Breaking News

ರಾಜಕೀಯ

ಬೆಳಗಾವಿಯ ಕೆಲವು ಬಿಜೆಪಿ ಶಾಸಕರು, ಸಚಿವರು ನಮ್ಮ ಜಿಲ್ಲೆ ಬಿಟ್ಟು ನೆರೆಯ ಜಿಲ್ಲೆಯಲ್ಲಿ ಆಸ್ಪತ್ರೆ ಆಗಬೇಕೆಂದು ಸಿಎಂಗೆ ಪತ್ರ ಬರೆಯುತ್ತಾರೆ

ಬೆಳಗಾವಿಯ ಕೆಲವು ಬಿಜೆಪಿ ಶಾಸಕರು, ಸಚಿವರು ನಮ್ಮ ಜಿಲ್ಲೆ ಬಿಟ್ಟು ನೆರೆಯ ಜಿಲ್ಲೆಯಲ್ಲಿ ಆಸ್ಪತ್ರೆ ಆಗಬೇಕೆಂದು ಸಿಎಂಗೆ ಪತ್ರ ಬರೆಯುತ್ತಾರೆ. ಆದರೆ ಬೆಳಗಾವಿ ಸುಲುವಾಗಿ ಇವರು ಬೇಡಿಕೆ ಇಡುವುದಿಲ್ಲ. ಬೆಳಗಾವಿ ‌ನೆರೆ ಜಿಲ್ಲೆಯಲ್ಲಿ 21 ಲಕ್ಷ ಜನಸಂಖ್ಯೆ ಇರುವಲ್ಲಿ ಮೂರುವರೆ ಸಾವಿರ ಬೆಡ್ ಇರುವ ಆಸ್ಪತ್ರೆಗಳಿವೆ. ಬೆಳಗಾವಿ ಅತೀ ದೊಡ್ಡ ಜಿಲ್ಲೆ 51 ಲಕ್ಷ ಜನಸಂಖ್ಯೆಗೆ 700 ಬೆಡ್ ಇರುವ ಜಿಲ್ಲಾಸ್ಪತ್ರೆ ಮಾತ್ರ ಇದೆ. ಬೆಳಗಾವಿ ಸಚಿವ, ಶಾಸಕರು ಭ್ರಷ್ಟಾಚಾರದಲ್ಲಿ …

Read More »

ಕಾಂಗ್ರೆಸ್‌ ಪಕ್ಷದವರಿಗೆ ಚಡ್ಡಿ ಸುಡುವುದರಿಂದ ಅಷ್ಟು ಖುಷಿಯಾಗುವುದಾದರೆ ನನ್ನ ಚಡ್ಡಿಗಳನ್ನೂ ಕಳುಹಿಸಿಕೊಡುತ್ತೇನೆ.: ಸಂಜಯ ಪಾಟೀಲ

ಬೆಳಗಾವಿ: ‘ಕಾಂಗ್ರೆಸ್‌ ಪಕ್ಷದವರಿಗೆ ಚಡ್ಡಿ ಸುಡುವುದರಿಂದ ಅಷ್ಟು ಖುಷಿಯಾಗುವುದಾದರೆ ನನ್ನ ಚಡ್ಡಿಗಳನ್ನೂ ಕಳುಹಿಸಿಕೊಡುತ್ತೇನೆ. ಅವುಗಳನ್ನೂ ಸುಟ್ಟು ಸಮಾಧಾನ ಮಾಡಿಕೊಳ್ಳಲಿ’ ಎಂದು ಬಿಜೆಪಿ ಜಿಲ್ಲಾ ಗ್ರಾಮಾಂತರ ಘಟಕದ ಅಧ್ಯಕ್ಷ ಸಂಜಯ ಪಾಟೀಲ ಹೇಳಿದರು.   ‘ಹಿಂದೆ ದೇಶ ಆಳಿ, ಅಧಿಕಾರ ಅನುಭವಿಸಿದ ಕಾಂಗ್ರೆಸ್ಸಿಗರಿಗೆ ಈಗ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳುವ ಯೋಗ್ಯತೆಯೂ ಇಲ್ಲ. ಈ ಮಾನಸಿಕ ಒತ್ತಡದಿಂದ ಹೊರಬರಲು ಚಡ್ಡಿ ಸುಡುವಂಥ ಕೆಲಸ ಮಾಡುತ್ತಿದ್ದಾರೆ. ಸುಟ್ಟರೆ ಸುಡಲಿ ಬಿಡಿ’ ಎಂದು ಅವರು ನಗರದಲ್ಲಿ …

Read More »

ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅಮಾನತ್ತು ಮಾಡಿ:: ದಲಿತ ಸಂಘರ್ಷ ಸಮಿತಿ ಆಗ್ರಹ

ರಾಜ್ಯದಲ್ಲಿ ಪಠ್ಯ ಮರು ಪರಿಷ್ಕರಣೆ ಮಾಡಿ ಹೊಸದಾಗಿ ಪಠ್ಯವನ್ನು ಮುದ್ರಣ ಮಾಡಬೇಕು. ಅದೇ ರೀತಿ ಪಠ್ಯದಲ್ಲಿ ಕೇಸರೀಕರಣ ಮಾಡಲು ಮುಂದಾಗಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ಸಚಿವ ಸ್ಥಾನದಿಂದ ಅಮಾನತ್ತು ಮಾಡಬೇಕು ಎಂದು ಆಗ್ರಹಿಸಿ ಬೆಳಗಾವಿಯಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಶಾಲಾ ಶಿಕ್ಷಣ ಸಂಪೂರ್ಣ ಅವೈಜ್ಞಾನಿಕ, ಅಸಂವಿಧಾನಾತ್ಮಕ ಹಾಗೂ ಅನೈತಿಕಗೊಳಿಸಲು ಹೊರಟಿರುವ ಪಠ್ಯಪುಸ್ತಕ ಮರು ಪರಿಶೀಲನೆಗಾಗಿ ಪಠ್ಯವನ್ನು ವಾಪಸ್ಸು ಪಡೆಯುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ …

Read More »

ಹಿರೋ ಆದವನು ಜಿರೋ ಆಗುತ್ತಾನೆ. ಜಿರೋ ಇದ್ದವನು ಹಿರೋ ಆಗುತ್ತಾನೆ. ಯಾವಾಗಲೂ ಹಿರೋ ಆಗಿ ಉಳಿಯುವವರು ಜನಸಾಮಾನ್ಯರು: ಲಕ್ಷ್ಮೀ ಹೆಬ್ಬಾಳ್ಕರ್

ಮುಂಚೆಯಿಂದಲೂ ಕೇಂದ್ರ ಮತ್ತು ರಾಜ್ಯದಲ್ಲಿ ಚುನಾವಣೆಗಳು ಬಂದಂತಹ ಸಂದರ್ಭದಲ್ಲಿ ಗೊಂದಲದ ವಾತಾವರಣ ಸೃಷ್ಟಿಸಿ, ಬಿಜೆಪಿ ಪರವಾಗಿ ವಾತಾವರಣ ಸೃಷ್ಟಿ ಮಾಡಿ, ಜನರ ಭಾವನೆಗಳ ಜೊತೆಗೆ ಚೆಲ್ಲಾಟ ಆಡುವುದು ಬಿಜೆಪಿಯವರಿಗೆ ರೂಢಿಯಾಗಿ ಬಿಟ್ಟಿದೆ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿಕಾರಿದರು. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕಾಂಗ್ರೆಸ್ ಪಕ್ಷ ಜನರಿಗೆ ಬದುಕನ್ನು ಕಟ್ಟಿ ಕೊಟ್ಟರೆ ಬಿಜೆಪಿಯವರು ಭಾವನೆಗಳನ್ನು ಕಟ್ಟಿ ಕೊಡುತ್ತದೆ. ನಾವು ಬದುಕು, ಜೀವನ …

Read More »

ಸಿಎಂ ಸ್ಥಾನದಿಂದ BSY ಅವರನ್ನು ಕಿತ್ತು ಹಾಕಿದ್ರು. ಮಗನಿಗೆ ಎಂ ಎಲ್ ಸಿ ಕೊಡಲು ಆಗಲಿಲ್ಲ. ಯಡಿಯೂರಪ್ಪ ಅವರನ್ನು ಸೈಡ್ ಲೈನ್ ಮಾಡಿ ಬಹಳ ದಿನ ಆಯಿತು. : ಸಿದ್ದರಾಮಯ್ಯ

ಬಿಜೆಪಿ ರಾಜ್ಯಾಧ್ಯಕ್ಷರಾದ ನವೀನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷರಾಗೋಕೆ ಲಾಯಕ್‍ಅಲ್ಲ. ಅವರು ಏನೇನೋ ಬಾಯಿಗೆಬಂದಂಗೆ ಮಾತನಾಡುವ ಅಪ್ರಬುದ್ಧರಾಗಿದ್ದಾರೆ. ಅವರ ಮಾತನ್ನು ಗಂಭೀರವಾಗಿ ಪರಿಗಣಿಸಬೇಕಾದ ಅಗತ್ಯವಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿಯಲ್ಲಿ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಮೋದಿ ಸಾಧನೆ ನೋಡಿ ಬಿಜೆಪಿಗೆ ಮತ ಹಾಕ್ತಾರೆ ಎಂಬ ಯಡಿಯೂರಪ್ಪ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು. ಪೆಟ್ರೋಲಿಯಂ ಬೆಲೆ ಹೆಚ್ಚಾಗಿರೋದು ಒಳ್ಳೆಯದಾ. …

