Breaking News

ರಾಜಕೀಯ

ಅಂಬಾನಿ’, ‘ಆರ್‌ಎಸ್‌ಎಸ್-ಸಂಬಂಧಿತ ವ್ಯಕ್ತಿ’ಯಿಂದ ನನಗೆ 300 ಕೋಟಿ ರೂ. ಲಂಚದ ಆಮಿಷ ಒಡ್ಡಲಾಗಿತ್ತು: ಸತ್ಯಪಾಲ್ ಮಲಿಕ್

ನವದೆಹಲಿ: ತಾವು ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದ ವೇಳೆ “ಅಂಬಾನಿ” ಮತ್ತು “ಆರ್ ಎಸ್‌ಎಸ್-ಸಂಬಂಧಿತ ವ್ಯಕ್ತಿ”ಗೆ ಸೇರಿದ ಎರಡು ಕಡತಗಳನ್ನು ಪಾಸ್ ಮಾಡಿದರೆ 300 ಕೋಟಿ ರೂಪಾಯಿ ಲಂಚ ನೀಡುವುದಾಗಿ ಹೇಳಿದ್ದರು. ಆದರೆ ನಾನು ಆ ಡೀಲ್ ರದ್ದುಗೊಳಿಸಿದೆ ಎಂದು ಕಣಿವೆ ರಾಜ್ಯದ ಮಾಜಿ ರಾಜ್ಯಪಾಲ ಹಾಗೂ ಹಾಲಿ ಮೇಘಾಲಯ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ಗುರುವಾರ ಹೇಳಿದ್ದಾರೆ. ಡೀಲ್ ಮತ್ತು ಭ್ರಷ್ಟಾಚಾರದಲ್ಲಿ ರಾಜಿ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದಿರುವ ಮಲಿಕ್ ಅವರು, ತಮ್ಮ …

Read More »

ನಾಗರಿಕ ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿ: ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ

ಧಾರವಾಡ: ಧಾರವಾಡ ಜಿಲ್ಲಾ ಪೊಲೀಸ್ ಘಟಕದ ವತಿಯಿಂದ ಅಕ್ಟೋಬರ್ 24 ರಂದು ಮಧ್ಯಾಹ್ನ 12 ರಿಂದ 1.30 ಗಂಟೆಯ ವರೆಗೆ ಧಾರವಾಡ ನಗರದ ವಿವಿಧ 19 ಶಾಲಾ ಹಾಗೂ ಕಾಲೇಜುಗಳಲ್ಲಿ ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಲಿಖಿತ ಪರೀಕ್ಷೆ ನಡೆಸಲಾಗುತ್ತಿದೆ. ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ನಾಲ್ಕು (4) ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ. ಕೋವಿಡ್-19 ಸೋಂಕು ನಿಯಂತ್ರಣದ ಹಿನ್ನೆಲೆಯಲ್ಲಿ ಸೂಕ್ತ ಸುರಕ್ಷತಾ ಕ್ರಮಗಳೊಂದಿಗೆ ಅಭ್ಯರ್ಥಿಗಳು ಮಾಸ್ಕ್ ಧರಿಸಿ, …

Read More »

ಮಂಗಳೂರು; ಡಿಸಿಪಿ ವಾಹನದ ಮೇಲೆ ಲಾರಿ ಹತ್ತಿಸಿದ ಮರಳು ದಂಧೆಕೋರರು

ಮಂಗಳೂರು, ಅಕ್ಟೋಬರ್ 21; ಮಂಗಳೂರಿನಲ್ಲಿ ಮರಳು ಮಾಫಿಯಾ ಮತ್ತೆ ಹೆಡೆ ಎತ್ತಿದೆ. ಮರಳು ಲಾರಿಯನ್ನು ಹಿಡಿಯಲು ಹೋದ ಮಂಗಳೂರು ಡಿಸಿಪಿ ಕಾರಿನ ಮೇಲೆಯೇ ದಂಧೆಕೋರರು ಮರಳು ಲಾರಿ ಹತ್ತಿಸಲು ಯತ್ನಿಸಿದ ಘಟನೆ ಮಂಗಳೂರಿನಲ್ಲಿ ತಡರಾತ್ರಿ ನಡೆದಿದೆ. ಜಿಲ್ಲೆಯಲ್ಲಿ ಮರಳು ಮಾಫಿಯಾ ಅವ್ಯಾಹತವಾಗಿ ನಡೆಯುತ್ತಿದ್ದು, ದಂಧೆಕೋರರಿಗೆ ಲಗಾಮು ಇಲ್ಲದಂತಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಮರಳು ಮಾಫಿಯಾ ಬಾಲ ಬಿಚ್ಚಿದೆ. ಸಿಆರ್ ಝೆಡ್ ವ್ಯಾಪ್ತಿಯಲ್ಲಿ ಮರಳುಗಾರಿಕೆ ಅವಧಿ ಮುಗಿದರೂ ಮರಳು ದಂಧೆಕೋರರು …

