Home / ರಾಜಕೀಯ (page 204)

ರಾಜಕೀಯ

ಚಳಿಗಾಲದ ಅಧಿವೇಶನಸೋಮವಾರ ಪ್ರಾರಂಭವಾಗಲಿದ್ದು, ಪ್ರತಿಪಕ್ಷಗಳು ಸಂಸತ್ತಿಗೆ ಅಡ್ಡಿಪಡಿಸಿದರೆ “ಕೆಟ್ಟ ಫಲಿತಾಂಶ” ಎದುರಿಸಬೇಕಾಗುತ್ತದೆ :

ಹೊಸದಿಲ್ಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ಸೋಮವಾರ ಪ್ರಾರಂಭವಾಗಲಿದ್ದು, ಪ್ರತಿಪಕ್ಷಗಳು ಸಂಸತ್ತಿಗೆ ಅಡ್ಡಿಪಡಿಸಿದರೆ “ಕೆಟ್ಟ ಫಲಿತಾಂಶ” ಎದುರಿಸಬೇಕಾಗುತ್ತದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಭಾನುವಾರ ಹೇಳಿದ್ದಾರೆ.   ಪ್ರತಿಪಕ್ಷಗಳು ಸಂಸತ್ತಿಗೆ ಅಡ್ಡಿಪಡಿಸಿದರೆ, ಇಂದು ಬಂದಿರುವುದಕ್ಕಿಂತ ಕೆಟ್ಟ ಫಲಿತಾಂಶವನ್ನು ಎದುರಿಸಬೇಕಾಗುತ್ತದೆ ಎಂದು ಸಚಿವರು ಹೇಳಿದರು. ಸಂಸತ್ ನ ಚಳಿಗಾಲದ ಅಧಿವೇಶನವು ಡಿಸೆಂಬರ್ 4ರಿಂದ 22ರವರೆಗೆ ನಡೆಯಲಿದೆ. ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ವಿರುದ್ಧದ ‘ನಗದು-ಪ್ರಶ್ನೆ’ ಆರೋಪಗಳು ಸೇರಿ …

Read More »

ಬಿಜೆಪಿಗೆ ಉತ್ತರ ಭಾರತದ ಮೂರು ರಾಜ್ಯಗಳ ಚುನಾವಣ ಫಲಿತಾಂಶ ಉತ್ಸಾಹ ಇಮ್ಮಡಿಗೊಳಿಸಿದೆ.

ಹೊಸದಿಲ್ಲಿ: 2024 ರ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಪೂರ್ಣ ಬಹುಮತ ಪಡೆದು ಮೂರನೇ ಬಾರಿಗೆ ಅಧಿಕಾರ ಹಿಡಿಯುವ ಹವಣಿಕೆಯಲ್ಲಿರುವ ಬಿಜೆಪಿಗೆ ಉತ್ತರ ಭಾರತದ ಮೂರು ರಾಜ್ಯಗಳ ಚುನಾವಣ ಫಲಿತಾಂಶ ಉತ್ಸಾಹ ಇಮ್ಮಡಿಗೊಳಿಸಿದೆ. ಎಲ್ಲ ಸವಾಲುಗಳನ್ನು, ಸಮೀಕ್ಷೆಗಳನ್ನೂ ಮೀರಿ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ ಗಢ ದಲ್ಲಿ ಬಿಜೆಪಿ ಅಧಿಕಾರಕ್ಕೇರಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ಉತ್ತರ ಭಾರತದಲ್ಲಿ ಅತೀ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಲೆಕ್ಕಾಚಾರ ಹಾಕಿಯೇ ಜಿದ್ದಿಗೆ ಬಿದ್ದು ರಣತಂತ್ರ …

Read More »

ಅಧಿವೇಶನದ ಹಿನ್ನೆಲೆ ಪ್ರತಿಭಟನೆ: ಟೆಂಟ್ ಪಕ್ಕದ ರೈತರ ಗೋಳು ಕೇಳುವರ್ಯಾರು?

ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲ ಅಧಿವೇಶನ ಆರಂಭವಾಯಿತು ಎಂದರೆ ಸಾಕು ಪ್ರತಿಭಟನೆಗಳ ಪರ್ವ ಆರಂಭವಾಗುತ್ತದೆ. ಇನ್ನು ಪ್ರತಿಭಟನಾ ಟೆಂಟ್​ಗಳ ಪಕ್ಕದ ಹೊಲಗಳಲ್ಲಿ ಜನರ ಓಡಾಟದಿಂದ ಅವರು ಬೆಳೆದಿದ್ದ ಬೆಳೆಗಳು ಹಾಳಾಗುವ ಆತಂಕ ಕಾಡುತ್ತಿದೆ. ಹೌದು ಪ್ರತಿವರ್ಷವೂ ಬೆಳಗಾವಿಯ ಸುವರ್ಣ ವಿಧಾನಸೌಧ ಬಳಿಯ ಹಲಗಾ, ಬಸ್ತವಾಡ, ಕೊಂಡಸಕೊಪ್ಪ ಗ್ರಾಮಗಳ ರೈತರಿಗೆ ಈ ಗೋಳು ತಪ್ಪಿದ್ದಲ್ಲ. ಈ ಭಾರಿ ಅಧಿವೇಶನ ಹಿನ್ನೆಲೆ ಎರಡು ಕಡೆ ಪ್ರತಿಭಟನಾ ಟೆಂಟ್​​​ ಹಾಕಲಾಗಿದ್ದು, ಒಂದು ಹಲಗಾ ಸುವರ್ಣ …

