ಧಾರವಾಡ: ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಕಾವು ಜೋರಾಗಿದೆ. ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಉಪಚುನಾವಣೆ ಗೆಲ್ಲಲು ಬಿಜೆಪಿ ಭಾರೀ ಸರ್ಕಸ್ ನಡೆಸುತ್ತಿದ್ದಾರೆ. ಹೀಗಿರುವಾಗಲೇ ತೆರೆಮರೆಯಲ್ಲೇ ಉಪಚುನಾವಣೆಯಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ದೂರ ಉಳಿದಿದ್ದಾರೆ ಎನ್ನಲಾಗುತ್ತಿದೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ಗೆ ರಾಜ್ಯ ಬಿಜೆಪಿ ಯಾವುದೇ ಜವಾಬ್ದಾರಿ ನೀಡಿಲ್ಲ. ಜಗದೀಶ್ ಶೆಟ್ಟರ್ ತವರು ಜಿಲ್ಲೆ ಧಾರವಾಡ ಪಕ್ಕದ ಜಿಲ್ಲೆಗಳಲ್ಲೇ ಉಪಚುನಾವಣೆ ಎದುರಾಗುತ್ತಿದೆ. ಹೀಗಿದ್ದರೂ ಶೆಟ್ಟರ್ಗೆ ಬಿಜೆಪಿ ಯಾವುದೇ …
Read More »ಜಿಲ್ಲಾಡಳಿತದ ವಿರೋಧದ ಮಧ್ಯೆಯೂ ಮೈಸೂರಲ್ಲಿ ಮಹಿಷಾ ದಸರಾ ಆಚರಣೆ
ಮೈಸೂರು: ಜಿಲ್ಲಾಡಳಿತದ ವಿರೋಧದ ನಡುವೆಯೂ ಪೊಲೀಸರ ಬಿಗಿ ಬಂದೋಬಸ್ತ್ನಲ್ಲಿ ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಮಷಿಷಾ ದಸರಾಗೆ ಚಾಲನೆ ಸಿಕ್ಕಿದ್ದು ನಗರದ ಬುದ್ಧ ವಿಹಾರದಿಂದ ಮಹಿಷಾ ಮೆರವಣಿಗೆ ಆರಂಭವಾಗಿದೆ. ಮೊದಲ ಬಾರಿಗೆ ಮಹಿಷಾಸುರ ಪ್ರತಿಮೆ ನಿರ್ಮಿಸಿ ಮೆರವಣಿಗೆ ಮಾಡಲಾಗುತ್ತಿದ್ದು, ಮಹಿಷಾಸುರ ಪಂಚಲೋಹದ ವಿಗ್ರಹಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಬುದ್ದವಿಹಾರದಿಂದ ಅಶೋಕಪುರಂ ಪಾರ್ಕ್ವರೆಗೆ ಮೆರವಣಿಗೆ ನಡೆಯಲಿದೆ. ಈ ಮೆರವಣಿಗೆ ಕಾರ್ಯಕ್ರಮದಲ್ಲಿ ಉರಿಲಿಂಗಪೆದ್ದಿ ಮಠದ ಪೀಠಾಧಿಪಾತಿ ಜ್ಞಾನಪ್ರಕಾಶ ಸ್ವಾಮೀಜಿ, ಮಾಜಿ ಮೇಯರ್ ಪುರುಷೋತ್ತಮ್ …
Read More »ಮೀಸಲಾತಿ ವಿಚಾರ: ‘ಒಂದು ನಾನಿರ್ಬೇಕು, ಇಲ್ಲ ನೀವಿರ್ಬೇಕು’ -CMಗೆ ಪ್ರಸನ್ನಾನಂದಪುರಿ ಶ್ರೀ ಎಚ್ಚರಿಕೆ
ದಾವಣಗೆರೆ: ಇದೇ ತಿಂಗಳು 20ರ ಒಳಗಾಗಿ ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಶೇಕಡಾ 7.5 ಮೀಸಲಾತಿಯನ್ನ ನೀಡಬೇಕು. ಇಲ್ಲವಾದಲ್ಲಿ ನಾನು ಹೋರಾಟದ ನಿರ್ಧಾರ ಪ್ರಕಟ ಮಾಡಿದ್ರೆ ಒಂದು ನಾನಿರಬೇಕು. ಇಲ್ಲ, ನೀವು ಇರಬೇಕು ಎಂದು ವಾಲ್ಮೀಕಿ ಮಠದ ಪ್ರಸನ್ನಾನಂದಪುರಿ ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಕೆಯನ್ನ ನೀಡಿದೆ. ಪಂಚಮಸಾಲಿ 2ಎ ಮೀಸಲಾತಿ ಹೋರಾಟ ಬೆನ್ನಲ್ಲೆ ಸರ್ಕಾರಕ್ಕೆ ಮತ್ತೊಂದು ಮೀಸಲಾತಿ ತಲೆ ಬಿಸಿ ಶುರುವಾಗಿದೆ. ಅದರಂತೆ ಇದೀಗ ಬೊಮ್ಮಾಯಿ ಸರ್ಕಾರಕ್ಕೆ ವಾಲ್ಮೀಕಿ …
Read More »ಹೂವಿನ ಹಡಗಲಿ ಕಲುಷಿತ ನೀರು ಕುಡಿದು 6 ಸಾವು; 3 ಲಕ್ಷ ರೂಪಾಯಿ ಪರಿಹಾರ ಘೋಷಣೆ
