Home / ರಾಜಕೀಯ (page 208)

ರಾಜಕೀಯ

ಭ್ರೂಣ ಹತ್ಯೆ ತಡೆಯುವಲ್ಲಿ ಕರ್ತವ್ಯ ಲೋಪ; ಇಬ್ಬರು ಅಧಿಕಾರಿಗಳ ಅಮಾನತು

ನಗರದ ಮಾತಾ ಆಸ್ಪತ್ರೆಯಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ (Female foeticide) ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಸರ್ಕಾರಿ ಸೇವೆಯಿಂದ ಅಮಾನತು ಮಾಡಲಾಗಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಆದೇಶ ಹೊರಡಿಸಿದ್ದಾರೆ.   ಮೈಸೂರಿನ ಹಿಂದಿನ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ರವಿ. ಪಿ ಮತ್ತು ಮೈಸೂರು ತಾಲೂಕು ಆರೋಗ್ಯಾಧಿಕಾರಿ ರಾಜೇಶ್ವರಿ ಅವರನ್ನು ಅಮಾನತು ಮಾಡಲಾಗಿದೆ. ಭ್ರೂಣ ಹತ್ಯೆ ತಡೆಯುವಲ್ಲಿ ಕರ್ತವ್ಯ ಲೋಪವೆಸಗಿದ …

Read More »

ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ಜಮೀನು ಕಳೆದುಕೊಂಡ ಜನರು ಧರಣಿ

ಬೆಳಗಾವಿ : ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ಜಮೀನು ಕಳೆದುಕೊಂಡು 43 ವರ್ಷ ಕಳೆದರೂ ಪರಿಹಾರ ಸಿಗದ ಹಿನ್ನೆಲೆಯಲ್ಲಿ ನ್ಯಾಯಕ್ಕೆ ಆಗ್ರಹಿಸಿ ಬೆಳಗಾವಿಯ ಡಿಸಿ ಕಚೇರಿ ಮುಂಭಾಗದಲ್ಲಿ ಸಂತ್ರಸ್ಥರು ಅನಿರ್ಧಿಷ್ಟಾವಧಿ ಧರಣಿಗೆ ಮುಂದಾಗಿದ್ದಾರೆ. ಹುಕ್ಕೇರಿ ತಾಲೂಕಿನ ಬೀರ‌ನಹಳ್ಳಿ, ಮನಗುತ್ತಿ, ಇಸ್ಲಾಂಪೂರ, ಗುಡಗನಟ್ಟಿ, ಹಳೇ ವಂಟಮೂರಿ ಸೇರಿ ಇನ್ನಿತರ ಗ್ರಾಮಗಳ ನೊಂದ ಜನರು ಇಂದು ಬೆಳಗಾವಿಯ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ರ‍್ಯಾಲಿ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ಆರಂಭಿಸಿದರು. …

Read More »

ಶಾಲೆಗಳಿಗೆ ಬೆದರಿಕೆ ಇ-ಮೇಲ್ ಕಳುಹಿಸಿದವರನ್ನು ಪತ್ತೆ ಹಚ್ಚಲು ಹೇಳಿದ್ದೇನೆ, ಆತಂಕ ಬೇಡ: ಸಿಎಂ

ಬೆಂಗಳೂರು: ಶಾಲೆಗಳಿಗೆ ಬಾಂಬ್​ ಇಟ್ಟಿರುವುದಾಗಿ ಬೆದರಿಕೆ ಇ-ಮೇಲ್ ಕಳುಹಿಸಿದವರನ್ನು ಪತ್ತೆ ಹಚ್ಚಲು ಪೊಲೀಸರಿಗೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದಲ್ಲಿಂದು ಮಾತನಾಡಿದ ಅವರು, ಬೆಂಗಳೂರಿನ ಶಾಲೆಗಳಿಗೆ ಬೆದರಿಕೆ ಇ-ಮೇಲ್ ಬಂದಿರುವ ಬಗ್ಗೆ ಪ್ರತಿಕ್ರಿಯಿಸಿ, ಪೊಲೀಸರ ಜೊತೆ ಈಗಾಗಲೇ ಮಾತನಾಡಿದ್ದೇನೆ. ಎಲ್ಲಾ ಶಾಲೆಗಳನ್ನು ಪರಿಶೀಲನೆ ನಡೆಸಲು ತಿಳಿಸಿದ್ದೇನೆ. ಎಚ್ಚರದಿಂದ ಇರಲು ಹೇಳಿದ್ದೇನೆ. ಈ ರೀತಿ ಬೆದರಿಕೆ ಹಾಕಿದವರನ್ನು ಪತ್ತೆ ಹಚ್ಚಲು ಸೂಚಿಸಿದ್ದೇನೆ ಎಂದರು. ಈ ಹಿಂದೆಯೂ ಇಂಥ ಬೆದರಿಕೆಗಳು ಬಂದಿದ್ದವು. ಆದರೆ …

