ಹಾವೇರಿ: ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳಿಗೆ ನಡೆಯಬೇಕಾಗಿದ್ದ ಉಪಚುನಾವಣೆಯನ್ನ ಅಕ್ಟೋಬರ್ 30 ರಂದು ನಡೆಸಲಾಗುತ್ತದೆ ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ತಂತ್ರ-ಪ್ರತಿತಂತ್ರದ ಬಗ್ಗೆ ಚರ್ಚೆಗಳು ಶುರುವಾಗಿದೆ. ಜೋಡೆತ್ತುಗಳ ಹೋರಾಟ ಮೂಲಗಳ ಪ್ರಕಾರ ಹಾನಗಲ್ನಲ್ಲಿ ಜೋಡೆತ್ತುಗಳ ಪಾಲಿಟಿಕ್ಸ್ ಜೋರಾಗಲಿದ್ಯಂತೆ. ಚುನಾವಣಾ ಅಖಾಡದಲ್ಲಿ ತೊಡೆತಟ್ಟಲು ಘಟಾನುಘಟಿ ನಾಯಕರು ಸಜ್ಜಾಗಿದ್ದಾರೆ ಎನ್ನಲಾಗಿದೆ. ಅದರಂತೆ ಬಿಜೆಪಿಯಿಂದ ಬಿಎಸ್ವೈ ಮತ್ತು ಬಸವರಾಜ್ ಬೊಮ್ಮಾಯಿ ಹಾಗೂ ಕಾಂಗ್ರೆಸ್ನಿಂದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ …
Read More »ಕೋರ್ಟ್ ಆವರಣದಲ್ಲೇ ಪತ್ನಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ ಪತಿ
ಬೆಳಗಾವಿ: ಕೋರ್ಟ್ ಆವರಣದಲ್ಲಿ ಪತ್ನಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದಿವಾಣಿ ನ್ಯಾಯಾಲಯದ ಆವರಣದಲ್ಲಿ ನಡೆದಿದೆ. ಬೈಲಹೊಂಗಲ ತಾಲೂಕಿನ ನನಗುಂಡಿಕೊಪ್ಪದ ನಿವೃತ್ತ ಸೈನಿಕ ಶಿವಪ್ಪ ಅಡಕಿ (35) ಪತ್ನಿ ಜಯಮಾಲಾ (33) ಮೇಲೆ ಹಲ್ಲೆ ಮಾಡಿದ್ದು, ಮಾರಕಾಸ್ತ್ರದಿಂದ ಪತ್ನಿಯ ತಲೆ ಹಾಗೂ ಕಾಲಿಗೆ ಕೊಚ್ಚಿದ ಕೊಲೆ ಮಾಡಲು ಯತ್ನಿಸಿದ್ದಾನೆ. ಪತಿ-ಪತ್ನಿಯ ಕೌಟುಂಬಿಕ ಕಲಹದ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. …
Read More »ಗುತ್ತಿಗೆದಾರನ ನಿರ್ಲಕ್ಷ್ಯ.. ರಸ್ತೆ ಗುಂಡಿಗೆ ಬಿದ್ದು ವ್ಯಕ್ತಿ ಸಾವು: ಗ್ರಾಮಸ್ಥರಿಂದ ಪ್ರತಿಭಟನೆ
