Breaking News

ರಾಜಕೀಯ

ನಾಳೆಯಿಂದ 1-5ನೇ ತರಗತಿ ಶಾಲೆಗಳು ಆರಂಭ : ಸರ್ಕಾರದ ಗೈಡ್ ಲೈನ್ಸ್ ಅನುಸಾರ ತರಗತಿ ಶುರು

ಬೆಂಗಳೂರು: ಕೋವಿಡ್ ಕಾರಣದಿಂದ ಮುಚ್ಚಲಾಗಿದ್ದ 1ರಿಂದ 5ನೇ ತರಗತಿ ಶಾಲೆಗಳು ನಾಳೆಯಿಂದ ರಾಜ್ಯಾದ್ಯಂತ ಶಾಲೆ ಆರಂಭವಾಗುತ್ತಿವೆ. ಸದ್ಯ ಕೋವಿಡ್ ಸೋಂಕು ನಿಯಂತ್ರಣಕ್ಕೆ ಬಂದಿದ್ದು, ಭೌತಿಕ ತರಗತಿ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ನಾಳೆ ಮಕ್ಕಳನ್ನ ಶಾಲೆಗೆ ಬರಮಾಡಿಕೊಳ್ಳಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ. ಇನ್ನು ಕೆಲವು ಕೋವಿಡ್ ನಿಯಮದಂತೆ ತರಗತಿಗಳು ಆರಂಭವಾಗಲಿವೆ. ಶೇ.50 ರಷ್ಟು ಹಾಜರಾತಿಯಲ್ಲಿ ತರಗತಿ ನಡೆಸಲು ಅವಕಾಶ ಸರ್ಕಾರ ಶಾಲೆಗಳಿಗೆ ಅವಕಾಶ ಕೊಟ್ಟಿದೆ. ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರವೇ ಶಾಲೆಗಳು ತೆರೆಯಬೇಕು. …

Read More »

ಹೃದಯ ವಿದ್ರಾವಕ ಘಟನೆ: ಮೂವರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಕಲಬುರಗಿ: ಮೂರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಜಿಗಿದು ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಆಳಂದ ತಾಲ್ಲೂಕಿನ ಮಾಡ್ಯಾಳ ಗ್ರಾಮದಲ್ಲಿ ನಡೆದಿದೆ. ಈ ಆತ್ಮಹತ್ಯೆ ಕೇಸ್​ನಲ್ಲಿ ತಾಯಿ, ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಓರ್ವ ಮಗು ಅದೃಷ್ಟವಶಾತ್ ಪ್ರಾಣಾಪಾಯದಿಂದ ಬಚಾವ್ ಆಗಿದೆ. ತಾಯಿ ಲಕ್ಷ್ಮಿ ಏಳಕೆ (28),‌ ಮಕ್ಕಳಾದ ಗೌರಮ್ಮ (6), ಸಾವಿತ್ರಿ (1) ಮೃತ ದುರ್ದೈವಿಗಳು. ಇನ್ನೋರ್ವ ಬಾಲಕಿಯನ್ನ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಮೂರು ಜನ ಹೆಣ್ಣು ಮಕ್ಕಳಿರುವ ಕಾರಣಕ್ಕೆ ಗಂಡ, ಗಂಡನ …

Read More »

