Breaking News

ರಾಜಕೀಯ

ವಿಜಯೇಂದ್ರನಿಗೆ ಮತ್ತೇ ಮಣೆ ಹಾಕಿದ್ರೇ… ಹೊಸ ಪಕ್ಷ ಕಟ್ಟುವುದು ಗ್ಯಾರಂಟಿ…; ಯತ್ನಾಳ

ವಿಜಯೇಂದ್ರನಿಗೆ ಮತ್ತೇ ಮಣೆ ಹಾಕಿದ್ರೇ… ಹೊಸ ಪಕ್ಷ ಕಟ್ಟುವುದು ಗ್ಯಾರಂಟಿ…; ಯತ್ನಾಳ ಶ್ರೀರಾಮು ಹೇಳಿದ್ದು ಕೇಳಲು ನನಗೆ ಹುಚ್ಚು ಹಿಡಿದಿದೆಯಾ??? ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ವಿಜಯೇಂದ್ರನನ್ನ ಮತ್ತೇ ತಲೆಯ ಮೇಲೆ ಕೂರಿಸಿಕೊಂಡರೇ, ಹೊಸ ಪಕ್ಷ ಗ್ಯಾರಂಟಿ. ನಮ್ಮ ಸರ್ಕಾರ ಬಹುಮತ ಬರುವುದು ಗ್ಯಾರಂಟಿ. ಕರ್ನಾಟಕ ಉದ್ಧಾರವಾಗುವುದು ಗ್ಯಾರಂಟಿ. ಹೇಗಾದರೂ ವಿಜಯದಶಮಿ ಹತ್ತಿರವಾಗುತ್ತಿದೆ. ವಿಜಯೇಂದ್ರನ ನೇತೃತ್ವ ಒಪ್ಪದ ಕಾರಣ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಗೊಂದಲುಮಯವಾಗಿದೆ ಎಂದರು. ಇನ್ನು ವಿಜಯೇಂದ್ರ …

Read More »

‘ನಾನೊಬ್ಬ ಪ್ರಾಮಾಣಿಕ ರಾಜಕಾರಣಿ, ಪ್ರಕರಣದಲ್ಲಿ ನನ್ನ ಸಿಲುಕಿಸುವ ಪ್ರಯತ್ನ’: ಶಾಸಕ ಬೈರತಿ ಬಸವರಾಜ್

ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಆಲಿಯಾಸ್ ಬಿಕ್ಲು ಶಿವ ಹತ್ಯೆ ಆರೋಪ ಪ್ರಕರಣದ ಐದನೇ ಆರೋಪಿಯಾಗಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರು ಎರಡನೇ ಬಾರಿಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗಿ ವಿಚಾರಣೆ ಎದುರಿಸಿದರು. ಪ್ರಕರಣದ ತನಿಖಾಧಿಕಾರಿ ಪ್ರಕಾಶ್ ರಾಥೋಡ್ ಅವರ ಮುಂದೆ ಶಾಸಕರು ಹಾಜರಾಗಿ ಸುಮಾರು 3 ಗಂಟೆಗಳ ಕಾಲ ವಿಚಾರಣೆ ಎದುರಿಸಿದರು. ಮತ್ತೊಂದೆಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ನೆರವು ನೀಡಿದ ಆರೋಪದಡಿ ಆಟೋ ಚಾಲಕ ಶಿವು ಎಂಬಾತನನ್ನು …

Read More »

ಇಂದು ಶಂಕರಗೌಡ ಪಾಟೀಲ್ ಅವರ ಜನ್ಮದಿನ ಬೆಳಗಾವಿಯ ವಿವಿಧೆಡೆ ಆಚರಣೆ

ಕರ್ನಾಟಕ ಸರ್ಕಾರದ ದೆಹಲಿಯ ನಿಕಟಪೂರ್ವ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ್ ಅವರ ಜನ್ಮದಿನವನ್ನು ಬೆಳಗಾವಿಯಲ್ಲಿ ಅತ್ಯಂತ ಉತ್ಸಾಹದಿಂದ ಆಚರಿಸಲಾಯಿತು. ನಗರ ರಾಣಿ ಚನ್ನಮ್ಮ ಸರ್ಕಲ್‌ನಲ್ಲಿರುವ ಶ್ರೀ ಗಣೇಶ್ ಹಾಗೂ ಶ್ರೀ ಹನುಮಾನ್ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ, ನಂದನ ಮಕ್ಕಳ ಧಾಮದಲ್ಲಿ ಮಕ್ಕಳಿಗೆ ಹಣ್ಣು ಹಂಪಲು ಹಾಗೂ ಸಿಹಿ ಹಂಚಿ ಕೇಕ್ ಕತ್ತರಿಸ ಲಾಯಿತು. ಡಿಸಿಪಿ ಎನ ವಿ ಬರಮಣಿ ಅವರು ಶುಭಾಶಯಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಈ …

Read More »

ಮಹದಾಯಿ ಯೋಜನೆಯ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಸಂಪೂರ್ಣವಾಗಿ ಸಿದ್ಧ

ಮಹದಾಯಿ ಯೋಜನೆಯ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಸಂಪೂರ್ಣವಾಗಿ ಸಿದ್ಧವಾಗಿದೆ ಮತ್ತು ಪ್ರಸ್ತುತ ಕೇಂದ್ರ ವನ್ಯಜೀವಿ ಮಂಡಳಿಯಿಂದ ಅನುಮೋದನೆಗಾಗಿ ಕಾಯುತ್ತಿದೆ ಎಂದು ನವಲಗುಂದ ಶಾಸಕ ಎನ್.ಎಚ್. ಕೊನರೆಡ್ಡಿ ಹೇಳಿದರು ಮಂಗಳವಾರ ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಉತ್ತರ ಕರ್ನಾಟಕಕ್ಕೆ ಮಹಾದಾಯಿ ಯೋಜನೆ ಬಹಳ ಮುಖ್ಯವಾಗಿದೆ ಟೀಕಿಸುವ ಬದಲು ಅದನ್ನು ಕಾರ್ಯಗತಗೊಳಿಸಬೇಕು ಈ ಹಿಂದೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳನ್ನು ಸಂಪರ್ಕಿಸುತ್ತಿದ್ದ ದಿವಂಗತ ಅನಂತ್ ಕುಮಾರ್ ಅವರನ್ನು ಅವರು ನೆನಪಿಸಿಕೊಂಡರು. ಈಗ, ಕೇಂದ್ರ ಸಚಿವ …

Read More »

ಪತ್ರಕರ್ತ ಅಲ್ತಾಫ್ ಬಸರೀಕಟ್ಟಿ ಅವರಿಗೆ ರಾಷ್ಟ್ರೀಯ ಆದರ್ಶ ಪತ್ರಕರ್ತ ಗೌರವ ಪ್ರಶಸ್ತಿ

ಪತ್ರಕರ್ತ ಅಲ್ತಾಫ್ ಬಸರೀಕಟ್ಟಿ ಅವರಿಗೆ ರಾಷ್ಟ್ರೀಯ ಆದರ್ಶ ಪತ್ರಕರ್ತ ಗೌರವ ಪ್ರಶಸ್ತಿ ಖಾನಾಪೂರ ಇನ್ ನ್ಯೂಸ್ ಚಾನಲ್ ರಿಪೋರ್ಟರ್ ಅಲ್ತಾಫ್ ಎಂ ಬಸರೀಕಟ್ಟಿ ಅವರಿಗೆ ನಿಪ್ಪಾಣಿ ತಾಲೂಕಿನ ಬೇಡಕಿಹಾಳದಲ್ಲಿ ನಡೆದ ೫ನೇ ಗ್ರಾಮೀಣ ಮರಾಠಿ ಸಾಹಿತ್ಯ ಸಮ್ಮೇಳನದಲ್ಲಿ ರಾಷ್ಟ್ರೀಯ ಪ್ರೇರಣಾ ಗೌರವ ಪ್ರಶಸ್ತಿ 2025 ರ ಸಮ್ಮಾನ ಪತ್ರ, “ರಾಷ್ಟ್ರೀಯ ಆದರ್ಶ ಪತ್ರಕರ್ತ ಗೌರವ ಪ್ರಶಸ್ತಿ” ನೀಡಿ ಗೌರವಿಸಲಾಯಿತು ಇನ್ ನ್ಯೂಸ್ ಚಾನಲ್ ರಿಪೋರ್ಟರ್ ಆಗಿ ಸೇವೆ ಸಲ್ಲಿಸಿದ ಇವರ …

Read More »

