ಬೆಂಗಳೂರು : ಕ್ರೇಜಿ ಸ್ಟಾರ್ ರವಿಚಂದ್ರನ್ ಇಂದು ಅವರ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಅದರ ಪ್ರಯುಕ್ತ ಅವರ ಹೊಸ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ‘ ಕನ್ನಡಿಗ ಚಿತ್ರದ ಟೀಸರ್ ಬಿಡುಗಡೆ ಮಾಡಲಾಗಿದ್ದು, ಯುಟ್ಯೂಬ್ ನಲ್ಲಿ ಗುಣಭದ್ರ ಎಂಬ ವಿದ್ವಾಂಸನ ಪಾತ್ರದ ಟೀಸರ್ ಬಿಡುಗಡೆಯಾಗಿದೆ . ಅದು , ತಲೆಮಾರುಗಳಿಂದ ಕನ್ನಡ ಭಾಷೆ , ಪರಂಪರೆಯ ಉಳಿವಿಗಾಗಿ ಹೋರಾಡಿದ ಕುಟುಂಬದ ಸದಸ್ಯನ ಪಾತ್ರವಾಗಿದೆ. ಅಲ್ಲದೆ ಈ ಚಿತ್ರದ ಮೂಲಕ ಟಾಮ್ ಆಲ್ಟರ್ …
Read More »ಜೂನ್ನಲ್ಲಿ ಎಷ್ಟು ಲಸಿಕೆ ಲಭ್ಯವಾಗಲಿದೆ ಎಂದು ಲೆಕ್ಕ ನೀಡಿದ ಆರೋಗ್ಯ ಸಚಿವಾಲಯ
ನವದೆಹಲಿ, ಮೇ 30: ಸುಮಾರು 12 ಕೋಟಿಯಷ್ಟು ಲಸಿಕೆ ಜೂನ್ ತಿಂಗಳಿನಲ್ಲಿ ಲಭ್ಯವಾಗಲಿದೆ ಎಂದು ಆರೋಗ್ಯ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ. ಮೇ ತಿಂಗಳಿನಲ್ಲಿ ಒಟ್ಟು 7.94 ಕೋಟಿಯಷ್ಟು ಲಸಿಕೆಯನ್ನು ಉತ್ಪಾದನೆ ಮಾಡಲಾಗಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಲಸಿಕೆಯನ್ನು ವಿತರಣೆಯ ಮಾದರಿ, ಜನಸಂಖ್ಯೆ ಮತ್ತು ವಾಕ್ಸಿನ್ ವೇಸ್ಟೇಜ್ ಪ್ರಮಾಣವನ್ನು ನೋಡಿಕೊಂಡು ಹಂಚಲಾಗುತ್ತದೆ ಎಂದು ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಇನ್ನು ಜೂನ್ ತಿಂಗಳಿನಲ್ಲಿ …
Read More »ಪೋಲೀಸರ ಮೇಲಿನ ಅಕ್ರಮ ಬಂಧನ ಆರೋಪ ಕೈ ಬಿಡಲು ನಿರಾಕರಿಸಿದ ಕೋರ್ಟ್
ಬೆಂಗಳೂರು: ಸರಗಳ್ಳತನ ಆರೋಪದಲ್ಲಿ ವ್ಯಕ್ತಿಯನ್ನು ಅಕ್ರಮ ಬಂಧನದಲ್ಲಿ ಇರಿಸಲಾಗಿತ್ತು ಎಂಬ ಆರೋಪದ ಪ್ರಕರಣದಲ್ಲಿ ಏಳು ಪೊಲೀಸರ ವಿರುದ್ಧ ನಡೆಯುತ್ತಿರುವ ವಿಚಾರಣೆ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ‘ಮುಗ್ಧರನ್ನು