Breaking News

ರಾಜಕೀಯ

ಇಂದು ಮಧ್ಯರಾತ್ರಿಯಿಂದಲೇ ರಾಜ್ಯದಲ್ಲಿ ಲಾಕ್‍ಡೌನ್ ಸಡಿಲಿಕೆ..! ಏನಿರುತ್ತೆ ಏನಿರಲ್ಲ..? ಇಲ್ಲಿದೆ ಡೀಟೇಲ್ಸ್

ಬೆಂಗಳೂರು : ರಾಜ್ಯಾದ್ಯಂತ ಬುಧವಾರ ಮಧ್ಯರಾತ್ರಿಯಿಂದ ಲಾಕ್ ಡೌನ್ ಸಡಿಲಗೊಳಿಸಿ, ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ. ಈ ಮಾರ್ಗಸೂಚಿಯ ಅನುಸಾರ ರಾಜ್ಯಾದ್ಯಂತ ಇಂದು ಮದ್ಯರಾತ್ರಿಯಿಂಲೇ ಲಾಕ್ ಡೌನ್ ಸಡಿಲಗೊಳಿಸಲಾಗುತ್ತಿದೆ. ಇದೀಗ ರಾಜ್ಯ ಸರಕಾರವು ಲಾಕ್ ಡೌನ್ ನಿಯಮಗಳಲ್ಲಿ ಒಂದಷ್ಟು ಸಡಿಲಿಕೆಗಳನ್ನು ಮಾಡಿ ಇಂದು ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಆದರೆ ಈ ಮಾರ್ಗಸೂಚಿ ಸೋಂಕು ಪ್ರಕರಣಗಳು ಅಧಿಕವಾಗಿರುವ ಕಂಟೈನ್ ಮೆಂಟ್ ಪ್ರದೇಶಗಳಿಗೆ ಅನ್ವಯಿಸುವುದಿಲ್ಲ ಈ ಕುರಿತಂತೆ ಮಾರ್ಗಸೂಚಿ ಪ್ರಕಟಿಸಿರುವ ರಾಜ್ಯ …

Read More »

“ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸದೇ ವಿದ್ಯಾರ್ಥಿಗಳನ್ನು ಪಾಸ್ ಮಾಡಿ”

ಹುಬ್ಬಳ್ಳಿ, – ಕೊರೊನಾ ವೈರಸ್ ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ 2020ನೆ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವ ಬದಲಾಗಿ ವಿದ್ಯಾರ್ಥಿಗಳನ್ನು ಉತ್ತಿರ್ಣರನ್ನಾಗಿ ಘೋಷಣೆ ಮಾಡುವುದು ಉತ್ತಮವಾಗಿದೆ. ಈ ಸಂಬಂಧ ಪರಿಶೀಲನೆ ನಡೆಸಲು ಪ್ರೌಢಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಗೆ ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆ ಅಪರ ಆಯುಕ್ತ ಸಿದ್ದಲಿಂಗಯ್ಯ ಎಸ್.ಹಿರೇಮಠ ಮನವಿ ಸಲ್ಲಿಸಿದ್ದಾರೆ.ಸದ್ಯಕ್ಕೆ ಕೊರೋನಾ ಭೀತಿಯಿಂದ ರಾಜ್ಯದ ಪರಿಸ್ಥಿತಿ ಸುಧಾರಿಸುವುದು ಕಷ್ಟವಾಗಿರುವುದರಿಂದ ಪರೀಕ್ಷೆ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಷ್ಟವಾಗಲಿದೆ. ಅಲ್ಲದೇ ಈಗಾಗಲೇ …

Read More »

ಇಂದು 9 ಮಂದಿಯಲ್ಲಿ ಕೊರೊನಾ ಪತ್ತೆ, ರಾಜ್ಯದಲ್ಲಿ 427ಕ್ಕೆ ಏರಿದ ಸೋಂಕಿತರ ಸಂಖ್ಯೆ..