ನಾನು ಆಕ್ಟರ್ ಮಾತ್ರ, ಡೈರೆಕ್ಟರ್ – ಪ್ರೋಡ್ಯೂಜರ್ ಬೇರೆಯವರು; ಸಚಿವ ಸತೀಶ ಜಾರಕಿಹೊಳಿ

ನಾನು ಆಕ್ಟರ್ ಮಾತ್ರ, ಡೈರೆಕ್ಟರ್ – ಪ್ರೋಡ್ಯೂಜರ್ ಬೇರೆಯವರು; ಸಚಿವ ಸತೀಶ ಜಾರಕಿಹೊಳಿ ಬೆಳಗಾವಿ ಜಿಲ್ಲೆಯ ಬಿ ಡಿ ಸಿ ಸಿ ಬ್ಯಾಂಕ್, ಹುಕ್ಕೇರಿ ತಾಲೂಕಿನ ವಿದ್ಯುತ್ ಸಹಕಾರಿ ಸಂಘ, ಹಿರಣ್ಯಕೇಶಿ ಸಹಕಾರಿ ಸಕ್ಜೆರೆ ಕಾರ್ಖಾನೆ ಒಳಗೊಂಡು ನಡೆಯುವ ಚುನಾವಣೆಗಳಲ್ಲಿ ನಾನು ನಟ ಮಾತ್ರ ನಿರ್ಮಾಪಕರು, ನಿರ್ದೆಶಕರು ಬೇರೆ ಇದ್ದಾರೆ ಎಂದು ಲೋಕೋಪಯೋಗಿ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೋಳಿ ಹೇಳಿದರು. ಅವರು ಇಂದು ಹುಕ್ಕೇರಿ ತಾಲೂಕಿನ …

Read More »

ಕರ್ನಾಟಕದಲ್ಲಿ ಈ ಎರಡು ದಿನ ಎಸ್ಕಾಂ ವ್ಯಾಪ್ತಿಯಲ್ಲಿ ಆನ್​ ಲೈನ್​ ಸೇವೆ ಸ್ಥಗಿತ

ಬೆಂಗಳೂರು, (ಜುಲೈ.22): ಮಾಹಿತಿ ತಂತ್ರಜ್ಞಾನ ಉನ್ನತೀಕರಣ ಹಿನ್ನೆಲೆಯಲ್ಲಿ ಕರ್ನಾಟಕದ ಐದೂ ಎಸ್ಕಾಂಗಳ (Escom) ವ್ಯಾಪ್ತಿಯಲ್ಲಿನ ಆನ್​ ಲೈನ್​ ಸೇವೆ ಇರುವುದಿಲ್ಲ. ಜುಲೈ 25ರ ರಾತ್ರಿ 8.30 ರಿಂದ ಜುಲೈ 27ರ ರಾತ್ರಿ 10 ರವರೆಗೆ ಬೆಸ್ಕಾಂ (bescom), ಹೆಸ್ಕಾಂ (hescom), ಜೆಸ್ಕಾಂ, ಮೆಸ್ಕಾಂ ಹಾಗೂ ಸೆಸ್ಕ್ ಗಳ ವ್ಯಾಪ್ತಿಗಳ ಆನ್​ ಲೈನ್ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಇದರಿಂದ ಆನ್​​ ಲೈನ್​​​ ಮೂಲಕ ವಿದ್ಯುತ್ ಬಿಲ್ ಪಾವತಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ ಮತ್ತು ಹೊಸ ಸಂಪರ್ಕ …

Read More »

ರಾಯಚೂರು: ಊಟ ಸೇವನೆ ಬಳಿಕ ಹೊಟ್ಟೆನೋವು, ಒಂದೇ ಕುಟುಂಬದ ಮೂವರು ಸಾವು

ರಾಯಚೂರು, ಜುಲೈ 22: ಊಟ ಸೇವಿಸಿದ ಬಳಿಕ ಹೊಟ್ಟೆನೋವು ಕಾಣಿಸಿಕೊಂಡು ಒಂದೇ ಕುಟುಂಬದ ಮೂವರು ಮೃತಪಟ್ಟ ದಾರುಣ ಘಟನೆ ರಾಯಚೂರು (Raichur) ಜಿಲ್ಲೆ ಸಿರವಾರ ತಾಲೂಕಿನ ಕೆ.ತಿಮ್ಮಾಪುರದಲ್ಲಿ (K Timmapur) ಸಂಭವಿಸಿದೆ. ಸ್ಥಳೀಯ ಆಸ್ಪತ್ರೆಯಲ್ಲಿ ರಮೇಶ್(35), ಪುತ್ರಿ ನಾಗಮ್ಮ(8) ಮೃತಪಟ್ಟರೆ, ರಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ದೀಪಾ(6) ಸಾವಿಗೀಡಾಗಿದ್ದಾಳೆ. ಸದ್ಯ ರಮೇಶ್ ಅವರ​ ಪತ್ನಿ ಪದ್ಮಾರನ್ನು ರಿಮ್ಸ್​ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ. ಮತ್ತಿಬ್ಬರು ಮಕ್ಕಳಾದ ಕೃಷ್ಣ, ಚೈತ್ರಾಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಕುಟುಂಬದವರೆಲ್ಲ ಸೋಮವಾರ ರಾತ್ರಿ …

