Breaking News

ರಾಜಕೀಯ

ಒಂದೇ ದಿನ 8 ಅಂಗಡಿಗಳ ಕಳ್ಳತನ: ಮೆಡಿಕಲ್​ ಶಾಪ್​ಗಳೇ ಇವ್ರಿಗೆ ಟಾರ್ಗೆಟ್​

ಹಾವೇರಿ: ಒಂದೇ ದಿನ ಎಂಟು ಅಂಗಡಿಗಳಲ್ಲಿ ಸರಣಿ ಕಳ್ಳತನ ಮಾಡಿದ್ದಾರೆ ಕಳ್ಳರು. ಮೆಡಿಕಲ್ ಅಂಗಡಿಗಳನ್ನೇ ಟಾರ್ಗೆಟ್ ಮಾಡಿ ಹಣ ದೋಚಲು ಯತ್ನ ಮಾಡುತ್ತಿದ್ದ ಕಳ್ಳರ ಆಟಗಳು, ಸಿಸಿಟಿವಿಯಲ್ಲಿ ಸೆರೆಯಾಗಿದೆ. ಜಿಲ್ಲೆಯ ಹಾನಗಲ್ ಪಟ್ಟಣ ಹಾಗೂ ಅಕ್ಕಿಆಲೂರು ಗ್ರಾಮದಲ್ಲಿ ಈ ಸರಣಿ ಕಳ್ಳತನ ನಡೆದಿದೆ. ಎಂಟು ಅಂಗಡಿಗಳ ಪೈಕಿ ಎರಡು ಕಡೆ 1 ಸಾವಿರ ಹಾಗೂ 5 ಸಾವಿರ ಕದ್ದು ಎಸ್ಕೇಪ್​ ಆಗಿದ್ದಾರೆ ಖದೀಮರು. ಮಾಹಿತಿ ಸಿಕ್ಕ ಕೂಡಲೇ ಶ್ವಾನ ಹಾಗೂ …

Read More »

ಅಂಗನವಾಡಿ ಕೇಂದ್ರಗಳಿಗೆ ಮೊಟ್ಟೆ ಸರಬರಾಜು 30 ಗ್ರಾಂ ತೂಕದ ಕಳಪೆ ಗುಣಮಟ್ಟದ ಮೊಟ್ಟೆಗಳು ಪೂರೈಕೆ

ರಾಯಚೂರು: ಜಿಲ್ಲೆಯಾದ್ಯಂತ ಅಂಗನವಾಡಿ ಕೇಂದ್ರಗಳಿಗೆ ಮೊಟ್ಟೆ ಸರಬರಾಜು ಮಾಡಲಾಗುತ್ತಿದೆ. ಮಕ್ಕಳ ಪೌಷ್ಠಿಕತೆಗೆ, ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರ ಪ್ರತಿ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಮೊಟ್ಟೆಗಳನ್ನ ಪೂರೈಕೆ ಮಾಡುತ್ತಿದೆ. ಕಡ್ಡಾಯವಾಗಿ ಪ್ರತಿ ಮಗುವಿಗೂ 60 ಗ್ರಾಂ ತೂಕದ ಮೊಟ್ಟೆ ನೀಡಬೇಕು. ಆದ್ರೆ ರಾಯಚೂರು ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲೂ ಕೇವಲ 30 ಗ್ರಾಂ ತೂಕದ ಕಳಪೆ ಗುಣಮಟ್ಟದ ಮೊಟ್ಟೆಗಳು ಪೂರೈಕೆಯಾಗುತ್ತಿದ್ಯಂತೆ. ಹೀಗಾಗಿ ಅಂಗನವಾಡಿ ಮಕ್ಕಳಿಗೆ ಪೂರೈಕೆ ಆಗ್ತಿರೋ ಮೊಟ್ಟೆಯಲ್ಲೂ ಹಣ ಲೂಟಿ ಮಾಡ್ತಿದ್ದಾರೆ …

Read More »