Read More »

ವಿಧಾನಪರಿಷತ್ ಪದವೀಧರ ಮತ್ತು ಶಿಕ್ಷಕರ ಚುನಾವಣೆ ನಿಮಿತ್ತವಾಗಿ ಗೋಕಾಕನ ಲಕ್ಷ್ಮೀ ಕಲ್ಯಾಣ ಮಂಟಪದಲ್ಲಿ ನಡೆದ ಸಭೆ

ಇಂದು ವಿಧಾನಪರಿಷತ್ ಪದವೀಧರ ಮತ್ತು ಶಿಕ್ಷಕರ ಚುನಾವಣೆ ನಿಮಿತ್ತವಾಗಿ ಗೋಕಾಕನ ಲಕ್ಷ್ಮೀ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಮತಯಾಚನೆ ನಮ್ಮ ಪಕ್ಷದ ಅಭ್ಯರ್ಥಿಗಳಾದ ಶ್ರೀ ಹನುಮಂತ ನಿರಾಣಿ ಹಾಗೂ ಶ್ರೀ ಅರುಣ್ ಶಹಾಪುರ ಅವರ ಪರವಾಗಿ ಮತಯಾಚನೆ ಮಾಡಲಾಯಿತು. ಈ ವೇಳೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರು ಹಾಗೂ ಪದವೀಧರ ಮತದಾರ ಬಂಧುಗಳು ಸೇರಿ ನಮ್ಮ ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಗಳಿಗೆ ಬೆಂಬಲ ಸೂಚಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ …

Read More »

ಆಧುನಿಕ ಶೈಲಿಯಲ್ಲಿ ರೈತರ ಸಹಾಯಕ್ಕೆ ಮುಂದಾದ ಧೋನಿ.

ಚೆನ್ನೈ(ತಮಿಳುನಾಡು): ಟೀಂ ಇಂಡಿಯಾ ಕ್ರಿಕೆಟ್​ನಿಂದ ನಿವೃತ್ತಿ ಪಡೆದುಕೊಂಡು ಈಗಾಗಲೇ ಕೃಷಿ ಕ್ಷೇತ್ರದ ಮೇಲೆ ಹೆಚ್ಚಿನ ಒಲವು ಹೊಂದಿರುವ ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ, ಇದೀಗ ಮತ್ತೊಂದು ಹೆಜ್ಜೆ ಮುಂದೆ ಹೋಗಿದ್ದಾರೆ. ಆಧುನಿಕ ಶೈಲಿಯಲ್ಲಿ ರೈತರಿಗೆ ಸಹಾಯ ಮಾಡಲು ಮುಂದಾಗಿರುವ ಅವರು, ಮಹತ್ವದ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆ ಮಾಡಿದ್ದಾರೆ. ಇಂಡಿಯನ್​ ಗರುಡ ಡ್ರೋನ್ ಕಂಪನಿಯಲ್ಲಿ ಶೇರ್​ ಖರೀದಿಸಿರುವ ಮಾಹಿ, ರೈತರಿಗೆ ನೆರವಾಗಲು ನಿರ್ಧಾರ ಕೈಗೊಂಡಿದ್ದಾರೆ. ಗರುಡ ಕಂಪನಿಯ …

Read More »

ಯುವಕನ ಮಾತಿನಿಂದ ಯುವತಿಗೆ ಪ್ರೀತಿಯ ನಾಟಕ, ದೈಹಿಕ ಸಂಪರ್ಕ ನಡೆಸಿ ಸ್ನೇಹಿತರಾಗಿ ಇರೋಣ ಎಂದ ಎಂಜಿನಿಯರ್

