Breaking News
Home / ರಾಜಕೀಯ (page 1847)

ರಾಜಕೀಯ

ಸಿದ್ದರಾಮಯ್ಯ ಸಾಹೇಬ್ರಿಗೆ ಏನ್ ಗೊತ್ತು, ಎಲ್ಲವನ್ನ ಕಾಮಾಲೆ ಕಣ್ಣಿನಲ್ಲಿ ನೋಡೋದು ಬಿಡಿ: ಸೋಮಣ್ಣ ಟಾಂಗ್

ಬೆಂಗಳೂರು: ಇಂದು ಭಾರತಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ವಸತಿ ಸಚಿವ ವಿ.ಸೋಮಣ್ಣ ಗೇಲಿ ಮಾಡಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ಅಗ್ರಹಾರ ಪಾಳ್ಯದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಭಾರತಕ್ಕೆ ಡೊನಾಲ್ಡ್ ಟ್ರಂಪ್ ಭೇಟಿಯಿಂದ ಯಾವುದೇ ಪ್ರಯೋಜನವಿಲ್ಲ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ತಿರುಗೇಟು ನೀಡಿದರು. ಈ ವಿಚಾರದಲ್ಲಿ ಸಿದ್ದರಾಮಯ್ಯ ಸಾಹೇಬ್ರಿಗೆ ಏನ್ ಗೊತ್ತು ಟ್ರಂಪ್ ಎಲ್ಲಿ, ಸಿದ್ದರಾಮಯ್ಯ ಎಲ್ಲಿ. ಅಮೆರಿಕ …

Read More »

ಮಾರ್ಚ್ ಮೊದಲ ವಾರದಲ್ಲಿ ಕೆಪಿಸಿಸಿ ಅಧ್ಯಕ್ಷರ ನೇಮಕವಾಗುವ ಸಾಧ್ಯತೆ ಇದೆ: ಮಾಜಿ ಸ್ಪೀಕರ್. ಕೆ.ಬಿ.ಕೋಳಿವಾಡ ಅಭಿಪ್ರಾಯ

ಬೆಂಗಳೂರು, ಫೆ.24-ಮಾರ್ಚ್ ಮೊದಲ ವಾರದಲ್ಲಿ ಕೆಪಿಸಿಸಿ ಅಧ್ಯಕ್ಷರ ನೇಮಕವಾಗುವ ಸಾಧ್ಯತೆ ಇದೆ. ಆದಷ್ಟು ಬೇಗ ನೇಮಕ ಮಾಡದಿದ್ದರೆ ಪಕ್ಷ ಸೊರಗಿ ಹೋಗುತ್ತದೆ ಎಂದು ಮಾಜಿ ಸ್ಪೀಕರ್. ಕೆ.ಬಿ.ಕೋಳಿವಾಡ ಅಭಿಪ್ರಾಯಪಟ್ಟಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧ್ಯಕ್ಷರ ನೇಮಕ ತಡ ಮಾಡಿದಷ್ಟು ಪಕ್ಷಕ್ಕೆ ಹಾನಿಕಾರಕ. ಹೈಕಮಾಂಡ್ ಗಮನಕ್ಕೂ ತರುವ ಪ್ರಯತ್ನ ನಾನು ಮಾಡುತ್ತೇನೆ. ಕೆಪಿಸಿಸಿ ಪದಾಧಿಕಾರಿಗಳ ನೇಮಕ ಕೂಡ ಆಗಬೇಕಾಗಿದೆ. ಹೈಕಮಾಂಡ್ ಬಳಿಯೂ ಸ್ವಲ್ಪ ಗೊಂದಲವಿದೆ. ಅಲ್ಲಿ ಎಐಸಿಸಿ ಅಧ್ಯಕ್ಷರು ಯಾರು ಆಗಬೇಕು …

Read More »

ಸಾಹುಕಾರ್‌ಗಾಗಿ ನಿಯಮವನ್ನೇ ಗಾಳಿಗೆ ತೂರಿದ ಸಿಎಂ ಬಿಎಸ್‍ವೈ?