Read More »

ಉಪಚುನಾವಣೆಗೂ ಮುನ್ನವೇ 2ಎ ಮೀಸಲಾತಿ ವರದಿ ಪಡೆಯಿರಿ: ಜಯ ಮೃತ್ಯುಂಜಯ ಸ್ವಾಮೀಜಿ

ಬೆಂಗಳೂರು: ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಉಪ ಚುನಾವಣೆಯ ಮತದಾನಕ್ಕೆ ಮುನ್ನವೇ ಲಿಂಗಾಯತ ಪಂಚಮಸಾಲಿಗೆ 2ಎ ಮೀಸಲಾತಿ ನೀಡುವ ಕುರಿತು ಹಿಂದುಳಿದ ವರ್ಗಗಳ ಆಯೋಗದಿಂದ ವರದಿ ತರಿಸಿಕೊಳ್ಳಬೇಕು ಎಂದು ಕೂಡಲಸಂಗಮ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಅಕ್ಟೋಬರ್ 30ರಂದು ಮತದಾನ ನಡೆಯಲಿದೆ. ಇದಕ್ಕೂ ಮುನ್ನವೇ ಸರ್ಕಾರ ಕ್ರಮ ಕೈಗೊಳ್ಳಬೇಕು. ಇದು ರಾಜಕೀಯ ಒತ್ತಡ ಅಲ್ಲ. ಸಮುದಾಯದ ಭಾವನೆಗಳನ್ನು ವ್ಯಕ್ತಪಡಿಸುತ್ತಿದ್ದೇವೆ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಹಾನಗಲ್ …

Read More »

ವಿದ್ಯುತ್ ಕೊಡದಿದ್ದರೆ ಕ್ರಿಮಿನಾಶಕ ಸೇವಿಸಿ ಕಚೇರಿ ಎದುರು ಆತ್ಮಹತ್ಯೆ

ಸಿಂದಗಿ: ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುತ್ತಿಲ್ಲ. ಕೈಗೆ ಬಂದ ಬೆಳೆಗಳು ಒಣಗುತ್ತಿವೆ. ವಿದ್ಯುತ್ ನೀಡಿ ಇಲ್ಲವೆ, ಕ್ರೀಮಿನಾಶಕ ಸೇವಿಸಿ ಕಚೇರಿ ಎದುರು ಸಾಯುತ್ತೇವೆ ಎಂದು ತಾಲೂಕಿನ ಬ್ಯಾಕೋಡ, ಬನ್ನೆಟ್ಟಿ ಪಿ.ಎ. ಗ್ರಾಮದ ರೈತರು ಹೆಸ್ಕಾಂ ಕಚೇರಿಗೆ ಬೀಗ ಜಡಿದು, ಕೈಯಲ್ಲಿ ಕ್ರೀಮಿನಾಶಕ ಬಾಟಲ್ ಹಿಡಿದು ಗುರುವಾರ ಪಟ್ಟಣದ ಹೆಸ್ಕಾಂ ಉಪವಿಭಾಗ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಪಟ್ಟಣದ ಸ್ವಾಮಿ ವಿವೇಕಾನಂದ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿ ಬಸವೇಶ್ವರ ವೃತ್ತದ ಮಾರ್ಗವಾಗಿ …

Read More »

ಕೇಸರಿ ಕಂಡರೆ, ಆರ್.ಎಸ್.ಎಸ್ ನವರನ್ನು ಕಂಡರೆ ನನಗ್ಯಾಕೆ ಭಯ? ನನಗೆ ಸಮಾಜದ ಬಗ್ಗೆ ಕಾಳಜಿ ಇದೆ.