ಬೆಂಗಳೂರು : ಅತ್ತ ಸರ್ಕಾರ ಲಾಕ್ ಡೌನ್ ನಿಯಮಗಳಲ್ಲಿ ಕೊಂಚ ಸಡಿಲಿಕೆ ಮಾಡಿರುವ ಬೆನ್ನಲ್ಲೇ, ಇತ್ತ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಮುಖವಾಗಿದೆ. ರಾಜ್ಯದ ವಿವಿಧೆಡೆ ಕಳೆದ 24 ಗಂಟೆಗಳಲ್ಲಿ ಅಂದರೆ ಮಂಗಳವಾರ ಸಂಜೆ 5 ರಿಂದ ಬುಧವಾರ ಸಂಜೆ 5 ರ ವರೆಗೆ 9 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಸೋಮವಾರ 18 ಮತ್ತು ಮಂಗಳವಾರ 10 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು. ಇದೀಗ ಬುಧವಾರ 9 ಜನರಿಗೆ …

Read More »

ಪ್ಲಾಸ್ಟಿಕ್ಸ್ ಫಾರ್ ಚೇಂಜ್ ಫೌಂಡೇಶನಿಂದ50 ಕುಟುಂಬಗಳಿಗೆದಿನಸಿ ಸಾಮಗ್ರಿಗಳ ಕಿಟ್ ವಿತರಿಸಿದರು.

ಬೆಳಗಾವಿ: ಕೊರೊನಾದಿಂದ ಸರ್ಕಾರ ಲಾಕ್ ಡೌನ್ ಜಾರಿ ಮಾಡಿರುವುದರಿಂದ ಬಡ ಕುಟುಂಬಗಳ ಆಹಾರಕ್ಕೆ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್ಸ್ ಫಾರ್ ಚೇಂಜ್ ಫೌಂಡೇಶನಿಂದ ಇಲ್ಲಿನ ಕಣಬರಗಿಯಲ್ಲಿ ವಾಸವಾಗಿರುವ ಪ್ಲಾಸ್ಟಿಕ್, ಬಾಟಲ್ ಆಯ್ದು ಜೀವನ ಸಾಗಿಸುತ್ತಿರುವ ಸುಮಾರು 50 ಕುಟುಂಬಗಳಿಗೆ ಮಹಿಳಾ ಕಲ್ಯಾಣ ಸಂಸ್ಥೆಯ ಸಹಯೋಗದಲ್ಲಿ ದಿನಸಿ ಸಾಮಗ್ರಿಗಳ ಕಿಟ್ ವಿತರಿಸಿದರು. ಅಕ್ಕಿ, ಬೇಳೆ, ರವಾ, ಗೋಧಿಹಿಟ್ಟು, ಎಣ್ಣೆ ಇತ್ಯಾದಿ ವಸ್ತುಗಳನ್ನು ಒಳಗೊಂಡಿರುವ ಕಿಟ್ ನೀಡಿದರು. ಮಹಿಳಾ ಕಲ್ಯಾಣ …

Read More »

ರಾಯಬಾಗ:೩೦೦ಕ್ಕೂ ಹೆಚ್ಚು ಸಿಬ್ಬಂದಿಗೆ ಹೂ, ತೆಂಗಿನಕಾಯಿ, ತಾಂಬೂಲ, ಬಟ್ಟೆ, ಮಾಸ್ಕ್ ಹಾಗೂ ಸಹಾಯಧನ ನೀಡಿ ವಿನೂತನ ರೀತಿಯಲ್ಲಿ ಅಭಿನಂದಿಸಲಾಗಿದೆ

ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲ್ಲೂಕಿನ ಬಾವನಸೌದತ್ತಿ ಗ್ರಾಮದಲ್ಲಿ ೩೦೦ಕ್ಕೂ ಹೆಚ್ಚು ಸಿಬ್ಬಂದಿಗೆ ಹೂ, ತೆಂಗಿನಕಾಯಿ, ತಾಂಬೂಲ, ಬಟ್ಟೆ, ಮಾಸ್ಕ್ ಹಾಗೂ ಸಹಾಯಧನ ನೀಡಿ ವಿನೂತನ ರೀತಿಯಲ್ಲಿ ಅಭಿನಂದಿಸಲಾಗಿದೆ. ದೇಶದಲ್ಲಿ ಕೊರೊನಾ ವಾರಿಯರ್ಸ್ ಅವರಿಗೆ ವಿವಿಧ ರೀತಿಯಲ್ಲಿ ಗೌರವಿಸುತ್ತಿದ್ದಾರೆ. ಅದೇ ರೀಲ್ಲಿ ಬಾವನಸೌದತ್ತಿ ಗ್ರಾಮದಲ್ಲಿ ವಿನೂತನ ರೀತಿಯಲ್ಲಿ ಸನ್ಮಾನ ಮಾಡಲಾಗಿದೆ. ಆಶಾ ಕಾರ್ಯಕರ್ತಯರು, ಅಂಗನವಾಡಿ ಕಾರ್ಯಕರ್ತ, ಆರೋಗ್ಯ ಇಲಾಖೆ, ಪೊಲೀಸರು ಸೇರಿ ೩೦೦ಕ್ಕೂ ಹೆಚ್ಚು ಸಿಬ್ಬಂದಿಗೆ ವಿಶೇಷವಾಗಿ ಸನ್ಮಾನಿಸಲಾಗಿದೆ. ದೇಶದ ರಕ್ಷಣೆಗಾಗಿ …

