Breaking News

ರಾಜಕೀಯ

15 ದಿನ ಅಧಿಕಾರಿಗಳಿಗಿಲ್ಲ ರಜೆ; ಮುಖ್ಯಮಂತ್ರಿ ಕಟ್ಟಪ್ಪಣೆ: ಡಿಸಿ, ಸಿಇಒಗಳೊಂದಿಗೆ ವಿಡಿಯೋ ಸಂವಾದ

ಬೆಂಗಳೂರು: ರಾಜ್ಯದಲ್ಲಿ ಸುರಿದ ಭಾರಿ ಮಳೆ ಬಾಧಿತ ಪ್ರದೇಶದಲ್ಲಿ ಯುದ್ಧೋಪಾದಿ ತುರ್ತು ಕೆಲಸಗಳ ಜತೆಗೆ ಪರಿಹಾರ ವಿತರಿಸಬೇಕಾಗಿದ್ದು, ಯಾವುದೇ ಅಧಿಕಾರಿಗಳಿಗೆ ಮುಂದಿನ 15 ದಿನ ರಜೆ ಮಂಜೂರು ಮಾಡುವಂತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಟ್ಟಪ್ಪಣೆ ಮಾಡಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ವರ್ಚುವಲ್ ವೇದಿಕೆ ಮೂಲಕ ಜಿಲ್ಲಾಧಿಕಾರಿಗಳು, ಜಿ.ಪಂ. ಸಿಇಒಗಳ ಜತೆಗೆ ಶನಿವಾರ ಸಭೆ ನಡೆಸಿದ ಅವರು, ಮಳೆ ಹಾನಿ ಪರಿಸ್ಥಿತಿ ಹಾಗೂ ಕೈಗೊಂಡ ಕ್ರಮಗಳನ್ನು ಪರಾಮಶಿಸಿದರು. ಎಲ್ಲ ಅಧಿಕಾರಿಗಳು …

Read More »

ಕರ್ನಾಟಕ ಶಿಕ್ಷಕರ ಹುದ್ದೆ ನೇಮಕಾತಿ 2022: ಐವರಲ್ಲಿ ಒಬ್ಬರಿಗೆ ಉದ್ಯೋಗ ಖಚಿತ

ಬೆಂಗಳೂರು,ಮೇ22: ಶಿಕ್ಷಕರಾಗಬೇಕು ಅನ್ನೋ ಹಂಬಲ, ಛಲವನ್ನು ಹೊಂದಿರುವ ಅಭ್ಯರ್ಥಿಗಳು ಈಗಾಗಲೇ ಸಂಪೂರ್ಣ ತಯಾರಿಯನ್ನು ಮುಗಿಸಿ ಶಿಕ್ಷಕರ ಹುದ್ದೆ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಯನ್ನು ಬರೆಯುತ್ತಿದ್ದಾರೆ. ಈ ವೇಳೆ ಭಾವಿ ಶಿಕ್ಷಕರಿಗೊಂದು ಗುಡ್ ನ್ಯೂಸ್ ಸಿಕ್ಕಿದೆ. ನೀವು ಶಿಕ್ಷಕರಾಗಬೇಕಾದರೇ ನಾಲ್ವರು ಪ್ರತಿಸ್ಪರ್ಧಿಗಳನ್ನು ಹಿಂದಿಕ್ಕಿ ಗೆದ್ದರೇ ಸಾಕು ಸರ್ಕಾರಿ ಶಿಕ್ಷಕ ಹುದ್ದೆ ಖಾತ್ರಿಯಾಗಲಿದೆ. ಶಿಕ್ಷಕರ ಹುದ್ದೆ ನೇಮಕಾತಿ 2022ರ ಪರೀಕ್ಷೆಯು ಮೇ21 ಶನಿವಾರ ಮತ್ತು ಮೇ22 ಭಾನುವಾರ ನಡೆಯುತ್ತಿದೆ.ಮೊದಲ ದಿನದ ಶಿಕ್ಷಕರ ನೇಮಕಾತಿ ಪರೀಕ್ಷೆಯನ್ನು …

Read More »

ತುಂಗಭದ್ರಾ ಜಲಾಶಯಕ್ಕೆ ವಾಡಿಕೆಗೂ ಮೊದಲೇ ಭಾರೀ ಒಳ ಹರಿವು ಹೆಚ್ಚಾಳವಾಗಿದ್ದು, ಡ್ಯಾಂ ಹಿನ್ನೀರಿನ ಬೆಳೆ ಜಲಾವೃತ