ಅಕ್ರಮವಾಗಿ ಬಂಧಿಸುವುದು ಮತ್ತು ಅವರನ್ನು ಕ್ರೂರವಾಗಿ ನಡೆಸಿಕೊಳ್ಳುವುದು ಪೊಲೀಸ್ ಅಧಿಕಾರಿಗಳ ಕರ್ತವ್ಯದ ಭಾಗ ಎಂದು ಪರಿಗಣಿಸಲು ಕಾನೂನಿನಲ್ಲಿ ಅವಕಾಶ ಇಲ್ಲ’ ಎಂದು ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಅವರಿದ್ದ ಪೀಠ ಅಭಿಪ್ರಾಯಪಟ್ಟಿತು. ‘ಒಬ್ಬ ವ್ಯಕ್ತಿಯನ್ನು 24 ಗಂಟೆಗಳಿಗೂ ಹೆಚ್ಚು ಕಾಲ ಲಾಕಪ್ನಲ್ಲಿ ಇಟ್ಟುಕೊಳ್ಳಲು ಅವಕಾಶ …
Read More »ರಾಜ್ಯದಲ್ಲಿ ಲಸಿಕೆ ಹಗರಣ; ಹೈಕೋರ್ಟ್ ಮಧ್ಯ ಪ್ರವೇಶಕ್ಕೆ ಡಿಕೆಶಿ ಮನವಿ
ಬೆಂಗಳೂರು, ಮೇ 29: ರಾಜ್ಯ ಸರ್ಕಾರ ಖರೀದಿಸಿದ ಲಸಿಕೆಯನ್ನು ಖಾಸಗಿ ಆಸ್ಪತ್ರೆಗಳಿಗೆ ಸರಬರಾಜು ಮಾಡಿ, ದುಬಾರಿ ಬೆಲೆಗೆ ಮಾರುತ್ತಿರುವ ಹಗರಣದ ಬಗ್ಗೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಮಧ್ಯ ಪ್ರವೇಶಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಜತೆ ಮಾಧ್ಯಮಗಳ ಮಾತನಾಡಿದ ಅವರು, “ಬೆಡ್ ಹಗರಣ ಬೆಳಕಿಗೆ ಬಂತು. ಬಿಜೆಪಿ ನಾಯಕರು ಒಂದು ಸಮುದಾಯವನ್ನು …
Read More »ಅನಾಥ ಮಕ್ಕಳಿಗೆ ಸರಕಾರದ ಆಸರೆ: ತಂದೆ-ತಾಯಂದಿರನ್ನು ಕಳೆದುಕೊಂಡ ಮಕ್ಕಳಿಗೆ ಮಾಸಿಕ 3,500 ರೂ.
ಕೊರೊನಾ 2ನೇ ಅಲೆ ಅದೆಷ್ಟೋ ಕುಟುಂಬಗಳನ್ನು ಕಾಡಿದೆ. ಸಾವಿರಾರು ಸಂಸಾರಗಳು ದುಡಿಯುವವರನ್ನು ಕಳೆದುಕೊಂಡಿವೆ. ಸಾವಿರಾರು ಮಕ್ಕಳು ಅಪ್ಪ-ಅಮ್ಮ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಇಂಥ ಎಳೆಯರಿಗೆ ಮತ್ತು ಆದಾಯದ ಆಧಾರಸ್ತಂಭ ಕಳೆದುಕೊಂಡವರಿಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಹಾಯದ ಹಸ್ತ ಚಾಚಿವೆ. ಬಾಲ ಸೇವಾ ಯೋಜನೆ ಕೇಂದ್ರ ಸರಕಾರದ ಸಲಹೆಯ ಮೇರೆಗೆ ರಾಜ್ಯ ಸರಕಾರವು ಕೊರೊನಾದಿಂದ ಹೆತ್ತವರನ್ನು ಕಳೆದುಕೊಂಡ ಮಕ್ಕಳಿಗೆ ಮುಖ್ಯಮಂತ್ರಿ ಬಾಲಸೇವಾ ಯೋಜನೆ ಪ್ರಕಟಿಸಿದೆ. ಈ ಮೂಲಕ ಪ್ರತೀ ತಿಂಗಳು 3,500 ರೂ. …
