Breaking News

ರಾಜಕೀಯ

ಎಣ್ಣೆ ಬೇಕು ಎಣ್ಣೆ, ಬಾರ್ ಬಂದ್ ಮಾಡ್ಬೇಡಿ: ಬಿಜೆಪಿ ಮುಖಂಡನ ಪ್ರತಿಭಟನೆ

ಬೆಳಗಾವಿ/ಚಿಕ್ಕೋಡಿ: ಎಣ್ಣೆ ಬೇಕು ಎಣ್ಣೆ ಎಂದು ಬಿಜೆಪಿ ಮುಖಂಡ ಹಾಗೂ ಗ್ರಾಮ ಪಂಚಾಯತಿ ಸದಸ್ಯ ಚಿಕ್ಕೋಡಿಯಲ್ಲಿ ಪ್ರತಿಭಟನೆ ಮಾಡಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಬರಗಿ ಗ್ರಾಮದಲ್ಲಿ ಬಾರ್ ಬಂದ್ ಮಾಡದಂತೆ ಮದ್ಯ ಪ್ರಿಯರ ಜೊತೆಗೆ ಗ್ರಾಮ ಪಂಚಾಯತಿ ಸದಸ್ಯ ಪ್ರತಿಭಟನೆ ನಡೆಸಿದ್ದಾರೆ. ಬಾರ್ ಎದುರೇ ಗುಂಪು ಕಟ್ಟಿಕೊಂಡು ಎಣ್ಣೆ ಬೇಕು ಎಣ್ಣೆ ಎಂದು ಪ್ರೊಟೆಸ್ಟ್ ಮಾಡಿದ್ದಾರೆ. ಸಂಬರಗಿ ಗ್ರಾಮ ಪಂಚಾಯತ ಸದಸ್ಯ ಅಶೋಕ್ ಭಾನುದಾಸೆ ಮಾನೆ ಹಾಗೂ ಕೆಲವು …

Read More »

ವಿಜಯೇಂದ್ರರಿಗೆ ಆಪ್ತರಿರೋರು ಸಿಸಿಬಿಯಲ್ಲಿದ್ದಾರೆ: ಯತ್ನಾಳ್

ವಿಜಯಪುರ: ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಗೆ ಆಪ್ತರಾಗಿರುವವರು ಸಿಸಿಬಿಯಲ್ಲಿದ್ದಾರೆ ಎಂದು ಹೇಳುವ ಮೂಲಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕಾಲೆಳೆದಿದ್ದಾರೆ, ಸಿಸಿಬಿಯವರು ಏನ್ ಮಾಡ್ತಿದ್ದಾರೆ? ಸಿಸಿಬಿ ಕೆಲಸವಿರದ ತನಿಖೆಗಳನ್ನೆಲ್ಲ ಮಾಡ್ತಾರೆ. ಡ್ರಗ್ಸ್ ಕೇಸ್, ಯುವರಾಜ್ ಕೇಸ್ ಅರ್ಧಕ್ಕೆ ಬಿಟ್ರು. ಸಿಸಿಬಿಯಲ್ಲಿರೋ ಹಿರಿಯ ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸಲಿ. ವಿಜಯೇಂದ್ರರಿಗೆ ಆಪ್ತರಿರೋರು ಸಿಸಿಬಿಯಲ್ಲಿದ್ದಾರೆ, ಕಣ್ಣು ತೆರೆದು ನೋಡಲಿ ಎಂದು ಹೇಳಿದ್ದಾರೆ.   ಇದೇ ವೇಳೆ ಕಟೀಲ್ …

Read More »

ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿ ಅವೈಜ್ಞಾನಿಕ: ಸತೀಶ ಜಾರಕಿಹೊಳಿ

