Breaking News

ರಾಜಕೀಯ

ಮನೆಯಲ್ಲಿದ್ದ ಕಪಾಟು ಒಡೆದು ಚಿನ್ನಾಭರಣ ಸಹಿತ ನಗದು ಹಣ ಕಳ್ಳತನ

ಬೆಳ್ತಂಗಡಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಿಂಬಾಗಿಲು ಮುರಿದು ಕಳ್ಳರು ನುಗ್ಗಿ ಮನೆಯಲ್ಲಿದ್ದ ಕಪಾಟು ಒಡೆದು ಚಿನ್ನಾಭರಣ ಸಹಿತ ನಗದು ಹಣ ಕಳ್ಳತನ ಮಾಡಿದ ಘಟನೆ ಚಾರ್ಮಾಡಿ ಗ್ರಾಪಂ ವ್ಯಾಪ್ತಿಯ ಚಿಬಿದ್ರೆ ಗ್ರಾಮದ ಕಕ್ಕಿಂಜೆ ಸಮೀಪದ ಕತ್ತರಿಗುಡ್ಡೆಯಲ್ಲಿ ನಡೆದಿದೆ.   ಇಲ್ಲಿನ ನಿವಾಸಿ ಇಕ್ಬಾಲ್ ಎಂಬವರಿಗೆ ಸೇರಿದ ಮನೆಯಲ್ಲಿ ಅವರ ತಂಗಿ ಝರಿನಾ ಮತ್ತು ಇಬ್ಬರು ಮಕ್ಕಳು ಮಾತ್ರ ವಾಸವಾಗಿದ್ದು, ಗಂಡ ಇಸ್ಮಾಯಿಲ್ ದುಬೈನಲ್ಲಿ ಉದ್ಯೋಗದಲ್ಲಿದ್ದಾರೆ. ಝರಿನಾ ಮತ್ತು ಮಕ್ಕಳು ಮೂರು …

Read More »

ದಿವ್ಯಾ ಮನೆಯಲ್ಲಿ ತಿಂದ ಕೇಸರಿ ಬಾತ್‌ಗೆ ಇಷ್ಟೊಂದು ನಿಯತ್ತೇ: ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು: ಪಿಎಸ್‌ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದು ಒಂದು ವಾರ ಕಳೆದರೂ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಅವರನ್ನು ಬಂಧಿಸದಿರುವುದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಪಿಎಸ್‌ಐ ಪರೀಕ್ಷೆಯಲ್ಲಿ ಅಕ್ರಮ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಪಿಎಸ್‌ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದ ಹಲವು ದಿನಗಳವರೆಗೂ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿರಲಿಲ್ಲ. ಪ್ರಕರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಬಂಧನವಿಲ್ಲ. ಗೃಹ ಸಚಿವ ಅರಗ …

Read More »

DK ಬ್ಯಾಟಿಂಗ್ ನೋಡಿದ್ರೆ, ನಾನು ಮತ್ತೆ ಕ್ರಿಕೆಟ್ ಆಡ್ಬೇಕು ಅನ್ನಿಸ್ತಿದೆ..! A.B.D.

ನಾನು ದಿನೇಶ್ ಕಾರ್ತಿಕ್ ಅವರನ್ನು ಕೊನೆಯ ಬಾರಿಗೆ ನೋಡಿದಾಗ ಯುಕೆಯಲ್ಲಿ ಕಾಮೆಂಟ್ರಿ ಮಾಡುತ್ತಿದ್ದರು. ಆಗ ನಾನು ಅವರು ತಮ್ಮ ವೃತ್ತಿಜೀವನದ ಅಂತ್ಯದಲ್ಲಿದ್ದಾರೆ ಎಂದು ಭಾವಿಸಿದ್ದೆ.IPL 2022: ಇತ್ತೀಚೆಗೆ ಸಂದರ್ಶನವೊಂದರಲ್ಲಿ ದಿನೇಶ್ ಕಾರ್ತಿಕ್​ಗೆ ಒಂದು ಜೋಕ್ ಹೇಳುವಂತೆ ಕೇಳಲಾಗಿತ್ತು…ಡಿಕೆ ಹೇಳಿದ ಜೋಕ್- ಎಬಿ ಡಿವಿಲಿಯರ್ಸ್ ಈ ಸಲ RCB ಯಲ್ಲಿ ಆಡ್ತಿಲ್ಲ. ಇದರಲ್ಲೇನು ತಮಾಷೆಯಿದೆ ಎಂದು ನೀವಂದುಕೊಂಡರೆ, ದಿನೇಶ್ ಕಾರ್ತಿಕ್ ಹಾಗೆ ಹೇಳಲು ಮುಖ್ಯ ಕಾರಣ, ಒಬ್ಬ ಆಟಗಾರ ಅತ್ಯುತ್ತಮವಾಗಿ ಆಡುತ್ತಿದ್ದರೂ …