ಕೊಪ್ಪಳ: ತುಂಗಭದ್ರಾ ಜಲಾಶಯಕ್ಕೆ ವಾಡಿಕೆಗೂ ಮೊದಲೇ ಭಾರೀ ಒಳ ಹರಿವು ಹೆಚ್ಚಾಳವಾಗಿದ್ದು, ಡ್ಯಾಂ ಹಿನ್ನೀರಿನ ಬೆಳೆ ಜಲಾವೃತವಾಗಿವೆ. ಕೊಪ್ಪಳ ತಾಲೂಕಿನ ತಿಗರಿ ಗ್ರಾಮದಲ್ಲಿನ ಹಿನ್ನೀರಿನಲ್ಲಿ ಮೆಕ್ಕೆಜೋಳ ಬೆಳೆ ನೀರು ಪಾಲಾಗಿದೆ. ಇದರಿಂದ ರೈತ ಮಂಜುನಾಥ್ ಕಂಗಲಾಗಿದ್ದಾರೆ. ಸಾಮಾನ್ಯವಾಗಿ ಜುಲೈ ಕೊನೆಯ ವಾರ ಟಿಬಿ ಡ್ಯಾಂನಲ್ಲಿ ಹೆಚ್ಚಿನ ಒಳ ಹರಿವು ಹೆಚ್ಚಾಗುತ್ತದೆ. ಆದರೆ ಈ ಬಾರಿ ತುಂಗಭದ್ರಾ ಜಲಾಶಯಕ್ಕೆ ನಿರೀಕ್ಷೆಗೂ ಮೊದಲೇ 85 ಸಾವಿರ ಕ್ಯೂಸೆಕ್ ಒಳ ಹರಿವು ಹೆಚ್ಚಾಗಿದ್ದು, ಸದ್ಯ ಜಲಾಶಯದಲ್ಲಿ …

Read More »

ಇಂಟರ್‌ವ್ಯೂಗೆಂದು ಹೋದ ಯುವತಿ, ಟ್ಯಾಲಿಕ್ಲಾಸ್‌ಗೆ ಹೋಗ್ತೀನೆಂದಿದ್ದ ಯುವಕ – ಆತ್ಮಹತ್ಯೆ!

ಉಡುಪಿ: ಬೆಂಗಳೂರಿನ ಪ್ರೇಮಿಗಳಿಬ್ಬರು ಕಾರಿನಲ್ಲೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಆತ್ಮಹತ್ಯೆಗೂ ಮುನ್ನ ನಡೆದಿದ್ದೇನು ಎನ್ನುವ ಇಂಟರೆಸ್ಟಿಂಗ್ ಸ್ಟೋರಿ ಇಲ್ಲಿದೆ. ಕಳೆದ ಮೂರು ದಿನಗಳ ಹಿಂದೆಯೇ ಮಿಸ್ಸಿಂಗ್ ಕಂಪ್ಲೈಂಟ್‌ ದಾಖಲಾಗಿತ್ತು. ಯುವತಿ ತಾಯಿ ರತ್ನಮ್ಮ ಹಾಗೂ ಮೃತ ಯುವಕನ ತಂದೆ ವೆಂಕಟರಮನ್ ರಾವ್ ಅವರಿಂದ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಆತ್ಮಹತ್ಯೆಗೂ ಮುನ್ನ ನಡೆದಿದ್ದೇನು?: ಮೇ 19ರಂದು ಇಂಟರ್‌ವ್ಯೂಗೆ …

Read More »

ಗೋಕಾಕ ನಗರದಲ್ಲಿ ಹೆರಾಯಿನ್,ಗಾಂಜಾ ವಶ:ನಾಲ್ವರ ಬಂಧನ

ಗೋಕಾಕ ನಗರದಲ್ಲಿ ಹೆರಾಯಿನ್,ಗಾಂಜಾ ವಶ:ನಾಲ್ವರ ಬಂಧನನಿಷೇಧಿತ ಹೆರಾಯಿನ್ ಮಾರಾಟ ಮಾಡುತ್ತಿದ್ದ ಬೆಳಗಾವಿಯ ಮೂವರು ಮತ್ತು ಖರೀದಿಗೆ ಮುಂದಾಗಿದ್ದ ಗೋಕಾಕದ ಒಬ್ಬನನ್ನು ಗೋಕಾಕ್ ನಗರದಲ್ಲಿ ಬಂಧಿಸಿರುವ ಪೊಲೀಸರು ಭಾರಿ ಪ್ರಮಾಣದಲ್ಲಿ ಪೆನ್ನಿಯನ್ನು ವಶಪಡಿಸಿಕೊಂಡಿದ್ದಾರೆ. ಗೋಕಾಕ ಪಿಡಬ್ಲೂಡಿ ಐಬಿಯ ಹತ್ತಿರ ಬೆಳಗಾವಿಯ ಅಬ್ದುಲ್‌ಖಾದಿರ @ಜಿಯಾ ನಾಯಿಕ, ಮೋಸಿನ್ ಜಮಾದಾರ ಮತ್ತು ಸಲ್ಮಾನ ಮುಲ್ಲಾ ಇವರು ತಮ್ಮ ಕಾರ್ (ನಂಬರ ಕೆಎ-5l-ಎಮ್ ಸಿ0787 ನೇದ್ದರಲ್ಲಿ) ನಲ್ಲಿ ನಿಷೇಧಿತ ಹೇರಾಯಿನ್ (ಪೆನ್ನಿ) ಮಾದಕ ವಸ್ತು ಮತ್ತು …

