Breaking News

ರಾಜಕೀಯ

ಸ್ಟಾರ್ ದಂಪತಿ ನಡುವಿನ ಬ್ಯಾಟಿಂಗ್ ಆಟದಲ್ಲಿ ಗೆದ್ದವರ್ಯಾರು..?

ನಟಿ ಅನುಷ್ಕಾ ಹಾಗೂ ವಿರಾಟ್ ಕೊಹ್ಲಿ ದಂಪತಿಯನ್ನ ನೋಡೋದೆ ಒಂದು ಖುಷಿ. ಅದರಲ್ಲೂ ಅವರಿಬ್ಬರ ಆಟಗಳು ಮನರಂಜನೆ ನೀಡುತ್ವೆ. ಅನುಷ್ಕಾ ಆಗಾಗ ವಿರಾಟ್ ಕೊಹ್ಲಿಯನ್ನ ರೇಗಿಸ್ತಾ ಇರ್ತಾರೆ. ಒಬ್ಬರಿಗೊಬ್ಬರು ಕಾಳೆದುಕೊಳ್ತಾ ಇರ್ತಾರೆ. ಆದ್ರೆ ಇದೀಗ ಇಬ್ಬರ ನಡುವೆ ಬ್ಯಾಟಿಂಗ್ ಪಂದ್ಯವೊಂದು ನಡೆದಿದೆ. ಅದರಲ್ಲಿ ಗೆದ್ದವರ್ಯಾರು ಗೊತ್ತಾ..? ಎರಡು ಬೆರಳಲ್ಲಿ ಬ್ಯಾಟ್ ಹಿಡಿದು ಬ್ಯಾಲೆನ್ಸ್ ಮಾಡುವ ಪಂದ್ಯವದು.‌ ವಿರಾಟ್ ಕೊಹ್ಲಿ ಒಂದು ಕಡೆ ಹಿಡಿದ್ರೆ, ಮತ್ತೊಂದು ಕಡೆ ಅನುಷ್ಕಾ ಶರ್ಮಾ. ಆದ್ರೆ …

Read More »

ಐಎಎಸ್, ಐಪಿಎಸ್ ಅಧಿಕಾರಿಗಳ ಮಧ್ಯೆ ವಾರ್: ಫೇಸ್ ಬುಕ್ ನಲ್ಲಿ ತಾರಕಕ್ಕೇರಿದ ರೂಪಾ, ರೋಹಿಣಿ ಸಿಂಧೂರಿ ನಡುವೆ ಫೈಟ್

ಬೆಂಗಳೂರು : ಐಎಎಸ್, ಐಪಿಎಸ್ ಅಧಿಕಾರಿಗಳ ಮಧ್ಯೆ ವಾರ್ ಮುಂದುವರೆದಿದೆ. ಫೇಸ್ ಬುಕ್ ನಲ್ಲಿ ರೂಪ ಹಾಗೂ ರೋಹಿಣಿ ಸಿಂಧೂರಿ ಮಧ್ಯೆ ಫೈಟ್ ತಾರಕಕ್ಕೇರಿದೆ. ರೂಪಾ ಹಾಕುವ ಫೇಸ್ ಬುಕ್ ಪೋಸ್ಟ್ ಬಗ್ಗೆ ರೋಹಿಣಿ ಸಿಂಧೂರಿ ಪತಿ ಕೆಟ್ಟದಾಗಿ ಟ್ರೋಲ್ ಮಾಡಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.. ಈ ಕುರಿತು ಅಪರಿಚಿತ ವ್ಯಕ್ತಿಯಿಂದ ಡಿ.ರೂಪಾಗೆ ಮಾಹಿತಿ ಬಂದಿದೆ. ಫೇಸ್ ಬುಕ್ ನಲ್ಲಿ ರೋಹಿಣಿ ಸಿಂಧೂರಿ ಬಗ್ಗೆ ಯಾವುದೇ ಪೋಸ್ಟ್ ಹಾಕಬೇಡಿ.. …

Read More »