ಮೆಟ್ರೋ ಕಾಮಗಾರಿ ವೇಳೆ ಅರ್ಧಕ್ಕೆ ತುಂಡಾಗಿ ಬಿದ್ದ ಬೃಹತ್ ಕ್ರೇನ್​​.. ತಪ್ಪಿದ ಭಾರೀ ದುರಂತ

ಬೆಂಗಳೂರು: ನಮ್ಮ ಮೆಟ್ರೋ ಕಾಮಗಾರಿ ವೇಳೆ ಮತ್ತೊಂದು ಅವಾಂತರ ನಡೆದಿದ್ದು, ಮೆಟ್ರೋ ಫೇಸ್ -2 ಕಾಮಗಾರಿ ವೇಳೆ ಸಿಬ್ಬಂದಿ ನಿರ್ಲಕ್ಷ್ಯದಿಂದ ಬಹು ದೊಡ್ಡ ಕ್ರೇನ್​​ ನಲವತ್ತು ಅಡಿ ಎತ್ತರದಿಂದ ಕೆಳಗೆ ಬಿದ್ದ ಘಟನೆ ಸಿಲ್ಕ್ ಬೋರ್ಡ್ ಬಳಿ ನಡೆದಿದೆ. ಸಿಲ್ಕ್ ಬೋರ್ಡ್ ಟು ಕೆ ಆರ್ ಪುರಂ ಮಾರ್ಗವಾಗಿ ನಡೆಯುತ್ತಿರುವ ಕಾಮಗಾರಿ ಸ್ಥಳದಲ್ಲಿ ಮೆಟ್ರೋ ಸೆಗ್ಮೆಂಟ್ಸ್ ಜೋಡಿಸುವ ಕಾರ್ಯ ನಡೆಯುತ್ತಿದ್ದು, ಈ ವೇಳೆ ಮೆಷಿನ್ ಅರ್ಧಕ್ಕೆ ಕಟ್ ಆದ ಪರಿಣಾಮ …

Read More »

ಮಕ್ಕಳ ಆಟದ ಪಾರ್ಕ್ ಮಳೆ ನೀರು ನಿಂತು ಚಿಕ್ಕ ಕೆರೆಯಂತಾಗಿದೆ.

ಗುಡಿಬಂಡೆ: ಪಟ್ಟಣದ ಹನ್ನೊಂದನೇ ವಾರ್ಡ್‌ನ ಮಕ್ಕಳ ಆಟದ ಪಾರ್ಕ್ ಮಳೆ ನೀರು ನಿಂತು ಚಿಕ್ಕ ಕೆರೆಯಂತಾಗಿದೆ. ಪಟ್ಟಣದಲ್ಲಿ ಒಟ್ಟು 7 ಪಾರ್ಕ್‌ಗಳಿದ್ದು, ಅವುಗಳಲ್ಲಿ ನಾರೆಪ್ಪ ಬಡಾವಣೆಯ ಪಾರ್ಕ್‌ನ ಅಭಿವೃದ್ಧಿಗಾಗಿ ಒಂದಷ್ಟು ಹಣವನ್ನು ವ್ಯಯ ಮಾಡಿ ಅಭಿವೃದ್ಧಿ ಮಾಡಿದ್ದರು, ನಂತರ ಇನ್ನು ಹೆಚ್ಚಿನ ಅಭಿವೃದ್ಧಿಗಾಗಿ 2016-17ನೇ ಸಾಲಿನಲ್ಲಿ 14ನೇ ಹಣಕಾಸು ಯೋಜನೆಯಲ್ಲಿ ಸುಮಾರು 7.82 ಲಕ್ಷ ವೆಚ್ಚ ಮಾಡಿ ಪಾರ್ಕ್‌ಗೆ ಗೇಟ್ ಹಾಗೂ ಉಳಿಕೆ ಭಾಗದ ಕಾಂಪೌಂಡ್ ನಿರ್ಮಾಣಕ್ಕೆ ಖರ್ಚು ಮಾಡಿ ಅಭಿವೃದ್ದಿ …

Read More »

ಬುರುಡೆ ಬೊಮ್ಮಾಯಿ..ಕೊರೊನಾ ವೇಳೆ ಜನ ಬದುಕಿದ್ದು ಅನ್ನಭಾಗ್ಯದಿಂದ ನಿಮ್ಮಿಂದ ಅಲ್ಲ: Siddaramaiah ತಿರುಗೇಟು

ಬೆಂಗಳೂರು : ಬುರುಡೆ ರಾಮಯ್ಯ ಎಂದು ಟ್ವೀಟ್ ಮಾಡಿ ರಾಜ್ಯದ ಪ್ರತಿಯೊಬ್ಬ ಪ್ರಜೆಯ ತಲೆಯ ಮೇಲೂ 44 ಸಾವಿರಕ್ಕೂ ಅಧಿಕ ಸಾಲದ ಹೊರೆ ಹೇರಿದ್ದೀರಿ ಎಂದು ಟ್ವೀಟ್ ಮಾಡಿದ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಅವರು ಶನಿವಾರ ”ಬುರುಡೆ ಬೊಮ್ಮಾಯಿ” ಎನ್ನುವ ಟ್ಯಾಗ್ ಬಳಸಿಕೊಂಡು ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ಅವರು ಮಾಡಿರುವ ಸರಣಿ ಟ್ವೀಟ್ ಗಳು ಹೀಗಿವೆ ”ಬಿಜೆಪಿ ಸರ್ಕಾರದ ಅಧಿಕೃತ ಮಾಹಿತಿ ಪ್ರಕಾರ ಈಗಿನ ಸಾಲ ರೂ.4,57,899 ಕೋಟಿ. 2020-21 ರಲ್ಲಿಯೇ …

