ಧಾರವಾಡ: ಸೋಂಕು ಹಿನ್ನೆಲೆ ಕಳೆದ ನಾಲ್ಕು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ತಂದೆ ಮಗ ಇಬ್ಬರು ಕೊರೊನಾಗೆ ಬಲಿಯಾದ ಘಟನೆ ಧಾರವಾಡದಲ್ಲಿ ನಡೆದಿದೆ. ತಂದೆ ರವೀಂದ್ರನಾಥ ವಸ್ತ್ರದ (74) ಮಗ ವಿಶ್ವನಾಥ ವಸ್ತ್ರದ (47) ಮೃತರಾಗಿದ್ದಾರೆ. ಕೊರೊನಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ತಂದೆ ಮಗ ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದರು. ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ನಿನ್ನೆ ತಂದೆ ನಿಧನರಾಗಿದ್ದರೆ. …
Read More »ಲಾಕ್ಡೌನ್ ಮಧ್ಯೆ ಇಂದಿನಿಂದ ಲಿಕ್ಕರ್ ಹೋಮ್ ಡೆಲಿವರಿಗೆಅನುಮತಿ
ಛತ್ತೀಸ್ಗಢದಲ್ಲಿ ಬಿಗಿಯಾದ ಲಾಕ್ಡೌನ್ ಜಾರಿಗೊಳಿಸಿದ್ದರೂ ಮದ್ಯ ಮಾರಾಟಕ್ಕೆ ತುಸು ಸಡಿಲ ನೀತಿ ಅನುಸರಿಸಲಾಗುತ್ತಿದೆ. ಆಹಾರ ಮತ್ತು ಅಗತ್ಯ ವಸ್ತುಗಳ ರೀತಿ ಇಂದಿನಿಂದ ಮದ್ಯದ ಹೋಮ್ ಡೆಲಿವರಿಗೆ ರಾಜ್ಯ ಸರ್ಕಾರ ಅವಕಾಶ ನೀಡಿದೆ. ಲಾಕ್ಡೌನ್ನಿಂದ ಮನೆಯಲ್ಲೇ ಉಳಿಯುವ ಎಣ್ಣೆಪ್ರಿಯರು ಸರ್ಕಾರದ ಈ ನೀತಿಯಿಂದ ನಿಟ್ಟುಸಿರುಬಿಟ್ಟಿದ್ದಾರೆ. ಜನ ಸಂಚಾರ, ಅಂಗಡಿ ಮುಂಗಟ್ಟುಗಳು ಬಂದ್ ಮಾಡಿರುವ ಸಂದರ್ಭದಲ್ಲಿ ಲಿಕ್ಕರ್ ಮಾರಾಟಕ್ಕೆ ಅನುವು ಮಾಡಿಕೊಡಲಾಗಿದೆ. ಆನ್ಲೈನ್ ಮೂಲಕ ಲಿಕ್ಕರ್ ಆರ್ಡರ್ ಪಡೆದು ಹೋಮ್ ಡೆಲಿವರಿ ಕೊಡುವುದಕ್ಕೆ …
Read More »ಲಾಕ್ ಡೌನ್: ಸಂಚಾರಕ್ಕೆ ಕಠಿಣ ನಿರ್ಬಂಧ
ವಿಜಯಪುರ: ನಗರದಲ್ಲಿ ಸೋಮವಾರ ಬೆಳಿಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಅರಸಿದ್ದಿ ಸಿಬ್ಬಂದಿಯೊಂದಿಗೆ ಸ್ವತಃ ರಸ್ತೆಗಳಿದು ವಾಹನಗಳ ತಪಾಸಣೆ ನಡೆಸಿ, ಅನಗತ್ಯ ಓಡಾಟಕ್ಕೆ ಕಡಿವಾಣ ಹಾಕಿದರು. ಅನಗತ್ಯವಾಗಿ ಸಂಚರಿಸುತ್ತಿದ್ದ ವಾಹನಗಳನ್ನು ವಶಕ್ಕೆ ಪಡೆದು, ದಂಡ ವಿಧಿಸಿದರು. ವಾಹನಗಳನ್ನು ಠಾಣೆಯಲ್ಲಿ ನಿಲ್ಲಿಸಿ, ನಡೆದುಕೊಂಡು ಹೋಗುವಂತೆ ಕೆಲವರಿಗೆ ಎಚ್ಚರಿಕೆ ನೀಡಿ ಕಳುಹಿಸಿದರು. ಮಹಾರಾಷ್ಟ್ರ-ಕರ್ನಾಟಕ ಗಡಿಯ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿಗೊಳಿಸಲಾಗಿದೆ. ವಿಜಯಪುರ ನಗರ …