Read More »

ಪಾಕ್ ಮಹಿಳಾ​ ಏಜೆಂಟ್ ಜೊತೆ ಹನಿಟ್ರ್ಯಾಪ್​.. ಸಿಕ್ಕಬಿದ್ದ ಭಾರತೀಯ ಯೋಧ

ಜೈಪುರ್​(ರಾಜಸ್ಥಾನ): ಪಾಕಿಸ್ತಾನದ ಮಹಿಳಾ ಏಜೆಂಟ್​ ಜೊತೆ ಹನಿಟ್ರ್ಯಾಪ್​​ನಲ್ಲಿ ಸಿಲುಕಿಕೊಂಡು ಭಾರತೀಯ ಸೇನೆಯ ಗೌಪ್ಯ ಮಾಹಿತಿ ಮತ್ತು ಕಾರ್ಯತಂತ್ರದ ಮಾಹಿತಿ ಹಂಚಿಕೊಂಡಿದ್ದಕ್ಕಾಗಿ ಯೋಧನೋರ್ವನ ಬಂಧನ ಮಾಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಗುಪ್ತಚರ ವಿಭಾಗದ ಡಿಜಿ ಉಮೇಶ್ ಮಿಶ್ರಾ ಮಾಹಿತಿ ಹಂಚಿಕೊಂಡಿದ್ದಾರೆ. ಭಾರತೀಯ ಯೋಧ ಪ್ರದೀಪ್ ಕುಮಾರ್​ ಪಾಕಿಸ್ತಾನ ಗುಪ್ತಚರ ಇಲಾಖೆಯ ಮಹಿಳಾ ಏಜೆಂಟ್​ ಜೊತೆ ಸಂಪರ್ಕದಲ್ಲಿದ್ದರು. ಕಳೆದ ಕೆಲ ದಿನಗಳಿಂದ ಅವರ ಮೇಲೆ ತೀವ್ರ ನಿಗಾ ವಹಿಸಿ, ಇದೀಗ ಬಂಧನಕ್ಕೊಳಪಡಿಸಲಾಗಿದೆ. ಮಹಿಳಾ ಏಜೆಂಟ್ ಜೊತೆ …

Read More »

ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿ ಮೇಲೆ ಎಸಿಬಿ ದಾಳಿ, ಡಿಸಿ ಮಂಜುನಾಥ್​ ವಿರುದ್ದವೂ ದೂರುದಾರ ಅರೋಪ

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿ ಹಬ್ಬಿದೆ ಎಂಬ ಪ್ರತತಿಪಕ್ಷಗಳ ಕೂಗಿನ ಮಧ್ಯೆ ರಾಜಧಾನಿ ಬೆಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ಇಂದು ಶನಿವಾರ ದಾಳಿ ನಡೆಸಿದ್ದಾರೆ. ಜಿಲ್ಲಾಧಿಕಾರಿ ಜೆ. ಮಂಜುನಾಥ್ ಕಚೇರಿಯಲ್ಲಿ ಕಳೆದ ಅರ್ಧ ಗಂಟೆಯಿಂದ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) 6 ಮಂದಿ ಅಧಿಕಾರಿಗಳ ತಂಡದಿಂದ ಡಿಸಿ ಕಚೇರಿ ಮೇಲೆ ದಾಳಿ ನಡೆದಿದೆ. ಡಿಸಿ ಕಚೇರಿಗೆ ಹಲವು ಹಿರಿಯ ಅಧಿಕಾರಿಗಳನ್ನ ಕರೆಸಿಕೊಂಡ ಎಸಿಬಿ ಅಧಿಕಾರಿಗಳು …

Read More »

ಬೆಳಗಾವಿಯಲ್ಲಿ ಪ್ರಮುಖ ಸಭೆ,ಬಾಲಚಂದ್ರ ಜಾರಕಿಹೊಳಿ ಭಾಗಿ,ರಮೇಶ್ ಜಾರಕಿಹೊಳಿ ಹಾಗೂ ಚುನಾವಣೆ ಬಗ್ಗೆ ಹೇಳಿದ್ದೇನು? ಕಂಪ್ಲೀಟ್ ಡೀಟೇಲ್ಸ್

