ದೇಶಾದ್ಯಂತ ಇರುವ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನ ಶೀಘ್ರದಲ್ಲೇ ಭರ್ತಿ ಮಾಡಲಾಗುವುದು. ವಿಶ್ವವಿದ್ಯಾನಿಲಯ ಅನುದಾನ ಆಯೋಗವು ದೇಶಾದ್ಯಂತ ವಿಶ್ವವಿದ್ಯಾಲಯಗಳ ಉಪಕುಲಪತಿಗಳು, ಸಂಸ್ಥೆಗಳು ಮತ್ತು ಕಾಲೇಜುಗಳ ಪ್ರಾಂಶುಪಾಲರಿಗೆ ಸುತ್ತೋಲೆ ಹೊರಡಿಸಿದೆ. ಈ ಸುತ್ತೋಲೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನ ಭರ್ತಿ ಮಾಡುವಂತೆ ತಿಳಿಸಲಾಗಿದೆ. ಯುಜಿಸಿ ಹೊರಡಿಸಿರುವ ನೋಟಿಸ್ ಪ್ರಕಾರ, ಅಧ್ಯಾಪಕರಲ್ಲಿ (Faculty) ಕಾಯಂ ನೇಮಕಾತಿಗೆ ಸಂಬಂಧಿಸಿದಂತೆ ಸೂಚನೆಗಳನ್ನ ನೀಡಲಾಗಿದೆ. ಏಪ್ರಿಲ್ 1, 2021ರ ಪ್ರಕಾರ, ದೆಹಲಿ ವಿಶ್ವವಿದ್ಯಾನಿಲಯದಲ್ಲಿ (DU) …
Read More »LPG ಗ್ರಾಹಕರಿಗೆ ಗುಡ್ ನ್ಯೂಸ್ : ಇನ್ಮುಂದೆ 900 ರೂಪಾಯಿಗಲ್ಲ 587ಕ್ಕೆ ಸಿಗಲಿದೆ ಸಿಲಿಂಡರ್
ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಜನ ಸಾಮಾನ್ಯರನ್ನ ಬೆಚ್ಚಿ ಬೀಳಿಸಿದೆ. ಅಗತ್ಯ ವಸ್ತುಗಳ ಬೆಲೆಯೊಂದಿಗೆ ಪೆಟ್ರೋಲ್, ಡೀಸೆಲ್ ಬೆಲೆಯೂ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಜೊತೆಗೆ ಅಡುಗೆ ಅನಿಲದ ಬೆಲೆಯೂ ಏರಿಕೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಗ್ಯಾಸ್ ಬೆಲೆ ಸಾರ್ವಕಾಲಿಕ ಗರಿಷ್ಠ 900 ರೂ.ಗೆ ಏರಿಕೆಯಾಗಿದೆ. ಅದ್ರಂತೆ, ದಿನ ಬಳಕೆಯ ವಸ್ತುಗಳ ಜತೆಗೆ 900 ರೂ.ಗೆ ಗ್ಯಾಸ್ ಸಿಲಿಂಡರ್ ಖರೀದಿಸುವುದು ಜನ ಸಾಮಾನ್ಯರಿಗೆ ಹೊರೆಯಾಗಿ ಪರಿಣಮಿಸಿದೆ. ಇನ್ನು ಕೆಲ ದಿನಗಳಿಂದ ಸರ್ಕಾರ ನೀಡುವ ಗ್ಯಾಸ್ …
Read More »ಲೋಕಸಭೆ ಬೆನ್ನಲ್ಲೇ ರಾಜ್ಯಸಭೆಯಲ್ಲೂ ವಿವಾದಿತ 3 ಕೃಷಿ ಕಾಯ್ದೆ ವಾಪಸ್ -ಸಂಭ್ರಮದಲ್ಲಿ ಮುಳುಗಿದ ರೈತರು
ನವದೆಹಲಿ: ರೈತ ಸಂಘಟನೆಗಳ ತೀವ್ರ ವಿರೋಧದ ನಡುವೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ಕೃಷಿ ಕಾಯ್ದೆಗಳನ್ನು ಕೊನೆಗೂ ಇಂದಿನ ರಾಜ್ಯಸಭೆ ಸಂಸತ್ ಕಲಾಪದಲ್ಲಿ ವಾಪಸ್ ಪಡೆಯಲಾಗಿದೆ. ಈ ಹಿಂದೆಯೇ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದಂತೆ ಈಗ ಕಲಾಪದಲ್ಲಿ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ವಿವಾದಿತ ಮೂರು ಕೃಷಿ ಕಾಯ್ದೆಗಳನ್ನ ವಾಪಸ್ ಪಡೆಯುವ ಸಂಬಂಧ ಬಿಲ್ ಮಂಡಿಸಿದರು. ರೈತರ ಉತ್ಪಾದನೆ ವ್ಯಾಪಾರ …