Read More »

ಸಣ್ಣ ವ್ಯಾಪಾರಿಗಳಿಗೆ ಟ್ಯಾಕ್ಸ್ ನೋಟಿಸ್: ಕೇಂದ್ರ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದ ಜೋಶಿ

ಬೆಂಗಳೂರು, (ಜುಲೈ 22): ಕರ್ನಾಟಕದ ಕಾಂಗ್ರೆಸ್ ಸರ್ಕಾರ (Karnataka Congress Government)  ಸಣ್ಣಪುಟ್ಟ ವ್ಯಾಪಾರಿಗಳಿಗೆ (small traders) ತೆರಿಗೆ ಬಾಕಿ ನೋಟಿಸ್ ಕೊಟ್ಟು, ಇದೀಗ ರಾಜ್ಯ ಸರ್ಕಾರಕ್ಕೂ ಹಾಗೂ ಜಿ ಎಸ್ ಟಿ ನೋಟಿಸ್ ಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳುತ್ತಿರುವುದು ನಿಜಕ್ಕೂ ಹಾಸ್ಯಾಸ್ಪದ. GST ನಲ್ಲಿ ಕೇಂದ್ರ ಸರ್ಕಾರದ ಅಡಿಯಲ್ಲಿ CGST ಮತ್ತು ರಾಜ್ಯ ಸರ್ಕಾರಗಳ‌ ಅಡಿಯಲ್ಲಿ SGST ಎರಡು ಭಾಗಗಳಿದೆ. ಸಣ್ಣಪುಟ್ಟ ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದು ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ …

Read More »

ಅಣ್ಣನ ಮೇಲಿನ ಸೇಡಿಗೆ ಮಗನನ್ನೇ ಬಲಿ ಪಡೆದ: 3 ವರ್ಷದ ಬಾಲಕನ ಕತ್ತು ಕೊಯ್ದ ಚಿಕ್ಕಪ್ಪ

ಬಾಗಲಕೋಟೆ, (ಜುಲೈ 22): ಅಂಗನವಾಡಿಗೆ ಹೋಗಿದ್ದ 3 ವರ್ಷದ ಮಗುವಿಗೆ ಜಾಕು ಇರಿದು ಸ್ವಂತ ಚಿಕ್ಕಪ್ಪನೇ ಜೀವ ತೆಗೆದಿರುವ ಘಟನೆ ಬಾಗಲಕೋಟೆ (bagalkot) ಜಿಲ್ಲೆಯ ಇಳಕಲ್ ತಾಲೂಕಿನ ಬೆನಕನವಾಡಿ ಗ್ರಾಮದಲ್ಲಿ ನಡೆದಿದೆ. ಅಣ್ಣ ಬೈದು ಬುದ್ಧಿವಾದ ಹೇಳಿದ್ದಕ್ಕೆ ತಮ್ಮ ಈ ಕೃತ್ಯ ಎಸಗಿದ್ದಾನೆ. ಬೆನಕನವಾಡಿ ಗ್ರಾಮದ ಮಾರುತಿ ವಾಲಿಕಾರ ಎಂಬುವರ 3 ವರ್ಷದ ಮಧುಕುಮಾರನ ಜೀವವನ್ನ ಚಿಕ್ಕಪ್ಪ ಭೀಮಪ್ಪ ತೆಗೆದಿದ್ದಾನೆ. ಬಾಲಕ ಮುಂಜಾನೆ ಎಂದಿನಂತೆ ಗ್ರಾಮದ ಅಂಗನವಾಡಿಗೆ ಹೋಗಿದ್ದ. ಎಲ್ಲರೊಂದಿಗೆ ಅಂಗನವಾಡಿಯಲ್ಲಿ ಕುಳಿತ್ತಿದ್ದ ಬಾಲಕನನ್ನ …

Read More »