Read More »

ನಾಳೆಯಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಜಂಗಿಕುಸ್ತಿಗೆ ವೇದಿಕೆಯಾಗಲಿದೆ

ಬೆಂಗಳೂರು: ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ಸೋಮವಾರದಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಆರಂಭವಾಗಲಿದ್ದು, ಆಡಳಿತ-ಪ್ರತಿಪಕ್ಷಗಳ ನಡುವಿನ ಜಂಗಿಕುಸ್ತಿಗೆ ವೇದಿಕೆಯಾಗುವ ಸೂಚನೆ ದೊರೆತಿದೆ.   ಪ್ರತಿಪಕ್ಷದ ನಾಯಕರಿಲ್ಲದೆ ಶಕ್ತಿಹೀನವಾಗಿದ್ದ ಬಿಜೆಪಿ ಇದೀಗ ಆರ್.ಅಶೋಕ್ ನಾಯಕತ್ವದಲ್ಲಿ ಕಲರವ ಮಾಡಲಿದ್ದು, ಜೆಡಿಎಸ್ ಜೊತೆಗಿನ ಮೈತ್ರಿ ಖಚಿತವಾಗಿರುವುದರಿಂದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಜೊತೆ ಸೇರಿ ಕಾಂಗ್ರೆಸ್​ ಸರ್ಕಾರದ ವಿರುದ್ಧ ಮುಗಿಬೀಳಲಿದೆ. ಸರ್ಕಾರದ ವಿರುದ್ಧ ಹೋರಾಡುವ ಸಂಬಂಧ ಶುಕ್ರವಾರ ಆರ್.ಅಶೋಕ್ ನಿವಾಸದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ …

Read More »

ಗುಂಡು ಸೂಜಿ ನುಂಗಿದ ಬಾಲಕ: ಬ್ರಾಂಕೋಸ್ಕೋಪ್ ಮೂಲಕ ಹೊರತೆಗೆದ ರಿಮ್ಸ್ ವೈದ್ಯರು

ರಾಯಚೂರು: ಆಟವಾಡುವ ಭರದಲ್ಲಿ ಬಾಲಕನೊಬ್ಬ ಗುಂಡು ಸೂಜಿ ನುಂಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಸಿರವಾರ ತಾಲೂಕಿನ ಮುಚ್ಚುಳ‌ಗುಡ್ಡ ಕ್ಯಾಂಪ್​ನ 13 ವರ್ಷದ ಬಾಲಕ ಶಿವಕುಮಾರ ದೇವರಾಜ ಶಾಲೆಯಲ್ಲಿ ಆಟವಾಡುವ ವೇಳೆ ನೋಟಿಸ್​ ಬೋರ್ಡ್ ಅಂಟಿಸುವ ಗುಂಡು ಸೂಜಿಯನ್ನು ಬಾಯಿಯಲ್ಲಿ ಇಟ್ಟುಕೊಂಡಾಗ ಆಕಸ್ಮಿಕವಾಗಿ ನುಂಗಿದ್ದಾನೆ. ಪರಿಣಾಮ ಗುಂಡು ಸೂಜಿಯು ಬಲ ಶ್ವಾಸಕೋಶದೊಳಗಡೆ ಸೇರಿತ್ತು. ಹೀಗಾಗಿ ಚಿಕಿತ್ಸೆಗಾಗಿ ಬಾಲಕನನ್ನು ರಿಮ್ಸ್ ಬೋಧಕ ಆಸ್ಪತ್ರೆಗೆ ದಾಖಲಿಸಲಾಯಿತು. ದಾಖಲಾದ ಬಾಲಕನ ಶ್ವಾಸಕೋಶದ ಎಕ್ಸ್​ ರೇ ಮಾಡಿಸಿದಾಗ …

Read More »

ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಬಿಜೆಪಿ ಮುನ್ನಡೆ:

