Breaking News

ರಾಜಕೀಯ

ಶಾ ಕಾರ್ಯಕ್ರಮದ ಸಂದರ್ಭ ತೇಜಸ್ವಿಸೂರ್ಯ ವಾಟ್ಸಪ್ ಅಕೌಂಟ್ ಡಿಲೀಟ್

ಶಾ ಕಾರ್ಯಕ್ರಮದ ಸಂದರ್ಭ ತೇಜಸ್ವಿಸೂರ್ಯ ವಾಟ್ಸಪ್ ಅಕೌಂಟ್ ಡಿಲೀ ಬೆಂಗಳೂರು, ಜ.19: ರಾಜ್ಯ ಬಿಜೆಪಿ ಮಾಧ್ಯಮ ವಿಭಾಗದ ವಾಟ್ಸಪ್ ಗ್ರೂಪ್‌ನಿಂದ ಎಕ್ಸಿಟ್ ಆಗಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿಸೂರ್ಯ, ಇದೀಗ ತಮ್ಮ ವಾಟ್ಸಪ್ ಖಾತೆಯನ್ನೇ ಅಳಿಸಿ ಹಾಕಿರುವುದು ಕುತೂಹಲಕ್ಕೆ ಕಾರಣವಾಗಿದೆ. ಬೆಂಗಳೂರಿನ ಜಯನಗರದಲ್ಲಿ ತಮ್ಮ ಕಚೇರಿ ಉದ್ಘಾಟನೆಗೆ ಮಾಧ್ಯಮ ಪ್ರತಿನಿಧಿಗಳನ್ನು ಆಹ್ವಾನಿಸಿ, ಕೊನೆ ಕ್ಷಣದಲ್ಲಿ ಭದ್ರತಾ ನೆಪ ಹೇಳಿ ಮಾಧ್ಯಮಗಳಿಗೆ ನಿಷೇಧ ಹೇರಿದ್ದರು. ಬಳಿಕ ಬಿಜೆಪಿ ರಾಷ್ಟ್ರೀಯ …

Read More »

ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ

ರಾಂಚಿ, ಜ.19- ಪ್ರಧಾನಿ ನರೇಂದ್ರ ಮೋದಿ ಕಳ್ಳ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಮತ್ತೊಂದು ಕಾನೂನು ಕಂಟಕ ಎದುರಾಗಿದೆ. ಜಾರ್ಖಂಡ್‍ನ ರಾಂಚಿ ಸಿವಿಲ್ ನ್ಯಾಯಾಲಯವೊಂದು ಕಾಂಗ್ರೆಸ್ ಮಾಜಿ ಅಧ್ಯಕ್ಷರಿಗೆ ಈ ಸಂಬಂಧ ಸಮನ್ಸ್ ನೀಡಿದೆ.  ಫೆ.22ಕ್ಕೂ ಮುಂಚಿತವಾಗಿ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಜ.18ರಂದು ವಿಚಾರಣೆಗೆ ಹಾಜರಾಗುವಂತೆ ಈ ಹಿಂದೆ ಕೋರ್ಟ್ ಆದೇಶಿಸಿತ್ತು. ಕಳೆದ ವರ್ಷ ಮಾ.23ರಂದು ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ರಾಹುಲ್ …

Read More »

ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿಯಲ್ಲಿ ಪಲ್ಸ ಪೋಲಿಯೊ ಅಭಿಯಾನಶ್ರೀ ಸಂತೋಷ ಜಾರಕಿಹೊಳಿ ಭಾಗವಹಿಸಿದರು.

ಇಂದು ಎಲ್ಲೆಡೆ ಪಲ್ಸ ಪೋಲಿಯೊ ಅಭಿಯಾನ ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿಯಲ್ಲಿಯೂ ಕೂಡ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿ ಚೇರಮನರಾದ ಶ್ರೀ ಸಂತೋಷ ಜಾರಕಿಹೊಳಿ ಭಾಗವಹಿಸಿದರು. ಇಂದು ಎಲ್ಲೆಡೆ ಪಲ್ಸ ಪೋಲಿಯೊ ಅಭಿಯಾನ ನಡೆಯುತ್ತಿದೆ. ಅದರಂತೆಯೇ ಗೋಕಾಕ ತಾಲೂಕಿನ ಹಿರೇನಂದಿ ಗ್ರಾಮದ ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿಯಲ್ಲಿಯೂ ಕೂಡ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸೌಭಾಗ್ಯಲಕ್ಷ್ಮೀ ಶುಗರ್ಸ್ ಫ್ಯಾಕ್ಟರಿ ಚೇರಮನರಾದ …

Read More »

ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಿದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ……..

ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಕಳೆದ ರಾತ್ರಿ ಜನಿಸಿದ ಮೂವರು ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಿದರು. ಹುಬ್ಬಳ್ಳಿಯಲ್ಲಿ ಬೆಳಿಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನೆಗೆ ಅಮಿತ್ ಶಾ ಉಪಹಾರಕ್ಕೆ ಆಗಮಿಸಿದ್ದರು. ಈ ವೇಳೆ ಅಮಿತ್ ಶಾ ಅವರು ಜೋಶಿ ಮನೆಯಲ್ಲಿ ಮೂವರು ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದರು. ಹುಬ್ಬಳ್ಳಿ ಚಿಟಗುಪ್ಪಿ …

Read More »

ಪೌರತ್ವ ಕೇವಲ ಹಕ್ಕು ಮಾತ್ರವಲ್ಲ ಸಮಾಜದ ಕರ್ತವ್ಯ! ನ್ಯಾಯಮೂರ್ತಿ ಶರತ್ ಎ. ಬೊಬ್ಡೆ

ನಾಗ್ಪುರ, ಜ.19-ಪೌರತ್ವ ಕೇವಲ ಹಕ್ಕು ಮಾತ್ರವಲ್ಲ, ಅದು ಪ್ರತಿಯೊಬ್ಬ ನಾಗರಿಕರೂ ಸಮಾಜದಲ್ಲಿ ನಿರ್ವಹಿಸಬೇಕಾದ ಕರ್ತವ್ಯವೂ ಆಗಿದೆ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಶರತ್ ಎ. ಬೊಬ್ಡೆ ಹೇಳಿದ್ದಾರೆ. ನಾಗ್ಪುರದ ರಾಷ್ಟ್ರಸಂತ ತುಕಡೋಜಿ ಮಹಾರಾಜ್ ನಾಗಪುರ ಯುನಿವರ್ಸಿಟಿ (ಆರ್‍ಟಿಎಂಎನ್‍ಯು) 107ನೇ ಘಟಿಕೋತ್ಸವದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳು ಮಾತನಾಡಿದರು. ಪೌರತ್ವವನ್ನು ಯಾರೂ ಕೂಡ ಕೇವಲ ಹಕ್ಕು ಎಂದು ತಿಳಿಯಬಾರದು. ಇದು ಹಕ್ಕಿಗಿಂತಲೂ ನಾವು ಜವಾಬ್ದಾರಿಯುತ ಪ್ರಜೆಗಳಾಗಿ ಸಮಾಜದ ಕಡೆಗೆ ನಿರ್ವಹಿಸಬೇಕಾದ ಕರ್ತವ್ಯವೂ ಆಗಿದೆ …

Read More »

ಸಚಿವಾಕಾಂಕ್ಷಿಗಳ ಋಣ ನನ್ನ ಮೇಲಿದೆ. ಅವರನ್ನು ಸಚಿವರನ್ನಾಗಿ ಮಾಡುವುದು ನಮ್ಮ ಕರ್ತವ್ಯ.

ಮೈಸೂರು, ಜ.19-ಸಚಿವಾಕಾಂಕ್ಷಿಗಳ ಋಣ ನನ್ನ ಮೇಲಿದೆ. ಅದನ್ನು ತೀರಿಸುವುದು ನನ್ನ ಕರ್ತವ್ಯ ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ನಗರದ ಸರ್ಕಾರಿ ವಸತಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವಾಕಾಂಕ್ಷಿಗಳಿಂದ ಇಂದು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ. ಅವರನ್ನು ಸಚಿವರನ್ನಾಗಿ ಮಾಡುವುದು ನಮ್ಮ ಕರ್ತವ್ಯ. ಅದನ್ನು ಮುಂದಿನ ದಿನಗಳಲ್ಲಿ ನಿರ್ವಹಿಸುತ್ತೇನೆ ಎಂದರು. ಸಚಿವ ಸ್ಥಾನದ ಆಕಾಂಕ್ಷಿಗಳ ಬಗ್ಗೆ ಬಿಜೆಪಿ ನಾಯಕರ ಟೀಕೆ ವಿಚಾರವಾಗಿ ಕೇಳಿ ಪ್ರಶ್ನೆಗೆ ಟೀಕೆ ಮಾಡುತ್ತಿರುವವರು ಬಾಯಿ ಮುಚ್ಚಿಕೊಂಡಿರಬೇಕು. ಅವರುಗಳ …

Read More »

ಸ್ವಿಡ್ಜರ್‌ಲ್ಯಾಂಡ್‌ನಿಂದ ಬಂದು ಎರಡೇ ದಿನದಲ್ಲಿ ಸಂಪುಟ ವಿಸ್ತರಣೆ ಮಾಡ್ತೀನಿ’ ವಿದೇಶಕ್ಕೆ ಹಾರಿದ ಸಿಎಂ

