Breaking News

ರಾಜಕೀಯ

ಖಾನಾಪುರದ ಕೆಎಸ್​ಆರ್​ಪಿ ಮೈದಾನಕ್ಕೂ ನೀರು; ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಮನೆ ಸುತ್ತ ಜಲಾವೃತ

ಬೆಳಗಾವಿ: ಮಲಪ್ರಭಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ಖಾನಾಪುರ ಪಟ್ಟಣಕ್ಕೆ ಮಲಪ್ರಭಾ ನದಿ ನೀರು (Heavy Rain) ನುಗ್ಗುತ್ತಿದೆ. ಇದರಿಂದಾಗಿ ಖಾನಾಪುರ ಪಟ್ಟಣದ ಹೊರವಲಯದ ಸೇತುವೆ ಸಂಪೂರ್ಣ ಜಲಾವೃತವಾಗಿದೆ. ನಿರಂತರ ಮಳೆಯಿಂದ ಖಾನಾಪುರ ಪಟ್ಟಣದಲ್ಲಿ ಜನಜೀವನ ಅಸ್ತವ್ಯಸ್ತವಾಗಿದ್ದು, ಖಾನಾಪುರ ಪಟ್ಟಣದ ಹೊರವಲಯದ ಮೀನಿನ ಮಾರುಕಟ್ಟೆಗೆ ನೀರು ನುಗ್ಗಿದೆ. ಅಲ್ಲದೆ ಪಟ್ಟಣದ ಕೆಎಸ್‌ಆರ್‌ಪಿ ತರಬೇತಿ ಕೇಂದ್ರದ ಮೈದಾನಕ್ಕೆ ನೀರು ನುಗ್ಗಿದ್ದು, ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಮನೆ ಎದುರಿನ ಪ್ರದೇಶ …

Read More »

ವಿಜಯಪುರ: ಆಲಮಟ್ಟಿ ಜಲಾಶಯದಿಂದ 2.5 ಲಕ್ಷ ಕ್ಯೂಸೆಕ್‌ ನೀರು ನದಿಗೆ

ವಿಜಯಪುರ: ಮಹಾರಾಷ್ಟ್ರದ ಕೃಷ್ಣಾ ಕಣಿವೆಯಲ್ಲಿ ಭಾರಿ ಮಳೆಯ ಸುರಿಯುತ್ತಿರುವ ಕಾರಣ ಆಲಮಟ್ಟಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಪರಿಣಾಮ ಶುಕ್ರವಾರ ಮಧ್ಯಾಹ್ನ 1ರಿಂದ ಜಲಾಶಯದ 24 ಗೇಟ್‌ಗಳನ್ನು ತೆಗೆದು ಕೃಷ್ಣಾ ನದಿಗೆ 2.30 ಲಕ್ಷ ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಜಲಾಶಯದ ಒಳಹರಿವನ್ನು ಪರಿಗಣಿಸಿ ಸಂಜೆ ವೇಳೆಗೆ 3 ಲಕ್ಷ ಕ್ಯೂಸೆಕ್‌ ನೀರನ್ನು ಹೊರಬಿಡಲಾಗುವುದು ಎಂದು ಆಲಮಟ್ಟಿ ಅಣೆಕಟ್ಟು ವಲಯದ ಮುಖ್ಯ ಎಂಜಿನಿಯರ್ ಎಚ್. ಸುರೇಶ ತಿಳಿಸಿದ್ದಾರೆ. ಜಲಾಶಯದ ಕೆಳಭಾಗದ …

Read More »

ಬಾಲಿವುಡ್ ನ ‘ಬ್ಯಾಡ್ ಬಾಯ್’ ಮದುವೆನೇ ಆಗಿಲ್ಲ ಅನ್ನೋದು ದೊಡ್ಡ ಸುಳ್ಳಾ..? ದುಬೈನಲ್ಲಿದ್ದಾರಾ ಪತ್ನಿ – ಮಗಳು..?