ನಾವು ಮತ್ತೆ ಕಾಂಗ್ರೆಸ್ ಗೆ ಬರುತ್ತೇವೆ ಎಂಬ ಆತಂಕ ಸಿದ್ದರಾಮಯ್ಯಗೆ ಬೇಡ: ಎಚ್. ವಿಶ್ವನಾಥ್

ಮೈಸೂರು: ಸಿದ್ದರಾಮಯ್ಯರನ್ನು ಜೆಡಿಎಸ್‌ ನಿಂದ ಕಿತ್ತೆಸೆದಾಗ ಇದೇ ಡಿ ಕೆ ಶಿವಕುಮಾರ್, ನಾನು, ಎಸ್.ಎಂ.ಕೃಷ್ಣ ಎಲ್ಲಾ ಸೇರಿ ಅವರನ್ನು ಕಾಂಗ್ರೆಸ್ ಗೆ ಸೇರಿಸಿಕೊಂಡಿದ್ದೆವು‌. ಅವಾಗ ಸಿ ದ್ದರಾಮಯ್ಯ ಬಂದರೆ ಪ್ರಳಯವಾಗುತ್ತದೆ ಎಂದು ಯಾರಾದರೂ ಹೇಳಿದ್ದರಾ? ನಾವೆಲ್ಲ ಮತ್ತೆ ಕಾಂಗ್ರೆಸ್ ಗೆ ಬರುತ್ತೇವೆ ಎಂಬ ಆತಂಕ ಸಿದ್ದರಾಮಯ್ಯಗೆ ಬೇಡ ಎಂದು ಎಂಎಲ್‌ಸಿ ಹೆಚ್.ವಿಶ್ವನಾಥ್ ಹೇಳಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಡಿ.ಕೆ. ಶಿವಕುಮಾರ್ ಒಬ್ಬ ಸಂಘಟನಾ ಚತುರ. ಆದರೆ ಅವರು ಕರೆದಾಕ್ಷಣ …

Read More »

ಬಾಯಿ ಮುಚ್ಚಿದರೆ ಸರಿ- ಚಕ್ರವರ್ತಿಗೆ ಪ್ರಿಯಾಂಕಾ ಅವಾಜ್

ಬಿಗ್‍ಬಾಸ್ ಮನೆಲಿ ಸೈಲೆಂಟ್ ಆಗಿದ್ದ ಪ್ರಿಯಾಂಕ ತಿಮ್ಮೇಶ್ ಇದೀಗ ಜೋರು ಧ್ವನಿಯಲ್ಲಿ ಚಕ್ರವರ್ತಿ ಅವರಿಗೆ ಅವಾಜ್ ಹಾಕಿದ್ದಾರೆ. ಬಿಗ್‍ಬಾಸ್ ಮನೆಯಲ್ಲಿ ಜಗಳದ ಬೆಂಕಿ ಹೊತ್ತಿ ಉರಿಯುತ್ತಿದೆ. ಅವರು ನೇರವಾಗಿಲ್ಲ. ನಾಟಕೀಯ, ಸ್ಕೋಪ್ ತಗೆದುಕೂಳ್ಳುತ್ತಿದ್ದೀಯಾ? ಎಂದು ನನಗೆ ಹೇಗೆ ಹೇಳುತ್ತಿರುತ್ತಿರಾ ಎಂದು ಪ್ರಿಯಾಂಕಾ ಸುದೀಪ್ ಮುಂದೆ ಹೇಳಿಕೊಂಡಿದ್ದರು. ಕಟ್ಟೆಪಂಚಾಯ್ತಿಯಲ್ಲಿ ಈ ವಿಷಯನ್ನು ಇತ್ಯರ್ಥಮಾಡಿ ಸುದೀಪ್ ರಾಜಿ ಮಾಡಿದ್ದರು. ಈ ಹಿಂದೆ ಚಕ್ರವರ್ತಿ ಮತ್ತು, ಪ್ರಿಯಾಂಕಾ ನಡುವೆ ಹಲವು ಸಣ್ಣ ಸಣ್ಣ ವಿಚಾರಗಳಿಗೆ …

Read More »

ಸಮ್ಮತಿಯಿಂದ ನಡೆದ ದೈಹಿಕ ಸಂಪರ್ಕ ಅಪರಾಧವಲ್ಲ:ಮಾಧುಸ್ವಾಮಿ

ಉಡುಪಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಕಸ್ಮಿಕ ಘಟನೆಗೆ ಬಲಿಯಾಗಿದ್ದಾರೆ. ನಾವೆಲ್ಲ ಶಾಸಕರು ಜಾರಕಿಹೊಳಿ ಬಗ್ಗೆ ಅನುಕಂಪವಿಟ್ಟುಕೊಂಡಿದ್ದೇವೆ ಎಂದು ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಸಚಿವರು, ಸಿಡಿ ಬಹಿರಂಗ ಪ್ರಕರಣ ಇದೊಂದು ಕಾನೂನಾತ್ಮಕ ಹಾಗೂ ನೈತಿಕ ವಿಚಾರ. ನೈತಿಕವಾಗಿ ಹೊಣೆಹೊತ್ತು ಅವರು ರಾಜೀನಾಮೆ ನೀಡಿದ್ದಾರೆ. ಕಾನೂನಾತ್ಮಕವಾಗಿಯೂ ಸಮಸ್ಯೆ ಇದೆ ಎನಿಸಲ್ಲ ಎಂದರು. ಸಮ್ಮತಿಯಿಂದ ನಡೆದ ದೈಹಿಕ ಸಂಪರ್ಕ ಅಪರಾಧವಲ್ಲ ಎಂದು ಸುಪ್ರೀಂ ಕೋರ್ಟ್ ಕೂಡ ಹೇಳಿದೆ. …

