Breaking News

ರಾಜಕೀಯ

ಚಿಕ್ಕಪ್ಪನಿಂದಲೇ ನೀಚ ಕೃತ್ಯ: ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ, ಬೆದರಿಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬ ಸಂಬಂಧಿ ಯುವತಿ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾನೆ. ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆರೋಪಿ ಬಿ.ಸಿ. ರೋಡ್ ಸಮೀಪದ ಭಂಡಾರಿ ಬೆಟ್ಟುವಿನಲ್ಲಿ ಘಟನೆ ನಡೆದಿದೆ. ತನ್ನ ಪತ್ನಿಯ ಅಕ್ಕನ ಮಗಳ ಮೇಲೆ ನಿರಂತರ ಆರೋಪಿ ನಿರಂತರ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ. ಅಜ್ಜಿಯ ಮನೆಯಲ್ಲಿ ವಿದ್ಯಾರ್ಥಿನಿ ವಾಸವಾಗಿದ್ದು, ಕಾಲೇಜಿಗೆ ಹೋಗಿ ಬರುತ್ತಿದ್ದಳು. ಆರೋಪಿ …

Read More »

ನಿರಾಶ್ರಿತರ ಕೇಂದ್ರದಲ್ಲಿ ಆರತಕ್ಷರತೆ – ಜನಮೆಚ್ಚುಗೆ

ಹೊಸಪೇಟೆ: ವಿವಾಹ ನಿಶ್ಚಯವಾಗಿರುವ ಯುವತಿಯೊಂದಿಗೆ ಬೇಗನೆ ಮದುವೆ ಮಾಡುವಂತೆ ಯುವಕನೊಬ್ಬ ಮೊಬೈಲ್ ಟವರ್ ಏರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ ಘಟನೆ ಹೊಸಪೇಟೆ ತಾಲ್ಲೂಕಿನಲ್ಲಿ ನಡೆದಿದೆ. ಮರಿಯಮ್ಮನಹಳ್ಳಿಯ ಚಿರಂಜೀವಿ(23) ಈ ರೀತಿ ಹೈಡ್ರಾಮಾ ಸೃಷ್ಠಿಸಿದ ಯುವಕ. ನಿಶ್ಚಯವಾಗಿದ್ದ ಯುವತಿಯೊಂದಿಗೆ ಬೇಗನೆ ಮದುವೆ ಮಾಡುವಂತೆ ಪೋಷಕರಿಗೆ ಒತ್ತಾಯಿಸಿ ಮೊಬೈಲ್ ಟವರ್ ಏರಿದ್ದಾನೆ. ಅಣ್ಣನ ಮದುವೆಯಾದ ನಂತರ ನಿನಗೆ ಮದುವೆ ಮಾಡುವುದಾಗಿ ಪೋಷಕರು ಹೇಳಿದರೂ ಕೇಳದ ಆತ ಮೊಬೈಲ್ ಟವರ್ ಏರಿ ಕುಳಿತಿದ್ದು, …

Read More »

ಉಡುಪಿ: ಜಿಲ್ಲೆಯ ತೆಂಕಪೇಟೆಯ ನಿವಾಸಿಯೊಬ್ಬರ ಮೈಗೆ ಕಬ್ಬಿಣ ಸ್ಟೀಲ್ ಇಂಡೋಲಿಯಂ ವಸ್ತುಗಳು ಅಂಟುತ್ತದೆ.

