Breaking News
Home / ರಾಜಕೀಯ (page 1804)

ರಾಜಕೀಯ

ನಗರದ ಪ್ರತಿ ಗಲ್ಲಿಯ ಜನರ ಮನೆ ಬಾಗಿಲಿಗೆ ಹಣ್ಣು, ತರಕಾರಿ ಮಾರಾಟ ವಾಹನಗಳು ಸಿದ್ಧವಾಗಿವೆ

ಬೆಳಗಾವಿ: ನಗರದ ಪ್ರತಿ ಗಲ್ಲಿಯ ಜನರ ಮನೆ ಬಾಗಿಲಿಗೆ ಹಣ್ಣು, ತರಕಾರಿ ಮಾರಾಟ ಮಾಡುವ ವ್ಯವಸ್ಥೆಯನ್ನು ಜಿಲ್ಲಾಡಳಿತ ಹಾಗೂ ತೋಟಗಾರಿಕೆ ಇಲಾಖೆ ಮಾಡಲಾಗಿದ್ದು, ತಮ್ಮ ಕೆಲಸ ನಿರ್ವಹಿಸಲು ವಾಹನಗಳು ಸಿದ್ಧವಾಗಿವೆ. ಕೊರೊನಾ ವೈರಸ್ ಸೋಂಕು ಹರಡದಂತೆ ಮುಂಜಾಗೃತ ಕ್ರಮವಾಗಿ ಸರ್ಕಾರ ಲಾಕ್ ಡೌನ್ ಘೋಷಿಸುವ ಮೂಲಕ ಎಲ್ಲ ಕ್ರಮಗಳನ್ನು ಕೈಗೊಂಡಿದೆ. ಆದರೆ ಸಾರ್ವಜನಿಕರು ಸಹ ಅಗತ್ಯ ಸಾಮಗ್ರಿಗಳ ಖರೀದಿ ನೆಪದಲ್ಲಿ ಸಂಚರಿಸುವ ಮೂಲಕ ನಿಯಮಗಳನ್ನು ಉಲ್ಲಂಘನೆ ಮಾಡುತ್ತಿದ್ದಾರೆ. ಇದ್ದರಿಂದ ಜಿಲ್ಲಾಡಳಿತ …

Read More »

199 ದೇಶಗಳ 5.31 ಲಕ್ಷ ಜನರಿಗೆ ಕೊರೊನಾ- ಅಮೆರಿಕದಲ್ಲೇ ಹೆಚ್ಚು

ನವದೆಹಲಿ: ಮಹಾಮಾರಿ ಕೊರೊನಾ ವೈರಸ್ ವಿಶ್ವದಲ್ಲಿ 199 ದೇಶಗಳಿಗೆ ಹಬ್ಬಿದ್ದು, 5.31 ಲಕ್ಷ ಜನರಿಗೆ ಸೋಂಕು ತಗುಲಿದೆ. ಹೆಮ್ಮಾರಿ ಕೊರೊನಾ ವೈರಸ್‍ಗೆ ಈವರೆಗೂ 24 ಸಾವಿರ ಜನ ಬಲಿಯಾಗಿದ್ದಾರೆ. ಕೊರಾನಾ ವೈರಸ್‍ಗೆ ಸ್ಪೇನ್‍ನಲ್ಲಿ ಒಂದೇ ದಿನಕ್ಕೆ 718 ಮಂದಿ ಮೃತಪಟ್ಟಿದ್ದು, ಇಟಲಿಯಲ್ಲಿ 712 ಮಂದಿ ಆಹುತಿಯಾಗಿದ್ದಾರೆ. ಫ್ರಾನ್ಸ್‌ನಲ್ಲಿ  365 ಜನ, ಇಂಗ್ಲೆಂಡ್‍ನಲ್ಲಿ 110 ಮಂದಿ ಕೊರೊನಾ ಸಾವು ಸಂಭವಿಸಿದೆ. ಅಮೆರಿಕದಲ್ಲಿ ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಈ ಮೂಲಕ …

Read More »

