ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಎಸ್.ಆರ್ ಪಾಟೀಲ್ ಅವರ ನಿವೃತ್ತಿಯಿಂದ ತೆರವಾದ ಪರಿಷತ್ ವಿಪಕ್ಷ ನಾಯಕ ಸ್ಥಾನಕ್ಕೆ, ಬಿ.ಕೆ ಹರಿಪ್ರಸಾದ್ ನೇಮಕವಾಗಿದೆ. ಇದರ ಜತೆಗೆ, ಎಂ ನಾರಾಯಣಸ್ವಾಮಿ ಅವರ ನಿವೃತ್ತಿಯಿಂದ ತೆರವಾದ ವಿಧಾನ ಪರಿಷತ್ನ ಮುಖ್ಯ ಸಚೇತಕ ಸ್ಥಾನಕ್ಕೆ ಪ್ರಕಾಶ್ ಸಿಂಗ್ ರಾಠೋಡ್ ಅವರನ್ನು ಆಯ್ಕೆ ಮಾಡಲಾಗಿದೆ. ಕೆ. ಗೋವಿಂದ ರಾಜ್ ಅವರನ್ನು ವಿಧಾನ ಪರಿಷತ್ನ ಉಪ ನಾಯಕನಾಗಿ ಆಯ್ಕೆ ಮಾಡಿ ಸೋನಿಯಾ ಗಾಂಧಿ ಆದೇಶ ಹೊರಡಿಸಿದ್ದಾರೆ. ಅಚ್ಚರಿ ಎಂದ್ರೆ, …
Read More »‘ಕೇಸರಿ’ ಮನೆಯಲ್ಲಿ ಮುಂದುವರಿದ ಉಸ್ತುವಾರಿ ಫೈಟ್ -ಕೊನೆಗೂ ಮೌನ ಮುರಿದ ಆರ್.ಅಶೋಕ್
ಬೆಂಗಳೂರು: ಜಿಲ್ಲಾ ಉಸ್ತುವಾರಿ ಪಟ್ಟಿ ಕೇಸರಿ ಮನೆಯಲ್ಲಿ ಅಸಮಾಧಾನದ ಹೊಗೆಯಾಡುವಂತೆ ಮಾಡಿದೆ. ಲಿಸ್ಟ್ ರಿಲೀಸ್ ಆಗಿ ಮೂರು ದಿನ ಕಳೆದ್ರೂ ಸಂಪುಟ ಸಹೋದ್ಯೋಗಿಗಳ ಬೇಸರ ಮಾತ್ರ ಕಡಿಮೆಯಾಗಿಲ್ಲ. ಕೆಲವರು ಪರೋಕ್ಷವಾಗೇ ತಮ್ಮ ಇಂಗಿತ ಹೊರಹಾಕ್ತಿದ್ರೆ, ಇನ್ನೂ ಕೆಲವರು ಬೇಸರವನ್ನ ನುಂಗಿಕೊಂಡು ಕೊಟ್ಟಿರೋ ಜಿಲ್ಲೆಯಲ್ಲಿ ಕೆಲಸವನ್ನ ಆರಂಭಿಸಿದ್ದಾರೆ. ಉಸ್ತುವಾರಿ ಬಗ್ಗೆ ಕೊನೆಗೂ ಮಾತನಾಡಿದ ‘ಸಾಮ್ರಾಟ್’ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನ ನೇಮಿಸಲಾಗಿದ್ದು, ಕೆಲ ಜಿಲ್ಲೆಗಳಲ್ಲಿ ಕೇಸರಿ ಹೈ ಕಮಾಂಡ್ ಅದಲು-ಬದಲು …
Read More »ರಾಷ್ಟ್ರ ಧ್ವಜವನ್ನು ಉಲ್ಟಾ ಹಾರಿಸಿ, ಸಲ್ಯೂಟ್ ಮಾಡಿದ ಸಚಿವ; ರಾಜೀನಾಮೆಗೆ ಪಟ್ಟು ಹಿಡಿದ ಬಿಜೆಪಿ
ಕೇರಳ : ಸಿಪಿಐ ನೇತೃತ್ವದ ಎಲ್ಡಿಎಫ್ನ ಮಿತ್ರಪಕ್ಷವಾದ ಇಂಡಿಯನ್ ನ್ಯಾಷನಲ್ ಲೀಗ್ (ಐಎನ್ಎಲ್) ನ ನಾಮನಿರ್ದೇಶಿತ ಶಾಸಕರಾದ ದೇವರಕೋವಿಲ್ ಜಿಲ್ಲಾ ಕೇಂದ್ರದಲ್ಲಿ ನಡೆದ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿದ್ದರು. ವಿಶೇಷವೆಂದರೆ, ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಚಿವರು, ಜನಪ್ರತಿನಿಧಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಇತರ ಗಣ್ಯರು ಸೇರಿದಂತೆ ಯಾರೂ ರಾಷ್ಟ್ರಧ್ವಜವನ್ನು ಉಲ್ಟಾ ಹಾರಿಸಿದ್ದನ್ನು ಗಮನಿಸಲಿಲ್ಲ. ಧ್ವಜಾರೋಹಣ ನೆರವೇರಿಸಿದ ಬಳಿಕ ಸಚಿವರು ತಲೆಕೆಳಗಾಗಿದ್ದ ರಾಷ್ಟ್ರಧ್ವಜಕ್ಕೆ ವಂದನೆ ಸಲ್ಲಿಸಿ ನಂತರ ತಮ್ಮ ಭಾಷಣಕ್ಕೆ ಮುಂದಾದರು. ಇದರ …
Read More »ಪ್ರತಿ ಮನೆಯ್ಲೂ ಕನಿಷ್ಠ ಒಂದಾದರೂ ಹಸು ಸಾಕಬೇಕು. ಸರ್ವೋತ್ತಮ ಜಾರಕಿಹೊಳಿ
ಕಕಮರಿ (ಬೆಳಗಾವಿ ಜಿಲ್ಲೆ): ‘ಪ್ರತಿ ಮನೆಯ್ಲೂ ಕನಿಷ್ಠ ಒಂದಾದರೂ ಹಸು ಸಾಕಬೇಕು. ಹೈನುಗಾರಿಕೆ ಮಾಡಬೇಕು. ಹಾಲು ಉತ್ಪಾದಕರ ಸಂಘದಲ್ಲಿ ಸದಸ್ಯತ್ವ ಪಡೆದು ಸವಲತ್ತುಗಳನ್ನು ಗಳಿಸಿಕೊಂಡು ಆರ್ಥಿಕ ಸಬಲೀಕರಣಕ್ಕೆ ಪ್ರಯತ್ನಿಸಬೇಕು’ ಎಂದು ಗೋಕಾಕದ ಲಕ್ಷ್ಮಿ ಶಿಕ್ಷಣ ಸಂಸ್ಥೆಯ ನಿರ್ದೇಶಕ ಸರ್ವೋತ್ತಮ ಜಾರಕಿಹೊಳಿ ಸಲಹೆ ನೀಡಿದರು. ಗ್ರಾಮದ ರಾಯಲಿಂಗೇಶ್ವರ ಸಂಸ್ಥಾನ ಮಠದಲ್ಲಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘವನ್ನು ಉದ್ಘಾಟಿಸಿ ಮಾತನಾಡಿದರು. ‘ಹಾಲು ಉತ್ಪಾದಕರ ಸಂಘದಿಂದ ಅನೇಕ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಅದನ್ನು …
Read More »ರಮೇಶ್ ಜಾರಕಿಹೊಳಿಯವರು ಒಬ್ಬ ಪವರ್ ಫುಲ್ ನಾಯಕರು ಎಷ್ಟು ಶಾಸಕರನ್ನು ಬೇಕಾದರೂ ಬಿಜೆಪಿಗೆ ಕರೆತರಬಹುದು- ಗೋವಿಂದ್ ಕಾರಜೋಳ್
ರಮೇಶ್ ಜಾರಕಿಹೊಳಿ ಒಬ್ಬ ಸಮರ್ಥ ನಾಯಕರು. ಅವರು ಬಿಜೆಪಿಗೆ ಎಷ್ಟು ಜನರನ್ನು ಬೇಕಾದರೂ ಕರೆ ತರಬಹುದು. ಅವರಲ್ಲಿ ಆ ಶಕ್ತಿ ಇದೆ. ಅವರು ಎಷ್ಟು ಜನ ಶಾಸಕರನ್ನು ಬೇಕಾದರೂ ಕರೆತರಬಹುದು ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.ಬೆಳಗಾವಿಯಲ್ಲಿ ಗಣರಾಜ್ಯೋತ್ಸವ ಸಂಬರ್ಭದಲ್ಲಿ ಧ್ವಜಾರೋಹಣದ ನೆರವೇರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳರವರು, ರಮೇಶ್ ಜಾರಕಿಹೊಳಿ ಒಬ್ಬ ಹಿರಿಯ ರಾಜಕಾರಣಿಗಳು. ಮಾಜಿ ಮಂತ್ರಿ ಹಾಗೂ ಅನುಭವಿ ರಾಜಕಾರಣಿ. ಅವರ …
