Breaking News
Home / ರಾಜಕೀಯ (page 1826)

ರಾಜಕೀಯ

ರಾಜ್ಯದ 100 ಬರಪೀಡಿತ ತಾಲೂಕುಗಳಲ್ಲಿ ಬರ ನಿಯಂತ್ರಣ ಜಲಾನಯನ ಅಭಿವೃದ್ಧಿ ಹೊಸ ಯೋಜನೆ

ಬೆಂಗಳೂರು, ಫೆ.17-ರಾಜ್ಯದಲ್ಲಿ ಹೆಚ್ಚುತ್ತಿರುವ ಬರಗಾಲವನ್ನು ತಗ್ಗಿಸಿ ಅಂತರ್ಜಲವನ್ನು ವೃದ್ಧಿಸುವ ನಿಟ್ಟಿನಲ್ಲಿ ರಾಜ್ಯದ 100 ಬರಪೀಡಿತ ತಾಲೂಕುಗಳಲ್ಲಿ ಬರ ನಿಯಂತ್ರಣ ಜಲಾನಯನ ಅಭಿವೃದ್ಧಿ ಹೊಸ ಯೋಜನೆಯನ್ನು ಜಾರಿ ಮಾಡಲಾಗುವುದು ಎಂದು ರಾಜ್ಯಪಾಲ ವಿ.ಆರ್.ವಾಲಾ ಘೋಷಿಸಿದರು. ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ಅವರು,ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಹಾಗೂ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯನ್ನು ಸಂಯೋಜನೆಗೊಳಿಸಿ 100 ಬರಪೀಡಿತ ತಾಲೂಕುಗಳಲ್ಲಿ ಬರ ನಿಯಂತ್ರಣ ಜಲಾನಯನ ಅಭಿವೃದ್ಧಿ ಯೋಜನೆಯನ್ನು …

Read More »

ವಿಧಾನಸಭೆಯಿಂದ ವಿಧಾನಪರಿಷತ್‍ಗೆ ಇಂದುನಡೆದ ಒಂದು ಸ್ಥಾನದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ

ಬೆಂಗಳೂರು, ಫೆ.17- ವಿಧಾನಸಭೆಯಿಂದ ವಿಧಾನಪರಿಷತ್‍ಗೆ ಇಂದುನಡೆದ ಒಂದು ಸ್ಥಾನದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅನಿಲ್‍ಕುಮಾರ್ ಈಗಾಗಲೇ ಸ್ಪರ್ಧೆಯಿಂದ ನಿವೃತ್ತಿಯಾಗುವುದಾಗಿ ಘೋಷಿಸಿದ್ದರು. ಹೀಗಾಗಿ ಇಂದು ಕೇವಲ ನಾಮಕಾವಸ್ಥೆಗೆ ಚುನಾವಣೆ ನಡೆದಿದ್ದು, ಲಕ್ಷ್ಮಣ್ ಸವದಿ ಬಹುತೇಕ ಆಯ್ಕೆಯಾಗುವುದು ನೂರಕ್ಕೆ ನೂರರಷ್ಟು ಖಚಿತವಾಗಿದೆ. ಬೆಳಗ್ಗೆ 8.30ಕ್ಕೆ ವಿಧಾನಸೌಧದ ಮೊದಲ ಮಹಡಿಯ ಕೊಠಡಿ 106 ರಲ್ಲಿ ನಡೆದ ಮತದಾನದಲ್ಲಿಬಿಜೆಪಿಯ ಎಲ್ಲಾ ಸಚಿವರು, …

Read More »

