Breaking News
Home / ರಾಜಕೀಯ (page 188)

ರಾಜಕೀಯ

ಹಿಂದೂ ಕಾರ್ಯಕರ್ತರ ನೆರವಿಗೆ ಬೆಂಗಳೂರಿನಲ್ಲಿ ಕಚೇರಿ ಆರಂಭ: ಯತ್ನಾಳ್

ವಿಜಯಪುರ: ರಾಜ್ಯದಲ್ಲಿ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಹೀಗಾಗಿ ಸಂತ್ರಸ್ತರಿಗೆ ಕಾನೂನು ನೆರವು ನೀಡುವುದಕ್ಕಾಗಿ ಶೀಘ್ರದಲ್ಲೇ ಬೆಂಗಳೂರಿನಲ್ಲಿ ಕಛೇರಿ ತೆರೆಯುತ್ತೇನೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭರವಸೆ ನೀಡಿದ್ದಾರೆ.   ಶನಿವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ಹಂಚಿಕೊಂಡರೂ ಪೊಲೀಸರು ಪ್ರಕರಣ ದಾಖಲಿಸುವ, ಠಾಣೆಗೆ ಕರೆದೊಯ್ದು ಮುಚ್ಚಳಿಕೆ ಬರೆಸಿಕೊಳ್ಳುವ ಮೂಲಕ ದೌರ್ಜನ್ಯ ನಡೆಸುತ್ತಿದ್ದಾರೆ. …

Read More »

ಸಂತ್ರಸ್ತೆಯನ್ನು ಭೇಟಿಯಾದ ಕೇಂದ್ರ ಬಿಜೆಪಿ ಸತ್ಯಶೋಧನಾ ಸಮಿತಿ

ಬೆಳಗಾವಿ: ಬೆಳಗಾವಿಯ ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಸಖಿ ಒನ್ ಸ್ಟಾಪ್ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿ ಹಲ್ಲೆಗೈದ ಪ್ರಕರಣದ ಸಂತ್ರಸ್ತೆಯನ್ನು ಭೇಟಿ ಮಾಡಿರುವ ಕೇಂದ್ರ ಬಿಜೆಪಿ ಸತ್ಯಶೋಧನಾ ಸಮಿತಿ, ಮಹಿಳೆಯ ಆರೋಗ್ಯವನ್ನು ವಿಚಾರಿಸಿದೆ.   ಸಂಸದರಾದ ಅಪ್ರಜಿತಾ ಸಾರಂಗಿ, ಸುನಿತಾ ದುಗ್ಗಲ್, ರಂಜಿತಾ ಕೋಲಿ, ಲಾಕೆಟ್ ಚಟರ್ಜಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಶಾ ಲಾಕ್ರಾ ಅವರನ್ನೊಳಗೊಂಡ ಐದು ಜನರ ಸಮಿತಿ ಸಂತ್ರಸ್ತ ಮಹಿಳೆಗೆ ಸಾಂತ್ವನ ಹೇಳಿದರು. ಘಟನೆಯಿಂದ ಧೃತಿಗೆಡಬೇಡಿ …

Read More »

ಇಂದಿನಿಂದ ʻKPSCʼ ಗ್ರೂಪ್ ಸಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು :ಡಿಸೆಂಬರ್ 16 ರ ಇಂದು 17 ರ ನಾಳೆ ಕೆಪಿಎಸ್‍ಸಿ ವತಿಯಿಂದ ವಿವಿಧ ಇಲಾಖೆಗಳಲ್ಲಿನ ಗ್ರೂಪ್-ಸಿ ಹುದ್ದೆಗಳಿಗೆ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಯ ಹಿನ್ನಲೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.   ಪರೀಕ್ಷೆಯಲ್ಲಿ ಭಾಗವಹಿಸಲಿರುವ ಎಲ್ಲಾ ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಸ್ಮಾರ್ಟ್ ವಾಚ್, ಮೊಬೈಲ್, ಕ್ಯಾಲ್ಕ್ಯುಲೇಟರ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಪರೀಕ್ಷಾ ಕೇಂದ್ರದೊಳಗೆ ಕೊಂಡೊಯ್ಯುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಪರೀಕ್ಷೆಗಳು …

Read More »

ಶಬರಿಮಲೆಯಲ್ಲಿ ಭಾರೀ ಜನದಟ್ಟಣೆ: ಅವ್ಯವಸ್ಥೆ ವಿರುದ್ಧ ಸಿಡಿದ ಭಕ್ತರಿಂದ ಪ್ರತಿಭಟನೆ

ತಿರುವನಂತಪುರಂ (ಕೇರಳ) : ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಭಾರೀ ಸಂಖ್ಯೆಯಲ್ಲಿ ಶಬರಿಮಲೆಗೆ ಭಕ್ತರು ಧಾವಿಸಿದ್ದು, ಅದನ್ನು ನಿಯಂತ್ರಿಸಲು ಕೇರಳ ಸರ್ಕಾರ ವಿಫಲವಾಗಿದೆ. ಗಂಟೆಗಟ್ಟಲೆ ಸರದಿ ಸಾಲಿನಲ್ಲಿ ನಿಂತ ಪರಿಣಾಮ ಬಾಲಕಿಯೊಬ್ಬಳು ಮೃತಪಟ್ಟರೆ, ಇನ್ನೊಂದು ಅವಘಡದಲ್ಲಿ ಯಾತ್ರಿಕನೊಬ್ಬ ಅಸುನೀಗಿದ ಘಟನೆ ನಡೆದಿದೆ. ಬುಧವಾರ ಬೆಳಗ್ಗೆ ಭಾರೀ ಜನದಟ್ಟಣೆಯಿಂದ ಬೇಸತ್ತ ಭಕ್ತರು ಪ್ರತಿಭಟನೆ ಕೂಡ ನಡೆಸಿದರು. ಈ ಮಧ್ಯೆ ಭಕ್ತರಿಗೆ ದರ್ಶನ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ಸರ್ಕಾರ ತಿಳಿಸಿದೆ.     ಸರದಿಯಲ್ಲಿ ನಿಂತಿದ್ದ …

Read More »

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧ, ಪ್ರತ್ಯೇಕ ರಾಜ್ಯದ ಬೇಡಿಕೆ ಸಲ್ಲದು: ಸಿಎಂ

ಬೆಂಗಳೂರು/ಬೆಳಗಾವಿ: ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಪ್ರತ್ಯೇಕ ರಾಜ್ಯದ ಬೇಡಿಕೆ ಸಲ್ಲದು ಹಾಗೂ ಅದು ತಾರತಮ್ಯ ನಿವಾರಣೆಗೆ ಪರಿಹಾರವೂ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸಭೆಯಲ್ಲಿ ಇಂದು ಉತ್ತರ ಕರ್ನಾಟಕದ ಮೇಲಿನ ಚರ್ಚೆಗೆ ಉತ್ತರಿಸಿದ ಅವರು, “ಪ್ರತ್ಯೇಕ ಕರ್ನಾಟಕಕ್ಕೆ ಒತ್ತಾಯ ಮಾಡುವುದು ಏಕೀಕರಣಕ್ಕೆ ಹೋರಾಡಿ, ಪ್ರಾಣ ತ್ಯಾಗ ಮಾಡಿದವರಿಗೆ ನಾವು ಮಾಡುವ ಅವಮಾನ. ಏಕೀಕರಣಕ್ಕಾಗಿ ಬಹಳ ಜನ ಹೋರಾಡಿದರು. ಭಾಷಾವಾರು ಪ್ರಾಂತ್ರ್ಯ ರಚನೆಯಾಗುವಾಗಲೂ ಹೋರಾಟ ಮಾಡಿದವರಿದ್ದಾರೆ. ಹೈದರಾಬಾದ್ ಕರ್ನಾಟಕಕ್ಕೆ …

Read More »

