Breaking News

ರಾಜಕೀಯ

ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಈ ವ್ಯಕ್ತಿ ಮಾಡಿದ್ದೇನು ಗೊತ್ತಾ?

ಕೋವಿಡ್-19 ಸಾಂಕ್ರಮಿಕ ರೋಗ ಇರುವುದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಬಹಳ ಅಗತ್ಯ. ಆದ್ರೆ ವ್ಯಕ್ತಿಯೋರ್ವ ಮೆಟ್ರೋ ರೈಲಿನಲ್ಲಿ ಪ್ರಯಾಣಿಸುವ ವೇಳೆ ಪ್ರಯಾಣಿಕರೊಂದಿಗೆ ಸಾಮಾಜಿಕ ಅಂತರವನ್ನು ಕಾಪಾಡಲು ಜುಗಾಡ(ಡಬ್ಬ)ವನ್ನು ಧರಿಸಿರುವ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ವೀಡಿಯೋದಲ್ಲಿ ವ್ಯಕ್ತಿಯು ತನ್ನನ್ನು ಸಂಪೂರ್ಣವಾಗಿ ನಾಲ್ಕು ಕಡೆಗಳಿಂದ ಬಾಕ್ಸ್ ಮಾದರಿ ಪ್ಲಾಸ್ಟಿಕ್ ಪರದೆಯಲ್ಲಿ ಕವರ್ ಮಾಡಿಕೊಂಡಿದ್ದಾನೆ. ಅಲ್ಲದೆ ಪ್ಲಾಸ್ಟಿಕ್ ಬಾಕ್ಸ್ ಒಳಗೆ ಆರಾಮವಾಗಿ ಕುಳಿತುಕೊಂಡು ತನ್ನ ಮೊಬೈಲ್‍ನನ್ನು ಸ್ಕ್ರೋಲ್ ಮಾಡುತ್ತಿರುವುದನ್ನು ಕಾಣಬಹುದಾಗಿದೆ. ಈ …

Read More »

ಆಂಬುಲೆನ್ಸ್ ದುಬಾರಿ ದರಕ್ಕೆ ಬ್ರೇಕ್!

ಶಿವಮೊಗ್ಗ: ಕೋವಿಡ್ ಸೋಂಕು ಹೆಚ್ಚಳವಾಗುತ್ತಿದ್ದು, ಆಂಬ್ಯುಲೆನ್ಸ್ ಎಗ್ಗಿಲ್ಲದೇ ಪಡೆಯುವ ಫೀಸ್ ಹಾವಳಿಗೆ ಇದೀಗ ಶಿವಮೊಗ್ಗದಲ್ಲಿ ಬ್ರೇಕ್ ಬಿದ್ದಿದೆ. ದುಬಾರಿ ಬಾಡಿಗೆ ಸುಲಿಗೆ ತಡೆಯಲು ಹೊಸ ಪ್ಲಾನ್ ಮಾಡಲಾಗಿದೆ. ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಆಂಬ್ಯುಲೆನ್ಸ್ ಮಾಫಿಯಾ ನಡೆಯುತ್ತಿದ್ದು ಅದನ್ನು ತಡೆಯಲು ಇದೀಗ ಪೋಲಿಸ್, ಆರ್.ಟಿ.ಒ. ಜಂಟಿಯಾಗಿ ಮಾಫಿಯಾ ವಿರುದ್ಧ ಕಾರ್ಯಾಚರಣೆ ನಡೆಸಿದೆ. ಆಂಬುಲೆನ್ಸ್‌ಗಳಿಗೆ ಪ್ರೀಪೇಯ್ಡ್ ವ್ಯವಸ್ಥೆ ಮಾಡಲಾಗಿದೆ. ಮೆಗ್ಗಾನ್‌ನಿಂದ ಕೊರೋನಾ ಸೋಂಕಿತರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗಳಿಗೆ ಕರೆದೊಯ್ಯುವ ವೇಳೆ …

Read More »

ಆಟೋ, ಕ್ಯಾಬ್ ಚಾಲಕರು, ಕಟ್ಟಡ ಕಾರ್ಮಿಕರಿಗೆ ಎಷ್ಟು ಪರಿಹಾರ?

