Breaking News

ರಾಜಕೀಯ

ಆಡಳಿತ ಪಕ್ಷದಲ್ಲಿ ಭ್ರಷ್ಟಾಚಾರದಲ್ಲೂ ಪೈಪೋಟಿ: ಸಿದ್ದರಾಮಯ್ಯ

ಬೆಂಗಳೂರು: ‘ರಾಜ್ಯದಲ್ಲಿರುವ ಲೂಟಿಕೋರ ಬಿಜೆಪಿ ಸರ್ಕಾರದಲ್ಲಿ ಹಣ ದೋಚಲು ಆಡಳಿತ ಪಕ್ಷದವರ ನಡುವೆಯೇ ಕಿತ್ತಾಟ ನಡೆಯುತ್ತಿದೆ. ಜಿದ್ದಿಗೆ ಬಿದ್ದವರಂತೆ ಭ್ರಷ್ಟಾಚಾರದಲ್ಲೂ ಪೈಪೋಟಿಯಲ್ಲಿ ತೊಡಗಿದ್ದಾರೆ’ ಎಂದು ವಿರೋಧ ‍ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜನ್ಮದಿನದ ಅಂಗವಾಗಿ ಅರ್ಚಕರು, ಆಟೊ ಚಾಲಕರು, ಆಶಾ ಕಾರ್ಯಕರ್ತರಿಗೆ ಪಡಿತರ ಕಿಟ್ ವಿತರಿಸಲು ಯುವ ಕಾಂಗ್ರೆಸ್ ವತಿಯಿಂದ ಮಲ್ಲೇಶ್ವರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಆಡಳಿತ ಪಕ್ಷದವರೇ ಸರ್ಕಾರದ ಭ್ರಷ್ಟಾಚಾರದ …

Read More »

ವಿಶ್ವ ಅಪ್ಪಂದಿರ ದಿನ: ಅಯ್ಯೋ! ಅಪ್ಪ ಇಲ್ಲವಲ್ಲ…

ತುಮಕೂರು: ‘ಅಯ್ಯೋ… ಅಪ್ಪ ಇಲ್ಲವಲ್ಲ ಎಂಬ ಕೊರಗು ಸದಾ ನೆನಪಿನಲ್ಲಿ ಕಾಡುತ್ತಿದೆ. ವಿಧಿಯಾಟ, ಕೋವಿಡ್ ನಮ್ಮ ತಂದೆಯನ್ನು ಬಲಿಪಡೆಯಿತು’ ಎಂದು ಹೇಳುತ್ತಲೇ ಮೇಘನ ಮಾತು ನಿಲ್ಲಿಸಿದರು. ತುಮಕೂರು ತಾಲ್ಲೂಕಿನ ಮಲ್ಲಸಂದ್ರ ಸಮೀಪದ ಹಬ್ಬತ್ತನಹಳ್ಳಿಯ ಈ ಬಾಲಕಿಯ ಕಣ್ಣೀರು ತಂದೆ, ತಾಯಿಗಳನ್ನು ಕಳೆದುಕೊಂಡ ಹಲವರ ಕಣ್ಣೀರ ಕಥೆಯಾಗಿದೆ. ಗಂಗರಾಜು ಅವರಿಗೆ ಇನ್ನೂ 45 ವರ್ಷ. ದುಡಿಯುವ ವಯಸ್ಸು, ಬದುಕುವ ಛಲ. ಪತ್ನಿ ಚೂಡಾವಣೆ, ಇಬ್ಬರು ಹೆಣ್ಣು ಮಕ್ಕಳ ಸಂಸಾರ. 14 ವರ್ಷದ …

Read More »

