನ್ನು ಭೇಟಿ ಮಾಡಲಿದ್ದಾರೆ. ಅನಂತರ ಜುಂಜುನು ಅಲ್ಲಿ ತಂಗಲಿದ್ದಾರೆ. ಆರ್ಎಸ್ಎಸ್ ಸಭೆಯಲ್ಲಿ ದತ್ತಾತ್ರೇಯ ಹೊಸಬಾಳೆ ಸೇರಿ ಅನೇಕ ಪ್ರಮುಖರು ಭಾಗವಹಿಸಲಿದ್ದಾರೆ.
Read More »‘ಅಂಬಾರಿ’ ಏರಲು ನೀರಸ ಪ್ರತಿಕ್ರಿಯೆ: 6 ಡಬಲ್ ಡೆಕ್ಕರ್ ಬಸ್ಗಳಲ್ಲಿ 2 ಮಾತ್ರ ಬಳಕೆ
ಮೈಸೂರು: ನಗರದಲ್ಲಿ ಪ್ರವಾಸೋದ್ಯಮ ಚಟುವಟಿಕೆಯನ್ನು ವೃದ್ಧಿಸುವ ಭಾಗವಾಗಿ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಆಕರ್ಷಕವಾಗಿ ವಿನ್ಯಾಸಗೊಳಿಸಿರುವ ‘ಡಬಲ್ ಡೆಕ್ಕರ್ ಬಸ್’ನಲ್ಲಿ ಸಂಚಾರಕ್ಕೆ ಜನರು ಮತ್ತು ಪ್ರವಾಸಿಗರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. 6ರಲ್ಲಿ 2 ಬಸ್ಗಳನ್ನಷ್ಟೆ ರಸ್ತೆಗಿಳಿಸಲಾಗುತ್ತಿದೆ. ಪ್ರವಾಸಿಗರು, ಸಾಂಸ್ಕೃತಿಕ ನಗರಿಯ ಪಾರಂಪರಿಕ ಹಾಗೂ ಸಾಂಸ್ಕೃತಿಕ ಪ್ರವಾಸಿ ತಾಣಗಳನ್ನು ಬಸ್ನಲ್ಲಿ ಕುಳಿತು ವೀಕ್ಷಿಸಲು ಅನುಕೂಲ ಆಗುವಂತೆ ರೂಪಿಸಿರುವ ಯೋಜನೆ ಇದು. ಇದಕ್ಕಾಗಿ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಆರು ಬಸ್ಗಳನ್ನು ವಿನ್ಯಾಸಗೊಳಿಸಲಾಗಿದೆ. ಅದಕ್ಕೆ …
Read More »ಸಾಧನೆ ಶ್ರಮಿಕರ ಸ್ವತ್ತು ರಾಜ್ಯ ಕ್ರೈಡಲ್ ಎಮ್.ಡಿ. ಮಹಾಂತೇಶ ಹಿರೇಮಠ ಅಭಿಮತ
ವೈಜ್ಞಾನಿಕ ಕೊಡುಗೆಗಳಿಂದ ಜಗತ್ತು ಅಂಗೈಯಲ್ಲಿ ಹಿಡಿಯಲು ಸಾಧ್ಯವಾಗಿದೆ. ಇಂಥಹ ವಿಶೇಷತೆಗಳನ್ನು ಕೊಡಲು ಶ್ರಮ ಅತ್ಯಗತ್ಯ. ಸಾಧನೆಗಳು ಶ್ರಮಿಕರ ಸ್ವತ್ತಾಗಿದೆ ಎಂದು ರಾಜ್ಯ ಕ್ರೈಡಲ್ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಹಿರೇಮಠ ಹೇಳಿದರು. ಅವರು ಶನಿವಾರ ಬೆಂಗಳೂರಿನ ಭೂಸೇನಾ ನಿಗಮದ ಕೇಂದ್ರ ಕಚೇರಿಯಲ್ಲಿ ಅಕ್ಕತಂಗೇರಹಾಳ ಗ್ರಾಮದ ಐ.ಐ.ಎಸ್.ಸ್ಸಿ. ಪಿ.ಎಚ್.ಡಿ ಸಾಧಕ , ಚೇತನ ಉರಬಿನಹಟ್ಟಿ ಅವರಿಂದ ಸನ್ಮಾನಿಸಿ ಸ್ವೀಕರಿಸಿ ಮಾತನಾಡಿದರು. ಜಗತ್ತಿನ ಹೆಸರಾಂತ ತಾಂತ್ರಿಕ ಸಂಸ್ಥೆಗಳಲ್ಲಿ ಅಗ್ರಮಾನ್ಯ ಹೆಸರು ಭಾರತೀಯ ವಿಜ್ಞಾನ ಸಂಸ್ಥೆಗಿದೆ. …
Read More »ಡಿಒ ಕೈ ಹಿಡಿದು ಚುಂಬಿಸಿದ ಪಂಚಾಯಿತಿ ಸದಸ್ಯ
ತುಮಕೂರು: ಇಲ್ಲಿನ ಚಿಕ್ಕನಾಯಕನಹಳ್ಳಿ ತಾಲೂಕಿನ ಜೆಸಿ ಪುರ ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಸದಸ್ಯನೊಬ್ಬ ಪಿಡಿಒಗೆ ಮುತ್ತು ಕೊಟ್ಟಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಚಿವ ಮಾಧುಸ್ವಾಮಿ ಅವರ ತವರು ಕ್ಷೇತ್ರದಲ್ಲಿ ಘಟನೆ ನಡೆದಿದೆ. ಗ್ರಾಮ ಪಂಚಾಯಿತಿ ಸದಸ್ಯ ಪ್ರಸನ್ನ, ಪಿಡಿಒ ಕೋಕಿಲಾ ಅವರಿಗೆ ಕಚೇರಿಯಲ್ಲೇ ಪಿಡಿಒ ಕೈ ಹಿಡಿದು ಚುಂಬಿಸಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮತ್ತೊಂದು ದೃಶ್ಯದಲ್ಲಿ ಪಿಡಿಒ ಅವರ ಕೈ ಹಿಡಿದುಕೊಂಡು ಬಲವಂತವಾಗಿ ಎಳೆದಾಡಿ ಮುತ್ತುಕೊಟ್ಟಿದ್ದಾನೆ. ಕೆಲ ದಿನಗಳ …
Read More »
Laxmi News 24×7