ಭಾನುವಾರ ರಾತ್ರಿಯಿಂದಲೇ ನಡೆದಿರುವ ಕರ್ನಾಟಕ ಬಿಜೆಪಿ ಸರ್ಕಾರದ ಸಂಪುಟ ರಚನೆಯ ಕಸರತ್ತು ಮಂಗಳವಾರ ತಡರಾತ್ರಿ ವೇಳೆಗೆ ಪೂರ್ಣಗೊಂಡಿದೆ. ಇವತ್ತೇ ಹೊಸ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುವುದು ಖಾತರಿಯಾಗಿದೆ. ಇಂದು ಮಧ್ಯಾಹ್ನದ ನಂತರ 29 ಜನ ಸಚಿವರು ಸಂಪುಟಕ್ಕೆ ಸೇರ್ಪಡೆ ಆಗಲಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು. ಕಿರಿಯ ಮಗ ಬಿ.ವೈ. ವಿಜಯೇಂದ್ರಗೆ ಉಪ ಮುಖ್ಯಮಂತ್ರಿ ಸ್ಥಾನ ಹಾಗೂ ಆಯಕಟ್ಟಿನ ಖಾತೆಯೇ ಬೇಕೆಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ …
Read More »ಖಾನಾಪೂರ ಪಟ್ಟಣದ ಮುಖ್ಯ ರಸ್ತೆಯನ್ನು ಸಿ ಸಿ ರಸ್ತೆ ಮಾಡಬೇಕೆಂದು ಹಾಗೂ ಸೇತುವೆಯ ಎತ್ತರವನ್ನು ಹೆಚ್ಚಿಸುವ ಸಲುವಾಗಿ ಖಾನಾಪೂರದ ಕಾರ್ಯಸಾಮ್ರಾಜ್ಞಿ ಶಾಸಕಿ ಡಾ ಅಂಜಲಿತಾಯಿ ಹೇಮಂತ್ ನಿಂಬಾಳ್ಕರ್ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರಾದ ಶ್ರೀ ನೀತಿನ್ ಗಡ್ಕರಿ ರವರನ್ನು ಭೇಟಿ
ಲೋಂಡಾ-ರಾಮನಗರ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ದುರಸ್ತಿ ಹಾಗೂ ಖಾನಾಪೂರ ಪಟ್ಟಣದ ಮುಖ್ಯ ರಸ್ತೆಯನ್ನು ಸಿ ಸಿ ರಸ್ತೆ ಮಾಡಬೇಕೆಂದು ಹಾಗೂ ಸೇತುವೆಯ ಎತ್ತರವನ್ನು ಹೆಚ್ಚಿಸುವ ಸಲುವಾಗಿ ಖಾನಾಪೂರದ ಕಾರ್ಯಸಾಮ್ರಾಜ್ಞಿ ಶಾಸಕಿ ಡಾ ಅಂಜಲಿತಾಯಿ ಹೇಮಂತ್ ನಿಂಬಾಳ್ಕರ್ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರಾದ ಶ್ರೀ ನೀತಿನ್ ಗಡ್ಕರಿ ರವರನ್ನು ಭೇಟಿಯಾದರು.* ಇಂದು ಸಂಜೆ 5 ಗಂಟೆಗೆ ದೆಹಲಿಯಲ್ಲಿ ಮಾನ್ಯ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ …
Read More »ಓಲಂಪಿಕ್ ನ ಪುರುಷರ ಹೈಜಂಪ್ ಫೈನಲ್ಲಿನ ದೃಶ್ಯ.