ಬೆಳಗಾವಿ: ಮುಖ್ಯಮಂತ್ರಿ ಹುದ್ದೆಯಿಂದ ಒಬ್ಬರು ಕೆಳಗಿಳಿಯುತ್ತಾರೆ; ಮತ್ತೊಬ್ಬರು ಆ ಹುದ್ದೆಗೇರುತ್ತಾರೆ. ಆದರೆ, ಕೆಳಗಿಳಿಯುವವರಿಂದ ಯಾವ ವಾಣಿ (ಸಂದೇಶ) ಹೊರಬರುತ್ತದೆ ಎಂದು ಕಾಯುತ್ತಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದ ಕಾಂಗ್ರೆಸ್ ಭವನದಲ್ಲಿ ಪತ್ರಕರ್ತರೊಂದಿಗೆ ಸೋಮವಾರ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆಯಿಂದ ಕಾಂಗ್ರೆಸ್‌ಗೆ ಯಾವ ಲಾಭವೂ ಇಲ್ಲ; ನಷ್ಟವೂ ಇಲ್ಲ. ಮುಖ್ಯಮಂತ್ರಿ ಬದಲಾದರೂ ಸರ್ಕಾರ ಅವರದ್ದೇ ಇರುತ್ತದೆ. ನಾವು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇವೆ ಎಂದರು. ಮಧ್ಯಂತರ ಚುನಾವಣೆ ಬಂದರೂ …

Read More »

ನಿಂತಿದ್ದ ಲಾರಿಗೆ ಕಾರು ಡಿಕ್ಕಿ -4 ವರ್ಷದ ಬಾಲಕ ಸೇರಿ ಮೂವರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಿರಿಯೂರು ತಾಲೂಕಿನ ಐಮಂಗಲ ಬಳಿ ನಡೆದಿದೆ. ಜಯರಾಂ (28), ಸುಶೀಲಾ (26), ಆಕಾಶ್ (4) ಮೃತರು. ಅಪಘಾತದಲ್ಲಿ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಚಿತ್ರದುರ್ಗ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.   ಮೃತರು ರಾಜಸ್ಥಾನ ಮೂಲದವರಾಗಿದ್ದು ರಾಜಸ್ಥಾನ ದಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು …

Read More »

ನಾಳೆ ಸಂಜೆ 4.30ಕ್ಕೆ ಪಿಯು ಫಲಿತಾಂಶ; ರಿಜಿಸ್ಟರ್​​ ನಂಬರ್​​, ರಿಸ್ಟಲ್ಟ್​​​​ ಪಡೆಯುವ ವಿಧಾನ ಇಲ್ಲಿದೆ

2020-21ನೇ ಸಾಲಿನ ಪಿಯುಸಿ ಫಲಿತಾಂಶ (PU Result) ನಾಳೆ ಸಂಜೆ ಪ್ರಕಟವಾಗಲಿದೆ ಎಂದು ಪಿಯು ಮಂಡಳಿ ನಿರ್ದೇಶಕಿ ಸ್ನೇಹಲ್ ತಿಳಿಸಿದ್ದಾರೆ. ನಾಳೆ ಸಂಜೆ 4. 30ಕ್ಕೆ ಪಿಯು ಮಂಡಳಿ ಜಾಲತಾಣದಲ್ಲಿ ಫಲಿತಾಂಶ ಪ್ರಕಟವಾಗಿದೆ. https://pue.kar.nic.in/ ವೈಬ್ ಸೈಟ್ ಮೂಲಕ ಫಲಿತಾಂಶ ಪ್ರಕಟವಾಗಲಿದ್ದು, ಫಲಿತಾಂಶಕ್ಕೂ ಮುನ್ನ Know my register numbar ಮೂಲಕ ರಿಜಿಸ್ಟರ್​ ನಂಬರ್ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಕೊರೋನಾ ಹಿನ್ನಲೆ ಈ ಬಾರಿ ಪರೀಕ್ಷೆ ನಡೆಸದೇ ಎಸ್​ಎಸ್​ಎಲ್​ಸಿ …

Read More »

ಶ್ರುತಿಗೆ ಶಾಕ್, ಕಾಪುಸಿಗೆ ಮಣೆ: ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷ ಕಾಪು ಸಿದ್ದಲಿಂಗಸ್ವಾಮಿ

