Breaking News

ರಾಜಕೀಯ

ಬೆಲ್ಟಿನಲ್ಲಿ 804 ಗ್ರಾಂ ಚಿನ್ನ ಅಡಗಿಸಿಕೊಂಡು ಬಂದ ಭೂಪನನ್ನು ಬಂಧಿಸಿದ ಹುಬ್ಬಳ್ಳಿ ಪೊಲೀಸರು!

ಹುಬ್ಬಳ್ಳಿ: ದೇಹದ ಯಾವ್ಯಾವುದೋ ಭಾಗದಲ್ಲಿ ಅಡಗಿಸಿಟ್ಟುಕೊಂಡು ವಿದೇಶಗಳಿಂದ ವಿಮಾನದ ಮೂಲಕ ಚಿನ್ನ ಕದ್ದು ತರೋದನ್ನು ನೋಡಿದ್ದೇವೆ. ಹುಬ್ಬಳ್ಳಿಯಲ್ಲೊಬ್ಬ ಬೆಲ್ಟ್ ನಲ್ಲಿ ಚಿನ್ನದ ಗಟ್ಟಿಗಳನ್ನು (Gold Smuggling) ಅಡಗಿಸಿಟ್ಟುಕೊಂಡು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಹತ್ತಿರ ಹತ್ತಿರ ಒಂದು ಕೆ.ಜಿ.ಯಷ್ಟು ತೂಕದ ಎರಡು ಚಿನ್ನದ ಗಟ್ಟಿಗಳನ್ನು ಬೆಲ್ಟ್ ನಲ್ಲಿ ಅಡಗಿಸಿಟ್ಟುಕೊಂಡು ಸಾಗಿಸೋ ವೇಳೆ ಪೊಲೀಸರ (Hubballi Police) ಬಲೆಗೆ ಬಿದ್ದಿದ್ದಾನೆ. ಗಾಂಜಾ ಮಾರಾಟ ಪ್ರಕರಣದಿಂದ ತೀವ್ರ ಚರ್ಚೆಗೆ …

Read More »

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಅಮೀರಾ ಎಂಬುವವರು ಆತ್ಮಹತ್ಯೆ,ಪತಿ ಅರೆಸ್ಟ್

ಕೊಡಗು: ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಅಮೀರಾ ಎಂಬುವವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ರುಬೈಸ್​ನನ್ನ ಪೊಲೀಸರು ಬಂಧಿಸಿದ್ದಾರೆ. ಕೊಡಗಿನ ಮಡಿಕೇರಿ ತಾಲೂಕಿನ ಅಯ್ಯಂಗೇರಿ ಗ್ರಾಮದಲ್ಲಿ ಗೃಹಿಣಿ ಅಮೀರಾ(21) ಸಾವನ್ನಪ್ಪಿದ್ದರು. ಅಮಿರಾಳಿಗೆ ವಾಟ್ಸ್ ಆಯಪ್​ನಲ್ಲೇ ಪತಿ ರುಬೈಸ್ ತಲಾಖ್ ಹೇಳಿದ್ದ ಎನ್ನಲಾಗಿದೆ. ಸದ್ಯ ರುಬೈಸ್​ನನ್ನ ದಕ್ಷಿಣ ಕನ್ನಡ ‌ಜಿಲ್ಲೆಯಲ್ಲಿ ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಮಗಳ ಸಾವಿನ ಬಳಿಕ ತಂದೆ ಪೊಲೀಸರಿಗೆ ದೂರು ನೀಡಿದ್ದರು. ಇನ್ನು ರುಬೈಸ್​ನ ತಂದೆ ತಾಯಿ …

Read More »

ಬಿಟ್ಟೂಬಿಡದೆ ಸುರಿಯುತ್ತಿರುವ ಮಳೆ ಏರ್​ಪೋರ್ಟ್​ಗೆ ಹೋಗಲು ಟ್ರ್ಯಾಕ್ಟರ್​ ಮೊರೆಹೋದ ಪ್ಯಾಸೆಂಜರ್ಸ್

ಬೆಂಗಳೂರು: ಹಲವು ದಿನಗಳಿಂದ ಬಿಟ್ಟೂಬಿಡದೆ ಸುರಿಯುತ್ತಿರುವ ಮಳೆ ಬೆಂಗಳೂರಿಗರನ್ನ ಕಂಗೆಡಿಸಿದೆ. ಇಂದು ಕೂಡ ಧಾರಾಕಾರ ಮಳೆ ಸುರಿದಿದ್ದು ವಾಹನ ಸವಾರರು ಪರದಾಡುವಂತಾಗಿತ್ತು. ಇತ್ತ ದೇವನಹಳ್ಳಿ ಏರ್​ಪೋರ್ಟ್ ಬಳಿಯೂ ಭಾರೀ ಮಳೆಯಾಗಿದ್ದು ಏರ್​​ಪೋರ್ಟ್ ಅರೈವಲ್ ಮತ್ತು ಡಿಪಾರ್ಚರ್ ವೇ, ಪಾರ್ಕಿಂಗ್ ಬಳಿಯೂ ಕೆರೆಯಂಥ ಪರಿಸ್ಥಿತಿ ನಿರ್ಮಾಣವಾಗಿತ್ತು.   ಇತ್ತ ಏರ್​ಪೋರ್ಟ್​ಗೆ ಹೋಗುವ ಪ್ಯಾಸೆಂಜರ್​ಗಳು ಏರ್​​ಪೋರ್ಟ್​ಗೆ ತೆರಳಬೇಕಿದ್ದ ಬಸ್ ಸಿಗದೇ ಪರದಾಡುವಂತಾಗಿದೆ. ಈ ವೇಳೆ ದೇವರಂತೆ ಬಂದ ಟ್ರ್ಯಾಕ್ಟರ್ ಚಾಲಕನೋರ್ವ ಏರ್​ಪೋರ್ಟ್​ಗೆ ಹೋಗಲು …

Read More »

ಎಚ್​.ಡಿ ಕುಮಾರಸ್ವಾಮಿ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ನಡುವಿನ ಜಗಳ ಇನ್ನೂ ನಿಂತಿಲ್ಲ.

ಬೆಂಗಳೂರು: ರಾಜ್ಯ ವಿಧಾನಸಭಾ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆಯೇ ತಾರಕಕ್ಕೇರಿದ್ದ ಮಾಜಿ ಸಿಎಂ ಎಚ್​.ಡಿ ಕುಮಾರಸ್ವಾಮಿ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ನಡುವಿನ ಜಗಳ ಇನ್ನೂ ನಿಂತಿಲ್ಲ. ಹಾನಗಲ್​​ ಮತ್ತು ಸಿಂದಗಿ ಎರಡು ಕ್ಷೇತ್ರಗಳಲ್ಲಿ ಜೆಡಿಎಸ್​ ಮುಸ್ಲಿಂ ಅಭ್ಯರ್ಥಿಗಳನ್ನು ಹಾಕಿದ ಮೇಲಂತೂ ಸಿದ್ದರಾಮಯ್ಯ ಎಚ್​​ಡಿಕೆ ಮೇಲೆ ಕೆಂಡಕಾರಿದ್ದರು. ಈಗ ಇದು ತಾತ್ಕಾಲಿಕ ಕದನ ವಿರಾಮವೋ, ಮಾತಿನ ಸಮರವೋ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಹೌದು, ಈ ಪ್ರಶ್ನೆ ಹುಟ್ಟಿಕೊಂಡಿದ್ದೇ ತಡ ದಿಢೀರನೇ ಸಿದ್ದರಾಮಯ್ಯ ತಾತ್ಕಾಲಿಕ …

Read More »