Read More »

ಸಂಪ್ರದಾಯ ಮುರಿದು, ಸೂರ್ಯಾಸ್ತದ ನಂತರ ಕೆಂಪು ಕೋಟೆಯಲ್ಲಿ ಮೋದಿ ಭಾಷಣ

ನವದೆಹಲಿ: ಗುರು ತೇಗ್‌ ಬಹಾದೂರ್‌ ಅವರ 400ನೇ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ರಾತ್ರಿ ಕೆಂಪು ಕೋಟೆಯಲ್ಲಿ ಭಾಷಣ ಮಾಡಲಿದ್ದಾರೆ. ಈ ಮೂಲಕ ಮೊಘಲರ ಕಾಲದ ಸ್ಮಾರಕದಲ್ಲಿ ಸೂರ್ಯಾಸ್ತ ನಂತರ ಭಾಷಣ ಮಾಡಿದ ಮೊದಲ ಪ್ರಧಾನಿ ಎಂದೆನಿಸಿಕೊಳ್ಳಲಿದ್ದಾರೆ.   ರಾಷ್ಟ್ರವನ್ನು ಉದ್ದೇಶಿಸಿ ಪಿಎಂ ಮೋದಿ ಕೆಂಪು ಕೋಟೆಯ ಮೇಲೆ ಭಾಷಣ ಮಾಡುವ ಬದಲು ಹುಲ್ಲುಹಾಸಿನ ಮೇಲೆ ಮಾತನಾಡುತ್ತಿರುವುದು ವಿಶೇಷವಾಗಿದೆ. ಸಂಸ್ಕೃತಿ ಸಚಿವಾಲಯದ ಅಧಿಕೃತ ಮಾಹಿತಿ ಪ್ರಕಾರ, 1675ರಲ್ಲಿ …

Read More »

ಈಶ್ವರಪ್ಪ ತಲೆದಂಡದ ಬೆನ್ನಲ್ಲೇ ಮತ್ತಿಬ್ಬರು ಸಚಿವರಿಗೆ ಶುರುವಾಯ್ತು ಕಮೀಷನ್ ಕಂಟಕ..!

ಬೆಂಗಳೂರು- 40% ಕಮೀಷನ್ ಆರೋಪಕ್ಕೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‍ರಾಜ್ ಸಚಿವ ಈಶ್ವರಪ್ಪ, ಸಚಿವ ಸ್ಥಾನ ತಲೆದಂಡವಾಗಿರುವ ಬೆನ್ನಲ್ಲೇ ಇದೀಗ ಮತ್ತಿಬ್ಬರು ಸಚಿವರಿಗೆ ಕಂಟಕ ಎದುರಾಗಿದೆ ಎನ್ನಲಾಗುತ್ತಿದೆ. ಬೃಹತ್ ನೀರಾವರಿ ಸಚಿವ ಗೋವಿಂದ ಕಾರಜೋಳ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಸುಧಾಕರ್ ಅವರ ಮೇಲೆ ಇದೇ ಆರೋಪಗಳು ಕೇಳಿಬಂದಿದ್ದು, ಇಲಾಖೆಯಲ್ಲಿ 40% ಕಮೀಷನ್ ಕೊಡದೆ ಯಾವುದೇ ಕೆಲಸಗಳನ್ನು ಮಾಡಿಕೊಡುವುದಿಲ್ಲ ಎಂಬ ಆರೋಪ ಜಗಜ್ಜಾಹೀರವಾಗಿದೆ. ಸದ್ಯದಲ್ಲೇ ಗುತ್ತಿಗೆದಾರರು ಇವರಿಬ್ಬರ ವಿರುದ್ಧ ದಾಖಲೆಗಳ …

Read More »

ಸಂತೋಷ್ ಆತ್ಮಹತ್ಯೆ ಮಾಡಿದ್ದ ಲಾಡ್ಜ್ ನಲ್ಲಿ ಮತ್ತೋರ್ವ ಯುವಕನ ಆತ್ಮಹತ್ಯೆ!