Read More »

ವಿಶ್ವದ ಅಪರೂಪದ ಮೂಷಿಕ ಜಿಂಕೆ ರಕ್ಷಣೆ ಮಾಡಿದ ಕರಾವಳಿ ಕಾವಲುಪಡೆ ಪೊಲೀಸರು

ಕಾರವಾರ: ವಿಶ್ವದಲ್ಲೇ ಅತೀ ವಿರಳವಾದ ಮೂಷಿಕ ಜಿಂಕೆಯನ್ನು ಅಂಕೋಲದ ಅರಬ್ಬಿ ಸಮುದ್ರಲ್ಲಿ ಬೇಲಿಕೇರಿ ಕರಾವಳಿ ಕಾವಲುಪಡೆ ಪೊಲೀಸರು ರಕ್ಷಣೆ ಮಾಡಿದ್ದಾರೆ. ಅಕ್ರಮ ಗೋವಾ ಮದ್ಯ ತಡೆಗಟ್ಟುವ ನಿಟ್ಟಿನಲ್ಲಿ ಗಸ್ತಿನಲ್ಲಿದ್ದ ಪೊಲೀಸ್ ನಿರೀಕ್ಷಕ ಶ್ರೀಧರ್ ಎಸ್.ಆರ್ ನೇತೃತ್ವದ ಕರಾವಳಿ ಕಾವಲು ಪಡೆ ಈ ಜಿಂಕೆಯನ್ನು ರಕ್ಷಿಸಿದೆ. ಪೊಲೀಸರ ತಂಡ ಅಂಕೋಲ ತಾಲೂಕಿನ ಹಾರವಾಡದ ಕೋಡಾರ ಗುಡ್ಡದ ಬಳಿಯ ಸಮುದ್ರದಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಮೂಷಿಕ ಚಿಂಕೆಯನ್ನು ರಕ್ಷಿಸಿ ಅರಣ್ಯ ಇಲಾಖೆಯವರಿಗೆ …

Read More »

ಕ್ವಾರಂಟೈನ್ ಮಾಡಿದ್ದಕ್ಕೆ ಕುಟುಂಬದಿಂದ ಆತ್ಮಹತ್ಯೆ ಬೆದರಿಕೆ

ಕೋಲಾರ: ಕೊರೊನಾ ಮಹಾಮಾರಿ ಹರಡುವ ನಿಟ್ಟಿನಲ್ಲಿ ಶಂಕಿತರನ್ನು ಹೋಂ ಕ್ವಾರಂಟೈನ್ ಮಾಡಿದ್ದಕ್ಕೆ ಆಕ್ರೋಶಗೊಂಡ ಕುಟುಂಬವೊಂದು ಪೆಟ್ರೋಲ್ ಬಾಟಲ್ ನೊಂದಿಗೆ ಗ್ರಾಮ ಪಂಚಾಯ್ತಿಯ ಒಳಗೆ ನುಗ್ಗಿ ಆತ್ಮಹತ್ಯೆ ಬೆದರಿಕೆ ಹಾಕಿದ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಸಂತೆಹಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ಈ ಘಟನೆ ನಡೆದಿದ್ದು, ಪೆಟ್ರೋಲ್ ಬಾಟಲ್ ಹಿಡಿದು ಆತ್ಮಹತ್ಯೆ ಮಾಡುವ ಬೆದರಿಕೆ ಹಾಕಿದ್ದಾರೆ. ಸಂತೇಹಳ್ಳಿ ಗ್ರಾಮದ ಮಂಜುನಾಥ್ ಹಾಗೂ ಕುಟುಂಬದವರನ್ನು ಕಳೆದ ಎರಡು ದಿನದ ಹಿಂದೆ …

Read More »