ಕೊರೊನಾ ಭೀತಿಗೆ ಗ್ರಾಮಕ್ಕೆ ಬಂದ ನೆಂಟರನ್ನೇ ವಾಪಸ್ ಕಳಿಸಿದ್ರು

ಚಿಕ್ಕಮಗಳೂರು: ಜಗತ್ತಿನಾದ್ಯಂತ ದಿನದಿಂದ ದಿನಕ್ಕೆ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಸೋಂಕಿನ ಭೀತಿಗೆ ಜನ ಮನೆಯಿಂದ ಹೊರಬರೋದಕ್ಕೆ ಹಿಂದೇಟು ಹಾಕ್ತಿದ್ದಾರೆ. ಈಗಾಗಲೇ ಕೆಎಫ್‍ಡಿ ಭಯದಿಂದ ಕಂಗಲಾಗಿರೋ ಮಲೆನಾಡಿಗರಲ್ಲಿ ಮಹಾಮಾರಿ ಕೊರೊನಾ ಮತ್ತಷ್ಟು ಆತಂಕ ಸೃಷ್ಟಿಸಿದೆ. ಹೀಗಿರುವಾಗ ಹಳ್ಳಿ ಬಿಟ್ಟು ವರ್ಷವಾಗಿದ್ದ ಜನ ಕೊರೊನಾ ವೈರಸ್‍ಗೆ ಹೆದರಿ ಮತ್ತೆ ಹಳ್ಳಿಗಳತ್ತ ಮುಖ ಮಾಡ್ತಿದ್ದಾರೆ. ಆದ್ದರಿಂದ ಮಲೆನಾಡಿಗರು ಅವರಿಗೆಲ್ಲಾ ಬರಬೇಡಿ ಅಲ್ಲೇ ಇರಿ ಎಂದು ಮನವಿ ಕೂಡ ಮಾಡಿಕೊಂಡಿದ್ದಾರೆ. ಜಿಲ್ಲೆಯ ಶೃಂಗೇರಿ …

Read More »

ಕೊರೊನಾ ಎಮರ್ಜೆನ್ಸಿಗೆ ಮೂರು ತಿಂಗಳ ಸಂಬಳ ನೀಡಿದ ಯತ್ನಾಳ್

ವಿಜಯಪುರ: ಕೊರೊನಾ ಎಮರ್ಜೆನ್ಸಿ ಹಿನ್ನೆಲೆ ಜನರ ಸಂಕಷ್ಟಕ್ಕೆ ಸಹಯ ಮಾಡಲು ರಾಜ್ಯ ಸರ್ಕಾರದ ಮನವಿ ಮಾಡಿದೆ. ಪ್ರಕೃತಿ ವಿಕೋಪ ನಿಧಿಗೆ ಧನ ಸಹಾಯ ಮಾಡಲು ಸೂಚಿಸಿದೆ. ಇದಕ್ಕೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪಂದಿಸಿದ್ದಾರೆ. ಕೊರೊನಾ ಎಮರ್ಜೆನ್ಸಿಗೆ ತಮ್ಮ ತಿಂಗಳ ವೇತನವನ್ನ ಸರ್ಕಾರಕ್ಕೆ ನೀಡಲು ಯತ್ನಾಳ್ ನಿರ್ಧರಿಸಿದ್ದಾರೆ. ತಮ್ಮ ಮೂರು ತಿಂಗಳ ವೇತನವನ್ನ ಪ್ರಕೃತಿ ವಿಕೋಪ ನಿಧಿಗೆ ಪಡೆಯುವಂತೆ ಸಿಎಂ ಯಡಿಯೂರಪ್ಪ ಅವರಿಗೆ ಯತ್ನಾಳ್ ಪತ್ರ ಬರೆದಿದ್ದಾರೆ. …

Read More »

ಶುಕ್ರವಾರದಿಂದ ಮಣಿಪಾಲ ಕೆಎಂಸಿ ಬಂದ್ – ಒಪಿಡಿ ಸೇವೆ ಸ್ಥಗಿತ

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಬಂದ ವ್ಯಕ್ತಿಯನ್ನು ಮಣಿಪಾಲ ಕೆಎಂಸಿಗೆ ಶಿಫ್ಟ್ ಮಾಡಲಾಗಿದೆ. ಅಜ್ಜರಕಾಡು ಜಿಲ್ಲಾ ಸರ್ಕಾರಿ ಆಸ್ಪತ್ರೆಯಿಂದ ಸೋಂಕಿತನನ್ನು ಕೆಎಂಸಿಗೆ ರವಾನಿಸಿದ್ದು, ಕೆಎಂಸಿ ತನ್ನ ಎಲ್ಲಾ ಒಪಿಡಿ ಸೇವೆಯನ್ನು ಸ್ಥಗಿತಗೊಳಿಸಿದೆ. ತುರ್ತು ಚಿಕಿತ್ಸೆ ಮಾತ್ರ ಮಣಿಪಾಲ ಕಸ್ತೂರ್ಬಾ ಮೆಡಿಕಲ್ ಕಾಲೇಜಿನಲ್ಲಿ ಸಿಗಲಿದೆ ಎಂದು ವೈದ್ಯಕೀಯ ಅಧೀಕ್ಷಕರು ಪ್ರಕಟಣೆ ಹೊರಡಿಸಿದ್ದಾರೆ. ಕಿಮೋಥೆರಪಿ ಮತ್ತು ರೇಡಿಯೋ ತೆರಪಿ ಮಾಡಿಸಿಕೊಳ್ಳುವ ರೋಗಿಗಳು ಕೆಎಂಸಿಗೆ ಯಾವುದೇ ಕಾರಣಕ್ಕೆ ಕಾಲಿಡಬಾರದು. ಅವರು ನೇರವಾಗಿ ಶಿರಡಿ ಸಾಯಿಬಾಬಾ …