Read More »ಶಿಕ್ಷಕರ ಕೋವಿಡ್ ಆರೈಕೆ ಕೇಂದ್ರಕ್ಕೆ ಚಾಲನೆ
ಯಾದಗಿರಿ: ನಗರದ ಆರ್ಟಿಒ ಕಚೇರಿ ಹಿಂಭಾಗದಲ್ಲಿ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಆರಂಭಿಸಲಾದ ಶಿಕ್ಷಕರ ಕೋವಿಡ್ ಆರೈಕೆ ಕೇಂದ್ರಕ್ಕೆ ಲ್ಲಾ ಉಸ್ತುವಾರಿ ಸಚಿವ ಆರ್. ಶಂಕರ್ ಚಾಲನೆ ನೀಡಿದರು. ಕೋವಿಡ್ನಿಂದ ಮೃತಪಟ್ಟ 17 ಶಿಕ್ಷಕರ ಭಾವಚಿತ್ರಗಳಿಗೆ ಮಾಲಾರ್ಪಣೆ ಮಾಡಲಾಯಿತು.ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಾಂತಗೌಡ ಪಾಟೀಲ ಅವರು ಮೃತ ಶಿಕ್ಷಕರ ನೆನಪಿಗಾಗಿ ಶಾಲಾ ಆವರಣದಲ್ಲಿ ಸಸಿ ನೆಟ್ಟರು. ಶಾಸಕ ವೆಂಕಟರೆಡ್ಡಿ ಮುದ್ನಾಳ, ಸಂಸದ ರಾಜಾ ಅಮರೇಶ್ವರ ನಾಯಕ, …
Read More »ಶಾಸಕರ ಅನುದಾನದಲ್ಲಿ ಯಲ್ಲಾಪುರ ಕ್ಕೆ ನಾಲ್ಕು ಆಂಬುಲೆನ್ಸ್ ನೀಡಿದ ಶಿವರಾಮ ಹೆಬ್ಬಾರ್
ಕಾರವಾರ: ಶಾಸಕರ ಅನುದಾನದಲ್ಲಿ ಕೊರೊನಾ ರೋಗಿಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅವರು ತಮ್ಮ ವಿಧಾನಸಭಾ ಕ್ಷೇತ್ರ ಯಲ್ಲಾಪುರಕ್ಕೆ ನಾಲ್ಕು ಅಂಬುಲೆನ್ಸ್ ಖರೀದಿಸಿದ್ದಾರೆ. ಖರೀದಿಸಿದ ಅಂಬುಲೆನ್ಸ್ ಗಟ್ಟಿಮುಟ್ಟಾಗಿದೆಯೇ ಎಂದು ಪರೀಕ್ಷಿಸಲು ತಾವೇ ಸ್ವತ: ಹೊಸದಾಗಿ ಬಂದ ಅಂಬುಲೆನ್ಸ್ ಏರಿ ವಾಹನ ಚಲಾಯಿಸಿ ಟ್ರಯಲ್ ನೋಡಿದರು. ಯಲ್ಲಾಪುರದ ಪ್ರವಾಸಿ ಮಂದಿರದಿಂದ ಯಲ್ಲಾಪುರ ನಗರವನ್ನು ಒಂದು ಸುತ್ತುಹಾಕಿ ನಂತರ ಅಂಬುಲೆನ್ಸ್ ಸೇವೆಗೆ ಚಾಲನೆ ನೀಡಿದರು. ಸಚಿವ ಶಿವರಾಮ್ ಹೆಬ್ಬಾರ್ ರವರು …
Read More »ಜನ ಸಹಕರಿಸಿದರೆ ಜೂ.7ರ ನಂತರ ಲಾಕ್ಡೌನ್ ಇರಲ್ಲ : ಸಿಎಂ
