ಕಳೆದ 8 ವರ್ಷಗಳಿಂದ ಪ್ರತಿನಿತ್ಯ ಜಗಳವಾಗುತ್ತಿತ್ತು. ಅಲ್ಲದೆ ಅನ್ನಪೂರ್ಣಗೆ ಅಕ್ರಮ ಸಂಬಂಧ ಇತ್ತು, ಇದೇ ಕಾರಣಕ್ಕೆ ಕೊಲೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ತುಮಕೂರು: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ, ಪತ್ನಿಯೇ ಪತಿಯನ್ನು ಹತ್ಯೆ ಮಾಡಿದ ಘಟನೆ ತುಮಕೂರಿನ ಬಡ್ಡಿಹಳ್ಳಿಯಲ್ಲಿ ನಡೆದಿದೆ. ಪತಿ ನಾರಾಯಣ(52) ಹತ್ಯೆಗೈದ ಪತ್ನಿ ಅನ್ನಪೂರ್ಣ, ಶವವನ್ನು ಚರಂಡಿಗೆ ಎಸೆದಿದ್ದಾಳೆ. ಸದ್ಯ ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೆಲಮಂಗಲ ಬಳಿಯ ಟೋಲ್ನಲ್ಲಿ ಪತಿ …
Read More »ಜೋಕುಮಾರ ತರ್ತಾನಾ ಮಳೆ..! ಮಳೆ-ಬೆಳೆಯ ಪ್ರತೀಕ ಜೋಕುಮಾರನ ಹಬ್ಬ
ಬನಹಟ್ಟಿ : ನಮ್ಮದು ಸಂಪ್ರದಾಯ ಸಂಸ್ಕೃತಿಯ ನೆಲೆಬೀಡು, ಗ್ರಾಮೀಣ ಪ್ರದೇಶದಲ್ಲಿ ಹಿಂದಿನಿಂದ ಆಚರಿಸುತ್ತಾ ಬಂದ ಕೆಲ ಧಾರ್ಮಿಕ ಆಚರಣೆಗಳು ಇಂದಿಗೂ ನಮ್ಮಲ್ಲಿ ಪ್ರಸ್ತುತ ಎನ್ನುವುದಕ್ಕೆ ಉತ್ತರ ಕರ್ನಾಟಕದ ಜೋಕುಮಾರನ ಹಬ್ಬ ಕೂಡಾ ಒಂದು. ಹಿಂದಿನಿಂದ ತಮ್ಮ ಹಿರಿಯರು ಆಚರಿಸುತ್ತಾ ಬಂದ ಈ ಜೋಕುಮಾರನ ಹಬ್ಬ ಉತ್ತರ ಕರ್ನಾಟಕದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಚಾಲ್ತಿಯಲ್ಲಿದೆ. ಭಾದ್ರಪದ ಮಾಸದ ಅಷ್ಟಮಿಯಂದು ಹುಟ್ಟುವ ಜೋಕುಮಾರ ಜೋ ಎಂಬ ಮುನಿಯ ಮಗನು, ಜೇಷ್ಠಾ ದೇವಿಯ ಮಗನೆಂದು …
Read More »ಮೈಸೂರಿಗೆ ಗಜ ಪಯಣ ಆರಂಭ
ಮೈಸೂರು, ಸೆ.13- ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನ ಸರಳ ಮತ್ತು ಸಾಂಪ್ರದಾಯಿಕವಾಗಿ ಆಚರಿಸಲು ನಿರ್ಧರಿಸಲಾಗಿದ್ದು ಈ ನಡುವೆ ಇಂದು ಗಜ ಪಯಣಕ್ಕೆ ಚಾಲನೆ ದೊರೆತಿದೆ. ಹುಣಸೂರಿನ ವೀರನಹೊಸಹಳ್ಳಿಯಲ್ಲಿ ಸರಳ ಗಜಪಯಣಕ್ಕೆ ಚಾಲನೆ ದೊರೆತಿದ್ದು ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 8 ಆನೆಗಳು ಕಾಡಿನಿಂದ ನಾಡಿನತ್ತ ಹೆಜ್ಜೆ ಹಾಕಿವೆ. ದಸರಾ ಗಜಪಡೆಯಲ್ಲಿ 5 ಗಂಡಾನೆ, 3 ಹೆಣ್ಣಾನೆ ಭಾಗಿಯಾಗಲಿವೆ. ಕೊರೊನಾ ನಡುವೆ ಸಾಂಪ್ರದಾಯಿಕ ದಸರಾ ಆಚರಣೆಗೆ ಇಂದು ಚಾಲನೆ ದೊರೆತಿದ್ದು, ಜಂಬೂಸವಾರಿ …
Read More »ಸದನದಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಮುಖ್ಯ ಸಚೇತಕರ ಪಕ್ಕದ ಆಸನ: ಸಿಎಂ ಬೊಮ್ಮಾಯಿ ಆಡಳಿತಕ್ಕೆ ಬಹುಪರಾಕ್!