ಉಡುಪಿ: ಜಿಲ್ಲೆಯ ತೆಂಕಪೇಟೆಯ ನಿವಾಸಿಯೊಬ್ಬರ ಮೈಗೆ ಕಬ್ಬಿಣ ಸ್ಟೀಲ್ ಇಂಡೋಲಿಯಂ ವಸ್ತುಗಳು ಅಂಟುತ್ತದೆ. ಇದೊಂದು ಕೌತುಕ.. ವಿಸ್ಮಯ.. ಮೈಯ್ಯಲ್ಲಿ ಅಯಸ್ಕಾಂತೀಯ ಶಕ್ತಿಯಿದೆ. ಹೀಗಂತ ಒಂದು ವೀಡಿಯೋ ಉಡುಪಿಯಲ್ಲಿ ಶೇರ್ ಆಗುತ್ತಿದೆ. ವೈರಲ್ ಆಗುತ್ತಿರುವ ವೀಡಿಯೋದಲ್ಲಿರುವ ವ್ಯಕ್ತಿ ರಾಮದಾಸ್ ಶೆಟ್ ಎಂದು ಗುರುತಿಸಲಾಗಿದ್ದು, ಉಡುಪಿಯ ತೆಂಕಪೇಟೆ ಪೂರ್ಣಪ್ರಜ್ಞ ಕಾಲೇಜು ಸಮೀಪದವರಾಗಿದ್ದಾರೆ. ಟಿವಿಯಲ್ಲಿ ಈ ಹಿಂದೆ ಪ್ರಸಾರವಾದ ವೀಡಿಯೋಗಳನ್ನು ನೋಡಿ, ಮನೆಯಲ್ಲೇ ಇದ್ದ ರಾಮದಾಸ್ ತನ್ನನ್ನು ಪ್ರಯೋಗಕ್ಕೆ ಒಳಪಡಿಸಿದ್ದಾರೆ. ಈ ವೇಳೆ ಕೆಲವೊಂದು …

Read More »

ಸ್ಟಾರ್ ಪೊಲೀಸರ ಚೇಸ್ಟೇ ಜಾಸ್ತಿಯಾಗಿದೆ : ಡಿ.ಕೆ.ಶಿವಕುಮಾರ್

ಕೆಆರ್ ಪುರ, ಜೂ.14 : ಸ್ಟಾರ್ ಪೊಲೀಸರ ಚೇಸ್ಟೇ ಜಾಸ್ತಿಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪೊಲೀಸರ ವಿರುದ್ಧ ಹರಿಹಾಯ್ದರು. ರಾಮಮೂರ್ತಿನಗರ ವಾರ್ಡ್ ನ ಕಲ್ಕೆರೆಯಲ್ಲಿ ರೇಷನ್ ಕಿಟ್ ಗಳನ್ನು ವಿತರಸಿ ಅವರು ಮಾತನಾಡಿದರು. ಒಳ್ಳೆಯ ಪೊಲೀಸರು ಇದ್ದಾರೆ ಕಾನ್ಸ್ ಟೇಬಲ್ ಗಳು ಪಾಪ ಏನೂ ಮಾಡೋದಿಲ್ಲ ಆದರೆ ಸ್ಟಾರ್ ಗಳನ್ನು ಹಾಕಿಕೊಂಡವರು ಬಿಜೆಪಿ ಏಜೆಂಟರಂತೆ ವರ್ತಿಸುತ್ತಿರುತ್ತಾರೆ ಎಂದು ಆರೋಪಿಸಿದರು. ಜನರ ಕಷ್ಟಗಳಿಗೆ ಸ್ಪಂದನೆ ಮಾಡುವುದಕ್ಕಾಗಿಯೇ ಕಾಂಗ್ರೆಸ್ ಪಕ್ಷದ ವತಿಯಿಂದ …

Read More »

ಎಂಟು ಮಕ್ಕಳ ತಂದೆಗೆ ನೆರೆಮನೆಯಾಕೆ ಮೇಲೆ ಕಣ್ಣು, ತೋಟದಲ್ಲಿ ಕೈ ಹಿಡಿದು ಎಳೆದು ಹೆಣವಾದ

ಬಾಗಲಕೋಟೆ: ರಾತ್ರಿ ಪ್ರಶಾಂತವಾಗಿದ್ದ ಬಾದಾಮಿ ತಾಲೂಕಿನ ನೆರನೂರು ಗ್ರಾಮ ಬೆಳಗ್ಗೆ ಅಷ್ಟ್ರಲ್ಲಿ ದಂಗಾಗಿತ್ತು. ಪೊಲೀಸರ ಎಂಟ್ರಿ ಆಗಿತ್ತು. ಗ್ರಾಮಸ್ಥರೆಲ್ಲಾ ಒಂದ್ಕಡೆ ಸೇರಿ ಆತಂಕದಿಂದ ನೋಡ್ತಿದ್ರು. ಅಷ್ಟಕ್ಕೂ ನೆರನೂರು ಗ್ರಾಮದಲ್ಲಿ ಇಂತಹ ಸನ್ನಿವೇಶ ಸೃಷ್ಟಿಯಾಗಲು ಕಾರಣ ಇದೇ ಊರಿನ ಲಕ್ಷ್ಮಣ. ಲಕ್ಷ್ಮಣನಿಗೆ ರೇಣುಕಾ ಅನ್ನೋರ ಜತೆ ಮದ್ವೆಯಾಗಿತ್ತು. ಇವರ ದಾಂಪತ್ಯಕ್ಕೆ ಸಾಕ್ಷಿಯಾಗಿ ಏಳು ಹೆಣ್ಣು ಮಕ್ಕಳು, ಒಂದು ಗಂಡು ಮಗುವಿದೆ. ಆದ್ರೂ ಇದೇ ಊರಿನ ಮತ್ತೊಬ್ಬಳು ರೇಣುಕಾ ಅನ್ನೋಳ ಜೊತೆ ಅನೈತಿಕ …