ಬೆಂಗಳೂರು, ಮೇ 19; ಕೋವಿಡ್ 2ನೇ ಅಲೆಯು ಹರಡುವಿಕೆ ತಡೆಯಲು ಕರ್ನಾಟಕದಲ್ಲಿ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ. ಆಟೋ, ಕ್ಯಾಬ್ ಚಾಲಕರು ಲಾಕ್‌ಡೌನ್‌ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇವರಿಗಾಗಿ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ. ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸುಮಾರು 1,250 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಘೋಷಿಸಿದರು. ವಿವಿಧ ವರ್ಗದ ಜನರಿಗೆ ಸಹಾಯಕವಗುವಂತೆ ಪ್ಯಾಕೇಜ್ ಘೋಷಣೆ ಮಾಡಿದ್ದು, ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ …

Read More »

ಪೊಲೀಸರಿಗೆ ಹೆದರದ ಕಳ್ಳರು- ದರೋಡೆಕೋರರಿಗೆ ಕೊರೊನಾ ಅಂದ್ರೆ ಭಯ !

ಬೆಂಗಳೂರು, ಮೇ. 19: ಕೊರೊನಾ ಸೋಂಕಿಗೆ ಕಳ್ಳರು- ದರೋಡೆಕೋರರು ಕೂಡ ಹೆದರಿದ್ದಾರೆ. ಕೊರೊನಾ ಸೋಂಕು ಭಯದಿಂದ ಕ್ರಿಮಿನಲ್ ಗಳು ಕೂಡ ರಜೆ ಮೊರೆ ಹೋದಂತಿದೆ. ಕೊರೊನಾ ಭೀತಿ ಹಾಗೂ ಲಾಕ್ ಡೌನ್ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ಗಣನೀಯವಾಗಿ ಇಳಿಕೆಯಾಗಿವೆ. ಆದರೆ, ಸೈಬರ್ ಕಳ್ಳರು ಮಾತ್ರ ತಮ್ಮ ಕೈಚಳಕ ತೋರಿದ್ದಾರೆ. ಅರ್ಧಕ್ಕೆ ಅರ್ಧ ಪ್ರಕರಣ ಕಡಿಮೆ: ಒಂದಂಡೆ ಕೊರೊನಾ ಭೀತಿ. ಇನ್ನೊಂದಡೆ ಕೊರೊನಾ ಲಾಕ್ ಡೌನ್ ನಿಯಮ. ಹೀಗಾಗಿ …

Read More »

ಕೊರೊನಾ ರೋಗಿಗಳು ಆರಂಭದಲ್ಲಿ ಈ ತಪ್ಪುಗಳನ್ನು ಮಾಡಬೇಡಿ

ಕೊರೊನಾ ವೈರಸ್ ಲಕ್ಷಣಗಳು ಕಾಣಿಸಿಕೊಳ್ತಿದ್ದಂತೆ ತಕ್ಷಣ ಚಿಕಿತ್ಸೆ ಪಡೆಯಬೇಕು. ಸರಿಯಾದ ಸಮಯಕ್ಕೆ ಸರಿಯಾದ ಚಿಕಿತ್ಸೆ ಸಿಕ್ಕಿದಲ್ಲಿ ಮಾತ್ರ ಕೊರೊನಾ ಗೆಲ್ಲಲು ಸಾಧ್ಯ. ಅನೇಕರು ಕೊರೊನಾಕ್ಕೆ ಹೆದರಿ ಆಸ್ಪತ್ರೆಗೆ ಹೋಗುವುದಿಲ್ಲ. ಇದ್ರಿಂದ ಪರಿಸ್ಥಿತಿ ಉಲ್ಭಣಿಸುತ್ತದೆ. ಸಾಮಾನ್ಯವಾಗಿ ಕೊರೊನಾ ಲಕ್ಷಣ ಆರಂಭದಲ್ಲಿ ಸೌಮ್ಯವಾಗಿರುತ್ತದೆ. ಆದ್ರೆ ಒಳಗಿನಿಂದಲೇ ತೊಡಕು ಮಾಡುವ ವೈರಸ್, ರೋಗಿ ಆಸ್ಪತ್ರೆಗೆ ದಾಖಲಾಗುವಂತೆ ಮಾಡುತ್ತದೆ. ವೈದ್ಯರ ಪ್ರಕಾರ ಮೊದಲ ದಿನದಿಂದಲೇ ಕೆಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ರೋಗ ಲಕ್ಷಣಗಳನ್ನು ಎಂದಿಗೂ ಕಡೆಗಣಿಸಬಾರದು. …

Read More »