ರಸ್ತೆ ಗುಂಡಿಗೆ ಬಿದ್ದು ವ್ಯಕ್ತಿ ಸಾವಿಗೀಡಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್-ಹೊಸೂರು ಮುಖ್ಯ ರಸ್ತೆಯಲ್ಲಿ ನಡೆದಿದೆ. ಸಬ್ ಮಂಗಲ ನಿವಾಸಿ ಮಾದೇಶ್ ಮೃತ ವ್ಯಕ್ತಿಯಾಗಿದ್ದಾನೆ. ರಸ್ತೆ ಕಾಮಗಾರಿಗೆ ಗುತ್ತಿಗೆ ಪಡೆದಿದ್ದ ಗುತ್ತಿಗೆದಾರ ರಸ್ತೆಯಲ್ಲಿನ ಮರ ತೆರವು ಮಾಡಲು ಹೋಗಿ ಗುಂಡಿ ತೆಗೆದು ಹಾಗೆ ಬಿಟ್ಟಿದ್ದ. ಇದೀಗ ರಸ್ತೆಯಲ್ಲಿರುವ ಅದೇ ಹೊಂಡಕ್ಕೆ ಬಿದ್ದು ಮಾದೇಶ್ ಮೃತಪಟ್ಟಿದ್ದಾರೆ. ಕಳೆದ ರಾತ್ರಿ ದ್ವಿಚಕ್ರ ವಾಹನದಲ್ಲಿ ಮನೆಗೆ ಹೋಗುವಾಗ ಅಪಘಾತ ಸಂಭವಿಸಿದೆ. ಗ್ರಾಮಸ್ಥರು ರಸ್ತೆ ತಡೆದು …
Read More »ರಸ್ತೆ ಗುಂಡಿಯಲ್ಲಿ ಬಿದ್ದು ಬೈಕ್ ಓಡಿಸುತ್ತಿದ್ದ ಬಿಜೆಪಿ ಮುಖಂಡ ಸಾವು
ಆನೇಕಲ್: ಬೈಕ್ ಓಡಿಸುವಾಗ ರಸ್ತೆ ಕಾಮಗಾರಿಗೆಂದು ತೋಡಿದ್ದ ಗುಂಡಿಯಲ್ಲಿ ಬಿದ್ದು ಬಿಜೆಪಿ ಮುಖಂಡ ಸಬ್ಮಂಗಲ ನಿವಾಸಿ ಮಾದೇಶ್(50) ಸಾವನ್ನಪ್ಪಿದ್ದಾರೆ. ಆನೇಕಲ್ನ ಹೊಸೂರು ಮುಖ್ಯರಸ್ತೆಯಲ್ಲಿ ದುರ್ಘಟನೆ ನಡೆದಿದ್ದು, ಗುತ್ತಿಗೆದಾರ ರಸ್ತೆ ಕಾಮಗಾರಿಗೆ ಹೊಂಡ ತೋಡಿದ್ದರು. ಆದರೆ ಕೆಲಸ ಪೂರ್ಣಗೊಳಿಸದೆ ಗುಂಡಿಯನ್ನು ಹಾಗೆಯೇ ಬಿಟ್ಟುಹೋಗಿದ್ದರು ಎನ್ನಲಾಗಿದೆ. ಗುತ್ತಿಗೆದಾರನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸ್ಥಳೀಯರು ಧರಣಿ ನಡೆಸಿದ್ದಾರೆ. ಸ್ಥಳಕ್ಕೆ ತಹಶೀಲ್ದಾರ್ ದಿನೇಶ್ ಭೇಟಿ ನೀಡಿ ಧರಣಿ ನಡೆಸುತ್ತಿದ್ದವರ ಮನವೊಲಿಕೆಗೆ ಯತ್ನಿಸಿದ್ದಾರೆ. ಈ ರಸ್ತೆಯಲ್ಲಿ ಕಾಮಗಾರಿ ಪ್ರಾರಂಭ …
Read More »ಮದ್ಯ ಪ್ರಿಯರಿಗೆ ಸಿಹಿ ಸುದ್ದಿ: ಅ.3 ರಿಂದ ಕ್ಲಬ್ ಪಬ್ ಓಪನ್
ಬೆಂಗಳೂರು: ಕೊರೊನಾ ಹಾವಳಿ ಕಡಿಮೆಯಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೇರಲಾಗಿದ್ದ ಲಾಕ್ಡೌನ್ ಸಡಿಲಗೊಳಿಸಿ ಸಿಎಂ ಬಸವರಾಜ್ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ. ಅದರಲ್ಲೂ ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ನೀಡಲಾಗಿದೆ. ಹೌದು, ಅಕ್ಟೋಬರ್ 3ನೇ ತಾರೀಕಿನಿಂದಲೇ ಕ್ಲಬ್, ಪಬ್ ತೆರೆಯಲು ಅನುಮತಿ ನೀಡಲಾಗಿದೆ. ಈ ಬಗ್ಗೆ ಸುದ್ದಿಗಾರರ ಜೊತೆಗೆ ಮಾತಾಡಿದ ಸಿಎಂ ಬೊಮ್ಮಾಯಿ, ‘ರಾಜ್ಯದಲ್ಲಿ ಸರಾಸರಿ 0.66 ಕೋವಿಡ್ ಪ್ರಮಾಣ ಇದೆ. ಸದ್ಯ ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗಿದೆ. ಆದ್ದರಿಂದ ಪಾಸಿಟಿವಿ ರೇಟ್ ಶೇ.1 ಕ್ಕಿಂತ …