ಬೆಂಗಳೂರು: ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೋಳಿಯವರಿಂದ ಬಿಜೆಪಿ ಸರ್ಕಾರ ಬಂತು ಅನ್ನೋದು ಎಲ್ಲರಿಗೂ ಗೊತ್ತಿರೋ ವಿಚಾರ. ಸರ್ಕಾರ ಬರಲು ಕಾರಣರಾದ 17 ಜನರ ಮೇಲೆ ಸಿಎಂ ಯಡಿಯೂರಪ್ಪ ಅತಿ ಹೆಚ್ಚು ಪ್ರೀತಿ ಇಟ್ಟುಕೊಂಡಿದ್ದಾರೆ. 17 ಜನರು ಏನೇ ಕೇಳಿದರೂ ತಕ್ಷಣ ಗ್ರೀನ್ ಸಿಗ್ನಲ್ ಕೊಟ್ಟು ಕೆಲಸ ಮಾಡಿಕೊಡ್ತಾರೆ. ಹೀಗೆ ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೋಳಿಯ ಒಂದು ಡಿಮ್ಯಾಂಡ್ ಪೂರೈಸಲು ಸಿಎಂ ಯಡಿಯೂರಪ್ಪ ನಿಯಮಗಳನ್ನೇ ಗಾಳಿಗೆ ತೂರಿದ್ದಾರೆ. ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೋಳಿ …

Read More »

ಬಾಲಿವುಡ್ ಸೂಪರ್ ಹಿಟ್ ಸಿನ್ಮಾ ನೆನಪು ಮಾಡ್ಕೊಂಡ ಟ್ರಂಪ್

ಅಹಮದಾಬಾದ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಭಾಷಣದಲ್ಲಿ ಬಾಲಿವುಡ್ ಸೂಪರ್ ಹಿಟ್ ಸಿನಿಮಾವನ್ನು ನೆನಪು ಮಾಡಿಕೊಂಡರು. ಮೊಟೆರಾದ ಸ್ಟೇಡಿಯಂಲ್ಲಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ ಡೊನಾಲ್ಡ್ ಹಲವು ವಿಚಾರಗಳನ್ನು ಪ್ರಸ್ತಾಪಿಸಿದರು. ದೇಶದ ಪ್ರತಿಯೊಂದು ಕ್ಷೇತ್ರಗಳ ಸಾಧನೆಯನ್ನು ತಿಳಿಸಿ ನಾನು ಭಾರತವನ್ನು ಪ್ರೀತಿಸುತ್ತೇನೆ. ಬಾಲಿವುಡ್ ಮತ್ತು ಹಾಲಿವುಡ್ ಹೊಸತನಕ್ಕೆ ಮಾದರಿಯಾಗಿವೆ. ಶಾರೂಖ್ ಖಾನ್ ಮತ್ತು ಕಾಜೋಲ್ ನಟನೆಯ ‘ದಿಲ್‍ವಾಲೇ ದುಲ್ಹನಿಯಾ ಲೇ ಜಾಯೇಂಗೆ’ (ಡಿಡಿಎಲ್‍ಜೆ) ಚಿತ್ರದ ಯಶಸ್ಸು ಭಾರತೀಯ ಸಿನಿಮಾ ಏನು …

Read More »

ಕರ್ನಾಟಕವನ್ನು ಥೈಲ್ಯಾಂಡ್ ಮಾಡಲು ಹೊರಟಿದ್ದಾರೆ: ಎಚ್.ಕೆ ಪಾಟೀಲ್

ಹುಬ್ಬಳ್ಳಿ: ಬಿಜೆಪಿಯ ನಾಯಕರು ಕ್ಯಾಸಿನೋ ಅಂತಹ ಜೂಜು ಅಡ್ಡೆಗಳನ್ನು ಕರ್ನಾಟಕದಲ್ಲಿ ಸ್ಥಾಪನೆ ಮಾಡುವ ಮೂಲಕ ಕರ್ನಾಟಕವನ್ನು ಥೈಲ್ಯಾಂಡ್ ಮಾಡಲು ಹೊರಟಿದ್ದಾರೆ. ಪ್ರವಾಸಿಗರನ್ನು ಆಕರ್ಷಿಸಲು ರಾಜ್ಯದ ಸಂಸ್ಕೃತಿಗೆ ಧಕ್ಕೆ ತರುತ್ತಿರುವುದು ಖಂಡನೀಯವಾಗಿದೆ ಎಂದು ಮಾಜಿ ಸಚಿವ ಎಚ್.ಕೆ ಪಾಟೀಲ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ವಿಧಾನಸಭಾ ಹಾಗೂ ವಿಧಾನ ಪರಿಷತ್ ಕಲಾಪ ಪೂರ್ಣಗೊಂಡ ಬೆನ್ನಲ್ಲೇ ಸಚಿವ ಸಿ.ಟಿ ರವಿ ಅವರು ಪ್ರವಾಸಿಗರನ್ನು ಆಕರ್ಷಿಸಲು ಜೂಜು ಅಡ್ಡೆ …

