Breaking News

ರಾಜಕೀಯ

ಸುವರ್ಣ ವಿಧಾನಸೌಧಕ್ಕೆ ಕಚೇರಿ ಸ್ಥಳಾಂತರ: ಮುಖ್ಯಮಂತ್ರಿಗೆ ಅಭಿನಂದನೆ : ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ

ಬೆಳಗಾವಿ: ‘ಬೆಂಗಳೂರಿನ ವಿಧಾನಸೌಧ ಹಾಗೂ ವಿಕಾಸಸೌಧದಲ್ಲಿರುವ ಮಹತ್ವದ ಕಚೇರಿಗಳನ್ನು ಸ್ಥಳಾಂತರಿಸುವ ಮೂಲಕ ಸುವರ್ಣ ವಿಧಾನಸೌಧವನ್ನು ಆಡಳಿತದ ಶಕ್ತಿಕೇಂದ್ರವನ್ನಾಗಿ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಿಸಿರುವುದು ಗಡಿ ಭಾಗದ ಕನ್ನಡಿಗರಲ್ಲಿ ಅತೀವ ಸಂತಸ ಮತ್ತು ಸಮಾಧಾನ ಉಂಟು ಮಾಡಿದೆ’ ಎಂದು ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಹೇಳಿದೆ. ಈ ಬಗ್ಗೆ ಮುಖ್ಯಮಂತ್ರಿಗೆ ಭಾನುವಾರ ಅಭಿನಂದನಾ ಪತ್ರ ಬರೆದಿರುವ ಸಮಿತಿಯ ಅಧ್ಯಕ್ಷ ಅಶೋಕ ಚಂದರಗಿ, ‘ಅಧಿಕಾರ ವಹಿಸಿಕೊಂಡ ನಂತರ ಮೊದಲ …

Read More »

ಶಾಲೆಗಳಲ್ಲಿ ಹಬ್ಬದ ವಾತಾರಣ ನಿರ್ಮಾಣವಾಗಿದೆ -ಸಿಎಂ ಬೊಮ್ಮಾಯಿ ಹರ್ಷ

ಬೆಂಗಳೂರು: ಬರೋಬ್ಬರಿ ಒಂದೂವರೆ ವರ್ಷದ ಬಳಿಕ ಶಾಲೆಗಳು ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಸ್ವತಃ ಸಿಎಂ ಬಸವರಾಜ ಬೊಮ್ಮಾಯಿ ಅವರು ನಗರದ ಮಲ್ಲೇಶ್ವರಂ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಇವತ್ತು ಕೊರೊನಾದಿಂದ ಮಕ್ಕಳಿಗೆ ಸ್ವಾತಂತ್ರ್ಯ ಸಿಕ್ಕಿದೆ. ಸೋಂಕು ಇಳಿಕೆಯಾಗುತ್ತಿದಂತೆ ಶಾಲೆಗಳ ಸಂಖ್ಯೆಯನ್ನು ಹೆಚ್ಚು ಮಾಡ್ತೇವೆ. ಕೊರೊನಾ ಕಡಿಮೆಯಾದ ಕಾರಣದಿಂದ ಶಾಲೆ ಆರಂಭ ಮಾಡಲಿದೆ. ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ನೋಡಿ ಬಹಳ ಸಂತೋಷವಾಯಿತು. ಭೇಟಿ ವೇಳೆ …

Read More »

ಹಾನಗಲ್​​ ಉಪಚುನಾವಣೆ; ಪ್ರತಿಷ್ಠೆಯಾಗಿ ಸ್ವೀಕರಿಸಿದ ಬೊಮ್ಮಾಯಿ.. ಸೈಲೆಂಟ್​​ ಆದ್ರಾ ಕಾಂಗ್ರೆಸ್ಸಿಗರು?

ಹಾವೇರಿ: ಹಾವೇರಿ ಜಿಲ್ಲೆ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯನ್ನು ಸಿಎಂ ಬಸವರಾಜ್​​ ಬೊಮ್ಮಾಯಿ ಪ್ರತಿಷ್ಠೆ ಕಣವಾಗಿ ಸ್ವೀಕರಿಸದ್ದೇ ತಡ ಸ್ಥಳೀಯ ಕಾಂಗ್ರೆಸ್​ ನಾಯಕರು ಫುಲ್​​ ಸೈಲೆಂಟ್​​ ಆಗಿದ್ದಾರೆ. ಉಪಚುನಾವಣೆಯಲ್ಲಿ ಹಾನಗಲ್​​​ ಟಿಕೆಟ್​ಗಾಗಿ ಮಾಜಿ ಸಚಿವ ಮನೋಹರ ತಹಶೀಲ್ದಾರ್​​ ಮತ್ತು ಕಳೆದ ಬಾರಿಯ ಪರಾಜಿತ ಅಭ್ಯರ್ಥಿ ಶ್ರೀನಿವಾಸ ನಡುವೆ ಭಾರೀ ಪೈಪೋಟಿ ನಡೆದಿತ್ತು. ಇಬ್ಬರು ತಮ್ಮ ಬೆಂಬಲಿಗರನ್ನು ಕರೆದುಕೊಂಡು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​​ ಮನೆಗಳಿಗೆ …