ಸೈಲೆಂಟಾಗಿದೆ ಪಾದರಾಯನಪುರ, ಸ್ಥಳದಲ್ಲಿ 800 ಪೊಲೀಸರ ಮೊಕ್ಕಾಂ

ಬೆಂಗಳೂರು, ಏ.22- ಪಾದರಾಯನಪುರ ಘಟನೆಗೆ ಸಂಬಂಧಿಸಿದಂತೆ ಈವರೆಗೂ 126 ಮಂದಿಯನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ನಗರದ ಪಶ್ಚಿಮ ವಲಯದ ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ ತಿಳಿಸಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡಿದ ಅವರು, ಅಂದಿನ ಘಟನೆಗೆ ಸಂಬಂಧಿಸಿದಂತೆ ಇನ್ನೂ ಕೆಲವರು ತಲೆಮರೆಸಿಕೊಂಡಿದ್ದಾರೆ. ಅವರಿಗಾಗಿ ಶೋಧ ಮಾಡುತ್ತಿದ್ದೇವೆ ಎಂದು ಹೇಳಿದರು. ಅಂದಿನ ಘಟನೆಯಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ಸಂಘಟನೆಯೊಂದರ ಕಾರ್ಯಕರ್ತನಾಗಿದ್ದು, ಈತನಿಗಾಗಿ ವ್ಯಾಪಕ ಶೋಧ ಮಾಡಲಾಗುತ್ತಿದೆ. ಬಂಧಿತ ಆರೋಪಿಗಳಲ್ಲಿ ಮಹಿಳೆ …

Read More »

ಕೋವಿಡ್-19ಗೆ ಸಂಬಂಧಿಸಿದಂತೆ ಆಪ್ತಮಿತ್ರ ಸಹಾಯವಾಣಿ ಮತ್ತು ಆ್ಯಪ್‍ಗೆ ಸಿಎಂ ಚಾಲನೆ …..

ಬೆಂಗಳೂರು,ಏ.22- ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಮಾರಕ ರೋಗ ಕೊರೊನಾ ವೈರಸ್ ಹರಡುವಿಕೆ ಶೀಘ್ರದ ಲ್ಲೇ ನಿಯಂತ್ರಣಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೋವಿಡ್-19ಗೆ ಸಂಬಂಧಿಸಿದಂತೆ ಆಪ್ತಮಿತ್ರ ಸಹಾಯವಾಣಿ ಮತ್ತು ಆ್ಯಪ್‍ಗೆ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿಗಳು, ಸಾರ್ವಜನಿಕರು ಮನೆಯಲ್ಲೇ ಇದ್ದು ಸಹಕರಿಸಬೇಕು. ಕೊರೊನಾ ಹೋರಾಟದಲ್ಲಿ ಈಗ ಮತ್ತೊಂದು ಹೆಜ್ಜೆ ಇಡಲಾಗಿದೆ ಎಂದರು. ಸಹಾಯವಾಣಿಯ ಉದ್ದೇಶ ರಾಜ್ಯದ ಎಲ್ಲಾ ನಿವಾಸಿಗಳಿಗೆ …

Read More »

ಲಾಕ್‍ಡೌನ್ ನಿಂದ ಕೆಎಸ್‌ಆರ್‌ಟಿಸಿಗೆ 816 ಕೋಟಿ ಲಾಸ್..!

ಬೆಂಗಳೂರು, ಏ.22- ಲಾಕ್‍ಡೌನ್ ಜಾರಿಯಾದ ನಂತರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ 816 ಕೋಟಿ ಲಾಸ್ ಆಗಿದೆ. ಕೊರೊನಾ ಸೋಂಕು ಹರಡದಂತೆ ಎಚ್ಚರ ವಹಿಸುವ ಉದ್ದೇಶದಿಂದ ಸರ್ಕಾರ ಲಾಕ್‍ಡೌನ್ ಜಾರಿಗೆ ತಂದ ನಂತರ ಕೆಎಸ್‍ಆರ್‍ಟಿಸಿ ಬಸ್ ಸಂಚಾರವನ್ನು ರಾಜ್ಯದಲ್ಲಿ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಇಲ್ಲಿಯವರೆಗೆ ಸಂಸ್ಥೆಗೆ 816.23 ಕೋಟಿ ನಷ್ಟ ಸಂಭವಿಸಿದೆ ಎಂದು ಕೆಎಸ್‍ಆರ್‍ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 314.89, ವಾಣಿಜ್ಯ …

Read More »