Breaking News
Home / ರಾಜಕೀಯ (page 228)

ರಾಜಕೀಯ

ಆಸ್ಟ್ರೇಲಿಯಾ ವಿರುದ್ಧದ ಟಿ-20 ಸರಣಿಗೆ ಸೂರ್ಯ ನಾಯಕ

ಹೈದರಾಬಾದ್​: ವಿಶ್ವಕಪ್​ಗೂ ಮುನ್ನ ಆರಂಭವಾಗಿದ್ದ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿಯ ಏಕದಿನ ಪಂದ್ಯಗಳು ಮುಗಿದಿವೆ. 5 ಟಿ20 ಪಂದ್ಯಗಳು ಬಾಕಿ ಇದ್ದು, ಇದು ನವೆಂಬರ್​ 23ರಿಂದ ಆರಂಭವಾಗಲಿದೆ. ವಿಶ್ವಕಪ್ ಮುಗಿದ ನಾಲ್ಕು ದಿನಗಳ ಅವಧಿಯ ಅಂತರದಲ್ಲಿ ಸರಣಿ ಆರಂಭವಾಗುತ್ತಿದೆ. ಇದಕ್ಕೆ ಸೂರ್ಯಕುಮಾರ್​ ಯಾದವ್​ ನಾಯಕತ್ವದಲ್ಲಿ 15 ಜನ ಸದಸ್ಯರ ತಂಡವನ್ನು ಪ್ರಕಟಿಸಲಾಗಿದೆ. ನವೆಂಬರ್ 23 ರಂದು ವಿಶಾಖಪಟ್ಟಣದಲ್ಲಿ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ-20ಸರಣಿ ಡಿಸೆಂಬರ್ 3 ರಂದು …

Read More »

ಹೈಕೋರ್ಟ್​ ಆದೇಶ: ಶಿವಮೂರ್ತಿ ಮುರುಘಾ ಶರಣರ ಬಿಡುಗಡೆ

ದಾವಣಗೆರೆ: ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿರುವ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಚಿತ್ರದುರ್ಗದ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಜಾರಿ ಮಾಡಿದ್ದ ಜಾಮೀನು ರಹಿತ ವಾರಂಟ್‌ಗೆ ಹೈಕೋರ್ಟ್ ತಡೆ ನೀಡಿದ ಬೆನ್ನಲ್ಲೇ ಶರಣರನ್ನು ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡಲಾಗಿದೆ. ಎರಡನೇ ಫೋಕ್ಸೊ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ವಿಚಾರಣೆ ನಡೆಸಿದ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಸ್ವಾಮೀಜಿ ಬಂಧನಕ್ಕೆ ವಾರಂಟ್ ಜಾರಿ ಮಾಡಿತ್ತು. ವಾರಂಟ್ ಪಡೆದ …

Read More »

ಕಾಂಗ್ರೆಸ್ ಮುಖಂಡೆ ವೀಣಾ ಕಾಶಪ್ಪನವರ ಕಾರು ಅಪಘಾತ

ಬಾಗಲಕೋಟೆ: ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಹಾಗೂ ಕಾಂಗ್ರೆಸ್ ಮುಖಂಡೆ ವೀಣಾ ಕಾಶಪ್ಪನವರ ಕಾರು ಅಪಘಾತವಾಗಿದ್ದು, ಅಪಾಯದಿಂದ ಅವರು ಪಾರಾಗಿದ್ದಾರೆ. ವಿಜಯಪುರ ನಗರದ ಸಿಂದಗಿ ಬೈಪಾಸ್ ಬಳಿ ರಸ್ತೆಯಲ್ಲಿ ಸೋಮವಾರ ಕಾರು ಅಪಘಾತ ಸಂಭವಿಸಿದೆ. ಬೈಕ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ವೀಣಾ ಕಾಶಪ್ಪನವರ ಅವರಿದ್ದ ಕಾರು ಎದುರುಗಡೆ ಕಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಎದುರುಗಡೆ ಕಾರಿನಲ್ಲಿದ್ದ ಪ್ರಯಾಣಿಕರು ಸಹ ಗಾಯಗೊಂಡಿದ್ದಾರೆ. ವೀಣಾ ಕಾಶಪ್ಪನವರಿಗೆ ಚಿಕ್ಕಪುಟ್ಟ ಗಾಯವಾಗಿದ್ದು, ವಿಜಯಪುರ ಸ್ಥಳೀಯ ಆಸ್ಪತ್ರೆಗೆ ವೀಣಾರನ್ನು …