ನವದೆಹಲಿ: ರಾಜಸ್ಥಾನ ಹಾಗೂ ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಬಿಜೆಪಿ ಗಣನೀಯ ಮುನ್ನಡೆ ಸಾಧಿಸುತ್ತಿದ್ದು, ಭಾರತೀಯ ಜನತಾ ಪಕ್ಷದ (ಬಿಜೆಪಿ) ಪ್ರಧಾನ ಕಚೇರಿಯಲ್ಲಿ ಸಂಭ್ರಮಾಚರಣೆ ಮಾಡಲಾಗುತ್ತಿದೆ.         ಬಿಜೆಪಿ ನಾಯಕ ಮಂಜಿಂದರ್ ಸಿಂಗ್ ಸಿರ್ಸಾ ಅವರು ಸಂತಸ ವ್ಯಕ್ತಪಡಿಸಿದ್ದಾರೆ. “ಇದು ಬಿಜೆಪಿಗೆ ಸಕರಾತ್ಮಕ ಬೆಳವಣಿಗೆಯನ್ನು ಸೂಚಿಸುತ್ತಿದೆ. ಪಕ್ಷವು ಪ್ರತಿ ರಾಜ್ಯದಲ್ಲೂ ಮುನ್ನಡೆ ಸಾಧಿಸುತ್ತಿದೆ. ಮತ ಹಂಚಿಕೆ ಮತ್ತು ಸೀಟು ಹಂಚಿಕೆ ಎರಡರಲ್ಲೂ ನಾವು ಎಲ್ಲಾ ರಾಜ್ಯಗಳಲ್ಲಿ ಮುನ್ನಡೆ ಸಾಧಿಸಿದ್ದೇವೆ” ಎಂದು …

Read More »

ಅಂಬಾರಿ ಡಬಲ್ ಡೆಕ್ಕರ್ ಬಸ್‌ ಬೆಳಗಾವಿ ಜಿಲ್ಲೆಯಲ್ಲಿ ಶೀಘ್ರದಲ್ಲೇ ಪ್ರಯಾಣ ಆರಂಭ

ಬೆಳಗಾವಿ, : ಬೆಳಗಾವಿ ಜಿಲ್ಲೆಯ ಜನತೆಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ನೀಡಿದ್ದು, ಶೀಘ್ರದಲ್ಲೇ ಅಂಬಾರಿ ಡಬಲ್ ಡೆಕ್ಕರ್ ಬಸ್‌ ಬೆಳಗಾವಿ ಜಿಲ್ಲೆಯಲ್ಲಿ ಪ್ರಯಾಣ ಆರಂಭಿಸಲಿದೆ. ಸಾರಿಗೆ ಬಸ್‌ನಲ್ಲಿ ಪ್ರಯಾಣಿಸುವವರು ಶೀಘ್ರದಲ್ಲೇ ಅಂಬಾರಿ ಡಬಲ್ ಡೆಕ್ಕರ್ ಬಸ್‌ನಲ್ಲಿ ಪ್ರಯಾಣಿಸುವ ಅವಕಾಶವನ್ನು ಪಡೆಯಲಿದ್ದಾರೆ.   ಪ್ರಸ್ತುತ ರಾಜ್ಯ ಪ್ರವಾಸೋದ್ಯಮ ಇಲಾಖೆಯಡಿ ಮೈಸೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ವಿಶಿಷ್ಟ ಬಸ್‌ಗಳು ಬೆಳಗಾವಿಗೆ ತೆರಳಿದ್ದು, ಶೀಘ್ರದಲ್ಲೇ ಬೆಳಗಾವಿ ಪ್ರಯಾಣಿಕರ ಸೇವೆಗೆ ಲಭ್ಯವಾಗಲಿದೆ. ವಿಶೇಷವಾಗಿ ರಚನೆ ಮಾಡಿರುವ ಅಂಬಾರಿ …

Read More »

ಲೋಕಸಭೆನೂ ಗೆಲ್ತಿವಿ ರಾಹುಲ್‌ ಪ್ರಧಾನಿಯಾಗ್ತಾರೆ:ಸಲೀಂ ಅಹಮ್ಮದ್ ಭವಿಷ್ಯ

ದಾವಣಗೆರೆ, ಡಿಸೆಂಬರ್‌ 03: ಪಂಚರಾಜ್ಯ ಚುನಾವಣೆ ಸೆಮಿ ಫೈನಲ್. ಇಲ್ಲಿ ಗೆದ್ದು ಲೋಕಸಭೆನೂ ಗೆಲ್ಲುತ್ತೇವೆ, ನಮ್ಮ ರಾಹುಲ್ ಗಾಂಧಿ ಪ್ರಧಾನಿ ಆಗುತ್ತಾರೆ ಎಂದು ದಾವಣಗೆರೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ , ಕಾಂಗ್ರೆಸ್ ಪಕ್ಷಕ್ಕೆ ಒಳ್ಳೇಯ ದಿನ. ಐದರಲ್ಲಿ ನಾಲ್ಕು ರಾಜ್ಯಗಳಲ್ಲಿ ಗೆದ್ದೇ ಗೆಲ್ಲುತ್ತೇವೆ. ಎಲ್ಲಾ ಸಮೀಕ್ಷೆಗಳು ಕೂಡ ನಮ್ಮ ಪರವಾಗಿ ಬಂದಿವೆ. ಪಂಚರಾಜ್ಯ …