ಸ್ವಚ್ಛತೆ ಕಾಪಾಡದಿದ್ದರೆ ಒದ್ದು ಬಿಹಾರಕ್ಕೆ ಓಡಿಸುತ್ತೇನೆ :ಶಾಸಕ ಉಮೇಶ್ ಕತ್ತಿ ತರಾಟೆ

ಚಿಕ್ಕೋಡಿ: ಸ್ವಚ್ಛತೆ ಕಾಪಾಡದಿದ್ದರೆ ಒದ್ದು ಬಿಹಾರಕ್ಕೆ ಓಡಿಸುತ್ತೇನೆ ಎಂದು ಸ್ವಚ್ಛತಾ ನೌಕರರನ್ನು ಹುಕ್ಕೇರಿ ಶಾಸಕ ಉಮೇಶ್ ಕತ್ತಿ ತರಾಟೆಗೆ ತೆಗೆದುಕೊಂಡಿದ್ದರು. ಬೆಳಗಾವಿ ಜಿಲ್ಲೆ ಹುಕ್ಕೇರಿ ಬಸ್ ನಿಲ್ದಾಣಕ್ಕೆ ಶಾಸಕ ಉಮೇಶ್ ಕತ್ತಿ ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಸ್ ನಿಲ್ದಾಣದ ವ್ಯವಸ್ಥೆ ನೋಡಿ ಗರಂ ಆದ ಶಾಸಕ ಕತ್ತಿ ಅಧಿಕಾರಿಗಳನ್ನ ಹಾಗೂ ಸ್ವಚ್ಛತೆ ಮಾಡುತ್ತಿದ್ದ ಕಾರ್ಮಿಕರನ್ನ ತರಾಟೆಗೆ ತೆಗೆದುಕೊಂಡರು ಸ್ವಚ್ಛತೆ ಕಾಪಾಡದಿದ್ದರೆ ಒದ್ದು ಬಿಹಾರಕ್ಕೆ ಓಡಿಸುತ್ತೇನೆ ಎಂದು ಸ್ವಚ್ಛತಾ ನೌಕರನನ್ನ …

Read More »

ಪಾಕಿಸ್ತಾನ್ ಜಿಂದಾಬಾದ್ ಎಂದು ಪಾಕಿಸ್ತಾನದ ಸೇನೆಯ ಹಾಡಿಗೆ ಪಾಕ್ ಪರ ಘೋಷಣೆ ಕೂಗಿದ ಮೂವರು ಆರೋಪಿಗಳನ್ನು ಹುಬ್ಬಳ್ಳಿ ಪೊಲೀಸರು ಕೊನೆಗೂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.

ಹುಬ್ಬಳ್ಳಿ:ಪಾಕಿಸ್ತಾನ್ ಜಿಂದಾಬಾದ್ ಎಂದು ಪಾಕಿಸ್ತಾನದ ಸೇನೆಯ ಹಾಡಿಗೆ ಪಾಕ್ ಪರ ಘೋಷಣೆ ಕೂಗಿದ ಮೂವರು ಆರೋಪಿಗಳನ್ನು ಹುಬ್ಬಳ್ಳಿ ಪೊಲೀಸರು ಕೊನೆಗೂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಮೂರನೇ ಜೆಎಂಎಫ್‍ಸಿ ನ್ಯಾಯಾಧೀಶರ ಮುಂದೆ ಹಾಜರಾದ ಮೂವರು ಆರೋಪಿಗಳಿಗೆ ಮಾರ್ಚ್ 2ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪಾಕ್ ಪರ ಘೋಷಣೆ ಕೂಗಿದ ವಿದ್ಯಾರ್ಥಿಗಳನ್ನು ಭಾನುವಾರ ಪೊಲೀಸರು ಸಿಆರ್ ಪಿ 169 ಬಾಂಡ್ ಮೇಲೆ ಬಿಡುಗಡೆ ಮಾಡಿದರು. ತದನಂತರ ಹಿಂದೂಪರ ಸಂಘಟನೆಗಳು ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ …

Read More »

ಇಂದಿನಿಂದ ವಿಧಾನಮಂಡಲ ಜಂಟಿ ಅಧಿವೇಶನ ವಿಧಾನಸೌಧದ ಸುತ್ತಮುತ್ತ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿ

ಬೆಂಗಳೂರು: ಇಂದಿನಿಂದ ವಿಧಾನಮಂಡಲ ಜಂಟಿ ಅಧಿವೇಶನ ಆರಂಭವಾಗಿದ್ದು, ಈ ಹಿನ್ನಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಅಧಿವೇಶನ ನಡೆಯಲಿದ್ದು, ಕೆಲ ಸಂಘಟನೆಗಳು ಅಧಿವೇಶನ ಸಮಯದಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಸಾಧ್ಯತೆಗಳಿವೆ ಎಂದು ಗುಪ್ತಚರ ಇಲಾಖೆ ಮತ್ತು ಪೊಲೀಸ್ ಮೂಲಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ …

Read More »

ವಿಧಾನಮಂಡಲದ ಅಧಿವೇಶನದಲ್ಲಿ ರಾಜ್ಯಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಭಾರೀ ತಯಾರಿ

