ಬಾಗಲಕೋಟೆ: ಜಿಲ್ಲೆಯ ಒಂದೇ ಕುಟುಂಬದ ನಾಲ್ವರು ಕೊರೊನಾದಿಂದ ಮೃತಪಟ್ಟಿದ್ದು, ಒಬ್ಬರ ಹಿಂದೆ ಮತ್ತೊಬ್ಬರನ್ನ ಈ ಹೆಮ್ಮಾರಿ ಬಲಿ ಪಡೆದಿದೆ. ಪತಿ, ಪತ್ನಿ, ಅತ್ತೆ, ಮಾವ ನಾಲ್ವರರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಬಾಗಲಕೋಟೆ ತಾಲೂಕಿನ ದೇವಿನಾಳ ಗ್ರಾಮದ ವೆಂಕಟೇಶ್ ಒಂಟಗೋಡಿ(45), ವೆಂಕಟೇಶ್ ಪತ್ನಿ ಶಿಕ್ಷಕಿ ರಾಜೇಶ್ವರಿ(40), ಮಾವ(ರಾಜೇಶ್ವರಿ ಅಪ್ಪ) ರಾಮನಗೌಡ ಉದಪುಡಿ(74), ಅತ್ತೆ(ರಾಜೇಶ್ವರಿ ತಾಯಿ) ಹಾಗೂ ಲಕ್ಷ್ಮೀಬಾಯಿ(68) ಮೃತ ದುರ್ದೈವಿಗಳು. ಮೇ 3 ರಿಂದ 15 ರ ಅವಧಿಯಲ್ಲಿ ಬಾಗಲಕೋಟೆ ನಗರದ ವಿವಿಧ …
Read More »ಗಾಜಾ ನಗರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ
ಗಾಜಾ ನಗರ: ಗಾಜಾ ನಗರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ ಮುಂದುವರಿಸಿದೆ. ಭಾನುವಾರ ಬೆಳಿಗ್ಗೆ ಇಸ್ರೇಲ್ನ ಯುದ್ಧವಿಮಾನಗಳು ನಡೆಸಿದ ದಾಳಿಯಲ್ಲಿ ಹಲವಾರು ಕಟ್ಟಡಗಳು ನೆಲಸಮಗೊಂಡಿದ್ದು, ರಸ್ತೆಗಳು ಹಾಳಾಗಿವೆ. ಎರಡು ಗಂಟೆಗಳಿಗೂ ಹೆಚ್ಚು ಅವಧಿಗೆ ದಾಳಿ ನಡೆದಿದ್ದು, ಈ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಮಕ್ಕಳು ಹಾಗೂ ಮಹಿಳೆಯರು ಸೇರಿ 25 ಜನರು ಗಾಯಗೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಕಟ್ಟಡಗಳ ಅವಶೇಷಗಳಡಿ ಸಿಲುಕಿರುವವರ ರಕ್ಷಣಾ ಕಾರ್ಯ ಮುಂದುವರಿದಿದೆ. ಕಟ್ಟಡಗಳು, ರಸ್ತೆಗಳು …
Read More »ಹೊಸ ಗಂಡ ತಂದೇ ಬಿಟ್ಟ ಗಂಡಾಂತರ: 23 ವರ್ಷ ಯುವಕನ ಮೇಲಿನ ಮೋಹಕ್ಕೆ 6 ವರ್ಷದ ಮಗನೇ ಬಲಿಯಾದ!