ಬೆಂಗಳೂರು: ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದ ಶ್ರುತಿ ಅವರ ನೇಮಕವನ್ನು ಸರ್ಕಾರ ಹಿಂಪಡೆದಿದೆ. ಅಚ್ಚರಿ ರೀತಿಯಲ್ಲಿ ಆ ಸ್ಥಾನಕ್ಕೆ ಕಾಪು ಸಿದ್ದಲಿಂಗಸ್ವಾಮಿ ಅವರನ್ನು ನೇಮಕ ಮಾಡಿ ಆದೇಶ ಹೊರಬಿದ್ದಿದೆ. ಈ ಬದಲಾವಣೆ ನಡೆದು 48 ತಾಸು ಕಳೆದರೂ ತೀರ್ಮಾನದ ವಿಷಯ ಶ್ರುತಿ ಅವರ ಗಮನಕ್ಕೆ ಬಂದಿಲ್ಲ. ಸರ್ಕಾರದ ಕಡೆಯಿಂದ ಅಥವಾ ಮುಖ್ಯಮಂತ್ರಿ ಕಚೇರಿಯಿಂದ ಶ್ರುತಿ ಅವರಿಗೆ ತಿಳಿಸುವ ಪ್ರಯತ್ನವನ್ನೂ ಮಾಡಿಲ್ಲ ಎನ್ನಲಾಗಿದೆ.ಶನಿವಾರ ಬೆಳಗ್ಗೆ ಆದೇಶ ಹೊರಟಿದ್ದು, ಭಾನುವಾರ ರಾತ್ರಿ …

Read More »

ಯಾರಿಗೂ ಹೇಳ್ಬೇಡಿ ಎನ್ನುತ್ತಲೇ ‘ಈ ಮೂವರಲ್ಲಿ ಯಾರೂ ಸಿಎಂ ಆಗಬಹುದು’ ಎಂದ ನಳಿನ್ ಕಟೀಲ್!

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ಒಂದು ವೈರಲ್‌ ಆಗಿದೆ. ತಮ್ಮ ಆಪ್ತರೊಂದಿಗೆ ಅವರು ತುಳುವಿನಲ್ಲಿ ಮಾತನಾಡಿದ್ದಾರೆ ಎನ್ನಲಾದ ಈ ಆಡಿಯೋದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸುಳಿವು ನೀಡಿದ್ದಾರೆ. ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ದೊಡ್ಡಮಟ್ಟದಲ್ಲಿ ಚರ್ಚೆ ನಡೆಯುತ್ತಿರುವಾಗಲೇ ಈ ಆಡಿಯೋ ಸಂಚಲನ ಸೃಷ್ಟಿಸಿದೆ. ತುಳುವಿನಲ್ಲಿರುವ ಆಡಿಯೋದಲ್ಲಿ, ” ಯಾರಿಗೂ ಹೇಳ್ಬೇಡಿ, ಜಗದೀಶ್ ಶೆಟ್ಟರ್‌ ಮತ್ತು ಈಶ್ವರಪ್ಪ ತಂಡವನ್ನು ತೆಗೆದು ಹೊಸ ತಂಡ ಕಟ್ಟಲಾಗುವುದು. …

Read More »

ಅಧಿಕಾರ ಹೋದರೆ ಒಂದು ಗೂಟ ಹೋಯ್ತು ಅಂದುಕೊಳ್ತೀನಿ. ನಾನು ಯಾವತ್ತೂ ಗೂಟಕ್ಕೆ ಅಂಟಿಕೊಂಡು ಕುಳಿತಿಲ್ಲ: ಈಶ್ವರಪ್ಪ,

ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆಡಿಯೋ ವೈರಲ್ ವಿಚಾರವಾಗಿ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ನಳೀನ್ ಕುಮಾರ್ ವಿರುದ್ಧ ವ್ಯವಸ್ಥಿತ ಸಂಚು ನಡೆದಿದೆ, ಅವರನ್ನು ಬಲಿಪಶು ಮಾಡಲು ಹೊರಟಂತಿದೆ ಎಂದು ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಸಚಿವರು, ಒಂದುವೇಳೆ ನನ್ನ ವಿರುದ್ಧ ಸಂಚು ನಡೆದರೂ ನಾನು ತಲೆ ಕೆಡಿಸಿಕೊಳ್ಳಲ್ಲ, ಅಧಿಕಾರ ಹೋದರೆ ಒಂದು ಗೂಟ ಹೋಯ್ತು ಅಂದುಕೊಳ್ತೀನಿ. ನಾನು ಯಾವತ್ತೂ ಗೂಟಕ್ಕೆ ಅಂಟಿಕೊಂಡು ಕುಳಿತಿಲ್ಲ ಎಂದು ಅಸಮಾಧಾನ ಹೊಸಹಾಕಿದರು. ಇದೇ …