Read More »

ಏನು ಮಾಡ್ತೀರೋ ಗೊತ್ತಿಲ್ಲ…. ಒಂದೇ ಒಂದು ಕಾಲು ಹೊರಗೆ ಕಾಣಬಾರದು….” :ಡಿಸಿಪಿ ಸೀಮಾ ಲಾಟ್ಕರ್

ಲಾಕ್ ಡೌನ್ ಘೋಷಣೆಯಾದರೂ ಬೆಳಗಾವಿಯಲ್ಲಿ ಜನರು ರಸ್ತೆ ಮೇಲೆ ಅಡ್ಡಾಡುತ್ತಿರುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗರಂ ಆಗಿರುವ ಹಿನ್ನೆಲೆಯಲ್ಲಿ ಪೊಲೀಸರು ತೀವ್ರ ತಲೆ ಕೆಡಿಸಿಕೊಂಡಿದ್ದಾರೆ. “ನಾವು ಕೆಲಸ ಮಾಡಿದರೂ ಹೇಳಿಸಿಕೊಳ್ಳಬೇಕಾಗಿದೆ… ಏನು ಮಾಡ್ತೀರೋ ಗೊತ್ತಿಲ್ಲ…. ನಾಳೆಯಿಂದ ಒಂದೇ ಒಂದು ಕಾಲು ಹೊರಗೆ ಕಾಣಬಾರದು….” ಎಂದು ಹಿರಿಯ ಅಧಿಕಾರಿಗಳು ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ಬೆಳಗಾವಿ ಮತ್ತು ಕಲಬುರ್ಗಿಯಲ್ಲಿ ಸರಿಯಾಗಿ ಲಾಕ್ ಡೌನ್ ಆಗುತ್ತಿಲ್ಲ ಎಂದು ಯಡಿಯೂರಪ್ಪ ಗುರುವಾರ ಸಂಜೆ ವೀಡಿಯೋ ಕಾನ್ಫರೆನ್ಸ್ …

Read More »

ಕೇಂದ್ರ ಸರ್ಕಾರ ಪ್ರಕಟಿಸಿರುವ ಯೋಜನೆಗಳನ್ನು ಸ್ವಾಗತಿಸುತ್ತೇನೆ.: ಸಿದ್ಧರಾಮಯ್

ಬೆಂಗಳೂರು: ಕೊರೊನಾ ಸೋಂಕಿನ‌ ಭೀತಿಯ ಹಿನ್ನೆಲೆಯಲ್ಲಿ ವಿಳಂಬವಾಗಿಯಾದರೂ, ದೇಶದ ಬಡವರು, ರೈತರು ಮತ್ತು ಕೂಲಿಕಾರ್ಮಿಕರಿಗೆ ನೆರವಾಗಲು ಕೇಂದ್ರ ಸರ್ಕಾರ ಪ್ರಕಟಿಸಿರುವ ಯೋಜನೆಗಳನ್ನು ಸ್ವಾಗತಿಸುತ್ತೇನೆ. ಈ ಪ್ಯಾಕೇಜ್  ‘Too little, Too Late’ ಎನ್ನುವ ಹಾಗಾಗಿದೆ ಎಂದು ವಿರೋಧ ಪಕ್ಷದ ‌ನಾಯಕ‌ ಸಿದ್ಧರಾಮಯ್ಯ ಮಾದ್ಯಮ ಪ್ರಕಟಣೆ ಬಿಡುಗಡೆಗೊಳಿಸಿ ಹೇಳಿದ್ದಾರೆ.: ದೇಶದಲ್ಲಿ ಮೊದಲ ಕೊರೊನಾ ವೈರಸ್ ಪ್ರಕರಣ ಪತ್ತೆಯಾದುದ್ದು ಜನವರಿ ಕೊನೆ ವಾರದಲ್ಲಿ. ಕೊರೊನಾದಿಂದ ಗಂಭೀರ ಸ್ಥಿತಿ ನಿರ್ಮಾಣವಾಗಲಿದೆ, ಸರಕಾರ ನಿರ್ಲಕ್ಷ್ಯ ಮಾಡುತ್ತಿದೆ …

Read More »

ಳಗ್ಗೆ  6 ಗಂಟೆಯಿಂದ 9 ಗಂಟೆವರೆಗೆ ಮತ್ತು ಸಂಜೆ 4 ಗಂಟೆಯಿಂದ 7 ಗಂಟೆವರೆಗೆ ಹಣ್ಣು ಮತ್ತು ತರಕಾರಿ ಮಾರುವವರು ಜನರ ಮನೆ ಹತ್ತಿರವೇ ಬರುತ್ತಾರೆ.