ಬೆಂಗಳೂರು, ಫೆ.17-ವಿಧಾನಮಂಡಲದ ಅಧಿವೇಶನದಲ್ಲಿ ರಾಜ್ಯಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಭಾರೀ ತಯಾರಿ ನಡೆಸಿರುವ ಕಾಂಗ್ರೆಸ್ ನಾಳೆ ಮತ್ತೊಮ್ಮೆ ಶಾಸಕಾಂಗ ಸಭೆಯನ್ನು ಕರೆದಿದೆ. ಈ ಅಧಿವೇಶನದ ವೇಳೆ ಒಟ್ಟು ಮೂರು ಶಾಸಕಾಂಗ ಸಭೆಗಳು ನಡೆದಂತಾಗುತ್ತದೆ.ವಿಧಾನಮಂಡಲ ಅಧಿವೇಶನಕ್ಕೂ ಮುನ್ನ ನಿನ್ನೆ ಸಂಜೆ ಖಾಸಗಿ ಹೊಟೇಲ್‍ನಲ್ಲಿ ಶಾಸಕಾಂಗ ಸಭೆ ನಡೆಸಲಾಯಿತು.ಇಂದು ಬೆಳಗ್ಗೆ ಮತ್ತೊಮ್ಮೆ ಸಭೆ ಸೇರಿ ಒಟ್ಟಾಗಿ ಅಧಿವೇಶನಕ್ಕೆ ತೆರಳಿದರು. ರಾಜ್ಯಪಾಲರ ಭಾಷಣದಲ್ಲಿ ಪೌರತ್ವ ತಿದ್ದುಪಡಿ ವಿಷಯ ಕುರಿತಂತೆ ಪ್ರಸ್ತಾಪವಾದರೆ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ. …

Read More »

ವಿರೋಧ ಪಕ್ಷವಾಗಿರುವ ಕಾಂಗ್ರೆಸ್ ಮತದಾನದಿಂದ ಕಾಂಗ್ರೆಸ್-ಜೆಡಿಎಸ್ ದೂರ ಉಳಿಯುವುದಾಗಿ ಹೇಳಿದೆ :ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಫೆ.17- ವಿಧಾನಸಭೆಯಿಂದ ವಿಧಾನಪರಿಷತ್‍ನ ಒಂದು ಸ್ಥಾನದ ಉಪ ಚುನಾವಣೆಗೆ ಇಂದು ನಡೆಯುತ್ತಿರುವ ಮತದಾನದಲ್ಲಿ ಭಾಗವಹಿಸದಿರಲು ತೀರ್ಮಾನಿಸಲಾಗಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷವಾಗಿರುವ ಕಾಂಗ್ರೆಸ್ ಮತದಾನದಿಂದ ದೂರ ಉಳಿಯುವುದಾಗಿ ಹೇಳಿದೆ. ಅಲ್ಲದೆ, ಕಾಂಗ್ರೆಸ್-ಜೆಡಿಎಸ್ ಬೆಂಬಲದ ನಿರೀಕ್ಷೆಯಲ್ಲಿ ಸ್ಪರ್ಧೆಗಿಳಿದಿದ್ದ ಪಕ್ಷೇತರ ಅಭ್ಯರ್ಥಿ ಬಿ.ಆರ್.ಅನಿಲ್‍ಕುಮಾರ್ ಈಗಾಗಲೇ ಕಣದಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ …

Read More »

ಸತೀಶ ಜಾರಕಿಹೊಳಿ  ಅವರಿಗೆ ಮುಖ್ಯಮಂತ್ರಿ ಆಗುವ ಯೋಗವಿದೆ ಸಚಿವ ರಮೇಶ ಜಾರಕಿಹೊಳಿ ಹೇಳಿಕೆಗೆ ಮಾಜಿ ಸಚಿವ, ಶಾಸಕ  ಸತೀಶ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.