Read More »

ಕಿತ್ತೂರು ಉತ್ಸವದಲ್ಲಿ ಸಿಎಂ ಮಹತ್ವದ ಘೋಷಣೆ: ಮುಂಬೈ ಕರ್ನಾಟಕಕ್ಕೆ ‘ಕಿತ್ತೂರು ಕರ್ನಾಟಕ’ ಎಂದು ಮರುನಾಮಕರಣ

ಬೆಳಗಾವಿ: ಮುಂದಿನ ವರ್ಷದಿಂದ ರಾಜ್ಯಮಟ್ಟದಲ್ಲಿ ಕಿತ್ತೂರು ಉತ್ಸವ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ನಡೆಯುತ್ತಿರುವ ಕಿತ್ತೂರು ಉತ್ಸವದಲ್ಲಿ ಅವರು ಮಾತನಾಡಿ, ಒಂದು ತಿಂಗಳ ಕಾಲ ಕಿತ್ತೂರು ಜ್ಯೋತಿ ರಾಜ್ಯದಲ್ಲಿ ಸಂಚರಿಸಲು ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟಕ ಎಂದು ಮರು ನಾಮಕರಣ ಮಾಡುವ ಬಗ್ಗೆ ಸಂಪುಟದಲ್ಲಿ ಚರ್ಚೆ ನಡೆಸಿ ನಿರ್ಣಯ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

Read More »

ಶಿಕ್ಷಕರಿಗೆ ದೀಪಾವಳಿ ಗಿಫ್ಟ್: ವರ್ಗಾವಣೆಗೆ ವೇಳಾಪಟ್ಟಿ ಪ್ರಕಟ -ಟ್ರಾನ್ಸ್ಫರ್ ನಿರೀಕ್ಷೆಯಲ್ಲಿದ್ದವರಿಗೆ ಕೊನೆಗೂ ಸಿಹಿ ಸುದ್ದಿ

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಿಹಿ ಸುದ್ದಿ ನೀಡಲಾಗಿದೆ. ನಾಳೆಯಿಂದ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ. 2022ರ ಫೆಬ್ರವರಿ 26 ರವರೆಗೂ ವರ್ಗಾವಣೆ ಪ್ರಕ್ರಿಯೆ ನಡೆಯಲಿದ್ದು, ಈಗಾಗಲೇ ಅರ್ಜಿ ಸಲ್ಲಿಸಿದ 72,000 ಶಿಕ್ಷಕರಿಗೆ ವರ್ಗಾವಣೆ ಭಾಗ್ಯ ಸಿಗಲಿದೆ. ವರ್ಗಾವಣೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದೆ. ಕಡ್ಡಾಯ ವರ್ಗಾವಣೆ ಆಗಿದ್ದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಮೊದಲ ಹಂತದ ಕೌನ್ಸೆಲಿಂಗ್ ನವೆಂಬರ್ 2 ರಂದು ನಡೆಯಲಿದೆ. ಎರಡನೇ ಹಂತದ ಕೌನ್ಸೆಲಿಂಗ್ 2021ರ ಜನವರಿ 18 …

Read More »

ಕಿತ್ತೂರು ಉತ್ಸವಕ್ಕೆ ಸಿಗಲಿ ರಾಜ್ಯಮಟ್ಟದ ಮಾನ್ಯತೆ

ಬೆಳಗಾವಿ: ಸತತವಾಗಿ ಕಾಡುತ್ತಲೇ ಇರುವ ಕೊರೊನಾ ಹಾವಳಿ ನಡುವೆ ಐತಿಹಾಸಿಕ ಕಿತ್ತೂರು ಉತ್ಸವಕ್ಕೆ ಇಡೀ ಕಿತ್ತೂರು ಸಂಸ್ಥಾನ ಸಜ್ಜಾಗಿದ್ದು, ಜಿಲ್ಲಾಡಳಿತ ಕೊರೊನಾ ಮಾರ್ಗಸೂಚಿ ಅನ್ವಯ ಎರಡು ದಿನಗಳ ಉತ್ಸವದ ಅರ್ಥಪೂರ್ಣ ಆಚರಣೆಗೆ ಎಲ್ಲ ಸಿದ್ಧತೆ ಮಾಡಿಕೊಂಡಿದೆ. ಉತ್ಸವದ ಈ ಬಾರಿಯ ವಿಶೇಷ ಆಕರ್ಷಣೆ ಎಂದರೆ ಬಹಳ ವರ್ಷಗಳ ನಂತರ ಮುಖ್ಯಮಂತ್ರಿಗಳು ಉತ್ಸವದ ಉದ್ಘಾಟನೆಗೆ ಬರುತ್ತಿದ್ದಾರೆ. ಉತ್ಸವಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬ ಮೂಢ ನಂಬಿಕೆ ಮಾತುಗಳಿಗೆ ಕಿವಿಗೊಡದೆ ಸಿಎಂ ಬಸವರಾಜ ಬೊಮ್ಮಾಯಿ ಉತ್ಸವದ …