ರಾಜೀನಾಮೆ ನೀಡದೆ ಬಿಜೆಪಿಗೆ ಸೇರಿರುವ 10 ಶಾಸಕರನ್ನ ಪಕ್ಷಕ್ಕೆ ಸೇರಿಸಲ್ಲ : ಗುಂಡೂರಾವ್

ಪಣಜಿ : ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡದೆಯೇ ಬಿಜೆಪಿಗೆ ಸೇರಿರುವ 10 ಜನ ಶಾಸಕರಿಗೆ ಮತ್ತೆ ಕಾಂಗ್ರೇಸ್ ಪಕ್ಷಕ್ಕೆ ಪ್ರವೇಶ ನೀಡಲಾಗುವುದಿಲ್ಲ ಎಂದು ಗೋವಾ ಕಾಂಗ್ರೇಸ್ ಪ್ರಭಾರಿ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೇಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿಯವರ ಹುಟ್ಟುಹಬ್ಬದ ಅಂಗವಾಗಿ ಗೋವಾದ ಮಡಗಾಂವ ಹಾಗೂ ಪಣಜಿ ಸಮೀಪದ ಸಂತಾಕ್ರೂಜ್‍ನಲ್ಲಿ ಉಚಿತ ಸಸಿ ವಿತರಿಸಿದ ನಂತರ ಸುದ್ಧಿಗಾರರಿಗೆ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದರು. ಕಾಂಗ್ರೇಸ್ ಪಕ್ಷದಿಂದ ಬಿಜೆಪಿ ಸೇರಿರುವ …

Read More »

ಮಳೆ, ಪ್ರವಾಹದಿಂದ ಹಾನಿ: ಸಂತ್ರಸ್ತರಿಗೆ 5 ಲಕ್ಷ ರೂ. ಪರಿಹಾರ

ಬೆಂಗಳೂರು: ಮಳೆ, ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಮಳೆ ಪ್ರವಾಹದಿಂದ ಸಂಪೂರ್ಣ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ., ಭಾಗಶಃ ಹಾನಿಯಾಗಿರುವ ಮನೆ 1 ಲಕ್ಷ ರೂ., ನೀರು ನುಗ್ಗಿ ಹಾನಿಯಾಗಿದ್ದರೆ 10 ಸಾವಿರ ರೂಪಾಯಿ ಪರಿಹಾರ ಕೊಡಲಾಗುವುದು ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗೃಹ ಕಚೇರಿ ಕೃಷ್ಣಾದಲ್ಲಿ ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳು …

Read More »

ಜೂನ್ 21ರಿಂದ 16 ಜಿಲ್ಲೆಗಳಲ್ಲಿ ಅನ್ ಲಾಕ್,ಬೆಳಿಗ್ಗೆ 6ಗಂಟೆಯಿಂದ ಸಂಜೆ 5ಗಂಟೆಯವರೆಗೆ ಅಗತ್ಯವಸ್ತುಗಳ ಖರೀದಿಗೆ ಹಾಗೂ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ

ಬೆಂಗಳೂರು: ಜೂನ್ 21ರಿಂದ 16 ಜಿಲ್ಲೆಗಳಲ್ಲಿ ಅನ್ ಲಾಕ್ 2.0 ಜಾರಿಗೊಳಿಸುತ್ತಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. ಕೋವಿಡ್ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ, ಶೇ.5ಕ್ಕಿಂತ ಕಡಿಮೆ ಪಾಸಿಟಿವಿಟಿ ರೇಟ್ ಇರುವ 16 ಜಿಲ್ಲೆಗಳಲ್ಲಿ ಸೋಮವಾರದಿಂದ ಲಾಕ್ ಡೌನ್ ಸಡಿಲಿಕೆ ಮಾಡಲಾಗುತ್ತಿದ್ದು, 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರೆಸುತ್ತಿರುವುದಾಗಿ ತಿಳಿಸಿದರು. ಬೆಳಗಾವಿ, ಉತ್ತರ ಕನ್ನಡ, ಬೆಂಗಳೂರು ನಗರ, ಕೊಪ್ಪಳ, ಚಿಕ್ಕಬಳ್ಳಾಪುರ, ರಾಯಚೂರು, ಬಾಗಲಕೋಟೆ, …

Read More »

ಸರ್ಕಾರ ಕೈ ಬಿಟ್ಟರೂ,,,ತನ್ನ ಕುಲ ಭಾಂದವರ ಕೈ ಹಿಡಿದ ಸಹೋದರರು..!!