ವಿಜಯನಗರ: ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಮಕರಬ್ಬಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಮೃತಪಟ್ಟವರ ಸಂಖ್ಯೆ 6 ಕ್ಕೇರಿದೆ. ಇದೀಗ ರಾಜ್ಯ ಸರ್ಕಾರ ಮೃತರ ಕುಟುಂಬಕ್ಕೆ ತಲಾ 3 ಲಕ್ಷ ರೂಪಾಯಿ ಪರಿಹಾರವನ್ನ ಘೋಷಣೆ ಮಾಡಿದೆ. ಪ್ರಕರಣ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಬಸವರಾಜ್ ಬೊಮ್ಮಾಯಿ.. ಕಲುಷಿತ ನೀರು ಕುಡಿದು ಸಾವು ಪ್ರಕರಣ ದುಃಖದ ಸಂಗತಿಯಾಗಿದೆ. ಈ ವಿಚಾರವನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಸಮಗ್ರ ತನಿಖೆ ನಡೆಸಿ, ವರದಿ ನೀಡಲು ಸೂಚನೆ …
Read More »ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಯುವಕ ಸ್ಥಳದಲ್ಲೇ ಸಾವು..
ಗೋಕಾಕ : ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಗೋಕಾಕ ತಾಲೂಕಿನ ಕನಸಗಿರಿ ರಸ್ತೆ ಬಳಿ ನಡೆದಿದೆ ಬೈಕ್ ಹಾಗೂ ಮುಖಾ ಮುಖಿ ಡಿಕ್ಕಿಯಾದ ರಭಸಕ್ಕೆ ಎಲ್ಲ ಪುಡಿ ಪುಡಿ ಯಾಗಿದೆ. ಇನ್ನು ಆಕ್ಸಿಡೆಂಟ್ ಆಡ ರಭಸಕ್ಕೆ ಬಸವರಾಜ ದೇಸಾಯಿ ಮೃತ ಪಟ್ಟಿದ್ದು ಅವರ್ ಸ್ನೇಹಿತ ಮಹಾಂತೇಶ್ ಬೇನವಾಡ ಗಂಭೀರವಾಗಿ ಗಾಯ ಗೊಂಡಿದ್ದಾರೆ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಬಸವರಾಜ ದೇಸಾಯಿ ಅಡುಗೆ ಕೆಲಸ ಮಾಡುತ್ತಿದ್ದು ಗೋಕಾಕ …
Read More »ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 2056 ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು: ಭಾರತದ ಅತಿ ದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 2056 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ. ಮೂರು ಹಂತಗಳಲ್ಲಿ ನೇಮಕಾತಿ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ನೋಂದಣಿ ಮಾಡಿಕೊಳ್ಳಲು ಸೂಚಿಸಲಾಗಿದೆ. ಅಭ್ಯರ್ಥಿಗಳು ಬ್ಯಾಂಕ್ ನ ವೆವೆಬ್ ಸೈಟ್ ಗೆ ಭೇಟಿ ಕೊಟ್ಟು ನೇಮಕಾತಿ ಅರ್ಜಿ ಸಂಪೂರ್ಣ ಪರಿಶೀಲಿಸಿ, ಅಗತ್ಯವಿರುವ ಎಲ್ಲಾ ಮಾನದಂಡಗಳನ್ನು ಪೂರ್ತಿಗೊಳಿಸಬಹುದು. ಅಕ್ಟೋಬರ್ 5ರಿಂದ 25ರವರೆಗೆ ಆನ್ ಲೈನ್ ನಲ್ಲಿ ಮಾತ್ರ ಅಭ್ಯರ್ಥಿಗಳು …
Read More »ಹಲ್ಲಿಗೆ ಕ್ಲಿಪ್ ಹಾಕಿಸಿಕೊಳ್ಳಲು ಆಸ್ಪತ್ರೆಗೆ ಹೋಗಿ ಯುವಕ ಸಾವು