ಬೆಂಗಳೂರು: ಕೇಸರಿ ಕಂಡರೆ, ಆರ್.ಎಸ್.ಎಸ್ ನವರನ್ನು ಕಂಡರೆ ನನಗ್ಯಾಕೆ ಭಯ? ನನಗೆ ಸಮಾಜದ ಬಗ್ಗೆ ಕಾಳಜಿ ಇದೆ. ಸಂಘ ಪರಿವಾರದವರು ಅಶಾಂತಿ ನಿರ್ಮಾಣದ ಮೂಲಕ ಸಮಾಜ ಒಡೆಯುವ ಕೆಲಸ ಮಾಡ್ತಾರೆ ಎಂಬ ಭಯವಿದೆ. ಸೌಹಾರ್ದತೆಗೆ ಧಕ್ಕೆಯಾಗಾದ ಮನಸಿಗೆ ನೋವಾಗುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಟ್ವೀಟ್ ಮಾಡಿರುವ ಅವರು, ಹಣ, ಅಧಿಕಾರದ ಆಸೆಗೆ ಕಾಂಗ್ರೆಸ್ ಗೆ ದ್ರೋಹ ಮಾಡಿ ಬಿಜೆಪಿ ಪಕ್ಷ ಸೇರಿ ಮಂತ್ರಿಯಾಗಿರುವ ಕೆ. ಸುಧಾಕರ್ ಅಧಿಕಾರದ …

Read More »

ಲಕ್ಷ್ಮಿ ಹೆಬ್ಬಾಳಕರ ಫಲಕಕ್ಕೆ ಸ್ಥಳೀಯರ ಪೂಜೆ!

ಬೆಳಗಾವಿ: ಇಲ್ಲಿನ ಸಹ್ಯಾದ್ರಿ ನಗರದ ಮಹಾಬಲೇಶ್ವರ ಉದ್ಯಾನದ ಅಭಿವೃದ್ಧಿ ಕಾಮಗಾರಿ ವಿವರವನ್ನು ಒಳಗೊಂಡ, ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರ ಫೋಟೊ ಹೊಂದಿರುವ ಫಲಕಕ್ಕೆ ಸ್ಥಳೀಯರು ತೆಂಗಿನಕಾಯಿ ಒಡೆದು ಬುಧವಾರ ಪೂಜೆ ಸಲ್ಲಿಸಿದ್ದಾರೆ. ಗುತ್ತಿಗೆದಾರರು ಮತ್ತು ಅಧಿಕಾರಿಗಳು ಅಳವಡಿಸಿದ್ದ ಫಲಕದ ಮೇಲೆ ಮಂಗಳವಾರ ಬಿಜೆಪಿ ಗ್ರಾಮೀಣ ಮಂಡಳದ ಅಧ್ಯಕ್ಷ ಧನಂಜಯ ಜಾಧವ ನೇತೃತ್ವದಲ್ಲಿ ಆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಬೇರೆಯದಾದ ದೊಡ್ಡ ಫಲಕ ಅಳವಡಿಸಿದ್ದರು. ಅದರಲ್ಲಿ ಪ್ರಧಾನಿ, ಸಂಸದರು ಮೊದಲಾದವರ …

Read More »

ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸುವಂತೆವಿವಿಧ ಹಳ್ಳಿಗಳ ಮುಖಂಡರು ಒತ್ತಾಯ

ಬೆಳಗಾವಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸುವಂತೆ ದಿ.ಸುರೇಶ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್ ಅವರನ್ನು ವಿವಿಧ ಹಳ್ಳಿಗಳ ಮುಖಂಡರು ಬುಧವಾರ ಒತ್ತಾಯಿಸಿದರು. ಸಂಸದೆ ಮಂಗಲಾ ಅಂಗಡಿ ಅವರ ಗೃಹ ಕಚೇರಿಯಲ್ಲಿ ಸಂಸದರೊಂದಿಗೆ ಅವರ ಪುತ್ರಿ ಶ್ರದ್ಧಾ ಅವರೊಂದಿಗೆ ಮಾತನಾಡಿದ ಮುಖಂಡರು ಕ್ಷೇತ್ರಕ್ಕೆ ಚುನಾವಣಾ ರಾಜಕಾರಣಕ್ಕೆ ಆಹ್ವಾನಿಸಿದರು. ‘ಸುರೇಶ ಅಂಗಡಿ ಅವರು ಇದ್ದಾಗ ಅವರನ್ನು ಬೆಂಬಲಿಸಿದ್ದೇವೆ. ಕ್ರಿಯಾಶೀಲರಾಗಿರುವ ನೀವು ಗ್ರಾಮೀಣ ಕ್ಷೇತ್ರದಲ್ಲಿ ಸ್ಪರ್ಧಿಸಿದರೆ ಬೆಂಬಲಿಸುವುದಕ್ಕೆ ಸಿದ್ಧವಿದ್ದೇವೆ’ ಎಂದು …

