Breaking News

ರಾಜಕೀಯ

ಕಾಂಗ್ರೆಸ್ ನಲ್ಲಿ ಮುಂದುವರಿದ ಸಿಎಂ ಫೈಟ್; ಡಿ.ಕೆ.ಶಿವಕುಮಾರ್ ಮುಂದಿನ ಸಿಎಂ ಎಂದ ನಲಪಾಡ್

ಉಡುಪಿ: ಕಾಂಗ್ರೆಸ್ ಪಾಳಯದಲ್ಲಿ ಸ್ವಲ್ಪ ತಣ್ಣಗಾಗಿದ್ದ ಸಿಎಂ ಅಭ್ಯರ್ಥಿ ವಿಚಾರ ಇದೀಗ ಮತ್ತೆ ತಾರಕಕ್ಕೇರಿದೆ. ಡಿ.ಕೆ.ಶಿವಕುಮಾರ್ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಯೂತ್ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ಹೇಳಿಕೆ ನೀಡಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ನಲಪಾಡ್, ಕೋವಿಡ್ ನಂತಹ ಸಂಕಷ್ಟದ ಸಂದರ್ಭದಲ್ಲಿ ನಿಮಗೆ ಯಾರೂ ಸಹಾಯ ಮಾಡಿಲ್ಲ ಕಾಂಗ್ರೆಸ್ ಮಾತ್ರ ನಿಮ್ಮ ಕಷ್ಟಕ್ಕೆ ಸ್ಪಂದಿಸಿದೆ. ಹಾಗಾಗಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮತ ಹಾಕಬೇಕು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ …

Read More »

ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ನವದೆಹಲಿ: ಇಂದು ಸಂಜೆ ಕೇಂದ್ರ ಸಚಿವ ಸಂಪುಟ ಪುನಾರಚನೆಯಾಗುತ್ತಿರುವ ಬೆನ್ನಲ್ಲೇ ಹಲವು ಹಿರಿಯ ಸಚಿವರಿಗೆ ಕೊಕ್ ನೀಡಲಾಗಿದ್ದು, ಇದೀಗ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವರಿಷ್ಠರ ಸೂಚನೆ ಹಿನ್ನೆಲೆಯಲ್ಲಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಸ್ಥಾನಕ್ಕೆ ಸದಾನಂದಗೌಡರು ರಾಜೀನಾಮೆ ನೀಡಿದ್ದಾರೆ. ಸದಾನಂದಗೌಡರಿಗೆ ರಾಜ್ಯ ರಾಜಕರಣದತ್ತ ಗಮನ ಹರಿಸಲು ಸೂಚಿಸಲಾಗಿದೆ ಎನ್ನಲಾಗಿದೆ.   ಇನ್ನು ಸದಾನಂದಗೌಡರಿಂದ ತೆರವಾದ ಸ್ಥಾನಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಆಯ್ಕೆ …

Read More »

ಕೇಂದ್ರ ಸಚಿವ ಸ್ಥಾನಕ್ಕೆ `ರಮೇಶ್ ಪೋಕ್ರಿಯಾಲ್ ನಿಶಾಂಕ್’ ರಾಜೀನಾಮೆ

ನವದೆಹಲಿ : ಇಂದು (ಬುಧವಾರ) ಸಂಜೆ ಕೇಂದ್ರ ಸಚಿವರ ಪರಿಷತ್ತಿನ ಪುನರ್ರಚನೆ ಮತ್ತು ವಿಸ್ತರಣೆಯ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವ್ರು ತಮ್ಮ ಅಧಿಕೃತ ನಿವಾಸದಲ್ಲಿ ಸಚಿವ ಹುದ್ದೆಯ ಸಂಭಾವ್ಯರನ್ನ ಭೇಟಿಯಾದರು. ಈ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಪ್ರಧಾನಿ ನಿವಾಸದಲ್ಲಿ ಉಪಸ್ಥಿತರಿದ್ದರು.   …

Read More »

ಬಳ್ಳಾರಿ: ಭಾರೀ ಮಳೆಗೆ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿಹೋದ ದಂಪತಿ

ವಿಜಯನಗರ: ನಿನ್ನೆ ಸುರಿದ ಭಾರೀ ಮಳೆಗೆ ಗಂಡ ಹೆಂಡತಿಯಿಬ್ಬರು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಜಿಲ್ಲೆಯ ಹೂವಿನಹಡಗಲಿಯಲ್ಲಿ ನಡೆದಿದೆ. ಹಗರಿ ಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ಮೊತ್ಕೂರು ಗ್ರಾಮದ ನಿವಾಸಿಗಳಾದ ಮಲ್ಲಿಕಾರ್ಜುನ (55) ಹಾಗೂ ಅವರ ಪತ್ನಿ ಗದಗ ಜಿಲ್ಲೆಯಿಂದ ವಾಪಸಾಗುತ್ತಿದ್ದ ವೇಳೆ ದುರ್ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೂವಿನಹಡಗಲಿ ತಾಲೂಕಿನ ಪೂರ್ವ ಮತ್ತು ಪಶ್ಚಿಮ ಕಾಲ್ವಿ ಗ್ರಾಮಗಳ ಬಳಿ ಇರುವ ಹಳ್ಳದಲ್ಲಿ ನಿನ್ನೆ ದಂಪತಿ ಕೊಚ್ಚಿಹೋಗಿದ್ದು, ಮಲ್ಲಿಕಾರ್ಜುನ ಇಂದು …