ಪ್ರಧಾನಿ ತಮ್ಮ ಹೆಸರನ್ನು ಮೌನೇಂದ್ರ ಮೋದಿ ಅಂತ ಬದಲಾಯಿಸಿಕೊಂಡರೆ ಒಳ್ಳೆಯದು: ರಾಮಲಿಂಗಾರೆಡ್ಡಿ

ಅ.11: ಕೋವಿಡ್ ಸಂದರ್ಭದಲ್ಲಿ ಸಾಕಷ್ಟು ಜನ ಮೃತಪಟ್ಟರು. ಅದರ ಬಗ್ಗೆ ಬಿಜೆಪಿ ಧ್ವನಿ ಎತ್ತಲಿಲ್ಲ. ರೈತರ ಹತ್ಯೆಯಾಗಿದೆ, ಆಗಲೂ ಧ್ವನಿಯೆತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿಯಿಂದ ರೈತರಿಗೂ ನ್ಯಾಯ ಸಿಗಲ್ಲ. ಸಾಮಾನ್ಯ ಜನರಿಗೂ ನ್ಯಾಯ ಸಿಗಲ್ಲ. ಹಾಗಾಗಿ ಅವರು ತಮ್ಮ ಹೆಸರನ್ನು ಮೌನೇಂದ್ರ ಮೋದಿ ಅಂತ ಬದಲಾಯಿಸಿಕೊಂಡರೆ ಒಳ್ಳೆಯದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಕಿಡಿಗಾರಿದರು. ಸೋಮವಾರ ನಗರದ ರೇಸ್‍ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ಆವರಣದಲ್ಲಿ ರೈತ ವಿರೋಧಿ ಕೃಷಿ ಕಾನೂನುಗಳು …

Read More »

ಪೊಲೀಸ್​​ ಅಧಿಕಾರಿಗಳ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತ ಮಹಿಳೆ; ಯಾಕೆ?

ಹಾವೇರಿ: ಪೊಲೀಸ್​​​ ಅಧಿಕಾರಿಗಳ ಮುಂದೆಯೇ ವಿಷ ಸೇವಿಸಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಾವೇರಿಯಲ್ಲಿ ನಡೆದಿದೆ. ಸಿಎಂ ಬಸವರಾಜ್​​ ಬೊಮ್ಮಾಯಿ ಸ್ವಕ್ಷೇತ್ರ ಶಿಗ್ಗಾವಿ ತಾಲೂಕು ಗಡಿ ಭಾಗದ ತರ್ಲಘಟ್ಟ ಗ್ರಾಮದಲ್ಲಿ ರೈತ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ರೈತರು ಭೂಮಿಯಲ್ಲಿ ಸಾಗುವಳಿ ಮಾಡಲು ಮುಂದಾದ ವಿಷಯ ತಿಳಿದು ದುಂಡಸಿ ಅರಣ್ಯ ಇಲಾಖೆಯ ಅಧಿಕಾರಿ ಸ್ಥಳಕ್ಕೆ ಭೇಟಿ ನೀಡಿದ್ದರು. ತಡಸ ಠಾಣೆಯ ಪೊಲೀಸ್​​ ಸಬ್​​ ಇನ್ಸ್​ಪೆಕ್ಟರ್​​​ ಕೂಡ ಸ್ಥಳಕ್ಕೆ ಹೋಗಿ …

Read More »

3 ಕೋಟಿ ರೂ. ವೆಚ್ಚದ ವಾಲ್ಮೀಕಿ ಸಮುದಾಯ ಭವನಕ್ಕೆ ಭೂಮಿಪೂಜೆ: ಬಿ.ಶ್ರೀರಾಮುಲು

ಚಿತ್ರದುರ್ಗ: ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು 3 ಕೋಟಿ ರೂ. ವೆಚ್ಚದ ಮಹರ್ಷಿ ವಾಲ್ಮೀಕಿ ಸಮುದಾಯ ಭವನಕ್ಕೆ ಇಂದು ಭೂಮಿಪೂಜೆ ಮಾಡಿದ್ದಾರೆ. ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಪಟ್ಟಣದಲ್ಲಿ ಸೋಮವಾರ 3 ಕೋಟಿ ರೂ. ವೆಚ್ಚದ ಮಹರ್ಷಿ ವಾಲ್ಮೀಕಿ ಸಮುದಾಯ ಭವನದ ಶಂಕುಸ್ಥಾಪನಾ ಸಮಾರಂಭ ನೆರೆವೇರಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ …

Read More »