Read More »

ಸಬರಮತಿ ಆಶ್ರಮದಲ್ಲಿ ಗಾಂಧಿ ಚರಕದಿಂದ ನೂಲು ನೇಯ್ದ ಟ್ರಂಪ್ ದಂಪತಿ

ಅಹಮದಾಬಾದ್, ಫೆ.24- ಭಾರತ ಪ್ರವಾಸ ವೇಳೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಥಮ ಮಹಿಳೆ ಮಲೇನಿಯಾ ಟ್ರಂಪ್ ಅಹಮದಾಬಾದ್‍ನಲ್ಲಿರುವ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಸಬರ್‍ಮತಿ ಆಶ್ರಮಕ್ಕೆ ಭೇಟಿ ನೀಡಿದರು.ಮೋದಿಯವರೊಂದಿಗೆ ಇಂದು ಮಧ್ಯಾಹ್ನ ಆಶ್ರಮಕ್ಕೆ ತೆರಳಿದ ಟ್ರಂಪ್ ದಂಪತಿ ಬಾಪು ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು ಟ್ರಂಪ್ ದಂಪತಿಗಳಿಗೆ ಮಾರ್ಗದರ್ಶಕರಾಗಿದ್ದ ಟ್ರಂಪ್ ಆಶ್ರಮದ ಮಹತ್ವ ಮತ್ತು ಅಲ್ಲಿ ಗಾಂಧೀಜಿಯವರು ಬಳಸುತ್ತಿದ್ದ ವಸ್ತುಗಳ ಬಗ್ಗೆ ವಿವರಿಸಿದರು.ಆಶ್ರಮದಲ್ಲಿದ್ದ ಗಾಂಧೀಜಿ ಮತ್ತು …

Read More »

ರಾಷ್ಟ್ರಾಧ್ಯಕ್ಷ ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ಎರಡೂ ರಾಷ್ಟ್ರಗಳ ಗೆಳೆತನವನ್ನು ಮತ್ತಷ್ಟು ಗಟ್ಟಿಗೊಳಿಸುವುದಕ್ಕೆ ಮುನ್ನುಡಿ ಬರೆದಿದ್ದಾರೆ.

ಅಹಮದಾಬಾದ್, ಫೆ.24-ಉಭಯ ದೇಶಗಳಲ್ಲೂ ಭಾರೀ ಸಂಚಲನ ಸೃಷ್ಟಿಸಿರುವ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರ ಭಾರತ ಭೇಟಿಯಿಂದಾಗಿ ವಿಶ್ವದ ಎರಡು ಬೃಹತ್ ಪ್ರಜಾಪ್ರಭುತ್ವ ದೇಶಗಳ ಬಾಂಧವ್ಯ ಬಲವರ್ಧನೆಯಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ರಾಷ್ಟ್ರಾಧ್ಯಕ್ಷ ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ಎರಡೂ ರಾಷ್ಟ್ರಗಳ ಗೆಳೆತನವನ್ನು ಮತ್ತಷ್ಟು ಗಟ್ಟಿಗೊಳಿಸುವುದಕ್ಕೆ ಮುನ್ನುಡಿ ಬರೆದಿದ್ದಾರೆ. ಭವ್ಯ ಸ್ವಾಗತ : ವಾಷಿಂಗ್ಟನ್‍ನಿಂದ ಏರ್‍ಪೊರ್ಸ್ ಒನ್ ವಿಶೇಷ ವಿಮಾನದಲ್ಲಿ ಗುಜರಾತ್‍ನ ಅಹಮದಾಬಾದ್‍ನ ಸರ್ದಾರ್ ವಲ್ಲಭ್ ಭಾಯಿ ಪಟೇಲ್ …

Read More »

ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿ ಅಮೂಲ್ಯಾಗೆ ಹಿಂದೆ ನಕ್ಸಲ್ ಜೊತೆ ಸಂಬಂಧ:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಮೈಸೂರು: ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿ ಅಮೂಲ್ಯಾಗೆ ಹಿಂದೆ ನಕ್ಸಲ್ ಜೊತೆ ಸಂಬಂಧ ಇದ್ದಿದ್ದು ಸಾಬೀತಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಸಿಎಂ, ಮಗಳ ಕೈ-ಕಾಲು ಮುರಿಯಿರಿ. ಅವಳಿಗೆ ಜಾಮೀನು ಸಿಗಬಾರದು. ಮಗಳ ರಕ್ಷಣೆಗೆ ನಾವು ಹೋಗುವುದಿಲ್ಲ ಅಂತ ಅಮೂಲ್ಯಾ ತಂದೆ ಹೇಳಿದ್ದಾರೆ. ಬಹಳ ಮುಖ್ಯವಾಗಿ ಇದರ ಹಿಂದೆ ಇರುವ ಸಂಘಟನೆ ಯಾವುದು? ಯಾರು ಈ ರೀತಿ ಮನೋಭಾವ ಬೆಳೆಸುತ್ತಿದ್ದಾರೆ ಎನ್ನುವುದನ್ನು ತಿಳಿಯಬೇಕಿದೆ. ಜೊತೆಗೆ ಅವರ ಮೇಲೂ ಕ್ರಮ …

Read More »

ನೋಟು ಅಮಾನೀಕರಣದ ನಂತರ ದೇಶದಲ್ಲಿ ಭ್ರಷ್ಟಾಚಾರ ತಗ್ಗಿದ್ದು, ಕಪ್ಪ ಹಣದ ಬಳಕೆ ನಿಯಂತ್ರಣದಲ್ಲಿದೆ:ಸಚಿವ ಡಿ.ವಿ.ಸದಾನಂದಗೌಡ

ಬೆಂಗಳೂರು, ಫೆ.22- ನೋಟು ಅಮಾನೀಕರಣದ ನಂತರ ದೇಶದಲ್ಲಿ ಭ್ರಷ್ಟಾಚಾರ ತಗ್ಗಿದ್ದು, ಕಪ್ಪ ಹಣದ ಬಳಕೆ ನಿಯಂತ್ರಣದಲ್ಲಿದೆ ಎಂದು ಕೇಂದ್ರ ರಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ಹೇಳಿದರು. ನಗರದ ಎಫ್‍ಕೆಸಿಸಿಐನಲ್ಲಿ ಭಾರತ ವೆಚ್ಚ ಲೆಕ್ಕಿಗರ ಸಂಸ್ಥೆಯ ವಾರ್ಷಿಕೋತ್ಸವ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಐದು ಟ್ರಿಲಿಯನ್ ಆರ್ಥಿಕತೆಯ ಗುರಿಯೊಂದಿಗೆ ಮುನ್ನುಗ್ಗುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಆರ್ಥಿಕತೆಯ ಶಿಸ್ತು ತಹಬದಿಗೆ ಬರುತ್ತಿದೆ ಎಂದರು. 130 ಕೋಟಿ ಜನಸಂಖ್ಯೆ …

Read More »

ನಮ್ಮ ಪಾಲಿನ 14.3 ಟಿಎಂಸಿ ಮಹದಾಯಿ ನೀರು ಬಳಕೆಗೆ ಕ್ರಮ : ಸಿ.ಸಿ.ಪಾಟೀಲ್

ಗದಗ, ಫೆ.22- ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮತ್ತು ಗೋವಾ ಸರ್ಕಾರದ ಮನವೊಲಿಸುವಲ್ಲಿ ಕೇಂದ್ರ ಸರ್ಕಾರ ಹಾಗೂ ಅಮಿತ್ ಷಾ ಸಫಲರಾಗಿದ್ದಾರೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ.ಪಾಟೀಲ್ ಹೇಳಿದ್ದಾರೆ.  ಮಹದಾಯಿಗೆ ಸಂಬಂಧಿಸಿದಂತೆ ಗೆಜೆಟ್ ನೋಟಿಫಿಕೇಷನ್ ಹೊರಡಿಸಬೇಕೆಂದು ಸುಪ್ರೀಂಕೊರ್ಟ್ ನೀಡಿರುವ ಸೂಚನೆ ಹಿನ್ನೆಲೆಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನಮ್ಮ ಸರ್ಕಾರ ಸಹ ಈ ವಿಚಾರವನ್ನು ಕೇಂದ್ರದ ನಾಯಕರಿಗೆ ಮನವಿ ಮಾಡಿಕೊಟ್ಟಿತ್ತು. ಈಗ ಗೋವಾ ಮತ್ತು …

Read More »