Read More »ನಿಯಮ ಮೀರಿ ರಸ್ತೆಗೆ ಇಳಿದ ವಾಹನಗಳು ಸೀಜ್
ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆಯಿಂದಲೇ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಲಾಕ್ ಡೌನ್ ನಿಯಮ ಮೀರಿ ರಸ್ತೆಗೆ ಇಳಿದ ವಾಹನಗಳು ಸೀಜ್ ಮಾಡಲು ಮುಂದಾಗಿದ್ದಾರೆ. ನಗರದ ಪ್ರತಿ ಸರ್ಕಲ್ ನಲ್ಲೂ ಬ್ಯಾರಿಕೇಡ್ ಅಳವಡಿಸಿ ವಾಹನಗಳ ತಪಾಸಣೆ ಮಾಡಲಾಗುತ್ತಿದೆ. ಬೆಳಗ್ಗೆಯಿಂದ ಇದುವರೆಗೆ ಶಿವಮೊಗ್ಗ ನಗರ ಒಂದರಲ್ಲೇ 200ಕ್ಕೂ ಹೆಚ್ಚು ವಾಹನಗಳು ಸೀಜ್ ಮಾಡಲಾಗಿದೆ. ಇಂದಿನಿಂದ ಶಿವಮೊಗ್ಗದಲ್ಲಿ ವಾಹನದಲ್ಲಿ ಓಡಾಟ ನಡೆಸಲು ಅವಕಾಶವಿಲ್ಲ. ಬೆಳಗ್ಗೆ 6 ಗಂಟೆಯಿಂದ 10 ಗಂಟೆ ಒಳಗೆ ಕಾಲ್ನಡಿಗೆಯಲ್ಲೇ ಬಂದು ದಿನಬಳಕೆ ವಸ್ತುಗಳ …
Read More »alert! ಪಾಲಿಸಿದಾರರಿಗೆ `LIC’ ಯಿಂದ ಮಹತ್ವದ ಮಾಹಿತಿ
ನವದೆಹಲಿ : ಭಾರತೀಯ ಜೀವ ವಿಮಾ ನಿಗಮ (ಎಲ್ಐಸಿ) ತನ್ನ ಗ್ರಾಹಕರಿಗೆ ಇಡೀ ಪ್ರಕ್ರಿಯೆಯನ್ನು ತೊಂದರೆರಹಿತ ಮತ್ತು ಸುಲಭಗೊಳಿಸಲು ಕ್ಲೇಮ್ ಇತ್ಯರ್ಥ ಅಗತ್ಯಗಳಿಗೆ ಸಂಬಂಧಿಸಿದಂತೆ ಹಲವಾರು ಸಡಿಲಿಕೆಗಳನ್ನು ಹೊರತಂದಿದೆ. ಸಾವಿನ ಪರ್ಯಾಯ ಪುರಾವೆಗಳನ್ನು ಅನುಮತಿಸಲಾಗಿದೆ ವಿಮಾ ದಾರ ವ್ಯಕ್ತಿಯು ಆಸ್ಪತ್ರೆಯ ಆವರಣದೊಳಗೆ ಸತ್ತರೆ ಪರಿಶೀಲನೆ ವಿಧಾನವಾಗಿ ಎಲ್ ಐಸಿ ಸಾವಿನ ಪರ್ಯಾಯ ಪುರಾವೆಗಳನ್ನು ಅನುಮತಿಸಿದೆ. ಮುನ್ಸಿಪಲ್ ಮರಣ ಪ್ರಮಾಣಪತ್ರಗಳಲ್ಲದೆ, ಈಗ ಎಲ್ಐಸಿ ಅಂಗೀಕರಿಸಿದ ಸಾವುಗಳ ಇತರ ಪುರಾವೆಗಳಲ್ಲಿ, ಮರಣ ಪ್ರಮಾಣಪತ್ರ, …
Read More »ಕೇಂದ್ರದಿಂದ ಹೆಚ್ಚುವರಿ ಆಕ್ಸಿಜನ್; ಶೀಘ್ರ ಸಮಸ್ಯೆಗೆ ಪರಿಹಾರ: ಸಚಿವ ಜಗದೀಶ್ ಶೆಟ್ಟರ್