Read More »

ಕಾರು-ಆಟೋ ಮಧ್ಯೆ ಭೀಕರ ಅಪಘಾತ; ಓರ್ವ ಮಹಿಳೆ ಸ್ಥಳದಲ್ಲೇ ಸಾವು

ಹಾವೇರಿ: ಕಾರು ಮತ್ತು ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಕೌದಿಕಲ್ಲಾಪುರ ಕ್ರಾಸ್​ ಬಳಿ ನಡೆದಿದೆ. ಲಕ್ಷ್ಮವ್ವ ಕಲ್ಲೇಡಿ 55 ಮೃತ ದುರ್ದೈವಿಯಾಗಿದ್ದು ಇನ್ನುಳಿದ ನಾಲ್ವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾವೇರಿ ಮಾರ್ಗವಾಗಿ ಕಾಗಿನೆಲೆಗೆ ಹೋಗುತ್ತಿದ್ದ ಕಾರು ಮತ್ತು ಹಾವೇರಿಗೆ ಬರುತ್ತಿದ್ದ ಆಟೋ ನಡುವೆ ಅಪಘಾತ ಸಂಭವಿಸಿದೆ. ಹಾವೇರಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ …

Read More »

ಗೋಕಾಕ:ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಸೈಕಲ್ ಜಾಥಾ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಸೈಕಲ್

ಗೋಕಾಕ: ಕೇಂದ್ರ, ರಾಜ್ಯ ಸರ್ಕಾರದ ವೈಫಲ್ಯ ಹಾಗೂ ಪೆಟ್ರೋಲ್, ಡೀಸೆಲ್ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ವಿರೋಧಿಸಿ ನಗರದಲ್ಲಿ ಇಂದು ಕಾಂಗ್ರೆಸ್ ಯುವ ನಾಯಕರಾದ ರಾಹುಲ್ ಜಾರಕಿಹೊಳಿ ಮತ್ತು ಪ್ರಿಯಾಂಕಾ ಜಾರಕಿಹೊಳಿ ಅವರ ನೇತೃತ್ವದಲ್ಲಿ ಸೈಕಲ್ ಜಾಥಾ ಜರುಗಿತು.   ಬ್ಯಾಳಿ ಕಾಟಾದಿಂದ ಆರಂಭವಾದ ಸೈಕಲ್ ಜಾಥಾಗೆ ಯುವ ನಾಯಕರಾದ ರಾಹುಲ್ ಹಾಗೂ ಪ್ರಿಯಾಂಕಾ ಅವರು ಚಾಲನೆ ನೀಡಿದರು. ಜಾಥಾ ನಗರದ ವಿವಿಧ ರಸ್ತೆಗಳಲ್ಲಿ ಸಂಚರಿಸಿ, ಸಂಗೊಳ್ಳಿ ರಾಯಣ್ಣ …

Read More »

‘ಕೋವಿಡ್‌ ನಿರ್ವಹಣೆ: ಸರ್ಕಾರ ವಿಫಲ’

ಹಾವೇರಿ: ‘ಕೋವಿಡ್‌ ಎರಡನೇ ಅಲೆ ನಿರ್ವಹಣೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ. ಅಗತ್ಯ ವೈದ್ಯಕೀಯ ಸೌಲಭ್ಯಗಳು ಮತ್ತು ಸಿದ್ಧತೆಯ ಕೊರತೆಯಿಂದ ಸಾವಿರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದಕ್ಕೆ ಸರ್ಕಾರವೇ ನೇರ ಹೊಣೆ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ಆರೋಪಿಸಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಆಮ್ಲಜನಕ ಸೌಲಭ್ಯವುಳ್ಳ ಹಾಸಿಗೆ, ವೆಂಟಿಲೇಟರ್‌ಗಳು ಸಿಗದೆ ಜನರು ಸಾವು-ನೋವು ಅನುಭವಿಸಿದ್ದಾರೆ. ತಜ್ಞರ ಶಿಫಾರಸುಗಳನ್ನು ಸರ್ಕಾರ ನಿರ್ಲಕ್ಷ್ಯ ಮಾಡಿತು. …

Read More »