Read More »

ಏಡ್ಸ್ ತಡೆಗಟ್ಟಲು ಆರೋಗ್ಯ ಇಲಾಖೆಯವರು ಹೆಚ್ಚು ಸಂಶೋಧನೆ, ಐದು ವರ್ಷಗಳಲ್ಲಿ ಭಾರತ, ಕರ್ನಾಟಕ ಏಡ್ಸ್ ಮುಕ್ತವಾಗಲಿ: ಸಿಎಂ

ಬೆಂಗಳೂರು: “ಮುಂದಿನ ಐದು ವರ್ಷಗಳಲ್ಲಿ ಭಾರತ ಹಾಗೂ ಕರ್ನಾಟಕ ಏಡ್ಸ್ ಮುಕ್ತ ದೇಶ, ರಾಜ್ಯ ಆಗಲಿ. ಈ ದಿಕ್ಕಿನಲ್ಲಿ ಎಲ್ಲರೂ ಒಟ್ಟಾಗಿ ಕಾರ್ಯಪ್ರವೃತ್ತರಾಗಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಆಯೋಜಿಸಲಾಗಿದ್ದ ವಿಶ್ವ ಏಡ್ಸ್ ದಿನ 2023 ಮತ್ತು 25ನೇ ರಜತ ಮಹೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, “ಇಂದು ವಿಶ್ವ ಏಡ್ಸ್ ದಿನ. ಈ ಸಾಂಕ್ರಾಮಿಕ ರೋಗ ತಡೆಯುವ ಜವಾಬ್ದಾರಿ ಎಲ್ಲರ ಮೇಲಿದೆ. ಈ ರೋಗ 1986ರಲ್ಲಿ ಭಾರತದಲ್ಲಿ …

Read More »

2000 ರೂ. ನೋಟು ಹಿಂಪಡೆದ RBI: ಈವರೆಗೆ 97% ನೋಟುಗಳು ವಾಪಸ್​, ಬಾಕಿ ಉಳಿದಿರುವ ಹಣವೆಷ್ಟು?

ನವದೆಹಲಿ: ಕಳೆದ ಮೇ 19ರಂದು 2000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವ ಮಹತ್ವದ ಘೋಷಣೆ ಮಾಡಿದಾಗಿನಿಂದ​ ಈವರೆಗೂ ಶೇ. 97.26 ರಷ್ಟು ನೋಟುಗಳು ಬ್ಯಾಂಕಿಂಗ್​ ವ್ಯವಸ್ಥೆಗೆ ಮರಳಿದೆ ಎಂದು ಭಾರತೀಯ ರಿಸರ್ವ್​ ಬ್ಯಾಂಕ್ (ಆರ್​ಬಿಐ) ಇಂದು (ಡಿ.01) ತಿಳಿಸಿದೆ.   ಮೇ 19ರಂದು 2000 ರೂ. ನೋಟುಗಳ ಚಲಾವಣೆಯನ್ನು ಹಿಂಪಡೆದ ಸಂದರ್ಭದಲ್ಲಿ 2000 ರೂ. ಮುಖಬೆಲೆಯ 3.56 ಲಕ್ಷ ಕೋಟಿ ರೂ. ಚಾಲನೆಯಲ್ಲಿದ್ದವು. ಕೇವಲ 6 ತಿಂಗಳಲ್ಲಿ ತೀವ್ರ ಕುಸಿತಕೊಂಡಿದ್ದು, …