Read More »ಶಿರೂರು ಮಠಕ್ಕೆ ಬಾಲ ಪೀಠಾಧಿಪತಿ ನೇಮಕ ವಿವಾದ: ಪಿಐಎಲ್ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು, ಸೆ.26: ಉಡುಪಿ ಶಿರೂರು ಮಠಕ್ಕೆ ಪೀಠಾಧಿಪತಿಯಾಗಿ ಅಪ್ರಾಪ್ತರ ವಯಸ್ಸಿನ ಬಾಲಕನನ್ನು ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಅಪ್ರಾಪ್ತ ಬಾಲಕನನ್ನು ಪೀಠಾಧಿಪತಿಯಾಗಿ ನೇಮಿಸಿರುವ ಕ್ರಮ ಪ್ರಶ್ನಿಸಿ ಮಠದ ಭಕ್ತ ಸಮಿತಿಯ ಕಾರ್ಯದರ್ಶಿ ಪಿ.ಲಾತವ್ಯ ಆಚಾರ್ಯ ಹಾಗೂ ಇತರ 4 ಮಂದಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ಚಂದ್ರ ಶರ್ಮಾ ಬುಧವಾರ ಪ್ರಕಟಿಸಿದ್ದಾರೆ. ಪೀಠಾಧಿಪತಿ ನೇಮಕ ವಿಚಾರದಲ್ಲಿ …
Read More »ರಾಯಚೂರು: ಕೌಟುಂಬಿಕ ಕಲಹ; ಒಂದೇ ಮನೆಯ ಮೂವರ ಬರ್ಬರ ಕೊಲೆ
ರಾಯಚೂರು: ಸಮೀಪದ ಯರಮರಸ್ ಕ್ಯಾಂಪ್ ನಲ್ಲಿ ಕೌಟುಂಬಿಕ ಕಲಹದಿಂದ ಮೂವರ ಕೊಲೆಯಾದ ಧಾರುಣ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಒಂದೇ ಕುಟುಂಬದ ಸಂತೋಷಿ(45) ವೈಷ್ಣವಿ(18) ಮತ್ತು ಆರತಿ(16)ಎಂಬುವವರ ಕೊಲೆಯಾಗಿದೆ. ಅಳಿಯ ಸಾಯಿ ಎಂಬಾತನೆ ಅತ್ತೆ ಹೆಂಡತಿ ಹಾಗೂ ಸೊಸೆಯನ್ನು ಕೊಂದಿರಬಹುದು ಎಂದು ಶಂಕಿಸಲಾಗಿದೆ. ಕಳೆದ ಆರು ತಿಂಗಳ ಹಿಂದೆಯಷ್ಟೇ ಮಗಳು ವೈಷ್ಣವಿ ಮದುವೆ ಜರುಗಿತ್ತು. ಆದರೆ, ಅಳಿಯ ಮಗಳ ನಡುವೆ ಹೊಂದಾಣಿಕೆ ಇರಲಿಲ್ಲ. ಪದೇಪದೆ ಜಗಳ ಆಡುತ್ತಿದ್ದರು. ಕಳೆದ ಒಂದು ತಿಂಗಳ …
Read More »ಡಬಲ್ ಬಾರ್ ಬಂದೂಕಿನಿಂದ ಹೊರಬಂದ ಗುಂಡು ಸಮಂಧಿಕನ ಕಾಲಿಗೆ