ಈ ದೃಶ್ಯ ಟೋಕಿಯೊ ೨೦೨೦ರ ಓಲಂಪಿಕ್ ನ ಪುರುಷರ ಹೈಜಂಪ್ ಫೈನಲ್ಲಿನ ದೃಶ್ಯ. ಪುರುಷರ ಹೈಜಂಪ್ ಫೈನಲ್ಲಿನಲ್ಲಿ ಇಟಲಿಯ ಜಿಯಾನ್ ಮಾರ್ಕೊ ತಂಬರಿ ಸ್ಪರ್ಧೆಯು ಕತಾರ್ ದೇಶದ ಮುತಾಜ್ ಈಸಾ ಬಾರ್ಶಿಮ್ ಜೊತೆಗಿತ್ತು. ಇಬ್ಬರು ಸ್ಪರ್ಧಿಗಳೂ 2.37 ಮೀಟರ್ ಎತ್ತರ ಹಾರಿದ್ದರಿಂದ ರಿಸಲ್ಟ್ ಸಮ ಬಂದಿತು. ನಂತರದಲ್ಲಿ ಓಲಂಪಿಕ್ ಅಧಿಕಾರಿಗಳು ಇಬ್ಬರೂ ಸ್ಪರ್ಧಿಗಳಿಗೆ ತಲಾ ಮೂರು ಅವಕಾಶಗಳನ್ನು ನೀಡಿದರು. ಮೂರು ಬಾರಿಯೂ ಇವರಿಬ್ಬರು 2.37 ಮೀ.ಗಿಂತ ಹೆಚ್ಚಿನ ಎತ್ತರ ಹಾರಲಿಲ್ಲ. …
Read More »ದೇಶದಲ್ಲಿ ಮತ್ತೆ ಕೊರೊನಾ ಭೀತಿ: ಆರ್-ನಾಟ್ ವ್ಯಾಲ್ಯೂ ಹೆಚ್ಚಿದರೆ ಏನಾಗುತ್ತೆ ಗೊತ್ತಾ?
ಇನ್ನು ಅದೆಷ್ಟು ಸಂಕಟ ನೀಡುತ್ತೋ ಈ ವೈರಸ್ ಗೊತ್ತಿಲ್ಲ. ಇದೆ ವರ್ಷ 2 ತಿಂಗಳ ಹಿಂದೆ, ದೇಶ ತಲ್ಲಣಿಸಿ ಹೋಗಿತ್ತು. ಕಾರಣ 2ನೇ ಅಲೆ. ಅದು ಮೊದಲ ಅಲೆ ರೀತಿ ಹೀಗೆ ಬಂದು ಹಾಗೆ ಹೋಗ್ಲೆ ಇಲ್ಲ. ಬಂದು ತನ್ನ ಬತ್ತಳಿಕೆಗೆ ಅದೆಷ್ಟೋ ಜನರನ್ನು ತನ್ನ ಜೊತೆ ಕರೆದೊಯ್ತು. ಈಗ ಮತ್ತೆ ಇದೆ ವೈರಸ್ ಹೊಸ ಸದ್ದು ಮಾಡ್ತಾ ಇದೆ. ಒಬ್ಬನಿಂದ ಎಷ್ಟು ಜನರಿಗೆ ಈ ವೈರಸ್ ಹರಡುತ್ತೆ ಅನ್ನೋ …
Read More »ಡಾ||ವಿಜಯಸಂಕೇಶ್ವರ ಅವರ ಸಾಧನೆ ಆಧರಿಸಿದ ಈ ಚಿತ್ರಕ್ಕೆ “ವಿಜಯಾನಂದ” ಎಂಬ ಶೀರ್ಷಿಕೆ.
ಹುಬ್ಬಳ್ಳಿ – ಆದರ್ಶ ಉದ್ಯಮಿ, ಪದ್ಮಶ್ರೀ ಪ್ರಶಸ್ತಿ ವಿಜೇತ ಡಾ. ವಿಜಯ ಸಂಕೇಶ್ವರ ಅವರ ಜಾವನ ಮತ್ತು ಸಾಧನೆ ಕುರಿತು ಚಲನಚಿತ್ರವೊಂದು ಸಿದ್ಧವಾಗುತ್ತಿದೆ. ಸಾರಿಗೆ ಕ್ಷೇತ್ರ, ಪತ್ರಿಕೋದ್ಯಮ, ಮಾಧ್ಯಮ ಹಾಗು ಹಲವಾರು ವಿಭಾಗಗಳಲ್ಲಿ ಪರಿಣತಿ ಹೊಂದಿರುವ ಪ್ರತಿಷ್ಠಿತ ವಿ ಆರ್ ಎಲ್ ಸಮೂಹ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಹಾಗು ಪ್ರೊಮೋಟರ್ ಆದ ಡಾ. ವಿಜಯ ಸಂಕೇಶ್ವರರ ಪುತ್ರರಾದ ಆನಂದ ಸಂಕೇಶ್ವರ ಅವರು ಇದೀಗ ವಿ ಆರ್ ಎಲ್ ಮೀಡಿಯಾ ಸಂಸ್ಥೆಯ …
Read More »ಬಿ.ಎಸ್.ಯಡಿಯೂರಪ್ಪ ಅವಧಿಯಲ್ಲಿ ನೇಮಕಗೊಂಡಿದ್ದ 10 ಹುದ್ದೆಗಳನ್ನು ರದ್ದುಪಡಿಸಲಾಗಿದೆ.
ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಅವಧಿಯಲ್ಲಿ ನೇಮಕಗೊಂಡಿದ್ದ 10 ಹುದ್ದೆಗಳನ್ನು ರದ್ದುಪಡಿಸಲಾಗಿದೆ. ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿಗಳಾಗಿದ್ದ ರೇಣುಕಾಚಾರ್ಯ, ಡಿ.ಎನ್.ಜೀವರಾಜ್, ಎನ್.ಆರ್.ಸಂತೋಷ್ ಅವರ ಹುದ್ದೆ ರದ್ದುಪಡಿಸಲಾಗಿದೆ. ಅಲ್ಲದೇ ಶಿಕ್ಷಣ ಸುಧಾರಣಾ ಸಲಹೆಗಾರ ಪ್ರೊ.ಎಂ.ಆರ್.ದೊರೆಸ್ವಾಮಿ, ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ್, ಯಡಿಯೂರಪ್ಪ ಕಾನೂನು ಸಲಹೆಗಾರರಾಗಿದ್ದ ಮೋಹನ್ ಲಿಂಬಿಕಾಯಿ, ಮಾಧ್ಯಮ ಸಲಹೆಗಾರ ಎನ್.ಭೃಂಗೇಶ್, ಸಿಎಂ ಇ-ಆಡಳಿತ ಸಲಹೆಗಾರ ಬೇಳೂರು ಸುದರ್ಶನ್, ಮಾಧ್ಯಮ ಸಂಯೋಜಕ ಜಿ.ಎಸ್.ಸುನೀಲ್, ಸಿಎಂ ನೀತಿ ನಿರೂಪಣೆ ಕಾರ್ಯತಂತ್ರ ಸಲಹೆಗಾರ ಪ್ರಶಾಂತ್ ಸೇರಿದಂತೆ …
Read More »ಸಂಭವನೀಯ ಪಟ್ಟಿಯಲ್ಲಿ ಬಾಲಚಂದ್ರ ಜಾರಕಿಹೊಳಿ,ಹೆಸರು…
ಬೆಂಗಳೂರು: ಮಧ್ಯಾಹ್ನ 2:15 ಕ್ಕೆ ರಾಜಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಂಭವನೀಯ ಪಟ್ಟಿಯಲ್ಲಿ ಬಾಲಚಂದ್ರ ಜಾರಕಿಹೊಳಿ, ಆರಗ ಜ್ಞಾನೇಂದ್ರ, ಸುನಿಲ್ ಕುಮಾರ್, ಎಸ್. ಅಂಗಾರ, ರಾಮದಾಸ್, ಮುರುಗೇಶ್ ನಿರಾಣಿ, ರಾಜುಗೌಡ, ಶಂಕರಗೌಡ ಪಾಟೀಲ್ ಮುನೇನಕೊಪ್ಪ, ಅಪ್ಪಚ್ಚುರಂಜನ್, ದತ್ತಾತ್ರೇಯ ಪಾಟೀಲ್, ಹಾಲಪ್ಪ ಆಚಾರ್, ಎಸ್.ಟಿ. ಸೋಮಶೇಖರ್, ಬೈರತಿ ಬಸವರಾಜ, ಬಿ.ಸಿ. ಪಾಟೀಲ್, ಸುಧಾಕರ್, ಆನಂದ ಸಿಂಗ್, ಕೆ.ಸಿ. ನಾರಾಯಣಗೌಡ, ಎಂಟಿಬಿ ನಾಗರಾಜ್, ಆರ್. ಶಂಕರ್, ಸಿ.ಪಿ. ಯೋಗೇಶ್ವರ್ …
Read More »ಮಕ್ಕಳಿಗೆ ದಿನಾಲೂ ಪಾಠ – ಕೊಪ್ಪಳದ ಯುವಕರ ಶಿಕ್ಷಣ ಪ್ರೇಮ
ಕೊಪ್ಪಳ: ಕೊರೊನಾದಿಂದಾಗಿ ಶಾಲೆಗಳು ಬಂದ್ ಆಗಿವೆ. ಹೀಗಾಗಿ ಓಣಿಯಲ್ಲಿ ಆಟವಾಡುತ್ತಾ ಕಾಲಹರಣ ಮಾಡುವ ಮಕ್ಕಳಿಗೆ ನಿರಂತರ ಶಿಕ್ಷಣ ನೀಡುತ್ತಿರುವ ಕೊಪ್ಪಳ ಯುವಕರಿಬ್ಬರು ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕಳೆದ ಎರಡು ವರ್ಷಗಳಿಂದ ಕೊರನಾದಿಂದಾಗಿ ಪ್ರಾಥಮಿಕ ಶಾಲೆಗಳಂತೂ ಆರಂಭವಾಗಿಲ್ಲ. ಪ್ರೌಢ ಶಾಲೆಗಳಲ್ಲಿ ಆನ್ ಲೈನ್ ಶಿಕ್ಷಣ ನೀಡುತ್ತಿದ್ದಾರೆ. ಈ ವರ್ಷ ಒಂದನೆಯ ತರಗತಿಯಿಂದಲೇ ಆನ್ಲೈನ್ ಶಿಕ್ಷಣ ನೀಡಲು ಮುಂದಾಗಿದ್ದಾರೆ. ಆದರೆ ಬಡವರ ಮಕ್ಕಳಿಗೆ ಆನ್ ಲೈನ್ ಶಿಕ್ಷಣ ಪಡೆಯಲು ಸಾಧ್ಯವಿಲ್ಲ, ಶಾಲೆಯಿಂದ ದೂರವಾದ ಮಕ್ಕಳು …