Read More »

ಭ್ರೂಣ ಹತ್ಯೆ ಪ್ರಕರಣ; ತಪ್ಪಿತಸ್ಥರ ಮೇಲೆ ಕಠಿಣ ಕ್ರಮ: ದಿನೇಶ್ ಗುಂಡೂರಾವ್

ಬೆಂಗಳೂರು:ಭ್ರೂಣ ಹತ್ಯೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಭ್ರೂಣ ಹತ್ಯೆ ಪ್ರಕರಣದಲ್ಲಿ ಲೋಪಗಳು ಕಂಡು ಬಂದರೆ ಜಿಲ್ಲಾ ಆರೋಗ್ಯಾಧಿಕಾರಿಗಳನ್ನು ಹೊಣೆ ಮಾಡಲಾಗುವುದು ಎಂದರು.   ತಾಲೂಕು ಮತ್ತು ಜಿಲ್ಲೆಯಲ್ಲಿ ಗರ್ಭಿಣಿಯರ ಸಂಖ್ಯೆ ಎಷ್ಟು ಎನ್ನುವುದನ್ನು ಪ್ರತಿ ತಿಂಗಳೂ ಮಾಹಿತಿ ಸಂಗ್ರಹಿಸುವುದು ಕಡ್ಡಾಯ. ಅದರ ಜೊತೆಗೆ ಜನನವಾದ ಪ್ರಕರಣಗಳನ್ನು ತಾಳೆ ಹಾಕಲಾಗುವುದು. ಒಂದು …

Read More »

ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ಸಿಬ್ಬಂದಿ ಕೊರತೆ,ಮಂಗಗಳ ಉಪಟಳ ಹೆಚ್ಚಾಗಿದ್ದು, ರೋಗಿಗಳು ತಳಮಳಗೊಂಡಿದ್ದಾರೆ.

ಚಿತ್ರದುರ್ಗ: ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ಸಿಬ್ಬಂದಿ ಕೊರತೆ, ಔಷಧಗಳು ಸಮರ್ಪಕವಾಗಿ ನೀಡುತ್ತಿಲ್ಲ, ಚಿಕಿತ್ಸೆ ಸರಿ ಇಲ್ಲವೆಂಬ ದೂರುಗಳು ಕೇಳಿಬರುವುದು ಸಾಮಾನ್ಯ. ಆದರೆ, ನಗರದ ಜಿಲ್ಲಾಸ್ಪತ್ರೆಯೊಳಗೆ ಕೆಲ ದಿನಗಳಿಂದ ಮಂಗಗಳ ಉಪಟಳ ಹೆಚ್ಚಾಗಿದ್ದು, ರೋಗಿಗಳು ತಳಮಳಗೊಂಡಿದ್ದಾರೆ.   ಐತಿಹಾಸಿಕ ಕಲ್ಲಿನ ಕೋಟೆ, ನಲ್ಲಿಕಾಯಿ ಸಿದ್ದಪ್ಪನ ಬೆಟ್ಟ, ಚಂದ್ರವಳ್ಳಿ, ಆಡುಮಲ್ಲೇಶ್ವರ ಕಿರು ಮೃಗಾಲಯ ಆವರಣ ಸಾಮಾನ್ಯವಾಗಿ ಕೋತಿಗಳಿಗೆ ಆಶ್ರಯ ತಾಣಗಳಾಗಿವೆ. ಆಹಾರ, ನೀರು ಸಿಗದ ಸಂದರ್ಭ ಎದುರಾದಾಗ ನಗರ ಪ್ರವೇಶಿಸುತ್ತಿವೆ. ಈ …

Read More »