ಬಾಲಿವುಡ್ ನ ಬ್ಯಾಡ್ ಬಾಯ್, ಸುಲ್ತಾನ , ಬಿ ಟೌನ್ ನ ಮೋಸ್ಟ್ ಎಲಿಜಿಬಲ್ ಬ್ಯಾಚ್ಯುಲರ್ ಎಂದೆಲ್ಲಾ ಕರೆಸಿಕೊಳ್ಳುವ ಸಲ್ಮಾನ್ ಖಾನ್ ಗೆ ಈಗ 55 ವರ್ಷ. ಆದ್ರೂ ಮದುವೆಯಾಗಿಲ್ಲ. ಸಲ್ಮಾನ್ ಖಾನ್ ಏಕೆ ಮದುವೆ ಆಗಿಲ್ಲ ಎಂಬ ಪ್ರಶ್ನೆ ಆಗಾಗ ಕೇಳಿ ಬರ್ತಾನೆ ಇದೆ. ಹಲವು ನಟಿಯರ ಜೊತೆಗೆ ಸಲ್ಮಾನ್ ಖಾನ್ ಹೆಸರು ಕೂಡ ಕೇಳಿ ಬರುತ್ತಿರುತ್ತೆ.. ಆದ್ರೆ ಇದೀಗ ಶಾಕಿಂಗ್ ವಿಚಾರವೊಂದು ತಿಳಿದುಬಂದಿದೆ.. ಹೌದು.. ಸಲ್ಮಾನ್‌ ಗೆ …

Read More »

ನಟಿ ಶಿಲ್ಪಾ ಶೆಟ್ಟಿ ಪತಿ ಮತ್ತು ಉದ್ಯಮಿ ರಾಜ್ ಕುಂದ್ರಾ ಮನೆ ಮೇಲೆ ದಾಳಿ ಮಾಡಿದಾಗ 70 ನೀಲಿ ಚಿತ್ರಗಳು ಸಿಕ್ಕವೂ

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಮತ್ತು ಉದ್ಯಮಿ ರಾಜ್ ಕುಂದ್ರಾ ಮನೆ ಮೇಲೆ ದಾಳಿ ಮಾಡಿದಾಗ 70 ನೀಲಿ ಚಿತ್ರಗಳು ಸಿಕ್ಕವೂ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ರಾಜ್ ಕುಂದ್ರಾ ಮಾಜಿ ಆಪ್ತ ಸಹಾಯಕ ಉಮೇಶ್​​ ಕಾಮತ್​​​ ಇತರೆ ಪ್ರೊಡಕ್ಷನ್​​​ ಹೌಸ್​​ನೊಂದಿಗೆ ಸೇರಿಕೊಂಡು ಈ 70 ನೀಲಿ ಚಿತ್ರಗಳನ್ನು ಮಾಡಿದ್ದರು ಎನ್ನಲಾಗಿದೆ. ನೀಲಿ ಚಿತ್ರಗಳ ತಯಾರಿಕೆಯಿಂದ ಇದುವರೆಗೆ ಸುಮಾರು 7.5ಕೋಟಿ ರೂಪಾಯಿಗಳಿಗೂ ಅಧಿಕ ಹಣ ತನ್ನ ವಿವಿಧ ಖಾತೆಗಳಿಗೆ …

Read More »

ಅರವಿಂದ್ ಬೆಲ್ಲದ್ ಮತ್ತೆ ದೆಹಲಿಗೆ ಪ್ರಯಾಣ ಬೆಳೆಸಿದ ; ರಾಜ್ಯ ಬಿಜೆಪಿಯಲ್ಲಿ ಬಿಸಿಬಿಸಿ ಚರ್ಚೆ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಆಗುತ್ತಿರುವ ಬೆಳವಣಿಗೆಗಳು ಕ್ಷಣಕ್ಕೊಂದು ಸ್ವರೂಪ ಪಡೆದುಕೊಳ್ತಿದ್ದು, ಇದೀಗ ಮತ್ತೆ ಶಾಸಕ ಅರವಿಂದ್ ಬೆಲ್ಲದ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಕಾಶಿ ವಿಶ್ವನಾಥನ ಭೇಟಿಗೆ ತೆರಳಿರುವ ಬೆಲ್ಲದ್, ಅಲ್ಲಿಂದ ನೇರವಾಗಿ ದೆಹಲಿಗೆ ಪ್ರಯಾಣ ಬೆಳಸಿದ್ದಾರೆ. ಸದ್ಯ ಖಾಸಗಿ ಹೋಟೆಲ್​ನಲ್ಲಿ ತಂಗಿರುವ ಬೆಲ್ಲದ್​ ಅವರು ಬಿಜೆಪಿಯ ಹಿರಿಯ ನಾಯಕರನ್ನು ಭೇಟಿಯಾಗಲಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ವಿದ್ಯಮಾನಗಳ ಬಗ್ಗೆ ಬೆಲ್ಲದ್ ಸಮಾಲೋಚನೆ ನಡೆಸಲಿದ್ದಾರೆ. ರಾಜ್ಯದಲ್ಲಿ ಸಿಎಂ ಸ್ಥಾನದ ಬದಲಾವಣೆ ಮಾಡಲಾಗುತ್ತದೆ ಅನ್ನೋ …

