Breaking News

ರಾಜಕೀಯ

ನಕಲಿ ಪೊಲೀಸ್​ ಹಾವಳಿ: ಕೈಯಲ್ಲಿ ದೊಣ್ಣೆ ಹಿಡಿದು ಪ್ರತಿಭಟನೆಗೆ ನಿಂತ ವಿದ್ಯಾರ್ಥಿಗಳು

ಧಾರವಾಡ: ಪೊಲೀಸರ ಹೆಸರಿನಲ್ಲಿ ಅಪರಿಚಿತ ವ್ಯಕ್ತಿಗಳು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿ ಎಸ್ಕೇಪ್​ ಆದ ಘಟನೆ ನಗರದ ವಿವೇಕಾನಂದ ವೃತ್ತದ ಬಳಿ ನಡೆದಿದೆ.   ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿ ಓಡಿ ಹೋಗಿರೋ ಅಪರಿಚಿತ ವ್ಯಕ್ತಿಗಳ ವಿರುದ್ಧ ಪಿಜಿ ವಿದ್ಯಾರ್ಥಿಗಳ ಆಕ್ರೋಶ ವ್ಯಕ್ತಪಡಿಸಿದ್ದು ಕೈಯಲ್ಲಿ ದೊಣ್ಣೆ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರ ಜೊತೆ ವಿದ್ಯಾರ್ಥಿಗಳು ಹಾಗೂ ಸ್ಥಳಿಯರ ನಡುವೆ ಮಾತಿನ …

Read More »

ಹಸುಗೂಸಿನ ತಾಯನ್ನು ಕಸಿದ ಕರೊನಾ: 5 ತಿಂಗಳ ಬಾಣಂತಿ ಸಾವು

ಶಿವಮೊಗ್ಗ: ಕರೊನಾ ಸೋಂಕಿಗೆ ಒಳಗಾಗಿದ್ದ ಐದು ತಿಂಗಳ ಬಾಣಂತಿಯೊಬ್ಬರು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹಸುಗೂಸಿನಿಂದ ದೂರವಾಗಿದ್ದು ಬರೋಬ್ಬರಿ ಮೂರು ತಿಂಗಳು ಜೀವಕ್ಕಾಗಿ ಹೋರಾಡಿದ ಭದ್ರಾವತಿ ತಾಲೂಕಿನ ದಿಗ್ಗೇನಹಳ್ಳಿಯ ಸುಪ್ರಿಯಾ(35) ಮೃತರು. ಸುಪ್ರಿಯಾ ಅವರಿಗೆ ಕರೊನಾ ಸೋಂಕು ದೃಢಪಟ್ಟಿದ್ದ ಕಾರಣಕ್ಕೆ ಜೂನ್ 19 ರಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಸತತ ಮೂರು ತಿಂಗಳು ಆಸ್ಪತ್ರೆಯಲ್ಲೇ ಇಟ್ಟುಕೊಂಡು ಚಿಕಿತ್ಸೆ ನೀಡಲಾಗಿತ್ತು. ಕೆಲ ದಿನಗಳ ಹಿಂದೆ ಸೋಂಕು ಉಲ್ಬಣಗೊಂಡಾಗ ಅವರನ್ನು ಐಸಿಯುಗೆ …

Read More »

3 ತಿಂಗಳಲ್ಲಿ ಎಲ್ಲರ ಮನೆಗೆ ಆಯುಷ್ಮಾನ್ ಆರೋಗ್ಯ ಕಾರ್ಡ್ : ಸಚಿವ ಸುಧಾಕರ್

ಬೆಂಗಳೂರು,ಸೆ.18- ಮುಂದಿನ ಮೂರು ತಿಂಗಳಲ್ಲಿ ಎಲ್ಲರ ಮನೆಗೆ ಆಯುಷ್ಮಾನ್ ಆರೋಗ್ಯ ಕಾರ್ಡ್ ತಲುಪಿಸುವ ಅಭಿಯಾನವನ್ನು ಹಮ್ಮಿಕೊಳ್ಳಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಒಂದೂವರೆ ಕೋಟಿ ಜನರಿಗೆ ಆಯುಷ್ಮಾನ್ ಆರೋಗ್ಯ ಕಾರ್ಡ್ ನೀಡಲಾಗಿದ್ದು, ಆರೋಗ್ಯ ಇಲಾಖೆ ಮೂರು ತಿಂಗಳಲ್ಲಿ ಪ್ರತಿ ಕುಟುಂಬಕ್ಕೂ ಆರೋಗ್ಯ ಕಾರ್ಡ್ ನೀಡುವ ಗುರಿ ಹಮ್ಮಿಕೊಂಡಿದ್ದು, ಇನ್ನು ಎರಡೂವರೆ ಕೋಟಿ ಕಾರ್ಡ್‍ಗಳನ್ನು ನೀಡಲಾಗುವುದು ಎಂದರು. ಪ್ರಧಾನಿ ನರೇಂದ್ರಮೋದಿ …