ಶಾಲಾ ಮಕ್ಕಳ ಪೋಷಕರು ಆತಂಕಪಡಬೇಕಾದ ಅಗತ್ಯವಿಲ್ಲ, ದುಷ್ಟಶಕ್ತಿಗಳನ್ನು ಆದಷ್ಟು ಬೇಗ ಪತ್ತೆಹಚ್ಚುತ್ತೇವೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರಿನ ಖಾಸಗಿ ಶಾಲೆಗಳಲ್ಲಿ ವಿದ್ವಂಸಕ ಕೃತ್ಯ ನಡೆಸುವುದಾಗಿ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಬಾಂಬ್ ಪತ್ತೆ ದಳ ಮತ್ತು ಬಾಂಬ್ ನಿಷ್ಕ್ರಿಯ ದಳಗಳು ಈಗಾಗಲೇ ಶಾಲೆಗಳಲ್ಲಿ ಪರಿಶೀಲನೆ ನಡೆಸುತ್ತಿವೆ. ಸಾರ್ವಜನಿಕರು ಮತ್ತು ಶಾಲಾ ಮಕ್ಕಳ ಪೋಷಕರು ಆತಂಕಪಡಬೇಕಾದ ಅಗತ್ಯವಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.   ಈ ಪ್ರಕರಣವನ್ನು ನಮ್ಮ‌ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿ ಶಾಲೆಗಳು ಮತ್ತು ದೇವಾಲಯಗಳಿಗೆ ಸೂಕ್ತ ಭದ್ರತೆ ಒದಗಿಸುವಂತೆ ಸೂಚನೆ ನೀಡಿದ್ದೇನೆ. ನಾಡಿನ …

Read More »

ದ್ವಿತೀಯ ಪಿಯುಸಿ, ಎಸ್​​​ಎಸ್​​ಎಲ್​​ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2023-24ನೇ ಸಾಲಿನ ದ್ವಿತೀಯ ಪಿಯುಸಿ ಹಾಗೂ ಎಸ್​ಎಸ್​ಎಲ್​ಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಜಾಲತಾಣದಲ್ಲಿ ಇಂದು ಪ್ರಕಟಿಸಲಾಗಿದೆ. 2024 ಮಾರ್ಚ್​ 02ರಿಂದ ಮಾರ್ಚ್​ 22ರವರೆಗೆ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಇನ್ನು ಮಾರ್ಚ್​ 25 ರಿಂದ ಏಪ್ರಿಲ್​​ 06 ರವರೆಗೆ ಎಸ್‌ಎಸ್‌ಎಲ್ ಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಮಂಡಲಿ ಮೂರು ತಿಂಗಳ ಮುಂಚಿತವಾಗಿಯೇ ತಾತ್ಕಲಿಕ ವೇಳಾಪಟ್ಟಿ ಪ್ರಕಟ ಮಾಡಿದೆ. ಮಂಡಲಿಯಿಂದ …

Read More »

ಸಿಎಂ ಸಿದ್ದರಾಮಯ್ಯ ಅವರು ಭ್ರೂಣ ಹತ್ಯೆ ಪ್ರಕರಣದ ಬಗ್ಗೆ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.

ಬೆಂಗಳೂರು : ಇತ್ತೀಚೆಗೆ ಮಂಡ್ಯದಲ್ಲಿ ಬೆಳಕಿಗೆ ಬಂದ ಭ್ರೂಣ ಹತ್ಯೆ ಪ್ರಕರಣದ ಬಗ್ಗೆ ಸಿಐಡಿ ತನಿಖೆಗೆ ಸಿಎಂ ಆದೇಶ ಮಾಡಿದ್ದು, ಈ ಕುರಿತಂತೆ ಗೃಹ ಸಚಿವರಿಗೆ ನಿರ್ದೇಶನ ನೀಡಿದ್ದಾರೆ.   ಇತ್ತೀಚೆಗೆ ಹೆಣ್ಣು ಭ್ರೂಣ ಪತ್ತೆ ಹಾಗೂ ಗರ್ಭಪಾತ ಪ್ರಕರಣ ಭೇದಿಸಿದ್ದ ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಮೈಸೂರಿನ ಖಾಸಗಿ ಆಸ್ಪತ್ರೆ ವೈದ್ಯ ದಂಪತಿ ಹಾಗೂ ಇತರ ಮೂವರು ಸೇರಿದಂತೆ ಐವರನ್ನು ಬಂಧಿಸಿದ್ದರು. ಇದಕ್ಕೂ ಮುನ್ನ ಕಳೆದ ಅಕ್ಟೋಬರ್‌ನಲ್ಲಿ ಶಿವನಂಜೇಗೌಡ, ವೀರೇಶ್, …

Read More »