ಕೊಪ್ಪಳ; ರೈತ ಮಾರುವಾಗ ಭತ್ತಕ್ಕೆ ರೇಟಿಲ್ಲ, ವ್ಯಾಪಾರಿಗಳಿಗೆ ಮಾತ್ರ ದುಬಾರಿ ಲಾಭ

ಕೊಪ್ಪಳ: ಇದೊಂದು ನಾಣ್ನುಡಿ ಘಟನೆ ಇದ್ದಂತೆ ಇದೆ. ಹಲ್ಲು ಇದ್ದಾಗ ಕಡಲೆ ಇಲ್ಲ, ಕಡಲೆ ಇದ್ದಾಗ ಹಲ್ಲು ಇಲ್ಲ ಎಂಬಂತೆ ರೈತರಲ್ಲಿ ಭತ್ತವಿದ್ದಾಗ ರೇಟು ಇರಲಿಲ್ಲ. ಈಗ ರೈತರಲ್ಲಿ ಭತ್ತವಿಲ್ಲ ಆದರೆ ಭತ್ತ ದುಬಾರಿಯಾಗಿದೆ. ಇದರಿಂದಾಗಿ ರೈತರಿಗಿಂತ ಅಧಿಕವಾಗಿ ವ್ಯಾಪಾರಿಗಳಿಗೆ ಲಾಭವಾಗುತ್ತಿದೆ. ಲಾಕ್​ಡೌನ್ ನಿಂದಾಗಿ ಭತ್ತದ ದರ ಇಳಿಕೆಯಾಗಿತ್ತು, ಆದರೆ, ಅನ್​ಲಾಕ್ ಆಗುತ್ತಿದ್ದಂತೆ ಭತ್ತದ ದರ ಏರಿಕೆಯಾಗಿದೆ. ಕಡಿಮೆ ದರದಲ್ಲಿ ಖರೀದಿಸಿದ ಭತ್ತವನ್ನು ಈಗ ದುಬಾರಿ ದರಕ್ಕೆ ವ್ಯಾಪಾರಿಗಳು ಮಾರಾಟ …

Read More »

ಒಂದೂವರೆ ವರ್ಷದಲ್ಲಿ 150ಕ್ಕೂ ಹೆಚ್ಚು ಕೃಷಿ ಹೊಂಡಗಳ ನಿರ್ಮಾಣ; ಧಾರವಾಡ ಜಿಲ್ಲೆಯ ರೈತರ ಮೊಗದಲ್ಲಿ ಮಂದಹಾಸ

ಧಾರವಾಡ: ನೀರು ಭೂಮಿಯ ಮೇಲಿನ ಅತ್ಯಮೂಲ್ಯ ಸಂಪನ್ಮೂಲ. ಗಿಡಗಳಿಂದ ಹಿಡಿದು ಕಣ್ಣಿಗೆ ಕಾಣದ ಜೀವಿಗಳವರೆಗೆ ಈ ನೀರೆ ಆಸರೆ. ಅದರಲ್ಲೂ ರೈತರ ಪಾಲಿಗೆ ನೀರು ಎನ್ನುವುದು ಬಹು ಮುಖ್ಯವಾದ ಸಂಪನ್ಮೂಲ. ನೀರಿಲ್ಲದೆ ಕೃಷಿ ಮಾಡಲು ಸಾಧ್ಯವೇ ಇಲ್ಲ. ಇತ್ತೀಚಿನ ದಿನಗಳಲ್ಲಿ ಮನುಷ್ಯನ ಸ್ವಾರ್ಥದಿಂದಾಗಿ ಈ ಸಂಪನ್ಮೂಲದ ಕೊರತೆಯುಂಟಾಗುತ್ತಿದೆ. ನೀರನ್ನು ಹಿಡಿದಿಡುವ ಪ್ರಯತ್ನ ನಡೆಯದೇ ಇರುವುದು ಇದಕ್ಕೆ ಒಂದು ಕಾರಣವಾಗಿದ್ದರೆ, ನೀರನ್ನು ಅವಶ್ಯಕತೆಗಿಂತ ಹೆಚ್ಚು ಬಳಸುತ್ತಿರುವುದು ಮತ್ತೊಂದು ಕಾರಣ. ಈ ನಿಟ್ಟಿನಲ್ಲಿ …

Read More »

ನಾನು 8 ಬಾರಿ ಶಾಸಕನಾಗಿದ್ದೇನೆ. ನನಗೂ ಸಹ ಸಿಎಂ ಆಗುವ ಅರ್ಹತೆ ಇದೆ. ಆದರೆ.? ಉಮೇಶ ಕತ್ತಿ

ವಿಜಯಪುರ: ‘ನಾನು 8 ಬಾರಿ ಶಾಸಕನಾಗಿದ್ದೇನೆ. ನನಗೂ ಸಹ ಸಿಎಂ ಆಗುವ ಅರ್ಹತೆ ಇದೆ. ಆದರೆ ಸಿಎಂ ಕುರ್ಚಿ ಸದ್ಯಕ್ಕೆ ಖಾಲಿ ಇಲ್ಲ. ಸದ್ಯ ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿದ್ದಾರೆ. ಅವರ ಕುರ್ಚಿ ಖಾಲಿಯಾದ ಮೇಲೆ ನೋಡೋಣ’ ಎಂದಿದ್ದಾರೆ ಆಹಾರ ಸಚಿವ ಉಮೇಶ ಕತ್ತಿ ಹೇಳಿಕೆ ನೀಡಿದ್ದಾರೆ. ಈ ಮೂಲಕ ತಮಗೂ ಮುಂದಿನ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿ ಆಗಬೇಕೆಂದ ಮಹದಿಚ್ಛೆ ಇರುವುದನ್ನು ಅವರು ತೆರೆದಿಟ್ಟಿದ್ದಾರೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ …

Read More »

ಭವಿಷ್ಯನಿಧಿ ಚಂದಾದಾರರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್, ಖಾತೆಗೆ ಸರ್ಕಾರದಿಂದ ಹಣ ಜಮಾ

ನವದೆಹಲಿ: ಭವಿಷ್ಯ ನಿಧಿ ಖಾತೆದಾರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕೊರೊನಾದ ಸಂಕಷ್ಟ ನಡೆಯುತ್ತಿರುವ ಈ ಕಾಲದಲ್ಲಿ ಕೇಂದ್ರ ಸರ್ಕಾರ 31 ಮಾರ್ಚ್ 2022 ರವರೆಗೂ ಅವರ ಸಂಬಳದಿಂದ ಕಟ್​ ಆಗುವಂತಹ ಹಣವನ್ನ ಪಾವತಿಸಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​​ ಸೋಮವಾರ ಆತ್ಮನಿರ್ಭರ್​​ ಭಾರತ್​ ರೋಜಗಾರ್​ ಯೋಜನೆಯ ಅಡಿಯಲ್ಲಿ 30 ಜೂನ್​ 2021 ರವರೆಗೆ ನೀಡಲಾಗಿದ್ದ ಡೆಡ್​ಲೈನ್​ನ್ನು 31 ಮಾರ್ಚ್​ 2022ರವರೆಗೆ ವಿಸ್ತರಿಸಿರುವುದಾಗಿ ತಿಳಿಸಿದ್ದಾರೆ. ದೇಶದಲ್ಲಿ ಕೊರೊನಾ …

Read More »

ಮಾತು ಬಾರದ, ಕಿವಿ ಕೇಳದ ವಿಶೇಷ ಜೋಡಿ ಮದುವೆಯಲ್ಲಿ ಮಾಸ್ಕ್ ಬದಲಿಸಿಕೊಂಡು ದಾಂಪತ್ಯಜೀನಕ್ಕೆ ಕಾಲಿಡುವ ಮೂಲಕವಾಗಿ ಸುದ್ದಿಯಾಗಿದ್ದಾರೆ.

ಧಾರವಾಡ: ಮಾತು ಬಾರದ, ಕಿವಿ ಕೇಳದ ವಿಶೇಷ ಜೋಡಿ ಮದುವೆಯಲ್ಲಿ ಮಾಸ್ಕ್ ಬದಲಿಸಿಕೊಂಡು ದಾಂಪತ್ಯಜೀನಕ್ಕೆ ಕಾಲಿಡುವ ಮೂಲಕವಾಗಿ ಸುದ್ದಿಯಾಗಿದ್ದಾರೆ. ಸತ್ತೂರಿನ ಕುಮಾರ, ಧಾರವಾಡದ ಸಾರಸ್ವತಪುರದ ಶ್ವೇತಾ ವಿಶೇಷ ಚೇತನರಾಗಿದ್ದಾರೆ. ವಧುಗೆ ವರ ಮಾಸ್ಕ್ ಹಾಕುವುದು, ವರನಿಗೆ ವಧು ಮಾಸ್ಕ್ ಹಾಕುವ ಮೂಲಕ ಹಾರ ಬದಲಾಯಿಸಿದಂತೆ ಮಾಸ್ಕ್ ಬದಲಾಯಿಸಿ, ಬಳಿಕ ಸಂಪ್ರಾಯದಂತೆ ಅಕ್ಷತೆಯನ್ನೂ ಹಾಕಿ ನಡೆದ ಮದುವೆಯಾಗಿದ್ದಾರೆ. ಎರಡೂ ಮನೆ ಕಡೆಯವರ ಉಪಸ್ಥಿತಿಯಲ್ಲಿ ಸರಳವಾಗಿ ವಿವಾಹ ಸಮಾರಂಭ ನಡೆಯಿತು ವಿದ್ಯಾಕಾಶಿ ಧಾರವಾಡದಲ್ಲಿ …

Read More »