ಬೆಳಗಾವಿ : ಕೋವಿಡ್ ಮಹಾಮಾರಿಗೆ ಹೆದರಿ ಜನರು ತಮ್ಮ ಮನೆಗಳಿಂದ ಹೊರಗೆ ಬರಲು ಹಿಂದೆ ಮುಂದೆ ನೋಡುತ್ತಿರುವ ಈಗಿನ ಪರಿಸ್ಥಿತಿಯಲ್ಲಿ ಮೇದಾರ ಸಮಾಜದ ಹಿತೈಸಿಗಳಾದ ನಾಗೇಶ ಹಾಗೂ ಅರ್ಜುನ ಕಡೋಲಿ ಸಹೋದರರು ಕೊರೋನಾಗೂ ಹೆದರದೆ ತಮ್ಮ ಕಾಲಿಗೆ ಚಕ್ರ ಕಟ್ಟಿಕೊಂಡ ಹಾಗೆ ಓಡಾಡಿ ಬಡತನದ ಅಲೆಗೆ ಸಿಲುಕಿ ಸಂಕಷ್ಟ ಅನುಭವಿಸುತ್ತಿರುವ ಕುಟುಂಬಗಳಿಗೆ ಆಹಾರ ಧಾನ್ಯ ಕಿಟ್ ಗಳನ್ನು ವಿತರಿಸುತ್ತಿದ್ದಾರೆ.ಕಳೆದ ಕೆಲ ದಿನಗಳಿಂದ ಬೆಳಗಾವಿ ಜಿಲ್ಲೆಯ ವಿವಿಧ ಊರುಗಳಿಗೆ ಭೇಟಿ ನೀಡಿ …

Read More »

ನೆರೆ ಪ್ರವಾಹ ಸಂಬಂಧ ಪೂರ್ವಭಾವಿಯಾಗಿ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.

  ಗೋಕಾಕ : ನೆರೆಯ ಮಹಾರಾಷ್ಟ್ರ ಹಾಗೂ ಕಳೆದ ಒಂದು ವಾರದಿಂದ ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಪ್ರಸಕ್ತ ಸ್ಥಿತಿಯಲ್ಲಿ ಪ್ರವಾಹ ಭೀತಿ ಎದುರಾಗಿಲ್ಲ. ಆದರೂ ನದಿ ತೀರದ ಗ್ರಾಮಗಳ ಜನರ ಸುರಕ್ಷತೆಗಾಗಿ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವಂತೆ ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರ ಸಂಜೆ ತಮ್ಮ ಗೃಹ ಕಛೇರಿಯಲ್ಲಿ ನೆರೆ ಪ್ರವಾಹ ಸಂಬಂಧ ನಡೆದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ …

Read More »

ಸಿಎಂ ಯಡಿಯೂರಪ್ಪ ಓಕೆ ಅಂದ್ರೆ ಸೋಮವಾರದಿಂದಲೇ ಬಸ್ ಸಂಚಾರ ಆರಂಭ: ಸಾರಿಗೆ ಸಚಿವ ಲಕ್ಷ್ಮಣ ಸವದಿ

ಬೆಂಗಳೂರು: ಸೋಮವಾರದಿಂದ (ಜೂನ್ 21) ರಾಜ್ಯದಲ್ಲಿ ಬಸ್​ ಸಂಚಾರಕ್ಕೆ ಅಗತ್ಯವಿರುವ ಎಲ್ಲ ಸಿದ್ಧತೆ ನಡೆಸಿದ್ದೇವೆ. ಇಂದು ಸಂಜೆ ಸಿಎಂ ಯಡಿಯೂರಪ್ಪ ಅವರ ನೇತೃತ್ವದ ನಡೆಯಲಿರುವ ಸಭೆಯಲ್ಲಿ ಬಸ್ ಸಂಚಾರ ಆರಂಭದ ಕುರಿತು ತೀರ್ಮಾನ ಕೈಗೊಳ್ಳಲಾಗುವುದು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದರೆ ಕೊವಿಡ್ ನಿಯಮಾನುಸಾರ ಸೋಮವಾರದಿಂದಲೇ ಬಸ್ ಸಂಚಾರ ಆರಂಭಿಸಲಾಗುವುದು ಎಂದು ಬೆಂಗಳೂರಿನಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ​ ತಿಳಿಸಿದರು. ಸದ್ಯಕ್ಕೆ ಶೇಕಡಾ 50ರಷ್ಟು ಪ್ರಯಾಣಿಕರಿಗೆ ಅವಕಾಶ ನೀಡುವ ಯೋಚನೆಯಿದೆ. ಕೊರೊನಾ …