Read More »

ಅಂಗನವಾಡಿ, ಜಲ ಕುಂಭ ನಿರ್ಮಾಣಕ್ಕೆ ಜಮೀನು ದಾನ ಮಾಡಿದ ಬಡ ರೈತ!

ಚಿಕ್ಕೋಡಿ(ಬೆಳಗಾವಿ): ಆಸ್ತಿಗಾಗಿ ಅಣ್ಣ ತಮ್ಮಂದಿರೇ ದಾಯಾದಿಗಳಾಗಿರುವ ಮತ್ತು ತುಂಡು ಭೂಮಿಗಾಗಿ ಕೊಲೆಗಳೇ ನಡೆದಿರುವುದನ್ನು ನೀವು ನೋಡಿರುತ್ತೀರಾ ಮತ್ತು ಕೇಳಿರುತ್ತೀರಾ. ಆದರೆ, ಇತಂಹ ಕಾಲದಲ್ಲಿಯೂ ಬಡ ರೈತನೊಬ್ಬ ಗ್ರಾಮದ ಒಳಿತಿಗಾಗಿ ಜಮೀನು ದಾನ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ. ಹೌದು, ಜಿಲ್ಲೆಯ ಹುಕ್ಕೇರಿ ತಾಲೂಕಿನ ಹರಗಾಪೂರ ಗ್ರಾಮದ ಬಡ ರೈತ ಅಪ್ಪಣ್ಣಾ ಕಾನೂರೆ ಎಂಬುವರು ತಮಗಿದ್ದ ಅಲ್ಪ ಪ್ರಮಾಣದ ಒಂದು ಎಕರೆ ಜಮೀನಿನ ಶೇ.25ರಷ್ಟು ಭಾಗ ಅಂದರೆ 10 ಗುಂಟೆ ಜಮೀನನ್ನು ಗ್ರಾಮದ ದಲಿತ …

Read More »

ನಾಲ್ಕು ರಾಜ್ಯಗಳ ಪ್ರಮುಖ ನಾಯಕರ ಚುನಾವಣಾ ಫಲಿತಾಂಶದ ಟ್ರೆಂಡ್​ ಇಲ್ಲಿದೆ.

ಹೈದರಾಬಾದ್​: ತೆಲಂಗಾಣದಲ್ಲಿ ಮುಖ್ಯಮಂತ್ರಿ ಹಾಗೂ ಬಿಆರ್​ಎಸ್​ ನಾಯಕ ಕೆ. ಚಂದ್ರಶೇಖರ್​ ರಾವ್​ ಕಾಮರೆಡ್ಡಿ ಕ್ಷೇತ್ರದಲ್ಲಿ ಹಿನ್ನಡೆ ಅನುಭವಿಸುತ್ತಿದ್ದಾರೆ. ಇದೇ ಕ್ಷೇತ್ರದಲ್ಲಿ ಕಾಂಗ್ರೆಸ್​ ನಾಯಕ ರೇವಂತ್​ ರೆಡ್ಡಿ ಮುನ್ನಡೆ ಸಾಧಿಸಿದ್ದಾರೆ. ಕೋಡಂಗಲ್​ ಕ್ಷೇತ್ರದಲ್ಲೂ ಸ್ಪರ್ಧಿಸಿರುವ ಪ್ರದೇಶ ಕಾಂಗ್ರೆಸ್​ ಅಧ್ಯಕ್ಷ ರೇವಂತ್​​ ರೆಡ್ಡಿ ಅಲ್ಲೂ ಮುನ್ನಡೆ ಸಾಧಿಸಿದ್ದಾರೆ. ಇದೇ ವೇಳೆ ಮತ್ತೊಂದು ಕ್ಷೇತ್ರ ಗಜ್ವಾಲ್​ನಲ್ಲಿ ಸ್ಪರ್ಧಿಸಿರುವ ಮುಖ್ಯಮಂತ್ರಿ ಕೆಸಿಆರ್, ಆ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಮುಖ್ಯಮಂತ್ರಿ ಕೆಸಿಆರ್​ ಪುತ್ರ ಕೆ ಟಿ ರಾಮರಾವ್​ ಸಿರ್ಸಿಲಾ ಕ್ಷೇತ್ರದಲ್ಲಿ ಮುನ್ನಡೆ …

Read More »