ಉಡುಪಿ: ಕೆಲವು ದಿನಗಳ ಹಿಂದಷ್ಟೇ ರಾಜ್ಯ ರಾಜಕೀಯದಲ್ಲಿ ತಲ್ಲಣ ಸೃಷ್ಟಿಸಿದ ಬೆಳಗಾವಿಯ ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಉಡುಪಿಯ ಲಾಡ್ಜ್‌ ನಲ್ಲಿ ಇಂದು ಮತ್ತೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಣಾಜೆಯ ಶರಣ್ ರಾಜ್ (31 ವ) ಎಂದು ಗುರುತಿಸಲಾಗಿಎ. ಈತ ಮಂಗಳೂರಿನ ಮೆಡಿಕಲ್ ರೆಪ್ ಎಂದು ತಿಳಿದು ಬಂದಿದೆ. ಹೆಸರು ಬದಲಿಸಿದ ಲಾಡ್ಜ್: ಸಂತೋಷ್‌ ಸಾವನ್ನಪ್ಪಿದ ಶಾಂಭವಿ ಲಾಡ್ಜ್ನ ಹೆಸರನ್ನು ಮಾಲಕರು ಬದಲಾಯಿಸಿದ್ದಾರೆ. …

Read More »

ಕೊರೊನಾ ನಾಲ್ಕನೇ ಭೀತಿಯಿಂದ ಖಾಸಗಿ ಶಾಲೆಗಳ ಪ್ರವೇಶಾತಿ 30%ರಷ್ಟು ಕುಸಿತ

ಬೆಂಗಳೂರು, ಏಪ್ರಿಲ್ 19 : ದೇಶದಲ್ಲಿ ಮತ್ತೆ ಕೊರೊನಾ ನಾಲ್ಕನೇ ಭೀತಿ ಶುರುವಾಗಿದ್ದು, ಈಗಾಗಲೇ ದೆಹಲಿ, ಉತ್ತರ ಪ್ರದೇಶ, ಕೇರಳದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಕರ್ನಾಟಕದಲ್ಲೂ ಕೊರೊನಾ ನಾಲ್ಕನೇ ಅಲೆ ಬರಬಹುದು ಎಂಬ ಭೀತಿ ಇರುವುದರಿಂದ ಪೋಷಕರು ಮಕ್ಕಳನ್ನ ಶಾಲೆಗೆ ಸೇರಿಸಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ಖಾಸಗಿ ಶಾಲೆಗಳಿಗೆ ಭಾರಿ ಹೊಡೆತ ಬಿದ್ದಿದ್ದು, ಮುಂಬರುವ ಶೈಕ್ಷಣಿಕ ವರ್ಷಕ್ಕೆ ಮಕ್ಕಳನ್ನ ದಾಖಲಿಸಿಕೊಳ್ಳಲು ಖಾಸಗಿ ಶಾಲೆಗಳು ಹೆಣಗಾಡುತ್ತಿವೆ. ಸಾರ್ವಜನಿಕ ಶಿಕ್ಷಣ …

Read More »