Read More »

ಉಸಿರಾಟದ ತೊಂದರೆಯಿಂದ ಚಿಕ್ಕಮಕ್ಕಳು ಸಾವನ್ನಪ್ಪುತ್ತಿದ್ದಾರೆ. ಹೀಗಾಗಿ ಕೆಮ್ಮು, ನೆಗಡಿ, ಕಫ ಮತ್ತು ಜ್ವರ ಬಂದರೆ ನಿಷ್ಕಾಳಜಿ ತೋರದಂತೆ ವೈದ್ಯರ ಸೂಚನೆ

ಹುಬ್ಬಳ್ಳಿ: ಕೊವಿಡ್ ಬಳಿಕ ಮಕ್ಕಳನ್ನು ನ್ಯುಮೋನಿಯಾ ಕಾಡುತ್ತಿದ್ದು, ಒಂದೇ ವಾರದಲ್ಲಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ 7 ಮಕ್ಕಳು ಸಾವನ್ನಪ್ಪಿದ್ದಾರೆ. ನ್ಯಮೋನಿಯಾದಿಂದ ಬಳಲುತ್ತಿರುವ 163 ಮಕ್ಕಳಿಗೆ ಕಿಮ್ಸ್ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಿಲಾಗುತ್ತಿದೆ. ಸದ್ಯ ಕಿಮ್ಸ್‌ನ ಮಕ್ಕಳ ವಿಭಾಗದ ಬೆಡ್‌ಗಳು ಸಂಪೂರ್ಣ ಭರ್ತಿಯಾಗಿದ್ದು, 1 ವರ್ಷದ 95 ಮಕ್ಕಳಿಗೆ ಕಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ 23 ಮಕ್ಕಳಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಸಿರಾಟದ ತೊಂದರೆಯಿಂದ ಚಿಕ್ಕಮಕ್ಕಳು ಸಾವನ್ನಪ್ಪುತ್ತಿದ್ದಾರೆ. ಹೀಗಾಗಿ ಕೆಮ್ಮು, ನೆಗಡಿ, …

Read More »

ಮಕ್ಕಳಲ್ಲಿ ವೈರಲ್ ಸೋಂಕು: ಸಿಲಿಕಾನ್ ಸಿಟಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಹಾಗೂ ಐಸಿಯೂ ಬೆಡ್ ಭರ್ತಿ

ಬೆಂಗಳೂರು: ಕೊರೊನಾ ಮೂರನೇ ಅಲೆಗೂ ಮುನ್ನವೇ ಸಿಲಿಕಾನ್ ಸಿಟಿಯ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಹಾಗೂ ಐಸಿಯೂ ಬೆಡ್ಗಳು ಭರ್ತಿಯಾಗಿದ್ದು, ಕಳೆದ ಒಂದು ವಾರದಿಂದ ಮಕ್ಕಳಲ್ಲಿ ವೈರಲ್ ಸೋಂಕು ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಸರ್ಕಾರಿ ಆಸ್ಪತ್ರೆಯ ಬೆಡ್ಗಳು ಬಹುತೇಕ ಭರ್ತಿಯಾಗಿದೆ. ಕೆಸಿ ಜನರಲ್, ವಿಕ್ಟೋರಿಯಾ, ಬೌರಿಂಗ್ ವಾಣಿ ವಿಲಾಸ್ ಸೇರದಂತೆ ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿದ್ದಾರೆ. ಇನ್ನು ಕೆಸಿ ಜನರಲ್ ಆಸ್ಪತ್ರೆಗೆ ನಿತ್ಯ 140-150 ಮಕ್ಕಳು ದಾಖಲಾಗುತ್ತಿದ್ದು, ಮಕ್ಕಳಿಗಾಗಿ 36 …

Read More »