ಗದಗ ಜಿಮ್ಸ್ ಆಸ್ಪತ್ರೆ ಸಿಬ್ಬಂದಿ ಎಡವಟ್ಟಿಗೆ ಮಹಿಳೆ ಬಲಿ; ಸಂಬಂಧಿಕರ ಆರೋಪ

ಗದಗ: ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಆಸ್ಪತ್ರೆ ಸಿಬ್ಬಂದಿ ಎಡವಟ್ಟಿಗೆ ಬಲಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಉಸಿರಾಟ ಸಮಸ್ಯೆಯಿಂದ ಒದ್ದಾಡುತ್ತಿದ್ದ ಸುಮಿತ್ರಾ ಮನ್ನೂರ ಎಂಬ ಮಹಿಳೆ ಆಕ್ಸಿಜನ್ ಸಿಗದೆ ಮಹಿಳೆ ನರಳಿ ನರಳಿ ಮೃತಪಟ್ಟಿದ್ದಾರೆ ಎಂದು ಮಹಿಳೆ ಸಂಬಂಧಿಕರು ಆರೋಪಿಸುತ್ತಿದ್ದಾರೆ. ಮಹಿಳೆ ಆಕ್ಸಿಜನ್ ಮೇಲೆ ಚಿಕಿತ್ಸೆ ಪಡೆಯುತ್ತಿದ್ದರು. ಆಕ್ಸಿಜನ್ ತೆಗೆದು ಬೇರೆ ಮಷಿನ್ನನ್ನು ಅಳವಡಿಸಲು ಆಸ್ಪತ್ರೆ ಸಿಬ್ಬಂದಿ ಬಂದಿದ್ದರು. ಅಲ್ಟ್ರನೇಟಿವ್ ಆಕ್ಸಿಜನ್ ವ್ಯವಸ್ಥೆ ಮಾಡಿ ಅಂತ ಕುಟುಂಬಸ್ಥರು ಗೋಗರೆದರೂ ಆಸ್ಪತ್ರೆ …

Read More »

ತಮಿಳು ನಟ ವಿಜಯಕಾಂತ್ ಆಸ್ಪತ್ರೆಗೆ ದಾಖಲು

ಚೆನ್ನೈ: ದೇಸಿಯ ಮುರಪೊಕ್ಕು ದ್ರಾವಿಡ ಕಳಗಂ(ಡಿಎಂಡಿಕೆ) ಸಂಸ್ಥಾಪಕ ಹಾಗೂ ನಟ ವಿಜಯಕಾಂತ್ ಉಸಿರಾಟದ ಸಮಸ್ಯೆಯಿಂದ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಬುಧವಾರ ಮೇ 19 ವಿಜಯಕಾಂತ್‍ರವರಿಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಬೆಳಗ್ಗಿನ ಜಾವ ಸುಮಾರು 3 ಗಂಟೆ ಸುಮಾರಿಗೆ ಚೆನ್ನೈನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ. ಕಳೆದ ವರ್ಷವು ಅವರು ಹಲವು ಆರೋಗ್ಯ ಸಮಸ್ಯೆಗಳಿಂದ ಹೊಂದಿದ್ದರು. ವೈದ್ಯರ ತಂಡ ಇದೀ ವಿಜಯಕಾಂತ್‍ರವರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸುತ್ತಿದ್ದಾರೆ. ಅವರ ಪಕ್ಷದ ಸದಸ್ಯರು ವಿಜಯಕಾಂತ್‍ರವರು …

Read More »

ಜ್ಯೂನಿಯರ್ ಆರ್ಟಿಸ್ಟ್ ಗಳನ್ನಿಟ್ಟುಕೊಂಡು ವೇಶ್ಯಾವಾಟಿಕೆ; ಪ್ರೊಡಕ್ಷನ್ ಮ್ಯಾನೇಜರ್ ಬಂಧನ

ಹೈದರಾಬಾದ್​: ಸಿನಿಮಾ ಪ್ರೊಡ್ಯೂಸರ್ ಒಬ್ಬ ತೆಲುಗು ಸಿನಿಮಾ ಇಂಡಸ್ಟ್ರಿಯಲ್ಲಿ ಪರಿಚಯವಿದ್ದ ಜೂನಿಯರ್​ ನಟಿಯನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದನೆಂದು ಆತನನ್ನು ಹೈದರಾಬಾದ್​ ನ ಸರೋರ್​ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನಾಗಿರುವ ಸಿನಿಮಾ ಪ್ರೊಡ್ಯೂಸರ್, ಸುಧೀರ್​ (31) ಎಂದು ಗುರುತಿಸಲಾಗಿದೆ. ಈತ ಕರೊನಾ ಲಾಕ್​ಡೌನ್​ ಸಮಯದಲ್ಲಿ ಜಾಲತಾಣದಲ್ಲಿ ಮಹಿಳೆಯರ ಅರೆಬೆತ್ತಲೆ ಫೋಟೋ ಹಾಕಿ ದಂಧೆಗೆ ಯುವಕರನ್ನು ಸೆಳೆಯುತ್ತಿದ್ದ ಎಂಬುದು ಗೊತ್ತಾಗಿದೆ. ಈ ವೇಶ್ಯಾವಾಟಿಕೆ ದಂಧೆ ನಡೆಸಲು ಮಧಪುರ್​ ನ ಅಯ್ಯಪ್ಪ ಸೊಸೈಟಿಯಲ್ಲಿ ಮನೆಯೊಂದನ್ನು …