ವೇಗವೂ ಇಲ್ಲ, ಸಮಯಪಾಲನೆಯೂ ಇಲ್ಲ…

ಭಾರತೀಯ ರೈಲ್ವೆಯು 15 ನಿಮಿಷಗಳ ಸಮಯ ಪಾಲನೆ ಮಾನದಂಡವನ್ನು ಹೊಂದಿದೆ. ಅಂದರೆ ರೈಲು ತನ್ನ ಗಮ್ಯ ಸ್ಥಳವನ್ನು ನಿಗದಿತ ಸಮಯಕ್ಕಿಂತ 15 ನಿಮಿಷ ವಿಳಂಬವಾಗಿ ತಲುಪಿದರೂ ಅದು ಸರಿಯಾದ ಸಮಯಕ್ಕೆ ಆಗಮಿಸಿದೆ ಎಂದು ಪರಿಗಣಿಸಲಾಗುತ್ತದೆ. ಹೀಗಿದ್ದರೂ ಕೇವಲ ಶೇ.69.23ರಷ್ಟು ರೈಲುಗಳು ಸಮಯಕ್ಕೆ ಸರಿಯಾಗಿ ತಮ್ಮ ಗಮ್ಯವನ್ನು ತಲುಪಿವೆ ಮತ್ತು ಈ ಪ್ರವೃತ್ತಿಯು ಕುಸಿಯುತ್ತಲೇ ಇದೆ. 2008-09ರಲ್ಲಿ ಸರಾಸರಿ ಸುಮಾರು ಶೇ.69ರಷ್ಟು ಎಕ್ಸ್‌ಪ್ರೆಸ್ ರೈಲುಗಳು ಸಮಯ ಪಾಲನೆಯನ್ನು ಹೊಂದಿದ್ದು,2013-14ರಲ್ಲಿ ಅದು ಶೇ.83ಕ್ಕೆ …

Read More »

ಬಿಜೆಪಿ ಅಭ್ಯರ್ಥಿ ಘೋಷಿಸಿಲ್ಲ: ಬಸವರಾಜ ಹೊರಟ್ಟಿ ಅವರು ಸ್ವತಃ ಘೋಷಿಸಿಕೊಂಡಿದ್ದಾರೆ.ಜೋಶಿ

ಹುಬ್ಬಳ್ಳಿ: ‘ವಿಧಾನ ಪರಿಷತ್‌ನ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಬಿಜೆಪಿಯಿಂದ ಅಧಿಕೃತ ಅಭ್ಯರ್ಥಿ ಘೋಷಿಸಿಲ್ಲ. ಪಕ್ಷವನ್ನು ಸೇರುವುದಾಗಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸ್ವತಃ ಘೋಷಿಸಿಕೊಂಡಿದ್ದಾರೆ. ಅವರ ಸೇರ್ಪಡೆ ಕುರಿತು ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯ ಘಟಕದ ಅಧ್ಯಕ್ಷರು ತೀರ್ಮಾನಿಸುತ್ತಾರೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಸೋಮವಾರ ಈ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಪಕ್ಷದೊಳಗೆ ನಡೆದ ಆಂತರಿಕ ಚರ್ಚೆಯ ಕುರಿತು …

Read More »

ವಿಧಾನಸಭಾ ಚುನಾವಣೆಗೆ 50 ಸ್ವಾಮೀಜಿಗಳು ಸ್ಪರ್ಧಿಸಲಿದ್ದೇವೆ: ಶ್ರೀ ಬ್ರಹ್ಮಾನಂದ ಸರಸ್ವತಿ

ಭಟ್ಕಳ: ರಾಜಕೀಯ ಕ್ಷೇತ್ರ ಸಂಪೂರ್ಣ ಹಾಳಾಗಿದ್ದು ರಾಜ್ಯಾಂಗದ ವ್ಯವಸ್ಥೆಯೇ ದಿಕ್ಕು ತಪ್ಪಿದೆ, ರಾಜ್ಯಾಂಗದಲ್ಲಿ ಸಮಗ್ರ ಬದಲಾವಣೆ ತರಲು ಮುಂದಿನ ಕರ್ನಾಟಕ ವಿಧಾನ ಸಭಾ ಚುನಾವಣೆಗೆ ನಾನೂ ಸೇರಿದಂತೆ 50 ಸ್ವಾಮೀಜಿಗಳು ಸ್ಪರ್ಧಿಸಲಿದ್ದೇವೆ ಎಂದು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಹೇಳಿದ್ದಾರೆ.   ಶಿರಾಲಿಯ ಹಳೇಕೋಟೆ ಹನುಮಂತ ದೇವಸ್ಥಾನದ ಶಿಲಾಮಯ ದೇಗುಲ ಸಮರ್ಪಣೆ, ಶ್ರೀ ದೇವರ ಪುನರ್ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ಏರ್ಪಡಿಸಲಾಗಿದ್ದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ಇಂದು ಶಾಸಕನಾಗುವವನ್ಜು ತಾನೆಷ್ಟು …

Read More »