Read More »ಮೈಸೂರು: ಜಿಲ್ಲೆಯ ನಂಜನಗೂಡಿನ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಖಾಕಿ ವಶದಲ್ಲಿದ್ದ ವ್ಯಕ್ತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಮೈಸೂರು: ಜಿಲ್ಲೆಯ ನಂಜನಗೂಡಿನ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಖಾಕಿ ವಶದಲ್ಲಿದ್ದ ವ್ಯಕ್ತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮೈಸೂರು: ಜಿಲ್ಲೆಯ ನಂಜನಗೂಡಿನ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಖಾಕಿ ವಶದಲ್ಲಿದ್ದ ವ್ಯಕ್ತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಈ ವೇಳೆ ಮೃತ ಸಿದ್ದರಾಜುವಿಗೆ ರಾತ್ರಿ ವೇಳೆ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಇನ್ನು ವಿಷಯ ತಿಳಿದು ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಚೇತನ್ ಭೇಟಿ …
Read More »12 ಸಂಸದರನ್ನು ಅಮಾನತುಗೊಳಿಸಿ ಆದೇಶ
ನವದೆಹಲಿ: ಸಂಸತ್ ಮುಂಗಾರು ಅಧಿವೇಶನದ ವೇಳೆ ಅಶಿಸ್ತು ತೋರಿದ ಪ್ರತಿಪಕ್ಷದ 12 ಸಂಸದರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಆಗಸ್ಟ್ ನಲ್ಲಿ ನಡೆದ ಮುಂಗಾರು ಅಧಿವೇಶನದಲ್ಲಿ ಅಶಿಸ್ತು ತೋರಿದ್ದ ಕಾಂಗ್ರೆಸ್ ನ 6, ಟಿಎಂಸಿ ಹಾಗೂ ಶಿವಸೇನೆಯ ತಲಾ ಇಬ್ಬರು ಹಾಗೂ ಸಿಪಿಐ ಮತ್ತು ಸಿಪಿಎಂ ನಿಂದ ತಲಾ ಒಬ್ಬರು ಸಂಸದರ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು ಒಟ್ಟು 12 ಸಂಸದರನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ನಿರ್ಣಯ …
Read More »ಲೋಕಸಭೆಯಲ್ಲಿ ಮಸೂದೆ ಕುರಿತು ಚರ್ಚೆಗೆ ಕಾಂಗ್ರೆಸ್ ಒತ್ತಾಯಿಸಿತ್ತು. ಇದಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಗಲಾಟೆ ಶುರು