Read More »

ಧಾರವಾಡ: ಮನೆ ಮಗನಂತೆ ಸಾಕಿರುವ ಎತ್ತಿಗೆ ಹುಟ್ಟುಹಬ್ಬ; 8 ಕೆಜಿ ಕೆಕ್ ಕತ್ತರಿಸಿ ಸಂಭ್ರಮಿಸಿದ ರೈತ ಕುಟುಂಬ

ಧಾರವಾಡ: ರೈತರ ಜೀವಾಳವೆಂದರೆ ಜಾನುವಾರುಗಳು. ಆಧುನಿಕತೆ ಎಷ್ಟೇ ಮುಂದುವರಿದರೂ ರೈತರು ಕೃಷಿಗೆ ಅವಲಂಬಿಸುವುದು ಜಾನುವಾರುಗಳನ್ನೆ. ಕೃಷಿ ಚಟುವಟಿಕೆಯಲ್ಲಿ ಎತ್ತುಗಳು ಪ್ರಮುಖವಾಗಿ ಸಹಾಯಕ್ಕೆ ಬರುತ್ತವೆ. ಇದೇ ಕಾರಣಕ್ಕೆ ಎತ್ತುಗಳನ್ನು ಅನೇಕರು ಸಾಕುತ್ತಾರೆ. ಹೀಗೆ ಸಲಹುವ ರೈತರು ಮನೆಯ ಸದಸ್ಯರಂತೆ ಅವುಗಳನ್ನು ಕಾಣುತ್ತಾರೆ. ಆದರೆ ಇಷ್ಟೆಲ್ಲ ಪ್ರೀತಿ ತೋರಿಸಿದರೂ ಕೆಲವು ಸಂದರ್ಭದಲ್ಲಿ ಉಂಟಾಗುವ ಆರ್ಥಿಕ ಸಂಕಷ್ಟದಿಂದಾಗಿ ಕೃಷಿಯ ಮೂಲ ಆಧಾರವಾಗಿರುವ ಎತ್ತುಗಳನ್ನೇ ಮಾರಾಟ ಮಾಡುವ ಅನಿವಾರ್ಯತೆಯೂ ಬರುತ್ತದೆ. ಇದೇ ರೀತಿ ಮನೆಯಲ್ಲಿಯೇ ಜನಿಸಿದ …

Read More »

ಎಂಎಸ್‌ಎಂಇಗಳಿಗೆ ಶೇ 30ರಷ್ಟು ಜಮೀನು: ಜಗದೀಶ ಶೆಟ್ಟರ್‌

ಬೆಂಗಳೂರು: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ)ಯಿಂದ ಅಭಿವೃದ್ಧಿಪಡಿಸುತ್ತಿರುವ ಕೈಗಾರಿಕಾ ಪ್ರದೇಶಗಳಲ್ಲಿ ಶೇಕಡ 30ರಷ್ಟು ಜಮೀನನ್ನು ಮಧ್ಯಮ, ಸಣ್ಣ ಮತ್ತು ಅತಿಸಣ್ಣ ಕೈಗಾರಿಕೆಗಳಿಗೆ (ಎಂಎಸ್‌ಎಂಇ) ಮೀಸಲಿಡಲಾಗುವುದು ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ತಿಳಿಸಿದರು. ಕ್ರೆಡೈ ಕರ್ನಾಟಕ ವತಿಯಿಂದ ಶನಿವಾರ ಆಯೋಜಿಸಿದ್ದ ‘ಕ್ರೆಡೈ ಜ್ಞಾನ ಸರಣಿ’ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ರಾಜ್ಯದ ಅಭಿವೃದ್ಧಿಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ಮಹತ್ವದ್ದು. ಮಧ್ಯಮ, ಸಣ್ಣ ಮತ್ತು ಅತಿಸಣ್ಣ ಕೈಗಾರಿಕೆಗಳಿಗೆ ಹೆಚ್ಚು ಉತ್ತೇಜನ …

Read More »