Read More »ನಾನು ಯಾವ ಕಡೆ ಇಲ್ಲ: ಬಿಜೆಪಿ ಪಕ್ಷದ ಪರವಾಗಿ ಇದ್ದೇನೆ: ದುರ್ಯೋಧನ ಐಹೊಳೆ
ನಾನಂತು ಸಚಿವಗಿರಿಗಾಗಿ ಗುಂಪುಗಾರಿಕೆ, ಜಗಳ ಮಾಡಲ್ಲ. ಸಚಿವ ಸ್ಥಾನ ಕರೆದು ಕೊಟ್ಟರೇ ನಿಭಾಯಿಸುತ್ತೇವೆ. ಸಚಿವ ಸ್ಥಾನ ಬೇಕು ಎಂದು ಹಠ ಮಾಡಲ್ಲ. ನಮ್ಮ ನಾಯಕರಾದ ಗೋವಿಂದ ಕಾರಜೋಳ ಅವರು ಇರೋ ತನ ನಾವು ಮಂತ್ರಿ ಸ್ಥಾನ ಕೇಳುವುದಿಲ್ಲ ಎಂದು ಬಿಜೆಪಿ ಶಾಸಕ ದುರ್ಯೋಧನ ಐಹೊಳೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಶಾಸಕ ದುರ್ಯೋಧನ ಐಹೊಳೆ ಬಿಜೆಪಿ ಪಕ್ಷದ ಚಿಹ್ನೆ ಮೇಲೆ ಮೂರು ಬಾರಿ …
Read More »ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹು ನಿರೀಕ್ಷೆಯ ಉಪ ನೋಂದಣಾಧಿಕಾರಿಗಳ ಕಛೇರಿ ಆರಂಭಕ್ಕೆ ಹಣಕಾಸು ಇಲಾಖೆಯಿಂದ ಅನುಮೋದನೆ ದೊರೆತಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ಮೂಡಲಗಿ : ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹು ನಿರೀಕ್ಷೆಯ ಉಪ ನೋಂದಣಾಧಿಕಾರಿಗಳ ಕಛೇರಿ ಆರಂಭಕ್ಕೆ ಹಣಕಾಸು ಇಲಾಖೆಯಿಂದ ಅನುಮೋದನೆ ದೊರೆತಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಮೂಡಲಗಿಯಲ್ಲಿ ಹೊಸದಾಗಿ ಉಪನೋಂದಣಾಧಿಕಾರಿಗಳ ಕಛೇರಿಯನ್ನು ಫೆಬ್ರುವರಿ ತಿಂಗಳೊಳಗೆ ಆರಂಭಿಸಲಾಗುವುದು ಎಂದು ಅವರು ಹೇಳಿದರು. ಸತತವಾಗಿ ಎರಡು ವರ್ಷಗಳಿಂದ ಕೋವಿಡ್ ಹಿನ್ನೆಲೆಯಲ್ಲಿ ಕಛೇರಿ ಆರಂಭಕ್ಕೆ ಹಣಕಾಸು ಇಲಾಖೆಯು ನಮ್ಮ ಪ್ರಸ್ತಾವಣೆಯನ್ನು ವಿಳಂಬ ಮಾಡಿತ್ತು. ಆದರೂ ಹಲವು …
Read More »ಗೋವಾದಲ್ಲಿ ಕಾಂಗ್ರೆಸ್ ಗೆಲುವು ಖಚಿತ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಪಣಜಿ: ಗೋವಾ ಚುವಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಯ ಸಾಧಿಸಲಿದ್ದು, ಕಾಂಗ್ರೆಸ್ ಅಧಿಕಾರ ಹಿಡಿಯುವುದು ಖಚಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಚುನಾವಣೆ ವೀಕ್ಷಕ ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ಗೋವಾ ರಾಜ್ಯದ ಮಡಗಾವನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಗೋವಾದಲ್ಲಿ 40 ವಿಧಾನಸಭಾ ಕ್ಷೇತ್ರಗಳಿದ್ದು, 37 ಕ್ಷೇತ್ರಗಳಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದೆ ಎಂದು ತಿಳಿಸಿದರು. ಗೋವಾ ಮತ್ತು ಬೆಳಗಾವಿಗೆ ಉತ್ತಮ ನಂಟು ಹೊಂದಿದ್ದು, …
Read More »ಕಾಂಗ್ರೆಸ್ನ 16 ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ: ರಮೇಶ ಜಾರಕಿಹೊಳಿ
ಕಾಂಗ್ರೆಸ್ನ 16 ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ಬಿಜೆಪಿ ಹೈಕಮಾಂಡ್ ಒಪ್ಪಿದರೆ ಅವರನ್ನು ಪಕ್ಷಕ್ಕೆ ಕರೆತರುವೆ ಎನ್ನುವ ಮೂಲಕ ಮಾಜಿ ಸಚಿವ ರಮೇಶ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಮಾಜಿ ಸಚಿವ ರಮೇಶ ಜಾರಕಿಹೊಳಿ ನನ್ನ ಜತೆ 36 ಜನ ಇದ್ರು, 17 ಜನ ನನ್ನ ಜತೆ ಬಂದ್ರು ತಾಂತ್ರಿಕ ಕಾರಣದಿಂದ 16 ಜನ ಅಲ್ಲಿಯೇ ಇದ್ದಾರೆ. ಆ ಸಂದರ್ಭದಲ್ಲಿ ನಮ್ಮ ಜತೆ ಬರಲಿಲ್ಲ. ಕಾಂಗ್ರೆಸ್ನ 16 …
Read More »ಯಾವುದೇ ಚುನಾವಣೆಗೂ ಕಾಂಗ್ರೆಸ್ ಸಿದ್ಧವಿದೆ: ಮಾಜಿ ಸಿಎಂ ಸಿದ್ದರಾಮಯ್ಯ
ವಿಧಾನಸಭೆ ಚುನಾವಣೆಗೂ ನಾವು ರೆಡಿ ಇದ್ದೇವೆ, ಜಿಲ್ಲಾ ಪಂಚಾಯತಿ-ತಾಲೂಕಾ ಪಂಚಾಯತಿ ಚುನಾವಣೆಗೂ ನಾವು ರೆಡಿ ಇದ್ದೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ. ಬಾದಾಮಿ ಪ್ರವಾಸದಲ್ಲಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದರು. ಇದೇ ವೇಳೆ ಬಾದಾಮಿ ತಾಲೂಕಿನ ಮುತ್ತಲಗೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷ ಯಾವಾಗಲೂ ಚುನಾವಣೆ ಎದುರಿಸಲು ಸಿದ್ಧ. ಜಿಲ್ಲಾ, ತಾಲೂಕು ಪಂಚಾಯಿತಿ, ವಿಧಾನಸಭೆ ಚುನಾವಣೆಗೂ ರೆಡಿ ಇದ್ದೀವಿ. …
Read More »
Laxmi News 24×7