Read More »

2ನೇ ಅಲೆ ಹೊಡೆತ: ಕೋವಿಡ್ ನಿಂದ 300ಕ್ಕೂ ಅಧಿಕ ಪತ್ರಕರ್ತರು ನಿಧನ

ನವದೆಹಲಿ: ಕಳೆದ ವರ್ಷ ಕೋವಿಡ್ ಮೊದಲ ಅಲೆಯಲ್ಲಿ ಫ್ರಂಟ್ ಲೈನ್ ವರ್ಕರ್ಸ್ ಗಳಾದ ವೈದ್ಯರು, ಆರೋಗ್ಯ ಕಾರ್ಯಕರ್ತರು, ಪೊಲೀಸರು ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದರು. ನಂತರ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಲಸಿಕೆ ವಿತರಣೆಯಲ್ಲಿ ಆದ್ಯತೆ ನೀಡಿದ್ದರು. ಇದರಿಂದ ಎರಡನೇ ಅಲೆಯಲ್ಲಿ ಪ್ರಾಣಹಾನಿ ಪ್ರಮಾಣ ಕಡಿಮೆ ಮಾಡುವ ಉದ್ದೇಶ ಹೊಂದಲಾಗಿತ್ತು. ಆದರೆ ಪತ್ರಕರ್ತರು ಮಾತ್ರ ಈ ವಿಚಾರದಲ್ಲಿ ದುರಾದೃಷ್ಟವಂತರಾಗಿದ್ದರು!   ಕೋವಿಡ್ ತೀವ್ರವಾಗಿ ಹರಡುತ್ತಿದ್ದ ಸಂದರ್ಭದಲ್ಲಿಯೂ ಪತ್ರಕರ್ತರು ನಿರಂತರವಾಗಿ ಫೀಲ್ಡ್ ನಲ್ಲಿದ್ದು …

Read More »

ಗ್ರಾಮ ಪಂಚಾಯತ ಮಟ್ಟದಲ್ಲಿ ಕೋವಿಡ್ ಕೇರ್ ಸೆಂಟರ್ ಗಳನ್ನು ಪ್ರಾರಂಭಿಸಲಾಗುವುದು : ಜಿಲ್ಲಾಧಿಕಾರಿ ಎಂ ಜಿ ಹಿರೇಮಠ 

ಮಾಂಜರಿ  – ಕೊರೋನಾ ಪಾಸಿಟಿವ್ ಧೃಢಪಟ್ಟ ವ್ಯಕ್ತಿಗಳು ಹೋಂ ಕ್ವಾರೆಂಟಿನಾಗಿರುವುದರಿಂದ ಮನೆಯ ಜನರಿಗೆಲ್ಲಾ ಸೋಂಕು ಹರಡುವ ಲಕ್ಷಣಗಳು ಗೋಚರಿಸುವುದರಿಂದ ಇದನ್ನು ತೆಡಗಟ್ಟುವ ಉದ್ದೇಶದಿಂದ ಗ್ರಾಮ ಪಂಚಾಯತ ಮಟ್ಟದಲ್ಲಿ ಕೋವಿಡ್ ಕೇರ್ ಸೆಂಟರ್ ಗಳನ್ನು ಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ ಜಿ ಹಿರೇಮಠ  ತಿಳಿಸಿದರು. ಚಿಕ್ಕೋಡಿ ತಾಲೂಕಿನ ಸುಕ್ಷೇತ್ರ ಯಡೂರ ಗ್ರಾಮದಲ್ಲಿ ಶ್ರೀಶೈಲ ಜಗದ್ಗುರುಗಳಾದ ಡಾಕ್ಟರ್ ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು, ಹುಕ್ಕೇರಿಯ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ಗಳ ಆಶೀರ್ವಾದ ಪಡೆದು ಯಡೂರು …

Read More »