Read More »2021-22ನೇ ಸಾಲಿನ ಪದವಿ ಕೋರ್ಸ್ಗಳ ಪ್ರವೇಶ ಪ್ರಕ್ರಿಯೆಗೆ ತಾತ್ಕಾಲಿಕ ತಡೆ
ಬೆಂಗಳೂರು: ಪದವಿ ಕಾಲೇಜುಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ತಾತ್ಕಾಲಿಕವಾಗಿ ತಡೆ ನೀಡಲಾಗಿದೆ. 2021-22ನೇ ಸಾಲಿನ ಪದವಿ ಕೋರ್ಸ್ಗಳ ಪ್ರವೇಶ (UG College Admission) ಪ್ರಕ್ರಿಯೆಯನ್ನು ಮುಂದೂಡಿಕೆ ಮಾಡಲಾಗಿದೆ. ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಕಾಲೇಜುಗಳ ಪ್ರವೇಶ ಪ್ರಕ್ರಿಯೆ ಮುಂದೂಡಿಕೆ ಮಾಡಲಾಗಿದೆ. ಈ ಮುನ್ನ ಆಗಸ್ಟ್ 4 ರಿಂದ ಪ್ರವೇಶ ಪ್ರಾರಂಭಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ಪದವಿ ಕಾಲೇಜುಗಳಿಗೆ ನಿರ್ದೇಶನ ನೀಡಿತ್ತು. ಆದರೆ ಮುಂದಿನ ಪ್ರವೇಶ ಪ್ರಕ್ರಿಯೆ ದಿನಾಂಕವನ್ನು ಸದ್ಯದಲ್ಲೇ ಪ್ರಕಟ ಮಾಡಲಾಗುವುದು …
Read More »ಯಡಿಯೂರಪ್ಪನ್ನು ತೆಗೆದು ಹಾಕಿದ್ದು ವಯಸ್ಸಾಗಿದೆ ಎಂದಲ್ಲ; ಅಪ್ಪ-ಮಗ ಸೇರಿ ಲೂಟಿ ಮಾಡಿದ್ರು ಅಂತಾ ತೆಗೆದ್ರು: ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಬಿ ಎಸ್ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆದು ಹಾಕಿದ್ದಾರೆ. ವಯಸ್ಸು ಆಗಿದೆ ಎಂದು ತೆಗೆದಿಲ್ಲ. ಬದಲಾಗಿ ದುಡ್ಡು ಹೊಡೆದ್ರು ಅಂತಾ ತೆಗೆದಿದ್ದು. ಅಪ್ಪ-ಮಗ ಜೋಡಿ ಲೂಟಿ ಮಾಡಿದರು ಅಂತಾ ತೆಗೆದರು ಎಂದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಐಟಿ, ಇಡಿ ಇದೆ ಎಂದು ಹೇಳಿ ಯಡಿಯೂರಪ್ಪ ಅವರನ್ನು ಕೆಳಗಿಳಿಸಿದ್ದಾರೆ. ಆರ್ಟಿಜಿಎಸ್ ಮೂಲಕ ಯಡಿಯೂರಪ್ಪ ಹಣ ತೆಗೆದುಕೊಂಡಿದ್ದಾರೆ. ಯಡಿಯೂರಪ್ಪ ಮದುವೆ ಊಟ ಮಾಡೇ ಇಲ್ಲ. …
Read More »
Laxmi News 24×7