ಆನೇಕಲ್: ಕ್ಯಾಂಟರ್ ಹಾಗೂ ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಭೀಕರ ಅಪಘಾತ ಎರಡು ಜೀವಗಳನ್ನು ಬಲಿ ಪಡೆದಿದ್ದು, ಹೆಣ್ಣು ನೋಡುವ ಶಾಸ್ತ್ರಕ್ಕೆಂದು ಹೋದವರು ಹೆಣವಾಗಿ ಹೋದಂತಾಗಿದೆ. ಆನೇಕಲ್ ತಾಲೂಕಿನ ಚೂಡಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ. ಚಂದಾಪುರ ಸಮೀಪದ ಕಿತ್ತಗಾನಹಳ್ಳಿಯ ನಿವಾಸಿಗಳಾದ ಮುನಿರಾಜಾಚಾರಿ (55), ಅಕ್ಕಯಮ್ಮ (50) ಮೃತಪಟ್ಟ ದಂಪತಿ. ಹೆಣ್ಣು ನೋಡುವ ಶಾಸ್ತ್ರಕ್ಕೆಂದು ಇವರು ದ್ವಿಚಕ್ರವಾಹನದಲ್ಲಿ ಆನೇಕಲ್ ತಾಲೂಕಿನ ಚೂಡಹಳ್ಳಿಗೆ ಹೋಗಿದ್ದರು. ಚೂಡಗಾನಹಳ್ಳಿ ಬಳಿ ಎದುರುಗಡೆಯಿಂದ ಬರುತ್ತಿದ್ದ ತಮಿಳುನಾಡು …
Read More »‘2ಎ’ಗೆ ಪಂಚಮಸಾಲಿ ಸೇರ್ಪಡೆಗೆ ವಿರೋಧ
ತುಮಕೂರು: ಹಿಂದುಳಿದ ಪ್ರವರ್ಗ 2ಎಗೆ ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಸೇರ್ಪಡೆಮಾಡಿ, ಮೀಸಲಾತಿ ಕಲ್ಪಿಸಬಾರದು. ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷೆ (ಜಾತಿ ಗಣತಿ) ವರದಿಯನ್ನು ಜನರ ಮುಂದಿಡಬೇಕು ಎಂದು ಅತಿ ಹಿಂದುಳಿದ ವರ್ಗಗಳ ಸಮುದಾಯದ ಮುಖಂಡರು ಒಮ್ಮತದಿಂದ ಒತ್ತಾಯಿಸಿದರು. ಅತಿ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ನೇತೃತ್ವದಲ್ಲಿ ಶನಿವಾರ ನಡೆದ ಹಿಂದುಳಿದ ವರ್ಗಗಳ ಜಾಗೃತಿ ಸಭೆಯಲ್ಲಿ ಮಾತನಾಡಿದ ಮುಖಂಡರು, ‘ಸದಾಶಿವ ಆಯೋಗದ ವರದಿಯಲ್ಲಿ ಒಳಮೀಸಲಾತಿ ಪ್ರಸ್ತಾಪಿಸಿ ರುವ ಮಾದರಿಯಲ್ಲಿ ಹಿಂದುಳಿದ …
Read More »ಫೇಸ್ಬುಕ್ನಲ್ಲಿ ಪರಿಚಯವಾದ ಮಹಿಳೆಯಿಂದ ವಿಡಿಯೋ ಕಾಲ್ನಲ್ಲಿ ಅಸಭ್ಯ ವರ್ತನೆ, ಹಣಕ್ಕಾಗಿ ಬೆದರಿಕೆ: ಬಿಜೆಪಿ ಮುಖಂಡನಿಂದ ದೂರು
ಬೆಂಗಳೂರು: ಬಿಜೆಪಿ ಮುಖಂಡ, ಡಾ.ಅಂಬೇಡ್ಕರ್ ಫೌಂಡೇಷನ್ ನಿರ್ದೇಶಕ ಚಿ.ನಾ.ರಾಮು ತಮಗೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಒಡ್ಡಲಾಗಿದೆ ಎಂದು ದೂರು ದಾಖಲಿಸಿದ್ದಾರೆ. ಅಪರಿಚಿತ ವ್ಯಕ್ತಿ ಫೋನ್ ಮಾಡಿ ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ. ಫೇಸ್ಬುಕ್ ಮೆಸೆಂಜರ್ ಮೂಲಕ ಪರಿಚಯವಾಗಿದ್ದ ಮಹಿಳೆ ಮೊಬೈಲ್ ನಂಬರ್ ಪಡೆದು ವಿಡಿಯೋ ಕಾಲ್ ಮಾಡಿದ್ದಳು. ವಿಡಿಯೋ ಕಾಲ್ನಲ್ಲಿ ಅಸಭ್ಯವಾಗಿ ವರ್ತಿಸಿದ್ದಳು. ಬಳಿಕ ಅಪರಿಚಿತ ವ್ಯಕ್ತಿ ಕರೆ ಮಾಡಿ ಹಣ ನೀಡುವಂತೆ ಬೆದರಿಕೆ ಒಡ್ಡುತ್ತಿದ್ದಾನೆ. ‘ಯುವತಿಯೊಂದಿಗೆ ನಗ್ನವಾಗಿರುವ ವಿಡಿಯೋ …
Read More »ಮಾಜಿ ಸಚಿವ ವಿನಯ್ ಕುಲಕರ್ಣಿ ಮುಂದಿನ ನಡೆ ಏನು?
ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ (Vinay Kulkarni) ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ (Vinay Kulkarni) ಇದೀಗ ಜಾಮೀನು ಮೇಲೆ ಬಿಡುಗಡೆ ಆಗಿದ್ದಾರೆ. ಆದರೆ ಅವರು ಧಾರವಾಡ ಜಿಲ್ಲೆಗೆ ಹೋಗುವಂತಿಲ್ಲ ಅಂತಾ ಕೋರ್ಟ್ ಸೂಚನೆ ನೀಡಿದೆ. ಅಲ್ಲದೇ ಅವರು ಬೆಂಗಳೂರಿನಲ್ಲಿಯೇ ಇರಬೇಕು ಅನ್ನುವುದು ಕೂಡ ನ್ಯಾಯಾಲಯದ ಆದೇಶದಲ್ಲಿ ಸ್ಪಷ್ಟವಾಗಿದೆ. ಹಾಗಾದರೆ ಜೈಲಿನಿಂದ ಬಿಡುಗಡೆಯಾದ ವಿನಯ್ ಕುಲಕರ್ಣಿ ಎಲ್ಲಿಗೆ ಹೋದರು ಎನ್ನುವುದು ಇದೀಗ ಕುತೂಹಲ ಮೂಡಿಸಿದೆ. …
Read More »ಜಿಮ್ನಲ್ಲಿ ಒಟ್ಟಿಗೇ ವರ್ಕೌಟ್ ಮಾಡಿದ ರಶ್ಮಿಕಾ ಮಂದಣ್ಣ, ದೇವರಕೊಂಡ
ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಜೋಡಿ ಟಾಲಿವುಡ್ ಅಂಗಳದಲ್ಲಿ ಈಗಾಗಲೇ ಸಖತ್ ಫೇರ್ ಎನಿಸಿಕೊಂಡಿದೆ. ಗೀತಾ ಗೋವಿಂದಂ, ಡಿಯರ್ ಕಾಮ್ರೇಡ್ ಸಿನಿಮಾಗಳ ಬಳಿಕ ಈ ಜೋಡಿ ಸಿನಿ ಪ್ರೇಕ್ಷಕರ ಹೃದಯವನ್ನ ಗೆದ್ದಿತ್ತು. ಇನ್ನು ಇಬ್ಬರ ಸಂಬಂಧದ ಬಗ್ಗೆ ಅಂತೆ ಕಂತೆಗಳು ಆಗಾಗ ಕೇಳೆ ಬರುತ್ತಲೇ ಇರುತ್ತೆ. ಸದ್ಯ ಇಬ್ಬರು ಈಗ ಒಟ್ಟಿಗೆ ಸಿನಿಮಾ ಮಾಡದೆ ಇದ್ದರೂ ಕೂಡ ವಿಜಯ್, ರಶ್ಮಿಕಾ ಅಗಾಗ ಭೇಟಿಯಾಗಿ ಸದಾ ಸುದ್ದಿಯಾಗುತ್ತಾರೆ. ಇದೀಗ ರಶ್ಮಿಕಾ …
Read More »ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ.. ಗುರು ಸಾರ್ವಭೌಮರ ಸನ್ನಿಧಿಯಲ್ಲಿ ಭಕ್ತಿಯ ಝೇಂಕಾರ
ರಾಯಚೂರು: ಕಲಿಯುಗದ ಕಾಮಧೇನು.. ಬೇಡಿದ ವರ ಕರುಣಿಸೋ.. ತುಂಗಾ ತೀರದಿ ನೆಲೆಸಿದ ಪ್ರಭು, ಶ್ರೀ ರಾಘವೇಂದ್ರ ಸ್ವಾಮಿಗಳು. ಸದಾ ಭಕ್ತಿಯ ಝೇಂಕಾರ ತುಂಬಿ ತುಳುಕೋ ರಾಯರ ಸನ್ನಿಧಿಯಲ್ಲಿ ನಿನ್ನೆಯಿಂದ ಆರಾಧನಾ ಮಹೋತ್ಸವ ವಿಜೃಂಭಣೆಯಿಂದ ನಡೀತಾ ಇದೆ. ಸ್ವಾಮಿಯ ಭಕ್ತಗಣ ತುಂಗೆಯಲ್ಲಿ ಮಿಂದೆದ್ದು ರಾಯರ ದರ್ಶನ ಪಡೆದು ಪುನೀತರಾದ್ರು. ರಾಯರ ಆವರಣದಲ್ಲಿ ಬಣ್ಣ ಬಣ್ಣದ ದೀಪಗಳಿಂದ ಅಲಂಕಾರ.. ವಿವಿಧ ವಾದ್ಯಗಳಿಂದ ಗುರು ಸಾರ್ವಭೌಮರ ಸನ್ನಿಧಿಯಲ್ಲಿ ಭಕ್ತಿಯ ಝೇಂಕಾರ.. ತುಂಗಾ …
Read More »ತಾಲಿಬಾನ್ ಜೊತೆಗೆ ಪಾಕ್ ISI ಮುಖ್ಯಸ್ಥನ ಕಳ್ಳಾಟ.. ಅಫ್ಘಾನ್ ಅರಾಜಕತೆಯ ಹಿಂದೆ ಪಾಕ್ ಕೈವಾಡ?
ನವದೆಹಲಿ: ಅಫ್ಘಾನಿಸ್ತಾನದಲ್ಲಿ ಅರಾಜಕತೆ ಸೃಷ್ಟಿಯಾಗಿ ಇಂದಿಗೆ ಒಂದು ವಾರವಾಗ್ತಿದೆ. ಒಡಲಾಳದಲ್ಲಿ ಸಾಕಷ್ಟು ನೋವು, ಹತಾಶೆ, ವಿಕೃತಿಯ ಹುದುಗಿಸಿಕೊಂಡಿರುವ ಆ ದೇಶದಲ್ಲೀಗ ನರರಾಕ್ಷಸರದ್ದೇ ಪಾರುಪತ್ಯ.. ಆದ್ರೆ, ಇವೆಲ್ಲಾ ಅಮಾನವೀಯತೆಯ ಹಿಂದೆ ಪಾಕಿಸ್ತಾನದ ಐಎಸ್ಐ ಕೈವಾಡ ಇದೆ ಅಂತಾ ಹೇಳಲಾಗ್ತಿತ್ತು.. ಬಟ್ ಈಗ ಅದು ಕನ್ಫರ್ಮ್ ಆಗಿದೆ. ತಾಲಿಬಾನ್ ಉಗ್ರರ ಅಟ್ಟಹಾಸಕ್ಕೆ ಬೆಟ್ಟ ಗುಡ್ಡಗಳ ದೇಶ ಅಫ್ಘಾನಿಸ್ತಾನ ತತ್ತರಿಸಿ ಹೋಗ್ತಿದೆ. ಇವತ್ತಿಗೆ ಸರಿಯಾಗಿ ಒಂದು ವಾರದ ಹಿಂದೆ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿದ್ದ ಅಫ್ಘಾನಿಸ್ತಾನವನ್ನು …
Read More »ದೇಶದಾದ್ಯಂತ ಸಂಭ್ರಮದ ರಕ್ಷಾ ಬಂಧನ: ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಶುಭಾಶಯ
ನವದೆಹಲಿ: ದೇಶದಾದ್ಯಂತ ಜನರು ಅಣ್ಣ-ತಂಗಿಯರ ಪವಿತ್ರ ಹಬ್ಬವಾದ ರಕ್ಷಾ ಬಂಧನದ ಸಂಭ್ರಮದಲ್ಲಿದ್ದಾರೆ. ಆಗಸ್ಟ್ 22ರಂದು ಈ ಬಾರಿ ದೇಶದಲ್ಲಿ ರಾಖಿ ಹಬ್ಬ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಮ ಟ್ವಿಟರ್ ಟ್ವೀಟ್ ಮಾಡಿರುವ ಪ್ರದಾನಿ ಮೋದಿಯವರು, ರಕ್ಷಾ ಬಂಧನದ ಪವಿತ್ರ ಹಬ್ಬದಂದು ಎಲ್ಲಾ ದೇಶವಾಸಿಗಳಿಗೆ ಶುಭಾಶಯಗಳು ಎಂದು ಹೇಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಟ್ವೀೂಟ್ ಮಾಡಿ, …