ಇಂಧನ ಸಚಿವ ಕೆ ಜೆ ಜಾರ್ಜ್‌ ವಿರುದ್ಧ ದುರುದ್ದೇಶಪೂರಿತ ಪೋಸ್ಟ್‌ ಮಾಡಿದ್ದ ಆರೋಪಿಯ ಸೆರೆ

ಬೆಂಗಳೂರು: ತೆಲಂಗಾಣ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಇಂಧನ ಸಚಿವ ಕೆ ಜೆ ಜಾರ್ಜ್ ವಿರುದ್ಧ ಎಕ್ಸ್ ಖಾತೆಯಲ್ಲಿ ದುರುದ್ದೇಶಪೂರಿತ ಪೋಸ್ಟ್‌ ಮಾಡಿದ್ದ ಭಾರತ್‌ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪಾರ್ಟಿಯ ಐಟಿ ಸೆಲ್‌ ಉದ್ಯೋಗಿಯನ್ನು ಪೂರ್ವ ವಿಭಾಗದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಬಿಆರ್‌ಎಸ್ ಪಕ್ಷದ ಕಾರ್ಯಕರ್ತ, ಪಕ್ಷದ ಐಟಿ ಸೆಲ್‌ ಉದ್ಯೋಗಿಯಾಗಿರುವ ತೆಲಂಗಾಣ ಕರೀಂನಗರ ನಿವಾಸಿ ರವಿಕಾಂತ್ ಶರ್ಮಾ (33) ಬಂಧಿತ ಆರೋಪಿ. ಆರೋಪಿಯ ತಂದೆ ಸಹ ಬಿಆರ್‌ಎಸ್ ಪಕ್ಷದ ಮಾಜಿ ಕಾರ್ಪೋರೇಟರ್‌ …

Read More »

ಮಹಿಳೆ ವಿವಸ್ತ್ರಗೊಳಿಸಿ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಕತಿ ಠಾಣೆಯ ಪೊಲೀಸ್ ಇನ್ಸ್​ಪೆಕ್ಟರ್ ಅಮಾನತು

ಬೆಳಗಾವಿ: ಇಲ್ಲಿಯ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಅಮಾನವೀಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಕತಿ ಠಾಣೆಯ ಪೊಲೀಸ್ ಇನ್ಸ್​ಪೆಕ್ಟರ್​ ವಿಜಯಕುಮಾರ ಸಿನ್ನೂರ ಅವರನ್ನು ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತ ಎಸ್ ಎನ್ ಸಿದ್ದರಾಮಪ್ಪ ಆದೇಶ ಹೊರಡಿಸಿದ್ದಾರೆ.   ಹೈಕೋರ್ಟ್ ಈ ಸಂಬಂಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು, ಸರ್ಕಾರಕ್ಕೆ ಮತ್ತು ಪೊಲೀಸ್ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ನಗರ ಪೊಲೀಸ್ ಆಯುಕ್ತ ಎಸ್ …

Read More »

ಬಾಡಿಗೆಗೂ ಕೊಠಡಿ ಸಿಗದೆ ಗ್ರಾಮಸ್ಥರೇ ನಿರ್ಮಿಸಿದ್ರು ಅಂಗನವಾಡಿ ಕೇಂದ್ರ

ಕಾರವಾರ : ಬಾಲ್ಯ ಶಿಕ್ಷಣದಿಂದ ವಂಚಿತರಾಗುವುದನ್ನು ತಪ್ಪಿಸಲು ಸರ್ಕಾರ ಅಂಗನವಾಡಿಗಳನ್ನು ತೆರೆದಿದೆ. ಆದರೆ, ಉತ್ತರಕನ್ನಡ ಜಿಲ್ಲೆಯ ಅದೆಷ್ಟೋ ಕಡೆ ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳೇ ಇಲ್ಲ. ಇದ್ದ ಕೆಲ ಕಟ್ಟಡಗಳು ಶಿಥಿಲಾವಸ್ಥೆಗೆ ತಲುಪಿ ಬಾಡಿಗೆ ಕಟ್ಟಡದಲ್ಲಿ ನಡೆಸುತ್ತಿದ್ದರೂ ಕೆಲ ತಿಂಗಳಿಂದ ಬಾಡಿಗೆ ಕೂಡ ಕಟ್ಟಿಲ್ಲ. ಹೀಗಾಗಿ, ಕಟ್ಟಡ ಮಂಜೂರಾಗುವುದೆಂದು ಕಾದು ಕುಳಿತಿದ್ದ ಗ್ರಾಮದ ಜನರು ಸರ್ಕಾರದ ವಿಳಂಬ ನೀತಿಗೆ ರೋಸಿ ಹೋಗಿ ಕೊನೆಗೆ ತಾತ್ಕಾಲಿಕ ಅಂಗನವಾಡಿಯೊಂದನ್ನು ನಿರ್ಮಿಸಿಕೊಂಡಿದ್ದಾರೆ. ಹೌದು, ಒಂದೆಡೆ ಶಿಥಿಲಾವಸ್ಥೆ ತಲುಪಿ …