ಬೆಂಗಳೂರು,- ಜನ ಅಗತ್ಯ ಸಹಕಾರ ನೀಡಿದರೆ ಜೂನ್ 7ರ ನಂತರ ಲಾಕ್ಡೌನ್ ಮುಂದುವರೆಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ 7ರವರೆಗೂ ಎಂದಿನಂತೆ ಲಾಕ್ಡೌನ್ ಮುಂದುವರೆಯಲಿದೆ. 7ರ ನಂತರ ಪರಿಸ್ಥಿತಿ ಅವಲೋಕಿಸಿ ಲಾಕ್ಡೌನ್ ವಿಸ್ತರಣೆ ಬಗ್ಗೆ ತೀರ್ಮಾನಿಸಲಾಗುವುದು ಎಂದರು. ಜನ ಕೊರೊನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಜೂನ್ 7ರ ನಂತರ ಲಾಕ್ಡೌನ್ ವಿಸ್ತರಣೆಯ ಅವಶ್ಯಕತೆ ಇರುವುದಿಲ್ಲ. ಹೀಗಾಗಿ ಜನರು ಲಾಕ್ಡೌನ್ ಸಂದರ್ಭದಲ್ಲಿ …
Read More »ರೈತರಿಗೆ ಬಿತ್ತನೆ ಬೀಜ ವಿತರಿಸಿದ ನಾಗಪ್ಪ ಶೇಖರಗೋಳ
ಗೋಕಾಕ: ನಗರದ ಎನ್ಎಸ್ಎಫ್ ಅತಿಥಿ ಗೃಹದ ಆವರಣದಲ್ಲಿ ಕೃಷಿ ಇಲಾಖೆಯಿಂದ ಸಹಾಯಧನದಲ್ಲಿ ಬಿತ್ತನೆ ಬೀಜ ವಿತರಣಾ ಕಾರ್ಯಕ್ರಮಕ್ಕೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಅವರು ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಮುಂಗಾರು ಹಂಗಾಮಿಗೆ ರೈತರಿಗೆ ಅನುಕೂಲವಾಗುವ ದೃಷ್ಟಿಯಿಂದ ರೈತ ಸಂರ್ಪಕ ಕೇಂದ್ರಗಳಾದ ಗೋಕಾಕ, ಅರಭಾವಿ, ಕೌಜಲಗಿ ಹಾಗೂ ಬೀಜ ಮಾರಾಟ ಕೇಂದ್ರಗಳ ಜೊತೆಗೆ 18 ಉಪ ಮಾರಾಟ ಕೇಂದ್ರಗಳಲ್ಲಿಯೂ ಬೀಜಗಳನ್ನು ವಿತರಿಸಲಾಗುತ್ತಿದೆ …
Read More »ಕೊರೊನಾ ಲಾಕ್ ಡೌನ್ ನಡುವೆಯೇ ದೇಶಾದ್ಯಂತ ಪೆಟ್ರೋಲ್-ಡೀಸೆಲ್ ದರದಲ್ಲಿ ಮತ್ತೆ ಏರಿಕೆ
ದೆಹಲಿ: ಕೊರೊನಾ ಲಾಕ್ ಡೌನ್ ನಡುವೆಯೇ ದೇಶಾದ್ಯಂತ ಪೆಟ್ರೋಲ್-ಡೀಸೆಲ್ ದರದಲ್ಲಿ ಮತ್ತೆ ಏರಿಕೆಯಾಗಿದೆ. ಪೆಟ್ರೋಲ್ ದರ ಲೀಟರ್ ಗೆ 25 ರಿಂದ 26 ಪೈಸೆ ಹಾಗೂ ಡೀಸೆಲ್ ದರ ಲೀಟರ್ ಗೆ 28ರಿಂದ 30 ಪೈಸೆ ಹೆಚ್ಚಳವಾಗಿದೆ. ಮೇ ತಿಂಗಳಲ್ಲಿ ಈವರೆಗೆ 15 ಬಾರಿ ತೈಲ ಬೆಲೆ ಏರಿಕೆಯಾಗಿದೆ. ಮುಂಬೈನಲ್ಲಿ ಪೆಟ್ರೋಲ್ ದರ ಲೀಟರ್ ಗೆ 100 ರೂ ಗಡಿ ದಾಟಿದ್ದು, 100.19 ರೂಪಾಯಿಯಾಗಿದೆ. ಡೀಸೆಲ್ ದರ 92.17 ರೂಪಾಯಿ …
Read More »
Laxmi News 24×7