Read More »ಇನ್ಮುಂದೆ ಡೆಬಿಟ್, ಕ್ರೆಡಿಟ್ ಕಾರ್ಡ್ಗಳ 16 ನಂಬರ್ಗಳನ್ನೂ ನೀವು ನೆನಪಿಡಬೇಕು.. ಯಾಕೆ ಗೊತ್ತಾ..?
ನವದೆಹಲಿ: ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ಗಳ 16 ಡಿಜಿಟ್ ನಂಬರ್ಗಳನ್ನು ಅಮೆಜಾನ್, ಫ್ಲಿಪ್ಕಾರ್ಟ್ ಮತ್ತು ನೆಟ್ಫ್ಲಿಕ್ಸ್ನಂಥ ಮರ್ಚಂಟ್ಗಳು ಸಂಗ್ರಹಿಸಿಟ್ಟುಕೊಳ್ಳುತ್ತವೆ. ಆದ್ರೆ ಇನ್ನುಮುಂದೆ ಹೀಗಾಗದಿರಲೆಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊಸದೊಂದು ಮಾರ್ಗಸೂಚಿ ಜಾರಿಗೆ ತರಲು ಮುಂದಾಗಿದೆ. ಈ ಮಾರ್ಗಸೂಚಿಯ ಪ್ರಕಾರ ಗ್ರಾಹಕರು ಡೆಬಿಟ್, ಕ್ರೆಡಿಟ್ ಕಾರ್ಡ್ಗಳ ಮೂಲಕ ಆನ್ಲೈನ್ ಶಾಪಿಂಗ್ ಮಾಡುವುದಿದ್ರೆ ಅವರು ಕಾರ್ಡ್ನ 16 ಡಿಜಿಟ್ ನಂಬರ್, ಎಕ್ಸ್ಪೈರಿ ಡೇಟ್ ಹಾಗೂ ಸಿವಿವಿ ನಂಬರ್ಗಳನ್ನೂ ನೆನಪಿನಲ್ಲಿಟ್ಟುಕೊಂಡೇ ವ್ಯವಹರಿಸಬೇಕಾಗುತ್ತದೆ. ಜನವರಿ …
Read More »ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ನಿಧನ
ಲಖನೌ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್(89) ಬಹುಅಂಗಾಂಗ ವೈಫಲ್ಯದಿಂದಾಗಿ ಇಂದು ನಿಧನರಾಗಿದ್ದಾರೆ. ಕಲ್ಯಾಣ್ ಸಿಂಗ್ ಅವರನ್ನ ಜುಲೈ 4 ರಂದು ಲಖನೌನ SGPGI ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕಲ್ಯಾಣ್ ಸಿಂಗ್ 2 ಬಾರಿ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು. 2014-2019ರ ಅವಧಿಯಲ್ಲಿ ರಾಜಸ್ಥಾನ್ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಇನ್ನು ಕಲ್ಯಾಣ್ ಸಿಂಗ್ ಸಾವಿಗೆ ಪ್ರಧಾನಿ ಮೋದಿ …
Read More »
Laxmi News 24×7