ಬೆಳಗಾವಿ: ಇಂದು ಬೆಳಗಾವಿಯಲ್ಲಿ ಬಿಜೆಪಿಯ ಉನ್ನತ ಮಟ್ಟದ ಸಭೆ ಸಮಾರಂಭ ನಡೆಯಿತು, ಅಲ್ಲಿ ಬೆಳಗಾವಿಯ ಎಲ್ಲಾ ಜಿಲ್ಲಾ ನಾಯಕರು ಸೇರಿದಂತೆ ಅನೇಕ ನಾಯಕರು ಕೂಡ ಸೇರಿದ್ದರು ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಕೂಡ ಈ ಒಂದು ಸಭೆಗೆ ಹಾಜರಿದ್ದರು.   ಇನ್ನು ಪತ್ರಿಕಾ ಗೋಷ್ಠಿ ಶುರು ಆಗೊಕ್ಕು ಮುಂಚೆಯೇ ನ್ನಡೆದದ್ದೆ ಒಂದು ಪ್ರಮುಖ ಬೆಳವಣಿಗೆ, ಹೌದು ಅದೇನಪ್ಪಾ ಅಂದ್ರೆ ಬಾಲಚಂದ್ರ ಜಾರಕಿಹೊಳಿ ಯವರ ಸಭೆಗೆ ಆಗಮನ ವಿಶೇಷವಾಗಿ ಜಾರಕಿಹೊಳಿ …

Read More »

ಪಾಪದ ಕೊಡ ನಮ್ಮದಾ ನಿಮ್ಮದಾ? ಎಂದ ಸಿದ್ದರಾಮಯ್ಯ

ನವದೆಹಲಿ: ಪಾಪದ ಕೊಡ ನಮ್ಮದಾ ನಿಮ್ಮದಾ? ಎಂದು ಪ್ರಶ್ನಿಸುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಸಚಿವ ಆರ್.ಅಶೋಕ್ ಅವರಿಗೆ ತಿರುಗೇಟು ಕೊಟ್ಟರು. ವಿಧಾನ ಪರಿಷತ್ ಮತ್ತು ರಾಜ್ಯಸಭೆಗೆ ಟಿಕೆಟ್ ಹಂಚಿಕೆ ವಿಚಾರ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಉಸ್ತುವಾರಿ ಸಚಿವ ರಣದೀಪ್ ಸುರ್ಜೆವಾಲ ಜೊತೆಗೆ ಸಭೆ ಮಾಡಿದ್ದಾರೆ. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಹ ಇದ್ದರು. ಆದರೆ ಕಾಂಗ್ರೆಸ್ ನಾಯಕರು ಸೋನಿಯಾಗಾಂಧಿ ಅವರನ್ನು ಈ ವೇಳೆ ಭೇಟಿ ಮಾಡಿಲ್ಲ. ಈ …

Read More »

ಮೋಸಗಾರಿಕೆ ಮಾಡಿಕೊಂಡು ದೇಶದಲ್ಲಿ ಕಾಂಗ್ರೆಸ್ ಆಡಳಿತ ನಡೆಸಿ ಖಾಲಿಯಾಗಿದೆ: ಕಾರಜೋಳ

ಬೆಳಗಾವಿ: ಮೋಸಗಾರಿಕೆ ಮಾಡಿಕೊಂಡು ದೇಶದಲ್ಲಿ ಕಾಂಗ್ರೆಸ್ ಆಡಳಿತ ನಡೆಸಿ ಖಾಲಿಯಾಗಿದೆ ಎಂದು ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 2023ರ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಕಾಂಗ್ರೆಸ್ ಮೋಸಗಾರಿಕೆ ಮಾಡಿಕೊಂಡು ದೇಶದಲ್ಲಿ ಆಡಳಿತ ಮಾಡಿದೆ. ಜನರಿಗೆ ಬೇಕಾಗಿರುವುದು ಅಕ್ಕಿ ಅಲ್ಲ. ಸ್ವಾಭಿಮಾನದ ಬದುಕು. ಅದಕ್ಕೆ ಬೇಕಾದ ಉದ್ಯೋಗವನ್ನು ಕೊಡುವ ಕೆಲಸವನ್ನು ಮಾಡಬೇಕು. ಅದನ್ನು ಬಿಜೆಪಿ ಸರ್ಕಾರ ಮಾಡುತ್ತಿದೆ ಎಂದರು.  ಬಿಜೆಪಿ ಭ್ರಷ್ಟಾಚಾರದ …

Read More »