Read More »

ಸಗಟು ಹಣದುಬ್ಬರ ದಾಖಲೆ ಮಟ್ಟ ಶೇ.12.94ಕ್ಕೆ ಏರಿಕೆ

ನವದೆಹಲಿ: ಸಗಟು ಮಾರಾಟ ದರ ಆಧರಿಸಿದ ಹಣದುಬ್ಬರ ಸೂಚ್ಯಂಕವು (ಡಬ್ಲ್ಯುಪಿಐ) ಮತ್ತೆ ಸಾರ್ವಕಾಲಿಕ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿದ್ದು, ಮೇ ತಿಂಗಳಿನಲ್ಲಿ ಶೇ.10.49ಕ್ಕೆ ತಲುಪಿದೆ. ಹಾಲಿ ಪರಿಸ್ಥಿತಿಗೆ ತಯಾರಾದ ಉತ್ಪನ್ನಗಳು ಹಾಗೂ ತೈಲ ಬೆಲೆಯಲ್ಲಿ ಆದ ಹೆಚ್ಚಳ ಹಣದುಬ್ಬರವೇ ಈ ಏರಿಕೆಗೆ ಕಾರಣ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ವರ್ಷದ ಏಪ್ರಿಲ್ ನಲ್ಲಿ ಸಗಟು ಹಣದುಬ್ಬರ ಪ್ರಮಾಣವು ಶೇ 10.49ರಷ್ಟಿತ್ತು. ಹಿಂದಿನ ವರ್ಷದ ಮೇ ತಿಂಗಳಿನಲ್ಲಿ ಇದು ಶೇ (-)3.37ರಷ್ಟಾಗಿತ್ತು. ಸಗಟು …

Read More »

ಸಂಚಾರಿ ವಿಜಯ್‌ ಸತ್ತಿಲ್ಲ, ಆಸ್ಪತ್ರೆ ವೈದ್ಯರಿಂದ ಸ್ಪಷ್ಟೀಕರಣ

ಬೆಂಗಳೂರು: ಸಂಚಾರಿ ವಿಜಯ್‌ ಸತ್ತಿಲ್ಲ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಅಂತ ಅವರಿಗೆ ಚಿಕಿತ್ಸೆ ನೀಡುತ್ತಿರುವ ಡಾ.ಅರುಣ್‌ ನಾಯ್ಕ್‌ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಇಂದು ಬೆಳಗ್ಗೆ ಸಂಚಾರಿ ವಿಜಯ್‌ ಸಹೋದರ) ಸಿದ್ದೇಶ್ವರ್‌ ಅವರು ನಮ್ಮ ಅಣ್ಣ (ಸಂಚಾರಿ ವಿಜಯ್‌) ಅವರನ್ನು ಜೀವಂತವಾಗಿ ಇಡುವ ನಿಟ್ಟಿನಲ್ಲಿ ಅವರ ಅಂಗಾಗಳ ದಾನಕ್ಕೆ ಮುಂದಾಗಿದ್ದೇವೆ, ಅವರು ನಮ್ಮೊಂದಿಗೆ ಇಲ್ಲ ಅಂತ ಹೇಳುವುದಕ್ಕೆ ಬೇಸರವಾಗುತ್ತಿದೆ ಅಂತ ಹೇಳಿದ್ದರು.   ಈ ನಡುವೆ ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ಆಪೋಲೋ …

Read More »