ಗದ್ದಲದ ನಡುವೆಯೇ ಲೋಕಸಭೆಯಲ್ಲಿ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವ ಮಸೂದೆಯನ್ನು ಅಂಗೀಕರಿಸಲಾಗಿದೆ. ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಶುರುವಾಗಿದೆ. ಅಧಿವೇಶನದ ಮೊದಲ ದಿನವೇ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವ ಮಸೂದೆಯನ್ನು ಅಂಗೀಕರಿಸಲಾಗಿದೆ. ಇದರೊಂದಿಗೆ ಲೋಕಸಭೆಯ ಕಲಾಪವನ್ನು ಮುಂದೂಡಲಾಗಿದೆ. ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಕೃಷಿ ಕಾನೂನುಗಳನ್ನು ಹಿಂಪಡೆಯುವ ಕುರಿತು ಲೋಕಸಭೆಯಲ್ಲಿ ಮಸೂದೆಯನ್ನು ಮಂಡಿಸಿದರು. ಕೆಲವೇ ಸಮಯದಲ್ಲಿ ಕೃಷಿ ಕಾನೂನು ಹಿಂಪಡೆಯುವ ಮಸೂದೆಯನ್ನು ಲೋಕಸಭೆಯು ಅಂಗೀಕರಿಸಲಾಯ್ತು. ಲೋಕಸಭೆಯಲ್ಲಿ ಮಸೂದೆ ಕುರಿತು …
Read More »ಸಚಿವ ಈಶ್ವರಪ್ಪ ಅಭಿಮಾನಪೂರ್ವಕವಾಗಿ ಹಾಗೆ ಹೇಳಿರಬಹುದು. ನಮ್ಮ ಮೇಲಿರುವ ಪ್ರೀತಿ, ವಿಶ್ವಾಸ ಹಾಗೂ ನಮ್ಮ ಕೆಲಸ, ಸಾಧನೆಯ ಹಾದಿ ನೋಡಿ ಈ ರೀತಿ ಹೇಳಿದ್ದಾರೆ. ಇದಕ್ಕೆ ನಾನು ಋಣಿ’
ಬಾಗಲಕೋಟೆ: ‘ಸಚಿವ ಈಶ್ವರಪ್ಪ ಅಭಿಮಾನಪೂರ್ವಕವಾಗಿ ಹಾಗೆ ಹೇಳಿರಬಹುದು. ನಮ್ಮ ಮೇಲಿರುವ ಪ್ರೀತಿ, ವಿಶ್ವಾಸ ಹಾಗೂ ನಮ್ಮ ಕೆಲಸ, ಸಾಧನೆಯ ಹಾದಿ ನೋಡಿ ಈ ರೀತಿ ಹೇಳಿದ್ದಾರೆ. ಇದಕ್ಕೆ ನಾನು ಋಣಿ’ ಎಂದು ಮುರುಗೇಶ ನಿರಾಣಿ ಹೇಳಿದರು ನಮ್ಮ ಹಿರಿಯ ಸಹೋದರ ಬಸವರಾಜ್ ಬೊಮ್ಮಾಯಿಯವರು ರಾಜ್ಯದ ಮುಖ್ಯಮಂತ್ರಿಗಳಾಗಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ರಾಜ್ಯದ ಅಭಿವೃದ್ಧಿ ಮತ್ತು ಸಮಸ್ಯೆಗಳಿಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ನಾವು ಅವರಿಗೆ ಎಲ್ಲಾ ರೀತಿಯಲ್ಲಿಯೂ ಸಹಕಾರಿಯಾಗಿತ್ತೇವೆ. ಈ ಮೂಲಕ 2023ಕ್ಕೆ ಸಂಪೂರ್ಣವಾಗಿ …
Read More »ಸಿದ್ದುಗೆ ಸಿಎಂ ಕುರ್ಚಿ ಬಿಟ್ಟು ಬೇರೆ ಕಡೆ ಕೂತರೆ ಮುಳ್ಳು ಚುಚ್ಚಿದಂಗೆ : ಸಚಿವ ಈಶ್ವರಪ್ಪ ವ್ಯಂಗ್ಯ