ಬೆಳಗಾವಿ-ರಾಗಿಯ ರಾಶಿ ಮಾಡಲು ಅಪ್ಪ ಮಕ್ಕಳು ಹೊಲಕ್ಕೆ ಹೋಗಿದ್ರು. ಜೊತೆಗೆ ಸಮಂಧಿಕನೊಬ್ಬ ಹೋಗಿದ್ದ ,ಹೊಲದಲ್ಲಿ ಹಂದಿಗಳ ಕಾಟ ಇದೆ ಅಂತಾ ಡಬಲ್ ಬಾರ್ ಬಂದೂಕು ಹೊತ್ಕೊಂಡ ಹೋದ ಅಪ್ಪ ಮಕ್ಕಳು ಎಡವಟ್ಟು ಮಾಡಿಕೊಂಡ ಘಟನೆ ಬೆಳಗಾವಿ ಸಮೀಪದ ರಾಜಕಟ್ಟಿ ಗ್ರಾಮದಲ್ಲಿ ನಡೆದಿದೆ. ರಾಜಕಟ್ಟಿ ಗ್ರಾಮದ ಅಪ್ಪ ಮಕ್ಕಳು ಹೊಲದಲ್ಲಿ ರಾಗಿ ರಾಶಿ ಮಾಡಲು ಹೋಗಿದ್ದರು.ಗದ್ದೆಯಲ್ಲಿ ಕಾಲಿಡುತ್ತಿದ್ದಂತೆಯೇ ಕಾಡು ಹಂದಿ ರಾಗಿ ಬೆಳೆ ಹಾಳು ಮಾಡುತ್ತಿರುವದನ್ನು ನೋಡಿದ ಇವರು ಅಲರ್ಟ್ ಆದ್ರು.ಇವರ …
Read More »ಸಿದ್ದರಾಮಯ್ಯ ಒಬ್ಬ ಭಯೋತ್ಪಾದಕ ಎಂದ ನಳೀನ್ ಕುಮಾರ್ ಕಟೀಲ್...!
ಆರ್ಎಸ್ಎಸ್ನದ್ದು ತಾಲಿಬಾನ್ ಸಂಸ್ಕೃತಿ ಎಂದ ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭರ್ಜರಿ ಟಾಂಗ್ ನೀಡಿದ್ದಾರೆ. ಮಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಸಿದ್ದರಾಮಯ್ಯ ಒಬ್ಬ ಭಯೋತ್ಪಾದಕ ಎಂದು ಗುಡುಗಿದ್ರು. ಸಿದ್ದರಾಮಯ್ಯ ಅತಂತ್ರ ಸ್ಥಿತಿಯಲ್ಲಿ ಇದ್ದಾರೆ. ಸಿದ್ದರಾಮಯ್ಯ ಆಡಳಿತದಲ್ಲಿ ಅನೇಕರ ಹತ್ಯೆಯಾಯ್ತು. ಅವರ ಆಡಳಿತದಲ್ಲಿ ರಾಜ್ಯದಲ್ಲಿ ತಾಲಿಬಾನ್ ಸ್ಥಿತಿಯೇ ಇತ್ತು. ರಾಜ್ಯದಲ್ಲಿ 24 ಹಿಂದೂ ಯುವಕರನ್ನು ಕೊಲೆಗೈಯಲಾಯ್ತು. ದಕ್ಷಿಣ ಕನ್ನಡದಲ್ಲಿ …
Read More »ನಾಡ ಹಬ್ಬ ಮೈಸೂರು ದಸರಾ ಉದ್ಘಾಟಕರ ಹೆಸರು ಘೋಷಣೆ
ಮೈಸೂರು: ನಾಡ ಹಬ್ಬ ದಸರಾ ಉದ್ಘಾಟಕರ ಹೆಸರು ಘೋಷಣೆಯಾಗಿದೆ. ಈ ಬಾರಿ ನಡೆಯಲಿರುವ ದಸರಾ ಹಬ್ಬವನ್ನು ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರು ಉದ್ಘಾಟಿಸಲಿದ್ದಾರೆ. ಇಂದು (ಸೆ.28) ಸಂಜೆ ದಸರಾ ಹಬ್ಬದ ಸಿದ್ಧತೆ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಯಿತು. ಅಕ್ಟೋಬರ್ 7ರಿಂದ ಆರಂಭವಾಗಲಿರುವ ನಾಡಹಬ್ಬ ದಸರಾ ಮಹೋತ್ಸವವನ್ನು ಉದ್ಘಾಟಿಸಲು ಹಿರಿಯ ಮುತ್ಸದ್ಧಿ, ಮಾಜಿ ಮುಖ್ಯಮಂತ್ರಿ ಶ್ರೀ ಎಸ್.ಎಂ.ಕೃಷ್ಣ ರವರಿಗೆ ಆಹ್ವಾನ ನೀಡಲು …
Read More »
Laxmi News 24×7