ಬೆಳಗಾವಿ:  ಸತೀಶ ಜಾರಕಿಹೊಳಿ  ಅವರಿಗೆ ಮುಖ್ಯಮಂತ್ರಿ ಆಗುವ ಯೋಗವಿದೆ ಸಚಿವ ರಮೇಶ ಜಾರಕಿಹೊಳಿ ಹೇಳಿಕೆಗೆ ಮಾಜಿ ಸಚಿವ, ಶಾಸಕ  ಸತೀಶ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ನಿವಾಸದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಬೇರೊಂದು ಪಕ್ಷದಲ್ಲಿ ಇದ್ದುಕೊಂಡು ಅವರು ಸಿಎಂ ಆಗುತ್ತಾರೆ, ಇವರು ಸಿಎಂ ಆಗ್ತಾರೆ ಅಂತಾ ಹೇಳುವುದು ಸರಿಯಲ್ಲ.   ಬಿಜೆಪಿ ಹೈಕಮಾಂಡ್ ರಮೇಶ ಅವರಿಗೆ ಕಡಿವಾಣ ಹಾಕಲಿ ಎಂದಿದ್ದಾರೆ. ರಮೇಶ ಜಾರಕಿಹೊಳಿ ಅವರಿಗೆ ಜಲಸಂಪನ್ಮೂಲ ಖಾತೆ ನೀಡಿದ  ವಿಚಾರವಾಗಿ …

Read More »

ಗರದ ಆರ್ ಟಿಒ ಸರ್ಕಲ್ ಬಳಿ ಇರುವ ನೂತನ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಶಾಸಕ ಸತೀಶ ಜಾರಕಿಹೊಳಿ ಅವರು ಭೇಟಿ ನೀಡಿ

ಬೆಳಗಾವಿ: ನಗರದ ಆರ್ ಟಿಒ ಸರ್ಕಲ್ ಬಳಿ ಇರುವ ನೂತನ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಶಾಸಕ ಸತೀಶ ಜಾರಕಿಹೊಳಿ ಅವರು ಭೇಟಿ ನೀಡಿ ನವೀಕರಣಗೊಳಿಸಲಾಗುತ್ತಿರುವ ಕಾಮಗಾರಿ ಪರಿಶೀಲನೆ ನಡೆಸಿದರು. ಕಚೇರಿ ಕಾಮಗಾರಿಯನ್ನು ಆದಷ್ಟು ಬೇಗನೆ ಮುಗಿಸಿ ಪಕ್ಷದ ಮುಖಂಡರಿಗೆ, ಪದಾಧಿಕಾರಿಗಳಿಗೆ ಮತ್ತು ಕಾರ್ಯಕರ್ತರಿಗೆ ಅನುಕೂಲವಾಗುವಂತೆ ಎಲ್ಲ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕು ಎಂದು ಗುತ್ತಿಗೆದಾರರಿಗೆ ಸಲಹೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ, ಇಂಜಿನೀಯರ್ ಚಂದು ಮುನ್ನವಳ್ಳಿಮಠ, ಮಹೇಶ …

Read More »

ಬಜೆಟ್‍ನಲ್ಲಿ ಘೋಷಣೆ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಘೋಷಿಸದಿದ್ದರಿವೆ ವಿಷ ಕುಡಿದು ಆತ್ಮಹತ್ಯೆ”

ಬೆಂಗಳೂರು, ಫೆ.13- ಡಾ.ಸರೋಜಿನಿ ಮಹಿಷಿ ವರದಿಯ ಶಿಫಾರಸ್ಸಿನಂತೆ ಕನ್ನಡಿಗರಿಗೆ ಶೇ.85ರಷ್ಟು ಉದ್ಯೋಗ ನೀಡುವ ಮೀಸಲಾತಿ ಕಾಯ್ದೆಯನ್ನು ಬಜೆಟ್‍ನಲ್ಲಿ ಘೋಷಣೆ ಮಾಡದಿದ್ದರೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕನ್ನಡಪರ ಸಂಘಟನೆಗಳ ಮುಖಂಡರು ಬೆದರಿಕೆ ಹಾಕಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಇಂದು ಡಾಲರ್ಸ್ ಕಾಲೋನಿಯಲ್ಲಿ ಭೇಟಿ ಮಾಡಿದ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು, ಮುಂಬರುವ ಬಜೆಟ್‍ನಲ್ಲಿ ಕನ್ನಡಿಗರಿಗೆ ಶೇ.85ರಷ್ಟು ಉದ್ಯೋಗ ನೀಡುವ ಮೀಸಲಾತಿ ಕಾಯ್ದೆಯನ್ನು ಜಾರಿ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳಲು ಹಿಂದೆ-ಮುಂದೆ ನೋಡುವುದಿಲ್ಲ …

Read More »