Read More »

ಬೆಳಗಾವಿಯ ಚಳಿಗಾಲ ಅಧಿವೇಶನ ಕೇವಲ ಪ್ರತಿಭಟನೆಯ ಅಧಿವೇಶನ ಆಗಬಾರದು: ಡಾ‌.ಜಿ.ಪರಮೇಶ್ವರ್​

ಬೆಳಗಾವಿ: ಬೆಳಗಾವಿಯ ಚಳಿಗಾಲ ಅಧಿವೇಶನ ಕೇವಲ ಪ್ರತಿಭಟನೆಯ ಅಧಿವೇಶನ ಆಗಬಾರದು. ಈ ಭಾಗದ ನೈಜ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕು ಎಂದು ಗೃಹ ಸಚಿವ ಡಾ‌.ಜಿ.ಪರಮೇಶ್ವರ್​ ಹೇಳಿದ್ದಾರೆ. ಬೆಳಗಾವಿಯಲ್ಲಿ ಪೊಲೀಸ್ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಪ್ರತಿಭಟನೆಗಳ ಉದ್ದೇಶ ಸರಿ ಇರಬಹುದು. ಆದರೆ, ಇಲ್ಲಿ ಅಧಿವೇಶನ ನಡೆಯೋದೇ ಪ್ರತಿಭಟನೆ ನಡೆಯಲು ಎಂಬ ಅಪಖ್ಯಾತಿಯಿದೆ. ಹಾಗಾಗಿ, ಪ್ರತಿಭಟನೆಗಳನ್ನು ಕಡಿಮೆಗೊಳಿಸಲು ಸಂಬಂಧಿಸಿದ ಇಲಾಖೆಗಳ ಜೊತೆಗೆ ಮಾತನಾಡಿ ಅಧಿವೇಶನದೊಳಗೆ ಅವರ ಸಮಸ್ಯೆ ಬಗೆಹರಿಸಲು …

Read More »

ಮತ್ತೆ ಮುರುಘಾ ಶರಣರನ್ನು ಬಂಧಿಸಿದ ಪೊಲೀಸರು

ಚಿತ್ರದುರ್ಗ: ಪೋಕ್ಸೊ ಪ್ರಕರಣ ಸಂಬಂಧ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಬಂಧನ ವಾರೆಂಟ್ ಹೊರಡಿಸಿದ್ದ ಹಿನ್ನೆಲೆ ಮುರುಘಾ ಮಠದ ಡಾ ಶಿವಮೂರ್ತಿ ಶರಣರನ್ನು ಪೊಲೀಸರು ಬಂಧಿಸಿದ್ದಾರೆ.   ಮುರುಘಾ ಶ್ರೀಗಳ ವಿರುದ್ಧದ ಮೊದಲ ಪೋಕ್ಸೊ ಪ್ರಕರಣದಲ್ಲಿ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಕಳೆದ ಶನಿವಾರ ಅವರು ಜೈಲಿನಿಂದ ಬಿಡುಗಡೆಯಾಗಿದ್ದರು. ಇದೀಗ ಎರಡನೇ ಪ್ರಕರಣ ಸಂಬಂಧ ನ್ಯಾಯಧೀಶರಾದ ಬಿ ಕೆ ಕೋಮಲಾ ಅವರು ಬಂಧನ ವಾರೆಂಟ್ ಆದೇಶ ಹೊರಡಿಸಿದ್ದರು. ಚಿತ್ರದುರ್ಗದ …

Read More »

ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಡಿ.10 ರಿಂದ 24ರ ವರೆಗೆ ಚಂಪಾಷಷ್ಠಿ ಮಹೋತ್ಸವ