Read More »

ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯೋತ್ಸವ; ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಕಾರ್ಯಕ್ರಮಕ್ಕೆ ಗೈರು

ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಇಂದು (ಅಕ್ಟೋಬರ್ 23) ಕಿತ್ತೂರು ರಾಣಿ ಚನ್ನಮ್ಮ ಜಯಂತ್ಯೋತ್ಸವ ಆಚರಣೆ ಮಾಡಲಾಗಿದೆ. ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆದರೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜನೆ ಮಾಡಲಾದ ಈ ಕಾರ್ಯಕ್ರಮಕ್ಕೆ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಸುನಿಲ್ ಕುಮಾರ್ ಮತ್ತು ಅಧ್ಯಕ್ಷತೆ ವಹಿಸಬೇಕಿದ್ದ ಶಾಸಕ ಉದಯ ಗರುಡಾಚಾರ್ ಗೈರಾಗಿದ್ದಾರೆ. ಹಾನಗಲ್ ಉಪಚುನಾವಣಾ ಪ್ರಚಾರದಲ್ಲಿರುವ ಕಾರಣ ಜಯಂತ್ಯೋತ್ಸವ ಉದ್ಘಾಟಿಸಬೇಕಿದ್ದ ಸಿಎಂ ಬಸವರಾಜ …

Read More »

ಬಾಯಲ್ಲಿತ್ತು 100 ಗ್ರಾಂ ಚಿನ್ನದ ಬಿಸ್ಕೆಟ್​​.. ಕಸ್ಟಮ್ಸ್ ಅಧಿಕಾರಿಗಳ ಬಳಿ ಸಿಕ್ಕಿಬಿದ್ದಿದ್ದು ಹೇಗೆ?

ಬೆಂಗಳೂರು: ಕೆಂಪೇಗೌಡ ‌ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್​ ಅಧಿಕಾರಿಗಳು ಅಕ್ರಮವಾಗಿ ಸಾಗಾಣೆ ಮಾಡುತ್ತಿದ್ದ 4.5 ಲಕ್ಷ ಮೌಲ್ಯದ 100 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಚೆನ್ನೈ ಮೂಲಕ ಪ್ರಯಾಣಿಕನೊಬ್ಬ ಬಾಯಿಯೊಳಗೆ ಚಿನ್ನದ ಬಿಸ್ಕೆಟ್​ಗಳನ್ನು ಇಟ್ಟುಕೊಂಡು ಅಕ್ರಮವಾಗಿ ಸಾಗಾಣಿಕೆ ಮಾಡ್ತಿದ್ದ. ವಿಚಾರಣೆ ನಡೆಸುವ ವೇಳೆ ಮಾತನಾಡಲು ಪ್ರಯಾಣಿಕ ಕಷ್ಟಪಡುತ್ತಿದ್ದ. ಇದರಿಂದ ಅನುಮಾನಗೊಂಡ ಕಸ್ಟಮ್ಸ್ ಅಧಿಕಾರಿಗಳು ಆತನ ತಪಾಸಣೆ ನಡೆಸಿದ್ದು, 15 ಚಿನ್ನದ ಬಿಸ್ಕೆಟ್​ಗಳನ್ನು ವಶಪಡಿಸಿಕೊಂಡಿದ್ದಾರೆ. ಇಂಡಿಗೋ ವಿಮಾನದಲ್ಲಿ ದುಬೈನಿಂದ ಬೆಂಗಳೂರಿಗೆ ಅಕ್ರಮವಾಗಿ ಚಿನ್ನ ಸಾಗಾಣಿಕೆ …

Read More »