ಹುಬ್ಬಳ್ಳಿಯಿಂದ ವಿಮಾನಯಾನ ಸೇವೆ ಮತ್ತೆ ಆರಂಭ

ಹುಬ್ಬಳ್ಳಿ: ಲಾಕ್ ಡೌನ್ ವೇಳೆ ಹುಬ್ಬಳ್ಳಿಯಿಂದ ವಿವಿಧ ಮಹಾನಗರಗಳಿಗೆ ಸಂಪರ್ಕಿಸುವ ವಿಮಾನಯಾನ ಸೇವೆಯನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದ ಇಂಡಿಗೋ ಸಂಸ್ಥೆ ಜುಲೈ 1 ರಿಂದ ಮತ್ತೆ ವಿಮಾನಯಾನ ಸೇವೆ ಪುನರಾರಂಭ ಮಾಡುವುದಾಗಿ ತಿಳಿಸಿದೆ. ಹುಬ್ಬಳ್ಳಿಯಿಂದ ಮುಂಬೈ, ಚೆನೈ, ಬೆಂಗಳೂರು, ಕಣ್ಣೂರು, ಕೊಚ್ಚಿ ಮಹಾನಗರಗಳಿಗೆ ವಿಮಾನಯಾನ ಸಂಪರ್ಕ ಸೇವೆ ಮತ್ತೆ ಆರಂಭಗೊಳ್ಳಲಿದೆ. ಜುಲೈ 9 ರಿಂದ ಹುಬ್ಬಳ್ಳಿ- ಹೈದ್ರಾಬಾದ್ ಅಲಯನ್ಸ್ ಏರ್ ವಿಮಾನ ಸೇವೆ ಆರಂಭವಾಗಲಿದೆ. ಅಗಸ್ಟ್ 2 ರಿಂದ ಹುಬ್ಬಳ್ಳಿ – …

Read More »

ಎಂಟು ಅಂಗಡಿಗಳಲ್ಲಿ ಸರಣಿ ಕಳ್ಳತನ

ಹಾವೇರಿ: ಎಂಟು ಅಂಗಡಿಗಳಲ್ಲಿ ಸರಣಿ ಕಳ್ಳತನವಾಗಿರುವ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಅಕ್ಕಿಆಲೂರು ಮತ್ತು ಹಾನಗಲ್ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ನಾಲ್ಕು ಮೆಡಿಕಲ್ ಶಾಪ್, ಒಂದು ಕಿರಾಣಿ ಮತ್ತು ತರಕಾರಿ ಅಂಗಡಿ ಸೇರಿದಂತೆ ಎಂಟು ಅಂಗಡಿಗಳಿಗೆ ಖದೀಮರು ಕನ್ನ ಹಾಕಿದ್ದಾರೆ. ನಾಲ್ಕು ಅಂಗಡಿಗಳಲ್ಲಿ ಒಂದು ಸಾವಿರ, ಐದು ಸಾವಿರ ಹೀಗೆ ಕೈಗೆ ಸಿಕ್ಕಷ್ಟು ಹಣವನ್ನ ದೋಚಿಕೊಂಡು ಖದೀಮರು ಪರಾರಿಯಾಗಿದ್ದಾರೆ. ಇನ್ನು ನಾಲ್ಕು ಅಂಗಡಿಗಳಲ್ಲಿ ಕಳ್ಳತನಕ್ಕೆ ಯತ್ನಿಸಿದ್ದರೂ ಏನೂ ಸಿಗದೇ …

Read More »

ರೇಖಾ ಕದಿರೇಶ್ ಹತ್ಯೆ ಪ್ರಕರಣದಲ್ಲಿ ಇನ್ನಿಬ್ಬರ ಬಂಧನ; ಬಂಧಿತರ ಸಂಖ್ಯೆ 7ಕ್ಕೆ ಏರಿಕೆ

ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಅವರ ಸಹೋದರಿ ಮಾಲಾ ಮತ್ತು ಪುತ್ರ ಅರುಳ್ ಅವರುಗಳನ್ನು ಕಾಟನ್‌ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಳೆದ 3 ದಿನಗಳಿಂದ ತೀವ್ರ ವಿಚಾರಣೆ ನಡೆಸಿದ್ದ ಪೊಲೀಸರು ರೇಖಾ ಕದಿರೇಶ್ ಹತ್ಯೆಯಲ್ಲಿ ಮಾಲಾ, ಅರುಳ್ ಪಾತ್ರದ ಬಗ್ಗೆ ಸಾಕ್ಷ್ಯ ದೊರಕಿದ ಕಾರಣ ಬಂಧಿಸಿದ್ದಾರೆ. ಈಮೂಲಕ ರೇಖಾ ಕದಿರೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಈವರೆಗೆ ಕೇಸ್‌ನಲ್ಲಿ ಈವರೆಗೆ ಬಂಧಿತರ ಸಂಖ್ಯೆ 7ಕ್ಕೆ …

Read More »