ಮದ್ವೆಯಾದ ಬಳಿಕ ಒಂಟಿಯಾಗಿ ಜೀವಿಸ್ತಿರೋದು ಅವರ ನಾಯಕ- ಸುಧಾಕರ್‌ಗೆ ನಿಂಬಾಳ್ಕರ್ ಟಾಂಗ್

ಬೆಳಗಾವಿ: ಮದುವೆಯಾದ ಬಳಿಕ ಒಂಟಿಯಾಗಿ ಜೀವಿಸುತ್ತಿರುವುದು ಅವರ ನಾಯಕ. ಒಂಟಿಯಾಗಿ ಜೀವಿಸುವ ಅವರ ನಾಯಕ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಏನಾದರೂ ಪ್ರತಿಕ್ರಿಯೆಗಳಿವೆಯಾ ಎಂದು ಸಚಿವ ಡಾ. ಕೆ ಸುಧಾಕರ್ ಅವರಿಗೆ ಶಾಸಕಿ ಅಂಜಲಿ ನಿಂಬಾಳ್ಕರ್ ಪ್ರಶ್ನಿಸಿದ್ದಾರೆ. ಆಧುನಿಕ ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಸಚಿವರ ವಿರುದ್ಧ ಅಂಜಲಿ ನಿಂಬಾಳ್ಕರ್ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಇಂತಹ ಪುರುಷರಿಗೆ ಆಪ್ತ ಸಮಾಲೋಚನೆಯ ಅವಶ್ಯವಿದೆ. ವಿಶ್ವ ಮಾನಸಿಕ ಆರೋಗ್ಯ ದಿನದಂದು …

Read More »

ಬೆಂಗಳೂರಿನಲ್ಲಿ ಧಾರಕಾರ ಮಳೆ; ಜನಜೀವನ ಅಸ್ತವ್ಯಸ್ತ

ಬೆಂಗಳೂರು: ಕಳೆದೊಂದು ವಾರದಿಂದ ಬೆಂಗಳೂರಿನಲ್ಲಿ ಧಾರಕಾರ ಮಳೆಯಾಗುತ್ತಿದೆ. ಇಂದು ಕೂಡ ಸಂಜೆಯಿಂದಲೇ ವರುಣನ ಆರ್ಭಟ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ನಗರದ ಪ್ರಮುಖ ಏರಿಯಾಗಳಾದ ಹೆಬ್ಬಾಳ, ಮಲ್ಲೇಶ್ವರಂ, ರಾಜಾಜಿನಗರ, ಮೆಜೆಸ್ಟಿಕ್, ಕೆ.ಆರ್​​ ಮಾರ್ಕೆಟ್​​​​​, ಆರ್​​.ಆರ್​​ ನಗರ, ಕೊತ್ನೂರು ದಿಣ್ಣೆ, ಜಯನಗರ ಸೇರಿದಂತೆ ಹಲವೆಡೆ ಜೋರು ಮಳೆಯಾಗುತ್ತಿದೆ. A flooded street in #Rajajinagar today noon after the #rains. Video by Muthu P @BBMPCOMM @BngWeather @nimmasuresh #BengaluruRains …

Read More »

ವಿದ್ಯಾರ್ಥಿನಿಯರಿಗೆ ಮೊಬೈಲ್ ಕೊಡಿಸಿದ ಹೊನ್ನಾಳಿ ರೇಣುಕಾಚಾರ್ಯ

ದಾವಣಗೆರೆ: ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ಅವರು ತಮ್ಮ ಕ್ಷೇತ್ರದಲ್ಲಿ ಕೊರೊನಾ ವೈರಸ್​ ನಿಂದ ಸಂಕಷ್ಟಕ್ಕೀಡಾದವರಿಗೆ ತನ್ನ ಕೈಲಾದ ಸಹಾಯ ಮಾಡುತ್ತಾ ಮಾನವೀಯತೆ ಮೆರೆಯುತ್ತಿದ್ದಾರೆ. ಇದೀಗ ಮತ್ತ್ತೊಮ್ಮೆ ಬಡ ವಿದ್ಯಾರ್ಥಿನಿಯರಿಗೆ ಮೊಬೈಲ್​​ ನೀಡುವ ಮೂಲಕ ಮತ್ತೆ ಸುದ್ದಿಗೆ ಬಂದಿದ್ದಾರೆ. ಜನೋಪಕಾರಿ ಕೆಲಸಗಳಿಗೆ ತಾನು ಎಂದೆಂದಿಗೂ ಸಿದ್ಧ ಎನ್ನುವ ರೇಣುಕಾಚಾರ್ಯರು ಇತರ ರಾಜಕಾರಣಿಗಳಿಗೆ ಮಾದರಿಯಾಗಿದ್ದಾರೆ. ಟಿ. ಗೋಪಗೊಂಡನಹಳ್ಳಿಯ ಬಿಂದು ಮತ್ತು ಸುಂಕದಕಟ್ಟೆ ಗ್ರಾಮದ ನರ್ಮದಾ ಎಂಬಿಬ್ಬರು ವಿದ್ಯಾರ್ಥಿಗಳು ಮೊಬೈಲ್​​ ಇಲ್ಲದೆ …

Read More »