2 ವರ್ಷದ ಕಂದಮ್ಮನೊಂದಿಗೆ ಮನೆಬಿಟ್ಟಿದ್ದ ತಾಯಿ.. ಇಬ್ಬರ ಮೃತದೇಹ ಬಾವಿಯಲ್ಲಿ ಪತ್ತೆ

ಚಿಕ್ಕೋಡಿ: ತಾಯಿ ಹಾಗೂ ಮಗುವಿನ ಮೃತ ದೇಹ ತೆರೆದ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ದೇವಾಪೂರಹಟ್ಟಿ ಗ್ರಾಮದಲ್ಲಿ ನಡೆದಿದೆ. ದೇವಾಪೂರಹಟ್ಟಿ ಗ್ರಾಮದ ರುಕ್ಮವ್ವ ಹಳಿಂಗ (38) ಹಾಗೂ ಮಗಳು ಅನ್ವಿತಾ ಹಳಿಂಗ (2) ಸಾವನ್ನಪ್ಪಿದರ ದುರ್ದೈವಿಗಳಾಗಿದ್ದು, ದೇವನಕಟ್ಟಿ ಗ್ರಾಮದ ಬಾವಿಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಗುರುವಾರ ಸಾಯಂಕಾಲ ಮನೆಯಿಂದ ಮಹಿಳೆ ರುಕ್ಮವ್ವ ತನ್ನ ಎರಡು ವರ್ಷದ ಮಗಳೊಂದಿಗೆ ಹೊರ ಬಂದಿದ್ದರು ಎನ್ನಲಾಗಿದೆ. ಆದರೆ ತಾಯಿ, ಮಗುವಿನ ಸಾವಿನ …

Read More »

ದರ್ಶನ್ ಮಾಲೀಕತ್ವದ ಫಾರ್ಮ್ ಹೌಸ್‌ನಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಮಾಡಿರುವ ಘಟನೆ ತಡವಾಗಿ ಬೆಳಕಿಗೆ

ಮೈಸೂರು: ನಟ ದರ್ಶನ್ ಮಾಲೀಕತ್ವದ ಫಾರ್ಮ್ ಹೌಸ್‌ನಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತಿ. ನರಸೀಪುರ ರಸ್ತೆಯಲ್ಲಿರುವ ಫಾರ್ಮ್ ಹೌಸ್‌ನಲ್ಲಿ ಕೆಲಸ‌ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಕುಟುಂಬವೊಂದರ ಅಪ್ರಾಪ್ತೆ ಮೇಲೆ ಸೋಮವಾರ ರಾತ್ರಿ ಅದೇ ತೋಟದಲ್ಲಿ ಕುದುರೆಗೆ ಲಾಳ ಹೊಡೆಯುವ ಕೆಲಸ ಮಾಡಿಕೊಂಡಿದ್ದ ಕಾರ್ಮಿಕ ಅತ್ಯಾಚಾರ ಎಸಗಿದ್ದಾನೆ. ಘಟನೆ ಬಗ್ಗೆ ಬಾಲಕಿ ಪೋಷಕರಿಗೆ ಮೂರು ದಿನಗಳ ಬಳಿಕ ತಿಳಿಸಿದ್ದು, ಪೋಷಕರಿಗೆ ವಿಷಯ ತಿಳಿದ ಕೂಡಲೇ ಸ್ಥಳೀಯ …

Read More »

ಆರ್ಡರ್ ಮಾಡಿದ ಬರ್ಗರ್ ನಲ್ಲಿ ಸಿಕ್ತು ಮನುಷ್ಯನ ಕೈ ಬೆರಳು

ಆನ್ ಲೈನ್ ಶಾಪಿಂಗ್ ಮಾಡುವಾಗ ಒಮ್ಮೊಮ್ಮೆ ಮೋಸಗಳು ಆಗುತ್ತದೆ. ನಾವು ಆರ್ಡರ್ ಮಾಡಿದ್ದೇ ಒಂದು..ಬಂದಿರೋದೇ ಒಂದು ಆಗಿರುತ್ತದೆ. ಆದರೆ ಈ ಸುದ್ದಿ ಕೇಳಿದ್ರೆ ಮಾತ್ರ ನೀವು ಬೆಚ್ಚಿ ಬೀಳ್ತೀರಾ..! ಹೌದು, ಮಹಿಳೆಯೊಬ್ಬರು ಆರ್ಡರ್ ಮಾಡಿದ ಬರ್ಗರ್​ನಲ್ಲಿ ಮನುಷ್ಯನ ಬೆರಳು ಸಿಕ್ಕು ಬೆಚ್ಚಿಬೀಳಿಸಿದ ಘಟನೆ ಬೊಲಿವಿಯಾದಲ್ಲಿ ವರದಿಯಾಗಿದೆ. ಮಹಿಳೆಯೊಬ್ಬರು ರೆಸ್ಟೋರೆಂಟ್ ನಿಂದ ಬರ್ಗರ್ ಆರ್ಡರ್ ಮಾಡಿದ್ದಾರೆ, ಆದರೆ ಮನೆಗೆ ಬಂದ ಪಾರ್ಸೆಲ್ ತೆಗೆದುನೋಡಿದಾಗ ಮಹಿಳೆ ಹೌ ಹಾರಿದ್ದಾಳೆ. ಆರ್ಡರ್ ಮಾಡಿದ ಬರ್ಗರ್ …