ಬಳ್ಳಾರಿ : ಮದುವೆಯಾಗುವುದಾಗಿ ನಂಬಿಸಿ ಪ್ರೀತಿಸಿದ ಯುವತಿಯ ಜೊತೆ ದೈಹಿಕ ಸಂಪರ್ಕ ನಡೆಸಿ ಬಳಿಕ ಆಕೆಗೆ ವಂಚಿಸಿರುವ ಆರೋಪದಡಿ ಬಳ್ಳಾರಿ ಕೆಎಂಎಫ್​ನ ಅಸಿಸ್ಟೆಂಟ್ ಟೆಕ್ನಿಕಲ್ ಎಂಜಿನಿಯರ್​ವೊಬ್ಬರನ್ನು ಇಲ್ಲಿನ ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.   ಪಿ.ವೆಂಕಟೇಶ್ ಎಂಬುವರೆ ಬಂಧಿತ ಎಂಜಿನಿಯರ್. ರಾಯಚೂರು ಮೂಲದ ಆರೋಪಿಯು ಬಳ್ಳಾರಿಯ ಯುವತಿಯೊಬ್ಬಳನ್ನು ಪ್ರೀತಿಸಿದ್ದ. ಬಳಿಕ ಮದುವೆಯಾಗುವುದಾಗಿ ಹೇಳಿಕೊಂಡು ನಿರಂತರ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ತದನಂತರ ಯುವತಿ ಮದುವೆಯಾಗೋಣ ಎಂದಾಗ ಅದೆಲ್ಲ ಸದ್ಯ ಬೇಡ, ಹೀಗೆಯೇ ಸ್ನೇಹಿತರಾಗಿ …

Read More »

ಸೇವಾದಳದಲ್ಲಿ ಜರುಗುತ್ತಿರುವ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ತರಬೇತಿ ಶಿಬಿರ: ಸಂವಾದ ನಡೆಸಿದ ಸತೀಶ ಜಾರಕಿಹೊಳಿಯವರು

ಘಟಪ್ರಭಾದ ಸೇವಾದಳದಲ್ಲಿ ಜರುಗುತ್ತಿರುವ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ತರಬೇತಿ ಶಿಬಿರ ‘ನೇತೃತ್ವ ಸಂಗಮದ’ ಶಿಬಿರಾರ್ತಿಗಳೊಂದಿಗೆ ಉದ್ದೇಶಿಸಿ ಮಾತನಾಡುತ್ತಾ ಸತೀಶ ಜಾರಕಿಹೊಳಿಯವರು ತಮ್ಮ ರಾಜಕೀಯ, ಸಾಮಾಜಿಕ ಜೀವನವನ್ನು ಹಂಚಿಕೊಂಡರು. ಬಳಿಕ ದೇಶದ‌ ಮೂಲೆ ಮೂಲೆಗಳಿಂದ ಬಂದಿದ್ದ ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿದರು.   ತರಬೇತಿ ಉಸ್ತುವಾರಿಗಳಾದ ಸಚಿನ ರಾವ್, ಮೀನಾಕ್ಷಿ ನಟರಾಜನ್ ಸಶಿಕುಮಾರ ಸೆಂಥಿಲ್ ಸೇರಿ ಇತರರು ಇದ್ದರು.

Read More »

ಬಸ್‍ಗಾಗಿ ಪರದಾಡ್ತಿದ್ದವರಿಗೆ ಬಸ್ ವ್ಯವಸ್ಥೆ ಮಾಡಿಕೊಟ್ಟ ಶಾಸಕಿ

ಖಾನಾಪೂರದಿಂದ ಹಳಿಯಾಳ ಸೇರಿದಂತೆ ಇನ್ನಿತರ ಗ್ರಾಮಗಳಿಗೆ ಹೊಗಲು ಬಸ್ ಇಲ್ಲದೇ ಪರದಾಡುತ್ತಿದ್ದ ಸಾರ್ವಜನಿಕರ ಸಂಕಷ್ಟ ಕಂಡ ಶಾಸಕಿ ಅಂಜಲಿ ನಿಂಬಾಳ್ಕರ್ ಡಿಪೋ ಮ್ಯಾನೇಜರ್‌ಗೆ ಸ್ಥಳದಲ್ಲೇ ಕರಿಸಿ ಬಸ್ ವ್ಯವಸ್ಥೆಯನ್ನು ಮಾಡಿಕೊಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಹೌದು ಖಾನಾಪೂರದಿಂದ ಕಾರ್ಯಕ್ರಮ ನಿಮಿತ್ಯ ಹೊರಟಿದ್ದ ಶಾಸಕಿ ಅಂಜಲಿ ನಿಂಬಾಳ್ಕರ್ ರುಮೇವಾಡಿ ಕ್ರಾಸ್ ಬಳಿ ಬಹು ಸಂಖ್ಯೆಯಲ್ಲಿ ಸಾರ್ವಜನಿಕರು ನಿಂತಿರುವುದನ್ನು ಗಮನಿಸಿ ಕಾರು ನಿಲ್ಲಿಸಿ ಜನರ ಬಳಿ ಹೋಗಿ ವಿಚಾರಿಸಿದ್ದಾರೆ. ಆಗ ಸಾರ್ವಜನಿಕರು …

Read More »