ಬೆಂಗಳೂರು: ಕರ್ನಾಟಕದ 15ನೇ ವಿಧಾನಸಭೆಯ 10ನೇ ಅಧಿವೇಶನವು ಸೋಮವಾರದಿಂದ ಸೆಪ್ಟೆಂಬರ್ 24 ರವರೆಗೆ ನಡೆಯಲಿದ್ದು, ಈ ಸಂದರ್ಭದಲ್ಲಿ ಹಿಂದಿನ ನಿಕಟಪೂರ್ವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸದನದಲ್ಲಿ ಎಲ್ಲಿ ಕುಳಿತುಕೊಳ್ಳುತ್ತಾರೆ, ಅವರಿಗೆ ಯಾವ ಸ್ಥಾನ ನೀಡಲಾಗುತ್ತದೆ, ಶಾಸಕ ಸೀಟಿನಲ್ಲಿ ಅವರು ಕೂರಬೇಕಾಗುತ್ತದೆ ಎಂಬಿತ್ಯಾದಿ ಹಲವು ಚರ್ಚೆಗಳು ಕೇಳಿಬಂದಿದ್ದವು. ಈ ಬಗ್ಗೆ ಇಂದು ವಿಧಾನಸೌಧಕ್ಕೆ ಕಲಾಪಕ್ಕೆ ಆಗಮಿಸಿದ ಯಡಿಯೂರಪ್ಪನವರು ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉತ್ತಮ ಆಡಳಿತ ನಡೆಸುತ್ತಿದ್ದಾರೆ, ಅವರಿಗೆ …
Read More »ಗುಡಿಸಲು ಕಟ್ಟಲು ವೇಸ್ಟ್ ಬ್ಯಾನರ್ ಕೊಡಿ ಎಂದ ಅಜ್ಜ-ಅಜ್ಜಿಗೆ 2 ಲಕ್ಷದ ಮನೆಯನ್ನೇ ನಿರ್ಮಿಸಿಕೊಟ್ಟ ಕಾರ್ಪೊರೇಟರ್
ದಾವಣಗೆರೆ: ನಗರದ ಶೇಖರಪ್ಪ ಬಡಾವಣೆ ವಾರ್ಡ್ ನಂ 19 ರಲ್ಲಿ ಪಾಲಿಕೆ ಸದಸ್ಯರೋರ್ವರು ವಯಸ್ಸಾದ ಅಜ್ಜ ಅಜ್ಜಿಗೆ ಮನೆಯನ್ನ ಗಿಫ್ಟ್ ನೀಡಿದ ಮಾನವೀಯ ಘಟನೆ ನಡೆದಿದೆ. ಕಳೆದ 15 ವರ್ಷಗಳಿಂದ ಅಜ್ಜ ಅಜ್ಜಿ ಮನೆಯಿಲ್ಲದೇ ಪರದಾಡುತ್ತಿದ್ದರು. ಇದ್ದ ಮಕ್ಕಳು ತೀರಿಹೋದ ನಂತರ ಸೊಸೆಯಂದಿರು ಅಜ್ಜ ಅಜ್ಜಿಯನ್ನ ಮನೆಯಿಂದ ಹೊರಹಾಕಿದ್ದರು ಎನ್ನಲಾಗಿದೆ. ಹೀಗಾಗಿ ಕಾರ್ಪೊರೇಟರ್ ಬಳಿ ಗುಡಿಸಲು ನಿರ್ಮಿಸಲು ವೇಸ್ಟ್ ಬ್ಯಾನರ್ ಕೊಡಿ ಎಂದು ಅಜ್ಜಿ ಕೇಳಿದ್ದರಂತೆ. ಈ ವೇಳೆ ಅಜ್ಜಿ …
Read More »ಬೆದರಿದ ಎತ್ತುಗಳು..ಕೆಳಗೆ ಬಿದ್ದ ಕಾಂಗ್ರೆಸ್ ನಾಯಕರು
ಬೆಂಗಳೂರು, ಸೆ.13- ಇಂಧನ, ಅಡುಗೆ ಅನಿಲ ದರ ಏರಿಕೆ ಖಂಡಿಸಿ ಇಂದು ಕಾಂಗ್ರೆಸ್ ಪಕ್ಷದ ವತಿಯಿಂದ ವಿಧಾನಸೌಧಕ್ಕೆ ಎತ್ತಿನ ಗಾಡಿಗಳಲ್ಲಿ ಮುತ್ತಿಗೆ ಹಾಕಿ ಪ್ರತಿಭಟಿಸಿದ ವೇಳೆ ಎತ್ತುಗಳು ಬೆದರಿಕೊಂಡು ಓಡಾಡಿದ್ದರಿಂದ ಗಾಡಿಯಲ್ಲಿದ್ದ ಶಾಸಕರು ಕೆಳಗೆ ಬಿದ್ಧ ಘಟನೆ ನಡೆದಿದೆ. ಶಾಸಕ ವೆಂಕಟರಮಣಯ್ಯ ಮತ್ತು ಸಂಗಮೇಶ್ ಇದ್ದ ಎತ್ತಿನ ಗಾಡಿಯ ಎತ್ತುಗಳು ಹೆದರಿಕೊಂಡು ಅಡ್ಡಾದಿಡ್ಡಿ ಒಡಾಡಿದ್ದರಿಂದ ಆಯಾತಪ್ಪಿ ಅವರು ಕೆಳಗೆ ಬಿದ್ದಿದ್ದಾರೆ. ಇಂದು ಬೆಳಗ್ಗೆ ಬೆಲೆ ಏರಿಕೆ ವಿರೋಧಿಸಿ ಎತ್ತಿನ ಗಾಡಿಗಳಲ್ಲಿ …
Read More »ಹೇಯ ಕೃತ್ಯ; ಮಹಿಳೆಯನ್ನು ಸಂಪೂರ್ಣ ಬೆತ್ತಲಾಗಿಸಿ ವಿಡಿಯೋ ಮಾಡಿ ಕಾಮುಕರು ವಿಕೃತಿ
ಯಾದಗಿರಿ: ರಾಜ್ಯದಲ್ಲೊಂದು ಬಿಹಾರ್ ಮಾದರಿಯಲ್ಲಿ ಹೇಯ ಕೃತ್ಯವೊಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಹಿಳೆಯೊಬ್ಬರನ್ನು ಸಂಪೂರ್ಣ ಬೆತ್ತಲಾಗಿಸಿದ ಕಿಡಿಗೇಡಿಗಳ ಗುಂಪೊಂದು ವಿಡಿಯೋ ಮಾಡಿ ವಿಕೃತಿ ಮೆರೆದಿದೆ. ನಿಮ್ಮ ಕಾಲು ಮುಗಿತೀನಿ ಬಿಡಿ ಎಂದರೂ ಕ್ಯಾರೇ ಎನ್ನದೆ ಮಹಿಳೆಯನ್ನು ನಗ್ನಗೊಳಿಸಿ ಹಲ್ಲೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಂಗಾಗ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಯಾವುದೋ ಮಾರ್ಗ ಮಧ್ಯೆ ಖಾಲಿ ಜಮೀನೊಂದರಲ್ಲಿ ಕಗ್ಗತ್ತಲಲ್ಲಿ ಮಹಿಳೆಯನ್ನು ಥಳಿಸಿ ವಿಡಿಯೋ ಮಾಡಲಾಗಿದೆ. ಹಲ್ಲೆಕೋರರ ಗುಂಪೇ …
Read More »ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಸೆರೆಹಿಡಿದ ಸ್ಥಳೀಯರು
ಮಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ದಲ್ಲಿ ಬೆಂಗಳೂರು ಕಲಾಸಿಪಾಳ್ಯದ ಆರೀಫ್ ಪಾಷಾ(30) ಎಂಬಾತನನ್ನು ಇಲ್ಲಿನ ಕಲ್ಕಟ್ಟದಲ್ಲಿ ಭಾನುವಾರ ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಫೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ಬಂಧಿತನು ಕೂಲಿ ಕಾರ್ಮಿಕ ನಾಗಿದ್ದು, ತಿನಿಸು ನೀಡುವುದಾಗಿ ಹೇಳಿ ಪರಿಚಿತ ವ್ಯಕ್ತಿಯೊಬ್ಬರ ಮಗಳನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದನು. ಆತನ ಕೃತ್ಯಕ್ಕೆ ಹೆದರಿ ಬಾಲಕಿ ಓಡಿ ಬಂದಿದ್ದು, ಅದೇ ದಾರಿಯಲ್ಲಿ ಬರುತ್ತಿದ್ದ ಸಾಮಾಜಿಕ ಕಾರ್ಯಕರ್ತ ತಲಪಾಡಿಯ ಯಶು ಪಕಳ …