ಸುಬ್ರಹ್ಮಣ್ಯ(ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೂರ್ವಶಿಷ್ಟ ಸಂಪ್ರದಾಯ ಪ್ರಕಾರ ಈ ವರ್ಷದ ಚಂಪಾಷಷ್ಠಿ ಮಹೋತ್ಸವವು ಅದ್ಧೂರಿಯಾಗಿ ನಡೆಯಲಿದೆ.   ಇದೇ ಶೋಭಕೃತ್ ನಾಮ ಸಂವತ್ಸರದ ಕಾರ್ತಿಕ ಬಹುಳ ದ್ವಾದಶಿ ಆದಿತ್ಯವಾರ 10-12-2023 ರಿಂದ ಲಾಗ್ಯಾತು ಮಾರ್ಗಶಿರ ಶುದ್ಧ ದ್ವಾದಶಿ ಆದಿತ್ಯವಾರ 24-12-2023ರ ವರೆಗೆ ಈ ಕೆಳಗಿನ ವಿವರದಂತೆ ವಾರ್ಷಿಕ ಜಾತ್ರಾ ಉತ್ಸವಾದಿಗಳು ಜರುಗಲಿವೆ. ಭಗವತ್ಸಂಕಲ್ಪ ಪ್ರಕಾರ ನಡೆಯುವ ಈ ಮಹೋತ್ಸವಗಳಿಗೆ ಭಕ್ತರು …

Read More »

ರಾತ್ರೋರಾತ್ರಿ 200 ದಾಳಿಂಬೆ ಗಿಡ ಕತ್ತರಿಸಿದ ಕಿಡಿಗೇಡಿಗಳು, ರೈತನಿಗೆ ಆಘಾತ

ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ) : ರೈತರಿಗೆ ಅತಿವೃಷ್ಟಿ, ಅನಾವೃಷ್ಟಿ ಕಾಡುತ್ತಲೇ ಇರುತ್ತವೆ. ಈ ಮಧ್ಯೆ ಕೆಲವರು ಹೇಗಾದರೂ ಮಾಡಿ ಅಲ್ಪ ಸ್ವಲ್ಪ ಬೆಳೆಯನ್ನಾದರೂ ಉಳಿಸಿಕೊಂಡು ಜೀವನ ಬಂಡಿ ಸಾಗಿಸುತ್ತಾರೆ. ಈ ಬಾರಿಯಂತೂ ಬರಗಾಲದ ಹೊಡೆತಕ್ಕೆ ಅನ್ನದಾತರು ನಲುಗಿದ್ದಾರೆ. ಈ ನಡುವೆ ಕಳೆದ ಒಂದು ವರ್ಷದಿಂದ ಕಷ್ಟಪಟ್ಟು ದಾಳಿಂಬೆ ಬೆಳೆಯನ್ನು ಉಳಿಸಿಕೊಂಡಿದ್ದ ರೈತನಿಗೆ ಒಂದೇ ದಿನದಲ್ಲಿ ಆಘಾತ ಉಂಟಾಗಿದೆ. ಇದಕ್ಕೆ ಕಾರಣ ಹುಲುಸಾಗಿ ಬೆಳೆದಿದ್ದ ದಾಳಿಂಬೆ ಗಿಡಗಳನ್ನು ಯಾರೋ ಕಡಿದು ಹಾಕಿರುವುದು. ಹೌದು, …

Read More »

ನಮ್ಮ ಯೋಜನೆ ವಿರೋಧಿಸಿದವರೇ ಈಗ ಗ್ಯಾರಂಟಿ ಹಿಂದೆ ಬಿದ್ದಿದ್ದಾರೆ: ಸಿಎಂ ಸಿದ್ದರಾಮಯ್ಯ

ಕೊಪ್ಪಳ: ”ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ವಿರೋಧಿಸಿದವರೇ, ಇಂದು ಬೇರೆ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಜನರಿಗೆ ಗ್ಯಾರಂಟಿ ನೀಡಲು ಮುಂದಾಗಿರುವುದು ವಿಪರ್ಯಾಸ” ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ”ಬಿಜೆಪಿಯವರು ನುಡಿದಂತೆ ನಡೆಯದವರು. ನಾವು ಯಾವುದೇ ಯೋಜನೆ ಮಾಡಿದರೆ ರಾಜ್ಯ, ದೇಶ ದಿವಾಳಿಯಾಗುತ್ತದೆ. ಅದೇ ಬಿಜೆಪಿಯವರು ಮಾಡಿದರೆ, ಅದು ಹೇಗೆ ಉದ್ಧಾರ ಮಾಡುವ ಕೆಲಸವಾಗುತ್ತದೆ” ಎಂದು ಪ್ರಶ್ನಿಸಿದರು. ಮಾಜಿ ಸಿಎಂ ಹೆಚ್​ …