ಬೆಂಗಳೂರು, ಜ.19-ಸ್ವಿಡ್ಜರ್‌ಲ್ಯಾಂಡ್‌ನ ದಾವೋಸ್‍ನಿಂದ ಹಿಂದಿರುಗಿದ ಎರಡೇ ದಿನಗಳಲ್ಲಿ ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು. ಈ ಬಗ್ಗೆ ಯಾರಿಗೂ ಯಾವುದೇ ರೀತಿಯ ಗೊಂದಲ ಬೇಡ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ. ವಿದೇಶಕ್ಕೆ ತೆರಳುವ ಮುನ್ನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ದಾವೋಸ್‍ನಿಂದ ಹಿಂದುರುಗಿದ ಎರಡೇ ದಿನಗಳಲ್ಲಿ ಸಂಪುಟ ವಿಸ್ತರಣೆ ಮಾಡುತ್ತೇನೆ. ಈ ಸಂಬಂಧ ನಿನ್ನೆ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಶಾ …

Read More »

ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿ ಸರ್ಕಾರ ಪತನವಾಗಲಿದೆ!.. ಎಸ್.ಆರ್.ಪಾಟೀಲ್

ಬಾಗಲಕೋಟೆ,ಜ.19- ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿ ಸರ್ಕಾರ ಪತನವಾಗಲಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ್ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಪತನವಾದ ಬಳಿಕ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆದು ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪರಿಸ್ಥಿತಿ ಚಿಂತಾಜನಕವಾಗಿದೆ. ಬಿಜೆಪಿಯವರು ವಾಮಮಾರ್ಗದಿಂದ ಅಧಿಕಾರಕ್ಕೆ ಬಂದಿದ್ದಾರೆ. 24 ಗಂಟೆಯಲ್ಲಿ ಸಂಪುಟ ವಿಸ್ತರಣೆ …

Read More »

ರಾಜ್ಯ ಸರ್ಕಾರಕ್ಕೆ ಅಧಿವೇಶನ ನಡೆಸಿ ಜನರ ಸಮಸ್ಯೆ ಚರ್ಚೆಯಾಗುವುದು ಬೇಕಿಲ್ಲ. ಅದಕ್ಕಾಗಿ ವಿಧಾನಮಂಡಲ ಅಧಿವೇಶನ ಕರೆಯಲು ಹಿಂದೆ-ಮುಂದೆ ನೋಡುತ್ತಿದೆ

ಬೆಂಗಳೂರು, ಜ.18- ರಾಜ್ಯ ಸರ್ಕಾರಕ್ಕೆ ಅಧಿವೇಶನ ನಡೆಸಿ ಜನರ ಸಮಸ್ಯೆ ಚರ್ಚೆಯಾಗುವುದು ಬೇಕಿಲ್ಲ. ಅದಕ್ಕಾಗಿ ವಿಧಾನಮಂಡಲ ಅಧಿವೇಶನ ಕರೆಯಲು ಹಿಂದೆ-ಮುಂದೆ ನೋಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ನಗರದ ಪ್ರೆಸ್‍ಕ್ಲಬ್‍ನಲ್ಲಿ ಪತ್ರಕರ್ತ ಚಂದ್ರಶೇಖರ್ ರಾವ್ ಅವರ ನೆನಪು ಮಾಸುವ ಮುನ್ನ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು, ವರ್ಷಕ್ಕೆ ಕನಿಷ್ಠ 60 ದಿನ ಅಧಿವೇಶನ ನಡೆಸಬೇಕೆಂಬ ಕಾನೂನನ್ನು ನಾವೇ ಮಾಡಿಕೊಂಡಿದ್ದೇವೆ. ಆದರೆ, ಅದು ಸರಿಯಾಗಿ ಪಾಲನೆಯಾಗುತ್ತಿಲ್ಲ. ಈ …

Read More »

ನಟಿ ರಶ್ಮಿಕಾ ಮಂದಣ್ಣ ಅವರಿಗೆ ಇದೇ 21ರಂದು ವಿಚಾರಣೆಗೆ ಹಾಜರಾಗುವಂತೆ ಐಟಿ ನೋಟಿಸ್

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಗೆ ಸಿಲುಕಿರುವ ಬಹುಭಾಷಾ ನಟಿ ರಶ್ಮಿಕಾ ತಂದೆ ಮದನ್ ಮಂದಣ್ಣ ಹಾಗೂ ತಾಯಿ ಸುಮನ್ ಅವರಿಗೆ ಪ್ರತ್ಯೇಕವಾಗಿ ನೋಟಿಸ್ ಜಾರಿ ಬೆಂಗಳೂರು,ಜ.18- ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಗೆ ಸಿಲುಕಿರುವ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಇದೇ 21ರಂದು(ಮಂಗಳವಾರ) ವಿಚಾರಣೆಗೆ ಹಾಜರಾಗುವಂತೆ ಐಟಿ ನೋಟಿಸ್ ಜಾರಿ ಮಾಡಿದೆ. ಐಟಿ ಅಧಿಕಾರಿಗಳು ರಶ್ಮಿಕಾ ಮಂದಣ್ಣ , ಅವರ ತಂದೆ ಮದನ್ ಮಂದಣ್ಣ ಹಾಗೂ ತಾಯಿ …

Read More »