Read More »ನಿಯಂತ್ರಣ ತಪ್ಪಿ ಪಲ್ಟಿಯಾದ ಸಾರಿಗೆ ಸಂಸ್ಥೆಯ ಬಸ್- ಅದೃಷ್ಟವಶಾತ್ 30 ಕ್ಕೂ ಹೆಚ್ಚು ಪ್ರಯಾಣಿಕರು ಬಚಾವ್
ಗದಗ: ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾದ ಘಟನೆ ಜಿಲ್ಲೆಯ ನರಗುಂದ ತಾಲೂಕಿನ ಕಲಕೇರಿ ಗ್ರಾಮದ ಬಳಿ ನಡೆದಿದೆ. ಹುಬ್ಬಳ್ಳಿ-ಇಳಕಲ್ ಮಾರ್ಗದ ಸಾರಿಗೆ ಸಂಸ್ಥೆಯ ಬಸ್ ಮಾರ್ಗ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿದ್ದು, ಏಕಾಏಕಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಬಸ್ನಲ್ಲಿದ್ದ 30 ಕ್ಕೂ ಹೆಚ್ಚು ಪ್ರಯಾಣಿಕರು ಬಚಾವ್ ಆಗಿದ್ದಾರೆ. ಬಸ್ ಪಲ್ಟಿಯಾದ ಮೇಲೆ ಗ್ಲಾಸ್ ಒಡೆದು ಹೊರಗಡೆ ಬಂದ್ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಘಟನೆಯಲ್ಲಿ ಕೆಲ ಪ್ರಯಾಣಿಕರಿಗೆ ಸಣ್ಣ …
Read More »700 ಅಡಿಕೆ ಮರಗಳನ್ನು ಕಡಿದು ಹಾಕಿದ್ದ ಆರೋಪಿಯನ್ನ 5 ಗಂಟೆಗಳಲ್ಲಿ ಬಂಧಿಸಿದ ಪೊಲೀಸ್
ಹಾವೇರಿ: ತಾಲೂಕಿನ ಬಾಳಂಬೀಡ ಗ್ರಾಮದಲ್ಲಿ ಬರೋಬ್ಬರಿ 700 ಅಡಿಕೆ ಮರಗಳನ್ನು ಕತ್ತರಿಸಿದ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದ ಐದು ಗಂಟೆಯಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ರೈತ ಸಹೋದರರ ಮನೆಯಲ್ಲಿ ಬಾಡಿಗೆ ಇದ್ದವನೇ ಗಿಡಗಳನ್ನು ಕಡಿದಿರುವ ಆರೋಪಿ ಎನ್ನಲಾಗಿದೆ. ರಾಜಾಸಬ ಹೊಸಮನಿ ಎಂಬಾತನನ್ನು ಬಂಧಿಸಲಾಗಿದ್ದು ಈತ ತೋಟದಲ್ಲಿ ಬಂದ ಫಸಲಲ್ಲಿ ಶೇರ್ ಕೊಡುವಂತೆ ಕೇಳಿದ್ದನಂತೆ. ಈ ವಿಚಾರಕ್ಕೆ ರೈತರು ಹಾಗೂ ಆರೋಪಿ ನಡುವೆ ಜಗಳವಾಗಿತ್ತು.. ಈ ಹಿನ್ನಲೆ ರಾಜಾಸಾಬ ಹೊಸಮನಿಯನ್ನ ಮನೆ …
Read More »
Laxmi News 24×7