Read More »

ಪೊಲೀಸರ ನಿದ್ದೆಗೆಡಿಸಿದೆ ‘ಯುವತಿಯ ಕೊಳೆತ ಕಾಲು’: ನೀರುಗಂಟಿಗಳಿಗೆ ತಪ್ಪದ ಪೀಕಲಾಟ

ರಾಮನಗರ: ಚನ್ನಪಟ್ಟಣದಲ್ಲಿ ಕುಡಿವ ನೀರಿನ ಓವರ್​ಹೆಡ್ ಟ್ಯಾಂಕ್​ನ ಕೊಳವೆಯಲ್ಲಿ ಮಹಿಳೆಯ ಕೊಳೆತ ಕಾಲು ಪತ್ತೆಯಾದ ಪ್ರಕರಣದ ಜಾಡು ಹಿಡಿಯುವಲ್ಲಿ ಪೊಲೀಸರು ವಿಫಲರಾಗಿದ್ದಾರೆ. ಕೆಲವು ದಿನಗಳ ಹಿಂದೆ ಚನ್ನಪಟ್ಟಣದ ನ್ಯಾಯಾಲಯಗಳ ಸಂಕೀರ್ಣದ ಸಮೀಪವೇ ಇರುವ ಟ್ಯಾಂಕ್​ನ ಕೊಳವೆಯಲ್ಲಿ ಮನುಷ್ಯನ ಕಾಲು ಪತ್ತೆ ಆಗಿತ್ತು. ಈ ಪ್ರಕರಣ ಚನ್ನಪಟ್ಟಣದ ಜನತೆಯಲ್ಲಿ ಆತಂಕ ಉಂಟು ಮಾಡಿದ್ದು ಮಾತ್ರವಲ್ಲದೆ, ಪೊಲೀಸ್ ಇಲಾಖೆಗೆ ಸವಾಲಾಗಿದೆ. ಆದರೆ, ಇದರ ಜಾಡು ಹಿಡಿಯುವುದು ಸವಾಲಿನ ಕೆಲಸವಾಗಿದೆ. ಯುವತಿ ಕಾಲಿರಬಹುದೆಂಬ ಶಂಕೆ?: …

Read More »

ಉತ್ತರ ಕರ್ನಾಟಕ ಭಾಗದ ಜನರ ಬಹುದಿನಗಳ ಬೇಡಿಕೆಯಾದ ‘ಕಿತ್ತೂರು ಕರ್ನಾಟಕ ‘ಘೊಷಣೆ ಕುರಿತು ಸಂಪುಟದಲ್ಲಿ ರ್ಚಚಿಸಿ ನಿರ್ಧಾರ : ಬೊಮ್ಮಾಯಿ ಭರವಸೆ

ಬೆಳಗಾವಿ: ಉತ್ತರ ಕರ್ನಾಟಕ ಭಾಗದ ಜನರ ಬಹುದಿನಗಳ ಬೇಡಿಕೆಯಾದ ‘ಕಿತ್ತೂರು ಕರ್ನಾಟಕ ‘ಘೊಷಣೆ ಕುರಿತು ಸಂಪುಟದಲ್ಲಿ ರ್ಚಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಪ್ರವಾಸಿ ಮಂದಿರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈದರಾಬಾದ್-ಕರ್ನಾಟಕ ಭಾಗವನ್ನು ‘ಕಲ್ಯಾಣ ಕರ್ನಾಟಕ’ ಎಂದು ಘೊಷಣೆ ಮಾಡಿರುವಂತೆ ಬೆಳಗಾವಿ ಭಾಗವನ್ನು ‘ಕಿತ್ತೂರು ಕರ್ನಾಟಕ’ ಎಂದು ಘೊಷಿಸುವ ಕುರಿತು ಸಚಿವ ಸಂಪುಟದಲ್ಲಿ ರ್ಚಚಿಸಲಾಗುವುದು. ಆ ಬಳಿಕ ಅಂತಿಮ ನಿರ್ಧಾರ ಪ್ರಕಟಿಸಲಾಗುವುದು. ಅ.23ರಿಂದ …

Read More »