ಬೆಳಗಾವಿ;-ರಾಜ್ಯಕ್ಕೆ ಅಗತ್ಯವಿರುವ ಆಕ್ಸಿಜನ್ ಪ್ರಮಾಣವನ್ನು ಆಧರಿಸಿ ಹೆಚ್ಚುವರಿ ಆಕ್ಸಿಜನ್ ಹಂಚಿಕೆಗೆ ಕೇಂದ್ರ ಸರಕಾರ ಒಪ್ಪಿಗೆ ಸೂಚಿಸಿರುವುದರಿಂದ ಮೂರ್ನಾಲ್ಕು ದಿನಗಳಲ್ಲಿ ರಾಜ್ಯದಲ್ಲಿ ಆಕ್ಸಿಜನ್ ಸಮಸ್ಯೆ ಪರಿಹಾರವಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ರಾಜ್ಯದ ಆಕ್ಸಿಜನ್ ಪೂರೈಕೆ ಉಸ್ತುವಾರಿ ವಹಿಸಿಕೊಂಡಿರುವ ಸಚಿವ ಜಗದೀಶ್ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ಆಕ್ಸಿಜನ್ ಲಭ್ಯತೆಗೆ ಸಂಬಂಧಿಸಿದಂತೆ ನಗರದ ಪ್ರವಾಸಿಮಂದಿರದಲ್ಲಿ ಭಾನುವಾರ (ಮೇ 9) ನಡೆದ ಅಧಿಕಾರಿಗಳ …
Read More »ಕರ್ನಾಟಕ ಸೇರಿ ನಾಲ್ಕು ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಮೋದಿ ಸಮಾಲೋಚನೆ
ನವದೆಹಲಿ : ಕರ್ನಾಟಕ, ಪಂಜಾಬ್, ಬಿಹಾರ ಹಾಗೂ ಉತ್ತರಾಖಂಡ್ ಸಿಎಂಗಳ ಜೊತೆ ಪ್ರಧಾನಿ ನರೇಂದ್ರ ಮೋದಿಯವರು ಫೋನ್ ಕರೆ ಮೂಲಕ ಮಾತುಕತೆ ನಡೆಸಿದ್ದಾರೆ. ದೇಶಾದ್ಯಂತ ಕೋವಿಡ್ ಎರಡನೇ ಅಲೆ ರೌದ್ರ ನರ್ತನ ನಡೆಸುತ್ತಿದ್ದು, ಮಹಾಮಾರಿ ಸೋಂಕಿನ ವಿರುದ್ಧ ಕೇಂದ್ರ ಸರ್ಕಾರ ಒಗ್ಗಟ್ಟಿನ ಹೋರಾಟ ನಡೆಸಿದೆ. ದೇಶದ ಎಲ್ಲ ರಾಜ್ಯಗಳ ಜೊತೆ ಸಮನ್ವಯತೆ ಮಾಡಿಕೊಂಡು ಕೋವಿಡ್ ವಿರುದ್ಧ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಲಸಿಕಾ ಅಭಿಯಾನದ ಕುರಿತು ಸಮಾಲೋಚನೆ ನಡೆಸುತ್ತಿದ್ದಾರೆ ಪ್ರಧಾನಿ ಮೋದಿ. …
Read More »ಬೈಕ್ ನಿಂದ ಕೆಳಕ್ಕೆ ಬಿದ್ದ ಮಹಿಳೆಗೆ ಆರೈಕೆ ಮಾಡಿದ ಮಸ್ಕಿ ಶಾಸಕ ತುರವಿಹಾಳ
ಮಸ್ಕಿ (ರಾಯಚೂರು): ಬಿಸಿಲಿನ ತಾಪ ತಾಳದೆ ಬೈಕ್ ನಿಂದ ಕೆಳಗೆ ಬಿದ್ದ ಮಹಿಳೆಯನ್ನು ಶಾಸಕ ಆರ್. ಬಸನಗೌಡ ತುರವಿಹಾಳ ಆರೈಕೆ ಮಾಡಿದ ಘಟನೆ ಭಾನುವಾರ ಪಟ್ಟಣದಲ್ಲಿ ನಡೆಯಿತು. ಬೈಕ್ ಸವಾರನ ಹಿಂಬದಿ ಕುಳಿತಿದ್ದ ಮಹಿಳೆ ಬಿಸಿಲಿನ ತಾಪ ತಾಳಲಾರದೆ ಕೆಳಗೆ ಬಿದ್ದರು. ಬೈಕ್ ಹಿಂದಿಯೇ ತನ್ನ ಇನ್ನೊವಾ ಕಾರಿನಲ್ಲಿ ಹೊರಟಿದ್ದ ಶಾಸಕ ಬಸನಗೌಡ ತುರವಿಹಾಳ ಕೂಡಲೇ ತನ್ನ ವಾಹನದಿಂದ ಕೆಳಗೆ ಇಳಿದು ರಸ್ತೆ ಬದಿ ಬಿದ್ದಿದ್ದ ಮಹಿಳೆಗೆ ನೀರು ಕುಡಿಸಿ …