ಚಿಕ್ಕೋಡಿ :  ಪಟ್ಟಣದ  23 ವಾರ್ಡುಗಳಿಗೆ ದೈನಂದಿನ ಅವಶ್ಯಕ ತರಕಾರಿ, ಹಣ್ಣು ಮತ್ತು ದಿನಸಿ ವಸ್ತುಗಳನ್ನು  ಜನರ ಮನೆ ಬಾಗೀಲಿಗೆ ತೆಗೆದುಕೊಂಡು ಹೋಗಿ ಮಾರಾಟ ಮಾಡುವ ವ್ಯವಸ್ಥೆ ಮಾಡಲಾಗಿದೆ.  ಅನಾವಶ್ಯಕವಾಗಿ ಮನೆಯಿಂದ ಯಾರು ಹೊರಗೆ ಬರಬಾರದು ಎಂದು ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗನ್ನವರ ಮನವಿ ಮಾಡಿದ್ದಾರೆ. ಪ್ರತಿ ದಿನ ಬೆಳಗ್ಗೆ  6 ಗಂಟೆಯಿಂದ 9 ಗಂಟೆವರೆಗೆ ಮತ್ತು ಸಂಜೆ 4 ಗಂಟೆಯಿಂದ 7 ಗಂಟೆವರೆಗೆ ಹಣ್ಣು ಮತ್ತು ತರಕಾರಿ ಮಾರುವವರು ಜನರ …

Read More »

ಬೆಳಗಾವಿ : ಗಂಟಲು ಮಾದರಿ ತಪಾಸಣಾ ಪ್ರಯೋಗಾಲಯ ಸ್ಥಾಪನೆ: ಜಗದೀಶ್ ಶೆಟ್ಟರ್

ಬೆಳಗಾವಿ : ಗಂಟಲು ಮಾದರಿ ತಪಾಸಣಾ ಪ್ರಯೋಗಾಲಯ ಸ್ಥಾಪನೆ ಕುರಿತು ವೈದ್ಯಕೀಯ ಸಚಿವ ಸುಧಾಕರ್ ಜತೆ ಚರ್ಚಿಸಲಾಗಿದೆ. ಶೀಘ್ರದಲ್ಲಿ ಸ್ಥಾಪಿಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ   ತಿಳಿಸಿದರು. ಇಲ್ಲಿನ ಪ್ರವಾಸಿಮಂದಿರದಲ್ಲಿ ಗುರುವಾರ ಕೊರೊನಾ ನಿಯಂತ್ರಣ ಕುರಿತು ನಡೆದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತರಕಾರಿ ಮತ್ತು ದಿನಸಿ ಸಾಮಗ್ರಿಗಳನ್ನು ಜನರಿಗೆ ಸರಿಯಾಗಿ ತಲುಪಿಸಿದರೆ ಜನಸಂದಣಿ ನಿಯಂತ್ರಣ ಸೇರಿದಂತೆ ಅನೇಕ ಸಮಸ್ಯೆಗಳನ್ನು ನಿವಾರಿಸಬಹುದು. ಈ …

Read More »

ನಿಮ್ಮ ಜೀವ ಉಳಿಸಿಕೊಳ್ಳಲು ಏಪ್ರೀಲ್ 14ರ ವರೆಗೆ ಮನೆಯಿಂದ ಆಚೆ ಬರಬೇಡಿ.:ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ನಿಮ್ಮ ಜೀವ ಉಳಿಸಿಕೊಳ್ಳಲು ಏಪ್ರೀಲ್ 14ರ ವರೆಗೆ ಮನೆಯಿಂದ ಆಚೆ ಬರಬೇಡಿ. ಮನೆಯಲ್ಲಿಯೇ ಉಳಿದುಕೊಂಡು ಕೊರೋನಾ ವೈರಸ್ ತಡೆಗಟ್ಟಲು ಸರ್ಕಾರದೊಂದಿಗೆ ಕೈ ಜೋಡಿಸಿ ಎಂದು ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಗುರುವಾರ ಸಂಜೆ ಪತ್ರಿಕಾ ಪ್ರಕಟನೆ ನೀಡಿರುವ ಅವರು, ಮಹಾಮಾರಿ ಕೊರೋನಾ ಸೋಂಕಿನಿಂದ ದೇಶವನ್ನು ರಕ್ಷಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಹತ್ವದ ನಿರ್ಧಾರಗಳನ್ನು ಕೈಗೊಂಡಿವೆ. ಅವುಗಳನ್ನು …

Read More »