Read More »

ಆಯುಧ ಸ್ವಚ್ಛ ಮಾಡುವ ವೇಳೆ ಆಕಸ್ಮಿಕವಾಗಿ ಗುಂಡು ಸಿಡಿದು ಪೇದೆ ಸಾವು!

ದಾವಣಗೆರೆ: ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೇದೆಯೊಬ್ಬರು ಆಕಸ್ಮಿಕವಾಗಿ ಗುಂಡು ಸಿಡಿದ ಪರಿಣಾಮ ಮೃತಪಟ್ಟ ಘಟನೆ ಸೋಮವಾರ ಸಂಭವಿಸಿದೆ. ಸಶಸ್ತ್ರ ಮೀಸಲು ಪಡೆಯ ಚೇತನ್ (28 ವ) ಸಾವನ್ನಪ್ಪಿದ ಪೊಲೀಸ್ ಕಾನ್ಸ್ ಸ್ಟೇಬಲ್. ದಾವಣಗೆರೆ ನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆವರಣದಲ್ಲಿ ಘಟನೆ ಸಂಭವಿಸಿದೆ. ಬೆಳಗಿನ ತರಬೇತಿ ಮುಗಿಸಿ ಆಯುಧ ಸ್ವಚ್ಛ ಮಾಡಿವ ವೇಳೆ ಈ ಅವಘಡ ನಡೆದಿದೆ. ತೀವ್ರವಾಗಿ ಗಾಯಗೊಂಡ ಚೇತನ್ ಅವರನ್ನು ಸಿಟಿ ಸೆಂಟ್ರಲ್ ಆಸ್ಪತ್ರೆ …

Read More »

ಹೊಸ ಡಿಜಿಟಲೀಕರಣ ನೀತಿ ಹಾಗೂ ಆರ್ ಆಯಂಡ್ ಡಿ ಪಾಲಿಸಿ ಘೋಷಣೆ ಮಾಡಿದ ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಹೊಸ ಡಿಜಿಟಲೀಕರಣ ನೀತಿಯ ಜತೆಗೆ ಸಂಶೋಧನೆ ಮತ್ತು ಅಭಿವೃದ್ಧಿ ಪಾಲಿಸಿಯನ್ನು ಜಾರಿಗೆ ತರಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ, 2021-22ನೇ ಸಾಲಿನ ಪ್ರವೇಶ ಪ್ರಕ್ರಿಯೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೊಸ ಡಿಜಿಟಲೈಸೇಷನ್ ಪಾಲಿಸಿ (ಹೊಸ ಡಿಜಿಟಲೀಕರಣ ನೀತಿ)ಯನ್ನು ಜಾರಿಗೆ ತರಲಿದ್ದೇವೆ. ಬ್ರಾಡ್ಬ್ಯಾಂಡ್ ಹಾಗೂ ಇಂಟರ್ ನೆಟ್ ವ್ಯವಸ್ಥೆಯನ್ನು ಗ್ರಾಹಕರ …

Read More »