ಪೆಟ್ರೋಲ್-ಡೀಸೆಲ್-ಗ್ಯಾಸ್ ಬೆಲೆಏರಿಕೆ ವಿರೋಧಿಸಿ ದೇಶಾದ್ಯಂತ ಕಾಂಗ್ರೆಸ್ ಸೈಕಲ್ ಜಾಥಾ

ಬೆಂಗಳೂರು, ಜು.7- ಪೆಟ್ರೋಲ್, ಡೀಸೆಲ್, ಗ್ಯಾಸ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ದೇಶಾದ್ಯಂತ ಇಂದು ಸೈಕಲ್ ಜಾಥಾದ ಮೂಲಕ ಪ್ರತಿಭಟನೆ ನಡೆಸಿದ್ದು, ರಾಜ್ಯದಲ್ಲೂ ಕಾಂಗ್ರೆಸ್ ನಾಯಕರು ವಿಧಾನಸಭಾ ಕ್ಷೇತ್ರಗಳಲ್ಲಿ ಸೈಕಲ್ ತುಳಿದು ತಮ್ಮ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಉಡುಪಿಯಲ್ಲಿ ಮತ್ತು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮೈಸೂರಿನಲ್ಲಿದ್ದು, ಅಲ್ಲಿಯೇ ಸೈಕಲ್ ಜಾಥಾದಲ್ಲಿ ಭಾಗವಹಿದ್ದಾರೆ. ಬೆಂಗಳೂರಿನ ಕೇಂದ್ರ, ಉತ್ತರ, ದಕ್ಷಿಣ ಮತ್ತು ಗ್ರಾಮಾಂತರ ಜಿಲ್ಲಾ …

Read More »

ಯಡಿಯೂರಪ್ಪ ಮತ್ತು ಅವರ ಮಗ ಜೆಸಿಬಿಯಲ್ಲಿ ಅಗೆದು ಹಣ ಮಾಡುತ್ತಿದ್ದಾರೆ: ಸಿದ್ದು ಆಕ್ರೋಶ

ಮೈಸೂರು: ಇದು ಭಂಡ ಸರಕಾರ. ಮಾನವೀಯತೆಯ ಇಲ್ಲದ ಸರಕಾರ. ಬಿಪಿಎಲ್ ಕಾರ್ಡ್ ದಾರರಿಗೆ ತಲಾ 10 ಸಾವಿರ ಕೊಡಬೇಕಿತ್ತು. ನಮ್ಮ ಸರಕಾರ ಇದ್ದಿದ್ದರೆ 10 ಸಾವಿರ ಹಣ, 10 ಕೆಜಿ ಅಕ್ಕಿ ಕೊಡುತ್ತಿದ್ದೆವು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇವರು ದುಡ್ಡು ಹೊಡೆಯುವ ಕೆಲಸ ಮಾಡುತ್ತಿದ್ದಾರೆ. ಇಂತಹ ಕೆಟ್ಟ ಸರಕಾರವನ್ನು ನನ್ನ ರಾಜಕೀಯ ಜೀವನದಲ್ಲೇ ನೋಡಿರಲಿಲ್ಲ. ಯಡಿಯೂರಪ್ಪ ಮತ್ತು ಅವರ ಮಗ ಜೆಸಿಬಿಯಲ್ಲಿ ಅಗೆಯುತ್ತಾ …

Read More »

ಪಕ್ಷದ ಹಿರಿಯ ನಾಯಕರಿಂದ ಶೋಭಾಗೆ ದೆಹಲಿ ಕರೆ: ಸಚಿವ ಸ್ಥಾನ ಸಿಗುವ ಸಾಧ್ಯತೆ ?

ಕಾರ್ಕಳ: ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಕೇಂದ್ರದಲ್ಲಿ ಸಚಿವ ಸ್ಥಾನ ಸಿಗುವ ಸಾಧ್ಯತೆಯಿದೆ.   ದೆಹಲಿಗೆ ಬರುವಂತೆ ಪಕ್ಷದ ರಾಷ್ಟ್ರಿಯ ನಾಯಕರಿಂದ ಕರೆ ಬಂದಿದೆ ಎಂದು ಸಂಸದೆ ಆಪ್ತ ಸಹಾಯಕರು ಉದಯವಾಣಿ ಗೆ ಮಾಹಿತಿ ನೀಡಿದ್ದಾರೆ. ಇಂದು ನಡೆಯಲಿರುವ ಕೇಂದ್ರ ಸಂಪುಟ ಪುನಾರಚನೆಯಲ್ಲಿ ರಾಜ್ಯಕ್ಕೆ ಸಂಬಂಧಿಸಿ ಕೆಲ ಮಹತ್ವದ ಬೆಳವಣಿಗೆ ನಿರೀಕ್ಷಿಸಲಾಗಿದೆ. ರಾಜ್ಯದಿಂದ ಇಬ್ಬರಿಗೆ ಸಂಪುಟದಲ್ಲಿ ಸ್ಥಾನ ಸಿಗಬಹುದು ಎಂಬ ನಿರೀಕ್ಷೆ ಇದೆ. ಕೋವಿಡ್ ಸೋಂಕಿಗೆ ಬಲಿಯಾಗಿ ಸಾವನ್ನಪ್ಪಿದ್ದ …

Read More »