Read More »

ರಾಜ್ಯದಲ್ಲಿ ಮಳೆಗೆ ಉಕ್ಕಿ ಹರಿಯುತ್ತಿರುವ ನದಿಗಳು, ಎದುರಾದ ಪ್ರವಾಹ ಭೀತಿ; ಮುಂಬೈ-ಬೆಂಗಳೂರು ರಾ.ಹೆ. ಬಂದ್

ಮುಂಬೈ-ಬೆಂಗಳೂರು ರಾ.ಹೆ. ಬಂದ್ ಇನ್ನು, ಚಿಕ್ಕೋಡಿಯಲ್ಲಿ ಮಹಾ ಮಳೆಗೆ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ. ಮುಂಬೈ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಸಂಚಾರ ಸ್ಥಗಿತಗೊಂಡಿದೆ. ವೇದ ಗಂಗಾ ನದಿಗೆ ಅಪಾರ ಪ್ರಮಾಣದ ನೀರು ಹಿನ್ನಲೆ ಸಂಚಾರ ಬಂದ್ ಆಗಿದೆ. ರಾಷ್ಟ್ರೀಯ ಹೆದ್ದಾರಿ ಮೇಲೆ ವೇದಗಂಗಾ ನದಿ ನೀರು ಹರಿದು ಬರುತ್ತಿದೆ. ಬೆಳಗಾವಿಯಲ್ಲಿ ಮಳೆ ಪಶ್ಚಿಮ ಘಟ ಪ್ರದೇಶದಲ್ಲಿ ‌ಭಾರೀ ಮಳೆ ಹಿನ್ನೆಲೆ, ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ನವೀಲುತೀರ್ಥ …

Read More »

ಅಪಾಯಮಟ್ಟದಲ್ಲಿ ಹರಿಯುತ್ತಿರುವ ವಶಿಷ್ಟಿ ನದಿ: ಕೊಂಕಣ ರೈಲು ಸಂಚಾರ ವ್ಯತ್ಯಯ

: ಮಹಾರಾಷ್ಟ್ರದಲ್ಲಿ ಕೊಂಕಣ ರೈಲ್ವೆ ಮಾರ್ಗದ ಚಿಪ್ಳೂಣ್ ಹಾಗೂ ಕಮತೆ ನಿಲ್ದಾಣಗಳ ನಡುವೆ ರತ್ನಗಿರಿ ಪ್ರಾಂತ್ಯದಲ್ಲಿ ಹರಿ ಯುವ ವಶಿಷ್ಟಿ ನದಿ ಅಪಾಯಮಟ್ಟ ಮೀರಿ ಹರಿಯುತ್ತಿದ್ದು, ಸೇತುವೆಯಲ್ಲಿ ಹಾದುಹೋಗುವ ರೈಲು ಹಳಿಗಳ ಮೇಲೂ ನೀರು ಹರಿಯುತ್ತಿರುವು ದರಿಂದ ರೈಲು ಸಂಚಾರವನ್ನು ಪ್ರಯಾಣಿಕರ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ. ಈ ಮಾರ್ಗದಲ್ಲಿ ಸಂಚರಿಸುವ ಕೆಲವು ರೈಲುಗಳ ಮಾರ್ಗವನ್ನು ಬದಲಿಸಲಾಗಿದ್ದು, ಇನ್ನು ಕೆಲವು ರೈಲುಗಳನ್ನು ಕಮತೆ ನಿಲ್ದಾಣದಲ್ಲಿ …

Read More »

ಮಾಮೂಲಿ ಕೊಡದ್ದಕ್ಕೆ ಸುಳ್ಳು ಕೇಸ್ ದಾಖಲಿಸಿದ್ದ ಲೇಡಿ ಇನ್​ಸ್ಪೆಕ್ಟರ್, ಸಬ್​ ಇನ್​ಸ್ಪೆಕ್ಟರ್ ಸೇರಿ ಮೂವರ ಸಸ್ಪೆಂಡ್