ಗುಜರಾತ್ ಬದಲಾಗಲಿದೆ.2022ರ ವಿಧಾನಸಭಾ ಚುನಾವಣೆ-ಎಲ್ಲಾ ಕ್ಷೇತ್ರದಲ್ಲೂ AAP ಸ್ಪರ್ಧೆ

ನವದೆಹಲಿ:ಮುಂಬರುವ 2022ರ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಎಲ್ಲಾ ಕ್ಷೇತ್ರಗಳಲ್ಲಿಯೂ ಸ್ಪರ್ಧಿಸಲಿದೆ ಎಂದು ದೆಹಲಿ ಮುಖ್ಯಮಂತ್ರಿ, ಆಪ್ ಸಂಸ್ಥಾಪಕ ಅರವಿಂದ್ ಕೇಜ್ರಿವಾಲ್ ಸೋಮವಾರ(ಜೂನ್ 14) ಘೋಷಿಸಿದ್ದಾರೆ. 2022ರ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲು ಅಹಮದಾಬಾದ್ ನಗರಕ್ಕೆ ಕೇಜ್ರಿವಾಲ್ ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ಹೇಳಿಕೆಯನ್ನು ನೀಡಿದ್ದಾರೆ ಎಂದು ವರದಿ ತಿಳಿಸಿದೆ. ಗುಜರಾತ್ ನ ಜನರು ಒಂದು ವೇಳೆ ದೆಹಲಿಯಲ್ಲಿ ಉಚಿತ ವಿದ್ಯುತ್ ನೀಡುತ್ತಾರೆ ಎಂದಾದರೆ ಗುಜರಾತ್ ನಲ್ಲಿ …

Read More »

ಕೊರೊನಾಗೆ ಬಲಿಯಾದ ಕುಟುಂಬಕ್ಕೆ 1 ಲಕ್ಷ ಪರಿಹಾರ; ಸಿಎಂ ಘೋಷಣೆ

ಬೆಂಗಳೂರು: ಕೊರೊನಾ ಮಹಾಮಾರಿಗೆ ಹಲವಾರು ಕುಟುಂಬಗಳು ಬಲಿಯಾಗಿದ್ದು, ಅನೇಕರು ಬೀದಿ ಪಾಲಾಗಿದ್ದಾರೆ. ಕೋವಿಡ್ ನಿಂದ ಕುಟುಂಬದ ಹಿರಿಯರು ಮೃತಪಟ್ಟರೆ ಅಂತಹ ಕುಟುಂಬದವರಿಗೆ 1 ಲಕ್ಷ ಪರಿಹಾರ ನೀಡುವುದಾಗಿ ಸಿಎಂ ಬಿ ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಪಿಎಲ್ ಕಾರ್ಡ್ ಹೊಂದಿದ ಕುಟುಂಬದ ಹಿರಿಯರು ಕೊರೊನಾದಿಂದ ಮೃತಪಟ್ಟಿದ್ದರೆ ಅಂತಹ ಕುಟುಂಬದ ಒಬ್ಬರಿಗೆ 1 ಲಕ್ಷ ಪರಿಹಾರ ನೀಡುವುದಾಗಿ ತಿಳಿಸಿದರು.

Read More »

ಇಹಲೋಕದ ಸಂಚಾರ ನಿಲ್ಲಿಸಿದ ‘ಸಂಚಾರಿ’

ಬೆಂಗಳೂರು: ಬೈಕ್ ಅಪಘಾತಕ್ಕೀಡಾಗಿ ಕೋಮಾದಲ್ಲಿದ್ದ ನಟ ಸಂಚಾರಿ ವಿಜಯ್ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಬೈಕ್ ಅಪಘಾತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ನಟನನ್ನು ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಮೆದುಳಿಗೆ ಗಂಭೀರ ಗಾಯಗಳಾಗಿ ನಿಷ್ಕ್ರಿಯವಾಗಿದ್ದರಿಂದ ಚಿಕಿತ್ಸೆ ಫಲಿಸದೇ ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.   ಇಂದು ಬೆಳಗ್ಗೆ ನಟನ ಆರೋಗ್ಯದ ಬಗ್ಗೆ ಅಪೊಲೋ ಆಸ್ಪತ್ರೆ ವೈದ್ಯ ಡಾ. ಅರುಣ್ ಕುಮಾರ್ ನಾಯ್ಕ್ ಮಾತನಾಡಿ, ಸಂಚಾರಿ ವಿಜಯ್ ಗೆ ಚಿಕಿತ್ಸೆ ಶುರುವಾಗಿ 36 …

Read More »