ನೆಲಮಂಗಲ: ಕೇವಲ ಮೋಹ, ಕಾಮದ ಹಿಂದೆ ಹೋದರೆ ಸಂಬಂಧಗಳೆಲ್ಲಾ ಹೇಗೆ ಮಣ್ಣಾಗುತ್ತವೆ ಅನ್ನೋದಕ್ಕೆ ಈ ಪ್ರಕರಣವೇ ಸಾಕ್ಷಿ. ಆತನದ್ದು ತಂದೆಯಾಗುವ ವಯಸ್ಸೇ ಅಲ್ಲ ಅಂತದ್ದರಲ್ಲಿ 6 ವರ್ಷ ಬಾಲಕನಿಗೆ ಮಲತಂದೆಯಾಗಿದ್ದ. ಬಾಲಕನ ತಾಯಿಯ ಮೇಲಿನ ಮೋಹ 23 ವರ್ಷಕ್ಕೆ ಮಲತಂದೆಯನ್ನಾಗಿ ಮಾಡಿತ್ತು. ಕೇವಲ ತಾಯಿಯೊಂದಿಗಿನ ಸಂಬಂಧ ಬಯಸ್ಸಿದ್ದ 23 ವರ್ಷ ಯುವಕನಿಗೆ ತಂದೆಯಾಗುವುದು ಬೇಕಾಗಿಯೇ ಇರಲಿಲ್ಲ. 6 ವರ್ಷ ಹುಡುಗನ ಆಟ-ತುಂಟಾಟಗಳಿಗೆ ಮಲತಂದೆ ಎನಿಸಿಕೊಂಡವನು ಅಡಿಗಡಿಗೂ ಸಿಡಿಸಿಡಿ ಎನ್ನುತ್ತಿದ್ದ. ಕೊನೆಗೆ …
Read More »ಕೊರೋನಾ ಕರುಣಾಜನಕ ಘಟನೆ: ದಂಪತಿ ಸಾವು, 5 ದಿನದ ಹೆಣ್ಣುಮಗು ಅನಾಥ
ಮಂಡ್ಯ: ಕೊರೋನಾ ಸೋಂಕು ತಗುಲಿದ್ದರಿಂದ ದಂಪತಿ ಸಾವನ್ನಪ್ಪಿದ್ದು, 5 ದಿನದ ಹೆಣ್ಣುಮಗು ಅನಾಥವಾಗಿದೆ. ನಾಗಮಂಗಲ ತಾಲೂಕಿನ ದೊಡ್ಡೇನಹಳ್ಳಿಯಲ್ಲಿ ಘಟನೆ ನಡೆದಿದೆ. 45 ವರ್ಷದ ನಂಜುಂಡೇಗೌಡ ಮತ್ತು 31 ವರ್ಷದ ಮಮತಾ ದಂಪತಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರಿಂದಾಗಿ ದಂಪತಿಯ 5 ದಿನದ ಹೆಣ್ಣುಮಗು ಅನಾಥವಾಗಿದೆ. ಫೈನಾನ್ಸ್ ವ್ಯವಹಾರ ಮಾಡಿಕೊಂಡಿದ್ದ ನಂಜುಂಡೇಗೌಡ ಕೊರೋನಾ ಸೋಂಕು ತಗುಲಿದ್ದರಿಂದ ಏಪ್ರಿಲ್ 30 ರಂದು ಮೃತಪಟ್ಟಿದ್ದರು. ಗರ್ಭಿಣಿಯಾಗಿದ್ದ ಅವರ ಪತ್ನಿ ಮಮತಾ ಅವರಿಗೂ ಕೊರೊನಾ ಸೋಂಕು …
Read More »ಮಾರಕ ಕೊರೋನಾಕ್ಕೆ ಬಲಿಯಾದ ಮತ್ತೊಬ್ಬ ಹಿರಿಯ ಪತ್ರಕರ್ತ ಲಕ್ಷ್ಮೀ ನಾರಾಯಣ.
ಬೆಂಗಳೂರು : ಮಾರಕ ಕೊರೋನಾಕ್ಕೆ ಬಲಿಯಾದ ಮತ್ತೊಬ್ಬ ಹಿರಿಯ ಪತ್ರಕರ್ತ ಲಕ್ಷ್ಮೀ ನಾರಾಯಣ. ಖಾಸಗಿ ಸುದ್ದಿ ವಾಹಿನಿಯಲ್ಲಿ ಹಿರಿಯ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದ ಲಕ್ಷ್ಮೀ ನಾರಾಯಣ ಅವರು ಕೊರೋನಾದಿಂದ ಮೃತಪಟ್ಟಿದ್ದಾರೆ . ಒಂದು ವಾರದ ಹಿಂದೆ ಅವರಿಗೆ ಕೊರೋನಾ ಸೋಂಕು ಕಂಡು ಬಂದಿತ್ತು . ಬಳಿಕ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು . ಇದೀಗ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ . ಲಕ್ಷ್ಮೀ ನಾರಾಯಣ ಅವರು ಈಟಿವಿ ನ್ಯೂಸ್ …
Read More »ಕೋವಿಡ್ ಕೇರ್ ಸೆಂಟರನ್ನು ಸಂಸದ ಜಿ.ಎಂ. ಸಿದ್ದೇಶ್ವರ ಉದ್ಘಾಟನೆ ಮಾಡಿದರು
ದಾವಣಗೆರೆ: ಕೋವಿಡ್ ಸೋಂಕಿತರಿಗಾಗಿ ದಾವಣಗೆರೆ-ಶಿರಮಗೊಂಡನಹಳ್ಳಿ ಮಾರ್ಗದಲ್ಲಿರುವ ತರಳಬಾಳು ವಿದ್ಯಾರ್ಥಿನಿಯರ ವಸತಿನಿಲಯವನ್ನು ಕೋವಿಡ್ ಕೇರ್ ಸೆಂಟರ್ ಆಗಿ ವ್ಯವಸ್ಥೆಗೊಳಿಸಲಾಗಿದ್ದು, ಶನಿವಾರ ಸಂಸದ ಜಿ.ಎಂ. ಸಿದ್ದೇಶ್ವರ ಅದಕ್ಕೆ ಚಾಲನೆ ನೀಡಿದರು. ‘ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸೋಂಕಿತರಿಂದ ಇತರರಿಗೆ ರೋಗ ಹರಡುವುದನ್ನು ತಡೆಗಟ್ಟಲು ಜಿಲ್ಲೆಯಲ್ಲಿ ವಿವಿಧೆಡೆ ವ್ಯವಸ್ಥಿತವಾಗಿ ಕೋವಿಡ್ ಕೇರ್ ಸೆಂಟರ್ಗಳನ್ನು ಸ್ಥಾಪಿಸಲಾಗುತ್ತಿದೆ. ತರಳಬಾಳು ವಿದ್ಯಾರ್ಥಿನಿಯರ ವಸತಿನಿಲಯವನ್ನು ಕೋವಿಡ್ ಕೇರ್ ಸೆಂಟರ್ ಮಾಡಲು ತರಳಬಾಳು ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರಿಗೆ …
Read More »ಲಾಕ್ಡೌನ್ ಜಾರಿಗೊಳಿಸಿ ಇಷ್ಟು ದಿನಗಳಾದರೂ ರಸ್ತೆಗಳಲ್ಲಿ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡಬೇಕಾಗಿತ್ತು.
ಬೆಂಗಳೂರು: ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ಸರ್ಕಾರ ಸೆಮಿ ಲಾಕ್ಡೌನ್ ಜಾರಿಗೊಳಿಸಿ ಇಷ್ಟು ದಿನಗಳಾದರೂ ರಸ್ತೆಗಳಲ್ಲಿ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡಬೇಕಾಗಿತ್ತು. ಆದರೆ ತೌಕ್ಟೆ ಚಂಡಮಾರುತ ಶನಿವಾರ ಚಿತ್ರಣವನ್ನೇ ಬದಲಿಸಿದ್ದರಿಂದ ರಾಜ್ಯದ ಏಳೆಂಟು ಜಿಲ್ಲೆಗಳಲ್ಲಿ ಜನ ರಸ್ತೆಗಿಳಿಯಲು ಮನಸ್ಸನ್ನೇ ಮಾಡಲಿಲ್ಲ. ಇನ್ನುಳಿದಂತೆ ಬಹುತೇಕ ಜಿಲ್ಲೆಗಳಲ್ಲೂ ಅಗತ್ಯ ವಸ್ತುಗಳನ್ನು ಖರೀದಿಸಿ 10 ಗಂಟೆ ವೇಳೆ ಮನೆ ಸೇರಿಕೊಂಡಿದ್ದರಿಂದ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಜನ ಸಂಚಾರ, ವಾಹನ ಸಂಚಾರ ಬಹುತೇಕ ವಿರಳವಾಗಿತ್ತು. ದಕ್ಷಿಣ ಕನ್ನಡದಲ್ಲಿ …
Read More »BIG NEWS: 2 ತಿಂಗಳು ಕರುನಾಡಿಗೆ ಬೀಳುತ್ತಾ ಬೀಗ.?
ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯದಲ್ಲಿ 2 ತಿಂಗಳ ಕಾಲ ಲಾಕ್ ಡೌನ್ ಜಾರಿಗೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಈ ಬಗ್ಗೆ ಇಂದು ನಡೆಯಲಿರುವ ಕೋವಿಡ್ ಟಾಸ್ಕ್ ಫೋರ್ಸ್ ಸಭೆಯಲ್ಲಿ ಮಹತ್ವದ ತೀರ್ಮಾನ ಪ್ರಕಟವಾಗಲಿದೆ. ಕೊರೊನಾ ನಿಯಂತ್ರಣಕ್ಕೆ 6-8 ವಾರಗಳ ಕಾಲ ಕಂಪ್ಲೀಟ್ ಲಾಕ್ ಡೌನ್ ಜಾರಿ ಅಗತ್ಯವಿದೆ ಎಂದು ಐಸಿಎಂಆರ್ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಇಂದು ನಡೆಯುತ್ತಿರುವ ಟಾಸ್ಕ್ ಫೋರ್ಸ್ …
Read More »ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ
ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲವನ್ನೇ ಸೃಷ್ಟಿಸಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಸೇರಿದ್ದು ಎನ್ನಲಾದ ಸಿಡಿ, ರಮೇಶ್ ರಾಜಕೀಯ ಜೀವನದಲ್ಲೇ ಬಿರುಗಾಳಿ ಎಬ್ಬಿಸಿತ್ತು. ಈ ಸಿಡಿ ವಿವಾದದ ಬಳಿಕ ರಮೇಶ್ ತಮ್ಮ ಖಾತೆಗೆ ರಾಜೀನಾಮೆ ನೀಡಿದ್ದು ಮಾತ್ರವಲ್ಲದೇ ಜಿಲ್ಲಾ ಉಸ್ತುವಾರಿ ಸ್ಥಾನದಿಂದಲೂ ಕೆಳಗಿಳಿದಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದಿಂದ ಕೆಳಗೆ ಇಳಿದಿದ್ದರೂ ಸಹ ರಮೇಶ್ ಜಾರಕಿಹೊಳಿ ಖದರ್ ಕಡಿಮೆಯಾದಂತೆ ಕಾಣುತ್ತಿಲ್ಲ. ಗೋಕಾಕ್ನ ಗೃಹ ಕಚೇರಿಗೆ ಜಿಲ್ಲಾಧಿಕಾರಿ ಹಾಗೂ ಡಿಹೆಚ್ಓರನ್ನ ಕರೆಸಿಕೊಂಡ …
Read More »ಸರಕಾರ ತಪಾಸಣೆ ಕಡಿಮೆಗೊಳಿಸಿ ಸೋಂಕಿತರ ಸಂಖ್ಯೆ ಇಳಿಮುಖವಾಗಿದೆ ಎನ್ನುತ್ತಿದೆ: ಎಂ.ಬಿ.ಪಾಟೀಲ್ ಆರೋಪ
ಬೆಂಗಳೂರು, ಮೇ 15: ರಾಜ್ಯದಲ್ಲಿ ಕೊರೋನ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರೂ ಸರಕಾರ ಮೌಖಿಕ ಆದೇಶದ ಮೂಲಕ ತಪಾಸಣೆಗಳನ್ನು ಕಡಿಮೆಗೊಳಿಸಲಾಗಿದೆ. ಕರ್ನಾಟಕದಲ್ಲಿ ರೋಗಿಗಳ ಸಂಖ್ಯೆ ಇಳಿಮುಖವಾಗಿದೆ ಎಂದು ಅಂಕಿ ಅಂಶಗಳ ತೋರಿಸುವ ಮೂಲಕ ರಾಜ್ಯದ ಜನತೆಯ ಆರೋಗ್ಯದ ಸ್ಥಿತಿಯನ್ನು ತೀರ ಗಂಭೀರವಾಗಿಸುವತ್ತ ಸರಕಾರದ ಮುನ್ನಡೆದಿದೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಆರೋಪಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು ಕರ್ನಾಟಕದಲ್ಲಿ ರಾಜಧಾನಿ ಬೆಂಗಳೂರು ನಗರದಲ್ಲಿ ಅತೀ ಹೆಚ್ಚು ಪ್ರಕರಣಗಳು …
Read More »
Laxmi News 24×7