ಬೆಂಗಳೂರು: ಮಾಮೂಲಿ ಕೊಡಲಿಲ್ಲ ಎಂಬ ಕಾರಣಕ್ಕೆ ಅಮಾಯಕನ ವಿರುದ್ಧ ಸುಳ್ಳು ಕೇಸ್​ ದಾಖಲಿಸಿದ್ದ ಮಹಿಳಾ ಇನ್​​ಸ್ಪೆಕ್ಟರ್​, ಈ ಪ್ರಕರಣದ ಆಂತರಿಕ ತನಿಖೆ ನಡೆಸುತ್ತಿದ್ದ ಡಿಸಿಪಿ ವಿರುದ್ಧವೇ ಸ್ಟಿಂಗ್ ಆಪರೇಷನ್​ಗೆ ಯತ್ನಿಸಿದ್ದ ಸಬ್​ ಇನ್​ಸ್ಪೆಕ್ಟರ್​ ಸೇರಿ ಮೂವರು ಪೊಲೀಸರನ್ನು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್​ ಅಮಾನತುಗೊಳಿಸಿದ್ದಾರೆ. ಆರ್​ಎಂಸಿ ಯಾರ್ಡ್ ಪೊಲೀಸ್ ಇನ್​ಸ್ಪೆಕ್ಟರ್​ ಪಾರ್ವತಮ್ಮ ಹಾಗೂ ಸಬ್​ ಇನ್​ಸ್ಪೆಕ್ಟರ್​ ಅಂಜಿನಪ್ಪ ಹಾಗೂ ಇನ್ನೊಬ್ಬ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಇನ್​ಸ್ಪೆಕ್ಟರ್ ಪಾರ್ವತಮ್ಮ ಹಾಗೂ ಎಸ್‌ಐ …

Read More »

ಟೆಲಿಫೋನ್ ಕದ್ದಾಲಿಕೆ ಆರೋಪ: ಕಾಂಗ್ರೆಸ್‌ನಿಂದ ರಾಜಭವನಕ್ಕೆ ಮುತ್ತಿಗೆ

ಬೆಂಗಳೂರು: ಟೆಲಿಫೋನ್ ಕದ್ದಾಲಿಕೆ ಪ್ರತಿಭಟಿಸಿ ಕಾಂಗ್ರೆಸ್‌ ಶಾಸಕರು, ಮುಖಂಡರು ಕಾರ್ಯಕರ್ತರು ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಪ್ರತಿಭಟನೆಯ ನೇತೃತ್ವವನ್ನು ಕಾಂಗ್ರೆಸ್‌ ಶಾಸಕಾಂಗ ಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ, ಹಿರಿಯ ಮುಖಂಡರಾದ ಎಚ್.ಕೆ. ಪಾಟೀಲ, ಅಲ್ಲಂ ವೀರಭದ್ರಪ್ಪ, ರಾಮಲಿಂಗಾರೆಡ್ಡಿ, ಕೆ.ಆರ್. ರಮೇಶ್ ಕುಮಾರ್, ಸಲೀಂ ಅಹ್ಮದ್‌ ವಹಿಸಿದ್ದರು. ಅದಕ್ಕೂ ಮೊದಲು ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ …

Read More »

ತಡರಾತ್ರಿ ಸ್ವಗ್ರಾಮಕ್ಕೆ ಬಂದ ಗದಗ ಯೋಧನ ಮೃತದೇಹ.. ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಗದಗ: ಛತ್ತೀಸ್​ಘಡದಲ್ಲಿ ನಕ್ಸಲರೊಂದಿಗೆ ಹೋರಾಡುತ್ತಾ ಹುತಾತ್ಮನಾದ ಯೋಧನ ಅಂತ್ಯಕ್ರಿಯೆ ತಡರಾತ್ರಿ ಗದಗ ಜಿಲ್ಲೆಯ ಸ್ವಗ್ರಾಮ ಗೊಜನೂರಿನಲ್ಲಿ ನಡೆದಿದೆ.     ನಕ್ಸಲರೊಂದಿಗೆ ಹೋರಾಡುವಾಗ ಗುಂಡು ತಗುಲಿ ಎರಡು ದಿನಗಳ ಹಿಂದೆ ಯೋಧ ಲಕ್ಷ್ಮಣ ಗೌರಣ್ಣವರ್ (30) ಹುತಾತ್ಮರಾಗಿದ್ದರು.. ರಾತ್ರಿ 11 ಗಂಟೆ ಸುಮಾರಿಗೆ ಪಾರ್ಥಿವ ಶರೀರ ಗ್ರಾಮಕ್ಕೆ ಬಂದಿದ್ದು ತಡರಾತ್ರಿ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗಿದೆ. ಪಾರ್ಥಿವ ಶರೀರ ಗ್ರಾಮಕ್ಕೆ ಬರುತ್ತಿದ್ದಂತೆ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿತ್ತು.. ಯೋಧನ ಸಾವಿಗೆ ಇಡೀ …

Read More »