Read More »ಪೊಲೀಸರು ಅವಾಚ್ಯ ಶಬ್ದಗಳಿಂದ ನಿಂದಿಸಿ, ನಾನು ಮತ್ತು ನನ್ನ ತಂದೆ ಮೇಲೆ ದರ್ಪ ಮೆರೆದಿದ್ದಾರೆ ಎಂದು ಆರೋಪಿ
ನಂಜನಗೂಡು: ತಂದೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ವಾಪಸ್ ಕರೆದುಕೊಂಡು ಬರುತ್ತಿದ್ದಾಗ, ಕೋವಿಡ್ ನಿಯಮದ ಹೆಸರಿನಲ್ಲಿ ವ್ಯಕ್ತಿಯೊಂದಿಗೆ ಪೊಲೀಸರು ಅಟ್ಟಹಾಸ ಮೆರೆದಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ಚಂದ್ರಶೇಖರಯ್ಯ ಎಂಬವರು ಪೊಲೀಸರಿಂದ ನಿಂದನೆಗೆ ಒಳಗಾದ ವ್ಯಕ್ತಿ. ಬಿಪಿ, ಶುಗರ್ ರೋಗಿ ತಂದೆಯನ್ನು ಎಂದಿನಂತೆ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ಹುಲ್ಲಹಳ್ಳಿ ರಸ್ತೆ ಬಳಿ ಆದರ್ಶ ಶಾಲೆ ಬಳಿ ಚಂದ್ರಶೇಖರಯ್ಯ ವಾಪಸ್ ಬೈಕ್ನಲ್ಲಿ ಬರುತ್ತಿದ್ದರು. ಈ ವೇಳೆ ಪೊಲೀಸರು ಬೈಕ್ ತಡೆದು ತಪಾಸಣೆ ನಡೆಸಿದ್ದಾರೆ. …
Read More »ಮೂರನೆ ಬಾರಿ ದೆಹಲಿಯಲ್ಲಿ ಲಾಕ್ ಡೌನ್ ವಿಸ್ತರಣೆ, ಒಂದು ವಾರ ಮತ್ತೆ ಬಂದ್ ಆಗಲಿದೆ ದೆಹಲಿ
ನವದೆಹಲಿ : ಮಾರಕ ಕೊರೋನಾ ನಿಯಂತ್ರಿಸುವ ಸಂಬಂಧ ರಾಜಧಾನಿ ದೆಹಲಿಯಲ್ಲಿ ಹೇರಲಾಗಿರುವ ಲಾಕ್ ಡೌನ್ ಮತ್ತೆ ವಿಸ್ತರಿಸಲಾಗಿದೆ . ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ ಈ ಮಾಹಿತಿ ನೀಡಿದ್ದಾರೆ . ಒಂದು ವಾರ ಲಾಕ್ ಡೌನ್ ವಿಸ್ತರಿಸಲಾಗಿದೆ . ಮೇ 17 ರ ತನಕ ಲಾಕ್ ಡೌನ್ ಮುಂದುವರಿಯಲಿದ್ದು,ಲಾಕ್ ಡೌನ್ ಅವಧಿಯಲ್ಲಿ ಮೆಟ್ರೋ ಸಂಚಾರ ಸ್ಥಗಿತಗೊಳ್ಳಲಿದೆ ಎಂದು ಅರವಿಂದ ಕೇಜ್ರವಾಲ್ ಸ್ಪಷ್ಟಪಡಿಸಿದ್ದಾರೆ . ಇದೀಗ ಮೂರನೆ ಬಾರಿ ದೆಹಲಿಯಲ್ಲಿ ಲಾಕ್ …
Read More »
Laxmi News 24×7