Read More »

ಹೆಚ್ಚುವರಿ ಭೂಮಾಪಕರನ್ನು ನಿಯೋಜಿಸಲು ಭೂದಾಖಲೆಗಳ ಇಲಾಖೆಗೆ ಪತ್ರ

ಬೆಂಗಳೂರು : ಬೃಹತ್ ನೀರುಗಾಲುವೆ ಹಾಗೂ ಕೆರೆಗಳಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಯ ಸರ್ವೆ ಕಾರ್ಯಕ್ಕಾಗಿ ಹೆಚ್ಚು ಭೂಮಾಪಕರನ್ನು ನಿಯೋಜಿಸಲು ಭೂದಾಖಲೆಗಳ ಇಲಾಖೆಗೆ ಪತ್ರ ಬರೆಯಲು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಪಾಲಿಕೆ ಅಧಿಕಾರಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಬೃಹತ್ ನೀರುಗಾಲುವೆಗಳ ಒತ್ತುವರಿ ತೆರವು ಕಾರ್ಯಾಚರಣೆಯ ಸಂಬಂಧ ಶುಕ್ರವಾರ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಬೃಹತ್ ನೀರುಗಾಲುವೆ ಹಾಗೂ ಕೆರೆಗಳಲ್ಲಿ ಸರ್ವೆ ಮಾಡಲು ಹೆಚ್ಚು ಭೂಮಾಪಕರ ಅವಶ್ಯಕತೆಯಿದ್ದು, …

Read More »

ಕರ್ನಾಟಕದ ಅಯ್ಯಪ್ಪ ಭಕ್ತರಿದ್ದ ಬಸ್​-ಆಟೋ ಮಧ್ಯೆ ಅಪಘಾತ; ಐವರು ಸಾವು

ಮಲಪ್ಪುರಂ(ಕೇರಳ): ಕರ್ನಾಟಕದಿಂದ ಬರುತ್ತಿದ್ದ ಶಬರಿಮಲೆ ಯಾತ್ರಾರ್ಥಿಗಳ ಬಸ್‌ಗೆ ಆಟೋ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಹಾಗೂ ಆಟೋದಲ್ಲಿದ್ದ ನಾಲ್ವರು ಪ್ರಯಾಣಿಕರು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಈ ಘಟನೆ ಜಿಲ್ಲೆಯ ಮಂಚೇರಿಯಲ್ಲಿ ಶುಕ್ರವಾರ ಸಂಜೆ ಸುಮಾರು 6 ಗಂಟೆಗೆ ಸಂಭವಿಸಿದೆ. ನಿನ್ನೆ ಸಂಜೆ ಆರು ಗಂಟೆಗೆ ಮಂಚೇರಿ-ಅರೀಕೋಡು ರಸ್ತೆಯ ಚೆಟ್ಟಿಅಂಗಡಿ ಎಂಬಲ್ಲಿ ಅಪಘಾತ ನಡೆದಿದೆ. ಶಬರಿಮಲೆ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಕರ್ನಾಟಕ ಬಸ್ ಮತ್ತು ಆಟೋ ಮಧ್ಯೆ ಅಪಘಾತವಾಗಿದೆ. ಆಟೋ ಚಾಲಕ ಮಜೀದ್, …

Read More »