ಇಂದು ಬೆಳಗಾವಿಯಲ್ಲಿ ಪುಲ್ವಾಮ ಹುತಾತ್ಮ ಯೋಧನ ಅಂತ್ಯಕ್ರಿಯೆ

ಬೆಳಗಾವಿ: ಪುಲ್ವಾಮಾದಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ ಹುತಾತ್ಮರಾದ ವೀರಯೋಧ ಕಾಶಿರಾಮ ಬೋಮನಹಳ್ಳಿ ಅವರ ಪಾರ್ಥಿವ ಶರೀರವನ್ನ ಬೆಳಗಾವಿಗೆ ತರಲಾಗಿದೆ.     ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದ ಯೋಧ ಕಾಶಿರಾಮ್, ಉಗ್ರರ ದಾಳಿಯಿಂದ ಹುತಾತ್ಮರಾಗಿದ್ರು. ನಿನ್ನೆ ರಾತ್ರಿ ಯೋಧನ ಪಾರ್ಥಿವ ಶರೀರವನ್ನ ವಿಶೇಷ‌ ವಾಹನದಲ್ಲಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ತರಲಾಗಿತ್ತು. ಇಂದು ಯೋಧನ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.   ವಿಜಯಪುರ ಮೂಲದ ಯೋಧ ಜಮ್ಮು ಕಾಶ್ಮೀರದ …

Read More »

ವಿದ್ಯುತ್‌ ಪರಿವರ್ತಕಗಳ ಎತ್ತರಿಸಲು ಸೂಚನೆ

ಬೆಂಗಳೂರು: ಬೆಳಗಾವಿ, ಬಾಗಲಕೋಟೆ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಪದೇ ಪದೇ ಪ್ರವಾಹ ಸೃಷ್ಟಿಯಾಗುವ ಪ್ರದೇಶಗಳಲ್ಲಿರುವ ವಿದ್ಯುತ್‌ ಪರಿವರ್ತಕಗಳನ್ನು ಎತ್ತರದಲ್ಲಿಡಲು ತಕ್ಷಣ ಕ್ರಮ ಕೈಗೊಳ್ಳುವಂತೆ ಇಂಧನ ಇಲಾಖೆಯ ಅಧಿಕಾರಿಗಳಿಗೆ ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಸೂಚಿಸಿದರು. ಶನಿವಾರ ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಅವರು, ‘ಬೆಳಗಾವಿಯ ಚಿಕ್ಕೋಡಿ ತಾಲ್ಲೂಕು, ಬಾಗಲಕೋಟೆಯ ಬೀಳಗಿ, ಮುಧೋಳ, ಬಾದಾಮಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಪ್ರದೇಶಗಳಲ್ಲಿ ಪ್ರವಾಹದಿಂದ ವಿದ್ಯುತ್‌ ಪರಿವರ್ತಕಗಳಿಗೆ …

Read More »

ಲಾಕ್‌ಡೌನ್‌ ಸಡಿಲಿಕೆ : ಜುಲೈ 5 ರಿಂದ ವಂಡರ್‌ಲಾ ಪ್ರಾರಂಭ

ಬೆಂಗಳೂರು: ಲಾಕ್‌ಡೌನ್‌ ಸಡಿಲಿಕೆ ಬಳಿಕ ಜುಲೈ 5 ರಿಂದ ವಂಡರ್‌ ಲಾ ಅಮ್ಯೂಸ್ಮೆಂಟ್‌ ಪಾರ್ಕ್‌ನನ್ನು ಶೇ.50 ರಷ್ಟು ತೆರೆಯುವುದಾಗಿ ವಂಡರ್‌ಲಾ ಹಾಲಿಡೇಸ್ ತಿಳಿಸಿದೆ. ಕಳೆದ ಎರಡು ತಿಂಗಳಿನಿಂದ ಲಾಕ್‌ಡೌನ್‌ನಿಂದಾಗಿ ವಂಡರ್‌ಲಾ ಪಾರ್ಕ್‌ನನ್ನು ಮುಚ್ಚಲಾಗಿತ್ತು. ಇದೀಗ ಸರ್ಕಾರ ರೆಸ್ಟೋರೆಂಟ್ ಹಾಗೂ ಅಮ್ಯೂಸ್ಮೆಂಟ್‌ ಪಾರ್ಕ್‌ಗಳಿಗೆ ಶೇ.50 ರಷ್ಟು ಸಾಮರ್ಥ್ಯದಲ್ಲಿ ತೆರೆಯಲು ಅವಕಾಶ ನೀಡಿದೆ. ಜನರ ಆರೋಗ್ಯದ ಹಿತದೃಷ್ಟಿಯಿಂದ ಎಲ್ಲಾ ಸುರಕ್ಷತೆಯವನ್ನು ಹಾಗೂ ಸರ್ಕಾರದ ಕೋವಿಡ್‌ ಮಾರ್ಗಸೂಚಿಯನ್ನು ಕಟ್ಟುನಿಟ್ಟಿನಿಂದ ಪಾಲಿಸಲಿದೆ ಎಂದು ವಂಡೆರ್‌ಲಾ ವ್ಯವಸ್ಥಾಪಕ …

Read More »