ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನಾ ಸಭೆ” ಸರ್ಕಾರಿ ಶಾಲೆಗಳಿಗೆ ಮಕ್ಕಳ ಪ್ರವೇಶಾತಿ ಹೆಚ್ಚಿಸುವಂತೆ ಕ್ರಮ ವಹಿಸಲು ಸಚಿವ ಮಧು ಬಂಗಾರಪ್ಪ ಸೂಚನೆ ಬೆಳಗಾವಿ,ಮುಖ್ಯಮಂತ್ರಿಗಳ ನಿರ್ದೇಶನದಂತೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಪ್ರವೇಶಾತಿ ಹೆಚ್ಚಾಗಬೇಕು. ಖಾಸಗಿ ಶಾಲೆಗಳ ಮಾದರಿಯಲ್ಲೇ ಸರ್ಕಾರಿ ಶಾಲೆಗಳು ನಿರ್ವಹಿಸುವದರ ಜೊತೆಗೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕು ಎಂದು ಪ್ರಾಥಮಿಕ ಪ್ರೌಢಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪ ಅವರು …
Read More »ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ವಿಜಯ ಮೋರೆ ಅವರಿಗೆ ಸನ್ಮಾನ
ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ವಿಜಯ ಮೋರೆ ಅವರಿಗೆ ಸನ್ಮಾನ ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ವಿಶೇಷ ಕಾರ್ಯಕ್ರಮದಲ್ಲಿ, ಬೆಳಗಾವಿಯ ಮಾಜಿ ಮೇಯರ್ ಮತ್ತು ಸಮಾಜ ಸೇವಕ ವಿಜಯ್ ಮೋರೆ ಅವರನ್ನು ಸಾರ್ವಜನಿಕ ಸೇವೆ ಮತ್ತು ಸಮಾಜಕ್ಕೆ ಸಹಾಯ ಮಾಡುವಲ್ಲಿ ಅವರ ಗಮನಾರ್ಹ ಕಾರ್ಯಕ್ಕಾಗಿ ಸನ್ಮಾನಿಸಲಾಯಿತು. ಈ ಕಾರ್ಯಕ್ರಮವನ್ನು ಬೆಂಗಳೂರಿನ ಸಮುದಾಯ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ತುಮಕೂರಿನ ಶ್ರೀ ಸಿದ್ದಗಂಗಾ ಮಠದ ಸರ್ಕಾರದೊಂದಿಗೆ ಆಯೋಜಿಸಲಾಗಿತ್ತು. ಈ ಸಮಾರಂಭದಲ್ಲಿ ಕರ್ನಾಟಕದಾದ್ಯಂತ …
Read More »ರೈತನಿಗೆ ದೋಷಯುತ ಕೊಯ್ಲುಯಂತ್ರ ನೀಡಿದ ಕಂಪನಿಗೆ ದಂಡ ಪರಿಹಾರಕ್ಕೆ ಗ್ರಾಹಕರ ಆಯೋಗ ಆದೇಶ
ರೈತನಿಗೆ ದೋಷಯುತ ಕೊಯ್ಲುಯಂತ್ರ ನೀಡಿದ ಕಂಪನಿಗೆ ದಂಡ ಪರಿಹಾರಕ್ಕೆ ಗ್ರಾಹಕರ ಆಯೋಗ ಆದೇಶ ಧಾರವಾಡ – ರೈತರೊಬ್ಬರಿಗೆ ದೋಷಯುತ ಕೊಯ್ಲುಯಂತ್ರ ನೀಡಿದ ಕಂಪನಿಯ ವಿರುದ್ಧ ಅನ್ನದಾತ ಜಿಲ್ಲಾ ಗ್ರಾಹಕ ಆಯೋಗಕ್ಕೆ ದೂರು ನೀಡಿದ ಬೆನ್ನಲೆ ಆಯೋಗವು ಕೂಲಂಕುಷವಾಗಿ ವಿಚಾರಣೆ ನಡೆಸಿ ರೈತನಿಗೆ ಕಂನಿಯಿಂದ ಪರಿಹಾರ ಜತೆಗೆ ದಂಡ ವಿಧಿಸುವ ಮೂಲಕ ನ್ಯಾಯ ಒದಗಿಸಿ ಆದೇಶ ಹೊರಡಿಸಿದೆ. ನವಲಗುಂದದ ನಿವಾಸಿ ದ್ಯಾಮಪ್ಪ ಹಂಚಿನಾಳ ಎನ್ನುವವರು ವೃತ್ತಿಯಲ್ಲಿ ವ್ಯವಸಾಯವನ್ನು ಅವಲಂಬಿಸಿದ್ದಾರೆ. ತಮ್ಮ ಉಪಜೀವನಕ್ಕಾಗಿ …
Read More »ಕೊಪ್ಪಳದ ಗಾಂಜಾ ಪ್ರಕರಣ ಶಿಫ್ಟ್ ವಿಚಾರ: ಗಂಗಾವತಿಗೆ ಮಸಿ ಬಳಿಯುವ ಯತ್ನ ಎಂದ ಜನಾರ್ದನ ರೆಡ್ಡಿ
ಗಂಗಾವತಿ: ರಾಮಾಯಣದಂತ ಪೌರಾಣಿಕ ಹಿನ್ನೆಲೆ, ವಿಜಯನಗರದ ಐತಿಹಾಸಿಕ ಹಿನ್ನೆಲೆಯ ನಂಟು ಹೊಂದಿರುವ ಗಂಗಾವತಿಯಂಥ ಕ್ಷೇತ್ರಕ್ಕೆ ಪೊಲೀಸ್ ಮತ್ತು ಅಬಕಾರಿ ಇಲಾಖೆಯ ಅಧಿಕಾರಿಗಳಾದ ನೀವು ಕಳಂಕ ಉಂಟು ಮಾಡಲು ಯತ್ನಿಸುತ್ತಿದ್ದೀರಿ ಎಂದು ಶಾಸಕ ಜಿ. ಜನಾರ್ದನ ರೆಡ್ಡಿ ಅಧಿಕಾರಿಗಳನ್ನು ಸಾರ್ವಜನಿಕವಾಗಿಯೇ ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು. ನಗರದ ತಾಲೂಕು ಪಂಚಾಯಿತಿ ಆವರಣದಲ್ಲಿರುವ ಮಂಥನ ಸಭಾಂಗಣದಲ್ಲಿ ಸೋಮವಾರ ನಡೆದ ವಿವಿಧ ಇಲಾಖೆಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, …
Read More »ವರದಕ್ಷಿಣೆ ಕಿರುಕುಳ ಆರೋಪ, ಐಎಸ್ಡಿ ಡಿವೈಎಸ್ಪಿ ವಿರುದ್ಧ ಎಫ್ಐಆರ್
ಬೆಂಗಳೂರು : ಡಿವೈಎಸ್ಪಿಯೊಬ್ಬರ ವಿರುದ್ಧ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. 41 ವರ್ಷದ ಮಹಿಳೆ ನೀಡಿರುವ ದೂರಿನನ್ವಯ ಆಂತರಿಕ ಭದ್ರತಾ ವಿಭಾಗದ (ಐಎಸ್ಡಿ) ಡಿವೈಎಸ್ಪಿ ಹಾಗೂ ಮತ್ತೋರ್ವ ಮಹಿಳೆಯ ವಿರುದ್ಧ ವರದಕ್ಷಿಣೆ ನಿಷೇಧ ಕಾಯ್ದೆ ಸೇರಿದಂತೆ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ಬೆಂಗಳೂರು ಈಶಾನ್ಯ ವಿಭಾಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ( ಅಪರಾಧ ಸಂಖ್ಯೆ 0033/2025). ತನಿಖೆ ಕೂಡ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ …
Read More »ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ
ಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ ಸಾಕಷ್ಟು ಹೆಸರು ಮಾಡಿದ್ದರು. ಕಳೆದೊಂದು ತಿಂಗಳ ಹಿಂದೆ ಹೃದಯಾಘಾತದಿಂದ (heart attack) ಮೃತಪಟ್ಟಿದ್ದರು. ಆದರೆ ಆ ವೈದ್ಯರ ಕೊಠಡಿ ತೆರೆದು ನೋಡಿದಾಗ ಅಲ್ಲೊಂದು ಆಘಾತವೇ ಎದುರಾಗಿದ್ದು, ಆಸ್ಪತ್ರೆಯ ಸಿಬ್ಬಂದಿ ಮತ್ತು ವೈದ್ಯರ ಕುಟುಂಬಸ್ಥರು ಅಕ್ಷರಶಃ ದಂಗಾಗಿದ್ದಾರೆ. ಮಾಟಮಂತ್ರ (Black magic) ಮಾಡಿರುವ ವಸ್ತುಗಳು ಪತ್ತೆ ಆಗಿವೆ. ಜೂನ್ 5 ರಂದು ಮಾಲೂರು ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ …
Read More »ದೆವ್ವ ಮೆಟ್ಕೊಂಡಿದೆ ಎಂದು ಮನಸೋ ಇಚ್ಛೆ ಥಳಿತ, ಮಹಿಳೆ ಸಾವು
ಶಿವಮೊಗ್ಗ, ಜುಲೈ 07: ದೆವ್ವ ಮೆಟ್ಕೊಂಡಿದೆ ಎಂದು ಮನಸೋಯಿಚ್ಛೆ ಥಳಿಸಿದ್ದ ಮಹಿಳೆ (woman) ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನುರು ಸಮೀಪದ ಜಂಬರಗಟ್ಟೆ ಗ್ರಾಮದಲ್ಲಿ ನಡೆದಿದೆ. ಗೀತಮ್ಮ(53) ಮೃತ ಮಹಿಳೆ. ಗೀತಮ್ಮ ಮೇಲೆ ಹಲ್ಲೆ ಮಾಡಿದ ಆಶಾ ವಿರುದ್ಧ ಕೊಲೆ ಕೇಸ್ ದಾಖಲಾಗಿದ್ದು, ಹೊಳೆಹೊನ್ನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.ಆಶಾ ಎಂಬ ಮಹಿಳೆ ತಮ್ಮ ಮೇಲೆ ಚೌಡಮ್ಮ ದೇವಿ ಬರುತ್ತಾಳೆ ಎಂದು ಊರವರಲ್ಲಿ ಮೌಡ್ಯತೆ ಹಬ್ಬಿಸಿದ್ದಳು. ಇದನ್ನೇ ನಂಬಿದ್ದ ಗೀತಮ್ಮ ಕುಟುಂಬಸ್ಥರು ದೆವ್ವ ಬಂದಿದೆ ಎಂದು …
Read More »ಮಂಜೂರಾದ ಆಸ್ಪತ್ರೆ ರದ್ದು: ‘ಇದು ಸಚಿವ ತಂಗಡಗಿ ಅಭಿವೃದ್ಧಿ ಮಾದರಿ’ : ಜನಾರ್ದನ್ ರೆಡ್ಡಿ ವಾಗ್ದಾಳಿ
ಗಂಗಾವತಿ (ಕೊಪ್ಪಳ): ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ವೆಂಕಟಗಿರಿ ಹಾಗೂ ಇರಕಲ್ ಗಡಾ ಹೋಬಳಿಗೆ ಮಂಜೂರಾಗಿದ್ದ ತಲಾ 30 ಹಾಸಿಗೆಗಳ ಎರಡು ಸಮುದಾಯ ಆಸ್ಪತ್ರೆಗಳನ್ನು ಸಚಿವ ಶಿವರಾಜ ತಂಗಡಗಿ ರದ್ದು ಮಾಡಿಸಿದ್ದಾರೆ. ಇದು ಸಚಿವ `ತಂಗಡಗಿ ಅಭಿವೃದ್ಧಿ ಮಾದರಿ’ ಎಂದು ಶಾಸಕ ಗಾಲಿ ಜನಾರ್ದನ್ ರೆಡ್ಡಿ ಅವರು ವಾಗ್ದಾಳಿ ನಡೆಸಿದರು. ನಗರದ ತಾಲೂಕು ಪಂಚಾಯತ್ ಆವರಣದಲ್ಲಿರುವ ಮಂಥನ ಸಭಾಂಗಣದಲ್ಲಿ ಸೋಮವಾರ ನಡೆದ ವಿವಿಧ ಇಲಾಖೆಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆಯ …
Read More »ಸಿಎಂ ಬದಲಾವಣೆ ವಿಚಾರ: ಈ ವಿಚಾರವಾಗಿ ಬಾಯಿ ಮುಚ್ಚಿಕೊಂಡು ಇರಬೇಕು ಎಂದು ಖರ್ಗೆ ಆದೇಶವಿದೆ: ಮಧು ಬಂಗಾರಪ್ಪ
ಗದಗ: “ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಗಳು ರಾಜ್ಯ ರಾಜಕೀಯದಲ್ಲಿ ಮತ್ತೆ ಸದ್ದು ಮಾಡುತ್ತಿರುವ ಈ ಹೊತ್ತಿನಲ್ಲಿ, ಈ ಬಗ್ಗೆ ಪ್ರತಿಕ್ರಿಯೆ ನೀಡದಂತೆ ಕಾಂಗ್ರೆಸ್ ಹೈಕಮಾಂಡ್ನಿಂದ ಸ್ಪಷ್ಟ ಸೂಚನೆ ಬಂದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಕಾಂಗ್ರೆಸ್ ನಾಯಕರಿಗೆ ‘ಈ ವಿಚಾರವಾಗಿ ಬಾಯಿ ಮುಚ್ಚಿಕೊಂಡು ಇರಬೇಕು’ ಎಂಬ ಸೂಚನೆ ನೀಡಿದ್ದಾರೆ” ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಇಂದು ಗದಗ ಜಿಲ್ಲೆಯಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು, ಸಿಎಂ …
Read More »ವಿಗ್ರಹ ಕಿತ್ತು ಹಾಕಿದ ಪ್ರಕರಣದಲ್ಲಿ ಇಬ್ಬರ ಬಂಧನ
ಶಿವಮೊಗ್ಗ: “ಹೊರವಲಯ ರಾಗಿಗುಡ್ಡದ ಬಂಗಾರಪ್ಪ ಕಾಲೊನಿಯಲ್ಲಿ ಶನಿವಾರ ನಡೆದ ವಿಗ್ರಹ ಕಿತ್ತು ದ್ವಂಸಕ್ಕೆ ಯತ್ನದ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಯಾರೇ ಆದರೂ ಕಾನೂನಿನ ವಿರುದ್ದ ಕ್ರಮ ತೆಗೆದುಕೊಂಡರೆ ಸೂಕ್ತ ಕ್ರಮ ಜರುಗಿಸಲಾಗುವುದು” ಎಂದು ಎಸ್ಪಿ ಮಿಥುನ್ ಕುಮಾರ್ ಎಚ್ಚರಿಸಿದ್ದಾರೆ. ಅಲ್ಲದೆ ದಲಿತ ದೌರ್ಜನ್ಯದ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸೈಯದ್ ಹಾಗೂ ನಿಯಾಮತ್ ಎಂಬುವರನ್ನು ಬಂಧಿಸಲಾಗಿದೆ. ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಘಟನೆ ಯಾಕೆ ನಡೆದಿದೆ ಎಂದು ತನಿಖೆ ನಡೆಸಲಾಗುತ್ತಿದೆ. ಅಕ್ರಮ …
Read More »
Laxmi News 24×7