ಕಲಬುರಗಿ: ಹಲ್ಲಿಗೆ ಕ್ಲಿಪ್ ಹಾಕಿಸಿಕೊಳ್ಳಲು ಆಸ್ಪತ್ರೆಗೆ ಸೇರಿದ ಯುವಕನೋರ್ವ ಸಾವನ್ನಪ್ಪಿದ ಘಟನೆ ನಗರದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಶಶಾಂಕ(19) ಮೃತ ಯುವಕ. ಈತ ಹಲ್ಲಿಗೆ ಕ್ಲಿಪ್ ಹಾಕಿಸಿಕೊಳ್ಳಲು ಕಲಬುರಗಿ ನಗರದ ಚಿರಾಯು ಆಸ್ಪತ್ರೆಗೆ ಹೋದಾಗ ಆತನಿಗೆ ವೈದ್ಯರು ಆಪರೇಷನ್ ಮೊದಲು ಅರವಳಿಕೆ ಚುಚ್ಚುಮದ್ದು ನೀಡಿದ್ದರು. ಪರಿಣಾಮ ಯುವಕ ಪ್ರಜ್ಞಾಹೀನನಾಗಿದ್ದು, ಆತ ಕಳೆದ ಮೂರು ದಿನಗಳಿಂದ ಕೋಮಾಕ್ಕೆ ಜಾರಿದ್ದನು. ಆದರೆ ನಿನ್ನೆ ತಡರಾತ್ರಿ ಮೃತಪಟ್ಟನೆಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ. ವೈದ್ಯರು ನೀಡಿದ …
Read More »ಬಜ್ಜಿ ತಿಂದು ತಾಯಿ, ಮಗ ಸಾವು
ಬೆಳಗಾವಿ: ವಿಷಾಹಾರ ಸೇವಿಸಿ ತಾಯಿ ಮತ್ತು ಮಗ ಧಾರುಣವಾಗಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ತಾಲೂಕಿನ ಹುದಲಿ ಗ್ರಾಮದಲ್ಲಿ ಸಂಭವಿಸಿದೆ. ಭಾನುವಾರ ರಾತ್ರಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತಾಯಿ ಪಾರ್ವತಿ ಮಳಗಲಿ(53), ಮಗ ಸೋಮನಿಂಗಪ್ಪ ಮಳಗಲಿ(28) ಮೃತ ದುರ್ದೈವಿಗಳಾಗಿದ್ದಾರೆ. ಹೊಲದಲ್ಲಿ ಕೆಲಸ ಮುಗಿಸಿ ಸಂಜೆ ಮನೆಗೆ ಬಂದ ಬಳಿಕ ತಾಯಿ-ಮಗ ಇಬ್ಬರು ಬಜ್ಜಿ ಮಾಡಿ ತಿಂದಿದ್ದರು. ಆರೋಗ್ಯದಲ್ಲಿ ಏರುಪೇರಾಗಿ ಸಾವನ್ನಪಿದ್ದಾರೆ. ಬಜ್ಜಿ ಮಾಡಿ ತಿಂದ ಇಬ್ಬರಿಗೂ ವಾಂತಿ …
Read More »ತಿಂಡಿ ಆಸೆ ತೋರಿಸಿ 12ರ ಬಾಲೆ ಮೇಲೆ ಲೈಂಗಿಕ ದೌರ್ಜನ್ಯ
ಮೈಸೂರು: ಸಾಮೂಹಿಕ ಅತ್ಯಾಚಾರ ಪ್ರಕರಣ ಮಾಸುವ ಮುನ್ನವೇ ಇದೀಗ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ತಿಂಡಿ ಕೊಡಿಸುವ ಆಮಿಷವೊಡ್ಡಿ 12 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಈ ಸಂಬಂಧ 30 ವರ್ಷದ ವ್ಯಕ್ತಿ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು, ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿಸಿದ್ದಾರೆ. 12 ವರ್ಷದ ಬಾಲಕಿ ಮೇಲೆ …
Read More »ಲಕ್ಷ್ಮೀ ಹೆಬ್ಬಾಳಕರ ಕ್ಷೇತ್ರದ ಉಚಗಾಂವ-ಬೆಕ್ಕಿನಕೇರಿ ರಸ್ತೆಯಲ್ಲಿ ರಸ್ತೆಗುಂಡಿಗಳನ್ನು ತುಂಬುವ ಮೂಲಕ ಟಾಂಗ್ ಕೊಟ್ಟಿದ್ದಾರೆ.
ಬೆಳಗಾವಿ- ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವೆ ನಡೆಯುತ್ತಿರುವ ಆರೋಪ,ಪ್ರತ್ಯಾರೋಪ,ವಾಕ್ಸಮರ ನೋಡಿದ್ರೆ ಈ ಕ್ಷೇತ್ರದಲ್ಲಿ ಇವತ್ತೇ ಚುನಾವಣೆ ಘೋಷಣೆ ಆದಂತೆ ಕಾಣುತ್ತಿದೆ. ಮಾಜಿ ಶಾಸಕ ಸಂಜಯ ಪಾಟೀಲ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ರು,ಇದಕ್ಕೆ ಲಕ್ಷ್ಮೀ ಹೆಬ್ಬಾಳಕರ ಅಭಿಮಾನಿಗಳು ತಿರಗೇಟು ನೀಡಿದ್ರು,ಈ ವಾಕ್ಸಮರ ಮುಗಿಯುತ್ತಿದ್ದಂತೆಯೇ ಈಗ ರೋಡ್ ಪಾಲಿಟೀಕ್ಸ್ ಶುರುವಾಗಿದೆ. ಬಿಜೆಪಿ ಯುವ ಮುಖಂಡ ಧನಂಜಯ ಜಾಧವ ನೇತ್ರತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಇಂದು ಶಾಸಕಿ …
Read More »
Laxmi News 24×7