ಬಾಗಲಕೋಟೆ : ಸಿದ್ದರಾಮಯ್ಯಗೆ ಸಿಎಂ ಖುರ್ಚಿ ಕಳೆದುಕೊಂಡ ಬಳಿಕ ಯಾವುದೇ ಖುರ್ಚಿ ಮೇಲೆ ಕುಳಿತರೂ ಮುಳ್ಳು ಚುಚ್ಚಿದ ಹಾಗೇ ಆಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದರು. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನನೇ ಬೇಕು ಅಂತಾರೆ. ಅದೊಂದೇ ಅವರಿಗೆ ಮೆತ್ತಗೆ ಇರೋ ಖುರ್ಚಿ ಅನಿಸುತ್ತದೆ. ಆದಷ್ಟು ಬೇಗ ಮತ್ತೆ ಮುಖ್ಯಮಂತ್ರಿ ಆಗಬೇಕು ಅನ್ನೋ ಭ್ರಮೆಯಲ್ಲಿದ್ದಾರೆ. ನಾನೇ ಸಿಎಂ ಅಂತಾ ಹೇಳಿಕೊಳ್ಳುತ್ತಾರೆ. ನೀವು ಹೇಳ ಕೂಡದು …
Read More »8,309 ಕೋವಿಡ್ ಪ್ರಕರಣ ದೃಢ, 236 ಸಾವು
ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 8,309 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 236 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಒಂದೇ ದಿನ 9,905 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಈ ವರೆಗೆ ಕೋವಿಡ್ನಿಂದ ಚೇತರಿಸಿಕೊಂಡವರ ಸಂಖ್ಯೆ 3,40,08,183ಕ್ಕೆ ತಲುಪಿದೆ. ಈ ವರೆಗೆ 34,580,832 ಕೋವಿಡ್ ಪ್ರಕರಣಗಳು ದಾಖಲಾಗಿದ್ದು, 4,68,790 ಮಂದಿ ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ. ದೇಶದಲ್ಲಿ ಸದ್ಯ ಒಟ್ಟು 1,03,859 ಸಕ್ರಿಯ ಪ್ರಕರಣಗಳಿವೆ.
Read More ».PD.O.ಬೊ..ಮಗನೇ ನಿನ್ನಾ ಬೂಟ್ ತಗೊಂಡು ಹೊಡೀತಿನಿ..!ಅಂದ್ರಾ.?M.P.
ಕೋಲಾರ: ಕಾರ್ಯಕ್ರಮಕ್ಕೆ ಸರಿಯಾಗಿ ವ್ಯವಸ್ಥೆ ಆಗದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕೋಲಾರ ಎಂಪಿ ಮುನಿಸ್ವಾಮೀ ಪಂಚಾಯತಿ ಅಧಿಕಾರಿಗೆ ಅವಾಚ್ಯವಾಗಿ ನಿಂದಿಸಿದ್ದಾರೆ ಎನ್ನುವ ಆಡಿಯೋ ಇದೀಗ ವೈರಲ್ ಆಗಿದೆ..!? ಪಿಡಿಓ ಜೊತೆ ಮಾತನಾಡುತ್ತಲೇ ನಿನ್ನನ್ನು ಬೂಟಿನಿಂದ ಒದೆಯುತ್ತೇನೆ,ಬೊ.. ಮಗನೇ,ಅನ್ನುತ್ತಾ ಅವಾಚ್ಯವಾಗಿ ನಿಂದಿಸಿದ ಆಡಿಯೋ ಇದೀಗ ವೈರಲ್ ಆಗಿದೆ. ಶ್ರೀನಿವಾಸ್ ರೆಡ್ಡಿ ಎನ್ನುವ ಪಿಡಿಓ ಅವರಿಗೆ ಅವಾಚ್ಯವಾಗಿ ಎಂಪಿ ಮುನಿಸ್ವಾಮೀ ಮಾತನಾಡಿದ್ದಾರೆ ಎಂದು ಹೇಳಲಾಗುತ್ತಿದ್ದು..! ಎಂಪಿ ಬಾಯಲ್ಲಿ ಬಂದ ಮಾತುಗಳನ್ನು ಕೇಳಿ ಇದೀಗ ಸಾರ್ವಜನಿಕರು …
Read More »
Laxmi News 24×7