ಕೋವಿಡ್ ನಿಂದ ರೈಲ್ವೆಗೆ 36000 ಕೋಟಿ ನಷ್ಟ

ಮುಂಬೈ: ಕೊರೊನಾದಿಂದಾಗಿ ಭಾರತೀಯ ರೈಲ್ವೆ ಇಲಾಖೆಗೆ 36,000 ಕೋಟಿ ರೂಪಾಯಿ ನಷ್ಟವಾಗಿರುವುದಾಗಿ ರೈಲ್ವೆ ಇಲಾಖೆ ರಾಜ್ಯ ಸಚಿವ ರಾವ್‌ ಸಾಹೇಬ್‌ ದಾನ್ವೆ ಹೇಳಿದ್ದಾರೆ. ಸರಕು ರೈಲುಗಳೇ ನಮಗೆ ನಿಜವಾದ ಆದಾಯ ತಂದು ಕೊಡುತ್ತಿರುವುದು ಎಂದು ಅವರು ತಿಳಿಸಿದ್ದಾರೆ. ಭಾನುವಾರದಂದು ಮಹಾರಾಷ್ಟ್ರದ ಜಲ್ನಾ ರೈಲು ನಿಲ್ದಾಣದ ಅಂಡರ್‌ ಪಾಸ್‌ ಗುದ್ದಲಿ ಪೂಜೆ ನೆರವೇರಿಸಿದ ಅವರು, “ಪ್ಯಾಸೆಂಜರ್‌ ರೈಲುಗಳಿಂದ ಯಾವಾಗಲೂ ಲಾಭ ಸಿಗುವುದಿಲ್ಲ. ಟಿಕೆಟ್‌ ದರ ಹೆಚ್ಚಿಸಿದರೆ ಜನರಿಗೆ ತೊಂದರೆಯೆಂದು ದರ ಹೆಚ್ಚಳ ಮಾಡಿಲ್ಲ. ಕೊರೊನಾದಿಂದಾಗಿ ಇಲಾಖೆಗೆ …

Read More »

ಮುಂದುವರಿದ ಕಾಬುಲ್ ಕಾರ್ಮೋಡ: ಏರ್​ಪೋರ್ಟ್​ನಲ್ಲಿ ಸಾವಿರಾರು ಜನರು ಅತಂತ್ರ; ಹಿಂಸೆ ನಡುವೆಯೂ ದೇಶ ತೊರೆಯಲು ಯತ್ನ

ಐಸಿಸ್ ದಾಳಿ ಆತಂಕ ತಾಲಿಬಾನಿಗಳ ಪೈಶಾಚಿಕ ಆಳ್ವಿಕೆಗೆ ಹೆದರಿ ಕಾಬುಲ್ ವಿಮಾನ ನಿಲ್ದಾಣಕ್ಕೆ ಜನಪ್ರವಾಹವೇ ಹರಿದುಬರುತ್ತಿದೆ. ಬಹುತೇಕರು ಅನ್ನಾಹಾರವಿಲ್ಲದೆ ನಿತ್ರಾಣರಾಗಿದ್ದಾರೆ. ಈ ನಡುವೆ, ಐಸಿಸ್ ಉಗ್ರರು ಏರ್​ಪೋರ್ಟ್ ಮೇಲೆ ದಾಳಿ ನಡೆಸಬಹುದು ಎಂಬ ಸುಳಿವು ಸಿಕ್ಕ ಕಾರಣ, ಅವರ ದಾರಿ ತಪ್ಪಿಸುವುದಕ್ಕಾಗಿ ವಿಮಾನದಲ್ಲಿರುವ ಹೀಟ್-ಸೀಕಿಂಗ್ ಟೆಕ್ನಾಲಜಿಯನ್ನು ಬಳಸಿ ಜ್ವಾಲೆ ಉಗುಳುವಂತೆ ಮಾಡಲಾಗಿದೆ. ಅಂತಾರಾಷ್ಟ್ರೀಯ ವಾಣಿಜ್ಯ ವಿಮಾನ ಹಾರಾಟ ಸ್ಥಗಿತವಾಗಿದ್ದರೂ, ಸೇನಾ ವಿಮಾನಗಳ ಮೂಲಕ ಸುರಕ್ಷಿತ ಸ್ಥಳಕ್ಕೆ ತೆರಳಲು ಧಾವಂತ ಎಲ್ಲರಲ್ಲೂ …

Read More »