Read More »

‘ಬಂದ ಪುಟ್ಟಾ.. ಹೋದ ಪುಟ್ಟಾ’ ಎಂಬಂತಾಗಿದೆ ಅರುಣ್​ ಸಿಂಗ್ ಬೆಂಗಳೂರು ಭೇಟಿ: HDK ಟ್ವೀಟ್

ಬೆಂಗಳೂರು: ಕರ್ನಾಟಕ ಬಿಜೆಪಿ ಉಸ್ತುವಾರಿ ನಾಯಕ ಅರುಣ್​ ಸಿಂಗ್ ಬೆಂಗಳೂರು ಭೇಟಿ ಬಗ್ಗೆ ಹೆಚ್​ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿ ವ್ಯಂಗ್ಯವಾಡಿದ್ದಾರೆ. ಟ್ವಿಟರ್​ನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ ರಾಜ್ಯ ಬಿಜೆಪಿ ಸರ್ಕಾರದ ಭಿನ್ನಮತ ಶಮನಕ್ಕೆ ಬಂದಿದ್ದ ಹೈಕಮಾಂಡ್‌ನ ಬಡಪಾಯಿ ಪ್ರತಿನಿಧಿಯ ಕೆಲಸ ‘ಬಂದ ಪುಟ್ಟಾ.. ಹೋದ ಪುಟ್ಟಾ’ ಎಂಬಂತಾಗಿದೆ ಎಂದಿದ್ದಾರೆ. ಇವರು ಜಗಳ ಬಿಡಿಸಲು ಬಂದಿದ್ದಾ? ಜಗಳ ಹಚ್ಚಲು ಬಂದಿದ್ದಾ?ಪ್ರಧಾನಿ ಮೋದಿ ಪೌರುಷವೇನಿದ್ದರೂ ಪಾಕ್​ …

Read More »

ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ L& T ಕಂಪನಿಯ ಆಕ್ಸೀಜನ್ ಘಟಕ ಇಂದಿನಿಂದ ಸೇವೆಗೆ ಸಮರ್ಪಣೆ

ಬೆಳಗಾವಿ- ಇನ್ನು ಮುಂದೆ ಬೆಳಗಾವಿಯಲ್ಲಿ ಎಂದಿಗೂ ಆಕ್ಸೀಜನ್ ಸಮಸ್ಯೆ ಎದುರಾಗುವದಿಲ್ಲ,ಯಾಕಂದ್ರೆ ಶಾಸಕ ಅಭಯ ಪಾಟೀಲ ಅವರ ಪ್ರಯತ್ನಕ್ಕೆ ಫಲ ಸಿಕ್ಕಿದೆ.ಬೆಳಗಾವಿಯ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ L& T ಕಂಪನಿಯ ಆಕ್ಸೀಜನ್ ಘಟಕ ಇಂದಿನಿಂದ ಸೇವೆಗೆ ಸಮರ್ಪಣೆಯಾಗಿದೆ. ಬೆಳಗಾವಿಯಲ್ಲಿ ಆಮ್ಲಜನಕ ಕೊರತೆನ್ನು ಗಮನಿಸಿದ ಶಾಸಕ, ಅಭಯ ಪಾಟೀಲ ರವರು ಆಮ್ಲಜನಕ ತಯಾರಿಕಾ ಘಟವನ್ನು ಸ್ಥಾಪಿಸುವಂತೆ ಎಲ್&ಟಿ ಕಂಪನಿಯ ಅವರಿಗೆ ವೈಯಕ್ತಿಕವಾಗಿ ವಿನಂತಿಸಿದ್ದರು. ಅದಕ್ಕೆ ಸ್ಪಂದಿಸಿರುವ L&T ಕಂಪನಿ ನಿಗದಿತ ಅವಧಿಯಲ್ಲಿ ಆಮ್ಲಜನಕ. …

Read More »