Read More »

ನಮ್ಮ ರಕ್ಷಣೆಗಾಗಿ ತಲ್ವಾರ್, ಕತ್ತಿಯಂತಹ ಶಸ್ತ್ರಗಳನ್ನು ಇಡಬೇಕು : ಪ್ರಚೋದನಕಾರಿ ಹೇಳಿಕೆ ಪ್ರಮೋದ್ ಮುತಾಲಿಕ್

ಧಾರವಾಡ: ಮತ್ತೆ ಪ್ರಚೋದನಕಾರಿ ಹೇಳಿಕೆ ನೀಡುವ ಮೂಲಕ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಿವಾದಕ್ಕೆ ಕಾರಣರಾಗಿದ್ದಾರೆ. ಎಲ್ಲಾ ದೇವರುಗಳ ಕೈಯಲ್ಲಿ ಶಸ್ತ್ರಗಳಿವೆ, ದೇವರಿಗೆ ನಮಸ್ಕರಿಸುವಾಗ ಪ್ರತಿದಿನ ಶಸ್ತ್ರಾಸ್ತ್ರಗಳನ್ನು ನೋಡುತ್ತೇವೆ. ಆದರೆ ನಮ್ಮ ಮನೆಗಳಲ್ಲಿ ಈಗ ಒಂದೇ ಒಂದು ಶಸ್ತ್ರಗಳು ಇಲ್ಲದಂತಾಗಿದೆ. ನಮ್ಮ ರಕ್ಷಣೆಗಾಗಿ ತಲ್ವಾರ್, ಕತ್ತಿಯಂತಹ ಶಸ್ತ್ರಗಳನ್ನು ಇಡಬೇಕು ಎಂದು ಹೆಳಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಮುತಾಲಿಕ್ ಹೇಳಿಕೆ ಇದೀಗ ಭಾರಿ ವೈರಲ್ ಆಗಿದ್ದು ವಿವಾದಕ್ಕೆ ಕಾರಣವಾಗಿದೆ. ನಾಳೆ ಬೀದಿ ಕಾಳಗಗಳು ನಡೆಯುತ್ತೆ. …

Read More »

ದೇವಾಲಯ ತೆರವು ಮುಂದುವರಿಸಿದರೆ ಅಧಿಕಾರಿಗಳ ಹೆಣ ಎತ್ತುತ್ತೇವೆ: ಸತೀಶ್‌ ಪೂಜಾರಿ

ದಾವಣಗೆರೆ: ‘ರಾಜ್ಯದಲ್ಲಿ ದೇವಾಲಯಗಳ ತೆರವು ಕಾರ್ಯಾಚರಣೆ ಮುಂದುವರಿಸಿದರೆ ನಡುಬೀದಿಯಲ್ಲಿ ಜಿಲ್ಲಾಧಿಕಾರಿ, ತಹಶೀಲ್ದಾರ್ ಸೇರಿ ಅಧಿಕಾರಿಗಳ ಹೆಣ ಎತ್ತುತ್ತೇವೆ’ ಎಂದು ಹಿಂದೂ ಜಾಗರಣ ವೇದಿಕೆಯ ಶಿವಮೊಗ್ಗ ವಿಭಾಗದ ಪ್ರಧಾನ ಕಾರ್ಯದರ್ಶಿ ಸತೀಶ್‌ ಪೂಜಾರಿ ಹೇಳಿದ್ದಾರೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹುಚ್ಚಗಳ್ಳಿ ಮಹಾದೇವಮ್ಮ ಭೈರವೇಶ್ವರ ಮಂದಿರವನ್ನು ತೆರವುಗೊಳಿಸಿರುವುದನ್ನು ಖಂಡಿಸಿ ನಗರದಲ್ಲಿ ಗುರುವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಅವರ ಈ ಹೇಳಿಕೆಯ ವಿಡಿಯೊ ಶುಕ್ರವಾರ ಎಲ್ಲೆಡೆ ಹರಿದಾಡಿದೆ. ಈ ಕುರಿತು  ಪ್ರತಿಕ್ರಿಯಿಸದ ಸತೀಶ್‌ …

Read More »