Read More »

ತಿನಿಸು ಕಟ್ಟೆಗೆ ಪಿಡಬ್ಲುಡಿ ಅಧಿಕಾರಿಗಳ ದಿಢೀರ್ ಭೇಟಿ, ಪರಿಶೀಲನೆ: ಕಾಂಗ್ರೆಸ್-ಬಿಜೆಪಿ ಮಧ್ಯ ವಾಗ್ವಾದ

ಬೆಳಗಾವಿ: ಬೆಳಗಾವಿಯಲ್ಲಿ ಸಚಿವ ಸತೀಶ್​ ಜಾರಕಿಹೊಳಿ ಹಾಗೂ ಶಾಸಕ ಅಭಯ್ ಪಾಟೀಲ್ ನಡುವೆ ಜಟಾಪಟಿ ಮುಂದುವರಿದಿದೆ. ಇಲ್ಲಿನ ತಿನಿಸು ಕಟ್ಟೆ ನಿರ್ಮಾಣ ಹಾಗೂ ಬಾಡಿಗೆ ಹಂಚಿಕೆಯಲ್ಲಿ ಗೋಲ್ ಮಾಲ್ ಆರೋಪ ಹಿನ್ನೆಲೆ ಇಂದು ಬೆಂಗಳೂರಿನ ಲೋಕೋಪಯೋಗಿ ಇಲಾಖೆಯ ಚೀಫ್ ಇಂಜಿನಿಯರ್ ದುರ್ಗಪ್ಪ ನೇತೃತ್ವದ ತಂಡ ತಿನಿಸು ಕಟ್ಟೆಗೆ ಭೇಟಿ ನೀಡಿ‌ ಪರಿಶೀಲನೆ ನಡೆಸಿತು.   ಬೆಳಗಾವಿಯ ಲೋಕೋಪಯೋಗಿ ಇಲಾಖೆಯಿಂದ ಶಾಸಕರ ಅನುದಾನದಡಿ ನಗರದ ಬಸವೇಶ್ವರ ವೃತ್ತದ ಬಳಿ ತಿನಿಸು ಕಟ್ಟೆ ನಿರ್ಮಾಣವಾಗಿತ್ತು. …

Read More »

ಮುರುಘಾಶ್ರೀ ವಿರುದ್ಧ ಮತ್ತೆ ಬಂಧನ ವಾರೆಂಟ್

ದಾವಣಗೆರೆ: ಚಿತ್ರದುರ್ಗದ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯ ಮುರುಘಾಶ್ರೀ ವಿರುದ್ಧ ಮತ್ತೆ ಬಂಧನ ವಾರೆಂಟ್ ಹೊರಡಿಸಿದೆ. ಕೋರ್ಟ್ ಆದೇಶ ಪಡೆದ ಬಳಿಕ ಪೊಲೀಸರಿಂದ ಬಂಧನ ಪ್ರಕ್ರಿಯೆ ನಡೆಯಲಿದೆ. ಇಂದು ಸಂಜೆ ಶ್ರೀಗಳನ್ನು ಪೊಲೀಸರು ಕೋರ್ಟ್​ಗೆ ಹಾಜರುಪಡಿಸುವ ಸಾಧ್ಯತೆ ಇದೆ. ಮುರುಘಾ ಶ್ರೀಗಳ ವಿರುದ್ಧದ ಎರಡು ಪೋಕ್ಸೋ ಪ್ರಕರಣಗಳ ಪೈಕಿ ಮೊದಲ ಪ್ರಕರಣದಲ್ಲಿ ಜಾಮೀನಿನ ಮೇಲೆ ಶನಿವಾರ ಬಿಡುಗಡೆಯಾಗಿದ್ದರು. ಇದೀಗ ಎರಡನೇ ಪ್ರಕರಣ ಸಂಬಂಧ ಶ್ರೀಗಳ ವಿರುದ್ಧ ಚಿತ್ರದುರ್ಗ 2ನೇ …

Read More »