Read More »

ದೆಹಲಿಗೆ ಹೋಗಿ 2000 ಕೋಟಿ ಕೊಡುತ್ತೇವೆ ನಮ್ಮನ್ನು ಸಿಎಂ ಮಾಡಿ ಎಂದಿದ್ದಾರೆ: ಯತ್ನಾಳ್ ಹೊಸ ಬಾಂಬ್ …!

ವಿಜಯಪುರ: ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಪುತ್ರರಾದ ಬಿ.ವೈ ವಿಜಯೇಂದ್ರ, ರಾಘವೇಂದ್ರ ದೆಹಲಿ ಭೇಟಿ ವಿಚಾರದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ದೆಹಲಿಗೆ ಹೋಗಿ 2000 ಕೋಟಿ ಕೊಡುತ್ತೇವೆ ನಮ್ಮನ್ನು ಸಿಎಂ ಮಾಡಿ ಎಂದಿದ್ದಾರೆ ಎಂದು ಹೊಸ ಹೇಳಿಕೆ ನೀಡಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್, ಯಾರ್ಯಾರೋ ದೆಹಲಿಗೆ ಹೋಗುತ್ತಾರೆ ಬೇರೆ ಬೇರೆ ರೀತಿಯ ಆಮಿಷಗಳನ್ನು ಒಡ್ಡಿ ಸಿಎಂ ಮಾಡಿ ಎನ್ನುತ್ತಾರೆ. 2000 ಕೋಟಿ ಕೊಡ್ತೀವಿ ನಮ್ಮನ್ನು ಸಿಎಂ ಮಾಡಿ …

Read More »

ಕಚ್ಚಾ ತೈಲ ಪೂರೈಕೆ ಹೆಚ್ಚಿಸಲು ಒಪೆಕ್+ ಸಮ್ಮತಿ

ಮಾಸ್ಕೊ/ದುಬೈ/ಲಂಡನ್: ಆಗಸ್ಟ್‌ ತಿಂಗಳಿನಿಂದ ಕಚ್ಚಾ ತೈಲ ಪೂರೈಕೆಯನ್ನು ಹೆಚ್ಚುಮಾಡಲು ಪೆಟ್ರೋಲಿಯಂ ರಫ್ತುದಾರ ರಾಷ್ಟ್ರಗಳ ಒಕ್ಕೂಟ (ಒಪೆಕ್) ಮತ್ತು ಆ ಒಕ್ಕೂಟದ ಮಿತ್ರರಾಷ್ಟ್ರಗಳ (ಒಪೆಕ್‌+) ಪ್ರತಿನಿಧಿಗಳು ಸಮ್ಮತಿ ಸೂಚಿಸಿದ್ದಾರೆ. ಕೊರೊನಾ ಸಾಂಕ್ರಾಮಿಕದ ದುಷ್ಪರಿಣಾಮದಿಂದ ವಿಶ್ವದ ಅರ್ಥ ವ್ಯವಸ್ಥೆಯು ಚೇತರಿಸಿಕೊಳ್ಳುತ್ತಿರುವ ಹೊತ್ತಿನಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯು ಎರಡೂವರೆ ವರ್ಷಗಳ ಗರಿಷ್ಠ ಮಟ್ಟವನ್ನು ತಲುಪಿತ್ತು. ಪೂರೈಕೆ ಜಾಸ್ತಿ ಮಾಡಲು ಒಪ್ಪಿರುವುದರ ಪರಿಣಾಮವಾಗಿ, ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ತಗ್ಗಬಹುದು ಎನ್ನಲಾಗಿದೆ. ‘ಒಪ್ಪಂದವು …

Read More »