ನಮ್ಮವರು ಪಾರು : ಅಫ್ಘಾನ್‌ನಿಂದ 392 ಮಂದಿ ವಾಪಸ್‌; ಕಾರ್ಯಾಚರಣೆಗೆ ಯಶ

ಕಾಬೂಲ್‌/ಹೊಸದಿಲ್ಲಿ/ಲಂಡನ್‌: ಅಫ್ಘಾನಿಸ್ಥಾನದಲ್ಲಿ ತಾಲಿಬಾನಿ ಕಪಿಮುಷ್ಠಿ ಯಿಂದ 392 ಮಂದಿ ಭಾರತೀಯರನ್ನು ಪಾರು ಮಾಡಿ ಸ್ವದೇಶಕ್ಕೆ ಕರೆತರುವಲ್ಲಿ ಭಾರತ ಸರಕಾರ ಯಶಸ್ವಿಯಾಗಿದೆ. ಈ ಪೈಕಿ ಏಳು ಮಂದಿ ಕನ್ನಡಿಗರಿದ್ದಾರೆ. ಮೂವರು ಕಾಬೂಲ್‌ ವಿಮಾನ ನಿಲ್ದಾಣದಲ್ಲಿ ಸ್ವದೇಶಾಗಮನಕ್ಕೆ ಸಿದ್ಧರಾಗಿದ್ದಾರೆ. ಅಫ್ಘಾನಿಸ್ಥಾನವು ತಾಲಿಬಾನ್‌ ವಶವಾಗಿ 8 ದಿನಗಳು ಕಳೆದಿವೆ. ರವಿವಾರದ ವರೆಗೆ ಒಟ್ಟು 392 ಮಂದಿ ಭಾರತಕ್ಕೆ ಆಗಮಿಸಿದ್ದಾರೆ. ಇವರಲ್ಲಿ 23 ಮಂದಿ ಅಫ್ಘಾನಿ ಹಿಂದೂಗಳು ಮತ್ತು ಸಿಕ್ಖರಿದ್ದಾರೆ. ರವಿವಾರ 257 ಮಂದಿ ಆಗಮಿಸಿದ್ದಾರೆ. 168 …

Read More »

ನಡುರಾತ್ರಿ ರಂಗೇರಿದ ಬೆಳಗಾವಿ ರಾಜಕೀಯ: ಪಾಲಿಕೆ ಚುನಾವಣೆಗೆ ಕೈ-ಕಮಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬೆಳಗಾವಿ: ಬೆಳಗಾವಿಯ ಮಹಾನಗರ ಪಾಲಿಕೆಯ ಚುನಾವಣೆಯ ಕಾವು ರಂಗೇರುತ್ತಿದೆ. ಸೆಪ್ಟೆಂಬರ್ 3 ರಂದು 58 ವಾರ್ಡ್‌ಗಳಿಗೆ ಚುನಾವಣೆ ನಡೆಯಲಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ನಡುರಾತ್ರಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿವೆ. ಬಿಜೆಪಿಯಿಂದ ರಾತ್ರಿ ತುರ್ತು ಸುದ್ದಿ ಗೋಷ್ಠಿ ನಡೆಸಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಶಾಸಕ ಅಭಯ್ ಪಾಟೀಲ್, ಸಂಸದೆ ಮಂಗಲಾ ಅಂಗಡಿ, ಶಾಸಕ ಅನಿಲ್ ಬೆನಕೆ ನೇತೃತ್ವದಲ್ಲಿ 21 ಜನರ ಅಭ್ಯರ್ಥಿಗಳ ಮೊದಲ ಹಂತದ ಮೊದಲ …

Read More »

ಬೆಳಗಾವಿ :ಇಸ್ಪೀಟ್ ಅಡ್ಡೆಗಳ ಮೇಲೆ ಪೊಲೀಸರು ದಾಳಿ 28 ಜನರ ಬಂಧನ ನಗದು ಜಪ್ತಿ: ಡಿಸಿಪಿ ವಿಕ್ರಂ ಅಮಟೆ

ಬೆಳಗಾವಿ–  ಮೂರು ಕಡೆಗಳಲ್ಲಿ ಇಸ್ಪೀಟ್ ಅಡ್ಡೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದು, 28 ಜನರನ್ನು ಬಂಧಿಸಿದ್ದಾರೆ. ಈ ಕುರಿತು ಡಿಸಿಪಿ ವಿಕ್ರಂ ಅಮಟೆ ಮಾಹಿತಿ ನೀಡಿದ್ದಾ್ರೆ. ದಿ. 21/08/2021 ರಂದು ರಾತ್ರಿ  ಅಂಬೇಡ್ಕರ ನಗರದ ಸಾವ೯ಜನಿಕ ಸ್ಥಳದಲ್ಲಿ ಕುಳಿತುಕೊಂಡು  ಇಸ್ಪೀಟ್ ಎಲೆಗಳ ಮೇಲೆ ಹಣವನ್ನು ಪಣಕ್ಕೆ ಕಟ್ಟಿ ಅಂದರ ಬಾಹರ್ ಅನ್ನುವ ಜುಗಾರ ಆಟ ಆಡುತ್ತಿರುವವರ ದಾಳಿ ಮಾಡಿದ್ದು, ದಾಳಿ ಕಾಲಕ್ಕೆ 10 ಜನ ಆರೋಪಿತರನ್ನು ವಶಕ್ಕೆ ಪಡೆಯಲಾಗಿದೆ.  ಅವರಿಂದ  …

Read More »